Showing posts with label ವಿದ್ಯಮಾನ. Show all posts
Showing posts with label ವಿದ್ಯಮಾನ. Show all posts

Tuesday, May 19, 2020

ಯಾರನ್ನ ನಂಬುವುದು? ಬಿಡುವುದು?

ಈಗಿನ ಕಾಲದ ನ್ಯೂಸ್ ಚಾನೆಲ್‌ಗಳನ್ನ ನೋಡ್ತಾ ಇದ್ರೆ ಒಂದು ರೀತಿ ವಾಕರಿಕೆ ಬಂದಂಗೆ ಆಗೋಲ್ಲ?  ಒಂದು ಕಾಲದಲ್ಲಿ ಎಷ್ಟೊಂದು ಚೆನ್ನಾಗಿ ನಾವು ವಿಶ್ವದ ಆಗುಹೋಗುಗಳನ್ನು ಫಾಲೋ ಮಾಡುತ್ತಿದ್ದೆವು.  ರೇಡಿಯೋ ಇಟ್ಟುಕೊಂಡು BBC, VoA, SLBC, AIR ಮೊದಲಾದ ಸ್ಟೇಷನ್ನುಗಳನ್ನು ತಿರುಗಿಸಿ ನೋಡುತ್ತಿದ್ದೆವು.  ಆಗಿನ ಕಾಲದಲ್ಲಿ ಮ್ಯಾಗಜೀನುಗಳು, ವೃತ್ತ ಪತ್ರಿಕೆಗಳು, ನಿಯತಕಾಲಿಕೆಗಳನ್ನು ಪ್ರತಿನಿತ್ಯ ತಪ್ಪದೇ ಓದುತ್ತಿದ್ದೆವು.  ಆಗಿನ ಕಾಲದ ಜರ್ನಲಿಸಮ್ ಅಂದ್ರೆ ಅದರಲ್ಲಿ ತಿರುಳಿತ್ತು, ಹುರುಳಿತ್ತು, ಎಲ್ಲಕ್ಕಿಂತ ಮುಖ್ಯವಾಗಿ ನ್ಯೂಸ್ ಇತ್ತು.  ಇದ್ದದ್ದನ್ನು ಇದ್ದ ಹಾಗೆ ವರದಿ ಮಾಡುವ ಪ್ರಕ್ರಿಯೆ ಇತ್ತು.  ಓದುಗರನ್ನು, ಕೇಳುಗರನ್ನು ಪತ್ರಿಕಾ ಸಿಬ್ಬಂದಿ ಸೀರಿಯಸ್ ಆಗಿ ಪರಿಗಣಿಸುತ್ತಿದ್ದರು, ಗಮನಿಸುತ್ತಿದ್ದರು.

ಇದನ್ನು ಬೇಕಾದ್ರೆ, ನಾಸ್ಟಾಲ್ಜಿಯಾ ಎಂದು ಕರೆದು ಬದಿಗೆ ತಳ್ಳಬಹುದು, ಆದರೆ ಇಂದಿನ ನ್ಯೂಸ್‌ ನೆಟ್‌ವರ್ಕ್‌ಗಳಲ್ಲಿ  ಯಾವುದೇ ಹುರುಳಿದ್ದಂತೆ ನನಗನ್ನಿಸೋದಿಲ್ಲ.  ನ್ಯೂಸ್‌ಗಿಂತ ಹೆಚ್ಚಾಗಿ ಒಪಿನಿಯನ್ (Op Ed) ನಿಂದ ಎಲ್ಲ ಅಂಕಣಗಳು ತುಂಬಿರುತ್ತವೆ.  ಕೆಲವೊಂದು ನ್ಯೂಸ್ ಪೇಪರುಗಳು, ಚಾನೆಲ್ಲುಗಳಂತೂ ಆಯಾ ಪೊಲಿಟಿಕಲ್ ಮ್ಯಾನಿಫೆಸ್ಟೋ ಅನ್ನು ಸಪೋರ್ಟ್ ಮಾಡುತ್ತಾ, ತಮ್ಮ ರಾಜಕೀಯ/ದುರೀಣರ ಮೌತ್‌ಪೀಸ್ ಆಗಿ ಬಿಟ್ಟಿವೆ.

