tag:blogger.com,1999:blog-192202352024-03-07T13:22:55.454-05:00antaranga (Kannada Blog) ಅಂತರಂಗ"ಅಂತರಂಗ"ಕ್ಕೆ ಸ್ವಾಗತ. ಕಳೆದ ಎರಡು ದಶಕಗಳ ನನ್ನ ಅನಿಸಿಕೆಗಳ ಲೇಖನಗಳ ಸರಮಾಲೆ ಇಲ್ಲಿದೆ. ನಮಗೆ ನಮ್ಮ ಭಾಷೆ ದೂರವಾದಂತೆ, ಈ ಬರಹಗಳ ಮೂಲಕ ನಾವು ಅದರ ಹತ್ತಿರ ಹೋಗುವ ಸಣ್ಣ ಪ್ರಯತ್ನ.Satishhttp://www.blogger.com/profile/18348145837047496415noreply@blogger.comBlogger486125tag:blogger.com,1999:blog-19220235.post-8476484155451724012024-03-02T08:53:00.000-05:002024-03-02T08:53:17.759-05:00 ಸರಿಯಾದ ದಾರಿ...<p><span style="font-size: x-large;">"ಬೆಳ್ಳಂಬೆಳಗ್ಗೆ</span> ಇವ್ರು ಯಾರೋ ನಿಧಾನವಾಗಿ ಡ್ರೈವ್ ಮಾಡಿಕೊಂಡ್ ಹೋಗೋರು ಸಿಕ್ಕಿಕೊಂಡ್ರಲ್ಲ!" ಎಂದು ಪ್ರಲಾಪನೆಗೆ ಮೊರೆ ಹೋದವನಿಗೆ, "ಅಷ್ಟಕ್ಕೂ ಅವರು ಮಾಡುತ್ತಿರುವ ತಪ್ಪಾದರೂ ಏನು?" ಎನ್ನುವ ತಂತಾನೆ ಹುಟ್ಟಿದ ಉತ್ತರ, ಆಂತರಿಕ ತಲ್ಲಣಗಳಿಗೆ ಸೂಕ್ಷ್ಮವಾಗಿ ಪೂರ್ಣ ವಿರಾಮವನ್ನು ನೀಡುವ ಹಾಗೆ ಕಂಬದ ನೆರಳಿನಂತೆ ಎದ್ದು ನಿಂತಿತ್ತು.</p><p><br /></p><p></p><div class="separator" style="clear: both; text-align: center;"><a href="https://blogger.googleusercontent.com/img/a/AVvXsEjEzQs3xlbq_cERuvhyxvUt6CPtm-GHMyUHN2WElAeUdpHyiKjTcGOdk7v7riyR4osOZurRtJGX7TZcjfIWpXYEmZpXKI4vksNhAmErRWTtf1PRs7J2vcdzdtaYgDT3GN2NmwJxwSYTD7pMhidF2IfhcF4fyq_H4STheiqze15mHUDx0LpKmkJ1yw" style="margin-left: 1em; margin-right: 1em;"><img alt="" data-original-height="173" data-original-width="173" height="240" src="https://blogger.googleusercontent.com/img/a/AVvXsEjEzQs3xlbq_cERuvhyxvUt6CPtm-GHMyUHN2WElAeUdpHyiKjTcGOdk7v7riyR4osOZurRtJGX7TZcjfIWpXYEmZpXKI4vksNhAmErRWTtf1PRs7J2vcdzdtaYgDT3GN2NmwJxwSYTD7pMhidF2IfhcF4fyq_H4STheiqze15mHUDx0LpKmkJ1yw" width="240" /></a></div><br />ನಾನು ದಿನಾ ಡ್ರೈವ್ ಮಾಡಿಕೊಂಡು ಫ಼್ರೀವೇ ದಾಟಿ ಎಕ್ಸಿಟ್ ತೆಗೆದುಕೊಂಡ ಕೂಡಲೇ ದುತ್ತನೇ ಎದುರಾಗುವ ಸ್ಟಾಪ್ ಸೈನಿಗೆ ಮರ್ಯಾದೆ ತೋರಿಸಿದಂತೆ ಮಾಡಿ, ಏದುಸಿರು ಬಿಡುತ್ತಾ ಏರಿಯನ್ನು ಹತ್ತುವ ಓಟಗಾರನಂತೆ ಮುಂದೆ ಹೋಗುವ ಕಾರು. ಮುಂದಿನ ಅರ್ಧ-ಮುಕ್ಕಾಲು ಮೈಲು ಏನಿದ್ದರೂ ಬರೀ ಇಪ್ಪತ್ತೈದರ ಸ್ಪೀಡೇ ಎಂದು ಅದು ತನಗೆ ಎದುರಾಗುವ ಸ್ಪೀಡ್ ಸೈನುಗಳಿಗೆ ಮೂತಿ ತಿರುವಿ ಅಣಗಿಸಿಕೊಂಡು ಹೋಗೋ ರೀತಿ ಕಾಣುತ್ತದೆ. ಅಪರೂಪಕ್ಕೊಮ್ಮೆ ಕ್ರಾಸಿಂಗ್ನಲ್ಲಿ ತಮ್ಮ ಅಧಿಕಾರ ಚಲಾಯಿಸುತ್ತಾ ನಿಧಾನವಾಗಿ ನಡೆದು ರಸ್ತೆ ದಾಟುವ ಪಾದಚಾರಿಗಳಿಗೆ ಒಮ್ಮೊಮ್ಮೆ ಹಿಡಿ ಶಾಪ ಹಾಕಿದ್ದೂ ಉಂಟು. ಆದರೆ, ಮರೆಯಲ್ಲಿ ನಿಂತು ಕಾಯುವ ಮಾಮಾಗಳನ್ನು ಯಾವತ್ತೂ ನಾವು ದೂರದೃಷ್ಟಿಯಿಂದ ನೋಡುತ್ತೇವೆಯೇ ಹೊರತು, ದುರುಳ ದೃಷ್ಟಿಯಿಂದಂತೂ ಅಲ್ಲ!<p></p><p>ಈ ಜಾಗದಲ್ಲಿ (ಮತ್ತು ಎಲ್ಲಕಡೆ), ಸ್ಪೀಡ್ ಲಿಮಿಟ್ ಇಪ್ಪತ್ತೈದು ಇದ್ದರೂ ಎಲ್ಲರೂ ಮೂವತ್ತರ ಮೇಲೇ ಹೋಗುವವರು. ಹಾಗಾಗಿ, ಎಲ್ಲರೂ ವೇಗವಾಗಿ ಹೋದಾಗ ಅದು ಸರಿಯಾಗಿ ತೋರುವುದರ ಜೊತೆಗೆ, ಅಪರೂಪಕ್ಕೊಮ್ಮೆ ಸರಿಯಾದ ವೇಗದಲ್ಲಿ ಹೋಗುವವರು ತಪ್ಪಾಗಿ ಕಂಡು ಬರುವುದು, ಒಂದು ರೀತಿಯಲ್ಲಿ ವಿಚಕ್ಷಣೆ ಇಲ್ಲದ ವ್ಯಾಖ್ಯಾನ ಎಂದರೆ ತಪ್ಪೇನೂ ಇಲ್ಲ!</p><p>ಆದರೆ, ಇಂದು ನನ್ನ ಮುಂದಿನ ಕಾರು ಅದೇನೇ ಆಗಲಿ, ಈ ದಾರಿಯಲ್ಲಿ ನಾನು ಇಪ್ಪತ್ತೈದರ ಲಿಮಿಟ್ ಅನ್ನು ದಾಟುವುದಿಲ್ಲ ಎಂದು ಯಾರಿಗೋ ಪ್ರತಿಜ್ಞೆ ಮಾಡಿ ಬಂದಂತಿದೆ. ಒಬ್ಬರು ಸರಿಯಾದ ದಾರಿಯಲ್ಲಿ, ಸರಿಯಾದ ವೇಗದಲ್ಲಿ ನಡೆದರೆ, ಅವರ ಹಿಂಬಾಲಕರಿಗೆ ಅವರನ್ನು ವ್ಯವಸ್ಥಿತವಾಗಿ ಹಿಂಬಾಲಿಸದೇ ಬೇರೆ ದಾರಿಯೇನಿದೆ ಎಂಬ ಯೋಚನೆ ಬಂತು. ಬೇರೆ ದಾರಿ ಎನ್ನುವುದು ಇಲ್ಲದಿದ್ದಾಗ ಇರುವುದು ಸರಿಯಾದ ದಾರಿ ಆಗುತ್ತದೆ ಎನ್ನುವ (corollary) ಉಪಸಿದ್ಧಾಂತ ಬೇರೆ ಹುಟ್ಟಿತು.</p><p>ಜನ ವೇಗವಾಗಿ ಏಕೆ ಡ್ರೈವ್ ಮಾಡುತ್ತಾರೆ? ಸ್ಪೀಡ್ ಲಿಮಿಟ್ ಇಷ್ಟೇ ಎಂದು ಸೈನ್ಗಳು ಸಾರಿ ಸಾರಿ ಹೇಳುತ್ತಲೇ ಇದ್ದರೂ ಜನರು ಅದಕ್ಕಿಂತ ಹೆಚ್ಚು ವೇಗವಾಗಿ ಏಕೆ ಚಲಾಯಿಸುತ್ತಾರೆ? ಹೀಗೆ ವೇಗವಾಗಿ ಹೋಗುವ ಗಾಡಿಗಳು ಮತ್ತುಅವುಗಳ ಸವಾರರು ಅದೇನನ್ನು ಕಟ್ಟಿ-ಕಡಿದು ಹಾಕುತ್ತಾರೆ? ಹಾಕಿರಬಹುದು? Conditions permitting... ಎಂದು ತಮ್ಮ ಆಂತರ್ಯದಲ್ಲಿ ಮೇಳೈಸಿದ ಸತ್ಯದ ಹಿನ್ನೆಲೆಯಲ್ಲಿ ಮಿತಿಯನ್ನು ತೋರಿ ಜನರ ಸುರಕ್ಷತೆಗೆ ಆದ್ಯತೆ ಕೊಡುವ ಈ ಮೂಕ ಜೀವಿಗಳನ್ನು ಜನರು ಅಷ್ಟೊಂದು ಅಗೌರವದಿಂದ ನೋಡುವುದಾದರೂ ಏಕೆ? ದಿನದ 24 ಗಂಟೆ ತಮ್ಮ ಕೆಲಸವನ್ನು ತಾವು ಮಾಡಿಕೊಂಡಿರುವ ಈ ರಕ್ಷಕರನ್ನು ಆರಕ್ಷಕರ ಸಹಾಯವಿಲ್ಲದೇ ಆದರಿಸುವವರು ಇಲ್ಲವೇ?... ಹೀಗೆ ಪ್ರಶ್ನೆಗಳೋಪಾದಿಯಲ್ಲಿ ಮತ್ತಿಷ್ಟು ಪ್ರಶ್ನೆಗಳು ಮೂಡಿದವು.</p><p>***</p><p>ಬೇರೆಯವರು ತಮ್ಮ ಕಾರನ್ನು ವೇಗವಾಗಿ ಚಲಾಯಿಸುವುದಕ್ಕೆ ಹಲವು ಕಾರಣಗಳಿರಬಹುದು. ಆದರೆ, ನಾನು ಮತ್ತಿನ್ನೆಲ್ಲೋ ತಡವಾಗಿ ಹೋಗಬಾರದಲ್ಲ ಎಂಬ ಕಾರಣಕ್ಕೆ ವೇಗವಾಗಿ ಚಲಾಯಿಸುತ್ತೇನೆ. ಹಾಗಾದರೆ, ವೇಗದ ಮಿತಿಯಲ್ಲಿ ಚಲಾಯಿಸುವುದು ಎಂದಾದರೆ, ಮನೆಯನ್ನು ಐದು-ಹತ್ತು ನಿಮಿಷ ಮೊದಲೇ ಬಿಡಬಹುದಲ್ಲ? ಹಾಗೆ ಹೆಚ್ಚಿನ ಸಮಯ ಆಗೋದಿಲ್ಲ. ಯಾವುದೇ ಕಾರ್ಯಕ್ರಮಕ್ಕೆ ಸರಿಯಾದ ಸಮಯಕ್ಕೆ ಹೋಗುವವರು ಮತ್ತು ಸೂಚಿಸಿದ ಸಮಯಕ್ಕೆ ಮೊದಲೇ ಹೋಗಿ ತಲುಪುವವರು ವಿರಳ. ಅಂದ ಮೇಲೆ ಎಲ್ಲರೂ (ಮಿತಿಯನ್ನು ಮೀರಿ) ವೇಗವಾಗಿ ಚಲಾಯಿಸುತ್ತಾರೆ ಅಂತಲೇ ಆಯಿತು.</p><p>ಇನ್ನು ಸಮಯಕ್ಕೆ ಸರಿಯಾಗಿ ತಲುಪುವವರು, ಸಮಯ ಪಾಲನೆಯನ್ನು ಮಾಡುವವರು, ತಮ್ಮ ತಮ್ಮ ರಸ್ತೆಯಲ್ಲಿ ವೇಗದ ಮಿತಿಗೆ ಅನುಸಾರವಾಗಿ ಚಲಿಸಿದರೆ, ಅದರಿಂದ ಅವರಿಗೇನೂ ಹಾನಿ ಇಲ್ಲ - ಆದರೆ ಅವರ ಬೆನ್ನಿಗೆ ಬಿದ್ದ ವೇಗಿಗಳ ರಕ್ತದೊತ್ತಡ ಹೆಚ್ಚಾಗುವುದಂತೂ ನಿಜ.</p><p>ನನ್ನ ಇಪ್ಪತ್ತೈದು ವರ್ಷಗಳ ಡ್ರೈವಿಂಗ್ ಜೀವನದಲ್ಲಿ ಎಲ್ಲ ರೀತಿಯ ಡ್ರೈವರುಗಳನ್ನು ನೋಡಿದ್ದೇನೆ. ಮಿರಿ ಮಿರಿ ಮಿಂಚುವ ಸ್ಪೋರ್ಟ್ಸ್ ಕಾರುಗಳನ್ನು ಓಡಿಸುವ ಹದಿಹರೆಯದವರಿಂದ ಹಿಡಿದು, ತಮಗೆ ಬೇಕಾದಕ್ಕಿಂತಲೂ ದೊಡ್ಡ ಸೈಜಿನ ಹಳೆಯ ಕಾರುಗಳನ್ನು ಓಡಿಸುವ ಹಿರಿಯವರೆಗೆ. ಕಾರಿನಲ್ಲಿ ಹುಷಾರಿಲ್ಲದೆ ರಚ್ಚೆ ಹಿಡಿದು ಅಳುವ ಮಗುವನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುವ ಪೋಷಕರಿಂದ ಹಿಡಿದು, ಹೆರಿಗೆ ನೋವು ಅನುಭವಿಸುತ್ತಿರುವ ಗರ್ಬಿಣಿ ಹೆಂಡತಿಯನ್ನು ತುರಂತಾಗಿ ಆಸ್ಪತ್ರೆ ಸೇರಿಸುವ ಗಂಡಂದಿರವರೆಗೆ. ಶವವನ್ನು ಸಾಗಿಸುತ್ತಿರುವ ಹರ್ಸ್ (hearse) ವಾಹನದ ಹಿಂದೆ ಮೌನವಾಗಿ ದುಃಖತಪ್ತರಾಗಿ ರೋಧಿಸುತ್ತಾ ಡ್ರೈವ್ ಮಾಡುವ ಕುಟುಂಬಸ್ಥರಿಂದ ಹಿಡಿದು, ತಮ್ಮ ಕುಟುಂಬಕ್ಕೆ ಇದೀಗ ತಾನೇ ಸೇರಿಕೊಂಡ ಹೊಸ ಮಗುವನ್ನು ಹೆಮ್ಮೆಯಿಂದ ಜೋಪಾನವಾಗಿ ಕಾರು ಸೀಟಿನಲ್ಲಿ ಕರೆದುಕೊಂಡು ಹೋಗುತ್ತಿರುವ ದಂಪತಿಗಳವರೆಗೆ. ಎರಡು ಚಕ್ರದವರ ಆಟಾಟೋಪಗಳಿಂದ ಹಿಡಿದು ಹದಿನಾರು ಚಕ್ರದ (ಶೋಡಷ/ಷಿ) ಒಡೆಯರ ಒನಪು-ವೈಯಾರದಿಂದ ರಸ್ತೆಯನ್ನು ಅಪ್ಪಿಕೊಳ್ಳುವ ವರೆಗೆ...</p><p>ಹೀಗೆ, ಪ್ರತಿಯೊಂದು ಸಂದರ್ಭಕ್ಕೂ ಈ ರಸ್ತೆಗಳು ಒಂದು ರೀತಿಯಲ್ಲಿ ಸಾಮಾಜಿಕ ಸ್ಥಿತಿ-ಗತಿಯನ್ನು ಮಟ್ಟ ಮಾಡುವ ಲೆವೆಲ್ಲರುಗಳು ಇದ್ದ ಹಾಗೆ. ಈ ರಸ್ತೆಗಳ ಮೇಲೆ ನಿಮ್ಮ ನಿಮ್ಮ ಖಾಸಗೀ ವಿಚಾರಗಳು, ಅವುಗಳನ್ನು ಕುರಿತು ಶಾಂತವಾಗಿಯಾಗಲೀ ಉದ್ವೇಗದಿಂದಾಗಲೀ ಏಳುವ ನಿಮ್ಮ ಸ್ಪಂದನೆಗಳು ಇವೆಲ್ಲಕ್ಕೂ ಯಾವ ಬಿಡಿಗಾಸು ಬೆಲೆಯೂ ಇಲ್ಲ. ಈ ರಸ್ತೆಗಳು, ತಮ್ಮ ಹೊಳೆಯುವ ಕಪ್ಪು ಮುಖದ ಮೇಲೆ ನಿರ್ಧಾಕ್ಷಿಣ್ಯವನ್ನು ಮೈವೆತ್ತುಕೊಂಡಂತೆ ಸದಾ ಸುಮ್ಮನಿರುವ ಸರದಾರರು. ಇಂಥ ರಸ್ತೆಗಳಿಗೆ ಸಾತ್ ಕೊಡುವ ಬದಿಯ ವಾರ್ನಿಂಗ್ ಸೈನುಗಳು! ಇವೆಲ್ಲವೂ ಒಂದು ವ್ಯವಸ್ಥೆ - ಇವುಗಳನ್ನು ಮೀರಿದರೆ ಆಪತ್ತು ಕಾದಿದೆ, ಎನ್ನುವ ಕುತಂತ್ರವನ್ನು ತಮ್ಮೊಡಲೊಳಗೆ ಹೂತುಕೊಂಡಿರುವ ಸಭ್ಯರು ಎನ್ನಬೇಕು.</p><p>***</p><p></p><div class="separator" style="clear: both; text-align: center;"><a href="https://blogger.googleusercontent.com/img/a/AVvXsEgsGmkzYr5D77C20oeSKctzcl5eSAxCz1AJZmqdIia5-c5KrK-A_8rRZcNELPFTbl-c62EI7hGEnE6EEr65kO1N7mj3Tt6u7dwW7Pd15nfXaZfZKIgAu6NoBfj6YXHCA_ciaGZ_UXGJj-TWu6EhM_ajsyul7SgtwNHF6rj2lWHXsS2al5rLTs9N_w" style="margin-left: 1em; margin-right: 1em;"><img alt="" data-original-height="173" data-original-width="173" height="240" src="https://blogger.googleusercontent.com/img/a/AVvXsEgsGmkzYr5D77C20oeSKctzcl5eSAxCz1AJZmqdIia5-c5KrK-A_8rRZcNELPFTbl-c62EI7hGEnE6EEr65kO1N7mj3Tt6u7dwW7Pd15nfXaZfZKIgAu6NoBfj6YXHCA_ciaGZ_UXGJj-TWu6EhM_ajsyul7SgtwNHF6rj2lWHXsS2al5rLTs9N_w" width="240" /></a></div><br /><br /><p></p><p>ಎಲ್ಲರೂ ಮಿತಿಗಿಂತ ಹೆಚ್ಚು ವೇಗವಾಗಿ ಹೋಗುತ್ತಿರುವಾಗ, ವೇಗದ ಮಿತಿಗೆ ಸರಿಯಾಗಿ ಹೋಗುವವರು ನಮ್ಮ ಸಮಾಜದಲ್ಲಿ ಒಂದು ರೀತಿಯ ಉಪಟಳ ಕೊಡುವ ಉಪದ್ರವಿಗಳಾಗಿ (nuisance) ಕಂಡುಬರುತ್ತಾರೆ. ಇವರೊಬ್ಬರು ಸರಿಯಾದ ಹಾದಿಯಲ್ಲಿ ಸರಿಯಾದ ವೇಗದಲ್ಲಿ ನಡೆದು ಬಿಟ್ಟರೆ... ಎಲ್ಲವೂ ಸರಿ ಹೋದೀತೇ? ಮೇಲೆ ಹೇಳಿದ ವೇಗಿಗಳು, ದುಃಖಿಗಳು, ಸುಖಿಗಳು, ತೀವ್ರವಾಗಿ ಬದಲಾವಣೆಯನ್ನು ಅಪ್ಪಿಕೊಳ್ಳುತ್ತಿರುವ ಜನಸಮುದಾಯ ಇವರನ್ನು ಒಪ್ಪಿಕೊಳ್ಳಲು ಸಾಧ್ಯವೇ? ಮೌನದ ಮೊರೆಯಲ್ಲಿಯೇ ವೇಗದ ಮಿತಿಯನ್ನು ತೋರಿಸುವ, Conditions permitting...ಎನ್ನುವ ಅದಮ್ಯ ತತ್ವವನ್ನು ಯಾರು ಗೌರವಿಸುತ್ತಾರೆ ಈಗಿನ ಕಾಲದಲ್ಲಿ? ಒಬ್ಬ ಮಿತಿಗಿಂತ ಹೆಚ್ಚಾಗಿ ವೇಗವಾಗಿ ಹೋದರೆ, ಅವನನ್ನು ಅನುಸರಿಸಲು ಹಿಂಬಾಲಿಕರಿಗೇನೂ ಕೊರತೆ ಇಲ್ಲ... ಆದರೆ, ಒಬ್ಬ ಸರಿಯಾದ ವೇಗದಲ್ಲಿ ಹೋದಾಗ ಅವನನ್ನು ಹಿಂಬಾಲಿಸಲು ಹಿಂಜರಿಯುವ ಜನ ಹೆಚ್ಚು! ಹಾಗಾದರೆ, ಸರಿಯಾದ ವೇಗದಲ್ಲಿ ಹೋಗುವುದು ಹೆಚ್ಚು ಜನರಿಗೆ ಇಷ್ಟವಾಗದಂಥ ವ್ಯವಸ್ಥೆಯನ್ನು, ಹೆಚ್ಚು ಜನರ ಮೇಲೆ ಇಲ್ಲಿನ ಜನತಂತ್ರ ವ್ಯವಸ್ಥೆ ಹೇರುವುದಾದರೂ ಏಕೆ?</p><p>ತಮ್ಮ ತಮ್ಮ ನಿಧಾನಗಳನ್ನು, ತಮ್ಮ ಯೋಜನೆಯ ಹುಳುಕುಗಳನ್ನು, ತಾವು ತಡವಾಗಿ ಹೊರಟಿರುವುದರ ಕಾರಣ ಮತ್ತು ಪರಿಣಾಮಗಳನ್ನು ಈ ಮೌನವಾಗಿ ಬಿದ್ದುಕೊಂಡ ರಸ್ತೆಗಳ ಮೇಲೆ ತೀರಿಸಿಕೊಳ್ಳುವ ಹಕ್ಕನ್ನ (ಸಿಕ್ಕಿ ಬಿದ್ದರೆ, ಕಾನೂನಿನ ದೃಷ್ಟಿಯಲ್ಲಿ ತಪ್ಪಾಗುವ) ಈ ವೇಗಿಗಳಿಗೆ ಯಾರು ಕೊಟ್ಟಿದ್ದು? ವ್ಯವಸ್ಥೆಯ ಮಿತಿಯನ್ನು ಮೀರಿ ವೇಗವಾಗಿ ಹೋಗುವವರಿಗೆ ಹಲವಾರು ಕಾರಣಗಳಿರಬಹುದು, ಆದರೆ, ಸಮಾಜದಲ್ಲಿ ನೆಟ್ಟಗೆ, ನ್ಯಾಯವಾಗಿ ಬದುಕುವರಿಗೆ ಕಾರಣಗಳು ಬೇಕಿಲ್ಲ.</p><p>***</p><p>ನಿಮ್ಮ ಮುಂದೆ ವೇಗವಾಗಿ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿರುವವರು ನಿಮ್ಮಲ್ಲಿ ಅದ್ಯಾವ ತುಡಿತ-ತಲ್ಲಣಗಳನ್ನು ರೂಪಿಸುತ್ತಾರೆಯೋ ಗೊತ್ತಿಲ್ಲ. ಆದರೆ, ಇಂದು ನನ್ನ ಮುಂದೆ, ಮಿತಿಗೆ ತಕ್ಕಂತೆ ಒಂದು ಅರ್ಧ-ಮುಕ್ಕಾಲು ಮೈಲು ದೂರ ಡ್ರೈವ್ ಮಾಡಿಕೊಂಡು ಹೋದ ಮನುಷ್ಯ ನನಗೊಬ್ಬ ಹೀರೋ ಆಗಿ ಕಂಡು ಬಂದ. ಇಂಥ ನಗಣ್ಯ (unsung) ಹೀರೋಗಳನ್ನು ನಾವು ಗೌರವಿಸುವುದನ್ನು ಮೈಗೂಡಿಸಿಕೊಳ್ಳಲು ಕಲಿಯದಿದ್ದರೆ, ಸಮಾಜದಲ್ಲಿ ನ್ಯಾಯ-ನೀತಿಯಿಂದ ನಡೆಯುತ್ತೇವೆ ಎಂದು ಜೀವನವನ್ನೇ ಮುಡಿಪಾಗಿಟ್ಟಿರುವವರನ್ನು ಗೌರವಿಸುವುದನ್ನು ಕಲಿಯುವುದು ಯಾವಾಗ?</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-23531250058445315902024-02-10T14:58:00.003-05:002024-02-10T14:58:51.445-05:00 3 ಪ್ರಶ್ನೆಗಳನ್ನುತ್ತರಿಸಿ, ನಿವೃತ್ತರಾಗಿ!<p><span style="font-size: x-large;">ಇದೇನಪ್ಪಾ, </span>ಇತ್ತೀಚೆಗಷ್ಟೇ ಟೆಕ್ನಾಲಜಿ ಜ್ವರದಲ್ಲಿ ಬೆಂದು ಬಳಲಾಡುತ್ತಿರುವ ನಮ್ಮಂಥವರಿಗೆ ದಿಢೀರನೇ ನಿವೃತ್ತಿಯ ಬಗ್ಗೆ ಕಿವಿಮಾತೇ ಎಂದು ಹುಬ್ಬೇರಿಸಬೇಡಿ, ಮುಂದೆ ಓದಿ ನೋಡಿ. ಇತ್ತೀಚೆಗೆ ಒಂದಿಷ್ಟು ಕಮ್ಮ್ಯೂನಿಟಿ ಸೇವೆಯ ಹೆಸರಿನಲ್ಲಿ ನನಗೆ ಸೀನಿಯರ್ ಸಿಟಿಜನ್ಗಳ ಸೇವೆ ಮಾಡೋ ಭಾಗ್ಯ ಒದಗಿತ್ತು, ಈ ಸಂದರ್ಭದಲ್ಲಿ ಕಮ್ಯೂನಿಟಿ ಸೇವೆ ಮಾಡುತ್ತಲೇ ನಾನು ಮುಂದೆ ನಿವೃತ್ತನಾಗಿ ಇದೇ ಅವಸ್ಥೆಗೆ ಬಂದರೆ ಹೇಗಿರಬಹುದು ಎಂದು ಯೋಚಿಸಿ ಸ್ವಲ್ಪ ರಿಸರ್ಚ್ ಮಾಡಿ ನೋಡಲಾಗಿ ಹಲವಾರು ಅಂಶಗಳು ಹೊರಬಂದವು, ಅವುಗಳಲ್ಲಿ ಕೆಲವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಅಷ್ಟೇ.</p><p>ಈ ಎಕಾನಮಿಯಲ್ಲಿ ನಿವೃತ್ತರಾಗೋ ಮಾತೇ ಬರೋದಿಲ್ಲ, ಆ ಮಾತು ಬಿಡಿ. ಮುಂದೆಯಾದರೂ ಸುಧಾರಿಸೀತು, ಇಲ್ಲವೆಂದಾದರೆ ನಮ್ಮಂಥವರ ಕಷ್ಟ ಯಾರಿಗೂ ಬೇಡ. ಎಷ್ಟೋ ಜನ ರಿಟೈರ್ಮೆಂಟ್ ಬದುಕಿಗೆ ಪ್ಲಾನ್ ಮಾಡೋದೇ ಇಲ್ಲ. ರಿಟೈರ್ಮೆಂಟ್ ಬದುಕಿನಲ್ಲಿ ಹಣ, ಹೊಣೆ ಎಷ್ಟು ಮುಖ್ಯವೋ ಅಷ್ಟೇ ಆರೋಗ್ಯವೂ ಮುಖ್ಯ. ಆರೋಗ್ಯದ ಜೊತೆಗೆ ಇಷ್ಟೆಲ್ಲ ದಿನಗಳಲ್ಲಿ ವ್ಯಸ್ತರಾಗಿ ಕೆಲಸ ಮಾಡಿ ಕರ್ಮಜೀವನವನ್ನು ತೇಯ್ದ ನಮಗೆ ಮುಂದೆ ಕಾಲ ಕಳೆಯೋದಕ್ಕೆ ಏನು ಬೇಕು ಏನು ಬೇಡ ಅನ್ನೋದರ ತೀರ್ಮಾನವೂ ಬಹಳ ಮುಖ್ಯ. ಹಣವನ್ನಾದರೂ ಉಳಿಸಬಹುದು, ಗಳಿಸಬಹುದು, ಬೆಳೆಸಬಹುದು. ಆದರೆ, ಒಮ್ಮೆ ಹದಗೆಟ್ಟ ಆರೋಗ್ಯವನ್ನು ಹದ್ದುಬಸ್ತಿಗೆ ತರುವುದು ಭಗೀರಥ ಪ್ರಯತ್ನವೇ ಆಗಬಹುದು. ಎಲ್ಲಕ್ಕಿಂತ ಮುಖ್ಯ ಕೈಕಾಲು ಗಟ್ಟಿ ಇರಬೇಕು, ದೃಢವಾದ ಮನಸ್ಸಿಗೆ ಬೆಂಬಲ ನೀಡುವ ತಕ್ಕ ಮಟ್ಟಿನ ಶರೀರ ಬೇಕೇ ಬೇಕು. ಇದ್ದಕ್ಕಾಗಿ ಒಂದಿಷ್ಟು ಕಾಲ ವ್ಯಾಯಾಮ, ಯೋಗ, ಮೊದಲಾದ ದೈಹಿಕ ದಂಡನೆ ಜೊತೆ ಜೊತೆಗೆ ಮಾನಸಿಕ ಸ್ಥಿತಿಯ ಸ್ಥಿಮಿತಕ್ಕೆ ಧ್ಯಾನವೂ ಬೇಕಾಗುತ್ತದೆ.</p><p>***</p><p></p><div class="separator" style="clear: both; text-align: center;"><a href="https://blogger.googleusercontent.com/img/a/AVvXsEiojQ77kEs6Onh4Zq7m0Hz85jdeCqhYprlXFbZd_VLwg4D0cUhTFwQEcLy0wi5nahofcefQyK-edmlnfMsUc7DIrlwuzrwkCdZPo3dkkCwJ7MOfURAi8RVftXziGBCJpE6YJpE_z-0xN7FiX0d3INFmpZ6Oygs1X7-61Ad4rOsAndmaq2LlN8m3XQ" style="clear: left; float: left; margin-bottom: 1em; margin-right: 1em;"><img alt="" data-original-height="800" data-original-width="1600" height="160" src="https://blogger.googleusercontent.com/img/a/AVvXsEiojQ77kEs6Onh4Zq7m0Hz85jdeCqhYprlXFbZd_VLwg4D0cUhTFwQEcLy0wi5nahofcefQyK-edmlnfMsUc7DIrlwuzrwkCdZPo3dkkCwJ7MOfURAi8RVftXziGBCJpE6YJpE_z-0xN7FiX0d3INFmpZ6Oygs1X7-61Ad4rOsAndmaq2LlN8m3XQ" width="320" /></a></div><p></p><p>ಸರಿ, ಈಗ ಮುತ್ತಿನಂತಹ ಮೂರು ಪ್ರಶ್ನೆಗಳಿಗೆ ಬರೋಣ:</p><p>೧. ಯಾವ ವಯಸ್ಸಿನಲ್ಲಿ ನಿವೃತ್ತರಾಗುತ್ತೀರಿ ಹಾಗೂ ನಿಮಗೆ ಬೇಕಾದ ಹಣದ ಮೊತ್ತವೆಷ್ಟು?</p><p>೨. ರಿಟೈರ್ ಆದ ನಂತರ ಹೇಗೆ ಸಮಯವನ್ನು ವ್ಯಯಿಸುತ್ತೀರಿ, ಯಾವ ಯಾವ ಹವ್ಯಾಸಗಳನ್ನು ಉಳಿಸಿಕೊಳ್ಳುತ್ತೀರಿ, ಬೆಳೆಸಿಕೊಳ್ಳುತ್ತೀರಿ?</p><p>೩. ನಿಮ್ಮ ಕಾಲಾನಂತರ ಯಾರು ಯಾರಿಗೆ ಏನನ್ನು ಬಿಟ್ಟು ಹೋಗುತ್ತೀರಿ?</p><p>ಈ ಮೂರು ಪ್ರಶ್ನೆಗಳನ್ನು ವಿಸ್ತರಿಸುವುದಕ್ಕೆ ಮೊದಲು "ILI ಪಾಷಾಣ"ಗಳ ವಿಷಯಕ್ಕೆ ಬರೋಣ. ಏನು, ಇಲಿ ಪಾಷಾಣ ಇದು?! ಎಂದು ಬೆರಗಾದಿರೋ, ಸುಲಭವಾಗಿ ನೆನಪಿಗೆ ಬರುವಂತೆ ಸುಮ್ಮನೆ ಒಂದು ಉಪಮೆಯ ಸೃಷ್ಟಿ ಅಷ್ಟೇ:</p><p>I: Investment risk</p><p>L: Longevity risk</p><p>I: Inflation risk</p><p>ಈ ಮೇಲೆ ಹೇಳಿದ ಮೂರು ರಿಸ್ಕ್ಗಳೇ ಪಾಷಾಣವಿದ್ದ ಹಾಗೆ. ಪ್ರತಿಯೊಬ್ಬರೂ ತಾವು ನಿವೃತ್ತರಾಗಲು ತಯಾರಾಗುತ್ತ ಇದ್ದ ಹಾಗೆ, ಇಪ್ಪತ್ತರ ಹರೆಯದಿಂದ ಎಪ್ಪತ್ತರವರೆಗೆ ಈ ಮೂರು ರಿಸ್ಕ್ಗಳ ಬಗ್ಗೆ ನಿರಂತರವಾಗಿ ಯೋಚಿಸುತ್ತಲೇ ಇರಬೇಕಾಗುತ್ತದೆ. Investment risk ನಲ್ಲಿ ನೀವು ಹೂಡಿದ ಹಣ ನೀವು ರಿಟೈರ್ ಆಗುವ ಹೊತ್ತಿಗೆ ಯಾವುದೋ ಒಂದು ರಿಸೆಷ್ಷನ್ನೋ ಇಲ್ಲಾ ಡಿಪ್ರೆಷ್ಷನ್ನ್ ಚಕ್ರದಲ್ಲಿ ಸಿಕ್ಕು ನರಳುತ್ತಿರಬಹುದು. Longevity risk ಅಂದರೆ ನೀವು ಎಂಭತ್ತು ವರ್ಷ ಬದುಕುತ್ತೀರಿ ಎಂದು ಅದಕ್ಕೆ ತಕ್ಕಂತೆ ಹಣ ಹೂಡಿ ಕೂಡಿ ಹಾಕಿ ಮುಂದೆ ಇಳಿ ವಯಸ್ಸಿನಲ್ಲಿ ನೀವು ತೊಂಭತ್ತು ಆದರೂ ಗೊಟಕ್ ಎನ್ನದೇ ಇರಬಹುದು. Inflation risk ನಲ್ಲಿ ಈಗ ಎರಡು ರುಪಾಯಿ ಅಥವಾ ಡಾಲರ್ಗೆ ಸಿಗಬಹುದಾದ ಪದಾರ್ಥ ಮುಂದೆ ಇಪ್ಪತ್ತು ರುಪಾಯಿ ಅಥವಾ ಇಪ್ಪತ್ತು ಡಾಲರ್ ಗಿಂತಲೂ ದುಬಾರಿಯಾಗಬಹುದು.</p><p><b>ಮೊದಲನೆಯ ಪ್ರಶ್ನೆ:</b> ಹೂಡಿಕೆಯ ಹಣಕ್ಕೆ ಅಂಟಿಕೊಂಡ ತೊಂದರೆಗಳು ಯಾವು ಯಾವು? ಇಂಟರ್ನೆಟ್ ನಲ್ಲಿ ಹುಡುಕಿದರೆ ಬೇಕಾದಷ್ಟು ರಿಟೈರ್ಮೆಂಟ್ ಕ್ಯಾಲ್ಕುಲೇಟರುಗಳು ಸಿಗುತ್ತವೆ, ನಿಮ್ಮ ಈಗಿನ ಆದಾಯ ಹಾಗೂ ಖರ್ಚುಗಳನ್ನು ಗಮನದಲ್ಲಿಟ್ಟುಕೊಂಡು ನಿವೃತ್ತ ಜೀವನಕ್ಕೆ ಎಷ್ಟು ಬೇಕು ಎಂದು ಅಂದಾಜು ಹಾಕುವುದಕ್ಕೆ. ಅಲ್ಲದೇ, ನಿವೃತ್ತ ಜೀವನದ ಪ್ರತಿವರ್ಷದ ಖರ್ಚಿಗೆ ಎಷ್ಟು ಬೇಕಾಗುತ್ತದೆ ಎನ್ನುವುದರ ಜೊತೆಗೆ ಇಂತಿಷ್ಟು ಹಣದಲ್ಲಿ ಕೇವಲ 4 ಅಥವಾ 5% ಹಣವನ್ನು ಮಾತ್ರ ತೆಗೆಯುವಂತೆ ಬೇಕಾಗುವ ಇಡುಗಂಟನ್ನು ರೂಪಿಸುವ ತಯಾರಿ ಹಾಗು 5% ನ ಮಿತಿಯಲ್ಲಿರುವಂತೆ ಒಂದು ಮೂಲಮಂತ್ರವನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು.</p><p><b>ಎರಡನೆಯ ಪ್ರಶ್ನೆ: </b>ಸರಿ, ಕಷ್ಟದ ಜೀವನವನ್ನು ಸವೆಸಿ ನಿವೃತ್ತರೇನೋ ಆದಿರಿ, ಮುಂದೆ ಏನು? ದಿನಾ ಕೆಲಸ ಕೆಲಸ ಎಂದು ಗೋಗರೆದು ಹತ್ತಿರ ಬಂದ ಹವ್ಯಾಸಗಳು, ಅವಕಾಶಗಳು ಹಾಗೂ ಕನಸುಗಳನ್ನೆಲ್ಲ ದೂರ ತಳ್ಳಿಕೊಂಡು ಮೂರು ನಾಲ್ಕು ದಶಗಳನ್ನು ದೂರ ತಳ್ಳಿದ ನಂತರ ಒಂದು ದಿನ ದಿಢೀರ್ ಎಂದು ಹಳೆಯ ಹವ್ಯಾಸಗಳಿಗೆ ಅಂಟಿಕೊಳ್ಳುತ್ತೇನೆ ಎನ್ನುವುದು ಹುಡುಗಾಟಿಕೆಯೇ ಸರಿ. ಎಲ್ಲದಕ್ಕಿಂತ ಮುಖ್ಯ ಆರೋಗ್ಯ, ದೇಹಸ್ಥಿತಿ ನೆಟ್ಟಗಿರಬೇಕು. ಓದುವುದಕ್ಕೆ, ಬರೆಯುವುದಕ್ಕೆ, ತಿರುಗಾಡುವುದಕ್ಕೆ, ಆಡುವುದಕ್ಕೆ ಸಮಯ ಒಂದಿದ್ದರೆ ಸಾಲದು - ಹಣ ಬೇಕು ಹಾಗೂ ದೇಹದಲ್ಲಿ ಬಲಬೇಕು ಜೊತೆಗೆ ಎಲ್ಲವೂ ಸುಸ್ಥಿತಿಯಲ್ಲಿರಬೇಕು. ಸುಮ್ಮನೆ ಒಂದು ನಿಮಿಷ ಕಣ್ಣು ಮುಚ್ಚಿ ನೀವು ನಿವೃತ್ತರಾದ ಹಾಗೆ ಊಹಿಸಿಕೊಳ್ಳಿ: ಮನೆ ಇದೆ, ಸಾಲವೆಲ್ಲ ತೀರಿದೆ, ಮಕ್ಕಳು ಒಳ್ಳೆಯ ಸ್ಥಿತಿಯಲ್ಲಿದ್ದಾರೆ, ಸುಂದರವಾದ ಬೇಸಿಗೆಯ ದಿನ, ಊಟ ತಿಂಡಿ ಮನೆ ಕೆಲಸ ಎಲ್ಲವೂ ಆಗಿ ನಿಮ್ಮ ಬಳಿ ಐದರಿಂದ ಎಂಟು ಘಂಟೆ ಖಾಲಿ/ಫ್ರೀ ಇದೆ - ಏನು ಮಾಡುತ್ತೀರಿ? ನಿಮ್ಮ ಸ್ನೇಹಿತರು ಯಾರು, ನಿಮ್ಮ ಹವ್ಯಾಸಗಳೇನು, ನಿಮಗೇನು ಇಷ್ಟ, ನಿಮಗೇನು ಕಷ್ಟ, ನಿಮಗೇನು ಬೇಕು, ಎಲ್ಲಿ ಹೋಗುತ್ತೀರಿ, ಹೇಗೆ ಹೋಗುತ್ತೀರಿ, ಇತ್ಯಾದಿ. ಹೆದರಿಕೆಯಾಯಿತೇ? ಅಥವಾ ಸಂತೋಷವಾಯಿತೇ? ಈ ಒಂದು ನಿಮಿಷದ ನಿವೃತ್ತ ಬದುಕಿನ ಪಯಣದ ಬಗ್ಗೆ ಏನೆನ್ನೆಸಿತು?</p><p><b>ಮೂರನೆಯ ಪ್ರಶ್ನೆ:</b> ಕೆರೆಯ ನೀರನು ಕೆರೆಗೆ ಚೆಲ್ಲಿ ಅಂದೋರು ಈ ಕಾಲದವರಂತೂ ಖಂಡಿತ ಅಲ್ಲ, ಬರುವಾಗ ಬೆತ್ತಲೆ ಹೋಗುವಾಗ ಬೆತ್ತಲೆ ಎನ್ನೋದೂ ಪೂರ್ತಿ ನಿಜವಲ್ಲ - ಎಂದು ವಾದ ಮಾಡೋ ಸಮಯವಿದಲ್ಲ. ನೀವು ಇಷ್ಟು ವರ್ಷ ಇದ್ದು ಅದೇನೇನೋ ಮಾಡಿ ಹೋಗುವಾಗ ನಿಮ್ಮನ್ನು ಆಧರಿಸಿಕೊಂಡವರಿಗೆ ಸ್ವಲ್ಪವನ್ನೂ ಬಿಟ್ಟು ಹೋಗೋದಿಲ್ಲವೇನು? ಮುಂದೆ ನಿಮ್ಮ ರಿಟೈರ್ ಮೆಂಟ್ ಅಕೌಂಟಿನಲ್ಲಿ ಪ್ರತಿವರ್ಷ 4 ರಿಂದ 5 % ಹಣವನ್ನು ತೆಗೆದು ಜೀವನ ನಡೆಸುತ್ತೀರಲ್ಲ, ನಿಮ್ಮ ನಂತರ ಅದರ ಬಂಡವಾಳ ಅಥವಾ ಮೂಲಧನ ಯಾರಿಗೆ ಸಿಗಬೇಕು? ಅದರಲ್ಲಿ ಟ್ಯಾಕ್ಸ್ನ ಪಾಲು ಎಷ್ಟು? ಯಾವ ಯಾವ ಬೆನಿಫಿಷಿಯರಿಗೆ ಎಷ್ಟು ಹಣ/ವರಮಾನ/ಆಸ್ತಿ ಇತ್ಯಾದಿಗಳನ್ನು ಯಾವ ರೂಪದಲ್ಲಿ ಬಿಟ್ಟು ಹೋಗುತ್ತೀರಿ ಎನ್ನುವುದಕ್ಕೂ ಬಹಳ ಯೋಚಿಸಬೇಕಾಗುತ್ತದೆ. ಅದಕ್ಕೆ ತಕ್ಕ ಒಳ್ಳೆಯ ಪ್ಲಾನ್ ಅಥವಾ ಸಿದ್ಧತೆ ಬೇಕಾಗುತ್ತದೆ. ಇದರಿಂದ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ನೋಡಿದರೆ, ಅವರವರ ಉಯಿಲು (ಮರಣ ಶಾಸನ ಪತ್ರ, ಅಥವಾ will) ಇರಬೇಕಾದ ಅಗತ್ಯವಿದೆ.</p><p>***</p><p>ಈಗೆನ್ನನ್ನಿಸಿತು? ಮೊದಲು ಯಾವುದಾದರು ಒಂದು ಕಮ್ಯೂನಿಟಿ ಸೆಂಟರಿನಲ್ಲಿ ಸೀನಿಯರ್ ಸಿಟಿಜನ್ ಸೇವೆಗೆ ವಾಲೆಂಟಿಯರ್ ಆಗಿ. ನಿಮ್ಮ ನಿವೃತ್ತ ಜೀವನದ ಮುಂಬರುವ ದಿನಗಳನ್ನು ನೀವೇ ತ್ರೀ ಡೀ ಕಲರ್ ಚಿತ್ರಗಳಲ್ಲಿ ನೋಡಿ. ಅವರ ಸ್ಥಾನದಲ್ಲಿ ನಿಮ್ಮನ್ನು ಗುರುತಿಸಿಕೊಂಡು, ಈಗಿನ ಕಾದಾಟ/ಬಡಿದಾಟಗಳನ್ನು ಕಡಿಮೆ ಮಾಡಿ, ಮುಂದಿನ ಜೀವನದ ILI ಪಾಷಾಣದ ಬಗ್ಗೆ ಸ್ವಲ್ಪ ಚಿಂತಿಸಿ.</p><p>ನಾನು ಯಾವಾಗಲೂ ಬರೆಯೋ ಹಾಗೆ ಅಥವಾ ಹೇಳೋ ಹಾಗೆ ಬದುಕು ಬಹಳ ದೊಡ್ಡದು - ಮೈ ತುಂಬ ಸುಕ್ಕುಗಳನ್ನು ಕಟ್ಟಿಕೊಂಡು ಹುಟ್ಟಿ ಬಂದ ನಾವು ಸುಕ್ಕು ಸುಕ್ಕಾಗೇ ಸಾಯೋದು, ಪ್ರಾಣಿ ಸಂಕುಲದಲ್ಲಿ ಮಾನವರು ಈಗ ತಾನೆ ಹುಟ್ಟಿದ ಅಸಹಾಯಕ ಮಕ್ಕಳಿಂದ ಹಿಡಿದು ಅಸಹಾಯಕ ವೃದ್ದಾಪ್ಯದ ಅವಸ್ಥೆಯವರೆಗೆ ಅನುಭವಿಸೋದು ಬಹಳಷ್ಟಿದೆ. ಮಿದುಳು ಘಂಟೆಗೆ ನೂರು ಮೈಲಿ ವೇಗದಲ್ಲಿ ಓಡಿದರೂ ಮೈ ಬಗ್ಗೋದಿಲ್ಲ. ಮುವತ್ತರ ನಂತರ ಒಂದೊಂದೇ ಕೀಲುಗಳೂ ಕಿರುಗುಟ್ಟುವುದು ಸಾಮಾನ್ಯ. ಅಟೋಮೊಬೈಲನ್ನು ಆಗಾಗ್ಗೆ ಸರ್ವಿಸ್ ಮಾಡಿಸೋ ಹಾಗೆ ನಮ್ಮ ದೇಹಕ್ಕೂ ನಿರಂತರ ಸರ್ವಿಸ್/ಸೇವೆ ಅಗತ್ಯ. ಮಕ್ಕಳಿಂದ ಮುದುಕರ ಅನೇಕ ಅವಸ್ಥೆಯಲ್ಲಿ ಆಯಾ ಅಗತ್ಯಗಳು ಬೇರೆ ಬೇರೆ. ಧೀರ್ಘ ಆಯುಷ್ಯ ಅನ್ನೋದು ದೊಡ್ಡದು, ಆದರೆ ಅಲ್ಲಿಯವರೆಗೆ ಹೋಗಿ ಸಸ್ಟೈನ್ ಆಗಿ ನೆಮ್ಮದಿಯ ಜೀವನ ನಡೆಸುವುದು ಇನ್ನೂ ದೊಡ್ಡದು!</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-25665836902773800672024-02-08T20:29:00.000-05:002024-02-08T20:29:32.357-05:00ನಮ್ಮ ನಡವಳಿಕೆಗಳು<p><span style="font-size: x-large;">ಕೋವಿಡ್ </span>ಮುಗಿದ ನಂತರ ನಮ್ಮ ಡ್ರೈವಿಂಗ್ ಹ್ಯಾಬಿಟ್ನಲ್ಲಿ ಬಹಳ ವ್ಯತ್ಯಾಸವಾಗಿದೆ ಅನ್ನಿಸಿದ್ದು ಇದೇ ಮೊದಲ ಸಲ ಏನಲ್ಲ.</p><p>ಕೋವಿಡ್ ಲಾಕ್ಡೌನ್ ಆಗೋದಕ್ಕೆ ಮುಂಚೆಲ್ಲ ನಾವು ನಮ್ಮ ನಮ್ಮ ಕಾರುಗಳನ್ನ ಹೆಚ್ಚಾಗಿ ಬಳಸ್ತಾ ಇದ್ವಿ. ಆಫ಼ೀಸಿಗೆ ಹೋಗಿ ಬರೋದರ ಜೊತೆಗೆ, ಶಾಪಿಂಗ್, ರಿಕ್ರಿಯೇಷನ್ ಜೊತೆಗೆ ಅಪರೂಪಕ್ಕೊಮ್ಮೆ ಊಟಕ್ಕೆ ಹೊರಗಡೆ ಹೋಗಿ ಬರ್ತಾ ಇರೋದ್ಲಿಂದಾದ್ರೂ ನಮ್ಮ ಕಾರುಗಳು ಹೆಚ್ಚು ಓಡುತ್ತಿದ್ದವು. ನಮಗೆ ಆಫ಼ೀಸಿನ ಹೊರಗಿನ ಊರಿನ ಒಂದಿಷ್ಟು ದರ್ಶನವಾದರೂ ಆಗ್ತಿತ್ತು.</p><p>ಕೋವಿಡ್ ಬಂದ ಮೇಲೆ ನಮ್ಮ ನಮ್ಮ ನಡವಳಿಕೆ ಮೇಲೆ ಅಗಾಧವಾದ ಪರಿಣಾಮ ಬೀರುವಷ್ಟರ ಮಟ್ಟಿಗೆ ಬದಲಾವಣೆಗಳಾಗಿವೆ. ಉದಾಹರಣೆಗೆ, ನಾವು ಮೊದಲಿನ ಹಾಗೆ ಏರ್ಪೋರ್ಟಿನಿಂದ ಜನರನ್ನು ಪಿಕ್ಅಪ್ ಮಾಡೋದಿಲ್ಲ, ಏರ್ಪೋರ್ಟ್ನಿಂದ ಜನರು, ಬದಲಿಗೆ ಊಬರ್ ಅಥವಾ ಲಿಫ಼್ಟ್ ಸರ್ವೀಸುಗಳನ್ನು ತೆಗೆದುಕೊಳ್ಳುತ್ತಾರೆ. ಎಲ್ಲದಕ್ಕಿಂತ ಮುಖ್ಯವಾಗಿ ನಾವು ದಿನಸಿ ಸಾಮಾನುಗಳ ಶಾಪಿಂಗ್ಗೋಸ್ಕರ ಮನೆ ಬಿಟ್ಟು ಹೋಗದೇ ಮೂರು ವರ್ಷಗಳಾಗಿ ಹೋದವು ಎನ್ನಬಹುದು. ಇಂಡಿಯನ್ ಸ್ಟೋರ್ ಮತ್ತು ಅಮೇರಿಕನ್ ಸ್ಟೋರ್ಗಳೆಲ್ಲವೂ ಸಹ ಹೋಮ್ ಡೆಲಿವರಿಯನ್ನು ಶುರು ಮಾಡಿಕೊಂಡ ಬಳಿಕ, ನಮ್ಮ ಆರ್ಡರುಗಳನ್ನು ಫ಼ೋನ್ ಮೂಲಕ ಮಾಡಿದರೆ ಸಾಕು, ಕೆಲವೊಮ್ಮೆ ಅದೇ ದಿನ ಸಂಜೆಯೇ ಮನೆಯ ಬಾಗಿಲಿಗೆ ಬಂದು ಅವರು ಸಾಮಾನುಗಳನ್ನು ತಲಿಪಿಸಿದ್ದೂ ಇದೆ. ಉದಾಹರಣೆಗೆ, ಕಳೆದ ಶುಕ್ರವಾರ ಮಧ್ಯಾಹ್ನ ಕಳುಹಿಸಿದ ಆರ್ಡರ್ ಶನಿವಾರ ಬೆಳಗ್ಗೆಯ ಹೊತ್ತಿಗೆ ಎಲ್ಲಾ ಬಂದು ಸೇರಿ ಆಗಿತ್ತು.</p><p>ಇನ್ನು, ಈ ಹಣದುಬ್ಬರದ ದೆಸೆಯಿಂದ ಮಧ್ಯಮ ವರ್ಗದ ಅನೇಕ ಕುಟುಂಬಗಳು ಹೊರಗಡೆ ಹೋಗಿ ಊಟ ಮಾಡುವುದನ್ನು ಕಡಿಮೆ ಮಾಡಿರಬಹುದು. ಕಳೆದ ಎರಡು ಮೂರು ವರ್ಷಗಳಲ್ಲಿ ಟೇಕ್ಔಟ್ ಆರ್ಡರುಗಳು ಹೆಚ್ಚಿದಂತೆ ಅಂಗಡಿ-ಹೋಟೆಲುಗಳಲ್ಲಿ ಹೋಗಿ ಸಮಯವನ್ನು ಕಳೆಯುವವರ ಸಂಖ್ಯೆ ಕಡಿಮೆ ಆಗಿದೆ. ಇನ್ನು ಆಫ಼ೀಸಿಗೆ ಹೋಗಿ ಬರುವವರ ಸಂಖ್ಯೆಯೂ ಏನು ಹೆಚ್ಚಿಲ್ಲ. ಮೊದಲಿನ ಹಾಗೆ ವಾರಕ್ಕೆ ಐದು ದಿನವೂ ಆಫ಼ೀಸಿಗೆ ಹೋಗಿ ಬರುವ ಸ್ಥಿತಿ ಮರುಕಳಿಸುವ ಸಾಧ್ಯತೆ ಕಡಿಮೆ.</p><p>***</p><p>ನಮ್ಮ ಆಫ಼ೀಸಿನಲ್ಲಿ ಒಬ್ಬ ಚೈನೀಸ್ ಮೂಲದ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದೆ. ಅವನೋ, ವರ್ಷಕ್ಕೆ ಎರಡು, ಹೆಚ್ಚೆಂದರೆ ಮೂರು ಸರ್ತಿ ಆಫ಼ೀಸಿಗೆ ಬಂದರೆ ಅದೇ ದೊಡ್ಡದು. "ನಾನು ಟೆಕ್ನಿಕಲ್ ವರ್ಕರ್, ನನಗೆ ಇಂಟರ್ನೆಟ್ ಕನೆಕ್ಟ್ ಆಗಿರುವ ಲ್ಯಾಪ್ಟಾಪ್ ಒಂದಿದ್ದರೆ, ನಾನು ಎಲ್ಲಿಂದ ಬೇಕಾದರೂ ಕೆಲಸ ಮಾಡಬಲ್ಲೆ! ನಾನು ಇಲ್ಲಿಗೆ ಬಂದರೆ ಸುಮ್ಮನೆ ಸಮಯ ವ್ಯರ್ಥವಾಗುತ್ತದೆ" ಎಂದು ಜಂಭದಿಂದ ಹೇಳಿಕೊಳ್ಳುತ್ತಿದ್ದ. ನಾನು, ಮನದಲ್ಲಿಯೇ, "ಇಂಥವರಿಂದಲೇ ಇರಬೇಕು, ನಮ್ಮ ಆಫ಼ೀಸಿನಲ್ಲಿ ಯಾರೂ ಯು.ಎಸ್. ನಿಂದ ಹೊರಗಡೆ ಕಂಪನಿ ಕಂಪ್ಯೂಟರ್ ಮತ್ತು ಫ಼ೋನುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ, ಎಂದು ಆರ್ಡರ್ ಹೊರಡಿಸಿರೋದು" ಎಂದುಕೊಂಡೆ. ಅವನ ಜೊತೆ ಮಾತನಾಡುತ್ತಾ ಒಂದು ವಿಷಯ ಯೋಚಿಸುವಂತಾಯ್ತು, ಅವನು ಅಮೇರಿಕದಲ್ಲಿ ಸುಮಾರು ಇಪ್ಪತ್ತೈದು ವರ್ಷಗಳಿಂದ ಇದ್ದರೂ, ಯಾವ ವಿಚಾರದಲ್ಲೂ ಅವನು ಅಮೇರಿಕನ್ ಆಗಲಿಕ್ಕೆ ಹೇಗೆ ಸಾಧ್ಯ?</p><p>ಅವನು ಇಲ್ಲಿ ಇಷ್ಟು ವರ್ಷ ಇದ್ದರೂ, ಅವನ ಇಂಗ್ಲೀಷ್ ಬಳಕೆ ಅಷ್ಟಕ್ಕಷ್ಟೇ. ನಮ್ಮ ಸಂಭಾಷಣೆಯಲ್ಲಿ, ನಾನು ಹೇಳಿದ, "Better get your ducks in a row!" ಎಂಬ ಮಾತಿಗೆ ಅವನು ಕಕ್ಕಾಬಿಕ್ಕಿಯಾಗಿ, ಹಾಗಂದ್ರೆ? ಎಂದು ಕೇಳಿದ... ಅದಕ್ಕೆ ನಾನು, "Make proper plans, get things ready!" ಎಂದು ಸಮಜಾಯಿಷಿ ಹೇಳಿ ಅವನನ್ನು ಸಮಾಧಾನ ಪಡಿಸುವಂತಾಯ್ತು!</p><p>ಅವನು ಮೊದಲೇ ಶತಮೊಂಡ, ಈಗಂತೂ ಮುನಿಸಿಕೊಂಡಿದ್ದಾನೆ ಎನ್ನುವಂತೆ, ಸುಮಾರು ಕಾಲು ಶತಮಾನಕ್ಕೂ ಹೆಚ್ಚು ಅಮೇರಿಕದಲ್ಲಿ ಕಳೆದಿದ್ದರೂ, ಅಮೇರಿಕನ್ ವ್ಯವಸ್ಥೆಯಲ್ಲಿ ಆ ವ್ಯಕ್ತಿ ನೇರವಾಗಿ ಪಾಲ್ಗೊಂಡಿದ್ದಂತೆ ಕಾಣಿಸಲಿಲ್ಲ. ತಮ್ಮ ಉಡುಗೆ-ತೊಡುಗೆಯಿಂದ ಹಿಡಿದು, ತಾವು ಶಾಪ್ ಮಾಡುವ ಅಂಗಡಿಗಳು ಎಲ್ಲವೂ ಚೈನೀಸ್ ಮಯವಾಗಿದ್ದರೆ, ತಾವು ಮಾತನಾಡುವ ಭಾಷೆ ಚೈನೀಸ್ ಆಗಿದ್ದು, ತಮ್ಮ ಫ಼ೋನಿನಲ್ಲಿರುವ ನೂರಕ್ಕೆ ತೊಂಬತ್ತರಷ್ಟು ಜನರು ಚೈನೀಸ್ ಆಗಿದ್ದರೆ, ಇಂತಹವರು ಅದು ಯಾವ ರೀತಿಯಲ್ಲಿ "ಅಮೇರಿಕನ್" ಆಗಲಿಕ್ಕೆ ಸಾಧ್ಯ?</p><p>ಇಂಥವರಿಗೆ ಆಫ಼ೀಸಿಗೆ ಬರಲು ಕಷ್ಟವಾಗದೇ ಇನ್ನೇನು? (ಹೀಗೇ ಬಂದ ಮತ್ತೊಂದು ಮಾಹಿತಿಯ ಪ್ರಕಾರ, ಈ ಚೈನೀಸ್ ದಂಪತಿಗಳು ಒಂದು ಅಮೇಜ಼ಾನ್ ಸ್ಟೋರ್ ಅನ್ನೂ ಕೂಡ ನಡೆಸಿಕೊಂಡು ಅದರಲ್ಲಿ ಮರ್ಚಂಟೈಸ್ ಅನ್ನು ಮಾರುತ್ತಿದ್ದಾರಂತೆ.) ತಮ್ಮ ಸುತ್ತಮುತ್ತಲೂ ಅಂತದೇ ನೆರೆಹೊರೆ, ಎಲ್ಲೂ ಡ್ರೈವ್ ಮಾಡಲಾಗದ, ಮಾಡಲು ಅಗತ್ಯವಿಲ್ಲದ ವ್ಯವಸ್ಥೆ. ಮನೆಯಲ್ಲಿ ಕುಳಿತಲ್ಲಿಂದಲೇ ಕೆಲಸ - ಒಂದಲ್ಲದಿದ್ದರೆ ಎರಡು. ಫ಼ೋನ್ ತಿರುಗಿಸಿದರೆ ಅಗಾಧವಾದ ಮತ್ತು ಅಪರಿಮಿತವಾದ (ಚೈನೀಸ್) ಮನರಂಜನೆ ಸಿಗುವ ವ್ಯವಸ್ಥೆ. ಹೀಗಿರುವಾಗ ಯಾರು ಅಮೇರಿಕನ್ನರು, ಯಾರು ಅಲ್ಲ... ಎಂದು ಕೇಳಿಕೊಳ್ಳಬೇಕಾದ ಅನಿವಾರ್ಯತೆ!</p><p>ಈ ಉದಾಹರಣೆ ನಮಗೂ ಅನ್ವಯವಾದೀತು... ನಾವು ಭಾರತೀಯ ಊಟ-ತಿಂಡಿಯನ್ನು ಸವಿದು, ಭಾರತೀಯ ನ್ಯೂಸ್, ಟಿವಿ, ಮನರಂಜನೆಯ ಮಾಧ್ಯಮಗಳನ್ನು ಅನುಸರಿಸಿ, ಭಾರತೀಯರ ನಡುವೆಯೇ ಹೊಂದಾಣಿಕೊಂಡು ಬೆಳೆಯುವುದಾದರೆ... ನಮಗೆ ಬೇಕಾದ ಪದಾರ್ಥಗಳೆಲ್ಲವೂ ಮನೆಗೆ ಬಂದು ಬೀಳುವ ವ್ಯವಸ್ಥ ಇದ್ದರೆ... ದೇವಸ್ಥಾನ, ಕನ್ನಡ ಸಂಘ ಮತ್ತು ಇಂಡಿಯನ್ ಸಂಬಂಧಿತ ಕಾರ್ಯಕ್ರಮಗಳಿಗೆ ಮಾತ್ರ ಹೋಗಿ ಬರುವಂತಾದರೆ... ನಾವು ಅಮೇರಿಕದಲ್ಲೇ ಏಕಿರಬೇಕು? ಅಮೇರಿಕದಲ್ಲೇ ಯಾಕಾದರೂ ಇರಬೇಕು?</p><p>***</p><p>ಒಂದು ಸಮಾಜ, ದೇಶದ ಮೇಲಿನ ಅವಲಂಬನೆ ನಮ್ಮ ದೈನಂದಿನ ಅಗತ್ಯಗಳನ್ನೂ ಮೀರಿದ್ದಾಗಿರುತ್ತದೆ. ಅದು ನಮ್ಮ ರಾಜಕೀಯ, ಸಾಮಾಜಿಕ, ಆರ್ಥಿಕ ಮತ್ತು ಔದ್ಯೋಗಿಕ ಅಗತ್ಯಗಳನ್ನೂ ಒಳಗೊಂಡಿರುತ್ತದೆ. ಇದೇ ಅಮೇರಿಕನ್ ಸಂಬಳವನ್ನು ಬೇರೆ ಯಾವುದೋ ದೇಶದಲ್ಲಿ ಕುಳಿತುಕೊಂಡು ತೆಗೆದುಕೊಳ್ಳುವುದು ನಿಜವಾದರೆ, ಅಲ್ಲಿಗೆ ಸುಮ್ಮನೇ ಹೋಗಲಾಗುತ್ತದೆಯೇ? ನಮ್ಮ ಹಾಗೆ ಬೇರೆ ದೇಶಗಳಿಂದ ಬಂದು ಇಲ್ಲಿ ನೆಲೆಯನ್ನು ಕಂಡುಕೊಂಡವರು, ನಾವು ಯಾವಾಗಲೂ ಒಂದು ದ್ವಂದ್ವದಲ್ಲಿಯೇ ಇರುತ್ತೇವೆ. ಒಂದಿಪ್ಪತ್ತು ವರ್ಷಗಳಾದ ನಂತರ, ಅಲ್ಲಿನ ಬೇರುಗಳು ನಿಧಾನವಾಗಿ ಕಣ್ಮರೆಯಾಗುತ್ತ ಬಂದ ಹಾಗೆ, ನಾವು ಹೆಚ್ಚು ಹೆಚ್ಚು ಇಲ್ಲಿಯವರೇ ಆಗಿ ಹೋಗುತ್ತೇವೆ. ಇಲ್ಲೇ ಹುಟ್ಟಿ-ಬೆಳೆದ ನಮ್ಮ ಮಕ್ಕಳು ನಮ್ಮ ಹಾಗಂತೂ ಅಲ್ಲ... ಅವರಿಗೆ ನಮ್ಮ ಸಂಸ್ಕೃತಿಯ ಧೋರಣೆ ಏನೇ ಇದ್ದರೂ ಅದು ಕಡಿಮೆಯೇ... ಇಲ್ಲೇ ಬೆಳೆದು ಕಲಿತು, ಮುಂದೆ ಹೋಗುವ ಅವರಿಗೆ ಇಲ್ಲಿಯ ಸಂಸ್ಕೃತಿಯೇ ಮುಖ್ಯ.</p><p>ಇಲ್ಲಿ ಹುಟ್ಟಿ-ಬೆಳೆಯದಿದ್ದರೇನಂತೆ? ಇಲ್ಲೇ ದುಡಿದು, ಇಲ್ಲಿನ ವ್ಯವಸ್ಥೆಯಲ್ಲಿ ಟ್ಯಾಕ್ಸ್ ಕಟ್ಟಿ ಬದುಕುತ್ತಿಲ್ಲವೇನು? ಹಾಗಿದ್ದ ಮೇಲೆ, ನಾವು ಕಟ್ಟಿದ ಟ್ಯಾಕ್ಸ್ನ ಒಂದೊಂದು ಡಾಲರ್ ಮತ್ತು ಅದು ಎಲ್ಲಿ, ಹೇಗೆ ವಿನಿಯೋಗ ಆಗುತ್ತಿದೆ ಎನ್ನುವುದರಲ್ಲಿ ನಾವು ಪರೋಕ್ಷವಾಗಿ ಫಲಾನುಭವಿಗಳಾಗಿದ್ದೇವಲ್ಲವೇ? ಈ ಟ್ಯಾಕ್ಸ್ನಿಂದ ಉಳಿದ ಹಣ, ಮುಂದೊಂದು ದಿನ ಯುಕ್ರೇನ್ ಅನ್ನು ರಷ್ಯಾದಿಂದ ಸಂರಕ್ಷಿಸುವ ಹಣವಾಗಿ, ಅಥವಾ ಇಸ್ರೇಲ್ನಲ್ಲಿ ಸಿಡಿಯುವ ಮದ್ದುಗುಂಡುಗಳ ತಲೆಯಾಗಿ ಬಳಕೆ ಆದೀತೆಂದು ಯಾರು ಕಂಡವರು? ಬರೀ ಟ್ಯಾಕ್ಸ್ ಕಟ್ಟಿದರೆ ಸಾಕೇ? ಅದು ಹೇಗೆ ವಿನಿಯೋಗವಾಗಬೇಕು ಅಥವಾ ಬೇಡ ಎನ್ನುವುದರಲ್ಲಾದರೂ ನಮ್ಮ ಅನಿಸಿಕೆಯನ್ನು ನಾವು ವ್ಯಕ್ತಪಡಿಸಿಕೊಳ್ಳಲಿಲ್ಲವೆಂದರೆ?</p><p>***</p><p>ಅಮೇರಿಕದ ಮುಖ್ಯ ವ್ಯಾಲ್ಯೂಗಳಲ್ಲಿ ಒಂದು ಫ಼್ರೀಡಮ್! ಇದನ್ನು ಸ್ವತಂತ್ರ, ಸ್ವಾಯುತ್ತತೆ, ಬಿಡುಗಡೆ, ಆಯ್ಕೆ ಮುಂತಾದ ಪರ್ಯಾಯ ಪದಗಳನ್ನು ಬಳಸಿ ಹೇಳಿದರೂ ಕೂಡಾ, ಇಲ್ಲಿನ ಫ಼್ರೀಡಮ್ಗೂ ಮತ್ತು ಉಳಿದ ದೇಶಗಳ ಫ಼್ರೀಡಮ್ಗೂ ಸಾಕಷ್ಟು ವ್ಯತ್ಯಾಸವಿದೆ. ಉದಾಹರಣೆಗೆ, ನಾವು ಇಲ್ಲಿ ಅಮೇರಿಕನ್ ಪ್ರೆಸಿಡೆಂಟ್ಗಳನ್ನು ಕುರಿತು ಸಾರ್ವಜನಿಕವಾಗಿ ಜೋಕ್ ಮಾಡಿಕೊಂಡು ಕಾಮೆಡಿ ಶೋಗಳಲ್ಲಿ ನಗುವ ಹಾಗೆ, ಅನೇಕ ಪ್ರಜಾಪ್ರಭುತ್ವ ಇರುವ ದೇಶಗಳಲ್ಲಿ ಮಾಡಲಾಗದು. ಕೋವಿಡ್ ಬಂದು ಎಲ್ಲ ದೇಶಗಳೂ ಖಡಾಖಂಡಿತ ಲಾಕ್ಡೌನ್ಗಳನ್ನು ಘೋಷಿಸಿ, ಕೆಲವು ದೇಶಗಳಲ್ಲಿ ರಸ್ತೆಯ ಮೇಲೆ ವಾಹನಗಳ ಓಡಾಟವನ್ನು ನಿರ್ಬಂಧಗೊಳಿಸಿದಾಗಲೂ, ಅಮೇರಿಕದಲ್ಲಿ ನಮ್ಮ ’ಫ಼್ರೀಡಮ್’ಗೆ ಯಾವ ಕುಂದುಕೊರತೆಯೂ ಆಗಲಿಲ್ಲ. ಒಂದು ದೇಶದಲ್ಲಿ ಬದುಕಿ, ಅಲ್ಲಿನ ನೀರು ಕುಡಿದು, ಅಲ್ಲಿನ ಅನ್ನವನ್ನು ತಿಂದ ಮೇಲೆ ಅಲ್ಲಿನ ದೇಶದ ಮೇಲೆ ಒಂದು ರೀತಿಯ ನಿಷ್ಠೆ, ಭಕ್ತಿ ಹಾಗೂ ನಿಯತ್ತು ಬರಲೇ ಬೇಕಾಗುತ್ತದೆ. ಒಂದು ವೇಳೆ ಅದು ಹಾಗಿಲ್ಲವೆಂದರೆ, ನಮ್ಮದೆಲ್ಲ ಬರೀ ಪಾಸ್ಪೋರ್ಟುಗಳನ್ನು ಹೊಂದಿದ, ಎದೆಕರಗದ ದೇಶಭಕ್ತಿಯ ನೋವಿರದ ನಾಗರಿಕತೆ ಆಗಿ ಹೋಗುತ್ತದೆ.</p><p>ನಾವು, ಹೆಚ್ಚಿನವರಾಗಿ, ಇಲ್ಲಿ ಇಂಜಿನಿಯರ್ ಮತ್ತು ಡಾಕ್ಟರುಗಳಾಗಿ ಬಂದೆವು, ಕೆಲಸ ಮಾಡತೊಡಗಿದೆವು. ಆದರೆ, ಇಲ್ಲೇ ಹುಟ್ಟಿ ಬೆಳೆದ ನಮ್ಮ ಮಕ್ಕಳು ಇಲ್ಲಿನ ಸೈನ್ಯವನ್ನು ಸೇರಿ ದೇಶಸೇವೆ ಮಾಡುವುದನ್ನು ನಾವು ಸುಲಭವಾಗಿ ಸಹಿಸಲಾರೆವು. ಇಲ್ಲಿನ ಸ್ಥಳೀಯ ಕಮ್ಯೂನಿಟಿ ಸರ್ವಿಸುಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಲ್ಲಿ ಹಿಂದೇಟು ಹಾಕುವುದರ ಜೊತೆಜೊತೆಗೆ ನಮ್ಮ ಮಕ್ಕಳನ್ನೂ ಆ ನಿಟ್ಟಿನಲ್ಲಿ ತೊಡಗಿಕೊಳ್ಳುವಂತೆ ಹುರಿದುಂಬಿಸಲಾರೆವು. ಇಲ್ಲಿನ ಬ್ಲೂ ಕಾಲರ್ ಸೇವೆ, ಸರ್ವೀಸುಗಳು ನಮಗಲ್ಲ. ಬಿಳಿ ಕಾಲರ್ ಸೇವೆ ಸರ್ವೀಸುಗಳಲ್ಲಿ ಕೈ ತುಂಬ ದುಡಿದು, ಯಶಸ್ವಿ ಜೀವನವನ್ನು ಸಾಗಿಸಿದರೆ ಸಾಕು, ಅಷ್ಟೇ!</p><p>ನಮ್ಮ ಪಕ್ಕದ ಮನೆಯಲ್ಲಿ ಇರೋರೇ ನಮಗೆ ಗೊತ್ತಿಲ್ಲದಿರುವಾಗ ಇನ್ನು ಈ ದೇಶ-ಪ್ರಪಂಚಗಳನ್ನು ಹೇಗೆ ತಿಳಿದುಕೊಂಡಾದರೂ ಏನು ಪ್ರಯೋಜನ? ಅದೆಲ್ಲ ಬೇಡ, ಇಂಟರ್ನೆಟ್ ಕನೆಕ್ಟ್ ಆಗಿರುವ ಲ್ಯಾಪ್ಟಾಪ್ ಒಂದನ್ನು ಕಟ್ಟಿಕೊಂಡು ಯಾವುದಾದರೊಂದು ದ್ವೀಪದಲ್ಲಿದ್ದರೂ ಸಾಕಲ್ಲ? ಅಮೇರಿಕದಲ್ಲೇ ಏಕಿರಬೇಕು?</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-66428907448761841702024-02-04T08:59:00.003-05:002024-02-04T09:48:07.214-05:00ಸ್ಥಳಾಂತರ<p><span style="font-size: x-large;">ಒಂದು </span>ಶುಭ್ರವಾದ ಮಧ್ಯಾಹ್ನ ಎಲ್ಲರೂ ಸುಧಾ ಹೋಟ್ಲು ಸರ್ಕಲ್ ಹತ್ರ ಸೇರಿದ್ರು. ಅದು ಸರ್ಕಲ್ ಅಂದ್ರೆ ನಾಲ್ಕು ರಸ್ತೆ ಕೂಡೋ ಜಾಗಾನೇ ಅಂತ ಆಗಬೇಕಿಲ್ಲ. ಅದೊಂದು ಸಣ್ಣ ವ್ಯಾಪಾರದ ಸ್ಥಳ. ಒಂದು ಮುಖ್ಯ ರಸ್ತೆ, ಅದಕ್ಕೆ ಲಂಭವಾಗಿ ಹೊರಟಿರೋ ಮತ್ತೊಂದು ರಸ್ತೆ ಅನ್ನಬೇಕು ಅಷ್ಟೇ. ಈ ಊರಿನ ಮುಖ್ಯವಾದ ಸ್ಥಳಕ್ಕೆ ಯಾವ ಒಬ್ಬ ಮಹಾತ್ಮರ ಹೆಸರೂ ಇನ್ನೂ ಯಾರೂ ಏಕೆ ಇಟ್ಟಿಲ್ಲ ಅನ್ನೋದು ಒಳ್ಳೆಯ ಪ್ರಶ್ನೆ.</p><p>ಹೀಗಿರೋ ಸ್ಥಳ, ಬೆಳಿಗ್ಗೆ ಮತ್ತು ಸಂಜೆ ಹೂವು ತರಕಾರಿ ಮಾರೋ ಜನರಿಂದ ಮತ್ತು ಅವನ್ನು ಖರೀದಿ ಮಾಡೋ ಗ್ರಾಹಕರಿಂದ ಒಂದು ರೀತಿ ಗಿಜುಗುಟ್ಟುತ್ತಾ ಇರೋದನ್ನ ಬಿಟ್ರೆ, ಮಧ್ಯಾಹ್ನ ಊಟದ ಸಮಯವೊಂದನ್ನು ಬಿಟ್ಟು ಉಳಿದೆಲ್ಲ ಸಮಯ ತಣ್ಣಗೇ ಇರೋದು ಅಂತ ಹೇಳ್ಬಹುದು.