***
ನಾನು ಈ ಕೊರೋನ ಬೆಳವಣಿಗೆಯನ್ನು ಪ್ರತಿದಿನ ರಾತ್ರಿ ಒಂಭತ್ತು ಘಂಟೆಗೆ ಪ್ರಸಾರವಾಗುವ ABD News Live ನೋಡುತ್ತೇನೆ.  Linsey Davis ಇದ್ದವರಲ್ಲಿ ಒಳ್ಳೆಯ anchor ಎಂದೇ ಹೇಳಬೇಕು.  ಸ್ಫುಟವಾಗಿ ಯಾವ ತಪ್ಪೂ ಇಲ್ಲದೇ ಉತ್ತಮ ಧ್ವನಿಯಿಂದ ಈಕೆ ABC ನ್ಯೂಸ್ ನೋಡುಗರಿಗೆ ಇಷ್ಟವಾಗುತ್ತಾರೆ.  ಜೊತೆಗೆ, ಇದ್ದ ವಿಷಯವನ್ನು ಇದ್ದ ಹಾಗೆ ಹೇಳುವಷ್ಟರ ಮಟ್ಟಿನ objectivity ಯನ್ನು ನಾನು ಈವರೆಗೆ ಕಂಡಿದ್ದೇನೆ, ಅದರಲ್ಲೂ ಯಾವುದೇ "ಸ್ವಾಮಿನಿಷ್ಠೆ" ಈವರೆಗೆ ನನ್ನ ಅರಿವಿಗೆ ಬಂದಿಲ್ಲ.


ಒಂದು ಮೂವತ್ತು ನಿಮಿಷದ ನ್ಯೂಸ್ ದಿನಕ್ಕೊಮ್ಮೆ ಸಿಕ್ಕರೆ ಸಾಕು ಪ್ರಪಂಚದಲ್ಲಿ ಏನಾಗುತ್ತದೆ ಎಂದು ಗೊತ್ತಾಗಲು.  ಅದಲ್ಲದೇ ನಮ್ಮನ್ನೆಲ್ಲ ಯಾವಾಗಲೂ ತಮ್ಮ ಕಡೆಗೆ ತಿರುಗಿಕೊಂಡಿರುವಂತೆ ಮಾಡುವ ಸೋಶಿಯಲ್ ಮೀಡಿಯಾ "ಚಾನಲ್ಲು"ಗಳಂತೂ ಇದ್ದೇ ಇರುತ್ತಾವಲ್ಲ, ನೀವು ಬೇಡವೆಂದರೂ ನಿಮ್ಮನ್ನು ಸುತ್ತಿಕೊಳ್ಳಲು?!

ಅಪ್ಪಿ-ತಪ್ಪಿಯೇನಾದರೂ ಒಳ್ಳೆಯ ಇಂಗ್ಲೀಷ್ ಬರವಣಿಗೆ ಸಿಗುತ್ತದೆಯೆಂದು NY Times ಏನಾದರೂ ನೋಡಿದರೆ ಸಾಕು, Trump ಮಹಾಶಯ ತಪ್ಪು ಮಾಡುವುದನ್ನೇ ಕಾಯುತ್ತಿರುವವರ ಹಾಗೆ ಇಲ್ಲಿನ ರಿಪೋರ್ಟರುಗಳು, ಅಲ್ಲ ಬರಹಗಾರರು ವರದಿ ಒಪ್ಪಿಸಿಯಾರು.  ಅವರಿಗೆ ಮತಿ ಇಲ್ಲ, ಇವರಿಗೆ ಗತಿ ಇಲ್ಲ ಎನ್ನುವುದು ಖಚಿತವಾಯಿತು.

ಅಲ್ಲದೇ ಈ ಸೊಫೆಸ್ಟಿಕೇಟೆಡ್ ಚಾನೆಲ್‌ನ anchor ಗಳೆಲ್ಲ ಯಾವಾಗಲೂ breaking news ಗಳಲ್ಲೇ ತಮ್ಮನ್ನೇ ಕಳೆದುಕೊಂಡು ಅದು ಯಾಕಾದರೂ ಅರಚುತ್ತಿರುತ್ತಾರೋ, ಯಾರು ಬಲ್ಲರು?