</p><p>ಈ ಮೂರು ರಸ್ತೆಗಳು ಕೂಡುವಂತ ಸ್ಥಳದಲ್ಲಿ ಇರೋದು ಸುಧಾ ಹೋಟ್ಲು. ಘಟ್ಟದ ಕೆಳಗಿಂದ ದಶಕಗಳ ಹಿಂದೆ ಬಂದು, ಈ ಊರಿನಲ್ಲಿ ನೆಲೆನಿಂತ ಒಂದು ಸಣ್ಣ ಭಟ್ಟರ ಹೋಟೆಲ್. ಅಂದು ಅವರ ಹಿರಿಯ ಮಗಳ ಹೆಸರಿನಿಂದ ಆರಂಭವಾಗಿದ್ದು, ಇವತ್ತಿಗೂ ಇನ್ನೂ ಮುಂದುವರೆಯುತ್ತಿದೆ. ಭಟ್ಟರು ಕಾಲವಾಗಿ ಅದೆಷ್ಟೋ ವರ್ಷಗಳು ಸಂದಿವೆ. ಅವರ ಹೆಂಡತಿ ಇನ್ನೂ ತಮ್ಮ ಎಂಬತ್ತರ ಪ್ರಾಯದಲ್ಲಿ ಇದ್ದರೂ, ಆಗಾಗ್ಗೆ ಹೋಟೆಲ್ ಹಿಂದೆ ಮುಂದೆ ಸುಳಿಯುತ್ತಾರಾದರೂ, ಅವರು ಹಾಕಿಕೊಟ್ಟ ರೆಸಿಪಿ ಅಲ್ಲಿನ ಜನರ ಬಾಯಿ ರುಚಿಯಲ್ಲಿ ಗಾಢವಾಗಿ ನಿಂತು ಬಿಟ್ಟಿದೆ.</p><p>ದಿನ ಬೆಳಗ್ಗೆ ತಿಂಡಿಗೆ ಜನ ಅಷ್ಟೊಂದು ಬರ್ತಿರಲಿಲ್ಲ, ಆದ್ರೆ, ಮಧ್ಯಾಹ್ನ ಊಟದ ಹೊತ್ತಿಗೆ ಮಾತ್ರ ಜನ ದಂಡಿಯಾಗಿ ಅದೆಲ್ಲೆಲ್ಲಿಂದಲೋ ಬರೋರು. ಅಮ್ಮನ ಕೈ ರುಚಿ - ಅಂತಲೇ ಫ಼ೇಮಸ್ಸಾಗಿರೋ ಘಮಘಮಿಸೋ ಉಪ್ಪಿಟ್ಟು, ಚಿತ್ರಾನ್ನ, ಪುಳಿಯೋಗರೆ, ಅನ್ನ-ಸಾಂಬಾರ್ ಜೊತೆ ಜೊತೆಗೆ ಕೀರು-ಪಾಯಸ ಅಂತಾ ಏನಾದ್ರೂ ಸಿಹಿ ಪ್ರತಿದಿನ ಸಿಕ್ಕೇ ಸಿಗೋದು. ಈ ಬೆಲೆ ಏರಿಕೆ ದಿನಗಳಲ್ಲಿ ಕಡಿಮೆ ಬೆಲೆಗೆ ಪುಷ್ಕಳ ಭೋಜನ ಅನ್ನೋ ಮನೆ ಮಾತಿನ ಹಿನ್ನೆಲೆಯಲ್ಲಿ ನಮ್ಮೂರಿಗೆ ಬಂದೋರೆಲ್ಲ ಸುಧಾ ಹೋಟ್ಲಲ್ಲೇ ಊಟ ಮಾಡೋದಕ್ಕೆ ಖಾಯಸ್ ಮಾಡ್ತಿದ್ರು ಅನ್ನಬಹುದು.</p><p>ಎಲ್ಲರ ಬಾಯಲ್ಲಿ "ಸುಧಾ ಹೋಟ್ಲು" ಅಂತ ಇದ್ದುದ್ದಕ್ಕೆ, ಭಟ್ಟರ ಮಗ "ಹೋಟೇಲ್ ಸುಧಾ" ಎಂದು ಇಂಗ್ಲೀಷಿನಲ್ಲಿ ಬರೆಸಿ ದಪ್ಪ ಅಕ್ಷರಗಳಲ್ಲಿ ಬೋರ್ಡು ಹಾಕಿದ ದಿನವೇ ನಮ್ಮೂರಿಗೆ ಆಧುನಿಕತೆ ಬಂದಿದ್ದೂ ಅಂತ ಅನ್ಸುತ್ತೆ. ಯಾರು ಏನ್ ಬೇಕಾದ್ರೂ ಬೋರ್ಡ್ ಹಾಕ್ಕೊಳ್ಳಿ, ಜನ್ರ ಬಾಯಲ್ಲಿ ಅದು ಸುಧಾ ಹೋಟ್ಲು, ಕೆಲವೊಮ್ಮೆ ಓಟ್ಲು ಆಗಿದ್ದು, ಮತ್ತೆ ಹಾಗೇ ಎಲ್ಲ ಕಡೆಗೂ ಹೇಳಿ-ಕೇಳೀ ಬರ್ತಾ ಇದ್ದದ್ದು ನಮ್ಮೂರಿನ ಒಂದು ಅಂಗವಾಗಿದ್ದಂತೂ ನಿಜ.</p><p>ಕಾಲ ಕ್ರಮೇಣ ಎಲ್ಲರೂ ಎಲ್ಲ ಕಡೆಗಳಲ್ಲಿ ವಲಸೆ ಹೋಗಿ ನೆಲೆ ನಿಂತ ಮೇಲೆ, ಭಟ್ಟರ ಕೊನೇ ಮಗ ಕೊಟ್ರೇಶಿ ಹೋಟ್ಲನ್ನ ಇನ್ನೂ ನಡೆಸಿಕೊಂಡು ಬರ್ತಾ ಇರೋದನ್ನ ಎಂಬತ್ತರ ಗಡಿ ದಾಟಿ ನಿಂತು, ಟೊಂಕ ಬಗ್ಗಿದ್ದರೂ ಮೈ ಬಗ್ಗದೇ ಇನ್ನೂ ಗಟ್ಟಿಯಾಗೇ ಇರೋ ಅಮ್ಮ, ಇವತ್ತಿಗೂ ತನ್ನ ಕೈ ರುಚಿ ಹೋಟೆಲಿನ ಗ್ರಾಹಕರಿಗೆ ತಪ್ಪದಂತೆ ಜತನದಿಂದ ನೋಡಿಕೊಂಡಿರುವುದು ನಮ್ಮೂರಿನ ಮೂರು ತಲೆಮಾರುಗಳ ಬಾಯಿ ರುಚಿ ಆಗಿ ಹೋಗಿದೆ ಎನ್ನಬಹುದು.</p><p>***</p><p></p><div class="separator" style="clear: both; text-align: center;"><div class="separator" style="clear: both; text-align: center;"><div class="separator" style="clear: both; text-align: center;"><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEg9grqvUNm50ZisAqdio_b3-AQdDc10ijs4-9hoSJH1jlKNC-SlkggxHQkvInZkkSi8O2i5NcjbnGxGJd9KHrPYDoq6_x3sN2KtJ8ZK8ubC4DPK-bwDLzu2a3JrkYmwjcJmvqFqOpE8R7iuuvYnN_TsIGLEmAZHlQEKBAu7pDapu9VoOY9raJoHQg/s612/Sudha-hotlu.JPG" style="margin-left: 1em; margin-right: 1em;"><img border="0" data-original-height="344" data-original-width="612" height="308" src="https://blogger.googleusercontent.com/img/b/R29vZ2xl/AVvXsEg9grqvUNm50ZisAqdio_b3-AQdDc10ijs4-9hoSJH1jlKNC-SlkggxHQkvInZkkSi8O2i5NcjbnGxGJd9KHrPYDoq6_x3sN2KtJ8ZK8ubC4DPK-bwDLzu2a3JrkYmwjcJmvqFqOpE8R7iuuvYnN_TsIGLEmAZHlQEKBAu7pDapu9VoOY9raJoHQg/w448-h308/Sudha-hotlu.JPG" width="448" /></a></div></div></div></div><p></p><p>ಬಾಯಲ್ಲಿ ಮುಂಡು ಬೀಡಿ ಇಟ್ಟುಕೊಂಡು, ಮುಂಡಾಸ ಕಟ್ಟಿಕೊಂಡು ಅಡ್ಡಪಂಚೆಯನ್ನು ಗಂಟು ಹಾಕಿ ಗಟ್ಟಿಗೊಳಿಸಿದ ದಾಂಡಿಗರು ಓಡಾಡುವ ನಮ್ಮೂರಿನ ಬೀದಿಗಳಲ್ಲಿ ಕ್ರಮೇಣ ಪ್ಯಾಂಟು-ಶರಟುಗಳು ಓಡಾಡಲಾರಂಭಿಸಿದವು. ಅದೆಲ್ಲೋ ಒಂದು ಫ಼್ಯಾಕ್ಟರಿ ತೆಗೆದರು ಎನ್ನುವ ಹೆಸರಿನಲ್ಲಿಯೋ, ಅಥವಾ ನಮ್ಮೂರಿನಿಂದ ಕೆಲವೇ ಮೈಲುಗಳ ದೂರದಲ್ಲಿ ಹಾದು ಹೋಗುವ ಹೆದ್ದಾರಿಯ ದೆಸೆಯಿಂದ ನಮ್ಮೂರಿನಲ್ಲಿ ಆಗಂತುಕರ ಮತ್ತು ಅಪರಿಚಿತರ ಲವಲವಿಕೆಗಳು ಜೋರಾಗತೊಡಗಿದವು. ಊರಿಗೆ ನಾಲ್ಕು ಲ್ಯಾಂಡ್ ಲೈನುಗಳ ದೂರವಾಣಿ ಇದ್ದಂತಹ ಊರಿನಲ್ಲಿ ದಿಢೀರನೆ ಎಲ್ಲೆಂದರಲ್ಲಿ ಜಂಗಮವಾಣಿಗಳು ಬಂದವೆಂದರೆ? ಅವೇ ರಸ್ತೆಗಳು, ಅವು-ಅವೇ ಊರುಗಳು. ಆದರೆ, ಜನರು ನಿಂತಲ್ಲಿ ನಿಲ್ಲಲಾರರಾದರು. ಹೆಚ್ಚು ಹೆಚ್ಚು ಓಡಾಡುವುದೇ ಉದ್ದೇಶವೆಂಬಂತೆ ಎಲ್ಲರೂ ಎಲ್ಲ ಕಡೆಗೂ ಎಲ್ಲ ಕಾಲಗಳಲ್ಲಿ ಹರಡಿಕೊಳ್ಳುತ್ತಾ ಹೋದರು. ಒಂದು ಕಾಲದಲ್ಲಿ ದುಡ್ಡು ತೆಗೆದುಕೊಂಡು ಊಟ ಕೊಡುವ ಹೋಟೆಲಿನವರೂ ಸಹ, ತಮ್ಮಲ್ಲಿ ಬಂದು ತಿಂದು ಹೋಗುತ್ತಿದ್ದವರನ್ನು ತಮ್ಮ ಮನೆಯವರಂತೆಯೇ ವಿಚಾರಿಸಿಕೊಂಡು, ಅವರ ಹಿಂದು-ಮುಂದುಗಳನ್ನು ಅರಿತುಕೊಂಡಿರುತ್ತಿದ್ದರು. ಸುಧಾ ಹೋಟ್ಲು ಎನ್ನುವ ವೇದಿಕೆಯೊಂದರಲ್ಲೇ ಅನೇಕ ಆಗು-ಹೋಗುಗಳ ಬಗ್ಗೆ ವ್ಯಾಖ್ಯಾನಿಸಲಾಗುತ್ತಿತ್ತು. ಇನ್ನು ಊರಿನಲ್ಲಿದ್ದ ಸೆಲೂನುಗಳೂ, ಬೀಡಾ ಅಂಗಡಿಗಳೂ, ಕಿರಾಣಿ ಗುರಾಣಗಳೂ, ಹಿಟ್ಟಿನ ಮಿಲ್ಲುಗಳೂ ಇನ್ನೆಲ್ಲವನ್ನೂ ಒಟ್ಟು ಹಾಕಿ ನೋಡಿದರೆ, ಯಾವೊಂದು ಸಂವಹನದ ಸಮರ್ಪಕ ವ್ಯವಸ್ಥೆಯಿಲ್ಲದಿದ್ದರೂ ಎಲ್ಲವೂ ಸಮರ್ಪಕವಾಗೇ ನಡೆದುಕೊಂಡು ಹೋಗುತ್ತಿತ್ತು. ಊರಿರುವಲ್ಲಿ ಪೋಸ್ಟ್ ಆಫ಼ೀಸು ಇರುವಷ್ಟೇ ಸಹಜವಾಗಿ ಒಮ್ಮೊಮ್ಮೆ ಹೊಡೆದಾಟಗಳೂ, ರೋಧನಗಳೂ, ಒ.ಸಿ. ನಂಬರುಗಳ ಎಕ್ಸ್ ಚೇಂಜುಗಳೂ, ಚುನಾವಣಾ ಪ್ರಣಾಳಿಕೆ ಮತ್ತು ಷಡ್ಯಂತ್ರಗಳೂ ಮೊದಲಾಗಿ ಎಲ್ಲವೂ ಇಂತಹ ಪಬ್ಲಿಕ್ ಸ್ಥಳಗಳಲ್ಲೇ ನಡೆಯುತ್ತಿದ್ದವೆಂದರೆ?</p><p>ಈ ಸಂಬಂಧವಾಗೇ ನಮ್ಮ ಹಿರಿಯರು ಹೇಳಿದ್ದಿರಬಹುದು - ನಾಲ್ಕು ಜನ ನಂಬುವಂತೆ ಬದುಕು ಮಗಾ! ಎಂಬುದಾಗಿ.</p><p>***</p><p>ಇತ್ತೀಚೆಗಂತೂ ನಮ್ಮೂರಿನ ರಸ್ತೆಗಳಲ್ಲಿ ಹೊರಗಿನವರದೇ ಆಟಾಟೋಪ. ಮಿರಿಮಿರಿ ಮಿಂಚುವ ಕಾರಿನಿಂದ ಇಳಿದು ರಸ್ತೆಗೆ ಓಡುವ ಮಕ್ಕಳಿಗೆ ಅವರ ಹಿಂದೆ ಮುಂದೆ ಯಾವ ವಾಹನಗಳು ಬಂದರೂ ಕಾಣವು. ಇಂತಹ ಮಕ್ಕಳನ್ನೇ ತಮ್ಮ ವೃತ್ತದ ಕೇಂದ್ರದಲ್ಲಿಟ್ಟುಕೊಂಡು ಸುತ್ತುವ ಪೋಷಕರಿಗೆ ಯಾವಾಗಲೂ ಅವುಗಳ ಸುತ್ತ ಸುತ್ತುವುದೇ ಕಾಯಕವಾಗಿ ಪರಿಣಮಿಸಿದೆ. ಗ್ರಾಹಕರ ಸಂತುಷ್ಟಿಯೇ ನಮ್ಮ ಖುಷಿ, ಎಂದು, ಒಂದಕ್ಕೆರಡು ರೇಟ್ ಹಾಕಿ ಸಾಮಾನ್ಯ ಗೃಹಬಳಕೆ ವಸ್ತುಗಳನ್ನೇ ಬಿಂಕ ಬಿನ್ನಾಣದಿಂದ ಮಾರಾಟ ಮಾಡುವ ಅಂಗಡಿಯ ಹುಡುಗಿಯರು ಊರಿನ ಸೇಲ್ಸ್ ಅನ್ನು ಅದ್ಯಾವಾಗಲೋ ಹೆಚ್ಚಿಸಿಯಾಗಿದೆ. ಅದೇನೇ ಆಗಲಿ, ಬಿಡಲಿ ಇವತ್ತಿಗೂ ಸುಧಾ ಹೋಟ್ಲಿಗೆ ಹೋಗುವ ಗ್ರಾಹಕರ ಸಂಖ್ಯೆಯಲ್ಲಾಗಲೀ, ಆ ಹೋಟೆಲಿನ ಆಯ-ವ್ಯಯದಲ್ಲಾಗಲೀ ಯಾವ ವ್ಯತ್ಯಾಸವೂ ಆದಂತಿಲ್ಲ... ಎಂದುಕೊಳ್ಳುವ ಹೊತ್ತಿಗೆ...</p><p>ಒಂದು ದಿನ ಒಳ್ಳೆಯ ನಾಜೂಕಾದ ಬಟ್ಟೆ ಧರಿಸಿದ ಯುವಕರು ದಿಢೀರನೇ ಕಾರಿನಲ್ಲಿ ಬಂದರು. ಆ ಮೂರು ರಸ್ತೆಗಳು ಕೂಡುವ ಕೇಂದ್ರದಲ್ಲಿ, ಸುಧಾ ಹೋಟ್ಲು ಇರುವ ಮೂಲೆಯಲ್ಲಿ ಹೊಸ ಬೈಕ್ ಶೋ ರೂಮ್ ಒಂದು ಆರಂಭವಾಗುವ ಸೂಚನೆಗಳನ್ನು ನೀಡಿ, ತಣ್ಣಗಿದ್ದ ಊರಿನಲ್ಲಿ, ಹೊಸ ಕಲರವವನ್ನು ಹುಟ್ಟು ಹಾಕುವ ಹಾಗೆ, ನೀರಿನಲ್ಲಿ ಕಲ್ಲು ಎಸೆದು ಹೋದಂತೆ ಮಾಡಿ ಹೋದರು.</p><p>ಶೋ ರೂಮ್ ತೆರೆದ ಮೊದಲ ವಾರ ಬೈಕ್ ಶೋ ರೂಮಿಗೆ ಬರುವ ಗ್ರಾಹಕರನ್ನು, ಲಲನೆಯರು ಹೂವಿನ ಪಕಳೆಗಳನ್ನು ಅವರು ನಡೆದು ಬರುವ ದಾರಿಯಲ್ಲಿ ಎರಚಿ ಸ್ವಾಗತಿಸುತ್ತಾರಂತೆ ಎನ್ನುವ ಸುದ್ದಿ ನಮ್ಮೂರಿನಲ್ಲಿ ಸದ್ದು ಮಾಡತೊಡಗಿತು. ಆದರೆ, ಒಂದು ಕಡೆ ಚಂಬಣ್ಣನವರ ಕಿರಾಣಿ ಅಂಗಡಿ, ಅದರ ಪಕ್ಕ ರಾಜೂ ಇಟ್ಟಿರುವ ಇಸ್ತ್ರಿ ಅಂಗಡಿ, ಅದರ ಪಕ್ಕದಲ್ಲಿ ಸೇಟ್ ಇಟ್ಟುಕೊಂಡ ಸೆಲೂನನ್ನು ಬಿಟ್ಟರೆ,. ಆ ಸರ್ಕಲ್ನಲ್ಲಿ ಇದ್ದದ್ದು ಸುಧಾ ಹೋಟ್ಲು ಮಾತ್ರವೇ! ಈ ಬೈಕ್ ಶೋ ರೋಮ್ ಅನ್ನು ಕಟ್ಟಲು, ಬೆಳೆಸಲು ಯಾವುದನ್ನ ಆಹುತಿ ತೆಗೆದುಕೊಳ್ಳುತ್ತಾರೋ ಎಂದು ಎಲ್ಲರೂ ಮಾತನಾಡಿಕೊಳ್ಳುವಂತಾಯಿತು.</p><p>ಬೆಳೆಯುವ ಊರಿಗೆ ಬೈಕುಗಳು ಬೇಕು ನಿಜ... ಆದರೆ, ಕಿರಾಣಿ ಅಂಗಡಿ, ಇಸ್ತ್ರಿ ಅಂಗಡಿ, ಕಟಿಂಗ್ ಶಾಪು ಮತ್ತು ಎಲ್ಲರ ನೆಚ್ಚಿನ ಹೋಟೆಲ್ಲು... ಯಾರು ಯಾರಿಗೆ ಬೇಕು ಯಾರು ಯಾರಿಗೆ ಬೇಡ? ಹೀಗಿರುವಾಗ ಆ ಒಂದು ಕರಾಳ ದಿನವೂ ಬಂದೇ ಬಿಟ್ಟಿತು.</p><p>ಸುಮಾರು ಐದಾರು ಕಾರುಗಳಲ್ಲಿ ಬಂದಿಳಿದ ದಾಂಡಿಗರು, ಹೊಟೇಲಿನ ಕಡೆಗೆ ಧಾವಿಸಿದರು. ಇವರೆಲ್ಲ ಗುಂಪಾಗಿ ಒಟ್ಟಿಗೆ ಬಂದ ರಭಸವನ್ನು ಕಂಡು, ಗಲ್ಲಾ ಪೆಟ್ಟಿಗೆ ಮುಂದೆ ಕುಳಿತಿದ್ದ ಕೊಟ್ರೇಶಿ, ’ಪರವಾಗಿಲ್ಲ ಇವತ್ತು ಜನ ಮುಂಜಾನೆ ಹನ್ನೊಂದೂವರೆಗೇ ಊಟಕ್ಕೆ ಬರೋಕೆ ಶುರು ಮಾಡಿದ್ದಾರೆ...’ ಎಂದು ಕಣ್ಣರಳಿಸಿ ನೋಡುತ್ತಿರುವ ಹೊತ್ತಿಗೆ ಅದೇನೇನೋ ಮಾತುಗಳು ಕೇಳ ತೊಡಗಿದವು. ಬಂದ ದಾಂಢಿಗರು ಗಡ್ಡ ಧಾರಿಗಳು, ಅದೆಲ್ಲೋ ದೂರದ ಪಂಜಾಬಿನ ಲೂಧಿಯಾನದವರಂತೆ... ಅವರಲ್ಲಿ ಕೆಲವರು ದಷ್ಟಪುಷ್ಟರೂ, ಕೈಗೆ ವಿಷ್ಣುವರ್ಧನ್ ಬಳೆ ಧರಿಸಿದವರೂ ಇದ್ದರು. ಇಂಗ್ಲೀಷು, ಹಿಂದಿಗಳಲ್ಲಿ ಮಾತನಾಡುತ್ತಿದ್ದ ಜನರು ಹೋಟೇಲಿನಲ್ಲಿ ಒಮ್ಮೆಲೇ ಕೋಲಾಹಲ ನಡೆಸತೊಡಗಿದರು. ಅವರ ಮಾತಿನ ಸಾರಾಂಶದಂತೆ ಸುಧಾ ಹೋಟ್ಲು ಜಾಗದ ಸಮೇತ ಮಾರಾಟವಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೈಕ್ ಶೋ ರೂಮ್ ಆಗಿ ಪರಿವರ್ತನೆಗೊಳ್ಳಲಿದೆ. ಈ ಆಸ್ತಿಯ ವ್ಯಾಪಾರವನ್ನೆಲ್ಲ ಕೊಟ್ರೇಶಿಯ ಅಣ್ಣ, ಆನಂದನೇ ಬೆಂಗಳೂರಿನಲ್ಲಿ ಕುಳಿತು ಮಾಡಿದ್ದಾನಂತೆ. ಅವನ ಹೆಂಡತಿಗೂ ಕೊಟ್ರೇಶಿಗೂ ಅಷ್ಟಾಗಿ ಆಗಿ ಬರದಿದ್ದರಿಂದ ಅಣ್ಣ ತಮ್ಮಂದಿರಲ್ಲಿ ಯಾವೊಂದು ಬಾಂಧವ್ಯವೂ ಉಳಿಯದೇ, ಕೊಟ್ರೇಶಿ ಈ ರೀತಿ ಪರಿಸ್ಥಿತಿಯನ್ನು ಅರ್ಥೈಸಿಕೊಳ್ಳುವ ಸ್ಥಿತಿ ಬಂದೊದಗಿತಂತೆ.</p><p>ಈ ದಾಂಡಿಗರೆಲ್ಲ ಬಂದು ಬೆಂಚು-ಮೇಜುಗಳನ್ನು ಎಳೆದಾಡಿ ಒಂದು ಕಡೆಗೆ ಗುಂಪು ಹಾಕುವ ಹೊತ್ತಿಗೆ ಅಲ್ಲಿ ಕಣ್ಣೀರಿಡುವ ದೃಶ್ಯ ಭಟ್ಟರ ಹೆಂಡತಿಯದು...’ನಾನು ಸಾಯುವ ಮುಂಚೆ ಇಂತದ್ದನ್ನು ನೋಡಬೇಕಿತ್ತಾ? ದೇವರೇ, ನನ್ನನ್ಯಾಕೆ ಇನ್ನೂ ಜೀವಂತವಾಗಿಟ್ಟಿದ್ದೀಯ?’ ಎಂದು ಪ್ರಲಾಪಿಸಿ ಆರ್ತತೆಯಲ್ಲೂ ಇರುವಿಕೆಯನ್ನು ದೂರಿ, ಸುತ್ತಲಿನವರಿಂದ ಸಂತಾಪವನ್ನು ಗಳಿಸಿಕೊಳ್ಳುವುದರಲ್ಲೇನೋ ಶಕ್ತಳಾದ ಹೆಂಗಸು, ತನ್ನ ಹೋಟಲನ್ನು ಉಳಿಸಿಕೊಳ್ಳಲು ಅಸಹಾಯಕಳಾಗೇ ಕಂಡಳು.</p><p>ಹೋಟೆಲಿನ ನೈಋತ್ಯ ಮೂಲೆಯಲ್ಲಿ ಇನ್ನೂ ಈಗಷ್ಟೆ ಕತ್ತರಿಸಿಟ್ಟ ಕೊತ್ತುಬರಿ ಸೊಪ್ಪು ಮತ್ತು ಸಬ್ಸಿಗೆ ಸೊಪ್ಪುಗಳು ಚಟ್ಟಂಬಡೆಯಾಗಿ ಹೊರಬರುವ ಹುನ್ನಾರದಲ್ಲಿ ಕಲಿಸಿದ ಹಿಟ್ಟಿನೊಂದಿಗೆ ಒಡನಾಟವನ್ನು ಬೆಳೆಸುವ ಆಲೋಚನೆಯಲ್ಲಿದ್ದವು. ಗ್ಯಾಸ್ ಒಲೆಯ ಮೇಲೆ ದೊಡ್ಡ ಬಾಂಡಲೆಯೊಂದು ತನ್ನ ಹಿನ್ನೆಲೆಯನ್ನು ಕೆನ್ನಾಲಗೆಗಳಿಗೆ ಒಡ್ಡಿಕೊಂಡಿದ್ದರೂ ಶಾಂತ ಚಿತ್ತನಾಗಿ ತನ್ನೊಳಗೆ ಹುದುಕಿಕೊಂಡಿದ್ದ ಎಣ್ಣೆಯೊಳಗೆ ಒಂದು ಗುಳ್ಳೆಯೂ ಬಾರದಂತೆ ನೋಡಿಕೊಂಡಿತ್ತು. ಇನ್ನು ಕೆಲವೇ ನಿಮಿಷಗಳಲ್ಲಿ ಒಕ್ಕರಿಸುವ ಹಸಿದ ಗ್ರಾಹಕರ ದಣಿವಾರಿಸಲು ಎಲ್ಲ ಸ್ಟೀಲಿನ ನೀರಿನ ಜಗ್ಗುಗಳೂ ತಮ್ಮೊಳಗೆ ತುಂಬಿಕೊಂಡಿದ್ದ ನೀರಿನ ಅಂತರಂಗದ ಶಕ್ತಿಯ ಫಲದಿಂದ ತಮ್ಮ ಹೊರ ಮೇಲ್ಮೈಯಲ್ಲಿಯೂ ಸಣ್ಣ ನೀರಿನ ಹನಿಗಳನ್ನು ಪ್ರಚುರ ಪಡಿಸತೊಡಗಿದ್ದವು. ಮೇಲೆ ಇದ್ದ ಕರಿ ಬಣ್ಣದ ಮಂಗಳೂರು ಹಂಚಿನ ಸೂರಿನ ನಡುವೆ ಒಂದೇ ಒಂದು ಅಡ್ಡ ಪಟ್ಟಿಯ ಸಹವಾಸಕ್ಕೆ ಅಂಟಿಕೊಂಡಿದ್ದ ಫ಼್ಯಾನು, ತಾನು ನಿಧಾನವಾಗಿ ತಿರುಗುತ್ತ, ಗಾಳಿ ಬೀಸುವುದಿರಲಿ, ತನ್ನ ಸುತ್ತಲಿನ ಜೇಡರ ಬಲೆಗಳಿಗೆ, ’ಹತ್ತಿರ ಬಂದೀರಿ ಜೋಕೆ!’ ಎಂದು ಸೂಚನೆ ನೀಡುತ್ತಿದ್ದಂತಿತ್ತು.</p><p>ಹೊಟ್ಟೆ, ಮೈ-ಕೈ ತುಂಬಿ ಕೊಂಡ ದಾಂಡಿಗರಿಗೆ ಹಸಿದವರ ಸಂಕಟಗಳು ಅರ್ಥವಾಗುವುದಾದರೂ ಹೇಗೆ? 'ಇವತ್ತಿನಿಂದ ಹೋಟೆಲ್ ಬಂದ್!' ಎಂದು ದೊಡ್ಡ ದರ್ಪದ ಧ್ವನಿಯಲ್ಲಿ ಹೇಳಿ ಬಿಟ್ಟರೆ ಸಾಕೆ? ಒಂದು ಊರಿನ ಹೃದಯ ಭಾಗದಲ್ಲಿ ಮೂರು ತಲೆಮಾರುಗಳಿಂದ ಜನರನ್ನು ಸಂತೈಸಿಕೊಂಡು ಬಂದ ಅನ್ನಪೂರ್ಣೇಶ್ವರಿಯ ಅಪರಾವತಾರ ಸುಧಾ ಹೋಟೇಲಿನ ಆಂತರ್ಯದ ಆಳ ಕೇವಲ ಇಷ್ಟೆಯೇ?</p><p>ಈಗಾಗಲೇ ಮಧ್ಯಾಹ್ನದ ಊಟದ ಹೊತ್ತಾಗುತ್ತಿದ್ದರಿಂದ, ಕೊಟ್ರೇಶಿ ತನ್ನ ಹರುಕು ಮುರುಕು ಹಿಂದಿಯಲ್ಲಿ ಒಳ ನುಗ್ಗಿದ ದಾಂಡಿಗರಿಗೆ ಒಂದೆರಡು ಗಂಟೆ ಸಮಯಾವಕಾಶಕ್ಕಾಗಿ ಕಾಡಿ ಬೇಡಿದ ಮೇಲೆ, ಅವರು ಒಪ್ಪಿಕೊಂಡರು. ಬಂದ ಜನರೆಲ್ಲ ಮುಗಿ ಬಿದ್ದು ಊಟ ಮಾಡುವುದರ ಜೊತೆಗೆ, ಇನ್ನು ನಾಳೆಯಿಂದ ಎಲ್ಲಿಗೆ ಹೋಗೋದು ಎಂದು ಯೋಚಿಸ ತೊಡಗಿದರು. ಸರ್ಕಲ್ಲಿನಲ್ಲಿ ಹೊಸದಾಗಿ ಸಂಜೆಗೆ ಸೇರಿಕೊಂಡ ಪಾನೀಪೂರಿ ತಳ್ಳುಗಾಡಿಗಳಿಂದ ಎಂದಾದರೂ ಹೊಟ್ಟೆ ತುಂಬುವುದುಂಟೇ? ಒಂದು ವೇಳೆ ಹೊಟ್ಟೆ ತುಂಬಿದರೂ, ಅಮ್ಮನ ಕೈ ರುಚಿಯ ಅಡುಗೆ ಎಂದಾದರೂ ಸಿಗುವುದೇ? "ಛೇ, ಈ ಊರಿಗೆ ಈ ರೀತಿ ಕಲಿಗಾಲ ಬರಬಾರದಿತ್ತಪ್ಪಾ...’ ಎಂದು ಎಲ್ಲರೂ ಮಮ್ಮಲ ಮರುಗುವವರೇ!</p><p>***</p><p>ಇನ್ನೇನು ಮಧ್ಯಾಹ್ನದ ಊಟವಾದರೂ ಬಂದ ಜನ ಹೋಗಲೊಲ್ಲರು. ಇಷ್ಟರಲ್ಲೇ ಒಂದಿಷ್ಟು ಮಂದಿ ಊರಿನ ಹಿರಿಯರಾದ ಜರ್ಮಲೆ ಚಂದ್ರಣ್ಣನವರನ್ನು ಕರೆತಂದರು. ಕೊಟ್ರೇಶಿ ತನ್ನ ಪೋನಿನಿಂದ ತನ್ನ ಅಣ್ಣ ಆನಂದನಿಗೆ ಡಯಲ್ ಮಾಡಿ, ಚಂದ್ರಣ್ಣನಿಗೆ ಫೋನು ಕೊಟ್ಟ. ಚಂದ್ರಣ್ಣ ಅದ್ಯಾವ ಕಾರಣಕ್ಕೆ ಸ್ಫೀಕರಿನಲ್ಲಿ ಹಾಕಿದರೋ ಗೊತ್ತಿಲ್ಲ,... ಆ ಕಡೆಯಿಂದ ಆನಂದ, "ಚಂದ್ರಣ್ಣಾ... ನೀವು ಊರಿಗೆ ದೊಡ್ಡ ಮನುಷ್ಯರು... ನಾನು ನಿಮ್ಮ ಉಸಾಬರಿಗೆ ಬರಲ್ಲ... ನಿಮ್ಮ ಮೇಲಿನ ಗೌರವದಿಂದ ಹೇಳ್ತೀನಿ, ನಾನು ನನ್ನ ಹೆಸರಿನಲ್ಲಿರೋ ಪ್ರಾಪರ್ಟಿ ಯಾರಿಗಾದ್ರೂ ಮಾರ್ತೀನಿ, ಹೆಂಗಾದರೂ ಇರ್ತೀನಿ... ನಿಮ್ಮ ಕೆಲ್ಸ ನೀವ್ ನೋಡೋದು ಒಳ್ಳೇದು..." ಎಂದು, ಚಂದ್ರಣ್ಣನ ಮಾತೂ ಕೇಳದೇ ಆ ಕಡೆ ಫ಼ೋನು ಇಟ್ಟುಬಿಟ್ಟ. ಕೆಟ್ಟು ಪಟ್ಟಣ ಸೇರು ಅಂತಾರೆ ನಿಜ. ಆದರೆ, ಒಳ್ಳೆಯವನಾಗೇ ಇದ್ದ ಆನಂದನಿಗೆ ಈ ನಮನಿ ದಾರ್ಷ್ಯ ಬರಬಾರದಾಗಿತ್ತು... ಎಂದು ಎಲ್ಲರೂ ಅಂದುಕೊಳ್ಳುವ ಹೊತ್ತಿಗೆ, ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಂಡ ಮನಸ್ಥಿತಿ ಚಂದ್ರಣ್ಣನದಾಗಿತ್ತು. ಅವರ ಮುಂದೆ ಆಟಾಡಿಕೊಂಡು ಬೆಳೆದು, ದೂರದ ಬೆಂಗಳೂರಿನ ನೀರು ಕುಡಿದ ಆನಂದನೇ ಇಷ್ಟು ಮಾಡಿರುವಾಗ ಸುತ್ತಲಿನ ಹತ್ತು ಕೆರೆಗಳಿಂದ ನೀರು ಕುಡಿದ ಚಂದ್ರಣ್ಣ ಸುಮ್ಮನೆ ಇರುವುದಾದರೂ ಹೇಗೆ?!</p><p>ಊರಿಗೆ ಹಿರೀ ಜನ ಅಂತ ಇರ್ತಾರಲ್ಲ, ಅವ್ರದ್ದೂ ಒಂದು ಮಾತು ಅಂತ ಇರತ್ತೆ ಊರಲ್ಲಿ. ತಕ್ಷಣ ಚಂದ್ರಣ್ಣ, ಹತ್ತಿರದ ಪೋಲೀಸ್ ಸ್ಟೇಷನ್ನಿಗೆ ಫ಼ೋನ್ ಮಾಡಿ, ದಫ಼ೇದಾರರ ಹತ್ರ ಅವರ ಸಾಹೇಬ್ರು ಜೊತೆ ತಕ್ಷಣ ಬರಬೇಕು ಎಂದು ತಾಕೀತು ಮಾಡಿದರು. ನಂತರ ಅಲ್ಲಿಗೆ ದೌಡಾಯಿಸಿದ ಪೋಲೀಸರಿಗೆ, ’ನಾನು ಹೇಳುವವರೆಗೂ ಇಲ್ಲೇನೂ ಕದಲದಂತೆ ನೋಡಿಕೊಳ್ಳಿ’ ಎಂದು ಹುಕುಂ ಹಾಕಿ ಹೊರಟು ಹೋದರು.</p><p>***</p><p>ಒಂದು ರೀತಿ ಚಲನ ಚಿತ್ರ ನೋಡಿದ ರೀತಿಯಲ್ಲಿ, ಬೈಕ್ ಶೋ ರೂಮ್ ಆರಂಭವಾಗುವ ಸೂಚನಾ ಫಲಕಗಳೂ, ಬ್ಯಾನರ್ಗಳೂ, ಕಲರ್ ಪೇಪರ್ಗಳೂ ಇದ್ದಕ್ಕಿದ್ದ ಹಾಗೆ ಸದ್ದಡಗಿದಂತೆ ನಿಶ್ಶಬ್ಧಗೊಂಡವು. ಊರಿನ ಮಂಡಲ ಪ್ರಧಾನರೂ, ಹಲವು ರಾಜಕೀಯ ಮುಖಂಡರೂ, ಹೋಟೇಲಿನ ಮುಂದೆ ನಿಂತು ಹಿಂದಿಯಲ್ಲಿ, ಬಂದಿದ್ದ ದಾಂಡಿಗರಿಗೆ ಹುಕುಂ ಕೊಡಲು, ಅವರೆಲ್ಲ ಯಾವುದೋ ದೊಡ್ಡ ಕೋರ್ಟಿನಿಂದ ಸ್ಟೇ ಆರ್ಡರು ಬಂದಂತೆ ಸ್ತಬ್ಧವಾಗಿ, ಬಂದ ದಾರಿಗೆ ಹಿಂತಿರುಗಿದರು. ಊರಿನ ಆಸ್ತಿಯ ಒಂದು ಭಾಗವಾಗಿರುವ ಸುಧಾ ಹೋಟಲ್ಲನ್ನು ಸ್ಥಳಾಂತರ ಮತ್ತು ಸ್ಥಳ ಪಲ್ಲಟಗೊಳಿಸಲು ಯಾರೂ ಅಕ್ಕಪಕ್ಕದವರು ಒಪ್ಪದಿದ್ದರಿಂದ ಈಗಾಗಲೇ ಕೊನೇ ಹಂತದವರೆಗೆ ಬಂದ ಆಸ್ತಿಯ ಲೇವಾದೇವಿಯನ್ನು ರದ್ದುಗೊಳಿಸಿದಂತೆ ಪಂಚಾಯತಿಯವರು ಪರವಾನಗಿ ಹೊಡಿಸಿದರು. ಯಾರು ಏನೇ ಅಂದರೂ ಪಟ್ಟಣ ಪಂಚಾಯಿತಿಯ ಅನುಮತಿ ಇಲ್ಲದೇ ಯಾವ ಮಾರಾಟವೂ ಇತ್ಯರ್ಥಗೊಳ್ಳದ್ದರಿಂದ ಎಲ್ಲರೂ ನಿರುಮ್ಮಳರಾಗುವಂತಾಯಿತು.</p><p>ಕೊಟ್ರೇಶಿ ತನ್ನ ಕಾಯಕವನ್ನು ಹಾಗೇ ಮುಂದುವರೆಸಿಕೊಂಡು ಹೋಗುತ್ತಿದ್ದಾನೆ... ಆದರೆ, ಇವತ್ತಿನವರೆಗೂ ಆನಂದನ ಪತ್ತೆ ಯಾರಿಗೂ ನಮ್ಮೂರಿನ ಸುತ್ತುಮುತ್ತಲೂ ಎಲ್ಲೂ ಆದಂತಿಲ್ಲ! ಅಮ್ಮ ಕಾಲದಲ್ಲಿ ಲೀನವಾಗೇನೋ ಇದ್ದಾರೆ, ಆದರೆ ಅಮ್ಮನ ಕೈ ರುಚಿ ಈಗ ಮುಂದಿನ ತಲೆಮಾರನ್ನೂ ತಬ್ಬಿಕೊಳ್ಳುತ್ತಿದೆಯಂತೆ.</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-28068374599779699272024-02-02T22:59:00.004-05:002024-03-06T21:09:34.943-05:00 ಟಗರು ಪಲ್ಯ: ಚಿತ್ರದ ಬಗ್ಗೆ ಅನಿಸಿಕೆ<p><span style="font-size: x-large;">ಹಳ್ಳಿಯ</span> ಸೊಗಡಿರುವ ಸಿನಿಮಾ ಎಂದು ತಕ್ಷಣವೇ ಗೊತ್ತಾಗುವಷ್ಟು ಗಾಢತೆ ಈ ಸಿನಿಮಾದಲ್ಲಿದೆ. ಹಳ್ಳಿಯ ಕುರಿತ ಸಿನಿಮಾಗಳಿಗೆ "ಕೋಳಿ ಎಸ್ರು" ಎನ್ನುವ ಹೆಸರು ಇದ್ದಾಗ ಅದು ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ, ಇತ್ತ ಪೂರ್ಣವಾಗಿ ಇಂಗ್ಲೀಷೂ ಅಲ್ಲದ, ಅತ್ತ ಕನ್ನಡವೂ ಅಲ್ಲದ - ಟಗರು ಪಲ್ಯ - ಎನ್ನುವ ಹೆಸರು ಅದೇಕೋ ಅಷ್ಟೊಂದು ಸೂಕ್ತ ಎನಿಸುವುದಿಲ್ಲ. ಮಟನ್ ಚಾಪ್ಸ್ ಅನ್ನೋದನ್ನ ನೇರವಾಗಿ ಕನ್ನಡಕ್ಕೆ ತರ್ಜುಮೆ ಮಾಡಿದ ಹಾಗಿದೆ. ತರಕಾರಿ ಪಲ್ಯಕ್ಕೆ ಹೊಂದಿಕೊಳ್ಳುವ ಹಾಗೆ, ಕುರಿ-ಕೋಳಿಗಳು ಹೊಂದಿಕೊಳ್ಳಬಹುದೇನೋ, ಆದರೆ ಟಗರು ಪದ ಹೊಂದಿಕೊಳ್ಳುವುದು ಅಸಹಜವಾಗಿ ಕಂಡುಬರುತ್ತದೆ.</p><p></p><div class="separator" style="clear: both; text-align: center;"><br /></div><div class="separator" style="clear: both; text-align: center;"><a href="https://blogger.googleusercontent.com/img/a/AVvXsEgicet3NltEbRn1zEXWyGXxEDdZiMHuEIfFz2cWmfsTZ5V9vPW-X3Vr0JBR9eXEPv5yLtKXWyNiBgvR_tgrd0d8dKbgInZm0lxSIwWm9W-q-Drp-WGmT5we1ubAvp8LF3mE-k9h8AafCI3CD_WRnV1AElq_Kd5N9CG3r8KsTvARhKq7BJY5FiZToQ" style="margin-left: 1em; margin-right: 1em;"><img alt="" data-original-height="675" data-original-width="1200" height="225" src="https://blogger.googleusercontent.com/img/a/AVvXsEgicet3NltEbRn1zEXWyGXxEDdZiMHuEIfFz2cWmfsTZ5V9vPW-X3Vr0JBR9eXEPv5yLtKXWyNiBgvR_tgrd0d8dKbgInZm0lxSIwWm9W-q-Drp-WGmT5we1ubAvp8LF3mE-k9h8AafCI3CD_WRnV1AElq_Kd5N9CG3r8KsTvARhKq7BJY5FiZToQ=w400-h225" width="400" /></a></div><div class="separator" style="clear: both; text-align: left;"><br /></div><div class="separator" style="clear: both; text-align: left;">ಒಂದು ಹಳ್ಳಿಯ ಮನೆ, ಮನೆಯ ಮುಂದಿನ ಕಟ್ಟೆಯ ಸುತ್ತ ನಡೆಯುವ ಒಂದೆರಡು ದೃಶ್ಯಗಳನ್ನು ಬಿಟ್ಟರೆ, ಉಳಿದ ಕಥೆ ಒಂದೇ ಒಂದು ಹೊರಾಂಗಣದಲ್ಲಿ ನಡೆಯುತ್ತದೆ. ಮಿತವಾದ ಪಾತ್ರಧಾರಿಗಳು. ಅದರಲೂ ಕಥಾ ನಾಯಕಿ ಮತ್ತು ನಾಯಕ ಇಬ್ಬರೂ ಹೊಸಬರು. ಇದುವರೆಗೆ ಹಾಸ್ಯಭರಿತ ಪಾತ್ರದಲ್ಲಿ ಸಹ ಕಲಾವಿದನಾಗಿದ್ದ ನಾಗಭೂಷಣ್ ಅವರು ಇಲ್ಲಿ ನಾಯಕನಾಗಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಅದರಲ್ಲಿಯೂ ಅವರು ಆ ಸ್ಥಳೀಯ ಭಾಷೆಯ ಸೂಕ್ಷ್ಮತೆಯನ್ನು ಗಮನಿಸಿ ಅದರಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಈ ಸಿನಿಮಾದ ಚಿತ್ರಕತೆಯನ್ನು ಬರೆಯುವುದು, ಅದನ್ನ ಮನನ ಮಾಡಿಕೊಂಡು ಅಲ್ಲಿನ ನೇಟಿವ್ ಭಾಷೆಗೆ ನ್ಯಾಯ ಒದಗಿಸಿ, ಜೊತೆಗೆ ತಮ್ಮ ಭಾವನೆಗಳನ್ನೂ ಪ್ರಕಟಿಸುವುದು ಅಷ್ಟೊಂದು ಸುಲಭದ ವಿಷಯವಲ್ಲ. ಈ ನಿಟ್ಟಿನಲ್ಲಿ ನಾಗಭೂಷಣ್ ಅವರ ಪಾತ್ರ ಸರಳ ಮತ್ತು ಭಿನ್ನವಾಗಿ ನೆನಪಿನಲ್ಲುಳಿಯುತ್ತದೆ.</div><p></p><p>ಕಥಾನಾಯಕಿ, ಅಮೃತಾಪ್ರೇಮ್ ಮೊದ ಮೊದಲು ಅಷ್ಟೊಂದು ಪ್ರಾಮುಖ್ಯತೆಯನ್ನು ಪಡೆಯದಿದ್ದರೂ, ಅಂತಿಮ ಹಂತದಲ್ಲಿ ಅವರು ಈ ಚಿತ್ರದಲ್ಲಿ ನಟಿಸಲು ಪಟ್ಟ ಪರಿಶ್ರಮ ಎದ್ದು ಕಾಣುತ್ತದೆ. ಹೊರಾಂಗಣದಲ್ಲಿ, ಅದೂ ತಮ್ಮ ಮೊದಲ ಚಿತ್ರದಲ್ಲಿ ಭಾಷೆ-ಭಾವನೆಗಳ ಅಭಿವ್ಯಕ್ತಿಯ ಮೂಲಕ ಎಲ್ಲರ ಕಣ್ಣಂಚಿನಲ್ಲಿ ನೀರೂರುವ ಸಾಹಸವನ್ನು ನಿರ್ದೇಶಕ ಉಮೇಶ್ ಅವರು ಚೆನ್ನಾಗಿ ಚಿತ್ರೀಕರಿಸಿದ್ದಾರೆ. ಹಾವ-ಭಾವಗಳಿಂದ ಇಷ್ಟವಾಗುವ ಅಮೃತಾ, ಇನ್ನೂ ನಟನೆಯಲ್ಲಿ ಚೆನ್ನಾಗಿ ಪಳಗಬೇಕು, ಆದರೆ ಈ ಚಿತ್ರ ಅವರಿಗೊಂದು ಸವಾಲಾಗಿದ್ದು, ಆ ಸವಾಲಿನಲ್ಲಿ ಗೆದ್ದಿದ್ದಾರೆ ಎನ್ನಬಹುದು.</p><p>ರಂಗಾಯಣ ರಘು ಮತ್ತು ತಾರಾ ಅವರ ಪಾತ್ರ ಮತ್ತು ಅಭಿನಯದ ಬಗ್ಗೆ ಹೆಚ್ಚು ಹೇಳುವ ಅಗತ್ಯವೇ ಇಲ್ಲ. ಇಬ್ಬರೂ ನುರಿತ ಕಲಾವಿದರು, ತಮಗೆ ಪಾತ್ರ ಮತ್ತು ಜವಾಬ್ದಾರಿಯನ್ನು ನಿರೀಕ್ಷೆಗಿಂತಲೂ ಹೆಚ್ಚು ಚೆನ್ನಾಗಿ ನಡೆಸಿಕೊಟ್ಟಿದ್ದಾರೆ. ಚಿತ್ರದಲ್ಲಿ ಸ್ವಲ್ಪವೂ ಸಾಮಾನ್ಯ ಜ್ಞಾನವಿರದಂತೆ ಚಿತ್ರಿಸಿದ ವಾಸುಕಿ ವೈಭವ್ ಅವರ ಟೆಕ್ಕಿ ಪಾತ್ರ ಕಿರಿಕಿರಿ ಮಾಡುತ್ತದೆ. ಕುರಿ ಹಿಕ್ಕೆಗೂ ಕಡಲೇಬೀಜಕ್ಕೂ ವ್ಯತ್ಯಾಸಗೊತ್ತಿರದ ಟೆಕ್ಕಿಗಳನ್ನು ತೋರಿಸುವ ನಿರ್ದೇಶಕರಿಗೆ, ಟೆಕ್ಕಿಗಳ ಮೇಲೆ ಹಗೆ ತೀರಿಸಿಕೊಂಡಂತಾಗಿರಬೇಕು. ಇನ್ನು, ಸಂಗೀತ ನೀಡುವ ವಾಸುಕಿ ಅವರನ್ನು ಒತ್ತಾಯಪೂರ್ವಕವಾಗಿ ನಟನೆಗೆ ದೂಡಿದ್ದಾರೆನೋ ಎಂಬ ಸಂಶಯವೂ ಮೂಡುತ್ತದೆ.</p><p>ಟೈಟಲ್ ಸಾಂಗ್ನಲ್ಲಿ ಅನಗತ್ಯವಾಗಿ "ಟಗರುಪಲ್ಯ"ವನ್ನು ತುರುಕಿರದಿದ್ದರೆ, ಒಂದು ಹಳ್ಳಿಯಗಾಥೆಯಾಗಿ ನೆನಪಿನಲ್ಲುಳಿಯುತ್ತಿತ್ತೇನೋ. ಆದರೆ, ಚಿತ್ರದುದ್ದಕ್ಕೂ ಸಂಗೀತ ಎಷ್ಟು ಪೇಲವವಾಗಿದೆಯೋ, ಹಾಡುಗಳೂ ಹಾಗೇ ಇವೆ. ಒಂದೇ ಸ್ಥಳದಲ್ಲಿ ನಡೆದದ್ದನ್ನು ಚಿತ್ರೀಕರಿಸಲು ಛಾಯಾಗ್ರಾಹಕರೇನು ಹೆಚ್ಚು ಕಷ್ಟಪಟ್ಟಂತಿಲ್ಲ, ಇದ್ದುದರಲ್ಲಿ ತಮಗೆ ಸಿಕ್ಕ ಅವಕಾಶಕ್ಕೆ ನ್ಯಾಯ ಒದಗಿಸಿದ್ದಾರೆ ಎನ್ನಬಹುದು. ಇನ್ನು ಪೋಷಕ ಪಾತ್ರಗಳಲ್ಲಿ ಬಿರಾದಾರ್ ನಟನೆ ಎದ್ದು ಕಾಣುತ್ತದೆ. ತಮಗೆ ಸಹಜವಲ್ಲದ ಭಾಷೆಯಲ್ಲೂ ಪರಿಪಕ್ವತೆಯನ್ನು ಕಂಡು, ದೊಡ್ಡಪ್ಪನಾಗಿ ನಟಿಸುವ ಅವರ ನಿಲುವು ಇಷ್ಟವಾಗುತ್ತದೆ. ಇನ್ನು ಹಾಸ್ಯದ ಹೆಸರಿನಲ್ಲಿ ಹೆಂಡ, ಹೆಂಡದ ಮತ್ತಿನಲ್ಲಿ ಹಾಸ್ಯ ಸ್ವಲ್ಪ ಅತಿ ಎನ್ನಿಸಿದರೂ, ಇಂದಿನ ಗ್ರಾಮೀಣ ಚಿತ್ರಣವನ್ನು ಕಟ್ಟಿಕೊಡುವಲ್ಲಿ ಸರಿಯಾಗಿವೆ. ಪೂಜಾರಪ್ಪನ ಪಾತ್ರ, ಬೆಂಗಳೂರಿನ ಸಂಬಂಧಿಕರ ಪಾತ್ರಗಳು, ಸ್ಥಳೀಯ ರೈತಾಪಿ ವರ್ಗದ ಭಕ್ತರ ಪಾತ್ರಗಳು ಎಲ್ಲವೂ ಚೆನ್ನಾಗಿ ಹೊಂದಿಕೊಂಡಿವೆ.</p><p>ಕಡಿಮೆ ಬಜೆಟ್ಟಿನಲ್ಲಿ ಮಾಡಿ ಸಂಪೂರ್ಣ ಚಿತ್ರವನ್ನು ನಿರ್ಮಿಸಿದ ತಂಡ, ಈ ಚಿತ್ರ ಬಿಡುಗಡೆಯಾಗಿ ಕರ್ನಾಟಕದುದ್ದಗಲಕ್ಕೂ ಎಲ್ಲ ಕಡೆ ನಡೆಯುತ್ತದೆ ಎಂದು ಅಂದುಕೊಂಡರೆ ಕಷ್ಟ. ಇದು, ಗ್ರಾಮೀಣ ಸೊಗಡಿನ ಚಿತ್ರ. ಅದರಲ್ಲೂ ಒಂದು ತಾಲೂಕಿನ ಭಾಷೆ, ಅದರ ಕ್ಲಿಷ್ಟತೆಯನ್ನು ಅರಗಿಸಿಕೊಂಡಿರುವುದರಿಂದ ಆ ಪ್ರಾಂತ್ಯಕ್ಕೆ ಮಾತ್ರ ಸೀಮಿತವಾಗುವುದೇನೋ ಎನ್ನುವ ಅನುಮಾನ ಮೂಡುತ್ತದೆ. ಹಾಗೆಯೇ, ಬಿಡುಗಡೆಯಾಗಿ, ಒಂದು ವಾರದಲ್ಲೇ ಮೂಡಿಮರೆಯಾಗುವ ಚಿತ್ರಕ್ಕೆ ಇಷ್ಟೊಂದು ಕಷ್ಟಪಡಬೇಕಿತ್ತೇನೋ ಎಂದು ಬೇಸರವೂ ಆಗುತ್ತದೆ. ಈ ಚಿತ್ರವನ್ನು ನಾಟವನ್ನಾಗಿ ಮಾಡಿ ಸಂಬಂಧಪಟ್ಟ ಗ್ರಾಮೀಣ ಭಾಗಗಳಲ್ಲಿ ಪ್ರದರ್ಶಿಸಿದ್ದರೆ ಹೇಗಿರುತ್ತಿತ್ತು, ಅದರಿಂದ ಹೆಚ್ಚಿನ ಪರಿಣಾಮವೇನಾದರೂ ಆಗುತ್ತಿತ್ತೇನೋ ಎಂದು ಯೋಚಿಸಬಹುದು.</p><p>ಮುಖ್ಯವಾಗಿ ಕಥೆ ಸಾರುವ ಸಂದೇಶ ಸರಳವಾದುದು. ಹಾಗಿದ್ದಾಗ, ಈ ಚಿತ್ರದ ಸ್ವಾರಸ್ಯ ಮತ್ತು ಶಕ್ತಿ ಎಲ್ಲವೂ ಚಿತ್ರಕತೆ ಮತ್ತು ಅದರ ಭಾಷ್ಯದಲ್ಲಿಯೇ ಇದೆ ಎಂದರೆ ತಪ್ಪಾಗಲಾರದು. ಸದಾ ತಮಗೆ ಗೊತ್ತಿರದ ಸುಖದ ಸಂಪತ್ತಿನ ಮರೀಚಿಕೆಯನ್ನು ಅರಸಿ, ತಮಗೆ ಗೊತ್ತಿರದ ದೂರದ ಬೆಂಗಳೂರಿನ ಗಂಡುಗಳೇ ಬೇಕು ಎಂದು ಪೋಷಕರಿಗೆ ಗಂಟುಬೀಳುವ ಮದುವೆಗೆ ಬಂದ ಹೆಣ್ಣುಮಕ್ಕಳು ಈ ಚಿತ್ರದ ದೆಸೆಯಿಂದಲಾದರೂ ಒಂದಿಷ್ಟು ಪಾಠಗಳನ್ನು ಕಲಿತರೆ ಒಳ್ಳೆಯದು. ತಮ್ಮ ನೆರೆಹೊರೆಯಲ್ಲಿ ತಮ್ಮ ನಿಲುವು-ಅಂತಸ್ತಿಗೆ ತಕ್ಕಂತೆ ಇರುವುದನ್ನು ಆಯ್ದುಕೊಳ್ಳುವುದರ ಮೂಲಕ ಸಹಜವಾಗಿ ಬದುಕಬೇಕು ಎನ್ನುವುದು ಈ ಚಿತ್ರದ ಆಶಯ. ಚಿತ್ರದ ಕೊನೆಯಲ್ಲಿ ಬರುವ ಮಾತು, "<b>...ನೋಡಿ ಮಾಡಿ ಹೆಣ್ ಕೊಡಿ, ಸಂಬಧಗಳಿಗೆ ಬೆಲೆ ಕೊಡಿ...</b>" ಎನ್ನುವುದು ಅಕ್ಷರಶಃ ಸತ್ಯವಾದುದು. ಚಿತ್ರದ ಕೊನೆಯಲ್ಲಿ ತೋರಿಸುವ ಕಲಾವಿದರ ಕುಟುಂಬಗಳ ಗ್ರೂಪ್ ಫ಼ೋಟೋಗಳು, ಹಿನ್ನೆಲೆಯ ಹಾಡಿನ ಆಶಯ ಕುಟುಂಬ ಪ್ರೇಮವನ್ನು ಎತ್ತಿ ತೋರುತ್ತದೆ, ಹಾಗೂ ಕುಟುಂಬಗಳ ಅಗತ್ಯವನ್ನು ಎತ್ತಿ ಹಿಡಿಯುತ್ತವೆ. ಇಂದಿನ ಒಬ್ಬಂಟಿ ತನದ ಏಕತಾನದ ಪ್ರಪಂಚದಲ್ಲಿ ತಮ್ಮನ್ನು ತಾವೇ ಕಳೆದುಕೊಂಡಿರುವ ನ್ಯೂಕ್ಲಿಯರ್ ಕುಟುಂಬಗಳಿಗೆ ಈ ಹಾಡು ಛಾಟಿಯ ಏಟಿನಂತೆ ಹೊಡೆಯಬಲ್ಲದು ಕೂಡ.</p><p>ಇನ್ನು ಚಿತ್ರ ನಿರ್ಮಾಪಕ ಡಾಲಿ ಧನಂಜಯ ಅವರು ಸಾಹಸ ಪ್ರಧಾನ ಚಿತ್ರಗಳಲ್ಲಿ ಹೀರೋ ಆಗಿ ಮಿಂಚಿ-ಮೆರೆಯುವ ಜೊತೆಗೇ ಈ ಗ್ರಾಮೀಣ ಕನ್ನಡ ಚಿತ್ರಕಥನಕ್ಕೆ ಪೋಷಣೆಯನ್ನು ನೀಡಿರುವುದು ಬಹಳ ದೊಡ್ಡ ವಿಚಾರ. ಈ ಕತೆಯನ್ನು ತೆರೆಯ ಮೇಲೆ ತಂದಿರುವುದರ ಮೂಲಕ, ಕನ್ನಡದಲ್ಲಿ ಒಂದು ಕುಟುಂಬ ಪ್ರಧಾನ ಚಿತ್ರವನ್ನು ಬೆಂಬಲಿಸಿದ ಶ್ರೇಯ ಅವರಿಗೆ ಸಲ್ಲುತ್ತದೆ. ಜೊತೆಗೆ ಅವರು ಚಿತ್ರದ ಹಾಡುಗಳ ರಚನೆಯಲ್ಲೂ ತೊಡಗಿಕೊಂಡಿರುವುದು ಅವರೊಳಗಿನ ಕಲಾವಿದನ ಮನಸ್ಸಿನ ಸಂವೇದನೆಗಳಿಗೆ ಹಿಡಿದ ಕನ್ನಡಿಯಂತಿದೆ. ಹೀಗೆ ಒಂದೇ ದಿನದ ಕತೆಯನ್ನು ಒಂದೇ ಉಸಿರಿನಲ್ಲಿ ಹೇಳಿ ಮುಗಿಸಿ, ಅನೇಕ ಚಿತ್ರ ಮತ್ತು ಚಿತ್ರಣಗಳನ್ನು ಕಣ್ಣಿಗೆ ಕಟ್ಟಿ, ಹಳ್ಳಿಯ ನೇಟಿವ್ ಭಾಷೆಯ ಮಜಬೂತಾದ ಊಟವನ್ನು ಉಣಿಸಿ, "<b>...ಸಂಬಂಧ ಅನ್ನೋದು ದೊಡ್ದು ಕಣಾ...</b>" ಎನ್ನುತ್ತಲೇ ಚಿತ್ರ ಕೊನೆಯಾಗುತ್ತದೆ.</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-59503007226654690652024-01-31T18:00:00.003-05:002024-02-01T16:40:01.288-05:00ಕಾಡುವ ಹಾಡು: ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ <p><b>ಕಾಡುವ ಹಾಡು: ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ (ಅನಂತ ಪ್ರಣಯ)</b></p><p><b>ಕವಿ: ದ.ರಾ. ಬೇಂದ್ರೆ</b></p><p><b>ಚಿತ್ರ: ಶರಪಂಜರ</b></p><p><b>ನಿರ್ದೇಶಕ: ಕಣಗಾಲ್ ಪುಟ್ಟಣ್ಣ</b></p><p><b>ಸಂಗೀತ: ವಿಜಯ ಭಾಸ್ಕರ್</b></p><p><b>ಗಾಯಕರು: ಪಿ.ಬಿ. ಶ್ರೀನಿವಾಸ್, ಪಿ. ಸುಶೀಲ</b></p><p><b>ನಟನೆ: ಗಂಗಾಧರ್, ಕಲ್ಪನ</b></p><p><b>ಚಿತ್ರ ಬಿಡುಗಡೆಯಾದ ವರ್ಷ: 1971</b></p><p><b>ಚಿತ್ರಕತೆ, ಕಾದಂಬರಿ: ತ್ರಿವೇಣಿ</b></p><p>ಶರಪಂಜರ, ಕನ್ನಡದ ಒಂದು ಶ್ರೇಷ್ಠ ಸಿನಿಮಾಗಳಲ್ಲೊಂದು. ಕತೆ, ನಟ, ನಟಿ, ನಿರ್ದೇಶಕ, ಸಹ ನಟರು ಹೀಗೆ ಎಲ್ಲ ಕಾರಣಗಳಿಂದಲೂ ಮನಸ್ಸಿಗೆ ಹತ್ತಿರವಾಗುವ ಈ ಸಿನಿಮಾ, ಇದರ ಪ್ರತಿಯೊಂದು ಹಾಡುಗಳೂ ಕೂಡ ಕನ್ನಡಿಗರ ಮನದಲ್ಲಿ ಇಂದಿಗೂ ಗುನುಗುವಷ್ಟರ ಮಟ್ಟಿಗೆ ಪ್ರಸಿದ್ದಿಯನ್ನು ಪಡೆದಿವೆ. ಈ ಚಿತ್ರದಲ್ಲಿ ವಿಜಯ್ ಭಾಸ್ಕರ್ ಅವರ ಸಂಗೀತ, ಮತ್ತು ಪಿ.ಬಿ. ಶ್ರೀನಿವಾಸ್-ಪಿ. ಸುಶೀಲ ಅವರ ಗಾಯನವನ್ನು ನಾವು ಮರೆಯಲು ಸಾಧ್ಯವೇ ಇಲ್ಲ.</p><p>ಈ ವಿವರಣೆಯನ್ನು ಓದಿದ ಮೇಲೆ, ಕೇವಲ ಮೂರು ನಿಮಿಷ 33 ಸೆಕೆಂಡುಗಳಲ್ಲಿ ಈ ಹಾಡನ್ನು ಚಿತ್ರೀಕರಿಸಲು ಆಗ ಅವರಿಗೆ ಅದೆಷ್ಟು ಕಷ್ಟವಾಗಿದ್ದಿರಬಹುದು ಎಂದು ಊಹಿಸಬಹುದು.</p><p><br /></p><p style="text-align: center;"><b><u>ಅನಂತ ಪ್ರಣಯ</u></b></p><p style="text-align: center;">ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ</p><p style="text-align: center;">ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ</p><p style="text-align: center;">ಚುಂಬಕ ಗಾಳಿಯು ಬೀಸುತಿದೆ </p><p style="text-align: center;">ಸೂರ್ಯನ ಬಿಂಬಕೆ ಚಂದ್ರನ ಬಿಂಬವು</p><p style="text-align: center;">ರಂಜಿಸಿ ನಗೆಯಲಿ ಮೀಸುತಿದೆ|</p><p style="text-align: center;"><br /></p><p style="text-align: center;">ಭೂರಂಗಕೆ ಅಭಿಸಾರಕೆ ಕರೆಯುತ</p><p style="text-align: center;">ತಿಂಗಳು ತಿಂಗಳು ನವೆಯುತಿದೆ</p><p style="text-align: center;">ತುಂಬುತ ತುಳುಕುತ ತೀರುತ ತನ್ನೊಳು</p><p style="text-align: center;">ತಾನೇ ಸವಿಯನು ಸವಿಯುತಿದೆ|</p><p style="text-align: center;"><br /></p><p style="text-align: center;">ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ</p><p style="text-align: center;">ಕೋಟಿ ಕೋಟಿ ಸಲ ಹೊಸೆಯಿಸಿತು</p><p style="text-align: center;">ಮಿತ್ರನ ಮೈತ್ರಿಯ ಒಸಗೆ ಮಸಗದಿದೆ</p><p style="text-align: center;">ಮರುಕದ ಧಾರೆಯ ಮಸೆಯಿಸಿತು|</p><p style="text-align: center;"><br /></p><p style="text-align: center;">ಅಕ್ಷಿನಿಮೀಲನ ಮಾಡದೆ ನಕ್ಷತ್ರದ</p><p style="text-align: center;">ಗಣ ಗಗನದಿ ಹಾರದಿದೆ</p><p style="text-align: center;">ಬಿದಿಗೆಯ ಬಿಂಬಾಧರದಲಿ ಇಂದಿಗು</p><p style="text-align: center;">ಮಿಲನದ ಚಿಹ್ನವು ತೋರದಿದೆ|</p><p>****</p><p>ಹಾಡಿನ ಆರಂಭದಲ್ಲಿ ಸೂರ್ಯಾಸ್ತಮಾನದ ಚಿತ್ರಣ, ನಾಯಕಿ ಮತ್ತು ನಾಯಕ ಒಂದು ಬೆಟ್ಟದ ತುದಿಯಲ್ಲಿ ಕುಳಿತು ಮುಳುಗುತ್ತಿರುವ ಸೂರ್ಯನತ್ತ ಕೈ ಚಾಚಿಕೊಂಡು ಹಾಡುವರು:</p><p><b><span style="color: #38761d;">"ಓಹೋಹೋ....ಓ ಓ ಓ..."</span></b></p><p><b><span style="color: #38761d;">"ಆಹ ಹಹಾ...... ಆ ಆ ಆ..."</span></b></p><p><br /></p><p><b><span style="color: #38761d;">ಉತ್ತರಧ್ರುವದಿಂ ದಕ್ಷಿಣಧ್ರುವಕೂ ಚುಂಬಕ ಗಾಳಿಯು ಬೀಸುತಿದೆ</span></b></p><p><b><span style="color: #38761d;">ಸೂರ್ಯನ ಬಿಂಬಕೆ ಚಂದ್ರನ ಬಿಂಬವು ರಂಬಿಸಿ ನಗೆಯಲಿ ಮೀಸುತಿದೆ!</span></b></p><p>ಹೀಗೇ ಹೇಳುತ್ತಾ ನಾಯಕಿ ತನ್ನ ಕೈಯನ್ನು ಅಲೆಗಳೋಪಾದಿಯಲ್ಲಿ ಆಡಿಸುತ್ತಾಳೆ. ಈ ಮೂರು ನಿಮಿಷಗಳ ಹಾಡಿನ ಚಿತ್ರಣವನ್ನು ಯಾವ ಯಾವ ರೀತಿಯಲ್ಲಿ ಮಾಡಬಹುದಿತ್ತು ಎನ್ನುವುದನ್ನು ತಂತ್ರಜ್ಞ್ನರಿಗೆ ಬಿಟ್ಟರೆ, ಐವತ್ತು ವರ್ಷಗಳಿಗಿಂತ ಮೊದಲು ತಮ್ಮಲ್ಲಿರುವ ಕ್ಯಾಮರಾಗಳನ್ನು ಬಳಸಿ ಒಂದು ಸುಂದರವಾದ ರಸಕಾವ್ಯವನ್ನು ಕಟ್ಟಲು ಪ್ರಯತ್ನಿಸಿದ್ದಾರೆ ಎನ್ನಬಹುದು. ಸೂರ್ಯಾಸ್ತಮಾನದಿಂದ ಆರಂಭವಾಗಿ ಸೂರ್ಯಾಸ್ತಮಾನದಲ್ಲಿ ಕೊನೆಯಾಗುವ ಹಾಡು, ತನ್ನೊಡಲಾಳದಲ್ಲಿ ಅದೇನೋ ರಹಸ್ಯವನ್ನು ಬಚ್ಚಿಟ್ಟುಕೊಂಡ ಅನುಭವವಾಗುತ್ತದೆ!</p><p><br /></p><p></p><div class="separator" style="clear: both; text-align: center;"><a href="https://blogger.googleusercontent.com/img/a/AVvXsEj2A7AuntL1ZOj87CHVHCdbhcrFP3ua_qGOfZLPGu4FFVu0pzX654vlpFz4OetGKL8QKB1rJAuRCw9FvUfIJw6MJLC5gKlqwUlosOO2rr-YoTBIsveExISka37Uk_RJoyCeIES-8WXLfh21XvXOqB2vG8mj-d4NhaC0H6pLeOne97trBPAOBQQGUg" style="clear: left; float: left; margin-bottom: 1em; margin-right: 1em;"><img alt="" data-original-height="166" data-original-width="297" height="179" src="https://blogger.googleusercontent.com/img/a/AVvXsEj2A7AuntL1ZOj87CHVHCdbhcrFP3ua_qGOfZLPGu4FFVu0pzX654vlpFz4OetGKL8QKB1rJAuRCw9FvUfIJw6MJLC5gKlqwUlosOO2rr-YoTBIsveExISka37Uk_RJoyCeIES-8WXLfh21XvXOqB2vG8mj-d4NhaC0H6pLeOne97trBPAOBQQGUg" width="320" /></a></div><p></p><p>"ಅನಂತ ಪ್ರಣಯ"ದ ಈ ಎರಡು ಸಾಲುಗಳಲ್ಲಿ ಕವಿ, ಸೂರ್ಯಮಂಡಲ, ಭೂಮಿ, ಸೌರವ್ಯೂಹ ಇವೆಲ್ಲದರ ಆಂತರಿಕ ಸತ್ಯವಾದ ಚುಂಬಕತೆ (magnetism) ಬಗ್ಗೆ ಸೂಕ್ಷ್ಮವಾಗಿ ಹೇಳುತ್ತಾರೆ. ಇದನ್ನು ಪ್ರಣಯ ಎಂದುಕೊಳ್ಳಬಹುದು, ಆಕರ್ಷಣೆ ಎಂದು ಕೂಡ ಅಂದುಕೊಳ್ಳಬಹುದು. ಆದರೆ, ಚುಂಬಕತೆಯಲ್ಲಿ ಪರಸ್ಪರ ವಿರುದ್ಧ ಧ್ರುವಗಳು ಆಕರ್ಷಣೆಗೊಳಗಾಗುವುದು ಎಂದಿಗೂ ಸತ್ಯವಾದ ಅಂಶ. ಆದರೆ, ಈ ವೈಜ್ಞಾನಿಕ ಸತ್ಯವನ್ನ ಕವಿ ತನ್ನದೇ ಆದ ದಾರ್ಶನಿಕತೆಗೆ ಒಳಪಡಿಸಿ, ಸುಂದರವಾದ ಅನೇಕ ಉಪಮೆ-ಉಪಮಾನಗಳೊಂದಿಗೆ ಪ್ರಸ್ತುತ ಪಡಿಸುವುದೇ ಅನಂತ ಪ್ರಣಯ. ಈ ವ್ಯವಸ್ಥಿತವಾದ ಕಥನವನ್ನ ಅಷ್ಟೇ ಸುಂದರವಾಗಿ ಕಲ್ಪಿಸಿಕೊಂಡು ಚಿತ್ರದಲ್ಲಿ ಮೂಡಿಸಿರುವ ಹಿರಿಮೆ ನಟ-ನಟಿ-ನಿರ್ದೇಶಕರದ್ದು. ಮೂಲ ಭಾವಗೀತೆಗೆ ಎಲ್ಲಿಯೂ ಚ್ಯುತಿ ಬರದೆ, ಕಷ್ಟವಾದ ಸಾಹಿತ್ಯವನ್ನ ಮನದಟ್ಟು ಮಾಡಿಕೊಂಡು ಹಾಡಿದ ಹಿರಿಮೆ ಗಾಯಕರದ್ದು.</p><p>ಭೂಮಿ ಮತ್ತು ಭೂಮಂಡಲ ವ್ಯವಸ್ಥೆಯಲ್ಲಿ ಕೇವಲ ಸೂರ್ಯನೊಬ್ಬನಷ್ಟೇ ಅಲ್ಲ, ಅಲ್ಲಿ ಚಂದ್ರನ ಪಾತ್ರವೂ ಇದೆ. ಭೂಮಿ-ಸೂರ್ಯ-ಚಂದ್ರರ ನಡುವೆ ಇರುವ ಬಾಂಧ್ಯವದ ಹಂಬಲವೇ ಮುಂದಿನ ಸಾಲು. </p><p>ಸೂರ್ಯನ ಬಿಂಬಕೆ ಚಂದ್ರನ ಬಿಂಬವು ಎನ್ನುವಲ್ಲಿ ಚಂದ್ರನಿಗೆ ಸ್ವಯಂ ಪ್ರಕಾಶವಿಲ್ಲ ಚಂದ್ರನೇನೋ ಬಿಂಬಿಯಾಗಿದ್ದಾನೆ, ಆದರೂ ಸೂರ್ಯನನ್ನು ಬಿಂಬವೆಂದೇಕೆ ಕರೆದರು? ಇರಲಿ, ಇವರಿಬ್ಬರ ಬಿಂಬಗಳು ಒಬ್ಬರನೊಬ್ಬರು ರಂಬಿಸಿ (ರಮಿಸಿ, ಸಮಾಧಾನ ಪಡಿಸಿ, ಸಂತೈಸಿ) ನಗೆಯಲಿ ಮೀಸುತಿದೆ (ಸ್ನಾನ ಮಾಡಿಸು, ಮುಳುಗೇಳಿಸು).</p><p>ಸೂರ್ಯ-ಭೂಮಿಯರ ನಡುವಿನ ಅವಿನಾಭಾವ ಸಂಬಂಧ ಎಂದಿಗೂ ಇರುವುದೇ, ಆದರೆ, ಭೂಮಿಯ ಮೇಲಿನ ಚಂದ್ರನ ಹಂಬಲ ಹೇಗೆ ವಿಶೇಷವಾದದ್ದು, ಎನ್ನುವುದನ್ನು ಮುಂದಿನ ಸಾಲಿನಲ್ಲಿ ಕವಿ ವಿವರಿಸಿದ್ದಾರೆ:</p><p><b><span style="color: #38761d;">ಭೂರಂಗಕೆ ಅಭಿಸಾರಕೆ ಕರೆಯುತ ತಿಂಗಳು ತಿಂಗಳು ನವೆಯುತಿದೆ</span></b></p><p><b><span style="color: #38761d;">ತುಂಬುತ ತುಳುಕುತ ತೀರುತ ತನ್ನೊಳು ತಾನೇ ಸವಿಯನು ಸವಿಯುತಿದೆ.</span></b></p><p>ಭೂರಂಗಕೆ, ಅಭಿಸಾರಕೆ (ಪ್ರಿಯರ ಭೇಟಿಗಾಗಿ ಸಂಕೇತ ಸ್ಥಾನಕ್ಕೆ ಹೋಗುವ ಕ್ರಿಯೆ) ಕರೆಯುತ ತಿಂಗಳು (ಚಂದ್ರ), ತಿಂಗಳು ನವೆಯುತ್ತಾನೆ (ಕ್ಷೀಣಿಸುತ್ತಾನೆ ಮತ್ತೆ ಮೈ ತುಂಬಿಕೊಳ್ಳುತ್ತಾನೆ). ತಾನು ಮೈ ತುಂಬಿಕೊಂಡಾಗ ತನ್ನನ್ನು ಭೂಮಿ ಸೇರಬಹುದು ಎಂದು ಆಸೆಯನ್ನು ತಿಂಗಳ ಬೆಳಕಿನ ಮೂಲಕ ವ್ಯಕ್ತಪಡಿಸುತ್ತಾನೆ. ಈ ರೀತಿಯಾದ ನವಿರಾದ ಆಲೋಚನೆಗಳನ್ನ ಪ್ರತಿ ತಿಂಗಳು ತುಂಬುತ, ತುಳುಕುತ, ತೀರುತ ತನ್ನೊಳಗೆ ತಾನೇ ಸವಿಯನ್ನು ಸವಿಯುತ್ತಿದ್ದಾನೆ. ತುಳುಕುವುದು ಎಂದರೆ, ಬಿಂದಿಗೆಯಲ್ಲಿರುವ ನೀರು ತುಳುಕುವ ಹಾಗೆ, ಈ ಚಂದ್ರನ ವರ್ತನೆಯಿಂದ (ಕ್ಷೀಣಿಸುವುದು ಮತ್ತು ಮೈ ತುಂಬಿಕೊಳ್ಳುವುದು), ಭೂಮಿಯ ಮೇಲಿನ ನೀರಿನಲ್ಲಿ ಅಲೆಗಳು ತುಂಬಿ ತುಳುಕುವ ಹಾಗಿರಬಹುದು.</p><p>ಚಂದ್ರನ ಪರಿಸ್ಥಿತಿ ತಿಂಗಳಿಗೊಮ್ಮೆ ಹೀಗಿರುವಾಗ, ಭೂಮಿಯ ಪರಿಸ್ಥಿತಿ ಹೇಗಿರಬಹುದು ನೋಡಿ (ಭೂಮಿಯ ಸಂಬಂಧ ಸೂರ್ಯನ ಜೊತೆಯೂ ಇದೆ ಎನ್ನುವುದು ನೆನಪಿನಲ್ಲಿರಲಿ):</p><p><span style="color: #38761d;"><b>ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ ಕೋಟಿ ಕೋಟಿ ಸಲ ಹೊಸಯಿಸಿತು</b></span></p><p><span style="color: #38761d;"><b>ಮಿತ್ರನ ಮೈತ್ರಿಯ ಒಸಗೆ ಮಸಗದಿದೆ ಮರುಕದ ಧಾರೆಯ ಮಸೆಯಿಸಿತು.</b></span></p><p></p><div class="separator" style="clear: both; text-align: center;"><a href="https://blogger.googleusercontent.com/img/a/AVvXsEiPC9ucc2Fo3eov7XFHVBBSSnz2XNuVPC74QdmdLblvCT3lUvre8yFkN5o3gr-fH8Ah0saJ1r2UXXRIJKfSoz9qVX_RcT7T1v1t4SZs8TKEmYuWE93tyUkfxD0kCY9ZpoddfXyjCI3Wg4FwfDbdCq811VcZYb8JwGOcAMJZhNtkV4mf7qFqNXBVFw" style="clear: left; float: left; margin-bottom: 1em; margin-right: 1em;"><img alt="" data-original-height="135" data-original-width="251" height="172" src="https://blogger.googleusercontent.com/img/a/AVvXsEiPC9ucc2Fo3eov7XFHVBBSSnz2XNuVPC74QdmdLblvCT3lUvre8yFkN5o3gr-fH8Ah0saJ1r2UXXRIJKfSoz9qVX_RcT7T1v1t4SZs8TKEmYuWE93tyUkfxD0kCY9ZpoddfXyjCI3Wg4FwfDbdCq811VcZYb8JwGOcAMJZhNtkV4mf7qFqNXBVFw" width="320" /></a></div>ಭೂಮಿಯ ಚಲನೆಯಲ್ಲಿ ಏನು ವ್ಯತ್ಯಾಸ. ಚಂದ್ರನಂತೆ ಭೂಮಿ ತಿಂಗಳಿಗೆರಡು ಬಾರಿ ಬದಲಾಗಲಾರಳು. ಭೂಮಿಯ ಚಲನೆಯಿಂದಾಗಿ ಆರು ಋತುಗಳು ನಿರ್ಮಾಣಗೊಳ್ಳುತ್ತವೆ - ವಸಂತ, ಗ್ರೀಷ್ಮ, ವರ್ಷ, ಶರತಿ, ಹೇಮಂತ್ , ಮತ್ತು ಶಿಶಿರ.<p></p><p>ಭೂಮಿಯ ಮೇಲಿನ ವನ - ಭೂವನ, ಕುಸುಮಿಸಿ, ಹೂವಾಗಿ ಅರಳಿ, ಪುಲಕಿಸಿ, ಪುಲಕಗೊಂಡು, ಮರಳಿಸಿ - ಹೀಗೆ ಕೋಟ್ಯಾಂತರ ವರ್ಷಗಳಿಂದ ಈ ಪ್ರಕ್ರಿಯೆ ನಡೆದಿದೆ. ಇಲ್ಲಿ ಹೊಸೆಯಿಸಿ, ಎಂದರೆ ಹೊಸತನ ಪಡೆದು ಎಂದೂ, ತಮ್ಮೊಳಗೊಂದಾಗಿ ಹೊಸೆದು-ಬೆಸೆದುಕೊಂಡೂ ಎಂದೂ ಅರ್ಥ ಮಾಡಿಕೊಳ್ಳಬಹುದು. ಭೂಮಿಯ ಮೇಲಿನ ಈ ಬದಲಾವಣೆ ಎಲ್ಲವೂ ಸೂರ್ಯನ ಕಿರಣಗಳ ದಯೆಯಿಂದ ಆದದ್ದು. ಭೂಮಿ, ಸೂರ್ಯನಿಂದ ಎಷ್ಟು ದೂರದಲ್ಲಿ, ಯಾವ ಕೋನದಲ್ಲಿ ತಿರುಗುತ್ತಿದ್ದಾಳೆ ಎನ್ನುವುದರ ಮೇಲೆ ಇಲ್ಲಿನ ಎಲ್ಲ ಋತುಮಾನಗಳು ಆಗುವುದಲ್ಲವೇ?</p><p>ಆದರೆ, ಈ ಭೂಮಿಯ ಈ ಮಹತ್ತರವಾದ ಬದಲಾವಣೆಗೆ ಸೂರ್ಯನ ಅನಿಸಿಕೆ ಏನಿರಬಹುದು? ಮಿತ್ರನ (ಸೂರ್ಯ) ಮೈತ್ರಿಯ (ಕೂಡುವಿಕೆ, ಬಂಧನ), ಒಸಗೆ (ಸಂದೇಶ) ಮಸಗದಿದೆ (ಇನ್ನೂ ಕಳೆಗುಂದದಿರುವುದು), ಮರುಕದ (ಕರುಣೆಯ) ಧಾರೆಯನ್ನ (ನೀರು ಸುರಿಯುವುದು, ನೀರು ಎರೆದು ಕೊಡುವ ದಾನ, ಮದುವೆಯ ಒಂದು ವಿಧಿ) ಮಸೆಯಿಸಿತು (ಕಳೆಗುಂದದೇ ಇನ್ನೂ ಹೆಚ್ಚಾಗುತ್ತಲೇ ಇರುವುದು).</p><p>ಒಂದೊಂದು ಪದವನ್ನೂ ಸಹ ವ್ಯವಸ್ಥಿತವಾಗಿ ಪೋಣಿಸಿ ಒಂದು ಪ್ರಣಯದ ಎರಡು ಮುಖಗಳನ್ನು ಸಂಪೂರ್ಣವಾಗಿ ಚಿತ್ರಿಸಿಕೊಡುವ ಕವಿಯ ಜಾಣತನವನ್ನು ಇಲ್ಲಿ ಗುರುತಿಸಬಹುದು.</p><p>ಬೇಂದ್ರೆಯವರ ಒಂದು ಉಪಮೆ - ಗಿಡಗಂಟೆಗಳ ಕೊರಳೊಳಗಿಂದ ಹೊರಟಿತು, ಹಕ್ಕಿಗಳಾ ಹಾಡು - ಇದನ್ನು ಮೂಡಲ ಮನೆಯ ಪದ್ಯವನ್ನು ಓದಿದವರಿಗೆ ನೆನಪಿರುತ್ತದೆ. ಈ ರೀತಿಯ ಉಪಮೆಯು, ಕನ್ನಡವನ್ನು ಬಿಟ್ಟು ಬೇರೆ ಯಾವುದೇ ಭಾಷೆಯಲ್ಲಿಯೂ ನೋಡಲು, ಕೇಳಲು ಸಿಗಲಾರದು ಎನ್ನುವುದು ನನ್ನ ನಂಬಿಕೆ. ಅಂತಹದೇ ಇನ್ನೊಂದು ಉಪಮೆ ಮುಂದಿನ ಚರಣದಲ್ಲಿ ನೋಡಿ:</p><p><span style="color: #38761d;"><b>ಅಕ್ಷಿನಿಮೀಲನ ಮಾಡದ ನಕ್ಷತ್ರದ ಗಣ ಗಗನದಿ ಹಾರದಿದೆ</b></span></p><p><span style="color: #38761d;"><b>ಬಿದಿಗೆಯ ಬಿಂಬಾಧರನಲಿ ಇಂದಿಗು ಮಿಲನದ ಚಿಹ್ನವು ತೋರದಿದೆ.</b></span></p><p>ಅಕ್ಷಿ ನಿಮೀಲನ ಮಾಡದ ನಕ್ಷತ್ರದ ಗಣ, ಅಕ್ಷಿ ನಿಮೀಲನ ಎಂದರೆ ಬಿಟ್ಟ ಕಣ್ಣು ಬಿಟ್ಟಂತೆಯೇ ನೋಡುತ್ತಿರುವುದು, ಎವೆಯಿಕ್ಕಿ ನೋಡುವುದು, ಆದರೆ, ನಡುವೆ ರೆಪ್ಪೆಗಳು ಪಟಪಟನೆ ಹೊಡೆದುಕೊಳ್ಳುವ ಹಾಗೆ, ನಕ್ಷತ್ರಗಳನ್ನ ನೋಡಿದ ಕವಿಗೆ ಹೀಗನ್ನಿಸಿತು. ಈ ಅನಂತ ಪ್ರಣಯದಲ್ಲಿ ಕೇವಲ ಭೂಮಿ, ಚಂದ್ರ, ಸೂರ್ಯರನ್ನು ಮಾತ್ರ ಉಲ್ಲೇಖಿಸಿದರೆ ಸಾಕೆ? ನಕ್ಷತ್ರಗಳೂ, ನಕ್ಷತ್ರಪುಂಜಗಳೂ ಬೇಕಲ್ಲ? ಅವುಗಳ ಗತಿಯೇನು? ಅವುಗಳ ಕತೆ ಏನು?</p><p>ಈ ಅನಂತ ಪ್ರಣಯಕ್ಕೆ ಸಾಕ್ಷಿಯಾಗಿ ದೇವತೆಗಳ ಗಣಗಳು ನಕ್ಷತ್ರಗಳಾಗಿ ತೋರುತ್ತಿರಬಹುದು. ಮಾಡದ (ಮಾಡದೇ ಇರುವ, ಮಾಡ ಎಂದರೆ ಛಾವಣಿ, ಛಾವಣಿ ಮೇಲಿರುವ) ನಕ್ಷತ್ರಗಳ ಗಣ (ಗುಂಪು) ಗಗನದಿ ಹಾರದಿದೆ (ಹಾರುತ್ತಿವೆ, ಹಾರದೆ ಇವೆ, ಹೂವಿನ ಹಾರದಂತೆ ತೋರುತ್ತಿವೆ). ಹೀಗೆ ಒಂದೊಂದು ಪದದಲ್ಲಿ ಎರಡೆರಡು ಅರ್ಥಗಳು ಬರುವಂತೆ ಇರುವ ಬಿಗಿಯಾದ ಹೆಣಿಗೆ ಇದು. ಹೀಗಿರುವಾಗ ಬಿದಿಗೆಯ ಬಿಂಬ (ಚಂದ್ರನ ಸಣ್ಣ ಗೆರೆ, ಆದರೆ ಬಿದಿಗೆಯ ಚಂದ್ರ ಮುಂದೆ ದೊಡ್ಡದಾಗಿ ಬೆಳೆಯುವ ಆಸೆಯನ್ನು ಇಟ್ಟುಕೊಂಡವನು), ಇಂದಿಗೂ ತನ್ನ ಆಸೆಯನ್ನು ಜೀವಂತವಾಗಿ ಇಟ್ಟುಕೊಂಡವನು. ಈ ಬಿದಿಗೆಯ ಚಂದ್ರನ ಬಿಂಬ ಮಿಲನದ ಚಿಹ್ನೆ (ಸೂಚನೆ) ಯಾಗಿ ತೋರುತ್ತಿದೆ.</p><p></p><div class="separator" style="clear: both; text-align: center;"><a href="https://blogger.googleusercontent.com/img/a/AVvXsEhtSWf-HZ9GQM8_Qcvs4dCwRjfSgxfC4JmVLEw0hcubVkROk687DNnHq4oyRPC8PDokDiWj8F1_LBg6PhjO9u4pMEq-Jr4lC1XV5NOWfRADRPBpwRWcS2eWYflyBImfWtafTtKupE5xYRXSkS3Pd3NsjUXjwhZ0fms1EQoDMzw3aR11RJ4l8h9-5w" style="clear: left; float: left; margin-bottom: 1em; margin-right: 1em;"><img alt="" data-original-height="328" data-original-width="614" height="185" src="https://blogger.googleusercontent.com/img/a/AVvXsEhtSWf-HZ9GQM8_Qcvs4dCwRjfSgxfC4JmVLEw0hcubVkROk687DNnHq4oyRPC8PDokDiWj8F1_LBg6PhjO9u4pMEq-Jr4lC1XV5NOWfRADRPBpwRWcS2eWYflyBImfWtafTtKupE5xYRXSkS3Pd3NsjUXjwhZ0fms1EQoDMzw3aR11RJ4l8h9-5w=w292-h185" width="292" /></a></div>ಹೀಗೆ ಭೂಮಿ-ಚಂದ್ರ-ಸೂರ್ಯ-ನಕ್ಷತ್ರ ಗಣಗಳ ಸಮೇತ ನಡೆಯುತ್ತಿರುವ ಈ ನಿರಂತರ ಬದಲಾವಣೆಯೇ ಕವಿಯ ಕಲ್ಪನೆಯಲ್ಲಿ ಅನಂತ ಪ್ರಣಯವಾಗಿ ಕಂಡುಬಂದಿರುವುದು. ಪದದಿಂದ ಪದಕ್ಕೆ, ಅನೇಕ ಉಪಮೆ-ಉಪಮಾನಗಳ ಸಹಾಯದಿಂದ ಪರಿಸರದಲ್ಲಿನ ದೈನಿಕ-ಮಾಸಿಕ ಬದಲಾವಣೆಗಳನ್ನು ಎಷ್ಟು ಸೂಕ್ಷ್ಮವಾಗಿ ಸೆರೆಹಿಡಿದ್ದಾರೆಂದರೆ, ಈ ಕವನವನ್ನು ಮತ್ತೆ ಮತ್ತೆ ಓದಿದಂತೆಲ್ಲ ಹೆಚ್ಚು ಹೆಚ್ಚು ಕೋನಗಳಿಂದ ಅರ್ಥವಾಗುವುದು.<p></p><p>ಈ ಹಾಡನ್ನು<a href="https://youtu.be/aqCGPp57F7I"><b><span style="color: #2b00fe;">ಇಲ್ಲಿ</span></b></a> ನೋಡಬಹುದು.</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-10219145411795420432024-01-14T15:30:00.018-05:002024-01-14T16:12:13.223-05:00ಸ್ವಾತಿ ಮುತ್ತಿನ ಮಳೆ ಹನಿಯೇ<p><span style="font-size: x-large;">ನಿನ್ನೆ </span>ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ನೋಡೋ ಅವಕಾಶ ಸಿಕ್ಕಿತು. ನಿಧಾನವಾಗಿ ಓಡುವ ಸಿನಿಮಾ, ಕೊನೆಯಲ್ಲಿ ದುರಂತದಲ್ಲಿ ಕೊನೆಗೊಳ್ಳುವ ಎಲ್ಲ ಮುನ್ನೆಚ್ಚರಿಕೆಗಳು ಸಿಕ್ಕಿದ್ದರೂ, ರಾಜ್ ಬಿ. ಶೆಟ್ಟಿಯಲ್ಲಿ ಒಬ್ಬ ಸಿನಿಮಾ ಕಥಾವಸ್ತುವನ್ನು ಸೂಕ್ಷ್ಮವಾಗಿ ಹೆಣೆಯುವ ಕಸಬುಗಾರಿಕೆಯ ಬರಹಗಾರನನ್ನು ಗುರುತಿಸುವ ನಾನು, ಒಂದು ಸುಂದರವಾದ ಕಥಾ ಹಂದರವನ್ನು ನಿರೀಕ್ಷೆಯಲ್ಲಿಟ್ಟುಕೊಂಡಿದ್ದೆ. ಆ ನಿರೀಕ್ಷೆ ಹುಸಿಯಾಗದಂತೆ ಆದದ್ದು ಈ ಸಿನಿಮಾದ ಹೆಚ್ಚುಗಾರಿಕೆ ಮತ್ತು ಅದರ ಗೆಲುವು ಕೂಡ.</p><p><a href="https://blogger.googleusercontent.com/img/a/AVvXsEgqgySIa4C-y-ZsRdTISRy2d204GSn3ZWTD_uaHIi1uTyy1ZbGJ-R6OJtPWPbtlZ9619naNIwMpHlzd-KUF2PE9YOVtiyogw_KxiKbtDn9b3xuH0fnyKV0OVcryPhK9fMLU-klTJ178Po-_bEKcy2nm0zvKn80qB8K1LymA2KyfHPgudcG9I7i9Nw" style="clear: left; margin-bottom: 1em; margin-right: 1em; text-align: center;"><img alt="" data-original-height="412" data-original-width="733" height="225" src="https://blogger.googleusercontent.com/img/a/AVvXsEgqgySIa4C-y-ZsRdTISRy2d204GSn3ZWTD_uaHIi1uTyy1ZbGJ-R6OJtPWPbtlZ9619naNIwMpHlzd-KUF2PE9YOVtiyogw_KxiKbtDn9b3xuH0fnyKV0OVcryPhK9fMLU-klTJ178Po-_bEKcy2nm0zvKn80qB8K1LymA2KyfHPgudcG9I7i9Nw=w400-h225" width="400" /></a></p><p>ಕೋಟ್ಯಾಂತರ ರೂಪಾಯಿಗಳನ್ನು ಸುರಿದು ಒಂದು ಭವ್ಯವಾದ ಕಥನವನ್ನು ಹೆಣೆದು ಮೇಲೆದ್ದು ಬಂದು ಗೆದ್ದ ಚಿತ್ರಗಳು ಎಷ್ಟೋ, ಸೋತವುಗಳು ಕೂಡ ಅಷ್ಟೇ. ಈ ಎಲ್ಲ ವ್ಯಾವಹಾರಿಕ ಚಿತ್ರ ಪ್ರಪಂಚದಲ್ಲಿ ಅದೊಂದು ದುಡಿಮೆಯ ಮೂಲವಾಗಿ ಗೆದ್ದಾಗ ನಿರ್ಮಾತೃಗಳನ್ನು ಎತ್ತಿಕೊಂಡಾಡುವಷ್ಟೇ ಸಹಜವಾಗಿ, ಬಿದ್ದಾಗ ಹಣ ಹಾಕಿದವರು ಎಲ್ಲವನ್ನು ಕಳೆದುಕೊಳ್ಳುವುದು ಮಾಮೂಲು. ಆದರೆ, ಈ ಸಣ್ಣ ಬಜೆಟ್ಟಿನ ಚಿತ್ರಗಳಲ್ಲಿ ಹಾಗಲ್ಲ. ಇಲ್ಲಿ ಸೋಲು-ಗೆಲುವು, ಹಣ ಮಾಡಬೇಕು ಎನ್ನುವುದಕ್ಕಿಂತ ಮುಖ್ಯವಾಗಿ ನಿರ್ಮಾತೃಗಳಿಗೆ, ತಮ್ಮ ಮನದಾಳದಲ್ಲಿ ಸೂಕ್ಷ್ಮವಾಗಿ ಹುಟ್ಟಿ, ಕತೆಯಾಗಿ ಬೆಳೆದ ಕತೆಗಳ ಮುಖೇನ, ಒಂದು ಸಂದೇಶವನ್ನು ಸಾರುವುದು ಅವುಗಳ ಧ್ಯೇಯವಾಗಿರುತ್ತದೆ. ಈ ನಿಟ್ಟಿನಲ್ಲಿ ಯೋಚಿಸಿದಾಗ, ಈ ಚಿತ್ರ, ರಾಜ್ ಶೆಟ್ಟಿ ಅವರ ಮನದ ಮೂಸೆಯಲ್ಲಿ ಕುದಿದ ಬಂಗಾರದಿಂದ ಮಾಡಿದ ಒಂದು ಸುಂದರವಾದ ಆಭರಣದಂತೆ ಕಂಡು ಬರುತ್ತದೆ.</p><p>ಈ ಚಿತ್ರದಲ್ಲಿ ಎಲ್ಲವೂ ನಿಧಾನವೇ. ಕಥಾನಾಯಕಿ ಪ್ರೇರಣ, ಅವಳ ನಡೆ-ನುಡಿ, ಆಡಿದರೆ ದುಡ್ಡು ಖರ್ಚಾಗುವುದೇನೋ ಎನ್ನುವಷ್ಟು ಕಡಿಮೆ ಮಾತುಗಳು. ಹಿನ್ನೆಲೆಯಲ್ಲಿ ಒಂದೇ ಒಂದು ಗುಂಗಿನ ಸಂಗೀತ, ಇವೆಲ್ಲವೂ ನಿಮ್ಮ ತಾಳ್ಮೆಯನ್ನು ಪರೀಕ್ಷಿಸಬಲ್ಲದು. ನಮ್ಮ ವೃತ್ತಿ ಜೀವನದ ಏಳು-ಬೀಳುಗಳು ನಮ್ಮನ್ನು ಪ್ರಬುದ್ಧತೆಯ ವಿಭಿನ್ನ ನೆಲೆಗೆ ಕೊಂಡೊಯ್ಯುವ ಹಲವು ಅಂಶಗಳನ್ನು ಅಭಿವ್ಯಕ್ತಪಡಿಸುವಲ್ಲಿ, ನಾಯಕಿಯದ್ದು ಸಹಜವಾದ ಅಭಿನಯ. ತಮ್ಮ ಇಂಟ್ರೋಶಾಟ್ ಒಂದರಲ್ಲಿಯೇ, ’ಬುಲೆಟ್ನಲ್ಲಿ ಬಂದ ಪೇಶೆಂಟ್’ ಆಗಿ ರಾಜ್ ಅವರು ಚಿತ್ರದೊಳಗೆ ತಾವೇ ಒಂದಾಗಿ ಹೋಗಿದ್ದಾರೆ ಎನ್ನುವಷ್ಟು ತನ್ಮಯತೆಯನ್ನು ಪ್ರದರ್ಶಿಸಿದ್ದಾರೆ.</p><p>ಒಂದು ಮೊಟ್ಟೆಯ ಕಥೆಯಲ್ಲಿ ನೀವು ರಾಜ್ ಅವರನ್ನು ನೋಡಿದ್ದರೆ, ಇಲ್ಲಿ ಮತ್ತೆ ಆ ವ್ಯಕ್ತಿತ್ವವನ್ನು ಸಮತೋಲಿಸಿಕೊಳ್ಳಬಹುದು. ಚಿತ್ರದಲ್ಲಿ ನಾಯಕನ ಹೆಸರೇ, ಅನಿಕೇತ್, ಮನೆ ಇಲ್ಲದವ... ಅದೂ ಕೂಡ ಈ ಸಂದರ್ಭಕ್ಕೆ ಆತನಿಟ್ಟುಕೊಂಡ ಹೆಸರು ಎಂದು ಗೊತ್ತಾಗುತ್ತದೆ.</p><p>ಚಿತ್ರದುದ್ದಕ್ಕೂ ಅನೇಕ ರೂಪಕಗಳಿವೆ, ವಿಡಂಬನೆಗಳಿವೆ. ಅವುಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಅಷ್ಟೇ. ಕಸದಂತೆ ದಿನವಿಡೀ ಹೂವು ಉದುರಿಸುವ ನಂದಿಬಟ್ಟಲು ಗಿಡ, ಅದರೆ ಬಗ್ಗೆ ನಿಮ್ಮಇರುವ ನಿಮ್ಮ ಮನದೊಳಗಿನ ಪ್ರತಿಮೆಯನ್ನು ಈ ಸಿನಿಮಾ ಬದಲಾಯಿಸಬಲ್ಲದು. ಹಾಗೆಯೇ, ಹಾಲು ಹಾಕದ ಚಹಾ, ಬೀದಿ ನಾಯಿ ಹೇಗೆ ಸಾಯುತ್ತದೆ ಎನ್ನುವುದು, ಒಂದು ಕೊಳ/ಕೆರೆ ದಿನದ ವಿವಿಧ ಸಮಯದಲ್ಲಿ ಹೇಗಿರುತ್ತದೆ ಎನ್ನುವುದರ ಮೂಲಕ ನಿಮ್ಮ ಚಿಂತನಶೀಲತೆಗೆ ಇಲ್ಲಿ ಹಲವಾರು ವಸ್ತುಗಳು ಸಿಗುವುದಂತೂ ನಿಜ. ಎಲ್ಲದಕ್ಕಿಂತ ಮುಖ್ಯವಾಗಿ, ನಮ್ಮ ಬದುಕಿನ ಆಯಾ ಸಂದರ್ಭಕ್ಕೆ ಇರುವ ಕಷ್ಟದ ಸನ್ನಿವೇಶಗಳನ್ನ ವಾಷಿಂಗ್ಮೇಷೀನ್ನಲ್ಲಿ ಕೊಳೆ ಬಟ್ಟೆಗಳು ತಿರುವುದರ ಮೂಲಕವೂ ಒಂದು ಸಂದೇಶವನ್ನು ಹೇಗೆ ಹೇಳಬಹುದು ಎನ್ನುವುದು ಸಿನಿಮಾವನ್ನು ಹೇಗೆ ಮಾಡಬಹುದು ಎಂದು ಹಲವು ವಿದ್ಯಾರ್ಥಿಗಳಿಗೆ ಒಂದು ಡಾಕ್ಯುಮೆಂಟ್ ಕೂಡ ಆಗಬಲ್ಲದು.</p><p>ಸಿನಿಮಾದಲ್ಲಿ ಅಲ್ಲಲ್ಲಿ ಹೆಣ್ಣೆದ ಸಣ್ಣಪುಟ್ಟ ತಿರುವುಗಳು ಊಟಿಯ ಹೊರಾಂಗಣ ಚಿತ್ರೀಕರಣದಷ್ಟೇ ಸಹಜವಾಗಿ ನಿಮ್ಮನ್ನು ಕಾಡುತ್ತವೆ. ಸಿನಿಮಾದ ಎಲ್ಲ ಪಾತ್ರಗಳೂ ನಿಮ್ಮನ್ನು ಚಿಂತನೆಯ ಒರೆಗೆ ಹಚ್ಚುತ್ತವೆ ಎಂದರೆ ತಪ್ಪಾಗಲಾರದು. ಈ ಚಿತ್ರದಲ್ಲಿ ಪಾತ್ರಗಳನ್ನು ಎಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆಯೆಂದರೆ, "ಅವನೇ ಶ್ರೀಮನ್ ನಾರಾಯಣ" ಚಿತ್ರದಲ್ಲಿ ಅಭೀರರ ದೊರೆಯಾಗಿ ಕಠೋರ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಬಾಲಾಜಿ ಮನೋಹರ್, ಈ ಚಿತ್ರದಲ್ಲಿ ಒಂದು ಹಾಸ್ಪಿಸ್ ಸೆಂಟರಿನ ಮುಖ್ಯ ಡಾಕ್ಟರ್ ಆಗಿ, ಪೇಷಂಟ್ಗಳಿಗೆ ಮಾದಕ ದ್ರವ್ಯಗಳ ದಾಸರಾಗುವಂತೆ ಮಾಡದಿರುವುದು ಸರಿ ಎಂಬ ನಿಲುವಿನಿಂದ ತಮ್ಮ ಬಿಗಿ ನಟನೆಯಿಂದ ಅವರಲ್ಲಿನ ಕಲಾವಿದನಿಗೆ ನ್ಯಾಯ ಒದಗಿಸಿದ್ದಾರೆ.</p><p>***</p><p>ಇತ್ತೀಚಿನ ನೂರು-ಸಾವಿರ ಕೋಟಿ ವ್ಯವಹಾರದ ಉದ್ಯಮದ ಬೆಂಬಲದಲ್ಲಿ ಹುಟ್ಟಿ ಮೂಡಿಬರುವ ಚಿತ್ರಗಳು ತಾಂತ್ರಿಕತೆ, ಸೆಟ್ ಮತ್ತು ವಿಜೃಂಬಣೆಯಲ್ಲಿ ಎಲ್ಲರ ಗಮನ ಸೆಳೆಯಬಲ್ಲವು. ಉದಾಹರಣೆಗೆ, ಕೆಜಿಎಫ಼್ ಚಿತ್ರದಲ್ಲಿ ಉಪಯೋಗಿಸುವ ಸುತ್ತಿಗೆ, ಚೈನು, ಧೂಳು ಮತ್ತಿತರ ವಸ್ತುಗಳು ಒಂದು ವ್ಯವಸ್ಥಿತವಾದ ಕ್ಯಾಮೆರಾ ಕಣ್ಣಿನಲ್ಲಿ ಅದ್ಭುತವಾಗಿ ಹೊರಹೊಮ್ಮ ಬಲ್ಲವು. ಆದರೆ, ಈ ಗ್ರ್ಯಾಂಡ್ ಕಥಾನಾಯಕರಂತೆ ಅದ್ಯಾವ ಅಗಮ್ಯವಾದ ಶಕ್ತಿಯನ್ನೂ ಹೊಂದಿರದ ಒಬ್ಬ ಸಾಮಾನ್ಯ ಮನುಷ್ಯನ ಚಿತ್ರದಲ್ಲಿ ತನ್ಮಯತೆಯನ್ನು ಕಾಣುವ ನಿರೂಪಣೆಯನ್ನು ಮಾಡಿ ನೂರು ನಿಮಿಷಗಳ ಕಮರ್ಶಿಯಲ್ ಸಿನಿಮಾದಲ್ಲೂ ಕಲಾತ್ಮಕತೆಯನ್ನು ಕಾಣುವುದು ಬಹಳ ಕಷ್ಟ.</p><p>ನೀವು ತರಾಸು ಅವರ ಕಾದಂಬರಿ ಆಧಾರಿತ "ಬೆಂಕಿಯಬಲೆ" ಸಿನಿಮಾವನ್ನು ನೋಡಿದ್ದರೆ, ಅಲ್ಲಿ ಅನಂತ್ನಾಗ್, ಲಕ್ಷ್ಮಿ, ಅಶ್ವಥ್, ತೂಗುದೀಪ ಶ್ರೀನಿವಾಸ್ ಅವರ ಪಾತ್ರಗಳ ಸಂವೇದನಾಶೀಲತೆಯನ್ನು ಅರ್ಥಮಾಡಿಕೊಂಡಿದ್ದರೆ, ರಾಜ್ ಬಿ. ಶೆಟ್ಟಿಯ ಈ ಸಿನಿಮಾ ನಿಮಗೆ ಇಷ್ಟವಾಗುತ್ತದೆ.</p><p>ಇದು ನನ್ನ ಅನಿಸಿಕೆ. ಹೆಚ್ಚಿನ ವಿವರಗಳಿಗೆ ಪ್ರಜಾವಾಣಿಯಲ್ಲಿ ಪ್ರಕಟವಾದ ಈ <a href="https://www.prajavani.net/entertainment/movie-review/swathi-mutthina-male-haniye-movie-review-raj-b-shetty-siri-ravikumar-drama-is-heartening-swathi-muthina-male-haniye-x-reviews-raj-b-shetty-film-review-2576019" target="_blank">ವಿಮರ್ಶೆಯನ್ನು</a> ನೋಡಿ.</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-23737931649327461062023-11-30T21:36:00.001-05:002023-11-30T21:36:45.743-05:00 ಸುಖ-ದುಃಖ<p>ಬಾಳಿನಲ್ಲಿ ಬರೋ ಸಂತೋಷದ ಕ್ಷಣಗಳೇ ಒಂದು ರೀತಿಯಲ್ಲಿ ಸೂಕ್ಷ್ಮವಾದವುಗಳು. ಈ ಸಂತೋಷವನ್ನ ಸುಖ, ಹರ್ಷ, ನಲಿವು, ಉಲ್ಲಾಸ, ಹಿಗ್ಗು, ಖುಷಿ, ಮೋಜು, ವಿನೋದ... ಮೊದಲಾದ ಸಮಾನಾರ್ಥಕ ಪದಗಳನ್ನು ಉಪಯೋಗಿಸಿ ಕರೆದರೂ ಅದೊಂದು ಅಗಮ್ಯವಾದ ಲೋಕವಾಗೇ ಉಳಿದುಬಿಡುತ್ತದೆ. ಸುಖದಲ್ಲಿ, ಕಷ್ಟ, ಕಾರ್ಪಣ್ಯ, ದುಃಖ, ನೋವುಗಳಿಲ್ಲ ಅನ್ನೋದರ ಜೊತೆಗೆ ಸುಖವೆಂದೂ ದಂಡಿಯಾಗಿ ಬುಟ್ಟಿಯಲ್ಲಿ ಮೊಗೆಯುವಷ್ಟು ಸಿಗುವುದಂತೂ ಅಲ್ಲವೇ ಅಲ್ಲ. ಅದು ಮಳೆಯ ದಿನಗಳಲ್ಲಿ ಬರುವ ಕೋಲ್ಮಿಂಚಿನ ಹಾಗೆ, ಹೀಗೆ ಬಂದು ಹಾಗೆ ಹೋಗುವುದು. ಎಷ್ಟೋ ಸಮಯ ಗೊತ್ತಾಗುವುದೂ ಇಲ್ಲ. ಅದರಲ್ಲಿಯೂ ಮೋಡ ಕವಿದ ಆಕಾಶವಿದ್ದರೆ ಮುಗಿದೇ ಹೋಯಿತು, ದೂರದಲ್ಲೆಲ್ಲೋ ಮಿಂಚಿ ಮಾಯವಾಗುವ ಮಾಯಾಂಗನೆಯ ಹಾಗೆ, ಅದು ಇದ್ದೂ ಇರಲೊಲ್ಲದು.</p><p><br /></p><p>ಈ ಕಾರಣಗಳಿಂದಲೇ ಇರಬೇಕು, ಇಂಗ್ಲೀಷಿನವರು, ಚೆನ್ನಾಗಿರುವುದಕ್ಕೆ awesome ಎಂದು ಹೇಳೋದು... ಅದರಲ್ಲಿ "some" ಅಡಕವಾಗಿದೆ. ಅದೇ, ಮನಸ್ಸಿಗೆ ಅಹಿತವಾದ ವಿಷಯಗಳಿಗೆ, awful ಎಂದು ಹೇಳುವಾಗ, ಅದು ಯಾವಾಗಲೂ "full" ಆಗಿಯೇ ತೋರೋದು! ಸುಖ-ಸಂತೋಷಗಳು ಹಿತಮಿತವಾಗಿಯೂ, ಕಷ್ಟ-ಕಾರ್ಪಣ್ಯಗಳು ದಂಡಿ ದಂಡಿಯಾಗಿಯೂ ಬರುತ್ತವೆ ಎಂದು ಒಂದೊಂದು ಪದದಲ್ಲಿಯೇ ಹೇಳುವ ಅವರ ಜಾಣ್ಮೆಯನ್ನು ಮೆಚ್ಚಬೇಕಾದ್ದೆ!</p><p><br /></p><p>ಯಾರು ಯಾರಿಗೋ ಯಾವುದೋ ಕಾರಣಗಳಿಗೆ ಖುಷಿಯಾಗುವುದುಂಟು. ಇಡೀ ದಿನ ದಣಿದ ತಾಯಿಯ ದಣಿವು ತನ್ನ ಮಗುವಿನ ಒಂದು ಕಿರುನಗೆಯನ್ನು ನೆನಪಿಸಿಕೊಳ್ಳುವುದರ ಮೂಲಕವೇ ಮರೆಯಾಗಬಲ್ಲದು. ಸಂಜೆ ಒಮ್ಮೊಮ್ಮೆ ಒಂದು ಒಳ್ಳೆಯ ಚಹಾ ಕುಡಿದಾಗ, ಮಲೆನಾಡಿನ ಮಳೆ ಮತ್ತು ಚಳಿ ಪ್ರಕೃತಿಯಲ್ಲಿ ಮುಂಜಾನೆ ಒಂದು ಮಜಬೂತಾದ ಫ಼ಿಲ್ಟರ್ ಕಾಫ಼ಿ ಕುಡಿದಾಗ, ಬೇಸಿಗೆಯ ಬಿಸಿಲಿನ ಬಳಲಿಕೆಯಲ್ಲಿ ಒಂದು ಶುಂಠಿ ಹಾಕಿದ ಮಜ್ಜಿಗೆ ಕುಡಿದಾಗ - ಈ ಕಿರು ಸಂತೋಷ ಸುಖವಾಗಿ ಪ್ರಕಟವಾಗುವುದುಂಟು. ಹೀಗಿರುವಾಗ ಸುಖವೆನ್ನುವುದು ದಂಡಿ ದಂಡಿಯಾಗಿ ಸಿಗಬೇಕೆಂದೇನೂ ಇಲ್ಲ... ಬಳಲಿದ ಮನಸ್ಸಿಗೆ ಹಿತವಾಗುವುದಕ್ಕೆ ಚಿಕ್ಕ ಲೋಟದಲ್ಲಿ ಸಿಗುವ ಪಾನೀಯ ಸಾಕಾಗುವುದರಿಂದ, ನಿಮಗೆ ಬಕೇಟುಗಟ್ಟಲೆ ಎಂದೂ ಕಾಫ಼ಿಯನ್ನು ಕುಡಿಯಬೇಕೆನ್ನಿಸುವುದಿಲ್ಲ. ನಾವು ಚಿಕ್ಕವರಿದ್ದಾಗ ಭದ್ರಾವತಿಯ ಸಕ್ಕರೆ ಕಾರ್ಖಾನೆಯನ್ನು ನೋಡಲು ಹೋಗಿದ್ದೆವು. ಶಾಲಾ ಮಕ್ಕಳಿಗೆ ಪ್ರವಾಸದ ಕೊನೆಯಲ್ಲಿ ಒಂದು ಮೂಟೆ ಸಕ್ಕರೆಯನ್ನು ತೋರಿಸಿ, ಯಾರು ಎಷ್ಟು ಬೇಕಾದರೂ ತಿನ್ನಬಹುದು ಎಂದು ಹೇಳಿದಾಗ ನಾವ್ಯಾರೂ ಒಂದು ಚಿಟುಕೆಯಷ್ಟು ಕೂಡ ಸಕ್ಕರೆಯನ್ನು ತಿನ್ನದಿದ್ದುದು ನನಗಿನ್ನೂ ಚೆನ್ನಾಗಿ ನೆನಪಿದೆ. ದಂಡಿಯಾಗಿ ಸಿಗುವುದೆಲ್ಲವೂ ಸುಖವಲ್ಲ, ಜೊತೆಗೆ ಯಥೇಚ್ಛವಾಗಿ ದೊರಕುವುದು ಸುಖವನ್ನು ಕಸಿದುಕೊಳ್ಳಲೂಬಹುದು. ಊಟ-ತಿಂಡಿಗಳು ಬಹಳ ಇಷ್ಟ ಎಂದು ಹೊಟೇಲಿನಲ್ಲಿ ಕೆಲಸಕ್ಕೆ ಸೇರಿಕೊಂಡವರು, ಸಮಯ ಸರಿದಂತೆಲ್ಲ, ಊಟ-ತಿಂಡಿಯ ಬಗೆಗಿನ ತಮ್ಮ ದೃಷ್ಟಿಕೋನವನ್ನೇ ಬದಲಾಯಿಸಿಕೊಳ್ಳುವ ಹಾಗೆ.</p><p><br /></p><p>ನನ್ನ ಪ್ರಕಾರ, ಎಲ್ಲಿದೆ ಸುಖ? ಎಂದು ಅರಸಿಕೊಂಡು ಹೋಗುವುದೇ ತಪ್ಪು. ಸುಖ-ಸಂತೋಷ ನಮ್ಮ ಒಳಗಿದೆ, ನಮ್ಮ ಹೊರಗಿದೆ, ಮುಖ್ಯ ಅದು ನಾವಿರುವಲ್ಲೇ ಇದೆ. ಆಧ್ಯಾತ್ಮಿಕ ಚಿಂತನಶೀಲರು, ನಿಮ್ಮ ಒಳಗಡೆ ಗಮನಕೊಡಿ, ಅದರಲ್ಲಿ ಅಂತರ್ಧಾನದ ಸುಖವಿದೆ ಎಂದಾರು. ಕವಿಗಳು, ನಿಮ್ಮ ಸುತ್ತಮುತ್ತಲಿನ ಪ್ರಕೃತಿಯ ಆರಾಧನೆಯಲ್ಲಿದೆ ಸುಖ ಎಂದಾರು. ತನ್ನ ಮನಸ್ಸನ್ನು ತನ್ನೊಳಗೇ ಕೇಂದ್ರೀಕರಿಸಿ ಹತೋಟಿಯಲ್ಲಿಡಲು ಪ್ರಯತ್ನಿಸುವ ಯೋಗಿಗೆ, ಪಕ್ಕದ ಮರದ ಮೇಲೆ ಕುಳಿತು ವಸಂತನ ಆಗಮನವನ್ನು ಸಾರುವ ಕೋಗಿಲೆಯ ಸಂದೇಶ ಕಿರಿಕಿರಿ ತರಿಸಲಿಕ್ಕೂ ಸಾಕು. ಅದೇ ಬಾಹ್ಯ ಪ್ರಕೃತಿಗೆ ತನ್ನನ್ನು ತಾನು ಒಡ್ಡಿಕೊಂಡು ಹೊಸತೇನನ್ನೋ ನಿರೀಕ್ಷಿಸುತ್ತಿರುವ ಕವಿ ಮನಸ್ಸಿಗೆ ಕ್ರೌಂಚ ಪಕ್ಷಿಗಳ ಕಲರವವೂ ಮುದ ತರಬಹುದು. ಅವರವರ ಭಾವನೆ-ಭಕ್ತಿ ಮತ್ತು ಶ್ರದ್ಧೆಗೆ ಸಂಬಂಧಿಸಿದಂತೆ ಸುಖ ಎಲ್ಲ ಕಡೆಯೂ ಇದೆ... ಆದರೆ ಅದು ದಂಡಿಯಾಗಿ ಸಿಗುವ ಸರಕು-ಸಾಮಗ್ರಿಯಾಗಂತೂ ಅಲ್ಲವೇ ಅಲ್ಲ.</p><p><br /></p><p>***</p><p>ಸುಖ ಮನಸ್ಸಿಗೆ ಸಂಬಂಧಿಸಿದ್ದಾದರೂ, ಅದರ ಮೂಲ ಹೃದಯದಲ್ಲಿದೆ ಎನ್ನಬಹುದೇ? ಸುಖದ ನಿರೀಕ್ಷೆ ಒಂದು ರೀತಿಯಲ್ಲಿ ತಪ್ಪು. ಮುಂದಿನ ಸುಖದ ಕ್ಷಣ ಹೀಗೇ ಇದ್ದೀತು ಎಂದು ಮೊದಲೇ ಊಹಿಸಿಕೊಳ್ಳುವುದಾದರೂ ಹೇಗೆ? ಸುಖ-ಸಂತೋಷದ ವಿಷಯಕ್ಕೆ ಬಂದಾಗ ಬಡವ-ಬಲ್ಲಿದನೆಂಬ ಬೇಧ-ಭಾವ ಏನಾದರೂ ಇರಬಹುದೇ? ಅತಿ ಶ್ರೀಮಂತರಿಗೆ ಹೆಚ್ಚಿನ ಸಂತೋಷ ಸಿಗುವುದು ನಿಜವೇ? ಹಾಗಿಲ್ಲವಾದರೆ, ಜನ ತಮ್ಮ ಹಂಗುಗಳನ್ನು ತೊರೆದು ಸದಾಕಾಲ ಶ್ರೀಮಂತರಾಗುವ, ಇನ್ನೂ ಹೆಚ್ಚು ಹೆಚ್ಚು ಸಂಪಾದಿಸಿ, ಕೂಡಿಡುವ ಕನಸನ್ನು ಕಾಣುವುದಾದರೂ ಏಕೆ? ಬಡವರ ಸಂತೋಷಗಳಿಗೂ, ಉಳ್ಳವರ ಸಂತೋಷಗಳಿಗೂ ಏನು ವ್ಯತ್ಯಾಸ? ಸುಖ ಎನ್ನುವುದು ನಮ್ಮೊಳಗಿದೆಯೋ, ನಮ್ಮ ಹೊರಗಿದೆಯೋ? ಸುಖ ಎನ್ನುವುದು ವ್ಯಕ್ತಿಗತವೋ, ಅಥವಾ ಒಂದು ನೆರೆಹೊರೆಗೆ ಸಂಬಂಧಿಸಿದ ವಿಷಯವೋ? ಸುಖವನ್ನು ಅಳೆಯುವುದಾದರೂ ಹೇಗೆ? ಇಂತಿಷ್ಟು ದಿನ ಈ ಕೆಲಸವನ್ನು ಮಾಡಿದರೆ ಇಂತಿಷ್ಟು ಸುಖ ಎಂಬ ನಿಯಮವೇನಾದರೂ ಇದೆಯೇ?</p><p><br /></p><p>***</p><p>ಬೆಂಗಳೂರಿನಿಂದ ನೆಲಮಂಗಲದ ಕಡೆಗೆ ಹೋಗುವ ದಾರಿಯಲ್ಲಿ, ಬೆಂಗಳೂರು ನಗರ ಮುಗಿಯುವ ಸರಹದ್ದಿನಲ್ಲಿ ಅದೆಷ್ಟೋ ನಿರ್ಗತಿಕ ಕುಟುಂಬಗಳು ಬಯಲುಗಳಲ್ಲಿ ಗುಡಿಸಲು ಅಲ್ಲದ ಡೇರೆಗಳಲ್ಲಿ ಬದುಕುವುದನ್ನು ನೋಡಬಹುದು. ಇಲ್ಲಿ ಬದುಕುವ ಕುಟುಂಬದ ಸದಸ್ಯರುಗಳಿಗೆ ಆಯಾ ಹಂಗಾಮಿ ವಸತಿ ಸೌಕರ್ಯವೇ ಸುಖವನ್ನು ತಂದುಕೊಟ್ಟೀತು. ಹಾಗಂತ, ಲೀಲಾ ಪ್ಯಾಲೇಸಿನಲ್ಲಿ ದಿನದ ಬಾಡಿಗೆಯಾಗಿ ಲಕ್ಷಾಂತರ ರುಪಾಯಿಯನ್ನು ಸುರಿವ ಶ್ರೀಮಂತರಿಗೆ ಸುಖವಿಲ್ಲ ಎಂದು ಹೇಳಲಾಗದು. ಹಾಗಿದ್ದ ಮೇಲೆ, ಸುಖ ಎನ್ನುವುದು ಅವರವರ ಮಾನಸಿಕ, ಸಾಮಾಜಿಕ, ಶಾರೀರಿಕ ಮೌಲ್ಯಗಳ ಮೇಲೆ ನಿಂತಿದೆ ಎನ್ನಬಹುದೇ? ಬಯಲಿನ ಗುಡಿಸಲಲ್ಲಿರುವ ವ್ಯಕ್ತಿಯ ಸೌಕರ್ಯಗಳನ್ನು ಲೀಲಾ ಪ್ಯಾಲೇಸಿನಲ್ಲಿರುವ ವ್ಯಕ್ತಿಯ ಸೌಕರ್ಯಕ್ಕೆ ಅದಲು ಬದಲು ಮಾಡಿದಾಗ ಇಬ್ಬರಿಗೂ ಅವರವರ ಸುಖ ದೂರವಾಗಬಹುದು. ಅದೇ ಪ್ರಪಂಚದಲ್ಲಿ ಒಂದಿಷ್ಟು ದಿನ ಇರಲಾಗಿ ಪ್ರತಿಯೊಬ್ಬನೂ ಅದಕ್ಕೆ ಹೊಂದಿಕೊಂಡು ಹೋಗಬಹುದು.</p><p><br /></p><p>ಗಾಜ಼ಾ ಗಡಿಯಲ್ಲಿ ನಡೆದ ಯುದ್ಧದಿಂದಾಗಿ ಅದೆಷ್ಟೋ ಕುಟುಂಬಗಳು ರಾತ್ರೋರಾತ್ರಿ ತಮ್ಮ ತಮ್ಮ ನೆರೆಹೊರೆಯನ್ನು ಬಿಟ್ಟು ಕದಲಬೇಕಾದಾಗ, ಅವರವರ ಸುಖ-ಸಂಭ್ರಮಗಳು ಸಂಘರ್ಷದಲ್ಲಿ ಕೊಚ್ಚಿಹೋದವು. ಒಂದು ವಟಾರದಿಂದ ಮತ್ತೊಂದು ಪ್ರದೇಶಕ್ಕೆ ವಲಸೆ ಬಂದ ಕುಟುಂಬಗಳು ಕೇವಲ ನಿರ್ಗತಿಕರಾಗಷ್ಟೇ ಅಲ್ಲ, ಅವರ ನೆಲೆಯನ್ನು ಕಳೆದುಕೊಂಡರೂ ಕೂಡ. ಆದರೆ, ಹೊಸ ಪ್ರದೇಶದಲ್ಲಿ ಆಟವಾಡುತ್ತಿದ್ದ ಮಕ್ಕಳು ತಮ್ಮ ಆಟದ ಸುಖವನ್ನು ಅನುಭವಿಸುವುದರಲ್ಲಿ ನಿರತರಾದಂತೆ ತೋರಿತು. ಸುಖದ ಪರಿಭ್ರಮೆಗೆ ನಾವೊಂದು ಪರಿಧಿಯನ್ನು ಹಾಕಿಕೊಂಡಿರುತ್ತೇವೆ. ಕೊನೆಮೊದಲಿಲ್ಲದ ಆ ಪರಿಧಿ, ಒಂದೇ ಒಂದು ಸಂಘರ್ಷದ ಸಂಕಟಕ್ಕೆ ಚೂರುಚೂರಾಗಿ ಹೋಗುವುದಾದರೆ, ಮನುಕುಲ ಸಂಘರ್ಷವನ್ನು ಹುಟ್ಟುಹಾಕುವುದಾದರೂ ಏಕೆ ಎನಿಸೊಲ್ಲವೇ? ಇಂದಿನ ತಲೆಮಾರಿನ ಜೊತೆಜೊತೆಗೆ ಇನ್ನೆರೆಡು ತಲೆಮಾರುಗಳು ಅನುಭವಿಸಿ ತಮ್ಮದೆಲ್ಲವನ್ನೂ ಕಳೆದುಕೊಳ್ಳುವ ಈ ಸಂಘರ್ಷದ ಫಲಿತಾಂಶವಾದರೂ ಏನು? ಕೈಯಲ್ಲಿ ಬಂದೂಕು ಹಿಡಿದು ಹೋರಾಡುವ (ಉಗ್ರ) ತರುಣರಿಗೆ ಈ ಸರಳ ಸಂದೇಶವೇಕೆ ಅರ್ಥವಾಗುವುದಿಲ್ಲ? ಹುಟ್ಟಿ-ಸಾಯುವ ಹಲವು ವರ್ಷಗಳಲ್ಲಿ ಹೀಗೆ ಬಂದು ಹಾಗೆ ಹೋಗುವ ನಾಲ್ಕು ಅವಸ್ಥೆಗಳಲ್ಲಿ ನಾವು ಏನನ್ನಾದರೂ ಬದಲಾಯಿಸುತ್ತೇವೆ ಎಂದುಕೊಳ್ಳುವುದೇ ತಪ್ಪಲ್ಲವೇನು? ಅಕಸ್ಮಾತ್ ಬದಲಾವಣೆಯೇ ಆಗುವುದು ಎಂದಾದಲ್ಲಿ, What difference does it make? ಎಂದು ಕೇಳಬೇಕೆನಿಸುತ್ತದೆ.</p><p><br /></p><p>ಸೂರ್ಯನು ಮುಳುಗದ ಸಾಮ್ರಾಜ್ಯವಾಗಿ ಇಂಗ್ಲೀಷ್ ಸಾಮ್ರಾಜ್ಯ ಬೆಳೆಯಿತು ಮತ್ತೆ ಕಳೆದುಹೋಯಿತು. ತಮ್ಮದೇ ಆದ ತಂತ್ರವನ್ನು ಜಗದೆಲ್ಲೆಡೆ ಸಾರುತ್ತೇವೆಂದು ಮಾವೋವಾದಿಗಳು, ಸಮತಾವಾದಿಗಳು ಹೋರಾಡುತ್ತಲೇ ಪ್ರಾಣಬಿಟ್ಟರು. ತಮ್ಮದೇ ಮತ ದೊಡ್ಡದು, ತಮ್ಮ ಧರ್ಮವೇ ನಿಜವಾದ ವಿಶ್ವ ಧರ್ಮವೆಂದು ಎಂದೋ ಘಟಿಸಿ ಆಗಿ ಹೋದ ಪ್ರವಾದಿಗಳ ಹೆಸರಿನಲ್ಲಿ ಕಾಡು-ಮೇಡು, ಗುಡ್ಡ-ಬೆಟ್ಟ, ನದಿ-ದ್ವೀಪಗಳನ್ನೆಲ್ಲ ಗುಡ್ಡೆ ಹಾಕಿ ತಮ್ಮ ಮತವನ್ನು ಸ್ಠಾಪಿಸಿಕೊಂಡರು, So what? ಯೂರೋಪಿನ ಸ್ಪೇನ್ ದೇಶದ ಮೂಲೆಯಲ್ಲಿ ಒಂದು ಕರ್ಚೀಫ಼ಿನ ಅಗಲದಷ್ಟು ಹರಡಿಕೊಂಡು ತನ್ನ ಅಸ್ತಿತ್ವವನ್ನೇ ಇನ್ನೂ ಸರಿಯಾಗಿ ಕಂಡುಕೊಳ್ಳದ ಪೋರ್ಚುಗೀಸರು ದೂರದ ದಕ್ಷಿಣ ಅಮೇರಿಕದ ಅರ್ಧ ಭಾಗದಷ್ಟು ದೊಡ್ಡದಾದ ಬ್ರೆಜಿಲ್ ದೇಶದ ಮೇಲೆ ತಮ್ಮ ಭಾಷೆ ಮತ್ತು ಸಂಸ್ಕೃತಿಯ ದಬ್ಬಾಳಿಕೆಯನ್ನು ಹೇರಲೇಬೇಕಿತ್ತೇನು? ಹಾಗಿಲ್ಲದಿದ್ದರೆ ಅವರೇನು ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಸಾಯುತ್ತಿದ್ದರೇನು? ಈ ಮಾನವನ ಕ್ಷುಲ್ಲಕ ತಂತ್ರಗಳನ್ನು ಒಂದೇ ಒಂದು ಮಾತಿನಲ್ಲಿ ಹೇಳುವುದಾದರೆ, ಹುಟ್ಟಿ ಹೋರಾಡುತ್ತಲೇ ಹತನಾಗುವ ಹುಲುಮಾನವನಿಗೆ ಸುಖವೆನ್ನುವ ಅದ್ಯಾವ ಮರೀಚಿಕೆಯ ಹಂಬಲವಿದ್ದಿರಬಹುದು?</p><p><br /></p><p>ತನ್ನ ಸುಖದ ಚೌಕಟ್ಟಿಗೆ ಒಳಪಡದಿರುವುದು ಅಸುಖ ಎಂದುಕೊಳ್ಳುವುದೇ ತಪ್ಪು. ಚೀನಾ ದೇಶದ ಜನರಿಗೆ ಹಾವು-ಹಲ್ಲಿ-ಸರೀಸೃಪಗಳನ್ನು ತಿಂದು ತೇಗುವ ಬಯಕೆ, ಅವರು ಮಾಡಿಕೊಳ್ಳಲಿ. ದೂರದ ಆಸ್ಟ್ರೇಲಿಯ ದೇಶವಾಸಿಗಳು ಕಾಂಗರೂ ಪ್ರಾಣಿಯನ್ನು ತಿಂದು ಆನಂದಿಸಲಿ, ಅದು ಅವರ ಪರಿಸರ ಕೊಟ್ಟ ಬಳುವಳಿ. ಇನ್ನೆಲ್ಲೋ ಮೆಕ್ಸಿಕೋ ದೇಶದಲ್ಲಿ ಕೆಲವರು ಜಿರಲೆಗಳನ್ನು ತಿಂಡಿಯಾಗಿ ತಿನ್ನಲಿ. ಮಂಗೋಲಿಯಾ, ಕಜಾಕ್ಸ್ತಾನ್ದವರು ಕುದುರೆ ಮಾಂಸವನ್ನು ತಿನ್ನವಂತೆ, ತೈವಾನ್-ವಿಯೆಟ್ನಾಮ್ ದೇಶವಾಸಿಗಳು ನಾಯಿ-ಬೆಕ್ಕುಗಳನ್ನು ತಿನ್ನಲಿ - ಅದರಲ್ಲಿ ಅವರವರ ಸಂತೋಷ ಆಯಾ ದೇಶವಾಸಿಗಳ ಅಗತ್ಯ-ಅನುಕೂಲಗಳನ್ನು ಹೊಂದಿಕೊಂಡಿದೆ. ಇದನ್ನೇ ದೊಡ್ಡ ಕಾನೂನನ್ನಾಗಿ ಮಾಡಿ ಎಲ್ಲರೂ ನಮ್ಮ ಪಾಕಶಾಸ್ತ್ರವನ್ನೇ ಬಳಸಿ, ನಮ್ಮ ಅಡುಗೆಯ ವಿಧಾನವೇ ವಿಶೇಷವಾದುದು ಎಂದು ತಮಟೆ ಸಾರಿಸಿಕೊಂಡರೆ? ಒಂದು ಹೆಜ್ಜೆ ಮುಂದೆ ಹೋಗಿ ಅದನ್ನೇ ಇನ್ನೊಬ್ಬರ ಮೇಲೆ ಹೇರಿಬಿಟ್ಟರೆ? ಭೂಮಿಯ ಸಮಭಾಜಕ ವೃತ್ತದ ಆಸುಪಾಸಿನಲ್ಲಿ ದಿನವಿಡೀ ಉರಿಬಿಸಿಲಿನಲ್ಲಿ ಬದುಕುವವರಿಗೂ ಉತ್ತರ-ದಕ್ಷಿಣ ಧೃವ ಪ್ರದೇಶಗಳ ಹತ್ತಿರ ಬದುಕುವ ಜನರ ಆಗು-ಹೋಗು, ಆಚಾರ-ವಿಚಾರ, ಉಡುಗೆ-ತೊಡುಗೆ, ಊಟ-ವಿಶೇಷಗಳಲ್ಲಿ ವ್ಯತ್ಯಾಸಗಳಿರುವುದು ಸಹಜವೇ. ಸಮುದ್ರಕ್ಕೆ ಹತ್ತಿರವಾದವನಿಗೆ ನದೀ ಮೂಲವನ್ನು ಅರಸಿ ಹೋಗುವ ಅಗತ್ಯವಿಲ್ಲ, ನೀರು- ನದಿಗಳು ಅವನಿದ್ದಲ್ಲೇ ಬರುವುದು ಸಹಜ. ಅಂತೆಯೇ, ಗುಡ್ಡ-ಗವಿಗಳಲ್ಲಿ ಬದುಕುವ ಮಾನವನಿಗೆ, ಮಿತವಾಗಿ ದೊರಕುವ ನೀರೊಂದು ಅಗತ್ಯದ ವಸ್ತುವಷ್ಟೇ. ಹಾಗಾಗಿ ಸುಖ-ಸಮೃದ್ಧಿ ಎನ್ನುವುದು ಅವರವರ ಸ್ಥಳವನ್ನು ಅವಲಂಬಿಸಿದೆ ಎಂದಾಯ್ತು!</p><p><br /></p><p>***</p><p>ಸುಖವೆನ್ನುವ ಪರಮಾರ್ಥವನ್ನು ಅರಸಿಕೊಂಡು ಹೋಗಬೇಕಾದ ಅಗತ್ಯ ಯಾರಿಗೂ ಇಲ್ಲ. ತನ್ನೊಳಗೆ ಮತ್ತು ಹೊರಗೆ ಸಿಗುವ ಆ ಸುಖಮಯ ಕ್ಷಣಗಳನ್ನು ಅನುಭವಿಸುವ ರಸಾನುಭೂತಿಯನ್ನು ಅರ್ಥಮಾಡಿಕೊಳ್ಳಬೇಕಷ್ಟೇ. ಹೇರಳವಾದ ಕತ್ತಲಿದ್ದಲ್ಲಿ ಒಂದು ಚಿಕ್ಕ ಹಣತೆ ತನ್ನ ಪ್ರಕಾಶವನ್ನು ಚೆಲ್ಲುವ ಹಾಗೆ, ಕತ್ತಲಿನಿಂದ ಕತ್ತಲಿಗೆ ಸೇರುವ ಈ ಬದುಕು ಅಂತಹ ಹಣತೆಗಳ ಬೆಳಕನ್ನು ನಂಬಬೇಕಾಗುವುದು ತಾರ್ಕಿಕವಾದದ್ದು. ಸುಖವನ್ನು ಹುಡುಕದೇ ತನ್ನೊಳಗೆ ಹುದುಗಿದ ಭಾವನೆಗಳನ್ನು ಜಾಲಾಡುತ್ತಾ ಹೋದ ಹಾಗೆ ಸುಖ ಕಾಣುವುದು ಖಂಡಿತ, ಎನ್ನುವುದು ಈ ಹೊತ್ತಿನ ತತ್ವ!</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-41160647590562983922022-02-25T10:17:00.001-05:002022-04-10T19:01:51.845-04:00 ಕಾಡುವ ಹಾಡು: ಕಾಣದ ಕಡಲಿಗೆ<p><b>ಹಾಡು: ಕಾಣದ ಕಡಲಿಗೆ</b></p><p><b>ಕವಿ: ಜಿ. ಎಸ್. ಶಿವರುದ್ರಪ್ಪ, ಚೆಲುವು-ಒಲವು ಕವನ ಸಂಕಲನ (1951-52)</b></p><p><b>ಕವನದ ಶೀರ್ಷಿಕೆ: ತೊರೆಯ ಹಂಬಲ</b></p><p><b>ಗಾಯನ ಮತ್ತು ಸಂಗೀತ ಸಂಯೋಜನೆ: ಸಿ. ಅಶ್ವಥ್</b></p><p><span style="font-size: x-large;">ಈ ಹಾಡು</span> ಕನ್ನಡಿಗರಿಗೆ ಬಹಳ ವಿಶೇಷವಾದ ಮೆಲೋಡಿಗಳಲ್ಲೊಂದು. ಭಾವಗೀತೆಗಳ ಯಾದಿಯಲ್ಲಿ ಒಂದು ರೀತಿಯ ತನ್ಮಯತೆ ಮತ್ತು ತನ್ನದೇ ಆದ ಗಾಢತೆಯನ್ನು ಒಳಗೊಂಡಿರುವ ಈ ಕವನವನ್ನು ಸಿ. ಅಶ್ವಥ್ ಅವರು ಮನೋಜ್ಞವಾಗಿ ಹಾಡಿದ್ದಾರೆ. ಹಾಡಿನುದ್ದಕ್ಕೂ ಬಳಸಿರುವ ಇನ್ಸ್ಟ್ರುಮೆಂಟ್ಗಳು ಒಂದಕ್ಕಿಂದ ಒಂದರಂತೆ ತಮ್ಮ ಕರ್ತವ್ಯವನ್ನು ನಿಭಾಯಿಸಿ ಕೇಳುಗರ ಮನಸ್ಸನ್ನ ಸೂರೆಗೊಂಡಿರುವುದರಲ್ಲಿ ಯಾವ ಆಶ್ಚರ್ಯವೂ ಇಲ್ಲ!</p><p>ಹಾಡಿನ ಉದ್ದಕ್ಕೂ "ಕಾಣದ ಕಡಲಿನ" ಮಹತ್ವವನ್ನು first person ಉದ್ದೇಶದಲ್ಲಿ ವಿವರಿಸಿರುವುದರಿಂದ ಈ ಹಾಡಿನ ಮೂಲ ವ್ಯಕ್ತಿಯನ್ನಾಗಿ ನಾವು "ತೊರೆ" ಯನ್ನು ಕಾಣಬಹುದು. ಕಡಲಿನ ಒಂದು ಭಾಗವಾಗಿ ಕಡಲನ್ನು ಸೇರುವ ತವಕದಲ್ಲಿರುವ ಈ ಮಹಾ ಹಂಬಲದ ಸೂಕ್ಷ್ಮ "ನೀರಿಗೆ" ಅಲ್ಲದೇ ಮತ್ತಿನ್ಯಾರಿಗೆ ಬರಬೇಕು. ಈ ಲೇಖನದ ಉದ್ದಕ್ಕೂ "ತೊರೆ" ಅನ್ನು ಕುರಿತೇ ಮಾತನಾಡೋಣ.</p><p>***</p><p>ಒಂದು ರೀತಿ ಪಂಚಮಿ ಹಬ್ಬದ ಜೋಕಾಲಿಯಂತೆ ತೂಗುವ ಕೊಳಲಿನ ಗಾನದೊಂದಿಗೆ ಆರಂಭವಾಗುವ ಈ ಹಾಡಿಗೆ, ಕೇವಲ ಹತ್ತು ಸೆಂಕೆಂಡುಗಳಲ್ಲಿ ನೂರು ವಯಲಿನ್ಗಳು ತಮ್ಮ ಮೊರೆತವನ್ನು ಪ್ರಚುರ ಪಡಿಸುವುದರ ಮೂಲಕ ತಮ್ಮ ಇರುವಿಕೆಯನ್ನು ತೋರ್ಪಡಿಸುವುದರ ಜೊತೆಗೆ ಜರಡಿಯಲ್ಲಿ ಜೊಳ್ಳನ್ನು ಕೆಳಗೆ ತೂರಿ ಕೇವಲ ಗಟ್ಟಿಯಾದುದನ್ನು ಮಾತ್ರ ಮೇಲೆ ಇರಿಸಿಕೊಳ್ಳುವ ಹಾಗೆ ನಮ್ಮ ಮನಸ್ಸನ್ನು ಮುಂದಿನ ಸವಾಲಿಗೆ ತಯಾರು ಮಾಡಲು ಪ್ರಯತ್ನಿಸುತ್ತವೆ. ಈ ಹತ್ತು ಸೆಕೆಂಡುಗಳ ವಯಲಿನ್ ಸಹವಾಸದ ನಂತರ ಮತ್ತೆ ಸಮಾಧಾನದ ದನಿಯಲ್ಲಿ ಕೊಳಲು ಪ್ರತ್ಯಕ್ಷವಾಗುತ್ತಿದ್ದಂತೆ ಹಾಡು ಆರಂಭವಾಗುತ್ತದೆ.</p><p><span style="color: #274e13;"><b>ಕಾಣದ ಕಡಲಿಗೆ ಹಂಬಲಿಸಿದೆ ಮನ</b></span></p><p><span style="color: #274e13;"><b>ಕಾಣದ ಕಡಲಿಗೆ ಹಂಬಲಿಸಿದೆ ಮನ</b></span></p><p><span style="color: #274e13;"><b>ಕಾಣದ ಕಡಲಿಗೆ ಹಂಬಲಿಸಿದೆ ಮನ</b></span></p><p><span style="color: #274e13;"><b>ಕಾಣಬಲ್ಲೆನೆ ಒಂದು ದಿನ </b></span></p><p><span style="color: #274e13;"><b>ಕಡಲನು ಕೂಡಬಲ್ಲೆನೆ ಒಂದು ದಿನ</b></span></p><p><span style="color: #274e13;"><b>ಕಾಣಬಲ್ಲೆನೆ ಒಂದು ದಿನ</b></span></p><p><span style="color: #274e13;"><b>ಕಡಲನು ಕೂಡಬಲ್ಲೆನೆ ಒಂದು ದಿನ </b></span></p><p><span style="color: #274e13;"><b>ಕಾಣದ ಕಡಲಿಗೆ ಹಂಬಲಿಸಿದೆ ಮನ ||</b></span></p><p>ಅಶ್ವಥ್ ಅವರ ಧ್ವನಿ ಎಂದಿಗಿಂತಲೂ ಗಂಭೀರವಾಗಿ, ಕಾಣದ ಕಡಲನ್ನು ಒತ್ತರಿಸಿ ಹೇಳುವಾಗ, ಅವರ ಹಾಡಿನ ಭಾವದಲ್ಲಿ ಇದು ಯಾರು ಹಾಕಿರಬಹುದಾದ ಪ್ರಶ್ನೆ ಎನ್ನುವುದು ವ್ಯಕ್ತವಾಗುತ್ತದೆ. ಕಡಲನ್ನು ಕೂಡಬಹುದಾದ "ನೀರು" ಅಥವಾ ನೀರಿನ ವಿಶೇಷ ರೂಪ ಈ ಪ್ರಶ್ನೆಗಳನ್ನು ಕೇಳುತ್ತಿದೆ ಎಂದು ಮೇಲ್ಮೈಯಲ್ಲಿ ಅಭಿವ್ಯಕ್ತಗೊಳ್ಳುತ್ತದೆ. ಆದರೆ, ಆಂತರ್ಯದಲ್ಲಿ ಒಂದು ರೀತಿಯ ಗಾಢವಾದ ಏಕತಾನತೆ, ಜೊತೆಗೆ ಆಂತರ್ಯವನ್ನು ಕಲಕುವ ದುಃಖದ ಅರಿವೂ ಎದುರುಗೊಳ್ಳುತ್ತದೆ.</p><p>ಪಲ್ಲವಿ ಮುಗಿಯುತ್ತಿದ್ದ ಹಾಗೆ ನಮ್ಮ ಕೆಲಸ ಈಗಷ್ಟೇ ಶುರುವಾಗಿದೆ, ಎಂದು ಮತ್ತೆ ವಯಲಿನ್ಗಳು ಮೊರೆಯಿಟ್ಟು ಶಾಂತವಾದ ವೇಣುವಾದನವನ್ನು ಬದಿಗೊತ್ತುತ್ತವೆ. ಒಂದು ಶಾಂತವಾದ ವೇಣುವಾದನವನ್ನು ಸಂಬಾಳಿಸಲು ಅದೆಷ್ಟು ವಯಲಿನ್ಗಳು ಸಾಂಗತ್ಯದಲ್ಲಿ ದುಡಿಯಬೇಕು ನೋಡಿ! ಹೀಗೆ ಕೊಳಲು ಸಮಾಧಾನ ಪಡಿಸುವ ವಯಲಿನ್ಗಳ ಮೊರೆತಕ್ಕೆ ಮುಂದೆ ವೀಣಾವಾದನವು ಸೇರಿಕೊಳ್ಳುವ ಹೊತ್ತಿನಲ್ಲಿ, ಅಂತರಂಗದ ಪ್ರಶ್ನೆಗಳನ್ನು ಬಾಹಿರ ಪಡಿಸಿದ "ತೊರೆ" ತನ್ನನ್ನು ತಾನೇ ಸಮಾಧಾನ ಪಡಿಸಿಕೊಳ್ಳಲು ಪ್ರಯತ್ನಿಸುತ್ತದೆ.</p><p>ಕಾಣದ ಕಡಲಿನ ಮೊರೆತ ಒಂದು ಜೋಗುಳವಾಗಬಲ್ಲದೇ? ಇಲ್ಲಿ ಕಡಲಿಗೆ ಮೊರೆತವಿರುವುದನ್ನು ಎಷ್ಟು ದೃಷ್ಟೀಕರಣ ಮಾಡಲಾಗಿದೆಯೋ ಅಷ್ಟೇ ವಿಶೇಷವಾಗಿ "ನೀರಿನ" ಭಾವನೆಯನ್ನು ಒಂದು ಮಗುವಿನ ಮುಗ್ಧತೆಗೆ ಹೋಲಿಸಲಾಗಿದೆ. ಈ ಜೋಗುಳ "ತೊರೆಯ" ಕಲ್ಪನೆಯಾದರೂ ಅದು ಅದರ ನೇರ ಕಿವಿಗೆ ಬಿದ್ದಿರದೆ ಒಳಗಿವಿಗೆ ಕೇಳುತ್ತಿರುವುದು ವಿಶೇಷ. ಇಂತಹ ವಿಶೇಷ ಕಲ್ಪನೆಗಳನ್ನು ಹೆಣೆಯಬಲ್ಲ "ತೊರೆ" ತನ್ನ ಕಲ್ಪನೆಯು ಕಡಲನ್ನು ಚಿತ್ರಿಸಿ, ಚಿಂತಿಸಿ ಸುಯ್ಯುತಿರುವುದರ ಬಗ್ಗೆಯೂ ಆಲೋಚಿಸಿಸುವುದನ್ನು ನಾವು ಕಾಣಬಹುದು. (ಸುಯ್ಯುವುದು = ಉಸಿರಾಡುವ, ನಿಟ್ಟುಸಿರಿಡುವ, air of breath, sigh).