Wednesday, April 22, 2020

ನನ್ನ ದೇಶ ನನ್ನ ಜನ

ನನ್ನ ದೇಶ ನನ್ನ ಜನ
ನನ್ನ ಮಾನ ಪ್ರಾಣ ಧನ
ತೀರಿಸುವೆನೆ ಅದರ ಋಣ
ಈ ಒಂದೇ ಜನ್ಮದಿ|
ನೂರು ಭಾವ ಭಾಷೆ ನೆಲೆ
ನೂರು ಬಣ್ಣ ವೇಷ ಕಲೆ
ಸ್ವಚ್ಛಂದದ ಹಕ್ಕಿಗಳೆ
ನಮ್ಮ ಹಾಡು ಬದುಕಲು|

ನಮ್ಮ ದೇಶದಲ್ಲಿ ಒಂದು ಕೋಮಿನವರು ವೈರಸ್ ಸೋಂಕನ್ನು ಉದ್ದೇಶ ಪೂರ್ವಕವಾಗಿ ಹರಡುತ್ತಿದ್ದಾರೆ... ಇಡೀ ಪ್ರಪಂಚವೇ ವೈರಸ್‌ ದೆಸೆಯಿಂದ ನಲುಗುತ್ತಿದ್ದರೆ ಅದನ್ನು ಕೆಲವರು ತಮ್ಮ ಅನುಕೂಲಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ... ನಮ್ಮ ಯುವಕ-ಯುವತಿಯರು ಪಾಕಿಸ್ತಾನಕ್ಕೆ ಜೈಕಾರ ಹಾಕುವುದನ್ನು ತಮ್ಮ ಹಕ್ಕು ಎಂದುಕೊಂಡಿದ್ದಾರೆ... ಎಂದೆಲ್ಲ ಮಾಧ್ಯಮಗಳಲ್ಲಿ ಓದಿದಾಗ ಚೆನ್ನವೀರ ಕಣವಿಯವರ ಈ ಹಾಡು ನೆನಪಿಗೆ ಬಂತು.  ಇನ್ನೂ ಕೇವಲ ಎಪ್ಪತ್ತಮೂರು ವರ್ಷಗಳನ್ನು ಕಳೆದ ನಮ್ಮ "ಸ್ವಾತಂತ್ರ್ಯ" ನಮ್ಮನ್ನು ಈ ಸ್ಥಿತಿಗೆ ತಂದಿದೆ.  ಇನ್ನೊಂದಿನ್ನೂರು ವರ್ಷಗಳಲ್ಲಿ ನಮ್ಮ ಯುವ ಜನರ "ದೇಶಭಕ್ತಿ" ಇದೇ ರೀತಿಯಲ್ಲಿ ಮುಂದುವರೆದು, ನಮ್ಮೆಲ್ಲರ ದೇಶ ಪ್ರೇಮ, ವಿಶ್ವಾಸ, ಒಗ್ಗಟ್ಟು, ಭಾವೈಕ್ಯತೆ, ಘನತೆ ಇವೆಲ್ಲವೂ ಏನಾಗಬಹುದು ಎಂದು ಯೋಚಿಸಿದಾಗ ನಿಜವಾಗಿಯೂ ಬೆನ್ನ ಹುರಿಯಲ್ಲಿ ಕಂಪನವಾಯಿತು.  ಇಂದಿನ ಯುವಕರೇ ಮುಂದಿನ ಪ್ರಜೆಗಳು, ನಾಳಿನ ಭಾರತದ ಭವಿತವ್ಯರು - ಎಂದೆಲ್ಲ ಯೋಚಿಸಿಕೊಂಡಾಗ ಹೆದರಿಕೆಯ ಜೊತೆಗೆ, ಖೇದವೂ ಒಡಮೂಡಿತು.

***
1947ರ ಸ್ವಾತ್ರಂತ್ರ್ಯ ನಿಜವಾಗಿಯೂ ನಮ್ಮನ್ನು ಒಂದುಗೂಡಿಸಿತೇ? ಬ್ರಿಟೀಷ್ ಮತ್ತು ಇತರ ವಸಾಹತುಶಾಹಿಗಳ ಅಧಿಕಾರ ಅವಧಿ ಇರದೇ ಇರುತ್ತಿದ್ದರೆ ಇಂದಿನ ನಮ್ಮ ಅಖಂಡ ಭಾರತ ಹೇಗಿರುತ್ತಿತ್ತು? ಬ್ರಿಟೀಷರ ಭಾಷೆ ನಮ್ಮನ್ನು ಒಂದುಗೂಡಿಸಿತೇ? ಅವರ ಆಚಾರ-ವಿಚಾರ ಹಾಗೂ ನಡೆವಳಿಕೆಗಳು ನಮ್ಮನ್ನು ಮುಂದುವರೆದವರನ್ನಾಗಿ ಮಾಡಿದವೇ? ಎಪ್ಪತ್ಮೂರು ವರ್ಷಗಳ ಹಿಂದೆ ಸ್ವಾತಂತ್ರ್ಯ ಸಂಗ್ರಾ?ಮದ ಸಮಯದಲ್ಲಿ ಮಾಹಿತಿ ಇರದಿದ್ದರೂ ಕೋಟ್ಯಾಂತರ ಮಂದಿ ಬ್ರಿಟೀಷರ ವಿರುದ್ಧ ಹೋರಾಡಿ ತಂದು ಕೊಟ್ಟ ಈ ಸ್ವಾಂತಂತ್ರ್ಯಕ್ಕೆ ಇಂದು ಅಂಗೈಯಲ್ಲಿ ಮಾಹಿತಿ ಸಿಗುವ ಅನುಕೂಲದ ಸಮಯದಲ್ಲಿ ಯುವ ಜನತೆಯಿಂದ ಅದಕ್ಕೇಕೆ ಕಡಿವಾಣ ಬೀಳುತ್ತಿದೆ? ದೇಶದ ಸಹನೆಯನ್ನೇಕೆ ಕೆಲವರು ಪರೀಕ್ಷಿಸುವಂತಾಗಿದೆ?  ನಿಜವಾಗಿಯೂ ನಮ್ಮ ದೇಶದಲ್ಲಿ ಸ್ವಾತಂತ್ರ್ಯವಿದೆಯೇ? ಹಾಗಿದ್ದರೆ ಅದರ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆಯೇ?

***

ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ, ಇಸ್ಲಾಂ ಮೂಲದ ಜೊತೆಗೆ ಮಧ್ಯ ಪ್ರಾಚ್ಯ ನೆರೆಹೊರೆಯ ಸಂಪ್ರದಾಯವನ್ನು ಮೈವೆತ್ತ ನೆರೆಯ ಪಾಕಿಸ್ತಾನ 1947ರಿಂದಲೂ ಬಡರಾಷ್ಟ್ರವಾಗೇ ಮುಂದುವರೆದಿದೆ.  ಒಂದು ಕಾಲದಲ್ಲಿ ತನ್ನಲ್ಲಿ ಬೆಳೆಯುವ ಹತ್ತಿಯನ್ನು ಸಂಸ್ಕರಿಸುವ ಕೈಗಾರಿಕೆಯೂ ಇಲ್ಲದೆ ಒಂದು ಸಣ್ಣ ಸೂಜಿಯಿಂದ ಹಿಡಿದು ಕಾರಿನವರೆಗೂ ಹೊರ ರಾಷ್ಟ್ರಗಳಿಗೆ ತನ್ನ ಮಾರುಕಟ್ಟೆಯನ್ನು ತೆರೆದುಕೊಂಡು ತನ್ನ ಆಂತರಿಕ ಸಂಘರ್ಷಗಳನ್ನು ಒಂದು ಕಡೆ ಹತ್ತಿಕ್ಕಲೂ ಆಗದೆ ಬಚ್ಚಿಡಲೂ ಆಗದೆ ಬಳಲುತ್ತಿರುವ ರಾಷ್ಟ್ರ ಪಾಕಿಸ್ತಾನ.  ಅನೇಕ ಮುತ್ಸದ್ದಿಗಳು ಹುಟ್ಟಿಬಂದ ನೆಲದಲ್ಲೇ ಇಸ್ಲಾಂ ಪ್ರವಾದಿಗಳು ಜನರ ಮನದಲ್ಲಿ ಸೇಡು, ಕಿಚ್ಚಿನ ಕ್ರಾಂತಿಯನ್ನು ಬಿತ್ತುತ್ತಾ ಬಂದರು.  ಭಾರತವನ್ನು ದ್ವೇಷಿಸುವುದೇ ಪ್ರಣಾಳಿಕೆಯೆಂಬಂತೆ ನಾಯಿಕೊಡೆಗಳಂತೆ ಅಲ್ಲಲ್ಲಿ ಪಕ್ಷಗಳು ಹುಟ್ಟಿದವು.  ಅವೇ ಮುಂದೆ ಭಯೋತ್ಪಾದಕ ಸಂಘಟನೆಗಳಾದವು.  ಅನೇಕ ಮಿಲಿಟರಿ ಕ್ಯೂ (ರಕ್ತಪಾತ) ಹಾಗೂ ಅನೇಕ ಭ್ರಷ್ಟಾಚಾರದ ಅಧೋಗತಿಯಲ್ಲಿ ದೇಶ ಹಾಳಾಗಿ ಹೋಯಿತು.  ಒಂದು ಕಾಲದಲ್ಲಿ ವಿದೇಶೀ ಸಹಾಯವಿಲ್ಲದಿದ್ದರೆ ಯಾವತ್ತೋ ಭೂಪಟದಲ್ಲಿ ನಾಪತ್ತೆಯಾಗಿ ಹೋಗುವಂತಿದ್ದ ಪಾಕಿಸ್ತಾನಕ್ಕೆ ಬಲವಾಗಿ ಸಿಕ್ಕಿದ್ದು ನ್ಯೂಕ್ಲಿಯರ್ ಶಕ್ತಿ.  ನವದೆಹಲಿಯಿಂದ ಕೇವಲ ಐನೂರು ಕಿಲೋಮೀಟರ್ ದೂರದಲ್ಲಿರುವ ಪಾಕಿಸ್ತಾನದ ಅಸ್ಥಿರತೆಯನ್ನು ನಾವು ಬಹಳ ಸೂಕ್ಷವಾಗಿ ನೋಡಿಕೊಂಡು ಬರುವಂತ ಸ್ಥಿತಿ ಇಂದಿಗೂ ಇದೆ.  ಯಾವುದೋ ಧಾರ್ಮಿಕ ಮೂಲಭೂತವಾದಿಗೆ ಈ ಅಣ್ವಸ್ತ್ರವೇನಾದರೂ ದೊರೆತರೆ ಅದು ಪ್ರಪಂಚದ ವಿನಾಶಕ್ಕೆ ಕಾರಣವಾಗಬಹುದು!