</p><p><b><span style="color: #274e13;">ಕಾಣದ ಕಡಲಿನ ಮೊರೆತದ ಜೋಗುಳ </span></b></p><p><b><span style="color: #274e13;">ಒಳಗಿವಿಗಿಂದು ಕೇಳುತಿದೆ </span></b></p><p><b><span style="color: #274e13;">ಕಾಣದ ಕಡಲಿನ ಮೊರೆತದ ಜೋಗುಳ </span></b></p><p><b><span style="color: #274e13;">ಒಳಗಿವಿಗಿಂದು ಕೇಳುತಿದೆ </span></b></p><p><b><span style="color: #274e13;">ನನ್ನ ಕಲ್ಪನೆಯು ತನ್ನ ಕಡಲನೆ </span></b></p><p><b><span style="color: #274e13;">ಚಿತ್ರಿಸಿ ಚಿಂತಿಸಿ ಸುಯ್ಯುತಿದೆ </span></b></p><p>"ತೊರೆ"ಯ ಸ್ಯುಯ್ಯುತ್ತಿರುವ ಕಲ್ಪನೆಯ ಕಡಲು - ಹೀಗಿರಬಹುದು, ಹಾಗಿರಬಹುದು ಎಂದು ಊಹಿಸಿಕೊಳ್ಳುತ್ತಲೇ, ಅದು ಎಲ್ಲಿರುವುದೋ, ಎಂತಿರುವುದೋ ಎಂದು ಆಶ್ಚರ್ಯವನ್ನು ಹೊರಹಾಕುತ್ತಾ ಮತ್ತೆ ಮೊದಲಿನ ಪ್ರಶ್ನೆಗಳಾದ "ಕಾಣಬಲ್ಲೆನೆ, ಕೂಡಬಲ್ಲೆನೆ ಒಂದು ದಿನ?!" ಎಂದು ತನ್ನ ಹಂಬಲಿಕೆಯನ್ನು ಮುಂದುವರೆಸುತ್ತದೆ.</p><p><b style="color: #274e13;">ಎಲ್ಲಿರುವುದೋ ಅದು ಎಂತಿರುವುದೋ ಅದು </b></p><p><span style="color: #274e13;"><b>ನೋಡಬಲ್ಲೆನೆ ಒಂದು ದಿನ </b></span></p><p><span style="color: #274e13;"><b>ಕಡಲನು ಕೂಡಬಲ್ಲೆನೆ ಒಂದು ದಿನ ॥೧॥</b></span></p><p><span style="color: #274e13;"><b>ಕಾಣದ ಕಡಲಿಗೆ ಹಂಬಲಿಸಿದೆ ಮನ.</b></span></p><p>ಈ ಮೇಲಿನ ಪ್ಯಾರಾದ ಉದ್ದಕ್ಕೂ ಕೇವಲ ಹಿನ್ನೆಲೆಯಲ್ಲಿ ತೊಟ್ಟಿಲನ್ನು ತೂಗಿ ಮಗುವನ್ನು ನಿದ್ರೆ ಮಾಡಿಸುವ ತಾಯಿಯ ಸೂಕ್ಷ್ಮ ಕೋಮಲತೆಯ ಸಂಗೀತವಾಗಿದ್ದ ವಯಲಿನ್ಗಳು, ಮತ್ತೆ ಜೀವ ತಳೆದು ಮೇಲಿನ ಕಲ್ಪನೆಗಳಿಗೆ, ಊಹಾಪೋಹಗಳಿಗೆ ದನಿಯಾಗುವ ಹಾಗೆ ಒಂದು ಗಂಭೀರತೆಯನ್ನು ತಂದುಕೊಡುತ್ತವೆ. ಇನ್ನೇನು ಕೊಳಲು ತನ್ನನ್ನು ಈ ಗೊಂದಲದಲ್ಲಿ ತನ್ನನ್ನು ಎಲ್ಲೋ ಕಳೆದುಕೊಂಡು ಬಿಟ್ಟಿತಲ್ಲವೇ ಎಂದು ಯೋಚಿಸುತ್ತಿದ್ದ ಹಾಗೆ, ಸಮಾಧಾನದ ಕೊಳಲು ತುಸು ಉನ್ಮತ್ತತೆಯಿಂದ ತನ್ನ ಇರುವನ್ನು ಪ್ರಕಟಿಸುತ್ತದೆ.</p><p>ಇಲ್ಲಿಂದ ಮುಂದೆ, ಮೊದಲಿನ ತವಕ, ಉನ್ಮಾದವಾಗಿ ಪ್ರಕಟಗೊಳ್ಳುತ್ತಾ ಅನೇಕ ಕಡಲಿನ ರೂಪಕಗಳನ್ನು ಮನಸ್ಸಿಗೆ ತಂದುಕೊಳ್ಳುತ್ತದೆ. ಸಾವಿರ ಹೊಳೆಗಳು ತುಂಬಿ ಹರಿದರೂ ಅದು ಒಂದೇ ಸಮನಾಗಿರುವುದಾದರೂ ಹೇಗೆ? ಸುನೀಲವಾದ, ವಿಸ್ತಾರವಾದ, ತರಂಗಗಳಿಂದ ಶೂಭಿತಗೊಂಡ ಗಂಭೀರವಾಗಿರುವ ಅಂಬುಧಿ! ಮುನ್ನೀರಂತೆ, ಅಪಾರವಂತೆ.... ಹೀಗೆ ಅನೇಕ ರೂಪಕಗಳು ಮನದಲ್ಲಿ ಮೂಡುತ್ತಾ ಹೋಗುವುದರ ಜೊತೆಜೊತೆಗೆ ಮತ್ತೆ ಅವೇ ಪ್ರಶ್ನೆಗಳು ಎದುರಾಗುತ್ತವೆ. ಈ ವರೆಗೆ, ಕಾಣಬಲ್ಲೆನೆ ಒಂದು ದಿನ ಎಂದು ಯಾವ ಗರ್ವವಿಲ್ಲದೇ, ವಿನಮ್ರವಾಗಿ ಕೇಳುತ್ತಿದ್ದ ಪ್ರಶ್ನೆಗಳು ಸ್ವಲ್ಪ ಮುಂದೆ ಹೋಗಿ ಬಹಳ ವಿಸ್ತಾರವಾಗಿರುವ ಗಂಭೀರವಾಗಿರುವುದನ್ನು ಚಿತ್ರಿಸಿಕೊಂಡು ಒಂದು ರೂಪಕೊಟ್ಟುಕೊಳ್ಳುವುದರ ಜೊತೆಗೆ "ಅದರೊಳು ಕರಗಲಾರೆನೆ ಒಂದು ದಿನ!" ಎನ್ನುವ ಮಟ್ಟಿಗೆ, ನಾವು ಮೊದಲೇ ಊಹಿಸಿದಂತೆ ಇದು ನೀರಿನದೇ ಪ್ರಶ್ನೆ ಎಂದು ನಿಶ್ಚಿತವಾಗುತ್ತದೆ.</p><p><b><span style="color: #274e13;">ಸಾವಿರ ಹೊಳೆಗಳು ತುಂಬಿ ಹರಿದರೂ </span></b></p><p><b><span style="color: #274e13;">ಒಂದೇ ಸಮನಾಗಿಹುದಂತೆ</span></b></p><p><b><span style="color: #274e13;">ಸಾವಿರ ಹೊಳೆಗಳು ತುಂಬಿ ಹರಿದರೂ </span></b></p><p><b><span style="color: #274e13;">ಒಂದೇ ಸಮನಾಗಿಹುದಂತೆ</span></b></p><p><b><span style="color: #274e13;">ಸುನೀಲ ವಿಸ್ತರ ತರಂಗ ಶೋಭಿತ </span></b></p><p><b><span style="color: #274e13;">ಗಂಭೀರಾಂಬುಧಿ ತಾನಂತೆ </span></b></p><p><b><span style="color: #274e13;">ಮುನ್ನೀರಂತೆ, ಅಪಾರವಂತೆ,</span></b></p><p><b><span style="color: #274e13;">ಕಾಣಬಲ್ಲೆನೆ ಒಂದು ದಿನ </span></b></p><p><b><span style="color: #274e13;">ಅದರೊಳು ಕರಗಲಾರೆನೆ ಒಂದು ದಿನ ॥೨॥</span></b></p><p><b style="color: #274e13;"><br /></b></p><p><b style="color: #274e13;">ಕಾಣದ ಕಡಲಿಗೆ ಹಂಬಲಿಸಿದೆ ಮನ.</b></p><p>ಈ ಪ್ಯಾರಾ ಮುಗಿಯುವಷ್ಟರಲ್ಲಿ, ಮೊರೆಯುವ ವಯಲಿನ್ಗಳು ಒಂದು ರೀತಿಯ ಸಮಾಧಾನವನ್ನು ಮೈವೆತ್ತಿಕೊಂಡು, ಮುಂದಿನ ಮುಂದಿನ ಸಾಲುಗಳಲ್ಲಿ "ತೊರೆಯ" ರೋಧನೆ ಇನ್ನಷ್ಟು ಗಾಢವಾಗುವುದನ್ನು ದುಃಖದ ಜೊತೆಗೆ ಕರುಣಾರಸವನ್ನು ಸ್ಫುರಿಸುವುದರ ಮೂಲಕ ಸೂಕ್ಷ್ಮವಾಗಿ ತಿಳಿಸುತ್ತವೆ. "ನಾನು ಈಗಾಗಲೇ ಹೇಳಿರಲಿಲ್ಲ, ಹೀಗಾಗುತ್ತದೆ ಎಂದು?!" ಎನ್ನುವ ಧ್ವನಿ ವಯಲಿನ್ ನಂತರ ಬರುವ ಕೊಳಲಿನದು.</p><p>ಇಲ್ಲಿ "ಜಟಿಲ ಕಾನನದ ಕುಟಿಲ ಪಥಗಳಲಿ ಹರಿವ ತೊರೆಯು ನಾನು..." ಎಂದಾಗ ಟಟಟಟಟ ಎಂದು ಸಮಯೋಚಿತವಾಗಿ ಕಡ್ಡಿಯ ಬಡಿತ ಕೇಳುತ್ತದೆ. ಎರಡನೇ ಬಾರಿ ಇದೇ ಸಾಲನ್ನು ಹಾಡಿದಾಗ "ನೀನು ಹೇಳುತ್ತಿರುವುದು ಸರಿ..." ಎಂದು ತಲೆದೂಗಿಸಿ ಮಧ್ಯದಲ್ಲಿ ವಯಲಿನ್ಗಳು ಗಾಯಕನ ಧ್ವನಿಯ ಜೊತೆಗೆ ಸಾತ್ ನೀಡುತ್ತವೆ.</p><p>ಇಲ್ಲಿ ಜಟಿಲ ಕಾನನದ ಕುಟಿಲ ಪಥಗಳಲ್ಲಿ ಹರಿಯುವ ದಕ್ಷಿಣ ಭಾರತದ ಯಾವುದೇ ತೊರೆಗಳನ್ನಾದರೂ ನಾವು ಊಹಿಸಿಕೊಳ್ಳಬಹುದು. ಆದರೆ, ಉತ್ತರದ ಗಂಗಾ-ಯಮುನಾ ನದಿಗಳ ಹರಿವು, ಆಳ ಮತ್ತು ವಿಸ್ತಾರಗಳೇ ಬೇರೆ. ನಮ್ಮ ದಕ್ಷಿಣ ಭಾರತದ ನದಿಗಳು ಕಾನನದ ಕುಟಿಲ ಪಥಗಳಲ್ಲಿ ಸಣ್ಣ ತೊರೆಯಾಗಿ ಹರಿಯುವುದನ್ನು ನಾವು ಊಹಿಸಿದ ಹಾಗೆ, ವರ್ಷವಿಡೀ ತುಂಬ ನೀರಿನಿಂದ ಗಂಭೀರವಾಗಿ ಹರಿಯುವ ಗಂಗಾನದಿಯನ್ನು ನೀವು ನೋಡಿರದಿದ್ದರೆ ನಿಮ್ಮ ಊಹೆಗೂ ನಿಲುಕದ ಕಲ್ಪನೆ ಅದು. ಇಲ್ಲಿ "ತೊರೆ"ಯ ವಿನಮ್ರತೆಯ ಜೊತೆಜೊತೆಗೆ ಅದರ ಬಗೆಗಿನ ಸ್ವಾಭಾವಿಕವಾದ ಅರಿವು ಕೂಡ ಸ್ಪಷ್ಠವಾಗುತ್ತದೆ. ಹೀಗಿರುವ ನಾನು, ಹಾಗಾಗಬಲ್ಲೆನೇ? ಎನ್ನುವ ಪ್ರಶ್ನೆ ಈ ಕೆಳಗಿನ ಸಾಲುಗಳಲ್ಲಿ ವಿಶೇಷವಾಗಿ ಮೂಡಿ ಬಂದಿದೆ. ಎಂದಿಗಾದರೂ ನನ್ನ ಗುರಿಯನ್ನು ತಲುಪಬಲ್ಲೆನೇ? ಕಡಲ ನೀಲಿಯೊಳಗೆ ಒಂದಾಗ ಬಲ್ಲೆನೇ? ಅದರೊಳಗೆ ಕರಗಬಹುದೇ? ಎನ್ನುವ ಸೂಕ್ಷ್ಮ ಪ್ರಶ್ನೆಗಳನ್ನು "ನೀರು" ಅಭಿವ್ಯಕ್ತಗೊಳಿಸುತ್ತಾ ಹೋಗುತ್ತದೆ. ಸೇರುವುದು ಮತ್ತು ಕರಗುವುದರಲ್ಲಿ ಬಹಳ ವ್ಯತ್ಯಾಸವಿದೆ. ನೀರಿನಲ್ಲಿ ಉಪ್ಪು ಅಥವಾ ಸಕ್ಕರೆ ಕರಗುತ್ತದೆ, ಆದರೆ ಮರಳು ಸೇರುತ್ತದೆ. ಕಡಲಿನ ಕಣಕಣಗಳಲ್ಲಿ ತನ್ನನ್ನು ತಾನು ಅಡಕಗೊಳಿಸುವಿಕೆಯನ್ನು "ಕರಗುವುದು" ಎಂದು ಕರೆಯುವುದಾದರೆ, ಕಡಲಿರುವಲ್ಲಿ ಹೋಗುವುದನ್ನು "ಸೇರುವುದು" ಎನ್ನಬಹುದು.</p><p><span style="color: #274e13;"><b>ಜಟಿಲ ಕಾನನದ ಕುಟಿಲ ಪಥಗಳಲಿ </b></span></p><p><span style="color: #274e13;"><b>ಹರಿವ ತೊರೆಯು ನಾನು </b></span></p><p><span style="color: #274e13;"><b>ಎಂದಿಗಾದರು, ಎಂದಿಗಾದರು, ಎಂದಿಗಾದರೂ </b></span></p><p><span style="color: #274e13;"><b>ಕಾಣದ ಕಡಲನು ಸೇರಬಲ್ಲೆನೇನು</b></span></p><p><span style="color: #274e13;"><b>ಜಟಿಲ ಕಾನನದ ಕುಟಿಲ ಪಥಗಳಲಿ </b></span></p><p><span style="color: #274e13;"><b>ಹರಿವ ತೊರೆಯು ನಾನು</b></span></p><p><span style="color: #274e13;"><b>ಎಂದಿಗಾದರು ಕಾಣದ ಕಡಲನು ಸೇರಬಲ್ಲೆನೇನು</b></span></p><p><span style="color: #274e13;"><b>ಸೇರಬಹುದೇ ನಾನು, ಕಡಲ ನೀಲಿಯೊಳು ಕರಗಬಹುದೆ ನಾನು </b></span></p><p><span style="color: #274e13;"><b>ಕರಗಬಹುದೆ ನಾನು, ಕರಗಬಹುದೆ ನಾನು ॥೩॥</b></span></p><p>ಕೊನೆಗೆ ಮೂರು ಬಾರಿ "ಕರಗಬಹುದೆ ನಾನು" ಎನ್ನುವುದನ್ನು ಮೂರು ರೀತಿಯ ಭಾವನೆಗಳಲ್ಲಿ ಹಾಡಿರುವುದನ್ನು ನೀವು ಗಮನಿಸಬಹುದು.</p><p>ಈ "ತೊರೆ"ಯ ತುಮುಲವನ್ನು ಕೇಳಿದಾಗ, ತಾನು ಈಗಾಗಲೇ ಆ "ಮಹಾನೀರಿನ" ತಾನೂ ಒಂದು ಭಾಗವಾಗಿದ್ದೇನೆ ಎಂದು ಗೊತ್ತಿಲ್ಲವಲ್ಲ ಎಂದು ಸೋಜಿಗವಾಗುತ್ತದೆ. ಆ ಮಹಾ ನೀರನ್ನು ತಲುಪುವುದೇ ಗುರಿ ಎಂದು ತೋರಿಸಿಕೊಟ್ಟವರು ಯಾರು? ಆ ಮಹಾನೀರಿನ ಕುರಿತ ಕಲ್ಪನೆಗಳು, ರೂಪಕಗಳು ಇದರ ಮನಸ್ಸಿನಲ್ಲಿ ಹೇಗೆ ಹುಟ್ಟಿದವು?</p><p>"ಕಾಣದ ಕಡಲಿಗೆ..." ಹಾಡನ್ನು ನಾವು ಯಾವ ಸಂದರ್ಭದಲ್ಲಿ ಕೇಳಲು ಬಯಸುತ್ತೇವೆ, ಅಥವಾ ಯಾವ ಸಂದರ್ಭದಲ್ಲಿ ಈ ಹಾಡಿನ ಹಿನ್ನೆಲೆ ಬಹಳ ಉಚಿತ ಅಥವಾ ತಕ್ಕುದಾದುದು (apt) ಎನ್ನಿಸುತ್ತದೆ?</p><p>1951ರಲ್ಲಿ ಶಿವರುದ್ರಪ್ಪನವರು ಒಂದು "ತೊರೆಯ ಹಂಬಲ"ವನ್ನು ಎಷ್ಟು ಸರಳವಾದ ಪದಗಳಲ್ಲಿ ಎಷ್ಟು ಆಳವಾಗಿ ಚಿತ್ರಿಸಿದ್ದಾರೆನಿಸಿ ಅವರ ಮೇಲಿನ ಗೌರವ ಇಮ್ಮಡಿಯಾಗುತ್ತದೆ. 1926ರಲ್ಲಿ ಜನಿಸಿದ ಶಿವರುದ್ರಪ್ಪನವರಿಗೆ ಇಪ್ಪತ್ತೈದು ವರ್ಷವಾಗುವಷ್ಟರಲ್ಲಿ ಅದೆಂತಾ ಪ್ರಬುದ್ಧತೆ ಬೆಳೆದಿರಬಹುದು! ಒಬ್ಬ ಕವಿಯಾಗಿ ಸೂಕ್ಷ್ಮ ಸಂವೇದನೆಗಳನ್ನಷ್ಟೇ ಅಲ್ಲದೇ ಒಂದು ಮುಗ್ಧ ತೊರೆಯ ಹಂಬಲದ ಮುಖೇನ ಬಹಳ ದೊಡ್ಡ ಅರಿವನ್ನು ಈ ಕವನದಲ್ಲಿ ತೋರಿಸಿಕೊಟ್ಟಿದ್ದಾರೆ. ಹುಟ್ಟಿದೆಲ್ಲ ತೊರೆಗಳೂ ಆ ಮಹಾಸಾಗರದ ಅಂಶವೇ. ಎಲ್ಲ ತೊರೆಗಳೂ ಸಾಗರ ಮುಖಿಯಾಗಿ ಹರಿವ ಹಂಬಲವುಳ್ಳವುಗಳಾದರೂ, end is more important than the means ಎನ್ನುವಂತೆ ಕಾಣದ ಕಡಲಿನ ಕಡೆಗೆ ಹರಿಯುವವೇ. ಒಮ್ಮೆ ಹರಿದು ಕಡಲನ್ನು ಸೇರಿದ ಮಾತ್ರಕ್ಕೆ ಅದು ಕೊನೆ ಎಂದು ಈ ಮುಗ್ಧ ತೊರೆಗಳು ಅಂದುಕೊಳ್ಳದಿದ್ದರೆ ಸಾಕು. ಅದು ಪ್ರತಿಯೊಂದರ ಕೊನೆಯೂ ಮತ್ತೊಂದರ ಹುಟ್ಟು ಎನ್ನುವಂತೆ, ಮತ್ತೆ ಕಡಲು ಆವಿಯಾಗಿ, ಮೋಡವಾಗಿ, ನೀರಾಗಿ ಹರಿದು ಮತ್ತೆ ಸೇರುತ್ತಲೇ ಇರಬೇಕು, ಎನ್ನುವ ಸಮಾಧಾನ ಈಗಷ್ಟೇ ಕಣ್ಣು ಬಿಟ್ಟು ಹುಟ್ಟಿ ಹರಿಯುತ್ತಿರುವ ತೊರೆಯ ಆಶಯವನ್ನು ಯಾವ ಕಾರಣಕ್ಕೂ ಬಗ್ಗು ಬಡಿಯಲಾರದು. ಹರಿಯುವುದು ತೊರೆಯ ಸಹಜ ಧರ್ಮ, ಜೊತೆಯಲ್ಲಿ ಅಗಾಧವಾದ ಹಂಬಲವನ್ನು ಹೊತ್ತು ಸಾಗುತ್ತಿರುವುದು ಈ ತೊರೆಯ ವಿಶೇಷವಷ್ಟೇ!</p><p>ಈ ಹಾಡನ್ನು<a href="https://www.youtube.com/watch?v=n66FGCYtWBc" target="_blank"><b> ಇಲ್ಲಿ</b></a> ಕೇಳಬಹುದು.</p><p></p><div class="separator" style="clear: both; text-align: center;"><img alt="" border="0" class="placeholder" id="6c52c153deb69" src="https://www.blogger.com/img/transparent.gif" style="background-color: #d8d8d8; background-image: url('https://fonts.gstatic.com/s/i/materialiconsextended/insert_photo/v6/grey600-24dp/1x/baseline_insert_photo_grey600_24dp.png'); background-position: center; background-repeat: no-repeat; opacity: 0.6;" /></div><br /><p></p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-61535701219121860592022-02-10T10:08:00.003-05:002022-04-10T10:10:53.881-04:00 ಇದು ನನ್ನ ದೇಶ<p style="text-align: center;"><span style="font-size: x-large;">ಇದು</span> ನನ್ನ ದೇಶ ಇದು ನನ್ನ ದೇಶ</p><p style="text-align: center;">ಎಂದು ಯಾವುದನ್ನು ನಂಬಿ ಬೆಳೆದಿದ್ದೆವೋ</p><p style="text-align: center;">ಎಲ್ಲಿ ನಮ್ಮತನವೇ ದುಂಬಿಯಾಗಿ ಹಾರಿದ್ದೆವೋ</p><p style="text-align: center;">ಇಂದು ಅದು ನಮ್ಮದಲ್ಲ, ನಮ್ಮದಾಗಿಲ್ಲ|</p><p style="text-align: center;"><br /></p><p style="text-align: center;">ಎಲ್ಲಿ ರಾಜಕೀಯ ಪೋಷಿತ ಷಡ್ಯಂತ್ರಗಳು ಮನೆಮಾಡಿವೆಯೋ</p><p style="text-align: center;">ಎಲ್ಲಿ ವಿದ್ಯೆ ಹೆಚ್ಚಿದಂತೆ ಮಂತಾಂಧರು ಹೆಚ್ಚುತ್ತಿದ್ದಾರೆಯೋ</p><p style="text-align: center;">ಎಲ್ಲಿ ನಮ್ಮ ಒಳಜಗಳವೇ ಮನೆಯ ಕಿಚ್ಚಾಗಿ ಹೊತ್ತಿದೆಯೋ</p><p style="text-align: center;">ಇಂದು ಅದು ನಮ್ಮದಲ್ಲ, ನಮ್ಮದಾಗಿಲ್ಲ|</p><p style="text-align: center;"><br /></p><p style="text-align: center;">ಪ್ರತಿದಿನವೂ ಪ್ರವಾಹವಾಗೋ ಮಾಧ್ಯಮಗಳ ಏರು ಪೇರಿಗೆ</p><p style="text-align: center;">ಈಗಾಗಲೇ ನಾವೆಲ್ಲ ಈಸುತ್ತ ಹಪಿಹಪಿತರಾಗಿದ್ದೇವೆ</p><p style="text-align: center;">ಒಂದೆಡೆ ದಿನವೂ ಸಾಯುವವರಿಗೆ ಅಳುವವರಾರಿಲ್ಲ ಎನ್ನುವ ಮಹಾಮಾರಿ</p><p style="text-align: center;">ಮತ್ತೊಂದೆಡೆ ವಿಶ್ವದ ಸಾರ್ಮಭೌಮತ್ವವನ್ನು ತಮ್ಮದನ್ನಾಗಿಸುವ ದಳ್ಳುರಿ|</p><p style="text-align: center;"><br /></p><p style="text-align: center;">ಎಪ್ಪತ್ತೈದು ವರ್ಷಗಳಲ್ಲಿ ಇರದ ವ್ಯಕ್ತಿ ಸ್ವಾತಂತ್ರ್ಯ ಇಂದು ದೊಡ್ಡದು</p><p style="text-align: center;">ಅವರವರಿಗೆ ಮನುಷ್ಯತ್ವಕ್ಕಿಂತ ಅವರ ಜಾತಿ-ಮತ ದೊಡ್ಡದು</p><p style="text-align: center;">ದೇಶ ಮೊದಲು ಎಂದು ದೇಶಕ್ಕಾಗಿ ಪ್ರಾಣ ಬಿಟ್ಟವರ ಮಕ್ಕಳು ಮೊಮ್ಮಕ್ಕಳು</p><p style="text-align: center;">ದೇಶ ತಮಗೇನು ಮಾಡಿದೆ ಎಂದು ಕೇಳಿ ಕೀಳುವರು ತಾಯ ಕರುಳು|</p><p style="text-align: center;"><br /></p><p style="text-align: center;">ಇಂದು ಯಾವ ಮುತ್ಸದ್ದಿಯೂ ಉತ್ತರ ಕೊಡಲಾರದ ಸಮಸ್ಯೆಗಳಿವೆ</p><p style="text-align: center;">ತಮ್ಮ ಹಕ್ಕು ತಮ್ಮ ನ್ಯಾಯದ ಬಗ್ಗೆ ಎಲ್ಲರ ಒಲವು ಆಶಯಗಳಿವೆ</p><p style="text-align: center;">ಎಲ್ಲರೂ ತಮ್ಮ ಒಳಿತನ್ನೇ ಯೋಚಿಸಿದರೆ ಮತ್ತೇಕೆ ಅಳಲು</p><p style="text-align: center;">ಜನರಿಗೆ ಕೊಂಚವೂ ಸಮಾಧಾನವಿಲ್ಲ ಕಾಯಲು|</p><p style="text-align: center;"><br /></p><p style="text-align: center;">ಇದು ನನ್ನ ದೇಶ ಇದು ನನ್ನ ದೇಶ</p><p style="text-align: center;">ಎಂದು ತಿರಂಗವನ್ನು ಎತ್ತರದಲ್ಲಿ ಕಟ್ಟಿ ನೋಡಿದ್ದೆವೋ</p><p style="text-align: center;">ಅಂದು ಯಾವ ಕಟ್ಟಳೆಯೂ ಇಲ್ಲದ ಹಾಡು ಹಾಡಿದ್ದೆವೋ</p><p style="text-align: center;">ಇಂದು ಅದು ನಮ್ಮದಲ್ಲ, ನಮ್ಮದಾಗಿಲ್ಲ|</p><p style="text-align: center;"><br /></p><p style="text-align: center;">ಅಲ್ಲಿಂದ ಇಲ್ಲಿಗೆ ಬಂದು ಇಲ್ಲಿಯೂ ಇಲ್ಲಿಯವರಾಗದ</p><p style="text-align: center;">ಅಲ್ಲಿಗೆ ಹೋಗದೆಯೇ ಅಲ್ಲಿಯವರೂ ಆಗದ</p><p style="text-align: center;">ದೂರದಲ್ಲಿ ಕಂಡ ಮರೀಚಿಕೆಗೆ ಮರುಗುವ ಮೃಗ</p><p style="text-align: center;">ಅವರವರ ಮೂಗಿನ ನೇರಕ್ಕೆ ಮಾತನಾಡುವ ವರ್ಗ|</p><p style="text-align: center;"><br /></p><p style="text-align: center;">ಹಿಗ್ಗಲಿಲ್ಲ ದೇಶ, ಭಾಷೆ, ವಿಶ್ವಗಳು ನಮ್ಮ ಬೆಳವಣಿಗೆಯಿಂದ</p><p style="text-align: center;">ಬಗ್ಗಲಿಲ್ಲ ಹಿಂದೆ ಕಲಿತ ಇತಿಹಾಸದ ಪಾಠಗಳಿಂದ</p><p style="text-align: center;">ಆಳಿಕೊಳ್ಳಲು ಬರದ ನಾವು ಅಳಿಸಿಕೊಳ್ಳುವುದರಲ್ಲಿ ಮುಂದು</p><p style="text-align: center;">ಮುಂದೆ ಬರಬೇಕೆನ್ನುವ ರಾಷ್ಠ್ರದ ಬೆನ್ನುಲುಬೇ ಹಿಂದು|</p><div style="text-align: center;"><br /></div><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-58367226631707602762021-12-05T09:53:00.001-05:002022-04-10T09:54:43.378-04:00 ಸಾಕು ಬೇಕುಗಳ ಮರ್ಮ<p><span style="font-size: x-large;">ಪ್ರಪಂಚದಲ್ಲಿ</span> ನೂರಕ್ಕೆ ಒಂಬತ್ತು ಜನ ದಿನದ ಊಟದ ಬಗ್ಗೆ ಚಿಂತೆ ಮಾಡ್ತಾರಂತೆ. ನೂರರಲ್ಲಿ 12 ಜನಕ್ಕೆ ಅಕ್ಷರ ಬರೋದಿಲ್ಲವಂತೆ. ಎಲ್ಲಕ್ಕಿಂತ ಮುಖ್ಯವಾಗಿ ನೂರರಲ್ಲಿ 11 ಜನ ಬಡತನದಲ್ಲಿ ಬದುಕುತ್ತಾರಂತೆ. ಅಮೇರಿಕ ಅಭಿವೃದ್ಧಿ ಹೊಂದಿದ ದೇಶವಾದರೂ, ಇಲ್ಲಿನ ಕಾಲು ಭಾಗದಷ್ಟು ಜನರಿಗೆ ನಿವೃತ್ತಿಯಾದ ಮೇಲೆ ಬದುಕಲು ಯಾವುದೇ ಉಳಿತಾಯವೂ ಇಲ್ಲವಂತೆ. ಈ ಅಂಕಿ ಅಂಶಗಳನ್ನೆಲ್ಲ ಸುಮ್ಮನೆ ನೀವು ಅಂತರ್ಜಾಲದಲ್ಲಿ ಹುಡುಕಿದರೆ ಅನೇಕ ಸಮೀಕ್ಷೆ ಮತ್ತು ಅಧ್ಯಯನಗಳ ಮೂಲಕ ದೊರೆಯುತ್ತವೆ.</p><p>ನಾವು ಹಣಕಾಸಿನ ವಿಚಾರದಲ್ಲಿ ನಮ್ಮ ನಿಲುವನ್ನು ಕಂಡುಕೊಳ್ಳುವಷ್ಟರಲ್ಲಿ ನಮ್ಮ ಜೀವನದ ಅರ್ಧ ಆಯಸ್ಸಿನ ಸಮೀಪ ಬಂದಿರುತ್ತೇವೆ. ಅರ್ಧ ಜೀವನದ ತರುವಾಯ ಅನೀರೀಕ್ಷಿತವಾಗಿ ಹಲವಾರು ತೊಂದರೆಗಳು ಬಂದು, ಅವರವರ ಆರ್ಥಿಕ ಸ್ಥಿತಿಯಲ್ಲಿ ಏರುಪೇರಾಗಬಹುದಾದರೂ ಹೆಚ್ಚಿನವರು ತಮ್ಮ ನಿವೃತ್ತಿಯ ಬದುಕಿನ ಸಾಧ್ಯತೆ-ಬಾಧ್ಯತೆಗಳ ಬಗ್ಗೆ ಯೋಚಿಸಿಯೇ ಇರುತ್ತಾರೆ. ಇಂತಹ ಸಮಯದಲ್ಲಿಯೇ ನಮ್ಮ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಕ್ರಿಯೆ ಜಾಗರೂಕವಾಗಿರುವುದು. ನಿಮ್ಮ ಬಳಿ ಇರುವ ಹಣವನ್ನು ಕೇವಲ ಐದೇ ವರ್ಷದಲ್ಲಿ ದ್ವಿಗುಣ ಮಾಡಿಕೊಡುತ್ತೇವೆ ಎನ್ನುವ ಹೂಡಿಕೆಗಳಲ್ಲಿ ತೊಡಗಿಸಲು ಇದು ಸೂಕ್ತ ಸಮಯವಾಗಿರುವುದಿಲ್ಲ.</p><p>ಹಾಗೇ, ಒಂದು ಕುಟುಂಬದ ಜೀವನ "ಸೆಟಲ್" ಆಗುವ ಕಡೆಗೆ ಹೋಗುವುದೂ ಇದೇ ಸಮಯದಲ್ಲಿಯೇ. ಒಬ್ಬರ ವಯೋಮಾನದ ನಲವತ್ತರಿಂದ ಐವತ್ತರ ಹರೆಯದಲ್ಲಿ ಹೆಚ್ಚು ಖರ್ಚುಗಳು ಸಂಭವಿಸುತ್ತವೆ ಎಂದುಕೊಂಡರೆ, ಐವತ್ತರಿಂದ ಅರವತ್ತರ ದಶಕದಲ್ಲಿ ಖರ್ಚುಗಳು ಕಡಿಮೆ ಎಂದುಕೊಳ್ಳಬೇಕಾಗುತ್ತದೆ. ಒಮ್ಮೆ ಅರವತ್ತು ಮುಂದೆ ಎಪ್ಪತ್ತು ಕಳೆದ ನಂತರ ಖರ್ಚುಗಳು ಇನ್ನೂ ಕಡಿಮೆ ಆಗಿ, ಮುಂದೆ ಅಗತ್ಯಕ್ಕಿಂತ ಹೆಚ್ಚು ಹಣ ಬಿದ್ದು ಕೊಳೆಯತೊಡಗುತ್ತದೆ.</p><p>ಇಂತಹ ಸಮಯದಲ್ಲಿಯೇ, ಮುಂದುವರೆದ ದೇಶಗಳಲ್ಲಿ Philanthropy, Giving, Charity, Social Responsibility, Humanitarianism... ಮೊದಲಾದ ಪದಗಳ ಬಳಕೆ ಹೆಚ್ಚು ಅನ್ವಯವಾಗೋದು. ಇಪ್ಪತ್ತರ ಹರೆಯದಲ್ಲಿರುವ ದಂಪತಿಗಳು ಚಾರಿಟಿಯ ವಿಚಾರದಲ್ಲಿ ಸ್ಪಂದಿಸಬಾರಂದೇನೂ ಇಲ್ಲ, ಆದರೆ, ಅವರು ಚಾರಿಟಿಗೆ ಸಂಬಂಧಿಸಿದ್ದನ್ನು ಹೇಗೆ ಸ್ವೀಕರಿಸುತ್ತಾರೋ, ಅದೇ ಎಪ್ಪತ್ತರ ಹರೆಯದಲ್ಲಿರುವ ದಂಪತಿಗಳು ಈ ಪದವನ್ನು ಸ್ವೀಕರಿಸುವ ವಿಚಾರದಲ್ಲಿ ಸಾಕಷ್ಟು ವ್ಯತ್ಯಾಸವಿರುತ್ತದೆ.</p><p>***</p><p>ಮಾನವ ಮಾನವನಿಗೆ ಸಹಾಯ ಮಾಡಲು ಸಾಧ್ಯವಿದೇಯೇ? ಮಾಡಬೇಕೋ ಬೇಡವೋ, ಎಷ್ಟು ಮಾಡಿದರೆ ಒಳ್ಳೆಯದು ಅಥವಾ ಇಲ್ಲ? ಯಾರು ಯಾರಿಗಾದರೂ ಏಕೆ ಸಹಾಯ ಮಾಡಬೇಕು? ದೇವರು ಸೃಷ್ಟಿಸಿದ ಈ ಸೃಷ್ಟಿಯನ್ನು ದೇವರೇ ನಿಯಂತ್ರಿಸಿಕೊಳ್ಳುತ್ತಾನಾದ್ದರಿಂದ ಅದರಲ್ಲಿ ಹುಲುಮಾನವರದ್ದೇನು ಪಾತ್ರ? ಅಥವಾ ಖಾಯಿಲೆಗೆ ಔಷಧಿಯನ್ನು ಕಂಡು ಹಿಡಿಯುವ ವಿಜ್ಞಾನಿಯ ಕೆಲಸದ ಹಾಗೇಯೇ ಒಬ್ಬ ಔದ್ಯಮಿ ತನ್ನ ಸಂಪನ್ಮೂಲಗಳ ಸಹಾಯದಿಂದ ಸಮಾಜದ ಏಳಿಗೆಗೆ ಶ್ರಮಿಸುವುದು ನ್ಯಾಯವಲ್ಲವೇ? ಕಣ್ಣಿಗೆ ಕಾಣದ ವೈರಾಣುಗಳ ವಿರುದ್ಧ ಇಡೀ ಪ್ರಪಂಚವೇ ಹೋರಾಡುತ್ತಿಲ್ಲವೇ ಹಾಗೇಯೇ ಮುಂದೆ ಎಂದಾದರೂ ದುಷ್ಟ ಜಂತುಗಳೋ, ಅನ್ಯ ಗ್ರಹದ ಜೀವಿಗಳೋ ಬಂದು ಆಕ್ರಮಣ ಮಾಡಿದರೆಂದರೆ ಇಡೀ ಮನುಕುಲವೇ ಒಂದಾಗಿ ನಿಂತು ಹೋರಾಡುವುದಿಲ್ಲವೇ?</p><p>ತಮ್ಮ ತಮ್ಮ ಕರ್ತ್ಯವ್ಯವನ್ನು ಎಲ್ಲರೂ ನಿಭಾಯಿಸಿಕೊಂಡು ಹೋಗುವುದು ನ್ಯಾಯ. ಅಂತಹ ಒಂದು ಕರ್ತ್ಯವ್ಯದ ತುಣುಕಾಗಿ ನಮ್ಮ ನಮ್ಮ ಸಾಮಾಜಿಕ ಜವಾಬ್ದಾರಿಯೂ ಇದೆ. ನಮ್ಮೆಲ್ಲರಲ್ಲಿ ಸಾಮಾನ್ಯ ಜನರೇ ಹೆಚ್ಚು, ಅಪರೂಪಕ್ಕೊಮ್ಮೆ ವಿಶೇಷವಾಗಿರುವ ಜನರನ್ನು ಭೇಟಿಯಾಗುತ್ತೇವೆಯೇ ವಿನಾ, ನಾವೆಲ್ಲರೂ ಜನ ಸಾಮಾನ್ಯರು. ಆದರೆ, ನಮ್ಮಂತಹ ಸಾಮಾನ್ಯರಲ್ಲಿ ಒಂದು ಶಕ್ತಿ ಇದೆ, ಅದು ನಮ್ಮ ಸಂಖ್ಯೆ. ಜನಸಾಮಾನ್ಯರೆಲ್ಲ ಒಂದು ದೊಡ್ಡ ಸಂಘಟನೆಯ ಅಡಿಯಲ್ಲಿ ಒಂದಾದಾಗ ಒಂದು ಮಹಾ ಕ್ರಾಂತಿಯಾಗುತ್ತದೆ, ಒಂದು ಸಂಗ್ರಾಮ ನಡೆಯುತ್ತದೆ, ಒಂದು ವ್ಯವಸ್ಥೆಯ ಪರವಾಗಿಯೋ ವಿರುದ್ಧವಾಗಿಯೋ ಒಂದು ಮಹಾ ಆಂದೋಲನವೇ ಹುಟ್ಟುತ್ತದೆ. ಮುಂದಾಳುತನದ ವಿಚಾರದಲ್ಲಿ ಅನೇಕ ನಾಯಕರನ್ನು ನಾವು ಹೆಸರಿಸಬಹುದಾದರೂ, ವಿಶ್ವದ ಎಲ್ಲ ಚಳವಳಿಯ ಶಕ್ತಿಯಾಗಿ ಜನಸಾಮಾನ್ಯರೇ ಇರುವುದು. ಈ ಜನಸಾಮಾನ್ಯರನ್ನು ಯಾವುದೋ ಒಂದು ಕಾರಣಕ್ಕೆ ಬಂಧಿಸಿ ಅವರನ್ನು ಒಪ್ಪಿಸಿ ಹೋರಾಡುವಂತೆ ಮಾಡುವುದು ಇದೆಯಲ್ಲ, ಅದು ಸಾಮಾನ್ಯರಿಗೆ ಆಗುವ ಕೆಲಸವಲ್ಲ. ಆದರೆ, ಪ್ರತಿಯೊಬ್ಬ ಸಾಮಾನ್ಯನೂ ಕಡಿಮೆ ಎಂದರೆ ಒಂದಲ್ಲ ಒಂದರ ಪರ ಅಥವಾ ವಿರುದ್ಧ ಸಂಘಟಿತಗೊಳ್ಳುವ ಅವಕಾಶ ಇದೆ. ಯಾವುದಕ್ಕೂ ಸ್ಪಂದಿಸದೇ ಬದುಕುವುದೆಂದರೆ, ಅಂತಹ ಬದುಕಿಗೆ ಒಂದು ಅರ್ಥವಾದರೂ ಹೇಗೆ ಬಂದೀತು!</p><p>ಇತ್ತೀಚೆಗೆ, ಒಂದೂವರೆ ಬಿಲಿಯನ್ ಅಷ್ಟು ಸಂಪತ್ತು (ನೆಟ್ವರ್ತ್) ಇರುವ ಶ್ರೀಮಂತ ಕುಟುಂಬವೊಂದು ಸುಮಾರು ಐವತ್ತು ಮಿಲಿಯನ್ ಅನ್ನು ಕ್ಯಾನ್ಸರ್ಗೆ ಸಂಬಂಧಿಸಿದ ಒಳ್ಳೆಯ ಬೆಳವಣಿಗೆಯೊಂದಕ್ಕೆ ದಾನ ಮಾಡಿದ ನಿದರ್ಶನವೊಂದು ಸಿಕ್ಕಿತು. ಒಂದಿಷ್ಟು ಸೊನ್ನೆಗಳನ್ನು ಕಡಿಮೆ ಮಾಡಿ ನೋಡಿದರೆ, ಒಂದು ಮಿಲಿಯನ್ ಸಂಪತ್ತು ಇರುವ ಎಷ್ಟು ಜನರು ಸುಮಾರು 33 ಸಾವಿರ ಡಾಲರುಗಳನ್ನು ಒಂದು ಒಳ್ಳೆಯ ಉದ್ದೇಶಕ್ಕೆ ದಾನ ಮಾಡಬಲ್ಲರು? ಇಂಗ್ಲೀಷಿನಲ್ಲಿ ಟೈದ್ (Tithe) ಎನ್ನುವ ಒಂದು ಪರಂಪರೆ ಕಂಡುಬರುತ್ತದೆ. ಇದು ಮುಖ್ಯವಾಗಿ ಕ್ರಿಶ್ಚಿಯನ್ ಸಮೂಹದಲ್ಲಿ, ಆಯಾ ಕುಟುಂಬಗಳು ತಮ್ಮ ಆದಾಯದ ಮೊದಲ ಹತ್ತನೇ ಒಂದು ಭಾಗದಷ್ಟನ್ನು ಸಂಬಂಧಿಸಿದ ಚರ್ಚುಗಳಿಗೆ ದಾನವಾಗಿ ಕೊಡುವುದು ಎಂದರ್ಥ ಮಾಡಿಕೊಳ್ಳಬಹುದು. ಆದರೆ, ನಮ್ಮ ಭಾರತೀಯ ಮೂಲದಲ್ಲಿ ಈ ರೀತಿಯ ಆಚರಣೆ ಕಡಿಮೆ. ಫ಼ಿಲಾಂತ್ರೊಪಿ, ಚಾರಿಟಿ ಮೊದಲಾದ ಪದಗಳು ನಮಗೆ ಹೊಸದಾಗಿ ಕೇಳಿಬರಬಹುದು. ಆದರೆ, ನಮ್ಮಲ್ಲೂ ಸಹ ಈ ರೀತಿಯ ದೇಣಿಗೆಗಳು, ಕೊಡುಗೆಗಳು ಇದ್ದವು. ಅನೇಕ ದತ್ತಿ ಛತ್ರಗಳು ನಡೆಯುತ್ತಿದ್ದವು. ರಾಜಾಶ್ರಯದಲ್ಲಿ ಅನೇಕ ಉಸ್ತುವಾರಿ ಯೋಜನೆಗಳು ನಡೆಯುತ್ತಿದ್ದವು, ಅನ್ನದಾಸೋಹಗಳು ಇದ್ದವು. ಎಷ್ಟೋ ಹಳ್ಳಿ-ಪಟ್ಟಣಗಳನ್ನು ದತ್ತು ತೆಗೆದುಕೊಂಡು ಅವುಗಳನ್ನು ನೋಡಿಕೊಳ್ಳಲಾಗುತ್ತಿತ್ತು. ಆದರೆ, ನಮ್ಮಲ್ಲಿ ನಮ್ಮ ಆದಾಯದ ಮೊದಲ ಹತ್ತನೇ ಒಂದು ಭಾಗವನ್ನು ನಾವೆಲ್ಲರೂ ಎಂದೂ ಯಾರಿಗೂ ಕೊಟ್ಟಿಲ್ಲ. ಹೀಗೆ ಕೊಟ್ಟ ಹಣ ಹೇಗೆ ಬಳಕೆಗೆ ಬರುತ್ತದೆ, ಅದರಿಂದ ಏನೇನಾಗಬಹುದು, ಇಲ್ಲ ಎನ್ನುವುದನ್ನು ಇಲ್ಲಿ ಚರ್ಚಿಸುವುದಕ್ಕಿಂತ - ಹೀಗೂ ಕೊಡಬಹುದು ಎನ್ನುವ ಪ್ರಕ್ರಿಯೆಯ ಬಗ್ಗೆ ಯೋಚಿಸೋಣ. ಒಳ್ಳೆಯದೋ, ಕೆಟ್ಟದ್ದೋ - ಕೈ ಬಿಚ್ಚಿ ಕೊಟ್ಟರೆ ತಾನೇ ಅದರಿಂದ ಏನೋ ಒಂದು ಆಗುವುದು? ಒಳ್ಳೆಯದು ಅಥವಾ ಒಳ್ಳೆಯದಲ್ಲದ್ದು ಎನ್ನುವುದನ್ನು ನೀವು ನಾಣ್ಯದ ಯಾವ ಮುಖವನ್ನು ನೋಡಿ ಮಾತನಾಡುತ್ತಿದ್ದೀರಿ ಎನ್ನುವುದರ ಮೇಲೆ ತಾನೇ ನಿರ್ಣಯವಾಗೋದು?</p><p>***</p><p>ಬಹದ್ದೂರ್ ಗಂಡು ಚಿತ್ರದಲ್ಲಿ ಚಿ. ಉದಯಶಂಕರ್ ಅವರು ಬರೆದು, ಎಂ. ರಂಗಾರಾವ್ ಸಂಗೀತ ನೀಡಿದ ಜನಪ್ರಿಯ ಹಾಡಿನೊಂದರ ಸಾಲುಗಳು ನೆನಪಾಗುತ್ತವೆ:</p><p><span style="color: #274e13;"><b>ಕೋಟೆ ಕಟ್ಟಿ ಮೆರೆದೋರೆಲ್ಲ ಏನಾದರು?</b></span></p><p><span style="color: #274e13;"><b>ಮೀಸೆ ತಿರುವಿ ಕುಣಿದೋರೆಲ್ಲ ಮಣ್ಣಾದರು!</b></span></p><p>ಈ ಸಾಲುಗಳ ಮರ್ಮವನ್ನು ಎರಡು ಕಾರಣಕ್ಕಾಗಿ ಯೋಚಿಸಿಕೊಳ್ಳಬೇಕು. ಮೊದಲನೆಯದಾಗಿ, ಯಾರು ಎಷ್ಟೇ ಆಸ್ತಿ-ಪಾಸ್ತಿ ಮಾಡಿ ಕೂಡಿಟ್ಟರೂ ಎಲ್ಲರೂ ಒಂದು ದಿನ ಅದನ್ನು ಬಿಟ್ಟು ಹೋಗಲೇ ಬೇಕು. ಯಾರ ಚಟ್ಟದ ಹಿಂದೆಯೂ ಒಂದು ಸರಕಿನ ಲಾರಿಯನ್ನು ಏನೂ ಅವರು ತೆಗೆದುಕೊಂಡು ಹೋಗೋದಿಲ್ಲವಲ್ಲ! ಎರಡನೆಯದಾಗಿ, ಈಗಾಗಲೇ ಕೋಟ್ಯಾಂಟರ ರೂಪಾಯಿಗಳ ಆಸ್ತಿಯನ್ನು ಮಾಡಿಟ್ಟು, ತಮ್ಮ ಜೀವನದ ಅರ್ಧ ಆಯಸ್ಸಿಗಿಂತಲೂ ಹೆಚ್ಚನ್ನು ಕಳೆದು, ಇನ್ನೇನು ನಿವೃತ್ತಿಯ ಹೊಸ್ತಿಲಿನಲ್ಲಿ ನಿಂತು ನೋಡುತ್ತಿರುವ ಎಲ್ಲ ಮಹಾನುಭಾವರೂ ತಮ್ಮ ಆಸ್ತಿಯ ಹತ್ತನೇ ಒಂದು ಭಾಗವನ್ನು ತಮ್ಮ ತಮ್ಮ ಹೆಸರಿನ ಫ಼ೌಂಡೇಶನ್ನ ಹೆಸರಿನಲ್ಲಿ ಸಮಾಜದ ಏಳಿಗೆಗೆ ಏಕೆ ಬಳಸಬಾರದು?</p><p>ಕೊನೇ ಪಕ್ಷ, ವಿಶ್ವದ ಎಲ್ಲ ಮಿಲಿಯನ್-ಬಿಲಿಯನ್ನೈರುಗಳು ತಮ್ಮ ಸಂಪತ್ತಿನ ಸಾವಿರದ ಒಂದು ಭಾಗವನ್ನು ತಮ್ಮ ತಮ್ಮ ನೆರೆಹೊರೆಯನ್ನು ಚೊಕ್ಕಗೊಳಿಸುವುದಕ್ಕೆ, ಅಭಿವೃದ್ಧಿಗೊಳಿಸುವುದಕ್ಕೆ, ಆರೋಗ್ಯಪೂರ್ಣವಾಗಿಸುವುದಕ್ಕೆ ಬಳಸಿಕೊಂಡಿದ್ದೇ ಆದರೆ, ನಮ್ಮ ಸಮಾಜಕ್ಕೆ ಅಂಟಿದ ಕಷ್ಟಗಳು ಅರ್ಧಕರ್ಧ ಕಡಿಮೆಯಾದಾವು. ಅದು ಯಾವುದೂ ಬೇಡ, ಪ್ರಪಂಚದ ಒಂಬತ್ತು ಪರ್ಸೆಂಟು ಜನ ದಿನ ರಾತ್ರಿ ಊಟವಿಲ್ಲದೇ ಮಲಗುವುದಾದರೂ ತಪ್ಪೀತು. ಸಾಕು ಮತ್ತು ಬೇಕು ಎನ್ನುವ ಈ ಎರಡು ಪದಗಳ ಮರ್ಮವನ್ನು ಬಲ್ಲವರಿಗೆ, ಕೈ ಮುಂದು ಮಾಡಿ ಕೊಡಲು ಕಷ್ಟವಾಗೋದಿಲ್ಲ. ನಾವೆಲ್ಲರೂ ನಮ್ಮ ಆದಾಯ ಮತ್ತು ಸಂಪತ್ತಿನ ಹತ್ತು ಪರ್ಸೆಂಟು ಕೊಡೋದು ಬೇಡ, ವರ್ಷಕ್ಕೆ ಒಂದು ಪರ್ಸೆಂಟ್ ಅನ್ನು ಯಾವುದಾದರೊಂದು ಅಭ್ಯುದಯಕ್ಕೆ ಬಳಸಿದರೆ, ಅದೆಷ್ಟೋ ಅನುಕೂಲಗಳಾಗುತ್ತವೆ ಎನ್ನುವುದೇ ಈ ಹೊತ್ತಿನ ತತ್ವ.</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-58379309323583632062021-11-28T09:50:00.001-05:002022-04-10T09:52:23.992-04:00ಸೋಜಿಗದ ಸಮೂಹ<p><span style="font-size: x-large;"> ಈ ವಿಶ್ವದ</span> ಒಂದು ಸಣ್ಣ ಗೋಲವಾದ ಭೂಮಿಯ ಪದರು-ಮಡಿಕೆ-ಪೊಟರೆಗಳಲ್ಲಿ ಅನೇಕಾನೇಕ ಜೀವರಾಶಿಗಳು... ಈ ಸಮೂಹವನ್ನ ಕೋಟ್ಯಾಂತರ ಜೀವರಾಶಿಗಳೇ ಎನ್ನಬಹುದು. ಹೆಚ್ಚಿನವು ಮಾನವನ ಕಣ್ಣಿಗೆ ಬಿದ್ದು ಅವುಗಳ ’ಜನಗಣತಿ’ ಅಥವಾ ಅವನತಿ ಆದಂತಿದ್ದರೆ, ಇನ್ನು ಕೆಲವು ಜೀವಜಂತುಗಳನ್ನು ಇದುವರೆಗೂ ಯಾರೂ ನೋಡಿಯೂ ಇಲ್ಲ! ಸಮುದ್ರ-ಸಾಗರಗಳ ಆಳದಿಂದ ಹಿಡಿದು, ಭೂಮಿಯ ಅನೇಕ ಮೈಲುಗಳ ಕೆಳ ಪದರಗಳಲ್ಲಿಂದ ಹಿಡಿದು, ಭೂಮಿಯ ಮೇಲಿನ ವಾತಾವರಣದಲ್ಲಿಯೂ ಬದುಕಿ ಬಾಳಬಲ್ಲ ಈ ಜೀವ ಸಮೂಹವನ್ನು ಸೃಷ್ಟಿ ಅದೆಷ್ಟು ಚೆನ್ನಾಗಿ ಹೆಣೆದುಕೊಂಡಿದೆ! ಒಂದರ ಮೇಲೆ ಮತ್ತೊಂದು ಜೀವ-ಜೀವಿಯ ಅವಲಂಭನೆಯನ್ನು ಯಾರೋ ಅದೆಷ್ಟು ಚೆನ್ನಾಗಿ ಸೃಷ್ಟಿಸಿದ್ದಾರೆ ಎನ್ನಿಸೋದಿಲ್ಲವೇ?</p><p>***</p><p>ನಮ್ಮ ನ್ಯೂ ಯಾರ್ಕ್ ನಗರದ ಎಂಪೈರ್ ಸ್ಟೇಟ್ ಬಿಲ್ಡಿಂಗ್ ನೆಲದಿಂದ ಸುಮಾರು 1400 ಅಡಿ ಎತ್ತರದಲ್ಲಿದೆ. ಒಬ್ಬ ವ್ಯಕ್ತಿಯ ಎತ್ತರ ಸುಮಾರು ಆರು ಅಡಿಗಳು ಎಂದಾದಲ್ಲಿ ಈ ಕಟ್ಟಡ ಎತ್ತರ ಸುಮಾರು 235 ಪಟ್ಟು. ಅದೇ ಒಂದು ಇರುವೆಯ ಎತ್ತರ ಸುಮರು 0.14 ಇಂಚುಗಳು, ಅಂದರೆ, 0.012 ಅಡಿಗಳು ಎಂದಾದಲ್ಲಿ, ಆ ಇರುವೆಯ ಎತ್ತರವನ್ನು ಒಬ್ಬ ಆರು ಅಡಿಯ ಮನುಷ್ಯನಿಗೆ ಹೋಲಿಸಿದಲ್ಲಿ, ಇರುವೆಗಿಂತ ಮಾನವ ಸುಮಾರು 500 ಪಟ್ಟು ಎತ್ತರ, ಅಂದರೆ, ಮಾನವನ ಗಾತ್ರ ಇರುವೆಗೆ, ಒಂದು ಬುರ್ಜ್ ಖಲೀಫ಼ಾ ಕಟ್ಟಡವಾಗಿ ಕಾಣಬಹುದು (ಬುರ್ಜ್ ಖಲೀಫ಼ಾದ ಎತ್ತರ 2722 ಅಡಿ, ಅಂದರೆ ಮಾನವಗಿಂತ ಸುಮಾರು 453 ಪಟ್ಟು ಹೆಚ್ಚು).</p><p>ಇನ್ನು ನಮ್ಮ ಕಣ್ಣಿನ ಎತ್ತರದ ಆಕಾಶದ ವಿಚಾರಕ್ಕೆ ಬರುವುದಾದರೆ, ಸುಮಾರು 10 ಸಾವಿರ ಅಡಿಗಳಷ್ಟು ಎತ್ತರದಲ್ಲಿ ನಾವು ಮೋಡಗಳನ್ನು ನೋಡುತ್ತೇವೆ, ಅದಕ್ಕಿಂತಲೂ ಎತ್ತರದಲ್ಲಿ ಅಂದರೆ 36,000 ಅಡಿಗಳಷ್ಟು ಎತ್ತರದಲ್ಲಿ ನಮ್ಮ ವಿಮಾನಗಳು ಹಾರಾಡುತ್ತವೆ. ಇದಕ್ಕಿಂತಲೂ ಹೆಚ್ಚಿನದ್ದು ನಮ್ಮ ಆಕಾಶವಾಗುತ್ತದೆ. ಅದು ಎಲ್ಲದ್ದಕ್ಕೂ ಮೀರಿದ್ದು.</p><p>ಇದೇ ಆಕಾಶವನ್ನು ನಾವು ಒಂದು ಇರುವೆಯ ಗಾತ್ರದಲ್ಲಿ ಯೋಚನೆ ಮಾಡಿದರೆ, ಆ ಇರುವೆಯ 20 ಅಡಿಗಳಲ್ಲಿ ಮೋಡಗಳು ತೇಲುತ್ತವೆ, ಹಾಗೆ 72 ಅಡಿ ಎತ್ತರದಲ್ಲಿ ಕಮರ್ಷಿಯಲ್ ವಿಮಾನಗಳು ಹಾರಾಡುತ್ತವೆ...ಉಳಿದದ್ದೆಲ್ಲ ನಭೋಮಂಡಲವಾಗುತ್ತದೆ.</p><p>ಈ ವಿಚಾರವನ್ನು ಏಕೆ ಹೇಳಬೇಕಾಗಿ ಬಂತೆಂದರೆ: ನಾವು ಹುಲು ಮಾನವರು. ಈ ಪ್ರಾಣಿ ಪ್ರಬೇಧಗಳಲ್ಲಿ ನಾವು ನಮ್ಮನ್ನೇ ಹಿರಿದು ಎಂದುಕೊಂಡು ಹಿಗ್ಗುತ್ತೇವೆ, ಜೊತೆಗೆ ನಮಗೆ ಸಿಗಬಹುದಾದ ಸಂಪನ್ಮೂಲಗಳನ್ನು ಯಥಾ ಇಚ್ಚೆ ಬಳಸುತ್ತೇವೆ. ಆದರೆ, ನಮಗಿಂತಲೂ ದೊಡ್ಡ ಜೀವಜಂತುಗಳು ಈ ವಿಶ್ವದಲ್ಲಿ ಇರಬಹುದೇ ಎಂದು ನಮಗೆ ಯೋಚಿಸಲು ಸಾಧ್ಯವಿದೆಯೇ? ನಾವು ನಮ್ಮನ್ನು ಒಂದು ಇರುವೆಯ ಗಾತ್ರಕ್ಕೆ ಹೋಲಿಸಿಕೊಂಡರೆ, ಆ ಇರುವೆಯ ಕಣ್ಣುಗಳಲ್ಲಿ ಒಂದು ಮಾನವನಷ್ಟು ದೊಡ್ಡ ಜೀವಿಯನ್ನು ನೋಡಲು ಸಾಧ್ಯವಿದೆಯೇ?</p><p>ಕೆಲವೊಮ್ಮೆ ಫ್ರೀವೇಗಳಲ್ಲಿ ಟ್ರಾಫ಼ಿಕ್ ಜಾಮ್ ಆದ ದೃಶ್ಯಗಳನ್ನು ನೋಡಿದಾಗ, ಅಲ್ಲಿ ಒಂದರ ಹಿಂದೆ ಒಂದರಂತೆ ನಿಧಾನವಾಗಿ ತೆವಳುವ ಕಾರುಗಳು ಇರುವೆಯ ಸಾಲುಗಳನ್ನು ನೆನಪಿಸುತ್ತವೆ. ನೀವು ಎಂಪೈರ್ ಸ್ಟೇಟ್ ಬಿಲ್ಡಿಂಗ್ ಮೇಲೆ ಹೋಗಿ ಅಲ್ಲಿನ ಅಬ್ಸರ್ವೇಟರಿಯಿಂದ ನೋಡಿದರೆ, ಕೆಳಗೆ ಹರಿದಾಡುವ ಮನುಷ್ಯರು ಚಿಕ್ಕ ಇರುವೆಗಳಂತೆಯೇ ಕಾಣುತ್ತಾರೆ.</p><p>ಇನ್ನು ಈ ಇರುವೆಯ ಹವಾಮಾನ ಮುನ್ಸೂಚನೆ ಹೇಗಿರಬಹುದು? ನಾವು ಕಸ ಹೊಡೆದರೆ ಅವಕ್ಕೆ ಬಿರುಗಾಳಿ ಬೀಸಿದ ಅನುಭವವಾಗಬಹುದು. ನಮ್ಮ ಬಚ್ಚಲು ಮನೆಗಳಲ್ಲಿ ಸಿಕ್ಕಿ ಕೊಚ್ಚಿಕೊಂಡು ಹೋಗುವ ಅವುಗಳಿಗೆ ಮಹಾಪ್ರಪಾತದ ದೃಶ್ಯದ ಅರಿವಾಗಬಹುದು. ತಮ್ಮ ಮೇಲೆ ಬೀಳುವ ಒಂದೊಂದು ಹನಿ ನೀರೂ ಸಹ, ದೊಡ್ಡ ಪರ್ವತದ ಗಾತ್ರವನ್ನು ಮೈ ಮೇಲೆ ಹಾಕಿದ ಹಾಗೆ ಆಗಬಹುದು. ಇನ್ನು ಬೆಂಕಿಯ ವಿಚಾರವಂತೂ ಯೋಚಿಸಲೂ ಆಗದಷ್ಟು ದೊಡ್ಡದಿರಬಹುದು. ಹೀಗೆ ನಮ್ಮನ್ನು ನಾವು ಒಂದು ಇರುವೆಯನ್ನಾಗಿ ಊಹಿಸಿಕೊಂಡು ನೋಡಿದರೆ, ಈ ವಿಶ್ವದಲ್ಲಿ ಅದೆಷ್ಟು ಸೋಜಿಗಗಳಿರಬಹುದು ಎನಿಸೋದಿಲ್ಲವೇ?</p><p>***</p><p>ಇನ್ನು ಆತ್ಮದ ವಿಷಯಕ್ಕೆ ಬರುವುದಾದರೆ, ಎಲ್ಲ ಜೀವಿಗಳಲ್ಲೂ "ಜೀವ" ಇರುವ ಹಾಗೆ, ಅವುಗಳಲ್ಲೂ ಒಂದೊಂದು ಆತ್ಮ ಇದೆಯೇ? ಅಥವಾ ಆತ್ಮ ಕೇವಲ ಮಾನವರಿಗೆ ಮಾತ್ರ ಸಂಬಂಧಿಸಿದ್ದೋ?</p><p>ಈ ವಿಶ್ವದಲ್ಲಿ ನಿರ್ದಿಷ್ಟ ಪ್ರಮಾಣದಲ್ಲಿ ಆತ್ಮಗಳಿದ್ದು, ಅವೇ ದೇಹದಿಂದ ದೇಹಕ್ಕೆ ವರ್ಗಾವಣೆಯಾಗುತ್ತವೆಯೋ? ಅಥವಾ ಜೀವಿಗಳು ಹೇಗೆ ಅನಿರ್ಧಿಷ್ಟ ಪ್ರಮಾಣದಲ್ಲಿರುವಂತೆ ಆತ್ಮಗಳೂ ಇದ್ದು, ಎಲ್ಲ ಜೀವಿಗೂ ಒಂದೊಂದು ಆತ್ಮ ಯಾವಾಗಲೂ ಇರುತ್ತದೆಯೋ? ಹಾಗಾದರೆ ಮುಕ್ತಿ ಹೊಂದುವ ಆತ್ಮಗಳು ಹೋಗುವುದಾದರೂ ಎಲ್ಲಿಗೆ? ಈ ಆತ್ಮ ಇಂದಿಗೆ ಮುಕ್ತಿ ಹೊಂದುತ್ತದೆ ಎಂದು ಲೆಕ್ಕ ಇಡುವವರಾರು? ಇರುವೆಯ ಜೀವಿತಾವಧಿಯ ಆತ್ಮದ ಬದುಕಿಗೂ, ಮನುಷ್ಯನ ಜೀವಿತಾವಧಿಯ ಆತ್ಮದ ಬದುಕಿಗೂ ವ್ಯತ್ಯಾಸವಿದೆಯೇ? ಹಾಗಾದರೆ, ಈ ಪ್ರತಿಯೊಂದು ಜೀವಜಂತುವಿನ ಆತ್ಮದ ಜೀವಿತಾವಧಿಯ ಬೆಳವಣಿಗೆಗಳನ್ನು ಪೋಷಣೆಗಳನ್ನು ಯಾವ ವೈಟೇಜ್ನಲ್ಲಿ ಇಟ್ಟು ನೋಡಲಾಗುತ್ತದೆ? ಮಾನವನ 80 ವರ್ಷದ ಆತ್ಮದ ಪರ್ಫಾರ್ಮೆನ್ಸ್ ಅನ್ನು ಮುಟ್ಟಲು ಇರುವೆಯ ಆರು ತಿಂಗಳಿನ ಆತ್ಮ ಯಾವ ಮಟ್ಟಕ್ಕೆ ಕಷ್ಟ ಪಡಬೇಕು?</p><p>ಈ ಭೂಮಂಡಲದಲ್ಲಿ ಇರುವ ಎಲ್ಲ ರಸಾಯನಿಕ ಪದಾರ್ಥ, ಮೂಲವಸ್ತುಗಳ ಪ್ರಮಾಣ ಯಾವಾಗಲೂ ಒಂದೇ ಇರುವುದೆಂದಾದರೆ, ಒಂದು ಕಡೆ ಹೆಚ್ಚುವುದು ಮತ್ತೊಂದು ಕಡೆ ಕಡಿಮೆ ಆಗಲೇ ಬೇಕು ಅಲ್ಲವೇ (conservation)? ಅಂದರೆ, ಹೆಚ್ಚು ಹೆಚ್ಚು ಹುಟ್ಟುವ ಮಾನವ ಸಂತತಿ ತನ್ನ ಮಡಿಲಲ್ಲಿ ಹೆಚ್ಚು ಹೆಚ್ಚು ರಸಾಯನಿಕಗಳನ್ನು ಅಡಗಿಸಿಕೊಳ್ಳುವುದರಿಂದ ಉಳಿದ ಯಾವುದೋ ಜೀವಿಯ ಸಂತತಿಗೆ ಅಥವಾ ಸಂತತಿಗಳಿಗೆ ಅದು ಕಡಿಮೆ ಆಗುತ್ತದೆಯೇ?</p><p>ಎಲ್ಲಕ್ಕಿಂತ ಮುಖ್ಯವಾಗಿ, ಸದಾ ಊರ್ದ್ವ ಮುಖಿಯಾಗಿರುವ ಈ ಆತ್ಮದ ಆತ್ಮ ಯಾಕೆ ಯಾವಾಗಲೂ ಹೋರಾಡುತ್ತಿರುತ್ತದೆ, ಆಶಾಂತವಾಗಿರುತ್ತದೆ? "ಇಂಥವರ ಆತ್ಮಕೆ ಶಾಂತಿ ಸಿಗಲಿ!" ಎಂದು ಮೊಟ್ಟ ಮೊದಲ ಬಾರಿಗೆ ಯಾವ ನಾಗರೀಕತೆಯಲ್ಲಿ ಯಾರು ಮೊದಲು ಹೇಳಿದರು? ಇಂದಲ್ಲ ನಾಳೆ ಮೋಕ್ಷ ಸಿಗುವುದೇ ಹೌದು ಎಂದಾದಲ್ಲಿ ಅದಕ್ಕೆಂದೇ ಹೋರಾಟವಾದರೂ ಏಕೆ ಬೇಕು?</p><p>***</p><p>ನಮಗೆ ನಾವೇ ದೇವರು! ನಮ್ಮ ದೇವರುಗಳ ಚಿತ್ರಣಗಳಲ್ಲಿ ಅವರನ್ನು ನಮಂತೆಯೇ ಸೃಷ್ಟಿಸಿಕೊಂಡಿದ್ದೇವೆ, ಆದರೆ ಸ್ವಲ್ಪ ಬಲ, ಭಿನ್ನತೆಗಳನ್ನು ತೋರುವುದರ ಮೂಲಕ ಅವರನ್ನೆಲ್ಲ ಸೂಪರ್ ಹ್ಯೂಮನ್ ಮಾಡಿದ್ದೇವೆ. ಅದೇ ರೀತಿ ಇರುವೆಗಳಲ್ಲೂ ಸೂಪರ್ ಇರುವೆಗಳ ದೇವರುಗಳು ಇರಬಹುದು! ನಮ್ಮ ದೇವರುಗಳೆಲ್ಲ ಸಾವನ್ನು ಗೆದ್ದವರು, ಚಿರಂತನರು ಮತ್ತು ಸರ್ವವ್ಯಾಪಿಗಳು. ಅಂದರೆ, ನಮ್ಮ ಸುತ್ತಲಿರುವ ನಮ್ಮನ್ನು ಆವರಿಸಿರುವ ಪಂಚಭೂತಗಳು! ನಾವು ಒಂದು ಕ್ಷಣ ಇರುವೆಯಾಗಿ ಯೋಚಿಸಿದಾಗ ಈ ವ್ಯವಸ್ಥೆ ಮತ್ತು ವಿಶ್ವ ಅದೆಷ್ಟು ಅಗಾಧವಿದೆಯೆಲ್ಲ ಎಂದು ಅನ್ನಿಸುವುದು ಖಂಡಿತ. ಆದರೆ, ನಾವು ಹುಲು ಮಾನವರಾಗಿ ಈ ಅಗಾಧತೆಯನ್ನ ಅಷ್ಟು ಸಲೀಸಾಗಿ ಗ್ರಹಿಸೋದಿಲ್ಲ. ಈ ಎತ್ತರ ಕಟ್ಟಡಗಳೂ, ಅವುಗಳ ಅತಿ ಎತ್ತರದಲ್ಲಿ ಹಾರಾಡುವ ವಿಮಾನಗಳೂ, ಅದಕ್ಕೂ ಮಿಗಿಲಾದ ಮುಗಿಲಿನಲ್ಲಿ ತೇಲುವ ಉಪಗ್ರಹಗಳು ಇವೆಲ್ಲ ನಮ್ಮ ಸೃಷ್ಟಿಯೇ! ಹಾಗೇ ನಮ್ಮ ಸುತ್ತಲೂ ಇರುವೆಗಳು ಈಗಾಗಲೇ ಹಾರಾಡಿಸಿರುವ ಉಪಗ್ರಹಗಳೂ ಇರುಬಹುದಾದ ಸಾಧ್ಯತೆಗಳಿಲ್ಲವೆನ್ನಲಾಗದು. ಏಕೆಂದರೆ, ಗೆದ್ದಲು ಕಟ್ಟುವ ಮಣ್ಣಿನ ಮನೆ ಆಧುನಿಕವಾಗಿರುವುದಷ್ಟೇ ಅಲ್ಲದೇ ನಮ್ಮಅನೇಕ ಬುರ್ಜ್ ಖಲೀಫ಼ಾಗಳ ಎತ್ತರವನ್ನೂ ಮೀರಿ ಬೆಳೆದಿರುತ್ತದೆ ಎನ್ನುವುದನ್ನು ಹೆಚ್ಚಿನವರು ನಂಬಲಾರರು, ಆದರೆ, ಅದು ನಿಜ.</p><p>ಹಾಗಾದರೆ, ಈ ಅಗಾಧವಾದ ಪೃಥ್ವಿಯಲ್ಲಿ ನಾವು ಒಂದು ಸಣ್ಣ ಹುಳುವಾದರೆ, ಈ ಇರುವೆಗಳು ನಮಗಿಂತ ಕನಿಷ್ಟ ಮಟ್ಟದ ಜೀವಿಗಳು ಎನ್ನಬಹುದು. ಆಯಾ ಜೀವಿಗಳಿಗೆ ಅವುಗಳ ಬದುಕಿನ ಒಂದು ಧರ್ಮವಿದೆ, ಅದರೊಳಗೊಂದು ಮರ್ಮವಿದೆ. ಆದರೆ, ಮನುಷ್ಯನ ಮಟ್ಟಿಗೆ ಮಾತ್ರ ತನ್ನ ಅಳಿವು ಮತ್ತು ಉಳಿವಿಗೆ ಮೊದಲಿನಿಂದಲೂ ಆತ ತನ್ನ ಸುತ್ತಲನ್ನು ದ್ವಂಸ ಮಾಡುತ್ತಲೇ ಬಂದಿದ್ದಾನೆ. ಈ ಮನುಷ್ಯನಿಗೆ ಬದುಕಲು ವಿಶೇಷವಾದ ಹಕ್ಕನ್ನು ಕೊಟ್ಟವರಾರು? ಈ ಜಗತ್ತಿನ ನ್ಯಾಯಾಲಯದಲ್ಲಿ ನಾವೆಲ್ಲರೂ ಸಮಾನರು ಎಂದು ಇನ್ನಾದರೂ ನಮ್ಮ ಅರಿವಿಗೆ ಬರುತ್ತದೆಯೇ?</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-88188433237634851842021-09-29T09:45:00.012-04:002022-04-10T09:49:38.239-04:00 ಬೈಡೆನ್ ಏನ್ ಬೆಂಡೇಕಾಯ್ ತಿಂತಾನಾ?<p><span style="font-size: x-large;">ಬಹಳ</span> ದಿನಗಳಿಂದ ಸುಬ್ಬೂನ ಹತ್ರ ಮಾತಾಡಿಲ್ಲ ಎಂದುಕೊಂಡು ಫ಼ೋನಾಯಿಸಲು ಯೋಚಿಸಿದೆ. ಸುಮ್ಮನೇ ದಿಢೀರ್ ಅಂತ ಫ಼ೋನ್ ಮಾಡಿದ್ರೆ, ಎಲ್ಲಿ ಗುರ್ರ್ ಎಂದುಕೊಂಡು ಬಾಯಿಗೆ ಬಂದಂತೆ ಬೈತಾನೇನೋ ಎಂದುಕೊಂಡು, "ಏನಪ್ಪಾ, ಕಾಲ್ ಮಾಡ್ಲಾ?" ಎಂದು ಮೊದಲು ಮೆಸೇಜ್ ಹಾಕಿದೆ. ಅಲ್ದೇ ಅಲ್ಲಿ ಕುತಗೊಂಡು ಅಮೇರಿಕನ್ ಕಂಪನಿಯ ಲೆಕ್ಕಾ ಚುಕ್ಕಾ ಬರೆಯೋರ್ದೆಲ್ಲಾ ಹಣೇ ಬರಾ ನಮಗೊತ್ತಿಲ್ವಾ?! ಬೆಳಿಗ್ಗೆ ಹನ್ನೊಂದು ಗಂಟೆಗೆ ಆಫೀಸು ಎನ್ನುವ ಮನೆಯ ಮೇಜು-ಕುರ್ಚಿಗೆ ಅಂಟಿಕೊಂಡವನು ರಾತ್ರಿ ಹತ್ತು-ಹನ್ನೊಂದು ಆದ್ರೂ ಇನ್ನೂ ಊಟಾ ಸೈತಾ ಮಾಡ್ದೆ, ಇಲ್ಲಿನ ಜನರ ಸೇವೇ ಮಾಡ್ತಾನಲ್ಲ? ಇವನನ್ನ ಹಿಡಕೊಂಡು ಜಾಡಿಸಬೇಕು ಅನ್ಸುತ್ತೆ ಒಮ್ಮೊಮ್ಮೆ! ಪ್ರಪಂಚದ ಒಟ್ಟು ಜನಸಂಖ್ಯೆಯಲ್ಲಿ ಕೇವಲ ಮುನ್ನೂರೇ ಮಿಲಿಯನ್ ಜನರಿರುವ ಈ ದೇಶದವರಿಗೆ ಎಲ್ಲ ದೇಶದವರೂ ಯಾಕ್ ಕೆಲಸ ಮಾಡ್ಬೇಕು? ಇರ್ಲಿ, ಅದನ್ನ ಇನ್ನೊಂದು ದಿನ ಕೇಳೋಣ ಎಂದುಕೊಂಡು ಸುಮ್ಮನಿರುವಾಗ,</p><p>"ಮಾಡು ಮಗಾ!" ಎಂದು ಆ ಕಡೆಯಿಂದ ಉತ್ರ ಬಂತು!.</p><p>ಮಲೆನಾಡಿನ ಮಾತುಕತೆಯ ಶಿಷ್ಟಾಚಾರವನ್ನೆಲ್ಲ ಬದಿಗೆ ತಳ್ಳಿ ಹಾಳು ಬೆಂಗಳೂರಿನ ವಿಚಾರವನ್ನಷ್ಟೇ ಅಲ್ಲ, ಆಚಾರವನ್ನೂ ಮೈ ಮೇಲೆ ಹೊದ್ದುಕೊಂಡವರ ಥರ ಇತ್ತೀಚೆಗೆಲ್ಲ, ಸುಬ್ಬನ ಮಾತುಕತೆಯಲ್ಲಿ "ಮಗ, ಮಗಾ" ಎನ್ನುವ ವಿಚಿತ್ರಗಳೂ ಮೂಡುತ್ತಿದ್ದವು. ಎಷ್ಟೋ ಸರ್ತಿ, ಅಮೇರಿಕದ ಪ್ರೆಸಿಡೆಂಟ್ ಟ್ರಂಪ್ ನಿಂದ ಈ "ಮಗ" ಹುಟ್ಟಿತೋ, ಅಥವಾ ಬೆಂಗಳೂರಿನಲ್ಲೇ "ಮಗ" ಎನ್ನುವ ಉದ್ಗಾರ ಹುಟ್ಟಿತೋ ಎನ್ನುವ ಜಿಜ್ಞಾಸೆಯೂ ನನ್ನ ಮನದಲ್ಲಿ ಬೆಳೆದಿದ್ದಿದೆ.</p><p>" ಎನಪ್ಪ, ಏನೂ ಸುದ್ದೀನೇ ಇಲ್ಲ, ಏನ್ ಮಾಡ್ತಾ ಇದ್ದಿ, ಕೆಲ್ಸಾ ಎಲ್ಲ ಆಯ್ತಾ?" ಎಂದು ಯೋಗಕ್ಷೇಮವನ್ನು ವಿಚಾರಿಸಿದೆ.</p><p>"ಹೈ ನಿನ್ನ. ತೆಗಿ. ಈ ಕೆಲ್ಸ ಯಾವತ್ತೂ ಮುಗಿಯಂಗ್ ಕಾಣಲ್ಲ... ಈಗಿನ್ನೂ ಒಂದು ಮೀಟಿಂಗ್ ಆಯ್ತು, ಮತ್ತೆ ಕ್ಲೈಂಟುಗಳು ರಿಕೈರ್ಮೆಂಟ್ ಬದ್ಲಾಯಿಸಿದ್ರಾ, ಇನ್ನೂ ಎರಡು ದಿನ ಕೋಡ್ ಕುಟ್ಟೂದು ಇದೆ ನೋಡು... ಮತ್ತಿನ್ನೇನ್ ರಿಲೀಸಿಗೆ ರೆಡಿ ಆಯ್ತು ಅನ್ನೋ ಅಷ್ಟೊತ್ತಿಗೆ, ಮತ್ತೆ ಇನ್ನೊಂದೇನೋ ತಗಾದೆ ತೆಗಿತಾವೆ ಬಡ್ಡಿ ಮಕ್ಳು... ಈ ಅಮೇರಿಕದವರನ್ನ ಸಂತೋಷ ಪಡಿಸೋ ಸುಖ ಯಾವ್ ನಮ್ ದೇರ್ವಿಗೂ ಬ್ಯಾಡ ನೋಡು!" ಎಂದು ಪೂರ್ತಿ ಕ್ಯಾತೆ ತೆಗೆದ. ಇನ್ನೇನು, ಅಮೇರಿಕದವರ ಜನ್ಮ ಜಾಲಾಡಿದರೆ ಕಷ್ಟ ಎಂದು ನಾನು ನಿಧಾನಕ್ಕೆ ಟಾಪಿಕ್ ಬದಲಾಯಿಸ್ದೆ.</p><p>"ಅಲ್ಲೋ ಸುಬ್ಬ, ಮೋದಿ ಮತ್ತೆ ಅಮೇರಿಕಕ್ಕೆ ಬಂದು ರಾಜ ಗಾಂಭೀರ್ಯ ಮೆರೀತಾ ಇದ್ದಾರೆ... ಏನ್ ಸಮಾಚಾರ ಹೇಗಿದೆ ಇತ್ತೀಚಿಗಿನ ರಾಜಕೀಯ ಅಲ್ಲಿ?!" ಎಂದು ಓಪನ್ ಎಂಡೆಡ್ ಪ್ರಶ್ನೆ ಕೇಳಿದೆ, ಅವನ ಮನಸ್ಸಲ್ಲಿ ಏನ್ ಇದೆ ಅಂತ ನೋಡೋಣ ಎಂದು,</p><p>"ಮೋದಿಗೇನು ಬಿಡು, ವಯಸ್ಸಾಗ್ತಾ ಬಂತು. ಇನ್ನೊಂದು ಟರ್ಮು ನಡೆಸೋ ಅಷ್ಟು ಶಕ್ತಿ ಇದೆಯೋ ಇಲ್ವೋ. ತನ್ನ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ಎಷ್ಟೋ ದೇಶಗಳನ್ನ ಸುತ್ತಿ ಬಂದು ಒಂಥರ ರೆಕಾರ್ಡ್ ಮಾಡ್ಬಿಟ್ಟ ನೋಡು! ಮೋದಿ ಮರ್ಮ ಈ ದೇಶಕ್ಕೆ ಅರ್ಥವಾಗಲ್ಲ, ಈ ದೇಶದ ಜನ ಕೊರಗೋದು ಬಿಡೋಲ್ಲ!" ಎಂದು ಪಕ್ಕಾ ಮೋದಿ ಭಕ್ತನ ಸ್ಟೇಟ್ಮೆಂಟ್ ಕೊಟ್ಟ, ಸಾಲದ್ದಕ್ಕೆ, ಏಕ್ದಂ ವ್ಯವಹಾರ ಪರಿಣಿತನಾದಂತೆ, </p><p>"ಏನ್, ಸುಮ್ನೇ ಫ಼ೋನ್ ಮಾಡ್ದ್ಯ? ಏನ್ ಸಮಾಚಾರ ನಿಮ್ಮ ಕಡೆಗೆ..." ಎಂದು ಯಾರೋ ಗುಜರಾತಿ ಮಾರ್ವಾಡಿಗಳು ವ್ಯವಹಾರಕ್ಕೆ ಕುಳಿತವರ ಹಾಗೆ ಕೇಳುವಂತೆ ಕೇಳಿದ. ನಾನು ಅಂದುಕೊಂಡೆ, ಇದು ನಮ್ಮ ಯೂಶುವಲ್ ಸುಬ್ಬನಲ್ಲ, ಮಲ್ಟಿ ಟಾಸ್ಕಿಂಗ್ನಲ್ಲಿ ಮುಳುಗಿ ಎದ್ದು, ಮುಂದೆ ಕುಟ್ಟಬೇಕಾದ ಕೋಡ್ ಬಗ್ಗೆ ಚಿಂತಿಸುವ ಕೊರಗಿನ ಕೋಡಂಗಿ ಎಂದು!</p><p>"ಏನಿಲ್ಲ ಕಣೋ, ಸುಮ್ನೇ ಮಾಡ್ದೆ. ನಮ್ಮಲ್ಲಿ ಈ ಹಾಳಾದ ಹರಿಕೇನ್ಗಳ ಹಾವಳಿಯಿಂದ ಬಾಳಾ ಮಳೆ ಬಂದು ಹಾನಿ-ಪಾನಿ ಆದ ವಿಚಾರ ನಿಂಗ್ ಗೊತ್ತೇ ಇದೆಯಲ್ಲ? ನಮ್ದೇನೂ ವಿಶೇಷವಿಲ್ಲ ಇಲ್ಲಿ... ಮಕ್ಳು ಶಾಲೆಗೆ ಹೋದ್ರು, ಇಲ್ಲಿ ನಾನೊಬ್ಬನೇ ಕುತಗೊಂಡು ನಿನ್ನ ಥರಾನೇ ಕಡೀತಾ ಇದ್ದೀನಿ, ದೊಡ್ಡ ಗುಡ್ಡವನ್ನ..." ಎಂದು ನಗಾಡಿದೆ.</p><p>"ಹೌದು ಮತ್ತೆ, ಹಿಂದೆಲ್ಲಾ ಈ ಕೋವಿಡ್ ಪರಿಸ್ಥಿತಿಯಿಂದ ಸ್ವಲ್ಪ ಕಷ್ಟದಲ್ಲಿದ್ದ ಅಮೇರಿಕ ಈಗ ಹೇಗಿದೆ?" ಎಂದ.</p><p>"ನಮ್ಮ ಜೆರ್ಸಿಯಲ್ಲಿ ಏನೂ ತೊಂದ್ರೆ ಇಲ್ಲ. ಆದ್ರೆ ದಕ್ಷಿಣ ರಾಜ್ಯದಲ್ಲಿ ಇನ್ನೂ ಸಂಕಷ್ಟಾ ಇದ್ದೇ ಇದೆ. ಅಲ್ಲಿನ ಜನ ತಮ್ಮ ಫ಼್ರೀಡಮ್-ಲಿಬರ್ಟಿ ಅಂದುಕೊಂಡು ವ್ಯಾಕ್ಸೀನೂ ತೊಗೋಳಲ್ಲ ಅಂತಾರೆ, ಯಾರೂ ಏನೂ ಮಾಡಕ್ಕಾಗಲ್ಲ..." ಎನ್ನುವಾಗಲೇ, ನನ್ನ ಮಾತನ್ನು ತುಂಡುಮಾಡಿ,</p><p>"ಥೂ, ಥರ್ಡ್ ಕ್ಲಾಸ್ ಜನಗಳು ಕಣೋ... ಪುಕ್ಕಟೆ ವ್ಯಾಕ್ಸೀನ್ ಕೊಟ್ರೂ ತೊಗೊಳೋಲ್ಲ ಅಂತಾರಲ್ಲ... ಇವರ ಜನ್ಮಕ್ಕಿಷ್ಟು..." ಎಂದು ಮುಂದೆ ಅವರ ಜನ್ಮವನ್ನು ಜಾಲಾಡುವುದರ ಒಳಗೆ ನಾನು ಮಧ್ಯ ಬಾಯಿ ಹಾಕಿ,</p><p>"ಹ್ಞಾ, ಒಂದ್ ನಿಮ್ಷ! ಹಂಗೆಲ್ಲ ಜಡ್ಜ್ಮೆಂಟ್ ಕೊಡಬೇಡ... ನಿನಗೆ ಪೂರ್ತಿ ವಿಷ್ಯ ಗೊತ್ತಿಲ್ಲ... ಅವರು ಏನ್ ನ್ಯೂಸ್ ಕೇಳ್ತಾರೋ, ಯಾರು ಸರಿಯೋ ಯಾರು ತಪ್ಪೋ... ಒಟ್ಟಿನಲ್ಲಿ ಅವರ ದೇಶ-ಅವರ ಜೀವನ, ಕೊನೇ ಪಕ್ಷ ಅವರಿಗೆ ಇರುವ ಫ಼್ರೀಡಮ್ ಬಗ್ಗೆನಾದ್ರೂ ಸಂತೋಷ ಪಡು... ನಿಮ್ಮ ಪಕ್ಕದ ದೇಶದಲ್ಲಿ ಅಧಿಕಾರಶಾಹಿಗಳು ಹಾಕೋ ರೂಲ್ಸ್ನಲ್ಲಿ ಬೇಯೋ ಬದ್ಲು, ಫ಼್ರೀಡಮ್ನಲ್ಲಿ ಸಾಯೋದೇ ಮೇಲು... ಅದೂ ಅಲ್ದೇ, ಸಾಯೋರು ಅವ್ರೇ ತಾನೇ?" ಎಂದು ಪ್ರಶ್ನೆ ಹಾಕಿದೆ.</p><p>"ಅವರ ಹಣೇ ಬರ, ಸಾಯಲಿ ಬಿಡು!" ಎಂದು ಅಲ್ಲಿಗೇ ಬಿಟ್ಟ. "ಆಮೇಲೆ ನಿನ್ನ ಡಯಟ್ಟೂ-ರನ್ನಿಂಗೂ ಎರಡೂ ಎಲ್ಲಿಗೆ ಬಂತೂ?!" ಎಂದು ಸಂಭಾಷಣೆಯನ್ನು ಬೇರೆ ಕಡೆಗೆ ತಿರುಗಿಸಿದ...</p><p>"ಓ, ಅದಾ, ಅದ್ರದ್ದೊಂದ್ ದೊಡ್ಡ ಕತೆ! ಮನೇಲೇ ಕುಂತೂ ಕುಂತೂ ಟೇಬಲ್ಲಿಗೂ ಹೊಟ್ಟೆಗೂ ಗೆಳೆತನ ಜಾಸ್ತಿ ಆದ ಪರಿಣಾಮದಿಂದ, ನನ್ನ ಹೊಟ್ಟೆ ದೊಡ್ಡದಾಗಿ ಬೆಳೆದಿದೆ ನೋಡು!" ಎಂದು ಜೋರಾಗಿ ನಕ್ಕೆ.</p><p>"ಮತ್ತೇ, ಏನ್ ಮಾಡ್ತೀ ಅದಕ್ಕೆ?" ಎಂದು ಮಹಾ ಸ್ವಾಮಿಗಳ ಸಂಭಾಷಣೆಯ ತೀಕ್ಷ್ಣತೆಯಿಂದ ಒಂದು ಪ್ರಶ್ನೆ ಎಸೆದ.</p><p>"ಏನಿಲ್ಲ, ಸ್ವಲ್ಪ ತಿನ್ನೋದ್ ಕಡ್ಮೆ ಮಾಡಿದ್ರೆ, ಎಲ್ಲಾ ಸರಿ ಹೋಗತ್ತೇ" ಎಂದು ಸಮಜಾಯಿಷಿ ನೀಡಿದೆ.</p><p>"ಅಲ್ವೋ, ಈ ಡಯಟ್ಟೂ-ಪಯಟ್ಟೂ ಯಾವ್ದೂ ನಮಿಗೆ ವರ್ಕ್ ಆಗಲ್ಲ... ಪಕ್ಕಾ ದಕ್ಷಿಣ ಭಾರತದ ಊಟದ ಮುಂದೆ ಬೇರೇ ಏನೂ ಇಲ್ಲ ಅಂತ ಭಾಷ್ಣ ಕೊಡ್ತಾ ಇದ್ದೆಯಲ್ವಾ ಕೆಲವು ತಿಂಗಳುಗಳ ಹಿಂದೆ? ಅದಕ್ಕೇನಾಯ್ತೋ??" ಎಂದು ಕಿಚಾಯಿಸಿದ.</p><p>"ಇಲ್ಲ, ಕಾಲಕ್ರಮೇಣ ನಮ್ಮ ತಿಳುವಳಿಕೇನೂ ಬದಲಾಗುತ್ತಲ್ವಾ?! (ನಗುತ್ತಾ) ಈಗ, ಪಕ್ಕಾ ವೀಗನ್ ಮೆನ್ಯೂ ಅಂಥ ಶುರು ಮಾಡಿದೀನಿ... ಅದರಿಂದಲಾಂದ್ರೂ ಈ ಕೊಬ್ಬಿನ ಬಾಂಧವ್ಯ ಕಳಚುತ್ತೇನೋ ಅಂಥ ನೋಡೋಣ..." ಎನ್ನುವಷ್ಟರಲ್ಲಿ... ಮಧ್ಯೆ ಬಾಯಿ ಹಾಕಿ...</p><p>"ಹೋಗೋ ಸಾಕು... ನಿಮ್ಮ ಬೈಡೆನ್ ಏನಾದ್ರೂ ಬೆಂಡೇಕಾಯ್ ತಿಂತಾನ? ಟ್ರಂಪ್ ಏನಾದ್ರೂ ತೊಂಡೇ ಕಾಯ್ ತಿಂತಾನಾ? ಅವರೆಲ್ಲ ಮೇಲಿಂದ ಕೆಳಗಿನ ತನಕ ನೆಟ್ಟಗೇ ಇಲ್ವಾ, ಮತ್ತೆ?? ಈ ಮುದುಕ ಸೆಪ್ಟಾಜೆನೇರಿಯನ್ನ್ಗಳು ದೇಶಾನೇ ಆಳ್ತಾವಂತೆ... ನೀನು ಒಂಥರಾ ನಲವತ್ತೈದು ಐವತ್ತಕ್ಕೆ ಸೋಗ್ ಹಾಕ್ತೀಯಲ್ಲ...ನಿನ್ನ ನನ್ನ ಜೀನ್ಸ್ ಏನಿದ್ರೂ ಯಾವತ್ತೂ ಸೇವ್ ಮಾಡೋ ಮೆಂಟಾಲಿಟಿಯವು... ಅವುಗಳು ಕೊಬ್ಬನ್ನಾಗಲೀ, ದುಡ್ಡನ್ನಾಗಲೀ ಉಳಿಸೋ ಪ್ರವೃತ್ತಿಯನ್ನ ಎಂದಿಗೂ ಬಿಡಲ್ಲ, ನಮ್ಮ ಬೆಳೆದಿರೋ ಹೊಟ್ಟೆ ಒಂದು ರೀತಿ ಸಮೃದ್ಧಿಯ ಸಂಕೇತ ನೋಡು!" ಎಂದು ಗಹಗಹಿಸಿದ.</p><p>ಸುಬ್ಬ ಹೇಳಿದ್ರಲ್ಲೂ ಪಾಯಿಂಟ್ ಇದೆ... ಅಂಥ ಮೊಟ್ಟ ಮೊದ್ಲಿಗೆ ಭಯವಾಗತೊಡಗಿತು! ಬಡ್ಡೇತ್ತಾವ ಇನ್ನೇನೇನೂ ಓದಿಕೊಂಡು ತಲೆ ದೊಡ್ಡದ್ದನ್ನಾಗಿ ಮಾಡಿಕಂಡವ್ನೋ ಅಂಥ!</p><p>"ಇರ್ಲಿ ಬಿಡೋ, ಯೋಗಿ ಪಡ್ದಿದ್ದು ಯೋಗಿಗೆ, ಜೋಗಿ ಪಡ್ದುದ್ದು ಜೋಗಿಗೆ... ನಮ್ ನಮ್ ಕಷ್ಟ-ನಷ್ಟಾ ಎಲ್ಲಾ ನಮ್ಗೇ ಇರ್ಲಿ..." ಎಂದು ಸಮಾಧಾನ ಮಾಡಿಕೊಂಡೆ.</p><p>"ಹೋಗ್ಲಿ... ಹರಿಕೇನು ಪರಿಕೇನು ಅಂಥ ಬರ್ತಾನೇ ಇರ್ತವೆ, ಹುಷಾರಾಗಿರು... ಅಲ್ದೇ ಫ಼್ರೀಡಮ್ ಲಿಬರ್ಟಿ ಮಣ್ಣೂ ಮಸಿ ಅಂದ್ಕೊಂಡು ಎಲ್ಲಾರು ತಿರುಗಾಡೋಕ್ ಹೋಗಿ,ಡೆಲ್ಟಾ ವೇವ್ನಲ್ಲಿ ಸಿಕ್ಕಾಕ್ಕೊಂಡ್ ಬಿಟ್ಟೀ, ಹುಷಾರು..., ಮತ್ತಿನ್ಯಾವಾಗಾದ್ರೂ ಮಾತಾಡಾಣಾ... ಸ್ವಲ್ಪ ಕೆಲ್ಸಾ ಜಾಸ್ತಿ ಇವತ್ತು... ಮನೆಯಲ್ಲೇ ಕುಳಿತು ಕೆಲ್ಸಾ ಮಾಡೋರ ಹಣೇ ಬರವೆಲ್ಲ ಹೀಗೇ... ಒಂದ್ ಥರ ಬೋಳ್ ತಲೆಯ ಮನುಷ್ಯ ಮುಖ ತೊಳೆದ ಹಾಗೆ... ಎಲ್ಲಿ ಶುರು ಮಾಡ್ಬೇಕೋ ಬಿಡಬೇಕೋ ಗೊತ್ತಾಗಲ್ಲ... ಮತ್ತಿನ್ಯಾವಾಗಾದ್ರೂ ಮಾತನಾಡೋಣ...", ಎಂದು ನಗುತ್ತಲೇ ಬೈ ಹೇಳಿದ.</p><p>"ಸರಿ ಮತ್ತೆ" ಎಂದು ನಾನೂ ಫ಼ೋನ್ ಕಟ್ ಮಾಡಿ, ಉಸ್ ಎಂದು ನಿಟ್ಟುಸಿರು ಬಿಟ್ಟೆ.</p><div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-54798215902977505622020-06-30T19:08:00.000-04:002020-06-30T20:01:15.292-04:00ನಮ್ಮೊಳಗಿನ ಶತ್ರು <div dir="ltr" style="text-align: left;" trbidi="on">
<br />
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;"><b>ನಮ್ಮೊಳಗಿನ ಶತ್ರು (...why it is not easy to boycott Chinese products)</b></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;"><span style="font-size: x-large;">ಭಾರತದ ಸ್ವಾತಂತ್ರ್ಯ </span>ಸಂಗ್ರಾಮದ ಕಾಲದಿಂದಲೂ ಇಂದಿನವರೆಗೆ
"ಸ್ವದೇಶೀ ಬಳಕೆ"ಯನ್ನು ಅನುಮೋದಿಸಲಾಗುತ್ತಿದೆ.<span style="mso-spacerun: yes;"> </span>"ಸ್ವದೇಶಿ" ಸ್ವಾಯುತ್ತತೆ, ಸ್ವಾವಲಂಬನೆ
ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿರದೇ ಇತ್ತೀಚೆಗೆ ಅನೇಕ ರಾಷ್ಟ್ರಗಳು ಈ ನಿಟ್ಟಿನಲ್ಲಿ ಯೋಚಿಸುವುದನ್ನು
ಕಾಣಬಹುದು.<span style="mso-spacerun: yes;"> </span>ಹೊರಗಿನವರು ಬಂದು ನಮ್ಮ </span><span style="font-family: "arial" , sans-serif;">jobs </span><span lang="KN" style="font-family: "nirmala ui semilight" , sans-serif;">ಗಳನ್ನು ಕಸಿದುಕೊಳ್ಳುತ್ತಾರೆ ಎನ್ನುವುದರಿಂದ ಹಿಡಿದು, </span><span style="font-family: "arial" , sans-serif;">Make America Great Again! </span><span lang="KN" style="font-family: "nirmala ui semilight" , sans-serif;">ಎನ್ನುವ
ಕ್ಯಾಂಪೇನಿನ ಮೂಲದಲ್ಲಿ ಸ್ವದೇಶೀ ಸ್ವಾವಲಂಬನೆಯ ಅಗತ್ಯದ ಬಗ್ಗೆ ಚಿಂತನೆ ಎದ್ದು
ಕಾಣುತ್ತದೆ.<span style="mso-spacerun: yes;"> </span>ಯಾರು ಸ್ವದೇಶಿಗಳು, ಯಾರು
ವಿದೇಶಿಗಳು, ಯಾವುದು "ನಮ್ಮ" ದೇಶದಲ್ಲೇ ಉತ್ಪಾದಿತವಾದದ್ದು, ಯಾವುದು ಹೊರಗಿನಿಂದ
ಬಂದಿದ್ದು ಎಂಬುದನ್ನು ಕುರಿತು ಯೋಚಿಸಿದಾಗ, ಹೊರಗಿನವರನ್ನು "ಶತ್ರು"ಗಳು ಎಂದು
ಕಂಡುಕೊಂಡಾಗ ಆ ಶತ್ರುಗಳು ನಮ್ಮೊಳಗೆ ಎಷ್ಟರ ಮಟ್ಟಿಗೆ ವಿಲೀನವಾಗಿಬಿಟ್ಟಿವೆಯೆಂದರೆ ಅದನ್ನು
ಬೇರ್ಪಡಿಸುವುದೂ ಅಷ್ಟೇ ಕ್ಲಿಷ್ಟಕರವಾಗಿದೆ.</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "arial" , sans-serif;">***<o:p></o:p></span></div>
<div class="separator" style="clear: both; text-align: center;">
<a href="https://www.isabelnet.com/map-of-the-worlds-manufacturing-output/" target="_blank"><img border="0" data-original-height="688" data-original-width="1036" height="261" src="https://blogger.googleusercontent.com/img/b/R29vZ2xl/AVvXsEhhiUZfPWKhypOqJSUmKJK1OBSY8gIILu4PFlKDEWzXmo3FtY8CcE5CuyjtvhV0lVTQDTfeGVoD9ckRwOB5685ZwMhZvGMnUCLU4jNfg-RCwGYcavBwT74JPXUcNOLdQ_vUq7FPEw/s400/shatru1.png" width="400" /></a></div>
<br />
<span lang="KN" style="font-family: "nirmala ui semilight" , sans-serif;">ನಾಲ್ಕು ಟ್ರಿಲಿಯನ್ ಡಾಲರಿಗಿಂತಲೂ ಹೆಚ್ಚು ವಸ್ತುಗಳನ್ನು
ಉತ್ಪಾದಿಸುತ್ತಿರುವ ಚೀನಾ, ಇಡೀ ಪ್ರಪಂಚದ ಎಲ್ಲ ದೇಶಗಳಿಗೂ ತನ್ನ ವಸ್ತುಗಳನ್ನು ರವಾನಿಸುವ
ಸಾಮರ್ಥ್ಯವನ್ನು ಹೊಂದಿದ್ದು, ಎಲ್ಲ ರಾಷ್ಟ್ರಗಳಿಗಿಂತ ಅಗ್ರಗಣ್ಯ ಸ್ಥಾನದಲ್ಲಿದೆ. ಚೀನಾ ದೇಶವನ್ನು ವಿಶ್ವದ ಮ್ಯಾನುಫ್ಯಾಕ್ಚರಿಂಗ್
ದೇಶವೆಂದು ಸುಲಭವಾಗಿ ಕರೆಯಬಹುದು. </span><span style="font-family: "arial" , sans-serif;">USA </span><span lang="KN" style="font-family: "nirmala ui semilight" , sans-serif;">ಮುಖ್ಯವಾಗಿ ಯುದ್ಧ ಸಾಮಗ್ರಿಗಳ ತಯಾರಿಕೆ ಮತ್ತು ತಂತ್ರಜ್ಞಾನದ
ಕೇಂದ್ರವಾಗಿ </span><span style="font-family: "arial" , sans-serif;">2.3 </span><span lang="KN" style="font-family: "nirmala ui semilight" , sans-serif;">ಟ್ರಿಲಿಯನ್
ಡಾಲರ್ ಉತ್ಪನ್ನದಿಂದ ನಂತರದ ಸ್ಥಾನದಲ್ಲಿ
ನಿಲ್ಲುತ್ತದೆ. ಒಂದು ಟ್ರಿಲಿಯನ್ ಉತ್ಪನ್ನದಿಂದ
ಜಪಾನ್ ಮೂರನೇ ಸ್ಥಾನದಲ್ಲಿದ್ದರೆ ಕೇವಲ </span><span style="font-family: "arial" , sans-serif;">412 </span><span lang="KN" style="font-family: "nirmala ui semilight" , sans-serif;">ಬಿಲಿಯನ್ ಡಾಲರ್ ಉತ್ಪನ್ನದಿಂದ ಭಾರತ ದಕ್ಷಿಣ ಕೊರಿಯಾಕ್ಕಿಂತಲೂ
ಕೆಳಗಿನ ಸ್ಥಾನದಲ್ಲಿ ತನ್ನನ್ನು ತಾನು ಕಂಡುಕೊಂಡಿದೆ.</span><br />
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<div class="separator" style="clear: both; text-align: center;">
<a href="https://blogger.googleusercontent.com/img/b/R29vZ2xl/AVvXsEicAyEupPEgXQNTVPeKlpH0aZnOyPFR6OUSCo7jp0rmB6UC2FgjymzB6HlJuj6x9ylpwciiZITl_RLAGPZ5Eh84LXHc7cFTcaDLr8kpPBO1urInWC034tjypAitUYYBasKSK3KYBg/s1600/shatru2.png" imageanchor="1" style="margin-left: 1em; margin-right: 1em;"><img border="0" data-original-height="398" data-original-width="569" height="276" src="https://blogger.googleusercontent.com/img/b/R29vZ2xl/AVvXsEicAyEupPEgXQNTVPeKlpH0aZnOyPFR6OUSCo7jp0rmB6UC2FgjymzB6HlJuj6x9ylpwciiZITl_RLAGPZ5Eh84LXHc7cFTcaDLr8kpPBO1urInWC034tjypAitUYYBasKSK3KYBg/s400/shatru2.png" width="400" /></a></div>
<span lang="KN" style="font-family: "nirmala ui semilight" , sans-serif;">ಇದು ಕೇವಲ ಭೌತಿಕ ವಸ್ತುಗಳ ಉತ್ಪಾದನೆ ಮತ್ತು ಆಮದು-ರಫ್ತಿನ
ವಿಚಾರವಾಗಿರಬಹುದು.<span style="mso-spacerun: yes;"> </span>ಇದರ ಜೊತೆಯಲ್ಲಿ
ತಂತ್ರಜ್ಞಾನದ ಕೊಡು ತೆಗೆದುಕೊಳ್ಳುವಿಕೆ ಮತ್ತು ಬಳಸುವಿಕೆಯೂ ತಳುಕು ಹಾಕಿಕೊಂಡಿದೆ.<span style="mso-spacerun: yes;"> </span>ಉದಾಹರಣೆಗೆ, ಭಾರತದಲ್ಲಿ ಜನರು ಬಳಸುವ ಮೈಕ್ರೋಸಾಫ್ಟ್
ಲೈಸನ್ಸ್ ಇರುವ ಪ್ರಾಡಕ್ಟ್ಗಳನ್ನು </span><span style="font-family: "arial" , sans-serif;">USA </span><span lang="KN" style="font-family: "nirmala ui semilight" , sans-serif;">ಲೆಕ್ಕಕ್ಕೆ ಹಾಕಿಕೊಳ್ಳೋಣ.<span style="mso-spacerun: yes;">
</span>ಅದೇ ರೀತಿ </span><span style="font-family: "arial" , sans-serif;">Boeing, Apple, Amazon </span><span lang="KN" style="font-family: "nirmala ui semilight" , sans-serif;">ಮೊದಲಾದ ಕಂಪನಿಗಳ ಉತ್ಪನ್ನದ ಬಳಕೆಯ "ಕ್ರೆಡಿಟ್" ಅನ್ನು
ಆಯಾ ಕಂಪನಿಗಳು ಹುಟ್ಟಿದ ದೇಶಗಳಿಗೆ ಕೊಡೋಣ.<span style="mso-spacerun: yes;">
</span>ಹೀಗೆ ಮಾಡುವುದರಿಂದ ಪ್ರತಿಯೊಂದು ರಾಷ್ಟ್ರವೂ ಇನ್ನೊಂದು ರಾಷ್ಟ್ರದ ಉತ್ಪನ್ನವನ್ನು (</span><span style="font-family: "arial" , sans-serif;">product) </span><span lang="KN" style="font-family: "nirmala ui semilight" , sans-serif;">ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಹೇಗೆ ಬಳಸುತ್ತಿದೆ ಎಂದು
ಗೊತ್ತಾಗುತ್ತದೆ.<span style="mso-spacerun: yes;"> </span></span><span style="font-family: "nirmala ui semilight" , sans-serif;">ಮೇಲ್ಮಟ್ಟದಲ್ಲಿ, ಇದು ಅಷ್ಟೊಂದು ಸುಲಭವಾಗಿ ಗೋಚರಿಸಿದರೂ, ಆಳದಲ್ಲಿ ಆಯಾ
ಕಂಪನಿಗೆ ಸೇರಿಕೊಂಡ ಅನೇಕ ಎಂಟಿಟಿಗಳು ಅದೇ ಕಂಪನಿಯ ಹೆಸರಿನ subsidiary ಆಗಿ ಹಲವಾರು ದೇಶಗಳಲ್ಲಿ
ನೋಂದಾವಣೆ ಮಾಡಿಕೊಂಡು ಅಲ್ಲಿಯ ಟ್ಯಾಕ್ಸ್ ಅನ್ನು ಕೊಡುವುದು ಅಥವಾ ಕೊಡದಿರುವುದು - ಟ್ಯಾಕ್ಸ್ ಸಂಬಂಧಿ
ಅನುಕೂಲವಾಗಿ - ಎದ್ದು ಕಾಣುತ್ತದೆ.<span style="mso-spacerun: yes;"> </span>ಆದ್ದರಿಂದ, ಒಂದು
ಕಂಪನಿಯ ವಾರಸುದಾರಿಕೆ ಮತ್ತು ಅದಕ್ಕೆ ಹೊಂದಿಕೊಳ್ಳುವಂತೆ ಒಂದು ದೇಶದ ಅಸ್ತಿತ್ವವನ್ನು ಹೀಗೇ ಇದೆ
ಎಂದು ಅಷ್ಟು ಸುಲಭವಾಗಿ ವ್ಯಾಖ್ಯಾನಿಸಲಾಗದು.</span><span lang="KN" style="font-family: "nirmala ui semilight" , sans-serif;"></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ಆದರೆ, ಇದೇ ಸೀಳು ನೋಟವನ್ನು ಇನ್ನೂ </span><span style="font-family: "arial" , sans-serif;">focus </span><span lang="KN" style="font-family: "nirmala ui semilight" , sans-serif;">ಮಾಡಿ ನೋಡಿದಾಗ ಹಲವಾರು ಗೊಂದಲ ಅಥವಾ ಜಟಿಲತೆಯ (</span><span style="font-family: "arial" , sans-serif;">complications) </span><span lang="KN" style="font-family: "nirmala ui semilight" , sans-serif;">ಅರಿವಾಗುತ್ತದೆ.<span style="mso-spacerun: yes;"> </span>ಯಾವುದೇ ಕಂಪನಿಯ ನಿಜವಾದ ಮಾಲೀಕ/ಮಾಲೀಕರು ಎಂದರೆ ಆಯಾ
ಕಂಪನಿಯ ಶೇರ್ ಹೋಲ್ಡರ್ಗಳು.<span style="mso-spacerun: yes;"> </span>ಅಂತೆಯೇ ಒಂದು
ಕಂಪನಿಯ ಶೇರುಗಳನ್ನು ಓಪನ್ ಮಾರುಕಟ್ಟೆಯಲ್ಲಿ ಯಾರು ಬೇಕಾದರೂ ಖರೀದಿಸಬಹುದು.<span style="mso-spacerun: yes;"> </span>ನಾವು ಅಮೇರಿಕದಲ್ಲಿ ಕುಳಿತು ಚೀನಾ ದೇಶದ ಕಂಪನಿಯ
ಎಕ್ಸ್ಚೇಂಜ್ನಲ್ಲಿ ಬಿಕರಿಯಾಗುವ ಕಂಪನಿಯ ಶೇರುಗಳನ್ನು </span><span style="font-family: "arial" , sans-serif;">ADR </span><span style="font-family: "nirmala ui semilight" , sans-serif;">(<b>American Depository Rece<span lang="KN">i</span>pt</b>)</span><span style="font-family: "arial" , sans-serif;"> </span><span lang="KN" style="font-family: "nirmala ui semilight" , sans-serif;">ವ್ಯಾಪ್ತಿಯಲ್ಲಿ ಖರೀದಿಸುತ್ತೇವೆ.<span style="mso-spacerun: yes;"> </span>ಅಂತೆಯೇ ಚೀನಾದವರೂ ಸಹ ಬೇರೆ ದೇಶದ ಕಂಪನಿಗಳ
ಶೇರುಗಳನ್ನು ಖರೀದಿಸುತ್ತಾರೆ.</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<a href="https://blogger.googleusercontent.com/img/b/R29vZ2xl/AVvXsEi8dIxMq4OsUcq5FU0d3zQycCnVyvbMCplNEc2WHkNPJx8m0wAa-aS9EpQjuMxwpCoE_wtsqNl-ABLSHQUVjTaQKLNP-VS5zpOaFyGMTkfPzBp0T9WGzcDSnuiInmTYhsB9CDFs2w/s1600/shatru5.png" imageanchor="1" style="clear: left; float: left; margin-bottom: 1em; margin-right: 1em;"><img border="0" data-original-height="499" data-original-width="881" height="222" src="https://blogger.googleusercontent.com/img/b/R29vZ2xl/AVvXsEi8dIxMq4OsUcq5FU0d3zQycCnVyvbMCplNEc2WHkNPJx8m0wAa-aS9EpQjuMxwpCoE_wtsqNl-ABLSHQUVjTaQKLNP-VS5zpOaFyGMTkfPzBp0T9WGzcDSnuiInmTYhsB9CDFs2w/s400/shatru5.png" width="400" /></a></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ಇದೇ ವಿಶ್ಲೇಷಣೆಯನ್ನು ಇನ್ನೂ ತೀಕ್ಷ್ಣವಾಗಿಸಿದರೆ, ಒಂದು ದೇಶದ
ಸರ್ಕಾರ ಅಥವಾ ಸರ್ವಾಧಿಕಾರಿ ರಾಜಸತ್ತೆ ಮತ್ತೊಂದು ದೇಶದ ಹೂಡಿಕೆಯ(<b>ways to invest</b>)
ಮಾರ್ಗಗಳನ್ನು </span><span style="font-family: "arial" , sans-serif;">treasury, bonds, stocks, derivatives, futures, real
estate, fixed assets </span><span lang="KN" style="font-family: "nirmala ui semilight" , sans-serif;">ಹೀಗೆ ಇನ್ನೂ ಅನೇಕಾನೇಕ
ಸಾಧನಗಳಲ್ಲಿ ತೊಡಗಿಸಬಹುದು.<span style="mso-spacerun: yes;"> </span>ಉದಾಹರಣೆಗೆ, ಚೀನಾ
ದೇಶದ ಪ್ರಜೆ, ತನ್ನ ಕಂಪನಿಯ ಮುಖೇನ ನ್ಯೂ ಯಾರ್ಕ್ನಲ್ಲಿನ ತುಂಡು ಭೂಮಿಯನ್ನು
ಖರೀದಿಸಬಹುದು.<span style="mso-spacerun: yes;"> </span>ಅದೇ ರೀತಿ, ಚೀನಾ ದೇಶದ ಸರ್ಕಾರ
ತನ್ನ ಹೂಡಿಕೆಗಳನ್ನು (</span><span style="font-family: "arial" , sans-serif;">for hedging or for growth), </span><span lang="KN" style="font-family: "nirmala ui semilight" , sans-serif;">ಅಮೇರಿಕದ </span><span style="font-family: "arial" , sans-serif;">treasury bills</span><span lang="KN" style="font-family: "nirmala ui semilight" , sans-serif;">ಗಳ ಮೇಲೆ ಮಾಡಬಹುದು.<span style="mso-spacerun: yes;">
</span>ಹೀಗೆ ಯೋಚಿಸುತ್ತಾ ಹೋದಾಗಲೆಲ್ಲಾ ಯಾರು ಯಾವುದನ್ನು ಖರೀದಿಸುತ್ತಾರೆ, ಬಿಡುತ್ತಾರೆ,
ಯಾರಿಗೆ ಎಷ್ಟು ಪರ್ಸೆಂಟ್ ಯಾವುದರ ಮೇಲೆ </span><span style="font-family: "arial" , sans-serif;">ownership </span><span lang="KN" style="font-family: "nirmala ui semilight" , sans-serif;">ಇದೆ ಎಂಬುದನ್ನು ಯೋಚಿಸಿದಂತೆ ನಾವು ನಿಜವಾಗಿಯೂ ವಿಶ್ವ ಮಾನವರಾಗಿ
ಕಂಡುಬರುತ್ತೇವೆ!</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
</div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<a href="https://blogger.googleusercontent.com/img/b/R29vZ2xl/AVvXsEiFtI6f9s1wkkfTvjvSh9EdX5k5mGeD8-fte6uIVvmH3yj94ExiMURuQGMLsTJOjcOEm4Uk89T2-w0m3nbNIkDEDb0-A9TeYswjusN5Heqopui4HNxnV-SWdMFEy6vHnM7-Y9gXPA/s1600/shatru3.png" imageanchor="1" style="clear: right; float: right; margin-bottom: 1em; margin-left: 1em;"><img border="0" data-original-height="688" data-original-width="629" height="320" src="https://blogger.googleusercontent.com/img/b/R29vZ2xl/AVvXsEiFtI6f9s1wkkfTvjvSh9EdX5k5mGeD8-fte6uIVvmH3yj94ExiMURuQGMLsTJOjcOEm4Uk89T2-w0m3nbNIkDEDb0-A9TeYswjusN5Heqopui4HNxnV-SWdMFEy6vHnM7-Y9gXPA/s320/shatru3.png" width="291" /></a><span lang="KN" style="font-family: "nirmala ui semilight" , sans-serif;">ಭಾರತದಲ್ಲಿ </span><span style="font-family: "arial" , sans-serif;">FDI (Foreign Direct
Investment) </span><span lang="KN" style="font-family: "nirmala ui semilight" , sans-serif;">ಅನ್ನೋ ಹೆಸರಿನಲ್ಲಿ ನಾವು ಹೊರ ದೇಶಗಳಿಗೆ ನಮ್ಮ ದೇಶದ
"ಆಗುಹೋಗು"ಗಳಲ್ಲಿ ಹೂಡಿಕೆ ಮಾಡಲು ಅನುಮೋದಿಸಿದೆವು.<span style="mso-spacerun: yes;"> </span>ಹೀಗೆ ಭಾರತಕ್ಕೆ ಹರಿದು ಬಂದ ಹಣವುಳ್ಳ ದೇಶಗಳ
ಮುಂಚೂಣಿಯಲ್ಲಿ ಅಮೇರಿಕ, ಚೀನಾ, ರಷ್ಯಾ, ಜಪಾನ್, ಸೌದಿ, ಮೊದಲಾದ ದೇಶಗಳಿವೆ.<span style="mso-spacerun: yes;"> </span>ಇದ್ದುದರಲ್ಲಿ, ಕನ್ಸೂಮರ್ ಎಲೆಕ್ಟ್ರಾನಿಕ್ಸ್ನಿಂದ
ಹಿಡಿದು-ರೈತಾಪಿ ಮಿಷೀನುಗಳವರೆಗೆ, ಆಟದ ಸಾಮಾನಿನಿಂದ ಹಿಡಿದು ಟೆಲಿಫೋನ್ ತಂತ್ರಜ್ಞಾನದ ವರೆಗೆ,
ಹೀಗೆ ಅನೇಕ ಕಡೆ ವಿದೇಶಿ ಬಂಡವಾಳ ಹೂಡಿಕೆಯಾಗಿದೆ.<span style="mso-spacerun: yes;">
</span>ಅದರಲ್ಲಿ ಚೀನಾದ ಸಿಂಹ ಪಾಲು ಇದೆ.<span style="mso-spacerun: yes;">
</span>ನಾವೆಲ್ಲ </span><span style="font-family: "arial" , sans-serif;">Hero </span><span lang="KN" style="font-family: "nirmala ui semilight" , sans-serif;">ಸೈಕಲ್ಲುಗಳನ್ನು
ಓಡಿಸುತ್ತಿದ್ದಾಗ, ಜಪಾನ್ ನವರು ಬಂದು </span><span style="font-family: "arial" , sans-serif;">Hero </span><span lang="KN" style="font-family: "nirmala ui semilight" , sans-serif;">ಕಂಪನಿಯ ಜೊತೆ ಸಂಬಂಧ ಕುದುರಿಸಿಕೊಂಡು </span><span style="font-family: "arial" , sans-serif;">Hero-Honda </span><span lang="KN" style="font-family: "nirmala ui semilight" , sans-serif;">ಎಂಬ ಮೋಟಾರು ಬೈಕುಗಳನ್ನು ಹೊರ ತಂದರಲ್ಲ! ಹಾಗೆ ವಿದೇಶಿ ಹೂಡಿಕೆ
ನೀವು ಬೇಡವೆಂದರೂ ನಮ್ಮ ಪಂಚಭೂತಗಳಲ್ಲಿ ಈಗಾಗಲೇ ಸೇರಿ ಹೋಗಿದೆ.</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "arial" , sans-serif;">***<o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<a href="https://blogger.googleusercontent.com/img/b/R29vZ2xl/AVvXsEhQFHIuob5tSU1knkGYTjjXWnr3IEmOT4bSlbu43EWqzzhY1k9P_kyxrfsPH_pOO-4QQxIMUjQF1ZuDatauIqFPYfCrrAeMQrZVEIy0C-_suhZXUQGSdY0pgPJ0AOGWE6i0d45DLg/s1600/shatru4.png" imageanchor="1" style="clear: left; float: left; margin-bottom: 1em; margin-right: 1em;"><img border="0" data-original-height="722" data-original-width="1281" height="180" src="https://blogger.googleusercontent.com/img/b/R29vZ2xl/AVvXsEhQFHIuob5tSU1knkGYTjjXWnr3IEmOT4bSlbu43EWqzzhY1k9P_kyxrfsPH_pOO-4QQxIMUjQF1ZuDatauIqFPYfCrrAeMQrZVEIy0C-_suhZXUQGSdY0pgPJ0AOGWE6i0d45DLg/s320/shatru4.png" width="320" /></a><span lang="KN" style="font-family: "nirmala ui semilight" , sans-serif;">ಹಾಗಾದರೆ, ಈ ವಿದೇಶಿ ಕಂಪನಿಗಳ ನಿಜವಾದ (ಮಾಲಿಕರು) ಓನರುಗಳು
ಯಾರು?<span style="mso-spacerun: yes;"> </span>ವಿದೇಶಿ ಹೂಡಿಕೆಯಿಂದ ಒಂದು ದೇಶದ
ಸ್ವಾಯುತ್ತತೆಗೆ ಭಂಗ ಬರುತ್ತದೆಯೇ? ವಿದೇಶಿ ಹೂಡಿಕೆ ಇಲ್ಲದೇ ಸ್ವಾವಲಂಬನೆಯನ್ನು ನಂಬಿಕೊಂಡೇ
ಒಂದು ದೇಶದ (ಮತ್ತು ಅದರ ನಿವಾಸಿಗಳು) ಬೆಳೆಯಲು ಸಾಧ್ಯವೇ? ಚೀನಾ ದೇಶದಲ್ಲಿ ತಯಾರು ಮಾಡಿದ
ಪ್ರಾಡಕ್ಟ್ಗಳನ್ನು ನಮ್ಮಲ್ಲಿ ನಿಜವಾಗಿಯೂ ಬ್ಯಾನ್ ಮಾಡಿ ಬದುಕಲು ಸಾಧ್ಯವೇ? ಒಂದು ವೇಳೆ,<span style="mso-spacerun: yes;"> </span>ನಮ್ಮ ನಡೆಗೆ ಪ್ರತಿಯಾಗಿ ವಿದೇಶಿಗಳು ತಮ್ಮ ಹಣದ
ಹೂಡಿಕೆಯಲ್ಲಿ ವ್ಯತ್ಯಯ ಉಂಟು ಮಾಡಿದರೆ, ಅಥವಾ ತಮ್ಮ "ಶೇರ್"ಗಳನ್ನು "ಸೆಲ್"
ಮಾಡಿದರೆ ಅದರಿಂದ ನಮ್ಮ ಎಕಾನಮಿ ಮೇಲೆ ಯಾವ ರೀತಿಯ ಪ್ರಭಾವವಾಗುತ್ತದೆ?<span style="mso-spacerun: yes;"> </span>ಹೆಚ್ಚುತ್ತಿರುವ ಗ್ಲೋಬಲೈಜೇಷನ್ ನಮ್ಮ "ವಸುಧೈವ
ಕುಟುಂಬಕಂ" ಅನ್ನುವ ತತ್ವವನ್ನು ಅನುಮೋದಿಸುತ್ತದೆಯೋ ಅಥವಾ ವಿರೋಧಿಸುತ್ತದೆಯೋ?<span style="mso-spacerun: yes;"> </span>ವಿಶ್ವವೇ ಒಂದು ಚಿಕ್ಕ ಹಳ್ಳಿಯಾಗಿ ಎಲ್ಲರಿಗೂ ಎಲ್ಲದರ </span><span style="font-family: "arial" , sans-serif;">access </span><span lang="KN" style="font-family: "nirmala ui semilight" , sans-serif;">ಇರುವಾಗ ಒಂದು ದೇಶ ತನ್ನ ಬಾರ್ಡರ್ ವಿವಾದವನ್ನು
ಪ್ರತಿಪಾದಿಸುವುದಕ್ಕೋಸ್ಕರ "ದೇಶೀಯ ವಸ್ತುಗಳನ್ನು ಬಳಸಿ, ಚೈನೀಸ್ ವಸ್ತುಗಳನ್ನು
ತಿರಸ್ಕರಿಸಿ" ಎಂದು ಸ್ಲೋಗನ್ ಕೊಡಲು ಸಾಧ್ಯವೇ?<span style="mso-spacerun: yes;">
</span>ಒಂದು ವೇಳೆ ಹಾಗೆ ಮಾಡಿದರೆ ಅದರ ಪರಿಣಾಮಗಳೇನಾಗಬಹುದು? ಇಂದು ಮಿತ್ರ
ದೇಶವಾಗಿರುವವರನ್ನು ಒಳಕರೆದು ಮಣೆ ಹಾಕಿ ಕೂರಿಸಿಕೊಂಡ ಮೇಲೆ, ಕಾಲಾನಂತರ ಅವರು ತಿರುಗಿ
ಬಿದ್ದರೆ, ಆಯಾ ಸಂಬಂಧಗಳನ್ನು ಮುರಿದುಕೊಳ್ಳುವುದು ಮತ್ತು ಕಳೆದುಕೊಂಡ ಸಂಪನ್ಮೂಲದ ಕೊಂಡಿಯನ್ನು
ಇನ್ನೊಂದು ದೇಶದ ಜೊತೆಗೆ ಬೆಳೆಸಿಕೊಳ್ಳುವುದು ಅಷ್ಟು ಸುಲಭದ ವಿಚಾರವೇ?</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="separator" style="clear: both; text-align: center;">
<a href="https://blogger.googleusercontent.com/img/b/R29vZ2xl/AVvXsEgKJCvEGf7A2T5wlQICqgl_9cfvcogbdc5L46lYCAYGip-suGztRqaZ1SNmMnQaVxsQPX8WNYPOTHcuQxo_XIdRvf645P8yGCgFqUCnPq9nVtlHBksp6CQlSTOIQSGizL9yqE2B9g/s1600/shatru6.png" imageanchor="1" style="clear: left; float: left; margin-bottom: 1em; margin-right: 1em;"><img border="0" data-original-height="756" data-original-width="604" height="320" src="https://blogger.googleusercontent.com/img/b/R29vZ2xl/AVvXsEgKJCvEGf7A2T5wlQICqgl_9cfvcogbdc5L46lYCAYGip-suGztRqaZ1SNmMnQaVxsQPX8WNYPOTHcuQxo_XIdRvf645P8yGCgFqUCnPq9nVtlHBksp6CQlSTOIQSGizL9yqE2B9g/s320/shatru6.png" width="255" /></a></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "arial" , sans-serif;">***<o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ಹೀಗೆ, ಧೀರ್ಘವಾಗಿ ಯೋಚಿಸಿದಂತೆಲ್ಲ, ಪ್ರಶ್ನೆಗಳ ಮೇಲೆ ಪ್ರಶ್ನೆಗಳು
ಹುಟ್ಟುತ್ತವೆ.<span style="mso-spacerun: yes;"> </span>ನಮ್ಮ
"ದೇಶಿ-ಸ್ವದೇಶಿ" ಎನ್ನುವ ನಿಲುವು ಒಂದು ರೀತಿಯ ಭಾವನಾತ್ಮಕ ಉದ್ವಿಗ್ನತೆಯಾಗಿ
ಗೋಚರಿಸುತ್ತದೆಯೇ ವಿನಾ ಅರ್ಥಶಾಸ್ತ್ರದ ಯಾವುದೋ ಪುಸ್ತಕದ ಅಧ್ಯಾಯದಂತಲ್ಲ.<span style="mso-spacerun: yes;"> </span>ನಮಗೆ ಎದುರಾಗಿರುವ ಶತ್ರು ಒಂದು ರೀತಿಯ ಕೊರೋನಾ
ವೈರಸ್ಸಿನ ಹಾಗೆ ಗಾಳಿಯಲ್ಲಿ ವ್ಯಾಪಿಸಿಕೊಂಡು ತನ್ನ ಕಬಂಧ ಬಾಹುಗಳನ್ನು ದಿನೇದಿನೇ
ಹರಡಿಕೊಳ್ಳುತ್ತಿರುವಾಗ ಈ ಎಲ್ಲ ವಿದೇಶಿ ಬಂಡವಾಳವನ್ನು "ಸ್ವದೇಶಿ ಬಳಸಿ" ಎನ್ನುವ ಒಂದು
ಹೇಳಿಕೆಯನ್ನು ಹೇಳಿ ಪರಿಹರಿಸುತ್ತೇವೆ ಎನ್ನುವುದು ಹಾಸ್ಯಾಸ್ಪದವಾಗುತ್ತದೆ.<span style="mso-spacerun: yes;"> </span>ಇಡೀ ಉತ್ತರ ಅಮೇರಿಕವನ್ನೇ ಅಲುಗಾಡಿಸುವಷ್ಟು
ಸಾಮರ್ಥ್ಯವನ್ನು ಹೊಂದಿರುವ ಚೀನಾ ದೇಶದವರನ್ನು ನಮ್ಮ ದೇಶದ ಎಮೋಷನಲ್ ಮುತ್ಸದ್ದಿಗಳು ಇನ್ನಾದರೂ
ಹಗುರವಾಗಿ ತೆಗೆದುಕೊಳ್ಳದಿದ್ದರೆ ಸಾಕು!</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<a href="https://blogger.googleusercontent.com/img/b/R29vZ2xl/AVvXsEiWymlblAj0FuJ0VBLAIe3c6jS4-hVF5-5VwCsQeis56wIMrwVoYNxM4lieNAIN-ZqokOtRaZHdl8e4AdNI8GqN9bHBTYrwb4xXM2FpJf5TSHYS0raO_0khYSZ230nf0o_CRP6bog/s1600/shatru7.png" imageanchor="1" style="clear: right; float: right; margin-bottom: 1em; margin-left: 1em;"><img border="0" data-original-height="825" data-original-width="633" height="400" src="https://blogger.googleusercontent.com/img/b/R29vZ2xl/AVvXsEiWymlblAj0FuJ0VBLAIe3c6jS4-hVF5-5VwCsQeis56wIMrwVoYNxM4lieNAIN-ZqokOtRaZHdl8e4AdNI8GqN9bHBTYrwb4xXM2FpJf5TSHYS0raO_0khYSZ230nf0o_CRP6bog/s400/shatru7.png" width="301" /></a><span lang="KN" style="font-family: "nirmala ui semilight" , sans-serif;">ನಾವು ಭಾವಜೀವಿಗಳು.<span style="mso-spacerun: yes;">
</span>ಕ್ರೂರ ಪಾಕಿಸ್ತಾನದವರಿಗೆ ನಾವು ಭಾವನಾತ್ಮಕವಾಗಿ ಉತ್ತರಕೊಡುತ್ತೇವೆ.<span style="mso-spacerun: yes;"> </span>ಮುಳ್ಳನ್ನು ಮುಳ್ಳಿನಿಂದ ತೆಗಿ ಎನ್ನುವ ಗಾದೆಯನ್ನು
ಮರೆತು ನಮ್ಮ ಹೃದಯ ವಿಶಾಲತೆಯನ್ನು ಮೆರೆಯುತ್ತೇವೆ.<span style="mso-spacerun: yes;">
</span>ಅದೇ ರೀತಿ ಉತ್ತರದ ಒಂದು ಆಯಕಟ್ಟಿನ ಜಾಗಕ್ಕೋಸ್ಕರ (</span><span style="font-family: "arial" , sans-serif;">strategic place) </span><span lang="KN" style="font-family: "nirmala ui semilight" , sans-serif;">ಚೀನಾದವರು ಹೊಂಚು ಹಾಕಿ
ನಮ್ಮ ಸೈನಿಕರನ್ನು ಮುಳ್ಳು-ಮೊಳೆಕಟ್ಟಿದ ಕಬ್ಬಿಣದ ರಾಡುಗಳಿಂದ ಹೊಡೆದಾಕ್ಷಣ ನಮ್ಮ </span><span style="font-family: "arial" , sans-serif;">emotional response </span><span lang="KN" style="font-family: "nirmala ui semilight" , sans-serif;">ಅನ್ನು
ಜಾಗರೂಕಗೊಳಿಸಿಕೊಂಡು ಅನೇಕ (ಸಾಮಾಜಿಕ) ಮಾಧ್ಯಮಗಳಲ್ಲಿ ದೊಡ್ಡ ಭಾಷಣವನ್ನು
ಬಿಗಿಯುತ್ತೇವೆ.<span style="mso-spacerun: yes;"> </span>ಆದರೆ, ಕಳೆದ </span><span style="font-family: "arial" , sans-serif;">25 </span><span lang="KN" style="font-family: "nirmala ui semilight" , sans-serif;">ವರ್ಷಗಳಿಂದ ಚೈನಾದವರು ನಿಧಾನವಾಗಿ ಅಮೇರಿಕ ಮತ್ತಿತರ ದೇಶಗಳಿಂದ
ಮ್ಯಾನುಫ್ಯಾಕ್ಚರಿಂಗ್ ವ್ಯವಸ್ಥೆಯನ್ನು ಅಧ್ಯಯನ ಮಾಡಿ ಈಗ ಇಡೀ ವಿಶ್ವವೇ ತಲೆತಗ್ಗಿಸಿ
ನಿಲ್ಲುವಂತ ತಮ್ಮದೇ ಆದ ಒಂದು ವ್ಯವಸ್ಥೆಯನ್ನು ರೂಪಿಸಿಕೊಂಡರು.<span style="mso-spacerun: yes;"> </span>ಹಾಗೆಯೇ, ಉತ್ತರದ ಆಯಕಟ್ಟಿನ ಜಾಗದ ಹೋರಾಟದ ಹಿಂದೆಯೂ
ಅವರದ್ದೇ ಆಳವಾದ ಒಂದು ಚಿಂತನೆ ಇದೆ.<span style="mso-spacerun: yes;"> </span>ಈ
"ಸಿಲ್ಕ್ ರೋಡಿ"ನ ಮಾಲಿಕತ್ವ ಅವರಿಗೆ ಬೇಕಾಗಿದೆ.<span style="mso-spacerun: yes;"> </span></span><span lang="KN" style="font-family: "nirmala ui semilight" , sans-serif;">ಹಣದ ಆಮಿಶ ಒಡ್ಡಿ ಪಾಕಿಸ್ತಾನಕ್ಕೆ ನೆರವಾಗಿ ಭಾರತದ ಮೇಲೆ ಛೂ
ಬಿಟ್ಟು, ಭಾರತ ಭೂಮಿಯನ್ನು ಅಸ್ಥಿರವಾಗಿಟ್ಟರೆ ಅವರ ಬೇಳೆಕಾಳುಗಳು ಸಲೀಸಾಗಿ ಬೇಯುತ್ತವೆ.<span style="mso-spacerun: yes;"> </span>ದಿನೇದಿನೇ ಹೆಚ್ಚುವ ಜನಸಂಖ್ಯೆಯ ಹೊಟ್ಟೆ ತುಂಬುವುದು
ಭಾರತದ ಸಂಕಷ್ಟವಾಗಿರುವಾಗ ಭಾರತದಲ್ಲಿ ತಯಾರಾದ ಯಾವುದೇ ಉತ್ಪನ್ನಗಳ ಮುಖದ ಮೇಲೆ ಸೆಡ್ಡು
ಹೊಡೆಯುವ ಪ್ರಾಡಕ್ಟ್ ಅನ್ನು ಕಡಿಮೆ ಬೆಲೆಗೆ ತಯಾರಿಸಿ, ಬಿಡುಗಡೆ ಮಾಡಿ, ಮಾರುವ ದಕ್ಷತೆ
ಇದೆ.<span style="mso-spacerun: yes;"> </span>ಈಗಾಗಲೇ ನಮ್ಮ ಜನಜೀವನದಲ್ಲಿ ಸೇರಿಕೊಂಡ
ಚೀನಾದ ಉತ್ಪನ್ನಗಳನ್ನು ಅಷ್ಟು ಸುಲಭವಾಗಿ ತಳ್ಳಿ ಹಾಕಲಾಗದು.<span style="mso-spacerun: yes;"> </span>ಒಳ್ಳೆಯದೋ ಕೆಟ್ಟದ್ದೋ ಒಂದು ವಸ್ತುವನ್ನು </span><span style="font-family: "arial" , sans-serif;">displace </span><span lang="KN" style="font-family: "nirmala ui semilight" , sans-serif;">ಮಾಡುವುದಾದರೆ, ಅದನ್ನು ಯಾವುದರಿಂದ ಮಾಡುತ್ತೇವೆ ಅನ್ನುವುದು
ಮುಖ್ಯವಾಗುತ್ತದೆ.<span style="mso-spacerun: yes;"> </span>ಹತ್ತು ರೂಪಾಯಿಗೆ ದೊರೆಯುವ
ಚೀನಾದ ವಸ್ತುವನ್ನು ನೂರು ರೂಪಾಯಿಗೆ ಸಿಗುವ ಭಾರತದಲ್ಲಿ ತಯಾರು ಮಾಡಿದ ವಸ್ತುವಿನಿಂದ </span><span style="font-family: "arial" , sans-serif;">displace </span><span lang="KN" style="font-family: "nirmala ui semilight" , sans-serif;">ಮಾಡಲಾಗದು... </span><span style="font-family: "nirmala ui semilight" , sans-serif;">ಯೋಚನೆ <span lang="KN">ಮಾಡಿ!</span></span></div>
</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-30090346840321591192020-06-14T16:28:00.001-04:002020-06-14T16:28:32.061-04:00ಓಡುವುದೇ ಗುರಿ...<div dir="ltr" style="text-align: left;" trbidi="on">
<span style="font-size: x-large;">ನಾವು ಗ್ರೇಡ್ </span>ಸ್ಕೂಲಿನಲ್ಲಿದ್ದಾಗ ನಮಗೆ "ಪರೀಕ್ಷೆ" ಎನ್ನುವ ಈ ರೀತಿಯ ಒಂದು ಪದ್ಯ ಇತ್ತು...<br />
<div style="text-align: center;">
<b><span style="color: #38761d;">ಸತ್ವವನು ಪರಿಕಿಸುವ ಸಮಯ ಬಂದಿಹುದು</span></b></div>
<div style="text-align: center;">
<b><span style="color: #38761d;">ಬಲ ಕುಶಲ ಸಾಹಸಗಳಿವೆ ನೋಡು|</span></b></div>
<div style="text-align: center;">
<b><span style="color: #38761d;">ಆರು ಯೋಜನ ನೀರನೀಜಿ ಬರಬಲ್ಯಾ?</span></b></div>
<div style="text-align: center;">
<b><span style="color: #38761d;">ನೂರು ಮೈಲಿಯ ಓಟ ಓಡಬಲ್ಯಾ?</span></b></div>
<div style="text-align: center;">
<b><span style="color: #38761d;">ಮದಿಸಿದ ಸಲಗವ ಕಟ್ಟಿ ಹಿಡಿಯಬಲ್ಯಾ?</span></b></div>
<br />
ಇತ್ಯಾದಿ ಪ್ರಶ್ನೆಗಳಿಂದ ಕೊನೆಯಾಗುವ ಈ ಪರೀಕ್ಷೆಯ ಪರಿ ಬಹಳ ಇಷ್ಟವಾಗಿತ್ತು... ಇದರಲ್ಲಿ ವರ್ಣಿಸಿರುವ ಈ ಉಪಾದಿಗಳಲ್ಲಿ ಯಾವುದಾದರೊಂದನ್ನು ಯಾರಾದರೂ ಮಾಡುತ್ತಾರೆಯೇ ಎಂದು ಆಲೋಚಿಸಿ ಸೋಜಿಗಗೊಳ್ಳುವ ಕ್ಷಣಗಳನ್ನು ಅಂದಿನ ಕನ್ನಡ ತರಗತಿಗಳು ತಂದುಕೊಟ್ಟಿದ್ದವು. ಈ ಎಲ್ಲ ಬಲ ಕುಶಲ ಸಾಹಸಗಳನ್ನು ಯೋಚಿಸಿಕೊಂಡರೆ ಇತ್ತೀಚಿನ ದಿನಗಳಲ್ಲಿ "ಓಡು"ವುದಕ್ಕೆ ಹೆಚ್ಚಿನ ಜನರು ಒಲವು ತೋರಿಸುತ್ತಾರಾದ್ದರಿಂದ, ಓಡುವುದನ್ನು ಕುರಿತು ಧೀರ್ಘವಾಗಿ ಆಲೋಚಿಸಿಕೊಂಡಾಗ ಈ ಲೇಖನ ಹುಟ್ಟಿತು.<br />
***<br />
<br />
ಕ್ರಿಸ್ತಪೂರ್ವ 490 ರಲ್ಲಿ ಗ್ರೀಸ್ನ ಫೈಡಿಪಿಡಿಸ್ ಎಂಬಾತ ಮ್ಯಾರಥಾನ ಪಟ್ಟಣದಿಂದ ರಾಜಧಾನಿ ಏಥೆನ್ಸ್ವರೆಗಿನ ದೂರ (26.2 ಮೈಲಿ ಅಥವಾ 42 ಕಿ.ಮಿ.) ದೂರವನ್ನು ಓಡಿ ಕ್ರಮಿಸಿದ. ಗ್ರೀಕ್ ಸೈನಿಕರು ಪರ್ಶಿಯನ್ರ ವಿರುದ್ಧ ಗೆದ್ದ ಸಂದೇಶವನ್ನು ಸಾರುವುದು ಅವನ ಕೆಲಸವಾಗಿತ್ತು. ಆ ದೂರವನ್ನು ಕ್ರಮಿಸಿ, ಅವನು ಓಡಿ ನಿತ್ರಾಣನಾದ್ದರಿಂದ ಸತ್ತು ಹೋದನೆಂದು ಪ್ರತೀತಿ ಇದೆ. ಇದು ನಮ್ಮ ಆಧುನಿಕ "ಮ್ಯಾರಥಾನ್" ಎಂಬ ಕ್ರೀಡೆಗೆ ಹಿನ್ನೆಲೆ. ಫೈಡಿಪಿಡಿಸ್ ಸತ್ತು ಹೋದನೆಂದು ಯಾರೂ ಹೇಳೋದಿಲ್ಲ, ಆದರೆ ಅವನ ನೆನಪಿಗಾಗಿ 26.2 ಮೈಲು ದೂರವನ್ನು ಕ್ರಮಿಸುವ ಓಟ ಇಂದಿಗೂ ಬಹಳ ಜನಪ್ರಿಯವಾಗಿದೆ. ಅಷ್ಟೇ ಅಲ್ಲ, ದಿನೇ ದಿನೇ ಹೆಚ್ಚು ಹೆಚ್ಚು ಜನರನ್ನು ಓಡುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಇಪ್ಪತ್ತಾರು ಮೈಲಿಯ ಮ್ಯಾರಥಾನ್ ಓಟ ಬಹಳ ಹೊತ್ತು ತೆಗೆದುಕೊಳ್ಳುತ್ತದೆ ಹಾಗೂ ಸರಿಯಾಗಿ ಟ್ರೈನಿಂಗ್ ಮಾಡದೇ ಓಡಲು ಸಾಧ್ಯವಿಲ್ಲ ಎಂಬಿತರ ಕಾರಣಗಳಿಗಾಗಿ ದೊಡ್ಡ ಮ್ಯಾರಥಾನ್ ಓಟದ ಕಸಿನ್ಗಳಾಗಿ ಅರ್ಧ ಮ್ಯಾರ್ಥಾನ್ (13.1 ಮೈಲು), 10ಕೆ (6.2 ಮೈಲು), 5ಕೆ (3.1 ಮೈಲು), ಇತ್ಯಾದಿಗಳೂ ಇವೆ. ಮ್ಯಾರಥಾನ್ ಎನ್ನುವ ಕ್ರೀಡೆಯನ್ನು ಇನ್ನೂ ಹೆಚ್ಚಿನ ಮಟ್ಟಕ್ಕೆ ಕೊಂಡ್ಯೊಯ್ಯುವ ನೆಲೆಯಲ್ಲಿ ಆಧುನಿಕ ಕ್ರೀಡಾಳುಗಳು, 50 ರಿಂದ 200 ಮೈಲಿಯ ದೂರದ ಅಲ್ಟ್ರಾ ಮ್ಯಾರಥಾನ್ ಎನ್ನುವ ಬಗೆಯನ್ನು ಕಂಡುಕೊಂಡಿದ್ದಾರೆ. ಈ ಅಲ್ಟ್ರಾ ಮ್ಯಾರಥಾನ್ಗಳು ಕೆಲವೊಮ್ಮೆ ಕೆಲವು ದಿನಗಳ ವರೆಗೆ ನಡೆಯುವುದೂ ಉಂಟು (ರಾತ್ರಿ ಮತ್ತು ಹಗಲೂ ಸೇರಿ).<br />
<br />
ಈ ಓಡುವುದರ ಹಿಂದಿನ ವಿಶೇಷತೆಯನ್ನು ತಿಳಿದುಕೊಳ್ಳೋಣ. ಈ ಆಧುನಿಕ ಪ್ರಪಂಚದಲ್ಲಿ ಯಾರಾದರೂ ಏಕೆ 26 ಮೈಲಿಗಳ ದೂರವನ್ನು ಓಡುತ್ತಾರೆ, ಅದರಿಂದ ಸಿಗುವ ಮಜವೇನು? ಅದರ ಹಿಂದಿನ ರಹಸ್ಯವೇನು?<br />
<br />
ಪ್ರಾಣಿ ಸಂಕುಲದಲ್ಲಿ ಎರಡು ಕಾಲಿನ ಮೇಲೆ ಓಡಾಡುವ ಅನೇಕ ಪಕ್ಷಿ-ಪ್ರಾಣಿ ಪ್ರಬೇಧಗಳಿದ್ದರೂ ಮನುಷ್ಯನಷ್ಟು ನೇರವಾಗಿ ನಿಲ್ಲುವಂತಹ ದೈಹಿಕ ಕ್ಷಮತೆ ಇನ್ನೊಂದು ಪ್ರಾಣಿಗೆ ವಿಕಾಸಕ್ಕೆ ಸಂಬಂಧಿಸಿದ ಬೆಳವಣಿಗೆಯಲ್ಲಿ ಬಂದಿರಲಾರದು. ಹುಟ್ಟುವಾಗ ಅತ್ಯಂತ ಅಸಹಾಯಕವಾಗಿ ಹುಟ್ಟುವ ನಾವು ಅದೆಷ್ಟು ಬೇಗ ನಮ್ಮ ದೈಹಿಕ ಸಮತೋಲನವನ್ನು ಕಂಡುಕೊಂಡು ನಿಲ್ಲುತ್ತೇವೆ. ಒಮ್ಮೆ ನಿಂತೆವೆಂದರೆ ಓಡುವುದೇ ಗುರಿ... ಈ ಕಾರಣಕ್ಕಾಗಿಯೇ ಕವಿ ನಿಸಾರ್ ಅಹ್ಮದ್ ಅವರು ತರುಣ ಮಿತ್ರನಿಗೆ ಎಂಬ ಕವನದಲ್ಲಿ "<b>ಓಡುವುದೇ ಗುರಿಯೇ? ಓಡುವುದಿರಲಿ, ನಡುನಡುವೆ ನಿಂತು ನೋಡುವ ತಾಳ್ಮೆಯೂ ನಿನಗೆ ಬರಲಿ</b>" ಎಂದು ಹೇಳಿರಬೇಕು. ಹಿಂದಿನ ಕಾಲದಲ್ಲಿ ಓಡುವುದು ನಿಜವಾಗಲೂ ಗುರಿಯಾಗಿದ್ದಿತು... ಗವಿಗಳಲ್ಲಿ ವಾಸಿಸುತ್ತಿದ್ದ ನಮ್ಮ ಪೂರ್ವಜರು ಪ್ರಾಣಿಗಳಿಗಿಂತ ಹೆಚ್ಚು ವೇಗವಾಗಿ ಓಡಬಲ್ಲವರಾಗಿದ್ದರು, ಅವರು ಅಂದಿನ ದಿನಗಳಲ್ಲಿ ಬೇಟೆಯಾಡಿ ಬದುಕಿದ್ದರಿಂದಲೇ ನಾವು ಇಂದಿಗೂ ಜೀವಂತವಾಗಿರುವುದು, ಅಷ್ಟೇ ಅಲ್ಲ, ನಮ್ಮ ವಂಶಾವಳಿಗಳಲ್ಲಿ ಓಡುವುದು ಸಹಜವಾಗಿರುವುದು... ಆದ್ದರಿಂದ ನಡೆಯಬಲ್ಲವರೆಲ್ಲ ಓಡಬಲ್ಲರು ಎಂದರೆ ತಪ್ಪೇನಿಲ್ಲ! ಓಡುವುದಕ್ಕೋಸರವೆಂದೇ ಮಿಲಿಯನ್ನುಗಟ್ಟಲೆ ವರ್ಷಗಳ ? ಕಾಲಮಾನದಲ್ಲಿ ನಮ್ಮ ಶರೀರ ತಕ್ಕನಾಗಿ ಅನುವಾಗಿದೆ. ನಮ್ಮ ದೈಹಿಕ ಸಮತೋಲನವನ್ನು ಕೇವಲ ಪುಟ್ಟ ಪಾದಗಳಲ್ಲಿ ಬ್ಯಾಲೆನ್ಸ್ ಮಾಡಿಕೊಂಡು ನಾವು ನಿಲ್ಲುವ, ನಡೆಯುವ ಮತ್ತು ಓಡುವ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ವಿಕಾಸ ವಾದದಲ್ಲಿ ನಾವು ಹೇಗೆ ಬೆಳೆದು ಬಂದಿದ್ದೇವೆ ಎಂದು ಆಶ್ಚರ್ಯವಾಗುತ್ತದೆ.<br />
<br />
ಇಂದಿನ ಟೆಕ್ನಾಲಜಿ ಕೆಲಸಗಾರರು ಹೆಚ್ಚಿನ ಮಟ್ಟಿಗೆ ಆಫೀಸುಗಳಲ್ಲಿ ದಿನಕ್ಕೆ ಎಂಟು ಘಂಟೆ ಕೂತು ಮೀಟಿಂಗುಗಳಲ್ಲಿ ಕಳೆಯುವ ಅಭ್ಯಾಸಕ್ಕೆ ಒಗ್ಗಿಕೊಂಡು ಹೋಗಿದ್ದಾರೆ ಎನ್ನಬಹುದು. ಸಕ್ಕರೆ ಕಾಯಿಲೆ ಮತ್ತು ಹೃದಯ ಸಂಬಂಧಿ ರೋಗಗಳಿಗೆ ನಾವು ದಕ್ಷಿಣ ಏಷ್ಯಾದ ಜನರು ಬಲಿಯಾಗುವುದನ್ನು ನಾವು ಅಂಕಿ-ಅಂಶಗಳಲ್ಲಿ ನೋಡಬಹುದು. ಈ ನಿಟ್ಟಿನಲ್ಲಿ ಒಳಾಂಗಣ ಜಿಮ್ನಲ್ಲಿ ಟ್ರೆಡ್ಮಿಲ್ ಉಪಯೋಗಿಸಿಕೊಂಡಾಗಲೀ, ಅಥವಾ ಹೊರಾಂಗಣದಲ್ಲಿ ಒಂದು ಸುತ್ತು ಓಡಿದರಾಗಲೀ ದೇಹದ ನರನಾಡಿಗಳಲ್ಲಿ ಸಂವೇದನೆ ಉಂಟಾಗಿ ಓಡುವವರಿಗೆ ಒಂದು ರೀತಿಯ ಸ್ಪೂರ್ತಿ ಸಿಕ್ಕಂತಾಗುವುದು ಅವರ ಅನುಭವದ ಮಾತು. ಕೆಲವರಿಗೆ ಓಡುವುದು ಒಂದು ರೀತಿಯ ಮೆಡಿಟೇಷನ್ಗೆ ಸಮನಾದರೆ, ಇನ್ನು ಕೆಲವರಿಗೆ ಓಡುವುದು ಒಂದು ರೀತಿಯ "ಕೆಲಸ", ಎಷ್ಟು ಸಾಧ್ಯವೋ ಅಷ್ಟು ಬೇಗ ಮುಗಿಸುವ ಆತುರ. ಇನ್ನು ಕೆಲವರಿಗೆ ಹೊರಗಡೆ ನಿಸರ್ಗದ ಜೊತೆಗೆ ಬೆರೆಯುವ ಒಂದು ಅವಕಾಶ. ಕೆಲವರು ಸೂರ್ಯೋದಯಕ್ಕೂ ಮೊದಲಿನ ಸದ್ದಿಲ್ಲದ, ತಣ್ಣಗಿನ ವಾತಾವರಣವನ್ನು ಆಯ್ದುಕೊಂಡರೆ, ಇನ್ನು ಕೆಲವರು ಸಂಜೆಯ ಹೊತ್ತನ್ನು ಆರಿಸಿಕೊಳ್ಳುವುದುಂಟು.<br />
<br />
ಓಡುವುದರಿಂದ ಉಪಯೋಗಗಳು ಎಷ್ಟೋ, ಸರಿಯಾದ ರೀತಿಯಲ್ಲಿ ಓಡದಿದ್ದರೆ ಅದರಿಂದ ಅಷ್ಟೇ ಅನಾನುಕೂಲಗಳೂ ಇವೆ. 68 ಕೆಜಿ (150 ಪೌಂಡ್) ತೂಕ ಇರುವ ಒಬ್ಬ ವ್ಯಕ್ತಿ ಹತ್ತು ನಿಮಿಷಕ್ಕೆ ಒಂದು ಮೈಲು ಓಡುತ್ತಾ ಆರು ಮೈಲು (ಒಂದು ಘಂಟೆಯಲ್ಲಿ) ದೂರವನ್ನು ಓಡಿದರೆ ಸುಮಾರು 750 ಕ್ಯಾಲೊರಿ ಖರ್ಚು ಮಾಡಿದಂತಾಗುತ್ತದೆ. ಇದೇ ಸಮಯದಲ್ಲಿ, ಆ ವ್ಯಕ್ತಿಯ ಹೃದಯದ ಬಡಿತ ಕೂಡ ಎರಡರಷ್ಟು ವೇಗವಾಗಿ ಹೊಡೆದುಕೊಳ್ಳತೊಡಗುತ್ತದೆ. ಹೀಗೆ, ದೇಹವನ್ನು ಅತಿಯಾಗಿ "ಶಿಕ್ಷಿಸುವ" ಕಾಯಕವಾದ ಓಡುವಿಕೆ, ಎಲ್ಲರಿಗೂ ಹೇಳಿ ಮಾಡಿಸಿದ್ದಲ್ಲ. ಅಕಸ್ಮಾತ್, ತನಗೆ ಗೊತ್ತಿಲ್ಲದೇ ಹೃದಯ ಸಂಬಂಧಿ ಖಾಯಿಲೆಗೆ ತೊಡಗಿದ ವ್ಯಕ್ತಿ, ಸ್ಥಳದಲ್ಲೇ ಸತ್ತು ಹೋಗುವ ಅಪಾಯವಿದೆ. ಆದ್ದರಿಂದ, ಓಡುವ ಇಷ್ಟ ಇರುವ ಯಾರಾದರೂ ತಮ್ಮ ಓಡುವ ವೇಗ ಹಾಗೂ ದೂರವನ್ನು ನಿಧಾನವಾಗಿ ಹೆಚ್ಚಿಸಿಕೊಂಡು ತಮ್ಮ ಫಿಟ್ನೆಸ್ ಅನ್ನು ಪರೀಕ್ಷಿಸಿಕೊಳ್ಳುವುದು ಸಾಮಾನ್ಯ.<br />
<br />
ಮೊದಮೊದಲು ಅರ್ಧ, ಒಂದು, ಎರಡು... ಮೂರು ಹೀಗೆ ನಿಧಾನವಾಗಿ ಮೈಲುಗಳನ್ನು ಓಡುತ್ತಾ ಬಂದಾಗ ದೇಹಕ್ಕೆ ಅಭ್ಯಾಸವಾಗತೊಡಗಿ ನಿಧಾನವಾಗಿ ದಿನೇದಿನೇ ಮೈಲುಗಳು ಹೆಚ್ಚುತ್ತಾ ಹೋಗುತ್ತವೆ. ಹೀಗೆ ಒಂದೆರಡು ವರ್ಷ ವಾರಕ್ಕೆ ಕನಿಷ್ಥ ಪಕ್ಷ ಮೂರು ಬಾರಿಯಾದರೂ ಓಡುತ್ತಾ ಹೋದರೆ ಆಗ ಮ್ಯಾರಥಾನ್ ಓಡುವಷ್ಟು ಆತ್ಮವಿಶ್ವಾಸ ಮೂಡುತ್ತದೆ. ಓಡುವುದಕ್ಕೆ ಅನುವಾಗುವಲ್ಲಿ ದೇಹದ ಕೆಲಸ ಎಷ್ಟು ಮುಖ್ಯವೋ ಮನಸ್ಸಿನ ಕೆಲಸವೂ ಅಷ್ಟೇ ಮುಖ್ಯ. ಅವರೆಡರ ತಾಳಮೇಳವಿಲ್ಲದಿದ್ದಲ್ಲಿ ಒಂದು ಮೈಲು ಓಡುವುದೂ ಅಸಾಧ್ಯವಾದೀತು.<br />
***<br />
<br />
<b>ನಾನೇಕೆ ಓಡುತ್ತೇನೆ?</b><br />
ಈ ಪ್ರಶ್ನೆಯನ್ನು ಕೇಳಿಕೊಂಡಾಗಲೆಲ್ಲ ಅನೇಕ ಉತ್ತರಗಳು ಹೊಳೆಯುತ್ತವೆಯಾದರೂ, ಅವುಗಳಲ್ಲೆಲ್ಲಾ ಮುಖ್ಯವಾದುದು "ಅದು ಒಂದು ರೀತಿಯ ಮೆಡಿಟೇಶನ್ ಇದ್ದ ಹಾಗೆ". You compete against yourself and you meditate as you run!<br />
<br />
<br />
***<br />
ಕಳೆದ ವರ್ಷ (2019) ಉತ್ತರ ಅಮೇರಿಕದಲ್ಲಿ ಮ್ಯಾರಥಾನ್ ಓಟವನ್ನು ಪೂರೈಸಿದವರ ಸಂಖ್ಯೆ:<br />
<br />
<div>
<ul style="background-color: black; box-sizing: border-box; color: white; font-family: "Helvetica Neue", Helvetica, Arial, sans-serif; font-size: 14px; margin-bottom: 10px; margin-top: 0px;"></ul>
<table style="background-color: black; border-collapse: collapse; border-spacing: 0px; border: 1px solid white; color: white; font-family: "Helvetica Neue", Helvetica, Arial, sans-serif; font-size: 14px; padding: 15px;"><tbody style="box-sizing: border-box;">
<tr style="box-sizing: border-box;"></tr>
<tr style="box-sizing: border-box;"><td style="border: 1px solid white; box-sizing: border-box; padding: 5px;">Month</td><td style="border: 1px solid white; box-sizing: border-box; padding: 5px;">Races</td><td style="border: 1px solid white; box-sizing: border-box; padding: 5px;">Finishers</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=January" style="background: 0px 0px; box-sizing: border-box; color: #428bca; text-decoration-line: none;">January</a></td><td style="border: 1px solid white; box-sizing: border-box; padding: 5px;">40</td><td style="border: 1px solid white; box-sizing: border-box; padding: 5px;">28,589</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=February" style="background: 0px 0px; box-sizing: border-box; color: #428bca; text-decoration-line: none;">February</a></td><td style="border: 1px solid white; box-sizing: border-box; padding: 5px;">46</td><td style="border: 1px solid white; box-sizing: border-box; padding: 5px;">14,220</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=March" style="background: 0px 0px; box-sizing: border-box; color: #428bca; text-decoration-line: none;">March</a></td><td style="border: 1px solid white; box-sizing: border-box; padding: 5px;">71</td><td style="border: 1px solid white; box-sizing: border-box; padding: 5px;">46,252</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=April" style="background: 0px 0px; box-sizing: border-box; color: #428bca; text-decoration-line: none;">April</a></td><td style="border: 1px solid white; box-sizing: border-box; padding: 5px;">73</td><td style="border: 1px solid white; box-sizing: border-box; padding: 5px;">55,060</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=May" style="background: 0px 0px; box-sizing: border-box; color: #428bca; text-decoration-line: none;">May</a></td><td style="border: 1px solid white; box-sizing: border-box; padding: 5px;">86</td><td style="border: 1px solid white; box-sizing: border-box; padding: 5px;">42,352</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=June" style="background: 0px 0px; box-sizing: border-box; color: #428bca; text-decoration-line: none;">June</a></td><td style="border: 1px solid white; box-sizing: border-box; padding: 5px;">61</td><td style="border: 1px solid white; box-sizing: border-box; padding: 5px;">23,344</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=July" style="background: 0px 0px; box-sizing: border-box; color: #428bca; text-decoration-line: none;">July</a></td><td style="border: 1px solid white; box-sizing: border-box; padding: 5px;">25</td><td style="border: 1px solid white; box-sizing: border-box; padding: 5px;">9,012</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=August" style="background: 0px 0px; box-sizing: border-box; color: #428bca; text-decoration-line: none;">August</a></td><td style="border: 1px solid white; box-sizing: border-box; padding: 5px;">42</td><td style="border: 1px solid white; box-sizing: border-box; padding: 5px;">6,744</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=September" style="background: 0px 0px; box-sizing: border-box; color: #428bca; text-decoration-line: none;">September</a></td><td style="border: 1px solid white; box-sizing: border-box; padding: 5px;">94</td><td style="border: 1px solid white; box-sizing: border-box; padding: 5px;">19,964</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=October" style="background: 0px 0px; box-sizing: border-box; color: #428bca; text-decoration-line: none;">October</a></td><td style="border: 1px solid white; box-sizing: border-box; padding: 5px;">107</td><td style="border: 1px solid white; box-sizing: border-box; padding: 5px;">122,194</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=November" style="background: 0px 0px; box-sizing: border-box; color: #428bca; text-decoration-line: none;">November</a></td><td style="border: 1px solid white; box-sizing: border-box; padding: 5px;">61</td><td style="border: 1px solid white; box-sizing: border-box; padding: 5px;">90,903</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/calendar-month.php?month=December" style="background: 0px 0px; box-sizing: border-box; color: #428bca; text-decoration-line: none;">December</a></td><td style="border: 1px solid white; box-sizing: border-box; padding: 5px;">29</td><td style="border: 1px solid white; box-sizing: border-box; padding: 5px;">41,050<br /></td></tr>
</tbody></table>
<br /><div class="MsoNormal" style="mso-pagination: none; text-align: center; text-align: center;">
<span lang="en-US" style="font-family: Arial; language: en-US; mso-ansi-language: en-US; mso-arabic-font-family: Arial; mso-armenian-font-family: Arial; mso-ascii-font-family: Arial; mso-currency-font-family: Arial; mso-cyrillic-font-family: Arial; mso-default-font-family: Arial; mso-greek-font-family: Arial; mso-hebrew-font-family: Arial; mso-latin-font-family: Arial; mso-latinext-font-family: Arial;"><span dir="ltr"></span>2019</span><span lang="en-US" style="font-family: "BRH Kannada"; font-size: 12pt; text-decoration-line: underline;"> gÀ°è </span><span lang="en-US" style="font-family: Arial; language: en-US; mso-ansi-language: en-US; mso-arabic-font-family: Arial; mso-armenian-font-family: Arial; mso-ascii-font-family: Arial; mso-currency-font-family: Arial; mso-cyrillic-font-family: Arial; mso-default-font-family: Arial; mso-greek-font-family: Arial; mso-hebrew-font-family: Arial; mso-latin-font-family: Arial; mso-latinext-font-family: Arial;"><span dir="ltr"></span>53,518 </span><span lang="en-US" style="font-family: "BRH Kannada"; font-size: 12pt; text-decoration-line: underline;">d£ÀgÀÄ £ÀÆå AiÀiÁPïð ¹n ªÀiÁågÀxÁ£ï C£ÀÄß ¥ÀÇgÉʹzÀgÀÄ.<o:p></o:p></span></div>
<div class="MsoNormal" style="mso-pagination: none; text-align: center; text-align: center;">
<span lang="en-US" style="font-family: "BRH Kannada"; font-size: 12pt; text-decoration-line: underline;">GvÀÛgÀ CªÉÄÃjPÀzÀ mÁ¥ï </span><span lang="en-US" style="font-family: Arial; language: en-US; mso-ansi-language: en-US; mso-arabic-font-family: Arial; mso-armenian-font-family: Arial; mso-ascii-font-family: Arial; mso-currency-font-family: Arial; mso-cyrillic-font-family: Arial; mso-default-font-family: Arial; mso-greek-font-family: Arial; mso-hebrew-font-family: Arial; mso-latin-font-family: Arial; mso-latinext-font-family: Arial;"><span dir="ltr"></span>10</span><span lang="en-US" style="font-family: "BRH Kannada"; font-size: 12pt; text-decoration-line: underline;"> ªÀiÁågÀxÁ£ï NlªÀ£ÀÄß DAiÉÆÃf¹zÀ £ÀUÀgÀUÀ¼ÀÄ ºÁUÀÆ ¥ÀÇgÉʹzÀªÀgÀÄ.<o:p></o:p></span></div>
<div class="MsoNormal">
<br /></div>
<table style="background-color: black; border-collapse: collapse; border-spacing: 0px; color: white; font-family: "Helvetica Neue", Helvetica, Arial, sans-serif; font-size: 14px;"><tbody style="box-sizing: border-box;">
<tr style="box-sizing: border-box;"></tr>
<tr style="box-sizing: border-box;"><td style="border: 1px solid white; box-sizing: border-box; padding: 5px;">Race</td><td style="border: 1px solid white; box-sizing: border-box; padding: 5px;">Finishers</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=New%20York%20City%20Marathon" style="background: 0px 0px; box-sizing: border-box; color: #428bca; text-decoration-line: none;">New York City Marathon</a></td><td style="border: 1px solid white; box-sizing: border-box; padding: 5px;">53,518</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=Chicago%20Marathon" style="background: 0px 0px; box-sizing: border-box; color: #428bca; text-decoration-line: none;">Chicago Marathon</a></td><td style="border: 1px solid white; box-sizing: border-box; padding: 5px;">45,858</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=Boston%20Marathon" style="background: 0px 0px; box-sizing: border-box; color: #428bca; text-decoration-line: none;">Boston Marathon</a></td><td style="border: 1px solid white; box-sizing: border-box; padding: 5px;">26,632</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=Los%20Angeles%20Marathon" style="background: 0px 0px; box-sizing: border-box; color: #428bca; text-decoration-line: none;">Los Angeles Marathon</a></td><td style="border: 1px solid white; box-sizing: border-box; padding: 5px;">20,081</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=Honolulu%20Marathon" style="background: 0px 0px; box-sizing: border-box; color: #428bca; text-decoration-line: none;">Honolulu Marathon</a></td><td style="border: 1px solid white; box-sizing: border-box; padding: 5px;">18,804</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=Marine%20Corps%20Marathon" style="background: 0px 0px; box-sizing: border-box; color: #428bca; text-decoration-line: none;">Marine Corps Marathon</a></td><td style="border: 1px solid white; box-sizing: border-box; padding: 5px;">18,357</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=Walt%20Disney%20World%20Marathon" style="background: 0px 0px; box-sizing: border-box; color: #428bca; text-decoration-line: none;">Walt Disney World Marathon</a></td><td style="border: 1px solid white; box-sizing: border-box; padding: 5px;">11,968</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=Philadelphia%20Marathon" style="background: 0px 0px; box-sizing: border-box; color: #428bca; text-decoration-line: none;">Philadelphia Marathon</a></td><td style="border: 1px solid white; box-sizing: border-box; padding: 5px;">10,068</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=California%20International%20Marathon" style="background: 0px 0px; box-sizing: border-box; color: #428bca; text-decoration-line: none;">California International Marathon</a></td><td style="border: 1px solid white; box-sizing: border-box; padding: 5px;">7,504</td></tr>
<tr style="box-sizing: border-box;"><td style="border: 1px solid white; box-sizing: border-box; padding: 5px;"><a href="https://findmymarathon.com/race-detail.php?zname=Twin%20Cities%20Marathon" style="background: 0px 0px; box-sizing: border-box; color: #428bca; text-decoration-line: none;">Twin Cities Marathon</a></td><td style="border: 1px solid white; box-sizing: border-box; padding: 5px;">6,747<br /></td></tr>
</tbody></table>
</div>
<div>
<br /></div>
<div class="separator" style="clear: both; text-align: center;">
<a href="https://blogger.googleusercontent.com/img/b/R29vZ2xl/AVvXsEgDbQTm-qC_qR02DCbBxVRcd32oAZIaGCKY8IXLJ_TdkvGUM1SybicBuGsb36Zo5Jdxw00M97Jzv_eLISdEUIwtpqugpgrDcEnMxp_uDUUAYniavgV6S6mI6VVfZzAWFZw7o4T93Q/s1600/marathon-runners.png" imageanchor="1" style="margin-left: 1em; margin-right: 1em;"><img border="0" data-original-height="1280" data-original-width="1600" height="512" src="https://blogger.googleusercontent.com/img/b/R29vZ2xl/AVvXsEgDbQTm-qC_qR02DCbBxVRcd32oAZIaGCKY8IXLJ_TdkvGUM1SybicBuGsb36Zo5Jdxw00M97Jzv_eLISdEUIwtpqugpgrDcEnMxp_uDUUAYniavgV6S6mI6VVfZzAWFZw7o4T93Q/s640/marathon-runners.png" width="640" /></a></div>
<div class="MsoNormal" style="mso-pagination: none; text-align: center; text-align: center;">
<span lang="en-US" style="font-family: "BRH Kannada"; font-size: 12pt; text-decoration-line: underline;">NqÀ®Ä DtªÁVgÀĪÀ d£À¸ÁUÀgÀ!</span></div>
</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-47534245384807773572020-06-08T22:10:00.000-04:002020-06-08T22:14:49.067-04:00ಎತ್ತು ಏರಿಗೆ ಎಳೆದರೆ ಕೋಣ ನೀರಿಗೆ ಎಳೀತು...<div dir="ltr" style="text-align: left;" trbidi="on">
<br />
<span style="font-size: x-large;">ಎತ್ತು ಏರಿಗೆ </span>ಎಳೆದರೆ ಕೋಣ ನೀರಿಗೆ ಎಳೀತು...ಹೀಗೆನಿಸಿದ್ದು ನಮ್ಮ ಇತ್ತೀಚಿನ ಸ್ಟಾಕ್ ಮಾರ್ಕೆಟ್ ಮತ್ತು ಎಕಾನಮಿ ಇವುಗಳನ್ನು ಗಮನಿಸಿದಾಗಿನಿಂದ. ಕೊರೋನಾ ವೈರಸ್ಸಿನ ಕೃಪೆಯಿಂದ ಎಷ್ಟೊಂದು ಜನರು ನಿರುದ್ಯೋಗಿಗಳಾಗಿದ್ದಾರೆ, ಎಷ್ಟೋ ಉದ್ಯಮಗಳು ಮುಚ್ಚುವ ಹಂತಕ್ಕೆ ಬಂದು ನಿಂತಿವೆ. ಇನ್ನು ಎಷ್ಟೋ ಸೆಕ್ಟರುಗಳು ಚೇತರಿಸಿಕೊಳ್ಳಲಾರದ ಮಟ್ಟಕ್ಕೆ ದೈನ್ಯ ಸ್ಥಿತಿಯನ್ನು ತಲುಪಿರುವಾಗ, ಇವತ್ತಿನ ಸ್ಟಾಕ್ ಮಾರ್ಕೆಟ್ಟಿನ ಪ್ರತಿಕ್ರಿಯೆಯನ್ನು ನೋಡಿದರೆ ಒಂದಕ್ಕೊಂದು ತಾಳೆಯಂದಂತೆನಿಸುವುದಿಲ್ಲ, ಅಲ್ಲವೇ?<br />
<div class="separator" style="clear: both; text-align: center;">
<a href="https://blogger.googleusercontent.com/img/b/R29vZ2xl/AVvXsEiWRTyVFD6ThVDR0KETVLhJXcQDSe_KF5ACpWWbMEIDpzrGOqTDGtFoIFOwxgxRqHAOKoqBbRY6q170_X4Gz6gDnqheoAFLREHhbA1V4tHrBIDOVvt2xVefl-2nmH6LiROkm2BCrg/s1600/Market+today.JPG" imageanchor="1" style="margin-left: 1em; margin-right: 1em;"><img border="0" data-original-height="381" data-original-width="554" height="440" src="https://blogger.googleusercontent.com/img/b/R29vZ2xl/AVvXsEiWRTyVFD6ThVDR0KETVLhJXcQDSe_KF5ACpWWbMEIDpzrGOqTDGtFoIFOwxgxRqHAOKoqBbRY6q170_X4Gz6gDnqheoAFLREHhbA1V4tHrBIDOVvt2xVefl-2nmH6LiROkm2BCrg/s640/Market+today.JPG" width="640" /></a></div>
<br />
ಎಕಾನಮಿ ಹದಗೆಟ್ಟಿದೆ, ಇನ್ನು ಚಿಗುರಿಕೊಳ್ಳಲು ಹಲವು ತಿಂಗಳುಗಳೇ ಬೇಕು, ವಿಶ್ವದಾದ್ಯಂತ ಎಲ್ಲ ಕಡೆಗೆ ರಿಸೆಶ್ಶನ್ನು ಎಂದು ನೀವು ಬೇಕಾದಷ್ಟು ಕಡೆ ಓದಿರುತ್ತೀರಿ, ಕೇಳಿರುತ್ತೀರಿ. ಆದರೆ, ಇದನ್ನೆಲ್ಲ ಬದಿಗಿಟ್ಟು ವಿಶ್ವದಾದ್ಯಂತ ಮುಖ್ಯ ಮಾರುಕಟ್ಟೆಗಳು ತಮ್ಮ ಸ್ಟಾಕ್ ಇಂಡೆಕ್ಸುಗಳನ್ನು ಕಳೆದ ಎರಡು ತಿಂಗಳ ಕುಸಿತದಿಂದ ಸಂಪೂರ್ಣ ಚೇತರಿಸಿಕೊಂಡಂತೆ ಕಾಣಿಸುತ್ತಿದೆ. ಮಾರ್ಚ್ ತಿಂಗಳ ಕೆಳ ಮಟ್ಟದ ಸೂಚ್ಯಂಕಗಳು, ಎರಡು-ಮೂರು ತಿಂಗಳುಗಳಲ್ಲಿ V ಆಕಾರದ ರಿಕವರಿಯನ್ನು ಪಡೆದುಕೊಂಡಿವೆ, ಇದಕ್ಕೆ ಏನು ಕಾರಣವಿರಬಹುದು?<br />
<br />
- ಬೇರೆ ಕಡೆಗೆ ಹೂಡಿಕೆ ಮಾಡಲಾರದೆ ಹೆಚ್ಚಿನ ರಿಟರ್ನ್ಗೋಸ್ಕರ ಸ್ಟಾಕ್ ಮಾರ್ಕೆಟ್ ನಂಬಿಕೊಂಡು ಹೆಚ್ಚು ಹೆಚ್ಚು ಹಣ ಹೂಡುವ ಶ್ರೀಮಂತರು ಇನ್ನೂ ಇರಬಹುದೇ?<br />
- ಮೊದಲೆಲ್ಲ ಮನುಷ್ಯರು ಮಾಡುವ ಕೆಲಸವನ್ನು ಈಗೀಗ ಕಂಪ್ಯೂಟರುಗಳು (algo trading) ಮಾಡುತ್ತಿರುವುದರಿಂದ, ಅಂತಹ ಟ್ರೇಡಿಂಗ್ ಸಿಸ್ಟಂಗಳಲ್ಲಿ ಜನ ಸಾಮಾನ್ಯರ ಯಾವುದೇ ಎಮೋಷನ್ಗೆ ಬೆಲೆ ನೀಡುತ್ತಿಲ್ಲವೇ?<br />
- ಸೊರಗಿದ ಆರ್ಥಿಕತೆ, ರಿಸೆಶನ್ ಇತರ ಪದಪುಂಜಗಳೆಲ್ಲ ಕೇವಲ ಬಡವರಿಗೆ ಮಾತ್ರ ಅನ್ವಯಿಸುವಂತಹವೇ?<br />
- ಕೊಳ್ಳುಬಾಕತನದ ಕನ್ಸೂಮರುಗಳು ಇಲ್ಲದಿದ್ದರೂ ಈ ಸ್ಟಾಕ್ ಮಾರ್ಕೆಟ್ ಅನ್ನು ಯಾವುದೋ ಅವ್ಯಕ್ತ ಶಕ್ತಿಯೊಂದು [ವಿದೇಶಿ ಹೂಡಿಕೆ (foreign investment), ಸರ್ಕಾರೀ ಮಧ್ಯವರ್ತಿತನ (quantitative easing), ಪುನಃ ಕೊಳ್ಳುವಿಕೆ (trade buyback), ಇತ್ಯಾದಿ] ಮುನ್ನಡೆಸುತ್ತಿರಬಹುದೇ?<br />
<br />
ಈ ವರ್ಷ, ಬೆಳೆಯುವ ಮಕ್ಕಳಿಂದ ಹಿಡಿದು ಮುದುಕರವರೆಗೆ ಯಾರಿಗೂ ಹೊಸ ಬಟ್ಟೆ ಬೇಕಾಗಿರಲಾರದು. ಎಲ್ಲರ ಸಮ್ಮರ್ ವೆಕೇಶನ್ ಕೂಡ ಒಂದಲ್ಲ ಒಂದು ರೀತಿಯಿಂದ ಕೊರೋನಾ ವೈರಸ್ಸಿನ ಪ್ರಭಾವಕ್ಕೆ ಒಳಗಾಗಿದೆ. ಮುಂದೆ ಆಗಸ್ಟ್-ಸೆಪ್ಟೆಂಬರ್ನಲ್ಲಿ ಅಮೇರಿಕದಲ್ಲಿ ಶಾಲೆಗಳು ತೆರೆಯದೇ ಮಕ್ಕಳು ಮನೆಯಲ್ಲೇ ಇದ್ದರೆ, ಬ್ಯಾಕ್-ಟು-ಸ್ಕೂಲ್ ಖರೀದಿಗೂ ದಕ್ಕೆಯಾಗುತ್ತದೆ. ಜನರು ಕಡಿಮೆ ಡ್ರೈವ್ ಮಾಡುತ್ತಿದ್ದಾರೆ, ಹೆಚ್ಚಿನ ಕಾರುಗಳನ್ನು ಕೊಳ್ಳುತ್ತಿಲ್ಲ. ಕಾರುಗಳು ರೀಪೇರಿಗಾಗಲೀ, ಸರ್ವೀಸಿಗಾಗಲೀ ಬರುತ್ತಿಲ್ಲ. ರೆಸ್ಟೋರಂಟುಗಳಿಗೆ ಜನರು ಹೋಗುವುದು ಕಡಿಮೆಯಾಗಿದೆ. ಜನರ ತಿಂಗಳ ಖರ್ಚು ಕನಿಷ್ಠ ಪ್ರಮಾಣಕ್ಕೆ ಬಂದು ನಿಂತಿದೆ. ಇನ್ನು ಏರ್ಲೈನ್ಸ್ ಪ್ರಯಾಣ ಹೆಚ್ಚಿನ ಪ್ರಮಾಣದಲ್ಲಿ ನೆನೆಗುದ್ದಿಗೆ ಬಿದ್ದಿದೆ. ಹೀಗೆ, ರೀಟೈಲ್-ಹೋಲ್ಸೇಲ್ ಎಲ್ಲ ಖರೀದಿಗಳೂ ಸಹ ಕಷ್ಟಕ್ಕೆ ಒಳಗಾಗಿ ಸೊರಗಿವೆ. ಹಾಗಿದ್ದರೆ, ಇವುಗಳೆಲ್ಲದರ ಒಟ್ಟು ಹೊಡೆತ ಸ್ಟಾಕ್ ಮಾರ್ಕೆಟ್ಟಿನ ಮೇಲೆ ಒಂದಲ್ಲ ಒಂದು ರೀತಿಯಿಂದ ಆಗಲೇ ಬೇಕಲ್ಲವೇ?<br />
<br />
<a href="https://www.statista.com/statistics/270034/percentage-of-us-adults-to-have-money-invested-in-the-stock-market/" target="_blank">ಒಂದು ವರದಿಯ ಪ್ರಕಾರ</a>, ಅಮೇರಿಕದಲ್ಲಿ ನೂರಕ್ಕೆ ಐವತ್ತೈದು ಮಂದಿ ಒಂದಲ್ಲ ಒಂದು ರೀತಿಯಲ್ಲಿ ಸ್ಟಾಕ್ ಮಾರ್ಕೆಟ್ಟಿನಲ್ಲಿ ಹೂಡಿಕೆ ಮಾಡುತ್ತಾರೆ. ಈ ರೀತಿ ಹೂಡಿಕೆ ಮಾಡುವವರಲ್ಲಿ individual (retail) traders ಮತ್ತು institutional traders ಎಂದು ಎರಡು ರೀತಿಯವರನ್ನು ಗುರುತಿಸಬಹುದು. ರೀಟೈಲ್ ಟ್ರೇಡರ್ಸ್ ತಮ್ಮ ಚಿಕ್ಕ ಚಿಕ್ಕ ಪೋರ್ಟ್ಫೋಲಿಯೋ ಗಳನ್ನು ಸ್ವಯಂ ಮ್ಯಾನೇಜು ಮಾಡುತ್ತಾರೆ, ಹೆಚ್ಚಿನವರು ಹಣ ಕಳೆದುಕೊಳ್ಳುತ್ತಾರೆ ಎಂಬುದು ಗೊತ್ತಿರುವ ವಿಷಯ. ಆದರೆ, Institutional traders ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಿ ಬಿಲಿಯನ್ ಗಟ್ಟಲೆ ಲಾಭಗಳಿಸುತ್ತಾರೆ... ಇವರ ಪ್ರಮಾಣ ಸಾವಿರದಲ್ಲಿ ಒಬ್ಬರ ಲೆಕ್ಕ. ಇಂಥ ಶ್ರೀಮಂತರು ಎಂತಹ ಎಕಾನಮಿ ಇದ್ದರೂ ಅದರಲ್ಲಿ ಲಾಭಗಳಿಸುವ "ತಂತ್ರ" ಉಳ್ಳವರಾಗಿರುತ್ತಾರೆ. ಇವರಿಗೆ ಸಾಧಾರಣವಾಗಿ ಯಾವುದೇ ರೀತಿಯಲ್ಲಿ ಹೊಡೆತ ಬೀಳದಂತೆ ತಮ್ಮ ಪೋರ್ಟ್ಫೋಲಿಯೋಗಳಲ್ಲಿ ಹೆಡ್ಜ್ (hedge) ಮಾಡಿರುತ್ತಾರೆ.<br />
<br />
ಈಗ ಈ ಎಲ್ಲ ವಿವರಗಳನ್ನಿಟ್ಟುಕೊಂಡು (ನಿಜವನ್ನು) ಯೋಚಿಸಿದರೆ, ಇಲ್ಲಿನ ಸ್ಟಾಕ್ ಮಾರ್ಕೆಟ್ಟುಗಳನ್ನು drive ಮಾಡುವವರು ಎಂಬುದು ನಿಮಗೆ ಗೊತ್ತಾಗುತ್ತದೆ. ಒಂದು ಕಡೆಗೆ ಜನರ pension funds ಮತ್ತಿತರ long term investment ಗಳಿಗೆ ಕಾಲಕ್ರಮೇಣ ಹೂಡಿಕೆ ಮಾಡುವುದರ ಅಗತ್ಯ ಯಾವತ್ತೂ ಇದ್ದೇ ಇರುವಾಗ ಮಾರುಕಟ್ಟೆಗೆ ನಿಧಾನವಾಗಿ ಹಣ ಬರುತ್ತಲೇ ಇರುತ್ತದೆ. ಮತ್ತೊಂದು ಕಡೆಗೆ, ಹಣವುಳ್ಳವರು ಇನ್ನೂ ಶ್ರೀಮಂತರಾಗುವ ಅನೇಕ ಸೌಲಭ್ಯಗಳ ವರದಾನವೇ ಅವರಿಗೆ ಸಿಗುತ್ತದೆ. ಈ ಎಲ್ಲದರ ನಡುವೆ ಮಧ್ಯಮವರ್ಗ ಮತ್ತು ಕೆಳವರ್ಗದ ಜನರ ಪ್ರತಿದಿನದ ತಿಣುಕಾಟ-ಗೊಣಗಾಟಗಳು ಹಾಗೆ ಮುಂದುವರೆಯುತ್ತವೆ. ಕಷ್ಟದ ಕಾಲದಲ್ಲಿ ಬಡವರು ಇನ್ನಷ್ಟು ಬಡವರಾಗುತ್ತಾರೆ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಾರೆ. ಪ್ರಪಂಚದಾದ್ಯಂತ ನೀವು ಯಾವುದೇ ದೇಶವನ್ನು ಯಾವುದೇ "ಇಸಂ" (ism) ಮಸೂರದಲ್ಲಿ ನೋಡಿದರೂ ಎಲ್ಲ ಒಂದೇ ರೀತಿಯಲ್ಲಿ ಕಾಣುತ್ತದೆ!</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-78139963437399609142020-06-06T08:16:00.004-04:002020-06-06T17:55:54.551-04:00ಗೋಲ್ಫ್ ಆಡುತ್ತಾರೆ ಬಿಡಿ...ಗೋಲ್ಫ್ ಆಡುತ್ತಾರೆ ಬಿಡಿ<div dir="ltr" style="text-align: left;" trbidi="on">
<div style="text-align: center;">
<span style="font-size: x-large;">ಉಳ್ಳವರಿಗೇನು ಬಿಡಿ</span> ಸ್ವಾಮಿ ಬಿಸಿಲೇ ನೆರಳೇ </div>
<div style="text-align: center;">
ಇನ್ಯಾರೋ ಸೃಷ್ಟಿಸಿದ ಕಷ್ಟ ಕಾರ್ಪಣ್ಯಗಳ ಗೋಳೇ</div>
<div style="text-align: center;">
ತಮ್ಮ ತನವನು ಇನ್ಯಾರೋ ಕಲಿತು ಬಿಟ್ಟಾರೇನೋ ಎಂದು</div>
<div style="text-align: center;">
ಛಲ ಬಿಡದ ತ್ರಿವಿಕ್ರಮರು ಎಲ್ಲ ಕಡೆ ಗೋಲ್ಫ್ ಆಡುತ್ತಾರೆ ಬಿಡಿ|</div>
<div style="text-align: center;">
<br /></div>
<div style="text-align: center;">
ಸುತ್ತ ಮುತ್ತಲು ಮನಸುಗಳು ಚದುರಿ</div>
<div style="text-align: center;">
ಕನಸುಗಳು ಫಾಲ್ ಎಲೆಗಳ ತರಹ ಉದುರಿ</div>
<div style="text-align: center;">
ನಾವೇ ಹುಟ್ಟಿಸಿದ ರಣರಂಗ ನಮ್ಮನ್ನೇ </div>
<div style="text-align: center;">
ಅಣಕಿಸುತ್ತಿರುವಾಗ ಗೋಲ್ಫ್ ಆಡುತ್ತಾರೆ ಬಿಡಿ|</div>
<div style="text-align: center;">
<br /></div>
<div style="text-align: center;">
ಇವರ ತಲೆಯ ಮೇಲಿನ ಟೋಪಿ ಬಿಸಿಲನ್ನು ನಾಚಿಸಿ</div>
<div style="text-align: center;">
ಇವರ ಮುಖಗಳ ಮೇಲಿನ ಮಂದಹಾಸವ ಉಳಿಸಿ</div>
<div style="text-align: center;">
ಕಡಕ್ಕಾಗಿ ಇಸ್ತ್ರಿ ಕಾಣಿಸಿದ ಇವರ ಪೋಷಾಕುಗಳು</div>
<div style="text-align: center;">
ಸೆಟೆದು ನಿಂತಿರುವಾಗ ಗೋಲ್ಫ್ ಆಡುತ್ತಾರೆ ಬಿಡಿ|</div>
<div style="text-align: center;">
<br /></div>
<div style="text-align: center;">
ನೆಲೆದ ಮೇಲೆ ನಿಂತ ನೀರಿರಲಿ ಇಲ್ಲದಿರಲಿ</div>
<div style="text-align: center;">
ಪ್ರಪಂಚದ ಆಗುಹೋಗುಗಳು ಆಗದೇ ಇರಲಿ</div>
<div style="text-align: center;">
ಇವರ ಶಾಂತಿಗೆಂದೂ ಭಂಗ ಬಾರದು ನಿಂತ ನೆಲವೂ</div>
<div style="text-align: center;">
ಕದಲದೇ ಶಾಂತವಾಗಿರುವಾಗ ಗೋಲ್ಫ್ ಆಡುತ್ತಾರೆ ಬಿಡಿ|</div>
<div style="text-align: center;">
<br /></div>
<div style="text-align: center;">
ಆಡುತ್ತಲೇ ಕಾಸು ಮಾಡುವ, ಕಾಸು ಮಾಡಲೆಂದೇ ಆಡುವ</div>
<div style="text-align: center;">
ತಂಪು ಕನ್ನಡಕದೊಳಗಿಂದ ದೂರದ ನೋಟ ನೋಡುವ</div>
<div style="text-align: center;">
ಜಡ ಹಿಡಿದ ಬಿಳಿ ಚೆಂಡು ಎನಿಸಿಕೊಳ್ಳುವ ಗಟ್ಟಿ ಉರುಳನು</div>
<div style="text-align: center;">
ದೂರದ ಗುಂಡಿಯಲಿ ತೂರುವ ಗಂಡಸರು ಗೋಲ್ಫ್ ಆಡುತ್ತಾರೆ ಬಿಡಿ|</div>
<div style="text-align: center;">
<br /></div>
<div style="text-align: center;">
ಬಡವರೆಲ್ಲೂ ಸುತ್ತ ಸುಳಿಯದ ಶ್ರೀಮಂತರ ಆಟವಿದು</div>
<div style="text-align: center;">
ದುಡ್ಡು ಹೆಚ್ಚಾದಂತೆ ಚೆಂಡಿನ ಗಾತ್ರ ಚಿಕ್ಕದಾಗುವ ಸೂತ್ರವಿದು</div>
<div style="text-align: center;">
ಯಾರೂ ಹೇಗಾದರೂ ಇರಲಿ ಅವರವರ ನಿರ್ಲಿಪ್ತತೆಯ ಮುಸುಕಿನಲಿ</div>
<div style="text-align: center;">
ಸುಮ್ಮಿನಿರುವ ಪಾಠ ಉರು ಹೊಡೆದ ಸೋಗಿನಲಿ ಗೋಲ್ಫ್ ಆಡುತ್ತಾರೆ ಬಿಡಿ|</div>
<div style="text-align: center;">
<br /></div>
<div style="text-align: center;">
ಇವರು ನಡೆದ ದಾರಿಯಲ್ಲಿ ಹುಲ್ಲು ಬೆಳೆಸಿ ನೀರು ಕುಡಿಸಲು ಒಬ್ಬ</div>
<div style="text-align: center;">
ಆಡುವುದು ಇವರೇ ಕಂಡುಕೊಂಡ ಪರಿ ಕರಗಿಸಲು ಕೊಬ್ಬ</div>
<div style="text-align: center;">
ತಗ್ಗಿದ್ದಲ್ಲಿ ಬಂದು ಸೇರುವ ಚೆಂಡಿನ ಹಾಗೆ ಹಣಬಂದು ಕೂಡುತಿರುವಾಗ</div>
<div style="text-align: center;">
ಇನ್ನೇನು ತಾನೇ ಮಾಡಬಲ್ಲರು? ಗೋಲ್ಫ್ ಆಡುತ್ತಾರೆ ಬಿಡಿ|</div>
</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-2355901375478910742020-06-01T19:35:00.002-04:002020-06-02T07:00:48.626-04:00ಕೆಲಸಕ್ಕೆ ಜನರಿಲ್ಲ!<div dir="ltr" style="text-align: left;" trbidi="on">
<br />
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;"><span style="font-size: x-large;">ಒಂದು ತಲೆಮಾರಿನಿಂದ</span> ಮತ್ತೊಂದು ತಲೆಮಾರಿಗೆ ತುಲನೆ ಮಾಡಿ ನೋಡಿದಾಗ, ಹಿಂದಿನ
ತಲೆಮಾರಿನವರು ಕಷ್ಟ ಜೀವಿಗಳು ಅನ್ನಿಸೋದು ಸಹಜ.<span style="mso-spacerun: yes;"> </span>ತಂತ್ರಜ್ಞಾನ
ದಿನದಿಂದ ದಿನಕ್ಕೆ ಬೆಳೆದ ಹಾಗೆ ನಾಗರೀಕತೆ, ನಗರೀಕರಣ, ಜನರ ವಲಸೆ ಮೊದಲಾದವು ಬದಲಾಗುತ್ತಿರುತ್ತವೆ.<span style="mso-spacerun: yes;"> </span>ನಮ್ಮ ಪೂರ್ವಜರು ತಮ್ಮ ಇಡೀ ಜೀವಮಾನದಲ್ಲಿ ಪ್ರಯಾಣಿಸಿದ
ದೂರವನ್ನು ನಾವು ಒಂದು ತಿಂಗಳಲ್ಲೇ ಪ್ರಯಾಣಿಸಿ ಅವರನ್ನು ಮೀರಿಸಬಲ್ಲೆವು.<span style="mso-spacerun: yes;"> </span>ಆದರೆ,<span style="mso-spacerun: yes;"> </span>ಒಂದು
ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ಹೆಚ್ಚಾಗುತ್ತಿರುವ ಅಂತರವನ್ನು ಗ್ರಹಿಸಲು ಈ ಕೆಳಗಿನ ಎರಡು
ಸೂಕ್ಷ್ಮಗಳನ್ನು ಗಮನಿಸಿ:</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">1. ಹಿಂದೆಲ್ಲ ಕೆಲಸಗಾರರು ಸಿಗುತ್ತಿದ್ದರು, ಇಂದು ಕೆಲಸಗಾರರು ಸಿಗುವುದಿಲ್ಲ.<span style="mso-spacerun: yes;"> </span>ಸಿಕ್ಕರೂ ಸಹ "ನಿಯತ್ತಿ"ನಿಂದ ಮೈ ಬಗ್ಗಿಸಿ
ದುಡಿಯುವುದಿಲ್ಲ.<span style="mso-spacerun: yes;"> </span>ಕಡಿಮೆ ಕೆಲಸಕ್ಕೆ ಹೆಚ್ಚು ಬೆಲೆ
ಕೇಳುತ್ತಾರೆ.</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">2.<span style="mso-spacerun: yes;"> </span>ಎಲ್ಲರೂ ಓದಿದವರಾಗಿ
ಮೇಲ್ಮಟ್ಟದ ಕೆಲಸಗಳನ್ನೇ ಯಾಚಿಸುವುದಾದರೆ, ಉಳಿದೆಲ್ಲ ಕೆಲಸಗಳನ್ನು ಯಾರು ಮಾಡುವವರು? ತೋಟ-ಗದ್ದೆಗಳಲ್ಲಿ
ಕೆಲಸ ಮಾಡಲು, ರಸ್ತೆ ಗುಡಿಸಲು, ನೆಲ ಒರೆಸಲು, ಬಟ್ಟೆ ಒಗೆಯಲು, ಮನೆ ಕಟ್ಟಲು, ಮರಳು ಹೊರಲು, ಕಟ್ಟಿಗೆ
ಒಡೆಯಲು, ಸುಣ್ಣ-ಬಣ್ಣ ಹಚ್ಚಲು, ತೆಂಗಿನಕಾಯಿ ಕೊಯ್ಯಲು, ಮನೆ ಕೆಲಸ ಮಾಡಲು... ಕೆಲಸಕ್ಕೆ ಯಾರು ಸಿಗುತ್ತಾರೆ?</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "arial" , sans-serif;">***<o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<br />
<br />
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ಕಳೆದ ಇಪ್ಪತ್ತು ವರ್ಷಗಳಲ್ಲಿ ಯು.ಎಸ್.ಎ. ಒಂದು ದೇಶದಲ್ಲಿಯೇ (ಒಂದು ಅಧ್ಯಯನದ
ಪ್ರಕಾರ) ಸುಮಾರು </span><span style="font-family: "arial" , sans-serif;">50 </span><span lang="KN" style="font-family: "nirmala ui semilight" , sans-serif;">ಲಕ್ಷ ಮ್ಯಾನ್ಯುಫ್ಯಾಕ್ಚರಿಂಗ್
ಕೆಲಸಗಳು ಕಾಣೆಯಾದವು.<span style="mso-spacerun: yes;"> </span></span><span style="font-family: "arial" , sans-serif;">60 </span><span lang="KN" style="font-family: "nirmala ui semilight" , sans-serif;">ರ ದಶಕದಲ್ಲಿ ಸುಮಾರು ನೂರಕ್ಕೆ </span><span style="font-family: "arial" , sans-serif;">25% </span><span lang="KN" style="font-family: "nirmala ui semilight" , sans-serif;">ಜನರು ಮ್ಯಾನ್ಯುಫ್ಯಾಕ್ಚರಿಂಗ್ನಲ್ಲಿ ತೊಡಗಿಕೊಂಡಿದ್ದರೆ, ಇಂದು ಅದರ
ಪ್ರಮಾಣ ಸುಮಾರು </span><span style="font-family: "arial" , sans-serif;">5% </span><span lang="KN" style="font-family: "nirmala ui semilight" , sans-serif;">ಮಟ್ಟಿಗೆ ಇಳಿದಿದೆ.<span style="mso-spacerun: yes;"> </span>ಒಂದು ಕಾಲದಲ್ಲಿ </span><span style="font-family: "arial" , sans-serif;">Ford </span><span lang="KN" style="font-family: "nirmala ui semilight" , sans-serif;">ಅಂಥ ಕಂಪನಿಗಳು ತಮ್ಮ </span><span style="font-family: "arial" , sans-serif;">supply chain</span><span lang="KN" style="font-family: "nirmala ui semilight" , sans-serif;">ನಲ್ಲಿ ಬರುವ ಎಲ್ಲ ವಿಧವಾದ ಪರಿಕರ/ವಸ್ತುಗಳನ್ನು ತಮ್ಮಷ್ಟಕ್ಕೆ ತಾವೇ
ತಯಾರಿಸುತ್ತಿದ್ದರು.<span style="mso-spacerun: yes;"> </span>ಆದರೆ, ಈಗ ಅವರ ಮುಖ್ಯವಾದ </span><span style="font-family: "arial" , sans-serif;">components (such as engine parts) </span><span lang="KN" style="font-family: "nirmala ui semilight" , sans-serif;">ಸಹ
ಬೇರೆ ಕಡೆಯಿಂದ ಆಮದಾಗುವ ಪರಿಸ್ಥಿತಿ ಇದೆ.</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ಮ್ಯಾನ್ಯುಫ್ಯಾಕ್ಚರಿಂಗ್ ವಲಯದಲ್ಲಿರುವ ಕೆಲಸಗಾರರು ಅಮೇರಿಕದಲ್ಲಿ ಒಂದು
ಘಂಟೆಗೆ </span><span style="font-family: "arial" , sans-serif;">20 </span><span lang="KN" style="font-family: "nirmala ui semilight" , sans-serif;">ಡಾಲರ್ ಅಷ್ಟುಸಂಬಳದಲ್ಲಿ
ಕೆಲಸ ಮಾಡುವ ಸ್ಥಿತಿ ಇದೆ.<span style="mso-spacerun: yes;"> </span>ಇದು, ಇಲ್ಲಿನ ಕನಿಷ್ಠ
ವೇತನದ ಮೂರು ಪಟ್ಟು ಹೆಚ್ಚು ಎಂದುಕೊಳ್ಳಬಹುದು.<span style="mso-spacerun: yes;"> </span>ಅದೇ
ಗುಣಮಟ್ಟದ ವಸ್ತುಗಳು, ಹೊರದೇಶದಿಂದ ಕಡಿಮೆ ಬೆಲೆಗೆ ಸಿಗುವಂತೆ (ವಿಶೇಷವಾಗಿ ಚೀನಾದಿಂದ) ಆಮದಾಗುವ
ಪರಿಸ್ಥಿತಿ ಇರುವುದಾದರೆ ಇಲ್ಲಿ ಮ್ಯಾನ್ಯುಫ್ಯಾಕ್ಚರಿಂಗ್ ಹೇಗೆ ಉಳಿಯುತ್ತದೆ? ಹೇಗೆ ಬೆಳೆಯುತ್ತದೆ?</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "arial" , sans-serif;">***<o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;"><b>ಸಾಮಾನ್ಯ ಜನರ ಅನುಕೂಲ:</b> ತೊಂಭತ್ತರ ದಶಕದ ಕೊನೆಯಲ್ಲಿ ಭಾರತದ ಬ್ಯಾಂಕುಗಳಿಗೆ
ನಿಧಾನವಾಗಿ ಕಂಪ್ಯೂಟರುಗಳು ನುಸುಳತೊಡಗಿದಾಗ ನಮ್ಮನಮ್ಮಲ್ಲಿ ವಾದ-ವಿವರಣೆಗಳು ನಡೆಯುತ್ತಿದ್ದವು.<span style="mso-spacerun: yes;"> </span>ಒಂದಿಷ್ಟು ಜನ ಈ ಕಂಪ್ಯೂಟರುಗಳು ಜನರ ಕೆಲಸವನ್ನು ನುಂಗಿ
ಹಾಕುತ್ತವೆ ಎಂದೂ, ಇನ್ನೊಂದಿಷ್ಟು ಜನ ಈ ಕಂಪ್ಯೂಟರುಗಳು ಜನರ ದಕ್ಷತೆಯನ್ನೂ (</span><span style="font-family: "arial" , sans-serif;">efficiency), </span><span lang="KN" style="font-family: "nirmala ui semilight" , sans-serif;">ಜನರ ಕೆಲಸದ ನಿಖರತೆಯನ್ನೂ (</span><span style="font-family: "arial" , sans-serif;">accuracy) </span><span lang="KN" style="font-family: "nirmala ui semilight" , sans-serif;">ಹೆಚ್ಚಿಸುತ್ತವೆ ಎಂದೂ ವಾದವನ್ನು ಮಂಡಿಸುತ್ತಿದ್ದೆವು.<span style="mso-spacerun: yes;"> </span>ಆಗಿನ ಕಾಲವೆಲ್ಲ ದಪ್ಪನಾದ ಲೆಡ್ಜರುಗಳ ಕಾಲ, ಎಲ್ಲಿ ನೋಡಿದರೂ
ಅಲ್ಲಿ ಪೇಪರುಗಳದ್ದೇ ದರಬಾರು, ಅವುಗಳದ್ದೇ ಕಾರುಬಾರು.</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ನಂತರ ಕಂಪ್ಯೂಟರುಗಳು ನಿಧಾನವಾಗಿ ಎಲ್ಲ ಕಡೆಗೆ ಹರಡಿಕೊಂಡ ಮೇಲೆ ನಾವೆಲ್ಲರೂ
ಅದರ ಅನುಕೂಲವನ್ನು ಪಡೆದಿದ್ದೇವೆ. ಆದರೆ, ಕಂಪ್ಯೂಟರುಗಳು
ಬಂದ ನಂತರ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಡಿಮೆ ಏನೂ ಆಗಿಲ್ಲ. ಬ್ಯಾಂಕುಗಳು ಬೆಳೆದಂತೆ, ಬ್ರ್ಯಾಂಚುಗಳು ಹೆಚ್ಚಾದವು, ಎಟಿಎಮ್
ಮಿಷೀನುಗಳು ಎಲ್ಲ ಕಡೆ ತಲೆ ಎತ್ತಿದವು. ಮುಂದೆ ಕ್ರೆಡಿಟ್
ಕಾರ್ಡ್, ನಂತರದಲ್ಲಿ ಆನ್ಲೈನ್ ಪೇಮೆಂಟ್, ಪೇಟಿಎಮ್ ನಂತಹ ಸೇವೆಗಳು ಬಂದು ಹಣ ವಿಲೇವಾರಿ ತ್ವರಿತವಾಯಿತು. ಹಣದುಬ್ಬರ (</span><span style="font-family: "arial" , sans-serif;">inflation) </span><span lang="KN" style="font-family: "nirmala ui semilight" , sans-serif;">ಹೆಚ್ಚಾದಂತೆ ಪ್ಯಾಂಟ್ ಜೇಬಿನಲ್ಲಿ ತೆಗೆದುಕೊಂಡು ಹೋಗುವ ಹಣ ಯಾವ ಕೆಲಸಕ್ಕೂ
ಸಾಕಾಗದೇ ರಾಶಿ ರಾಶಿ ಹಣವನ್ನು ಚಿಟಿಕೆ ಹೊಡೆಯುವಷ್ಟರಲ್ಲಿ ಅಲ್ಲಿಂದಿಲ್ಲಿಗೆ ವಹಿವಾಟು ನಡೆಸುವಂತಾಯಿತು. ಈ ಅನುಕೂಲಗಳೆಲ್ಲ ಒಂದು ರೀತಿಯಲ್ಲಿ ಕಂಪ್ಯೂಟರ್ ಕ್ಷೇತ್ರದಲ್ಲಿ
ಆದ ಅವಿಷ್ಕಾರಗಳಿಂದಲೇ ಸಾಧ್ಯವಾದದ್ದು.</span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<div class="separator" style="clear: both; text-align: center;">
<a href="https://blogger.googleusercontent.com/img/b/R29vZ2xl/AVvXsEg6fQh_6KObiHYl5LwODgDF_8S16GWPFT2jJAHf9XuPF7kbmWf341B8mA5NQgXYwEYyyN5TiNPlUjU-RjndbkEKvgTviQxrbBXAI2iXL9tBDmEqkRdv6Koch23-mC0vzv03bSHWYg/s1600/old-bengaluru.webp" imageanchor="1" style="margin-left: 1em; margin-right: 1em;"><img border="0" data-original-height="473" data-original-width="630" height="474" src="https://blogger.googleusercontent.com/img/b/R29vZ2xl/AVvXsEg6fQh_6KObiHYl5LwODgDF_8S16GWPFT2jJAHf9XuPF7kbmWf341B8mA5NQgXYwEYyyN5TiNPlUjU-RjndbkEKvgTviQxrbBXAI2iXL9tBDmEqkRdv6Koch23-mC0vzv03bSHWYg/s640/old-bengaluru.webp" width="640" /></a></div>
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "nirmala ui semilight" , sans-serif;"><b>ಸಿರಿವಂತರ ನೋವು: </b>ಯಾವುದಾದರೂ ಹಳೆಯ ಕನ್ನಡ ಸಿನಿಮಾಗಳನ್ನೋ ಅಥವಾ ಫೋಟೋಗಳನ್ನೋ
ನೀವು ನೋಡಿದರೆ ಒಂದಂತೂ ನಿಮಗೆ ಗ್ಯಾರಂಟಿಯಾಗುತ್ತದೆ.</span><span style="font-family: "nirmala ui semilight" , sans-serif;">
</span><span style="font-family: "nirmala ui semilight" , sans-serif;">ನಾವು ನೋಡಿದ ಎಂಭತ್ತರ ದಶಕದಲ್ಲಿ ಟ್ರಾಫಿಕ್ ಜಾಮ್ ಅನ್ನೋ ಪರಿಸ್ಥಿತಿ ಇರುತ್ತಲೇ ಇರಲಿಲ್ಲ.</span><span style="font-family: "nirmala ui semilight" , sans-serif;"> </span><span style="font-family: "nirmala ui semilight" , sans-serif;">ಊರಿನಲ್ಲಿ ಕೆಲವೇ ಕೆಲವು ಮನೆಗಳಿಗೆ ಫೋನ್ ಕನೆಕ್ಷನ್ ಇರುತ್ತಿತ್ತು.</span><span style="font-family: "nirmala ui semilight" , sans-serif;"> </span><span style="font-family: "nirmala ui semilight" , sans-serif;">ದೂರದ ಊರುಗಳಿಂದ ಟ್ರಂಕ್ ಕಾಲ್ ಮಾಡಿ ಕರೆ ಮಾಡಬೇಕಿತ್ತು.</span><span style="font-family: "nirmala ui semilight" , sans-serif;"> </span><span style="font-family: "nirmala ui semilight" , sans-serif;">ಅದರ ಜೊತೆಗೆ ಊರಿನಲ್ಲಿ ನಿಗದಿತ ಸಮಯಕ್ಕೆ ಹೋಗಿ ಬರುತ್ತಿದ್ದ
ಬಸ್ಸುಗಳು, ಆಗಾಗ್ಗೆ ಬಂದು ಹೋಗುತ್ತಿದ್ದ ಲಾರಿಗಳನ್ನು ಬಿಟ್ಟರೆ ಕೇವಲ ಶ್ರೀಮಂತರ ಮನೆಯ ಕಾರುಗಳಿಗೆ
ರಸ್ತೆಗಳು ಮೀಸಲಾಗಿದ್ದವು. ಕೇವಲ ಹಳ್ಳಿಗಳಷ್ಟೇ ಏಕೆ, ಜಿಲ್ಲಾ ಕೇಂದ್ರಗಳೂ, ಬೆಂಗಳೂರಿನಲ್ಲೂ ಸಹ
ಅಷ್ಟೊಂದು ಕಾರುಗಳು ಓಡಾಡುತ್ತಿರಲಿಲ್ಲ.</span><span style="font-family: "nirmala ui semilight" , sans-serif;"> </span><span style="font-family: "nirmala ui semilight" , sans-serif;">ಕಾರು ಇಟ್ಟುಕೊಂಡವರಿಗೆ
ಯಾವತ್ತೂ ಪಾರ್ಕಿಂಗ್ ಸಮಸ್ಯೆ ಬಂದುದನ್ನು ನಾನು ನೋಡಿಲ್ಲ, ಕೇಳಿಲ್ಲ.</span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ಈಗ ಹೆಚ್ಚಿನ ಮಧ್ಯಮ ವರ್ಗದ ಕುಟುಂಬಗಳಲ್ಲಿ ಕಾರು ಇದೆ. ಕೆಲವೊಂದು ಮನೆಗಳಲ್ಲಿ ಕಾರುಗಳನ್ನು ನಿಲ್ಲಿಸಲು ಜಾಗವಿರದಿದ್ದರೂ
ಅವರ ಹತ್ತಿರ ಕನಿಷ್ಠ ಒಂದಾದರೂ ಕಾರು ಇರುವುದು ಸಾಮಾನ್ಯವಾಗಿದೆ. ದೇಶದ ಉದ್ದಗಲಕ್ಕೂ ಇಂದು ಕಾರುಗಳ ಪ್ರಮಾಣ ಬಹಳಷ್ಟು ಹೆಚ್ಚಾಗಿದೆ. <a href="https://economictimes.indiatimes.com/news/politics-and-nation/number-of-vehicles-in-bengaluru-rises-by-a-mind-boggling-6099-in-40-years/articleshow/57807459.cms" target="_blank">ಎಕನಾಮಿಕ್ ಟೈಮ್ಸ್ ವರದಿಯ</a> ಪ್ರಕಾರ ಕಳೆದ ನಲವತ್ತು ವರ್ಷಗಳಲ್ಲಿ
ಬೆಂಗಳೂರು ನಗರ ಒಂದರಲ್ಲಿಯೇ ವಾಹನಗಳ ಪ್ರಮಾಣ </span><span style="font-family: "arial" , sans-serif;">6000% </span><span lang="KN" style="font-family: "nirmala ui semilight" , sans-serif;">ದಷ್ಟು ಏರಿರುವುದನ್ನು ಕಾಣಬಹುದು.</span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "nirmala ui semilight" , sans-serif;">ಊರು-ಕೇರಿಯ ರಸ್ತೆಗಳು ಕೇವಲ ಸಿರಿವಂತರಿಗೆ ಮಾತ್ರ ಎನ್ನುವಂತಿದ್ದ ಒಂದು
ಕಾಲಕ್ಕೂ ಈಗಿನ ಎಲ್ಲರೂ ರಸ್ತೆ ಮೇಲೆ ತಮ್ಮ ಸವಾರಿಯನ್ನು ಚಲಾಯಿಸುತ್ತಿರುವುದಕ್ಕೂ ಬಹಳಷ್ಟು ವ್ಯತ್ಯಾಸವಿದೆ.</span><span style="font-family: "nirmala ui semilight" , sans-serif;"> </span><span style="font-family: "nirmala ui semilight" , sans-serif;">ಇದರಿಂದ ಸಾಮಾನ್ಯ ಜನರಿಗಂತೂ ಅನುಕೂಲವೇ ಸರಿ, ಆದರೆ ಆಗಿನ
ಸಿರಿವಂತರು ತಮ್ಮ ವಿಶೇಷವಾದ ಸೌಲಭ್ಯವನ್ನು ಕಳೆದುಕೊಂಡರು ಎನ್ನುವುದು ನನ್ನ ಅಭಿಪ್ರಾಯ.</span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "arial" , sans-serif;">***<o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<a href="https://blogger.googleusercontent.com/img/b/R29vZ2xl/AVvXsEgRrWnhHOhw7MkASZKf5n-7BHVbTXyCRYzW0io_cCwPgxAZQa6Qem0CrRGsIiokJwxGR62syjG6kFd1ggRB4896INI_F6nv41_EYwXq42Qo6IEvf9rgTxFp1GBwzGVvzIJc4HWwgA/s1600/vehicle-surge.webp" imageanchor="1" style="clear: left; float: left; margin-bottom: 1em; margin-right: 1em;"><img border="0" data-original-height="440" data-original-width="630" height="278" src="https://blogger.googleusercontent.com/img/b/R29vZ2xl/AVvXsEgRrWnhHOhw7MkASZKf5n-7BHVbTXyCRYzW0io_cCwPgxAZQa6Qem0CrRGsIiokJwxGR62syjG6kFd1ggRB4896INI_F6nv41_EYwXq42Qo6IEvf9rgTxFp1GBwzGVvzIJc4HWwgA/s400/vehicle-surge.webp" width="400" /></a></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ಇಂದಿನ ಚಿಕ್ಕದಾದ ಕುಟುಂಬಗಳಲ್ಲಿ ದಿನನಿತ್ಯದ ಕೆಲಸ ಕಾರ್ಯಗಳನ್ನು ಪೂರೈಸುವಲ್ಲಿ
ಮೆಷೀನುಗಳ ಪಾತ್ರ ಇರುವುದು ಹಿರಿದಾಗಿದೆ.<span style="mso-spacerun: yes;"> </span>ನಗರದ<span style="mso-spacerun: yes;"> </span>ಹೆಚ್ಚಿನ ಮನೆಗಳಲ್ಲಿ ಇಂದು ವಾಷಿಂಗ್ ಮೆಷೀನ್ ನುಸುಳಿದೆ.<span style="mso-spacerun: yes;"> </span>ಸೋಲಾರ್ ಪವರ್ನಿಂದ ನೀರು ಕಾಯಿಸಿಕೊಳ್ಳುವ ಅನೇಕರು ಸ್ವಿಚ್
ಹಾಕಿದರೆ ಬಿಸಿ ನೀರು ಪಡೆಯುವ ಸ್ಥಿತಿಯನ್ನು ಕಾಣಬಹುದು.<span style="mso-spacerun: yes;">
</span>ನೆಲವನ್ನು ಗುಡಿಸಲು, ಪಾತ್ರೆ ತೊಳೆಯಲು ಮತ್ತು ಬಟ್ಟೆ ಒಗೆಯಲು ಪ್ರತಿದಿನ ಕೆಲಸಕ್ಕೆ ಬಂದು
ಹೋಗುವವರು ಸಿಗುತ್ತಾರೆ.<span style="mso-spacerun: yes;"> </span>ತಿಂಗಳಿಗೆ ಇಷ್ಟು ಎನ್ನುವ
ನಿಗದಿತ ಸಂಬಳಕ್ಕೆ ಕೆಲಸ ಮಾಡುವ ಇವರುಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ವಟಾರದ ಒಂದಿಷ್ಟು ಮನೆಗಳಲ್ಲಿ
ಕೆಲಸ ಮಾಡಿಕೊಂಡು ಜೀವನವನ್ನು ಸಾಗಿಸುತ್ತಾರೆ.<span style="mso-spacerun: yes;"> </span>ಹೆಚ್ಚಿನವರಿಗೆ
ಒಳ್ಳೆಯ ಉತ್ಪನ್ನವೂ ಇರುವುದು ಕೇಳಿ ಬರುತ್ತದೆ.<span style="mso-spacerun: yes;"> </span>ಇನ್ನು
ಮನೆಯ ಚಿಕ್ಕ-ಪುಟ್ಟ ಕೆಲಸಗಳ ಜೊತೆಗೆ ಮನೆ ಮಂದಿಗೆ ಅಡುಗೆ ಮಾಡಿಕೊಂಡು ಹೋಗುವುದು ಮನೆಯವರ ಕೆಲಸ.<span style="mso-spacerun: yes;"> </span>ಅದರಲ್ಲೂ ಸಹ ನ್ಯೂಕ್ಲಿಯರ್ ಫ್ಯಾಮಿಲಿಗಳಿಗೆ ತೊಂದರೆ ಹೆಚ್ಚು,
ಎಲ್ಲದಕ್ಕೂ ಗಂಡ ಹೆಂಡತಿ ಹೊಂದಿಕೊಂಡು ಹೋಗಬೇಕಾಗುತ್ತದೆ.<span style="mso-spacerun: yes;">
</span>ಇನ್ನು ಮನೆಯಲ್ಲಿ ಹಿಂದಿನ ತಲೆಮಾರಿನ ಹಿರಿಯರು ಯಾರಾದರೂ ಇದ್ದರೆ, ಅಡುಗೆಯ ಕೆಲಸದಲ್ಲಿ,
ಮಕ್ಕಳನ್ನು ನೋಡಿಕೊಳ್ಳಲು ಸಾಕಷ್ಟು ನೆರವಾಗುತ್ತದೆ.<span style="mso-spacerun: yes;">
</span>ನೂರು ಕೋಟಿಗಿಂತಲೂ ಹೆಚ್ಚು ಜನರಿರುವ ಭಾರತದಲ್ಲಿ ಎಲ್ಲರ ಮನೆಯೂ ಹೀಗೆ ಎಂದು ನಿರ್ದಿಷ್ಟವಾಗಿ
ಹೇಳಲಾಗದು.<span style="mso-spacerun: yes;"> </span>ಆದರೆ, ಸೀನಿಯರ್ ಸಿಟಿಜನ್ಸ್ ಜನಸಂಖ್ಯೆ
ಹೆಚ್ಚುತ್ತಿರುವ ಭಾರತದಲ್ಲಿ ವ್ಯವಸ್ಥೆ ಅಷ್ಟೊಂದು ಮುಂದುವರೆದ ಹಾಗಿಲ್ಲ.<span style="mso-spacerun: yes;"> </span>ಇವತ್ತಿಗೂ ಹೆಚ್ಚಿನ ವೃದ್ಧ ತಂದೆ-ತಾಯಂದಿರು ತಮ್ಮ ಮಕ್ಕಳನ್ನು
ನಂಬಿಕೊಂಡಿರುವುದು ಕಂಡು ಬರುತ್ತದೆ.<span style="mso-spacerun: yes;"> </span>ಇಂಥವರ ಪೋಷಣೆಗೆ
ಅದರಲ್ಲೂ ಖಾಯಿಲೆ ಬಿದ್ದಿರುವ ಹಿರಿಯರಿಗೆ ದಿನನಿತ್ಯದ ನೆರವಿಗೆ ಕೆಲಸಗಾರರು ಸಿಗುತ್ತಿಲ್ಲ.</span><span style="font-family: "arial" , sans-serif;"><o:p></o:p></span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "nirmala ui semilight" , sans-serif;">ಸೀನಿಯರ್ ಸಿಟಿಜನ್ಸ್ಗಳನ್ನು ನೋಡಿಕೊಳ್ಳುವುದು ಬಹಳ ಸೂಕ್ಷ್ಮ ಹಾಗೂ ಕಷ್ಟದ
ಕೆಲಸ.</span><span style="font-family: "nirmala ui semilight" , sans-serif;"> </span><span style="font-family: "nirmala ui semilight" , sans-serif;">ಬಹಳಷ್ಟು ಜನರಿಗೆ ಒಂದಲ್ಲ ಒಂದು ರೀತಿಯ ಖಾಯಿಲೆ
ಬಾಧಿಸುತ್ತಿರುತ್ತದೆ.</span><span style="font-family: "nirmala ui semilight" , sans-serif;"> </span><span style="font-family: "nirmala ui semilight" , sans-serif;">ಅವರ ಪ್ರಿನ್ಸಿಪಲ್ಸ್, ಅವರಿಗೆ
ಬೇಕಾದ ಊಟ-ತಿಂಡಿ ಅಗತ್ಯಗಳು, ಅವರ ಮನರಂಜನೆ, ಇತ್ಯಾದಿ ಇವೆಲ್ಲವೂ ಬೇರೆಯ ಒಂದು ಆಯಾಮವನ್ನೇ ಪಡೆದುಕೊಂಡಿರುತ್ತವೆ.</span><span style="font-family: "nirmala ui semilight" , sans-serif;"> </span><span style="font-family: "nirmala ui semilight" , sans-serif;">ಹೀಗಿರುವಾಗ ಮನೆಯಲ್ಲಿ ಯಾರಿಗಾದರೊಬ್ಬರಿಗೆ ಗಂಭೀರ ಸ್ವರೂಪದ
ಖಾಯಿಲೆ ಏನಾದರೂ ಬಂದರೆ, ಅವರನ್ನು ಸಂತೈಸುವುದು ಬಹಳ ಕಷ್ಟದ ವಿಷಯವಾಗುತ್ತದೆ... ಈ ನಿಟ್ಟಿನಲ್ಲಿ
ಭಾರತದುದ್ದಕ್ಕೂ ವೃದ್ಧಾಶ್ರಮಗಳು ಅಷ್ಟೊಂದು ಬೆಳೆಯದಿದ್ದರೂ ಇನ್ನು ಮುಂದೆ ಬೆಳೆಯುವುದನ್ನು ಊಹಿಸಬಹುದು.</span><span style="font-family: "nirmala ui semilight" , sans-serif;"> </span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span lang="KN" style="font-family: "nirmala ui semilight" , sans-serif;">ಆದರೆ, ಇತ್ತೀಚೆಗೆ ಮನೆಗಳಲ್ಲಿ ಕೆಲಸ ಮಾಡಲು ಸಿಗುವವರು "ನಿಯತ್ತಿ"ನಿಂದ
ಕೆಲಸ ಮಾಡೋದಿಲ್ಲ ಎನ್ನುವ ಆರೋಪಗಳು ಸಾಕಷ್ಟು ಕೇಳಿ ಬರುತ್ತವೆ. ಯುವ ಜನತೆ ಯಾವಾಗಲೂ ತಮ್ಮ ತಮ್ಮ ಮೊಬೈಲು ಫೋನುಗಳಿಗೆ ಶರಣಾಗಿರುತ್ತಾರೆ. ಹಿಂದಿನ ಕಾಲದವರ ಹಾಗೆ ನಿಯತ್ತಿನಿಂದ ನಡೆದುಕೊಳ್ಳೋದಿಲ್ಲ,
ಕೆಲಸಗಳ್ಳರು, ಯಾವಾಗಲೂ ಸಬೂಬುಗಳನ್ನು ಹೇಳಿ ತಪ್ಪಿಸಿಕೊಳ್ಳುತ್ತಾರೆಯೇ ಹೊರತು ವಹಿಸಿಕೊಂಡ ಕೆಲಸವನ್ನು
ಮೈಬಗ್ಗಿಸಿ ಮಾಡೋದಿಲ್ಲ. ಹೀಗೆ ಅನೇಕ ಹೇಳಿಕೆಗಳನ್ನು
ಕೇಳುವುದು ಸಾಮಾನ್ಯವಾಗಿದೆ. ಎಲ್ಲರೂ ಐಶಾರಾಮಿ ಬದುಕಿನ
ಕನಸನ್ನು ಕಂಡು ಅದರಲ್ಲೇ ಬದುಕುವ ಹಾಗಿದ್ದರೆ, ಈ ಐಶಾರಾಮಿತನಕ್ಕೆ ಅರ್ಥವೂ ಬರೋದಿಲ್ಲ. ಜೊತೆಗೆ ಅದು
ಸೃಷ್ಟಿಸುವ "ಟ್ರಾಫಿಕ್ ಜಾಮ್" ಕೂಡಾ ಭೀಕರವಾಗಿರುತ್ತದೆ. ಊರಿನಲ್ಲಿ ಕೆಲವೇ ಕೆಲವು ಕಾರುಗಳಿದ್ದಾಗ ಹೇಗೆ ಒಂದು ವ್ಯವಸ್ಥೆ
ಚಾಲನೆಯಲ್ಲಿತ್ತೋ, ಅದೇ ವ್ಯವಸ್ಥೆ ಊರಿನ ಪ್ರತಿಯೊಬ್ಬರೂ ಸಮತೋಲಿತದವರಾದಾಗ ಸಂತುಲನ (</span><span style="font-family: "arial" , sans-serif;">equilibrium) </span><span lang="KN" style="font-family: "nirmala ui semilight" , sans-serif;">ವನ್ನು ಕಳೆದುಕೊಳ್ಳುತ್ತದೆ. ಯಾರಿಗೂ ಯಾವ ಕೆಲಸವನ್ನೂ ಮಾಡಿಕೊಡಲು ಯಾರೂ ಸಿಗದೇ ಹೋಗುವ
ಪರಿಸ್ಥಿತಿ ಬರುತ್ತದೆ. ಕಿತ್ತ ಚಪ್ಪಲಿಗಳನ್ನು ದುರಸ್ತಿ
ಮಾಡಿಸುವುದಾಗಲೀ, ಬಟ್ಟೆಯನ್ನು ಅಳತೆಗೆ ತಕ್ಕಂತೆ ಹೊಲಿಸಿಕೊಳ್ಳುವುದಾಗಲೀ ಕಡಿಮೆಯಾಗಿ ಎಲ್ಲರೂ ದಿನದಿನಕ್ಕೂ
"ಹೊಸ"ತನ್ನು ನಂಬಿಕೊಳ್ಳುವ ಗ್ರಾಹಕ ಪ್ರವೃತ್ತಿ (</span><span style="font-family: "arial" , sans-serif;">consumerism) </span><span lang="KN" style="font-family: "nirmala ui semilight" , sans-serif;">ಬೆಳೆಯುತ್ತದೆ. ಅದರಿಂದ
ಎಕಾನಮಿ ದೊಡ್ಡದಾಗುತ್ತದೆ ಎಂದು ಎಷ್ಟೋ ಜನ ತಮ್ಮ ತತ್ವಗಳನ್ನು ಮಂಡಿಸಬಹುದು. ಆದರೆ, ಅದರಿಂದ ನಾವು ಅನೇಕ ವ್ಯತಿರಿಕ್ತ ಪರಿಣಾಮಗಳನ್ನೂ
ಅನುಭವಿಸಬೇಕಾಗುತ್ತದೆ.</span></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<br /></div>
<div class="MsoNormal" style="line-height: normal; margin-bottom: .0001pt; margin-bottom: 0in; mso-layout-grid-align: none; mso-pagination: none; text-autospace: none;">
<span style="font-family: "nirmala ui semilight" , sans-serif;">ಹೀಗೆ ತಲೆಮಾರಿನಿಂದ ತಲೆಮಾರಿಗೆ ಪ್ರತಿಯೊಬ್ಬರೂ "ಸಿರಿವಂತ"ರಾಗುತ್ತಲೇ
ಇದ್ದಾರೆ... ಆದರೆ, ಸಿರಿವಂತರೆನ್ನುವುದು ಒಂದು ತುಲನಾತ್ಮಕ ಹಣೆಪಟ್ಟಿ ಅಷ್ಟೇ.</span></div>
</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-74445394752470152052020-05-26T20:06:00.000-04:002020-05-26T20:14:39.895-04:00ಮತ್ತೆ ಬಾ ಕರೋನಾ...<div dir="ltr" style="text-align: left;" trbidi="on">
<div style="text-align: center;">
<br />
<span style="font-size: x-large;">ಇಂದಲ್ಲ ನಾಳೆ </span>ನಮ್ಮವರಿಗೆಲ್ಲ ತಿಳಿ ಹೇಳುವುದಕ್ಕಾಗಿ</div>
<div style="text-align: center;">
ಇಂದು ತಿಳಿಯದ ಮಂದಿಗೆ ತಿದಿಯ ತಿವಿದು</div>
<div style="text-align: center;">
ಬಗ್ಗಿದರೂ ಬಾಗದ ಜನರ ನಡುವಿಗೆ ಒದೆದು</div>
<div style="text-align: center;">
ಸರಳ ಸೂತ್ರವನು ಎಲ್ಲರಲ್ಲೂ ಅಳವಡಿಸುವುದಕ್ಕಾಗಿ...</div>
<div style="text-align: center;">
<br /></div>
<div style="text-align: center;">
ಮತ್ತೆ ಬಾ ಕರೋನಾ...</div>
<div style="text-align: center;">
ವಿಶ್ವ ಜೀವ ಸಂಕುಲಗಳನ್ನೆಲ್ಲ ಕಡೆಗಣಿಸಿ ದುಡಿಸಿದ್ದಕ್ಕಾಗಿ</div>
<div style="text-align: center;">
ಹಡೆದವ್ವನ ಕೆಡವಿ ಸಲಹದವರಿಗೆ ನೀರು ಕುಡಿಸಿ</div>
<div style="text-align: center;">
ಅವರವರ ಹೊಟ್ಟೆಯಲ್ಲಿರುವ ವಿಷವ ಕಕ್ಕಿಸಿ</div>
<div style="text-align: center;">
ಎಲ್ಲರೆದೆಯೆಲ್ಲೂ ಸಾವಿನ ಭಯವ ಹುಟ್ಟಿಸುವುದಕ್ಕಾಗಿ...</div>
<div style="text-align: center;">
<br /></div>
<div style="text-align: center;">
ಮತ್ತೆ ಬಾ ಕರೋನಾ...</div>
<div style="text-align: center;">
ಜೀವ ಜಂತುಗಳ ಸಂಹರಿಸಿ ತಮ್ಮ ಸಂತತಿ ಬೆಳೆಸಿದ್ದಕ್ಕಾಗಿ</div>
<div style="text-align: center;">
ಮುಗಿಲಿನಲ್ಲೂ ತಮ್ಮ ಕಚಡವನ್ನು ಹರಡುವ</div>
<div style="text-align: center;">
ನೆಲದಾಳವನ್ನು ಬಗೆದು ತಮ್ಮ ದಾಹ ತೀರಿಸಿಕೊಳ್ಳುವ</div>
<div style="text-align: center;">
ನಮಗೆ ಕ್ಷುದ್ರ ಜೀವಿಗಳಿಂದ ಬದುಕಿನ ಪಾಠ ಕಲಿಸುವುದಕ್ಕಾಗಿ...</div>
<div style="text-align: center;">
<br /></div>
<div style="text-align: center;">
ಮತ್ತೆ ಬಾ ಕರೋನಾ...</div>
<div style="text-align: center;">
ವಸುಧೈವ ಕುಟುಂಬದ ನಿಜ ಮೌಲ್ಯ ಬಿತ್ತರಿಸುವುದಕ್ಕಾಗಿ</div>
<div style="text-align: center;">
ಕಣ್ಣೀರಲ್ಲಿ ಕೈ ತೊಳೆಯುವರಿಗೆ ಸಮತೆಯ ಸಾರುತ</div>
<div style="text-align: center;">
ಹೊಟ್ಟೆಯ ಬೆಂಕಿಯನು ನೀಗಿಸಲು ಹಾರಾಡುತ</div>
<div style="text-align: center;">
ಅಸಮಾನತೆಯಲ್ಲಿ ತೂಗುವವರ ಸಮಾಧಾನದ ಹಾಡಾಗಿ...</div>
<div style="text-align: center;">
<br /></div>
<div style="text-align: center;">
ಮತ್ತೆ ಬಾ ಕರೋನಾ...</div>
<div style="text-align: center;">
ಎಲ್ಲವನೂ ಸ್ತಬ್ಧ ಸ್ತಂಬೀಭೂತಗೊಳಿಸುವುದಕ್ಕಾಗಿ</div>
<div style="text-align: center;">
ಓಡುವುದನ್ನೇ ಬದುಕಾಗಿಸಿಕೊಂಡವರ ತುಸು ನಿಲ್ಲಿಸಿ</div>
<div style="text-align: center;">
ಜೀವ ಜಲ ವಾಯು ಸುತ್ತಲಿನ ಪ್ರಕೃತಿಯನ್ನು ಲಾಲಿಸಿ</div>
<div style="text-align: center;">
ಎಲ್ಲರಿಗೂ ಮತ್ತೆ ಮತ್ತೆ ಬುದ್ಧಿ ಹೇಳುವುದಕ್ಕಾಗಿ|</div>
<div style="text-align: center;">
<br /></div>
<div style="text-align: center;">
ಮತ್ತೆ ಬಾ ಕರೋನಾ... ಮತ್ತೆ ಬಾ ಕರೋನಾ...</div>
</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-61928234676325249502020-05-21T22:06:00.000-04:002020-05-22T11:40:54.015-04:00ಕುಮರೇಸನ್-ಮೈಕ್ರೋವೇವ್ ಮೊಟ್ಟ ಮೊದಲ ಮುಖಾಮುಖಿ<div dir="ltr" style="text-align: left;" trbidi="on">
<span style="font-size: x-large;">ನಾವು ತೊಂಭತ್ತರ</span> ದಶಕದ ಕೊನೆಯ ದಿನಗಳಲ್ಲಿ ನಮ್ಮ ಗ್ರಹಚಾರ ನೆಟ್ಟಗಿದ್ದುದರಿಂದ ಒಂದು ರೀತಿಯಲ್ಲಿ ಕೆಂಪು ಬಸ್ಸಿಗೆ ಕೈ ಮಾಡಿ ಹತ್ತಿ ಸಾರಾಸಗಟು Technology ಎನ್ನುವ ರೋಲರ್ ಕೋಸ್ಟರ್ ರೈಡ್ ಮಾಡಿ ಬಂದಂಥವರು. ನಮಗೆಲ್ಲ ಆಗ ಬಹಳ ಡಿಮ್ಯಾಂಡು! ನಮಗೆಲ್ಲ ನಮ್ಮ ಜೇಬುಗಳಲ್ಲಿ ಕನಿಷ್ಠವೆಂದರೆ ಮೂರು ಸಾವಿರ ಡಾಲರ್ಗಳಷ್ಟು ಮೊತ್ತದ ಟ್ರಾವೆಲರ್ಸ್ ಚೆಕ್ ಅನ್ನು ಕೊಟ್ಟು ಕಳಿಸುವುದರ ಜೊತೆಗೆ ಏರ್ಪೊರ್ಟ್ನಲ್ಲಿ ಪಿಕ್ಅಪ್ ಮಾಡೋದರಿಂದ ಹಿಡಿದು ನಮಗೆಲ್ಲ ತಲೆಗೊಂದರಂತೆ Homestead village ನಲ್ಲಿ ರೂಮ್ ಸಹ ಬುಕ್ ಮಾಡಿದ್ದರು. ಆ ಸಮಯದಲ್ಲಿ ಯಾವುದೇ ಬ್ರಾಂಚ್ನ ಇಂಜಿನಿಯರುಗಳಾದರೂ ಇಲ್ಲಿ ಬರಬಹುದಿತ್ತು... ನಮ್ಮ ಜೊತೆಯಲ್ಲಿ ಮೆಕ್ಯಾನಿಕಲ್, ಸಿವಿಲ್, ಕೆಮಿಕಲ್ ಇಂಜಿನಿಯರ್ಸ್ ಸಹ ಇದ್ದರು.<br />
<br />
ಬಾಂಬೆಯ ಡೇಟಾಮ್ಯಾಟಿಕ್ಸ್ ಕಂಪನಿಯಿಂದ ಒಂದು ವಿಮಾನದಲ್ಲಿ ಒಟ್ಟಿಗೆ ಬಂದವರೆಂದರೆ: ಮಹಾರಾಷ್ಟ್ರದಿಂದ ಶ್ರೀನಿವಾಸ, ತಮಿಳುನಾಡಿನಿಂದ ಕುಮರೇಸನ್ ಮತ್ತು ಕರ್ನಾಟಕದಿಂದ ನಾನು!<br />
<br />
ಇದು ನಮ್ಮ ಮೊದಲ ವಿಮಾನ ಪ್ರಯಾಣವೂ, ಮೊದಲ ಅಂತಾರಾಷ್ಟ್ರೀಯ ಪ್ರಯಾಣವೂ ಆದ್ದರಿಂದ ನಮಗೆಲ್ಲ ನಮ್ಮದೇ "ತಲೆಬಿಸಿ"ಯಾಗಿತ್ತು. ನಮ್ಮ ಸೂಟ್ಕೇಸ್ಗಳಲ್ಲಿ ಅನೇಕಾನೇಕ ವಸ್ತುಗಳನ್ನು ತಂದಿದ್ದೆವು. ನಮ್ಮ ಕುಮರೇಸನ್ ಅಂಥವರು ಮೂರು ಕೆ.ಜಿ. ಅಕ್ಕಿ ತಂದಿದ್ದೂ ನನಗಿನ್ನೂ ಚೆನ್ನಾಗಿ ನೆನಪಿದೆ.<br />
<br />
"ಅಂತಾರಾಷ್ಟ್ರೀಯ ಪ್ರಯಾಣ ಮಾಡಿ ಸುಸ್ತಾಗಿದೆ, ಎಲ್ಲರೂ ಚೆನ್ನಾಗಿ ರೆಸ್ಟ್ ತೆಗೆದುಕೊಳ್ಳಿ, ಸೋಮವಾರದಿಂದ ಕ್ಲೈಂಟ್ ಇಂಟರ್ವ್ಯೂಗಳು ಶುರುವಾಗುತ್ತೆ" ಅಂತ ಹೇಳಿ ನಮ್ಮಷ್ಟಕ್ಕೆ ನಮ್ಮನ್ನು ನಮ್ಮ ಮೊದಲ ವಾರಾಂತ್ಯದಲ್ಲಿ ಬಿಟ್ಟಿದ್ದರು. ನಮಗೆಲ್ಲ ಬಾತ್ರೂಮಿನಲ್ಲಿ ತಿರುಗಿಸಿದರೆ ಹೇಗೆ ಬಿಸಿನೀರು ಬರುತ್ತದೆ. ಆಟ್ಯಾಚ್ಡ್ ಅಡುಗೆ ಮನೆಯಲ್ಲಿರುವ ಮಿಷನ್ನುಗಳನ್ನು ಹೇಗೆ ಬಳಸೋದು? ಕಾಫಿ ಹೇಗೆ ಮಾಡುವುದು. ಪ್ರಿಜ್ ಇಷ್ಟು ದೊಡ್ದದು ಇರುತ್ತದೆಯೇ? ಹೀಗೆ ಅನೇಕ ಸೋಜಿಗಗಳು ಎದುರಾಗುತ್ತಿದ್ದವು. ನಾನೂ ಶ್ರೀನಿವಾಸನೂ ನಮಗೆ ಗೊತ್ತಿರದ ಮಿಷೀನುಗಳ ಉಸಾಬರಿ ಬೇಡ ಎಂದು ಹೊರಗಿನಿಂದ ತಂದ ಊಟವನ್ನು ತಿನ್ನುತ್ತಿದ್ದೆವು. ಹೆಚ್ಚೆಂದರೆ, ಕಾಫಿಮೇಕರ್ನಲ್ಲಿ ಕಾಫಿ ಮಾಡಿಕೊಳ್ಳುತ್ತಿದ್ದೆವು. ಆದರೆ, ಅದರಿಂದ ಹೊರಬಂದ ಕಪ್ಪು ಬಣ್ಣದ ಕಾಫಿ ನಮ್ಮ ಕಡೆಯ ಡಿಕಾಕ್ಷನ್ನಂತೆಯೂ ಬಳಸಲಾಗದೇ, ಈ ಕಡೆ ನೇರವಾಗಿ ಅದನ್ನೇ ಹಾಲು-ಸಕ್ಕರೆಯನ್ನು ಹಾಕಿ ಕುಡಿಯಲಾಗದೇ ಬಳಲಾಡಿದ್ದೆವು... ಹೊರಗಿನ ಸ್ಟಾರ್ಬಕ್ಸ್ ಅಂತಹ ಅಂಗಡಿಯಲ್ಲಿ ದೊರೆತ ಕಾಫಿಯೂ ನಮ್ಮ ಕಾಫಿಯ ದಾಹವನ್ನು ನೀಗಿಸಿರಲಿಲ್ಲ... ಇಲ್ಲಿಗೆ ಬಂದ ಎರಡೇ ದಿನಗಳಲ್ಲಿ ನಾಲಿಗೆ ರುಚಿಯನ್ನು ಗುರುತಿಸಲಾರದಷ್ಟು ಕೆಟ್ಟು ಹೋಗಿತ್ತು.<br />
<br />
ನಾವು ಮೂರು ಜನರಿಗೆ ಮೂರು ರೂಮುಗಳನ್ನು ಕೊಟ್ಟಿದ್ದರೂ, ನಾವೆಲ್ಲರೂ ದಿನದ ಹೆಚ್ಚು ಪಾಲು ಯಾವುದಾದರೊಂದು ರೂಮಿನಲ್ಲಿ ಇರುತ್ತಿದ್ದುದೇ ಹೆಚ್ಚು. ಇಂತಹ ಸಂದರ್ಭದಲ್ಲಿ ಕುಮರೇಸನ್ ಸ್ಥಳೀಯ ಸೂಪರ್ ಮಾರ್ಕೆಟ್ಗೆ ಹೋಗಿ ತರಾವರಿ ಸಾಮಾನುಗಳನ್ನು ತಂದು ಎಕ್ಸ್ಪೆರಿಮೆಂಟ್ ಮಾಡುವ ಹುನ್ನಾರದಲ್ಲಿದ್ದನು. ನಾನು ಮತ್ತು ಶ್ರೀನಿವಾಸನು ಬೇಡವೆಂದರೂ ಅವನದ್ದು ಒಂದೇ ಹಠ. ಎಷ್ಟೇ ಅಂದರೂ ಇಂಜಿನಿಯರ್ ಅಲ್ಲವೇ? ಟಿವಿ ಚಾನೆಲ್ಲುಗಳನ್ನು ಒಂದು ಕಡೆಯಿಂದ ಹಾಕಿಕೊಂಡು ಬರುವುದು. ಸ್ಟೋವ್ನಲ್ಲಿ ಎಲ್ಲ ಸರಿಯಾಗಿ ಕೆಲಸ ಮಾಡುತ್ತಿದೆಯೋ ಇಲ್ಲವೋ? ಇಲ್ಲಿ ಕುಕಿಂಗ್ ಗ್ಯಾಸ್ ಹೇಗೆ ಪೈಪುಗಳಲ್ಲಿ ಎಲ್ಲಿಂದ ಬರುತ್ತದೆ? ಕಾಫಿ ಪುಡಿ ಪ್ಯಾಕೆಟ್ ಒಡೆದು ನೋಡಿದರೆ ಹೇಗಿರುತ್ತದೆ? ಇವರ ಪುಡಿಯನ್ನು ಬಳಸಿ ನಾವು ಡಿಕಾಕ್ಷನ್ ಯಾಕೆ ಮಾಡಬಾರದು? ಮೈಕ್ರೋವೇವ್ ಹೇಗೆ ಕೆಲಸ ಮಾಡುತ್ತದೆ? ಇತ್ಯಾದಿ ಇತ್ಯಾದಿ.<br />
<br />
ಹೀಗಿದ್ದವನು, ಒಂದಿಷ್ಟು ಸಾಮಾನುಗಳನ್ನು ತೆಗೆದುಕೊಂಡು ಬಂದು ಫ್ರಿಜ್ ತುಂಬ ತುಂಬಿಸಿಕೊಂಡ... ನಾವು ಅವನ ಜೊತೆ ಕೈ ಜೋಡಿಸಿ ಒಂದಿಷ್ಟು ಪ್ರಯೋಗಳಿಗೆ ಸಾತ್ ಕೊಡತೊಡಗಿದೆವು.<br />
<br />
ಹೀಗಿರುವಾಗ... ಕುಮರೇಸನ್ ಒಂದು ದಿನ ಅಭೂತಪೂರ್ವ ಐಡಿಯಾವೊಂದನ್ನು ಕಂಡು ಹಿಡಿದವನಂತೆ ನನ್ನ ರೂಮಿಗೆ ಓಡಿಬಂದ... "ನಿನಗ್ಗೊತ್ತಾ ಮೈಕ್ರೋವೇವ್ನಲ್ಲಿ ಮೊಟ್ಟೆ ಬಿಸಿಮಾಡಬಹುದು!" ನಾನೂ-ಶ್ರೀನಿವಾಸನೂ ಅಂಗಾಲಾಚಿದೆವು... ನಮಗಿಬ್ಬರಿಗೂ ಸಹ ಮೊಟ್ಟೆಯ ಮೇಲಾಗಲೀ ಕೋಳಿಗಳ ಮೇಲಾಗಲಿ ವಿಶೇಷವಾದ ಅಸ್ತೆ ಏನೂ ಇಲ್ಲವಾದ್ದರಿಂದ ನಾವು ಗಲಿಬಿಲಿಗೊಂಡು ಎಂದಿನಂತೆ ನಮ್ಮ risk averse ಭಾಷೆಯಲ್ಲಿ "ಬೇಡ, ಗುರೂ!" ಎಂದು ಹೇಳಿದರೂ ಅವನು ಸುಮ್ಮನಾಗಲಿಲ್ಲ... ಮರಾಠಿಗರಿಗೆ, ಕನ್ನಡಿಗರಿಗೆ ಇಲ್ಲದ ಮೊಂಡು ಧೈರ್ಯ ತಮಿಳಿಗರಿಗೆ ಎಂದು ಅವತ್ತೇ ಗೊತ್ತಾಗಿದ್ದು!<br />
<br />
ಅವನು ಮೈಕ್ರೋವೇವ್ನ ಒಳಗೆ ಒಂದು ಪಿಂಗಾಣಿ ಪಾತ್ರೆಯಲ್ಲಿ ಮೊಟ್ಟೆಯನ್ನು ಇಟ್ಟನೋ, ಅಥವಾ ಸುಮ್ಮನೇ ಒಳಗೇ ತಿರುಗುವ ಗ್ಲಾಸ್ ಮೇಲೆ ಇಟ್ಟನೋ ಗೊತ್ತಿಲ್ಲ... ಆದರೆ, ಅದರ ಸ್ವಿಚ್ ಅನ್ನು ತಿರುಗಿಸಿ ಡುರ್ರ್ ಎಂದು ಸೌಂಡು ದೊಡ್ಡದಾಗಿ ಬರುವಂತೆ ಏನೇನೋ ಬಟನ್ನುಗಳನ್ನು ಒತ್ತುತ್ತಿದ್ದ. ಜೊತೆಗೆ ತನ್ನ ತಲೆಯನ್ನು ಅತ್ತಿಂದಿತ್ತ ಅಲ್ಲಾಡಿಸುತ್ತಾ ಒಳಗೇನಾಗುತ್ತಿದೆ ಎಂದು ನೋಡ ತೊಡಗಿದ್ದ... ನಮಗೆ ಆಗಲೇ ಗೊತ್ತಾಗಿದ್ದು... ಈ ಮೈಕ್ರೋವೇವ್-ಅವನ್ ಒಳಗೆ ನೇರವಾಗಿ ನೋಡಿದರೆ ಅದರ ಬಾಗಿಲಿನ ಮುಖೇನ ಸರಿಯಾಗಿ ಕಾಣದಿದ್ದುದು ಆ ಕಡೆ-ಈ ಕಡೆ ತಲೆಯನ್ನು ಅಲ್ಲಾಡಿಸುತ್ತಾ ನೋಡಿದರೆ ಸರಿಯಾಗಿ ಕಾಣುತ್ತದೆ ಎಂದು.<br />
<br />
ಇವನದ್ದು ಯಾವಾಗಲೂ ಒಂದು ಕಥೆ ಇದ್ದೇ ಇರುತ್ತೆ... ಎಂದು ನಾನೂ-ಶ್ರೀನಿವಾಸನೂ HBO ಚಾನೆಲ್ ನಲ್ಲಿ ಯಾವುದೋ ಸಿನಿಮಾವನ್ನು ನೋಡುವುದರಲ್ಲಿ ಮಗ್ನರಾದೆವು. ಒಂದೈದು ನಿಮಿಷವಾಗುವುದರ ಒಳಗೆ ಕುಮರೇಸನ್ ಹೌಹಾರಿ ಬೀಳುವಂತೆ ಮೈಕ್ರೋವೇವ್ ಡಬ್ ಎಂದು ಜೋರಾಗಿ ಸದ್ದು ಮಾಡಿ ಅದರ ಬಾಗಿಲು ಒಳಗಿನ ಪ್ರೆಶರ್ನಿಂದ ಜೋರಾಗಿ ತೆಗೆದುಕೊಂಡು ಕುಮರೇಸನ್ ಹಣೆಗೆ ಬಂದು ಬಡಿಯಿತು... ಒಳಗಡೆ ಕುದಿಯುತ್ತಿದ್ದ ಮೊಟ್ಟೆ ಪೀಸುಪೀಸಾಗಿ ಎಲ್ಲ ಕಡೆಗೆ ಹಾರಿ ಹರಡಿಕೊಂಡಿತು... ಇಡೀ ರೂಮೆಲ್ಲ ಒಂದು ರೀತಿಯ ಹೈಡ್ರೋಜನ್ ಸಲ್ಫೈಡ್ ವಾಸನೆ ಹರಡುತ್ತಾ ಕೆಮಿಸ್ಠ್ರಿ ಲ್ಯಾಬ್ ಅನ್ನು ನೆನಪಿಗೆ ಬಂದಿತು.<br />
<br />
ಇಲ್ಲೇ ನೋಡಿ ನನಗೆ ಮಾನವತೆಯ ಮೂಲ ಮಂತ್ರವಾದ ಸಹಾಯ ಮನೋಭಾವನೆಯ ಬಗ್ಗೆ ಮರುಕಬಂದಿದ್ದು! ಕುಮರೇಸನ್ ಹಣೆಗೆ ಬಾಗಿಲು ಅಪ್ಪಳಿಸಿ ಅಲ್ಲಿ ಅರ್ಧ ಮೊಟ್ಟೆಯ ಗಾತ್ರದ ಉಬ್ಬು ಬಂದಿತ್ತು... ನಾನೂ-ಶ್ರೀನಿವಾಸನೂ ಸೋಫಾದಿಂದ ಒಮ್ಮೆ ಹಾರಿ ಕುಳಿತು ಇವನ ಅವಾಂತರವನ್ನು ನೋಡಿ ಜೋರಾಗಿ ನಗತೊಡಗಿದೆವು... ಮನುಷ್ಯನ ಆಳವಾದ ಮನಸ್ಸಿನಲ್ಲಿ ಅದೇನು ತಳಮಳಗಳಿರುತ್ತವೆಯೋ ಯಾರು ಬಲ್ಲರು? ಇಲ್ಲವಾದರೆ ಒಬ್ಬರ ಸಂಕಷ್ಟ ಮತ್ತೊಬ್ಬರಿಗೆ ಅದು ಹೇಗೆ ನಗು ತರಿಸಲು ಸಾಧ್ಯ?<br />
<br />
ಕುಮರೇಸನ್ ಪರಿಸ್ಥಿತಿ ಗಂಭೀರವಾಗಿತ್ತು - ಗಂಡ ಸತ್ತ ದುಃಖ ಒಂದು ಕಡೆ, ಬಡ್ ಕೂಪಿನ ಉರಿ ಮತ್ತೊಂದು ಕಡೆ ಎಂದು ಹೇಳುತ್ತಾರಲ್ಲ, ಹಾಗೆ. ಈ ಕಡೆ ಮೊಟ್ಟೆ ಬೇಯಲಿಲ್ಲ, ಹಣೆ ಮೇಲೆ ಉಬ್ಬು ಬಂದು ಕುಳಿತಿದೆ... ರೂಮೆಲ್ಲಾ ಮೆಸ್ ಆಗಿದೆ, ಎಲ್ಲಾ ಕಡೆ ಸೀದು ಹೋದ ವಾಸನೆ ಬೇರೆ ಬರುತ್ತಿದೆ... ಇದನ್ನೆಲ್ಲ ಕ್ಲೀನು ಮಾಡುವುದು ಹೇಗೆ, ಯಾವಾಗ? ಇನ್ಯಾವತ್ತೂ ಈ ಮೈಕ್ರೋವೇವಿನ ಸಹವಾಸ ಬೇಡಪ್ಪಾ ಎನ್ನುವ ದಯನೀಯ ಸ್ಥಿತಿ ಅವನದಾಗಿತ್ತು... ಮೂರೂ ಜನ ಸೇರಿ ರೂಮನ್ನು ಕ್ಲೀನು ಮಾಡಿದರೂ, ಮಾರನೇ ದಿನ ಕ್ಲೀನಿಂಗ್ ಕ್ರೂ ಬಂದು ಕ್ಲೀನ್ ಮಾಡಿದರೂ ಒಂದು ವಾರದ ಮಟ್ಟಿಗಾದರೂ ಆ ವಾಸನೆ ಇತ್ತು... ವಾಸನೆಯ ನೆನಪು ಹಾಗಿರಲಿ, ಈ ಪ್ರಕರಣವನ್ನು ನೆನೆಸಿಕೊಂಡರೆ ಇಪ್ಪತ್ತು ವರ್ಷಗಳ ನಂತರವೂ ನಗು ಉಕ್ಕಿ ಬರುತ್ತದೆ!</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1tag:blogger.com,1999:blog-19220235.post-28508684712146386182020-05-19T22:37:00.002-04:002020-05-19T22:37:32.722-04:00ಯಾರನ್ನ ನಂಬುವುದು? ಬಿಡುವುದು?<div dir="ltr" style="text-align: left;" trbidi="on">
<span style="font-size: x-large;">ಈಗಿನ ಕಾಲದ</span> ನ್ಯೂಸ್ ಚಾನೆಲ್ಗಳನ್ನ ನೋಡ್ತಾ ಇದ್ರೆ ಒಂದು ರೀತಿ ವಾಕರಿಕೆ ಬಂದಂಗೆ ಆಗೋಲ್ಲ? ಒಂದು ಕಾಲದಲ್ಲಿ ಎಷ್ಟೊಂದು ಚೆನ್ನಾಗಿ ನಾವು ವಿಶ್ವದ ಆಗುಹೋಗುಗಳನ್ನು ಫಾಲೋ ಮಾಡುತ್ತಿದ್ದೆವು. ರೇಡಿಯೋ ಇಟ್ಟುಕೊಂಡು BBC, VoA, SLBC, AIR ಮೊದಲಾದ ಸ್ಟೇಷನ್ನುಗಳನ್ನು ತಿರುಗಿಸಿ ನೋಡುತ್ತಿದ್ದೆವು. ಆಗಿನ ಕಾಲದಲ್ಲಿ ಮ್ಯಾಗಜೀನುಗಳು, ವೃತ್ತ ಪತ್ರಿಕೆಗಳು, ನಿಯತಕಾಲಿಕೆಗಳನ್ನು ಪ್ರತಿನಿತ್ಯ ತಪ್ಪದೇ ಓದುತ್ತಿದ್ದೆವು. ಆಗಿನ ಕಾಲದ ಜರ್ನಲಿಸಮ್ ಅಂದ್ರೆ ಅದರಲ್ಲಿ ತಿರುಳಿತ್ತು, ಹುರುಳಿತ್ತು, ಎಲ್ಲಕ್ಕಿಂತ ಮುಖ್ಯವಾಗಿ ನ್ಯೂಸ್ ಇತ್ತು. ಇದ್ದದ್ದನ್ನು ಇದ್ದ ಹಾಗೆ ವರದಿ ಮಾಡುವ ಪ್ರಕ್ರಿಯೆ ಇತ್ತು. ಓದುಗರನ್ನು, ಕೇಳುಗರನ್ನು ಪತ್ರಿಕಾ ಸಿಬ್ಬಂದಿ ಸೀರಿಯಸ್ ಆಗಿ ಪರಿಗಣಿಸುತ್ತಿದ್ದರು, ಗಮನಿಸುತ್ತಿದ್ದರು.<br />
<br />
ಇದನ್ನು ಬೇಕಾದ್ರೆ, ನಾಸ್ಟಾಲ್ಜಿಯಾ ಎಂದು ಕರೆದು ಬದಿಗೆ ತಳ್ಳಬಹುದು, ಆದರೆ ಇಂದಿನ ನ್ಯೂಸ್ ನೆಟ್ವರ್ಕ್ಗಳಲ್ಲಿ ಯಾವುದೇ ಹುರುಳಿದ್ದಂತೆ ನನಗನ್ನಿಸೋದಿಲ್ಲ. ನ್ಯೂಸ್ಗಿಂತ ಹೆಚ್ಚಾಗಿ ಒಪಿನಿಯನ್ (Op Ed) ನಿಂದ ಎಲ್ಲ ಅಂಕಣಗಳು ತುಂಬಿರುತ್ತವೆ. ಕೆಲವೊಂದು ನ್ಯೂಸ್ ಪೇಪರುಗಳು, ಚಾನೆಲ್ಲುಗಳಂತೂ ಆಯಾ ಪೊಲಿಟಿಕಲ್ ಮ್ಯಾನಿಫೆಸ್ಟೋ ಅನ್ನು ಸಪೋರ್ಟ್ ಮಾಡುತ್ತಾ, ತಮ್ಮ ರಾಜಕೀಯ/ದುರೀಣರ ಮೌತ್ಪೀಸ್ ಆಗಿ ಬಿಟ್ಟಿವೆ.<br />
<br />
***<br />
ನಾನು ಈ ಕೊರೋನ ಬೆಳವಣಿಗೆಯನ್ನು ಪ್ರತಿದಿನ ರಾತ್ರಿ ಒಂಭತ್ತು ಘಂಟೆಗೆ ಪ್ರಸಾರವಾಗುವ ABD News Live ನೋಡುತ್ತೇನೆ. <a href="https://abcnews.go.com/News/linsey-davis-abc-news-official-biography/story?id=16087677" target="_blank"> Linsey Davis</a> ಇದ್ದವರಲ್ಲಿ ಒಳ್ಳೆಯ anchor ಎಂದೇ ಹೇಳಬೇಕು. ಸ್ಫುಟವಾಗಿ ಯಾವ ತಪ್ಪೂ ಇಲ್ಲದೇ ಉತ್ತಮ ಧ್ವನಿಯಿಂದ ಈಕೆ ABC ನ್ಯೂಸ್ ನೋಡುಗರಿಗೆ ಇಷ್ಟವಾಗುತ್ತಾರೆ. ಜೊತೆಗೆ, ಇದ್ದ ವಿಷಯವನ್ನು ಇದ್ದ ಹಾಗೆ ಹೇಳುವಷ್ಟರ ಮಟ್ಟಿನ objectivity ಯನ್ನು ನಾನು ಈವರೆಗೆ ಕಂಡಿದ್ದೇನೆ, ಅದರಲ್ಲೂ ಯಾವುದೇ "ಸ್ವಾಮಿನಿಷ್ಠೆ" ಈವರೆಗೆ ನನ್ನ ಅರಿವಿಗೆ ಬಂದಿಲ್ಲ.<br />
<br />
<br />
ಒಂದು ಮೂವತ್ತು ನಿಮಿಷದ ನ್ಯೂಸ್ ದಿನಕ್ಕೊಮ್ಮೆ ಸಿಕ್ಕರೆ ಸಾಕು ಪ್ರಪಂಚದಲ್ಲಿ ಏನಾಗುತ್ತದೆ ಎಂದು ಗೊತ್ತಾಗಲು. ಅದಲ್ಲದೇ ನಮ್ಮನ್ನೆಲ್ಲ ಯಾವಾಗಲೂ ತಮ್ಮ ಕಡೆಗೆ ತಿರುಗಿಕೊಂಡಿರುವಂತೆ ಮಾಡುವ ಸೋಶಿಯಲ್ ಮೀಡಿಯಾ "ಚಾನಲ್ಲು"ಗಳಂತೂ ಇದ್ದೇ ಇರುತ್ತಾವಲ್ಲ, ನೀವು ಬೇಡವೆಂದರೂ ನಿಮ್ಮನ್ನು ಸುತ್ತಿಕೊಳ್ಳಲು?!<br />
<br />
ಅಪ್ಪಿ-ತಪ್ಪಿಯೇನಾದರೂ ಒಳ್ಳೆಯ ಇಂಗ್ಲೀಷ್ ಬರವಣಿಗೆ ಸಿಗುತ್ತದೆಯೆಂದು NY Times ಏನಾದರೂ ನೋಡಿದರೆ ಸಾಕು, Trump ಮಹಾಶಯ ತಪ್ಪು ಮಾಡುವುದನ್ನೇ ಕಾಯುತ್ತಿರುವವರ ಹಾಗೆ ಇಲ್ಲಿನ ರಿಪೋರ್ಟರುಗಳು, ಅಲ್ಲ ಬರಹಗಾರರು ವರದಿ ಒಪ್ಪಿಸಿಯಾರು. ಅವರಿಗೆ ಮತಿ ಇಲ್ಲ, ಇವರಿಗೆ ಗತಿ ಇಲ್ಲ ಎನ್ನುವುದು ಖಚಿತವಾಯಿತು.<br />
<br />
ಅಲ್ಲದೇ ಈ ಸೊಫೆಸ್ಟಿಕೇಟೆಡ್ ಚಾನೆಲ್ನ anchor ಗಳೆಲ್ಲ ಯಾವಾಗಲೂ breaking news ಗಳಲ್ಲೇ ತಮ್ಮನ್ನೇ ಕಳೆದುಕೊಂಡು ಅದು ಯಾಕಾದರೂ ಅರಚುತ್ತಿರುತ್ತಾರೋ, ಯಾರು ಬಲ್ಲರು?</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-70617617321330726962020-05-18T20:39:00.001-04:002020-05-18T20:42:44.682-04:00ಹುಲು ಮಾನವರು ಹೊರಗಡೆ ಬರುತ್ತಿದ್ದಾರೆ, ಹುಷಾರ್!<div dir="ltr" style="text-align: left;" trbidi="on">
<br />
<span style="font-size: x-large;">... ಹೀಗನಿಸಿದ್ದು, </span>ನಮ್ಮ ಹಿತ್ತಲಿನ ಹಿಂಬಾಗದಲ್ಲಿ ಮೇಯುತ್ತಿದ್ದ ಎರಡು ಜಿಂಕೆಗಳು ಹಟಾತ್ತನೆ ಹೊರಗೆ ಬಂದ ನನ್ನನ್ನು ನೋಡಿ ಓಡಿ ಹೋಗಿದ್ದನ್ನು ಕಂಡು. ಸುಮಾರು ಎಂಟು ವಾರಗಳ ಕಾಲ ನಾವೆಲ್ಲ ನಮ್ಮ ಚಲನವಲನಗಳನ್ನು ಮನೆಯ ಒಳಗೆ ಮಾತ್ರ ಸೀಮಿತಗೊಳಿಸಿಕೊಂಡಿದ್ದೆವು. ಈ ಎರಡು ತಿಂಗಳುಗಳಲ್ಲಿ ಹೆಚ್ಚೆಂದರೆ ಇಪ್ಪತ್ತು ಮೈಲುಗಳ ದೂರವನ್ನು ಕಾರಿನಲ್ಲಿ ಕ್ರಮಿಸಿರಬಹುದು, ಅದೂ ಸಹ ಮನೆಯ ಹತ್ತಿರದ ಸೂಪರ್ ಮಾರ್ಕೆಟ್ಗೆ ಹೋಗಿ ಬರುವುದಕ್ಕೆ ಮಾತ್ರ. ಎರಡು ತಿಂಗಳು ಆರಾಮಾಗಿ ಓಡಾಡಿಕೊಂಡಿದ್ದ ಪ್ರಾಣಿ-ಪಕ್ಷಿಗಳು ಮತ್ತೆ ಈ ಮಾನವ ಪ್ರಾಣಿಯ ಸಹವಾಸಕ್ಕೆ ಮರು-ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆಯೋ, ಏನೋ?<br />
<br />
ಕೊರೋನಾ ವೈರಸ್ ಹಲವಾರು ತೊಂದರೆಗಳನ್ನು ಮನುಕುಲಕ್ಕೆ ಬಳುವಳಿಯಾಗಿ ಕೊಟ್ಟರೂ ಸಹ, ಅದು ನಿಸರ್ಗಕ್ಕೆ ಒಳ್ಳೆಯದನ್ನೇ ಮಾಡಿದೆ. ಗಾಳಿಯಲ್ಲಿ ಪೊಲ್ಯೂಷನ್ ಲೆವೆಲ್ಗಳು ಕಡಿಮೆಯಾಗಿರುವುದು, ಸಮುದ್ರದಲ್ಲಿ ಮತ್ಸ್ಯ ಸಂತತಿ ಹೆಚ್ಚಾಗಿರುವುದು, ಅಲ್ಲಲ್ಲಿ ಎಸೆಯುವ ಕಸ-ಪ್ಲಾಸ್ಟಿಕ್ಗಳ ಕಡಿಮೆಯಾಗಿರುವುದು, ವಾಹನಗಳ ಸಂಚಾರವಿಲ್ಲದೆ ಇಂಧನ ಉಳಿತಾಯವಾಗಿರುವುದು... ಹೀಗೆ ಅನೇಕಾನೇಕ ಅನುಕೂಲಗಳಾಗಿವೆ.<br />
<br />
ಆದರೆ, ಈ ಪ್ರಶ್ನೆ ಆಗಾಗ್ಗೆ ಎದ್ದು ನಿಲ್ಲುತ್ತದೆ - ನಮ್ಮ ನಡವಳಿಕೆಯಲ್ಲಿ ಇನ್ನು ಮುಂದಾದರೂ ಬದಲಾವಣೆಗಳನ್ನು ಕಾಣುತ್ತೇವೆಯೋ ಅಥವಾ ಎರಡು ತಿಂಗಳ ನಂತರ ಏನೂ ಆಗಿರದವರಂತೆ ಮೈ ಕೊಡವಿಕೊಂಡು ಮತ್ತೆ ನಮ್ಮ ನಮ್ಮ ಜೀವನಕ್ರಮದಲ್ಲಿ ತೊಡಗಿಕೊಳ್ಳುತ್ತೇವೆಯೋ? ಈ ಕೊರೋನಾ ವೈರಸ್ ಸುದ್ದಿ ಹೆಚ್ಚು ಮಾಡಿತೇ ವಿನಾ, ಹಿಂದಿನ ಮಹಾಮಾರಿಗಳಿಗೆ ಹೋಲಿಸಿದರೆ ಇದರ ಪರಿಣಾಮ ಕಡಿಮೆ ಎಂದೇ ಹೇಳಬೇಕು. ಹದಿನಾರು ವರ್ಷಗಳ ಹಿಂದೆ ಸುನಾಮಿ ಬಂದಾಗ ಇಷ್ಟೇ ಜನ ಸತ್ತು ಹೋಗಿದ್ದ ನೆನಪು... ಆದರೆ, ಆ ನೆನಪು ನಮ್ಮ ಅವಶೇಷಗಳ ಅಡಿಯಲ್ಲಿ ಅದೆಂದೋ ಸಿಕ್ಕಿ ನಲುಗಿ ಹೋಗಿದೆ. ಅಂತೆಯೇ, ಈ ಕೊರೋನಾ ವೈರಸ್ಸಿನ ಸಾಹಸವೂ ಕೂಡ. ಕೇವಲ ಮೂರು ಲಕ್ಷ ಜನರು ವಿಶ್ವದಾದ್ಯಂತ ಸತ್ತು ಹೋದರಲ್ಲ ಎಂದು ಸಾಡಿಸ್ಟ್ ಆಗಿ ಈ ಮಾತನ್ನು ಹೇಳುತ್ತಿಲ್ಲ... ಸಾವು ಯಾವತ್ತಿದ್ದರೂ ನೋವಿನ ವಿಚಾರವೇ, ಆದರೆ ನಾವು ಈ ಮಹಾಮಾರಿಯಿಂದೇನೂ ಒಳ್ಳೆಯದನ್ನು ಕಲಿಯದೇ ಇರುವಂತಾದರೆ, ಅದು ನಮ್ಮ ದುರ್ದೈವ ಅಷ್ಟೇ.<br />
<br />
<div class="separator" style="clear: both; text-align: center;">
<a href="https://www.considerable.com/health/coronavirus/coronavirus-deaths-vs-leading-causes-death-chart/" target="_blank"><img border="0" data-original-height="420" data-original-width="746" height="358" src="https://blogger.googleusercontent.com/img/b/R29vZ2xl/AVvXsEiFRnWRCyv8nkRotL7VE9-8sMw_DM-1anaqDG-782EgKNXDmuyk0DvIFk54qe6vy9l3AJhKO19D-jQrNfbSYUO6t-ubkspaC3jIxiKefSh81E_BsOAM38YOo0Xy-Qmh-b1zT9YKBQ/s640/covid-19-deaths.jpg" width="640" /></a></div>
<br />
<br />
ಈ ಕೋವಿಡ್ನಿಂದಾಗಿ ವಾಹನ ಅಪಘಾತಗಳು ಕಡಿಮೆಯಾಗಿವೆ. ತುರ್ತಾಗಿ ಬೇಕಾಗಿಲ್ಲದ ಶಸ್ತ್ರ ಚಿಕಿತ್ಸೆಗಳು ಮುಂದೂಡಲ್ಪಟ್ಟಿವೆ. ಅನಗತ್ಯವಾಗಿ ಆಸ್ಪತ್ರೆಗಳನ್ನು ಸುತ್ತುವವರ ಸಂಖ್ಯೆ ಕಡಿಮೆ ಆಗಿದೆ. ಅಂಥವರನ್ನು ಸುಲಿಯುವ ಬಿಸಿನೆಸ್ ಮೈಂಡೆಡ್ ನರ್ಸಿಂಗ್ ಹೋಮ್ಗಳು ಬಾಗಿಲು ಹಾಕಿ ಸುಮ್ಮನಿದ್ದವು. ಎಲ್ಲದಕ್ಕಿಂತ ಮುಖ್ಯ ಅನಗತ್ಯ ಖರ್ಚುಗಳು ಕಡಿಮೆ ಆಗಿದ್ದವು. ಹೊರಗಡೆಯ ಚಟುವಟಿಕೆಳೆಲ್ಲ ಕಡಿಮೆಯಾದ್ದರಿಂದ ಜೇಬಿಗೂ ಒಂದಿಷ್ಟು ಹೊರೆ ಕಡಿಮೆ ಎನಿಸಿತ್ತು.<br />
<br />
ಇದೀಗ ತಾನೆ ಹೊರಬರುತ್ತಿರುವ ನಮ್ಮನ್ನೆಲ್ಲ ನೋಡಿ - ಹುಲುಮಾನವರು ಹೊರಗೆ ಬರುತ್ತಿದ್ದಾರೆ, ಹುಷಾರ್! ಎಂದು ನಮ್ಮ ಸುತ್ತಲಿನ ಎಲ್ಲ ಜೀವಿಗಳೂ ಸಹ ಒಂದು ಕ್ಷಣ ದಂಗಾಗಿರಬಹುದಲ್ಲವೇ?</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-56496983164620107582020-05-17T21:12:00.000-04:002020-05-17T21:12:59.317-04:00ಕೆಲಸಕ್ಕೆ ಜನರಿಲ್ಲ ಕೆಲಸಕ್ಕೆ ಮನಸಿಲ್ಲ<div dir="ltr" style="text-align: left;" trbidi="on">
<div style="text-align: center;">
<span style="font-size: x-large;">ಕೆಲಸಕ್ಕೆ ಜನರಿಲ್ಲ</span> ಕೆಲಸಕ್ಕೆ ಮನಸಿಲ್ಲ</div>
<div style="text-align: center;">
ಆಲಸ್ಯವೇ ನಮಗಂಟಿದ ದೊಡ್ಡ ಶಾಪ|</div>
<div style="text-align: center;">
<br /></div>
<div style="text-align: center;">
ಕೆಲಸವಿರೆ ಹೆಚ್ಚೆಂಬರು, ಇಲ್ಲದಿರೆ ಕೊರಗುವರು</div>
<div style="text-align: center;">
ಕಾಯಕವೇ ಕೈಲಾಸ ಎನುವ ಧರ್ಮ</div>
<div style="text-align: center;">
ಹಣವಂತರು ಬೆಳೆಯುವರು ಸುಖ ಕಾಣದೆ ಸೊರಗುವರು</div>
<div style="text-align: center;">
ಎಲ್ಲಿದೆ ಕೆಲಸ-ಹಣ-ಸುಖ ಸಮಾಧಾನದ ಮರ್ಮ|</div>
<div style="text-align: center;">
<br /></div>
<div style="text-align: center;">
ದಿನ ನಿತ್ಯ ತಮ್ಮ ಕೆಲಸವ ಮಾಡೆ ಮಂದಿ ಬೇಕು</div>
<div style="text-align: center;">
ನಮ್ಮ ಕೆಲಸ ಕಾರ್ಯಗಳನು ನಾವು ಮಾಡುವುದು ತರವೇ</div>
<div style="text-align: center;">
ದಿನ ದಿನ ಸುತ್ತಿ ತಿರುಗಿ ಮತ್ತೆ ಬರುವ ಬಂಧ ಸಾಕು</div>
<div style="text-align: center;">
ಮೈಬಗ್ಗಿಸಿ ದುಡಿಯುವುದೂ ಒಂದು ವರವೇ|</div>
<div style="text-align: center;">
<br /></div>
<div style="text-align: center;">
ನಿನ್ನ ಕರ್ಮಗಳನು ನೀ ಮಾಡು ಫಲ ನಾನು ಕಾಯ್ವೆನೆನಿಸಿ</div>
<div style="text-align: center;">
ಪರಮಾತ್ಮ ಕೆಲಸ-ಕಾರ್ಯ-ಕರ್ಮಗಳಿಗೆ ಜೋತು ಬಿದ್ದ</div>
<div style="text-align: center;">
ವಿಪುಲ ಸಂಸಾರದ ಜೋಳಿಗೆಯ ಕೊರಳಿಗೆ ಸಿಂಗರಿಸಿ</div>
<div style="text-align: center;">
ಕರ್ಮ ಭೂಮಿಯ ಪಳೆಯುಳಿಕೆಯೊಳಂದಾಗಿ ಎಡವಿ ಬಿದ್ದ|</div>
</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-70852648842673077172020-05-16T21:49:00.000-04:002020-05-16T21:49:15.514-04:00ಹಾಲು-ನೀರಿನ ಅನ್ಯೋನ್ಯತೆ!<div dir="ltr" style="text-align: left;" trbidi="on">
<span style="font-size: x-large;">"ಕಾಯದಿದ್ರೆ ಕೆನೆ </span>ಕಟ್ಟೋದಿಲ್ಲ!" ಎಂದು ಎನಿಸಿದ್ದು ಇವತ್ತು ಚಹಾ ಮಾಡೋದಕ್ಕೋಸ್ಕರ ಹಾಲು ಕಾಯಿಸುತ್ತಿರುವಾಗ. ನಾವು ನಮ್ಮ ದೈನಂದಿನ ಜೀವನದಲ್ಲಿ ಅದೆಷ್ಟು ಸಲ ನೀರು ಅಥವಾ ಹಾಲನ್ನು ಬಿಸಿ ಮಾಡಿರೋದಿಲ್ಲ? ಕೆಲವೊಮ್ಮೆ ಈ ಗೊತ್ತಿರುವ ವಿಷಯಗಳನ್ನೂ ಗಹನವಾಗಿ ನೋಡಿದಾಗ, ಅವುಗಳಲ್ಲಿನ ಜೀವನ ಸೂಕ್ಷ್ಮ ನಮಗೆ ಗೊತ್ತಾಗುತ್ತದೆ. ಈ ವಿಚಾರದಲ್ಲಿ ನಿಸರ್ಗ ನಮಗೆಲ್ಲರಿಗೂ ಕಲಿಸೋ ಪಾಠಗಳು ಜೀವನ ಪರ್ಯಂತ ಅನೇಕಾನೇಕ ಇದ್ದೇ ಇರುತ್ತವೆ, ನಾವು ನೋಡಬೇಕು, ಗಮನಿಸಬೇಕು ಅಷ್ಟೇ.<br />
<br />
ನಮ್ಮ ಕಡೆ ನೀರು ಕುದ್ದು (ಕುದಿದು) ಮರಳುತ್ತದೆ ಎನ್ನುತ್ತಾರೆ... ಅದನ್ನು ಇಂಗ್ಲೀಷಿನಲ್ಲಿ rolling boil ಅಂತಲೂ ಹೇಳ್ತಾರೆ. ಕಾಯುವ, ಕುದಿಯುವ ಪ್ರಕ್ರಿಯೆ ಬಹಳ ಸುಲಭವಾದದ್ದು. ನಾವು ಒಲೆ/ಸ್ಟೋವ್ ಮೇಲೆ ನೀರನ್ನು ಕಾಯಲು ಇಟ್ಟಾಗ ಅದರ ತಳ ಬೆಂಕಿಯಿಂದ ಬಿಸಿಯಾಗಿ ತಳಕ್ಕೆ ಹತ್ತಿರವಿರುವ ನೀರಿನ ಅಣುಗಳು ಬಿಸಿಯನ್ನು ತಗುಲಿಕೊಂಡು ಮೇಲೆ ಬರುತ್ತವೆ. ಅವುಗಳು ಮೇಲೆ ಬಂದಂತೆಲ್ಲ, ಮೇಲಿನ ತಂಪಾಗಿರುವ (relatively) ಅಣುಗಳು ಕೆಳಗೆ ಹೋಗುತ್ತವೆ. ಹೀಗೆ ನೀರು ಕುದಿಯುವ ಮಟ್ಟವನ್ನು ತಲುಪಿದ ಹಾಗೆ, ಈ ನೀರಿನ ಅಣುಗಳು, ಕೆಳಗೆ ಹೋದವು, ಮತ್ತೆ "ಮರಳು"ವ ಹೊತ್ತಿಗೆ ಅವುಗಳ ವೇಗ ಹೆಚ್ಚಾಗುತ್ತದೆ... ನಂತರ ನೀರು ಕೊತ ಕೊತ ಕುದಿಯತೊಡಗುತ್ತದೆ.<br />
<br />
ಆದರೆ, ಹಾಲನ್ನು ಬಿಸಿ ಮಾಡಿದಾಗ ಅದೇ ರೀತಿ ಹಾಲಿನ ಕಣಗಳು ಮೇಲೆ ಕೆಳಗೆ ಹೋಗುತ್ತಿದ್ದರೂ ಸಹ, ಹಾಲು ಬಿಸಿ ಆದಂತೆಲ್ಲ, ಅದರ ಮೇಲ್ಮೈ ಮೇಲೆ ಒಂದು ತೆಳುವಾದ ಕೆನೆಯ ಪರದೆ ಹುಟ್ಟಲು ಆರಂಭವಾಗುತ್ತದೆ. ಹಾಲು ನೀರಿಗಿಂತ ಸ್ವಲ್ಪ "ದಪ್ಪ"ನಾದ ದ್ರವ ಪದಾರ್ಥವಾದರೂ ಕೂಡ, ಹಾಲಿನ boiling point ನೀರಿಗಿಂತ ಹೆಚ್ಚೇನೂ ಭಿನ್ನವಾಗಿರೋದಿಲ್ಲ, ಆದರೆ ಈ ಎರಡೂ ದ್ರವ ಪದಾರ್ಥಗಳು ಕುದಿಯುವ ಹೊರಮುಖ ಬೇರೆ ಬೇರೆ ಅಷ್ಟೇ.<br />
<br />
ಹಾಲು ಕುದಿಯುತ್ತಾ ಹೋದಂತೆಲ್ಲ ಅದರ ಮೇಲ್ಮೈಯಲ್ಲಿರುವ ಕೆನೆಯ ದಪ್ಪ ಹೆಚ್ಚಾಗುತ್ತಾ ಹೋಗುತ್ತದೆ. ಪಾತ್ರೆಯ ಬುಡದಲ್ಲಿ ಬಿಸಿ ಎಲ್ಲ ರೀತಿಯಲ್ಲೂ ಒಂದೇ ಸಮನಾಗಿ ಇದೆಯೆಂದು ಭಾವಿಸಿದರೆ, ಹಾಲು ಕುದಿಯುವ ಮಟ್ಟವನ್ನು ತಲುಪಿದಾಗ, ಅದರ ಮೇಲ್ಮೈಯಲ್ಲಿ ಕಟ್ಟಿರುವ ಕೆನೆಯ ಪರದೆ ಒಡೆದು ಒಂದೇ ಸಮನೆ ಮೇಲೆ ಉಕ್ಕಲು ಆರಂಭಿಸುತ್ತದೆ. ಆದರೆ ನೀರು ಹೀಗು ಕುದ್ದು ಉಕ್ಕೋದಿಲ್ಲ.<br />
<br />
<div class="separator" style="clear: both; text-align: center;">
<a href="https://blogger.googleusercontent.com/img/b/R29vZ2xl/AVvXsEjikvE-XsV91u6RMXGcrbuC9oBldTWySHGojqxC8YVBM7DS3vIEffGPLP1Yrrk8AtN7m6v8ctYanvTPbVlL6EpLd9-bfLT1VAMG5LXGmvwkNHGevhmrAg8dvTnrDimpcYxnOZ8WyQ/s1600/boiling+milk.jpg" imageanchor="1" style="margin-left: 1em; margin-right: 1em;"><img border="0" data-original-height="571" data-original-width="474" height="400" src="https://blogger.googleusercontent.com/img/b/R29vZ2xl/AVvXsEjikvE-XsV91u6RMXGcrbuC9oBldTWySHGojqxC8YVBM7DS3vIEffGPLP1Yrrk8AtN7m6v8ctYanvTPbVlL6EpLd9-bfLT1VAMG5LXGmvwkNHGevhmrAg8dvTnrDimpcYxnOZ8WyQ/s400/boiling+milk.jpg" width="330" /></a></div>
<br />
ಇದನ್ನು ಇಬ್ಬರು ಗೆಳೆಯರ ಅನಾಲಜಿಯನ್ನು ಉಪಯೋಗಿಸಿಯೂ ವಿವರಿಸಬಹುದು! ಹಾಲು ಮತ್ತು ನೀರು ಇಬ್ಬರೂ ಜೀವದ ಗೆಳೆಯರು. ಹಾಲಿನಲ್ಲಿ ಸಾಮಾನ್ಯವಾಗಿ ನೀರನ್ನು ಮಿಶ್ರ ಮಾಡಿರುತ್ತಾರೆ, ಅಥವಾ ನೀರಿನ ಪ್ರಮಾಣ ಇದ್ದೇ ಇರುತ್ತದೆ. ಹಾಲು ಕುದಿಯುತ್ತಾ ಬಂದ ಹಾಗೆ ನಿಧಾನವಾಗಿ ಹಬೆಯಾಡತೊಡಗುತ್ತದೆ... ಅಂದರೆ, ಅದರಲ್ಲಿನ ನೀರು ಆವಿಯಾಗಲು ತೊಡಗುತ್ತದೆ... ಅಂದರೆ, ಹಾಲಿನ ಸ್ನೇಹಿತ ನಿಧಾನವಾಗಿ ಹೊರಗಡೆ ಹೋಗುತ್ತಾನೆ. ಆದರೆ, ತನ್ನ ಸ್ನೇಹಿತ ನೀರು ಇನ್ನೇನು ಪೂರ್ಣ ಪ್ರಮಾಣದಲ್ಲಿ ಆವಿಯಾಗಿ ಹೋಗೇ ಬಿಟ್ಟಿತು ಎಂದು ಹೆದರಿಕೆಯಿಂದ ಹಾಲೂ ಸಹ "ನೀನು ಹೋದಲ್ಲಿಗೆ ನಾನೂ ಬರುತ್ತೇನೆ!" ಎಂದು ಹಠ ಹಿಡಿದು ಉಕ್ಕುತ್ತಾನಂತೆ. ಅದೇ ಸಮಯಕ್ಕೆ ನೀವು ಸ್ವಲ್ಪ ನೀರನ್ನು ಪಾತ್ರೆಯ ಮೇಲೆ ಚಿಮುಕಿಸಿದರೆ ಉಕ್ಕುವ ಹಾಲು ಸುಮ್ಮನಾಗುತ್ತಾನಂತೆ!<br />
<br />
ಹೀಗೆ, ಈ ದಿನ ಚಹಾ ಮಾಡಲು ಹೋಗಿ, ಹಾಲು-ನೀರಿನ ಜೋಡಿಗಳನ್ನು ಬೆಂಕಿಯ ಸಹವಾಸದಲ್ಲಿ ಕುದಿಯುವಂತೆ ಮಾಡಿದ್ದು, ಅವುಗಳ ಅನ್ಯೋನ್ಯ ಗೆಳೆತನವನ್ನು ಪರೀಕ್ಷೆಗೆ ಒಡ್ಡಿ ಹತ್ತಿರದಿಂದ ನೋಡಿದ್ದು ಕೋವಿಡ್ ಕವಿದು ಮನೆಯಲ್ಲೇ ಮುದುರಿಕೊಂಡಿರುವ ನಮ್ಮಂತಹವರು ಮಾಡಿದ ದೊಡ್ಡ ಕಾರ್ಯ!</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com0tag:blogger.com,1999:blog-19220235.post-7657119981508147142020-05-13T20:19:00.000-04:002020-05-14T04:26:36.911-04:00Time ಇದ್ರೆ Photo organize ಮಾಡಿ!<div dir="ltr" style="text-align: left;" trbidi="on">
<span style="font-size: x-large;">ಹೆಚ್ಚು ಜನರಿಗೆ </span>ಈಗ ನೆನಪಿನಲ್ಲಿರಲಿಕ್ಕಿಲ್ಲ... ಒಂದು ಕಾಲದಲ್ಲಿ ನಾವೂ ಸಹ ಕ್ಯಾಮೆರಾದಲ್ಲಿ ರೀಲುಗಳನ್ನು ಹಾಕಿ ಮತ್ತೆ ಅವುಗಳನ್ನ ಡೆವಲಪ್ ಮಾಡಿ, ಬೇಕಾದ ಚಿತ್ರಗಳನ್ನು ಪ್ರಿಂಟ್ ಹಾಕಿಸಿಕೊಂಡು ನೋಡುತ್ತಿದ್ದೆವು. ಆದರೆ, ಒಮ್ಮೆ ಡಿಜಿಟಲ್ ಕ್ಯಾಮೆರಾ ಪ್ರಪಂಚ ತೆರೆದುಕೊಂಡ ಮೇಲೆ, ರೀಲುಗಳು ಮತ್ತು ರೀಲು ಹಾಕುವ ಕ್ಯಾಮೆರಾಗಳು ಔಟ್ಡೇಟೆಡ್ ಆದವು. ಜೊತೆಗೆ ಡಿಜಿಟಲ್ ಕ್ಯಾಮೆರಾದ ಮತ್ತೊಂದು ಕೊಡುಗೆಯೆಂದರೆ ಎಲ್ಲರ ಮನೆಯಲ್ಲೂ ಅಗಾಧವಾಗ ಚಿತ್ರ ಸಂಗ್ರಹಗಳು. ರೀಲು ಹಾಕುತ್ತಿದ್ದಾಗ ನಾವುಗಳು ಎಷ್ಟು ಕ್ಲಿಕ್ ಮಾಡಬೇಕು, ಬಿಡಬೇಕು ಎಂದೆಲ್ಲಾ ಯೋಚಿಸುತ್ತಿದ್ದೆವು... ಆದರೆ, ಡಿಜಿಟಲ್ ಕ್ಯಾಮೆರಾದ ಶಕ್ತಿಯೆಂದರೆ ಎಷ್ಟು ಸಾಧ್ಯವೋ ಅಷ್ಟು ಪಿಕ್ಚರುಗಳನ್ನು ತೆಗೆಯೋದು... ನಂತರ ಅವುಗಳನ್ನು ಸರಿಯಾಗಿ ಆರ್ಗನೈಜ್ ಮಾಡಿ ಇಡದೇ ಇದ್ದರೆ, ಬೇಕಾದ ಚಿತ್ರ ಯಾವಾಗ ಬೇಕೋ ಆಗ ಸಿಗದೇ ತೊಂದರೆಯಾಗೋದು. ಜೊತೆಗೆ, ಕೆಲವೊಮ್ಮೆ ಕಂಪ್ಯೂಟರ್ ಹಾರ್ಡ್ಡ್ರೈವ್ ಅಥವಾ ಸ್ಟೋರೇಜ್ ಏನಾದ್ರೂ ಫೇಲ್ ಆದ್ರೆ, ಹಳೆಯದೆಲ್ಲ ಚಿತ್ರಗಳನ್ನು ಕಳೆದುಕೊಳ್ಳುವುದೂ ಆಗಿ ಹೋಗಿ ಹೋಗಿದೆ.<br />
<br />
ಹೀಗೆ, ಕೋವಿಡ್ಮಯವಾದ ಈಗಿನ ದಿನಗಳಲ್ಲಿ ಮಾಡುವುದಕ್ಕೆ ಏನಾದರೂ ಕೆಲಸವೊಂದಿರಬೇಕಲ್ಲ? ಅದಕ್ಕೋಸ್ಕರ ಕಳೆದ ಎರಡು ದಿನಗಳಿಂದ ಹಳೆಯ ಫೋಟೋಗಳನ್ನೆಲ್ಲ ಹರಡಿಕೊಂಡು ಕುಳಿತುಕೊಂಡಿದ್ದೇನೆ. ಅದನ್ನು ಆರ್ಗನೈಜ್ ಮಾಡುವುದು ಹೇಗೆ ಎಂದು ಗಮನಿಸಿದಾಗ ಫೋಟೋ ಅರ್ಗನೈಜ್ ಮಾಡುವುದರ ಬಗ್ಗೆ ಓದುತ್ತಾ ಹೋದೆ. ಅದರಲ್ಲೂ ಆರ್ಗನೈಜ್ ಮಾಡುವುದಕ್ಕೆ ಯಾವ ಯಾವ ಸಾಫ್ಟ್ವೇರ್ಗಳಿವೆ ಎಂದು ಹುಡುಕಿದಾಗ ಈ ಸೈಟು ದೊರೆಯಿತು, <a href="https://www.pixpa.com/blog/photo-organiser" target="_blank">25 photo organizing software & apps</a> ಅದರಲ್ಲೂ ಮತ್ತೆ ಕೆದಕುತ್ತಾ ಹೋದ ಹಾಗೆ ಈ ಕೆಳಗಿನ ಫ್ರೀ ಸಾಫ್ಟ್ವೇರ್/ಅಪ್ಲಿಕೇಶನ್ಗಳು ಕಣ್ಣಿಗೆ ಬಿದ್ದವು:<br />
<br />
Adobe bridge<br />
StudioLine<br />
DigiKam<br />
Nomacs<br />
Apple Photos (Mac)<br />
Mylio<br />
ಮತ್ತು<br />
Google Photos<br />
<br />
<a href="https://www.imore.com/google-photos-may-be-free-what-personal-cost" target="_blank">ಗೂಗಲ್ ಫೋಟೋಸ್ ಫ್ರೀ ಇರಬಹುದು</a>, ಆದರೆ ಈ ದೊಡ್ಡ ಮನುಷ್ಯರ ಸಹವಾಸ ಬೇಡ, ಎಂದು ಸಣ್ಣ ಕಂಪನಿಗಳ ಪ್ರಾಡಕ್ಟ್ಗಳನ್ನು ನೋಡುತ್ತಾ ಅವುಗಳ ರಿವ್ಯೂ ಓದುತ್ತಾ ಸಮಯ ಕಳೆದೆ. ಅಡೋಬಿ ಬ್ರಿಜ್ ಕೂಡಾ ಅಷ್ಟೊಂದು ಇಷ್ಟವಾಗಲಿಲ್ಲ. ಅಲ್ಲದೇ ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಕೆಲಸ ಮಾಡುವ ಅಪ್ಲಿಕೇಶನ್ ಬೇಕಾಗಿದ್ದರಿಂದ, ಇದ್ದವುಗಳಲ್ಲಿ Mylio ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿದೆ.<br />
<br />
ಅದಕ್ಕೆ ನನ್ನಲ್ಲಿದ್ದ ಸುಮಾರು 8 TB ಸ್ಟೋರೇಜ್ ಇರುವ NAS ಅನ್ನು import ಮಾಡಿ, ಅದರ ಜೊತೆಗೆ ಒಂದೆರಡು ಹಳೆಯ 4 TB USB storageಗಳನ್ನೂ ಸಹ ಕನೆಕ್ಟ್ ಮಾಡಿಟ್ಟೆ. ನನ್ನ ಘನಂದಾರಿ ಕಂಪ್ಯೂಟರ್ ನಿನ್ನೆಯಿಂದ ತಿರುಗುತ್ತಲೇ ಇದೆ. ಈಗಾಗಲೇ ಸುಮಾರು 25,000ಕ್ಕೂ ಹೆಚ್ಚು photo/videoಗಳನ್ನು ಅದು ಹುಡುಕಿದ್ದು, ಕಳೆದ 15 ವರ್ಷದ ಹಳವಂಡಗಳೆಲ್ಲ ಹೊರಗೆ ಬರುತ್ತಲಿದೆ!<br />
<br />
ಇನ್ನು ಕೆಲವೇ ದಿನಗಳಲ್ಲಿ ನನ್ನ ಎಲ್ಲ ಫೋಟೋಗಳೂ ಸಹ ಆರ್ಗನೈಜ್ ಆಗಿ, ಎಲ್ಲರ ಮುಖಗಳನ್ನೂ ಗುರುತಿಸಿ, ಎಲ್ಲ ಲೊಕೇಶನ್ನುಗಳನ್ನೂ ಸಹ ಪಟ್ಟಿ ಮಾಡಿಕೊಂಡು, ಅದರಲ್ಲಿದ್ದ ಡ್ಯೂಪ್ಲಿಕೇಟುಗಳನ್ನೆಲ್ಲ ತೆಗೆದುಹಾಕಿದ ಮೇಲೆ, ಪ್ರತಿಯೊಂದು ಇವೆಂಟುಗಳ ಟ್ಯಾಗ್ ಪ್ರಕಾರ ಆರ್ಗನೈಜ್ ಮಾಡಿ ಬಿಟ್ಟರೆ... ನನ್ನ ಕೆಲಸ ಮುಗಿದಂತೆ. ಆದರೆ, ಈ ಸಂಪೂರ್ಣ "ಎಡಿಟಿಂಗ್" ಕೆಲಸ ಮುಗಿಯಬೇಕಾದರೆ - ನನ್ನ ಕೆಲಸ ಕಾರ್ಯಗಳ ಮಧ್ಯೆ, ಕೇವಲ ಪಾರ್ಟ್ಟೈಮ್ ಮಾತ್ರ ಈ ಕೆಲಸಕ್ಕೆ ವ್ಯಯಿಸುತ್ತಿರುವುದರಿಂದ - ಏನಿಲ್ಲವೆಂದರೂ ಒಂದು ತಿಂಗಳಾದರೂ ಬೇಕು!<br />
<br />
***<br />
ಹದಿನೈದು ಇಪ್ಪತ್ತು ವರ್ಷಗಳ ಫೋಟೋಗಳನ್ನು ಹರವಿಕೊಂಡು ಒಮ್ಮೆ ನೋಡಿ - ನಿಮ್ಮ ಪ್ರಬುದ್ಧತೆ, ಒಳ-ಹೊರಗುಗಳೆಲ್ಲ ಸ್ವಲ್ಪ ಸ್ವಲ್ಪವೇ ಬದಲಾಯಿಸುವುದನ್ನು ಕಣ್ಣಾರೆ ನೋಡಬಹುದು!</div>
<div class="blogger-post-footer">© copyright http://antaranga.blogspot.com</div>Satishhttp://www.blogger.com/profile/18348145837047496415noreply@blogger.com1