ಇಂತಹ ಪಾಕಿಸ್ತಾನವನ್ನು ನಮ್ಮಲ್ಲಿನ ಕೆಲವು ಯುವಕ-ಯುವತಿಯರು ಬೆಂಬಲಿಸುತ್ತಾರೆ.  ಇಂತಹ ಪಾಕಿಸ್ತಾನಕ್ಕೆ ಜಯಕಾರ ಹಾಕುತ್ತಾರೆ ಎಂದು ಕೇಳುತ್ತಲೇ ಹೊಟ್ಟೆ ತೊಳಸಿದಂತಾಗುತ್ತದೆ.  ಈ ಯುವಕ-ಯುವತಿಯರಿಗೆ ನಿಜವಾದ ಪಾಕಿಸ್ತಾನದ ಅರಿವೇ ಇಲ್ಲ.  ಯಾವ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅವ್ಯಾಹತವಾಗಿ ದೌರ್ಜನ್ಯ ನಡೆಯುತ್ತಿದೆಯೋ, ಯಾವ ದೇಶದಲ್ಲಿ ಮೈನಾರಿಟಿ ಜನರ ಸ್ವಾತಂತ್ರ್ಯಕ್ಕೆ ಬೆಲೆಯೇ ಇಲ್ಲವೋ, ಯಾವ ದೇಶದಲ್ಲಿ ಧರ್ಮದ ಹೊರೆಯನ್ನು ಬಲವಂತವಾಗಿ ಹೇರಲಾಗುತ್ತದೆಯೋ - ಅಂತಹ ದೇಶದ ಮೇಲೆ ನಮ್ಮ ದೇಶದಲ್ಲಿ ನಿಜವಾದ ಸ್ವಾತಂತ್ರ್ಯದ ಉಸಿರಿನ ಬೆಲೆ ಗೊತ್ತಿರದ ಯುವಕ-ಯುವತಿಯರ ಮಮಕಾರ ಹೆಚ್ಚಾಗಲು ಏನು ಕಾರಣ, ಅದರ ಮೂಲ ನೆಲೆಯೇನು ಎಂದು ಗಂಭೀರವಾಗಿ ಯೋಚನೆ ಮಾಡಬೇಕಾಗುತ್ತದೆ.

ಪಾಕಿಸ್ತಾನದ ಪರವಾಗಿ ಕೂಗಿದ ಜೆ.ಎನ್.ಯು. ವಿದ್ಯಾರ್ಥಿಗಳು ಎಲ್ಲರೂ ಮುಸಲ್ಮಾನರಲ್ಲ.  ಕಾಶ್ಮೀರದಿಂದ ಕೇರಳದವರೆಗೆ ಒಂದು ರೀತಿಯಲ್ಲಿ ಯುವಜನತೆಯ ಬ್ರೈನ್‌ವಾಶ್ ಮಾಡಲಾಗುತ್ತಿದೆ.   ಚೀನಾದಲ್ಲಿ ಹುಟ್ಟಿ ಅಲ್ಲಿ ಪ್ರಬಲವಾಗಿ ಬೆಳೆದ ಮಾವೋಯಿಸಂ ನಮ್ಮ ವಿದ್ಯಾರ್ಥಿಗಳಿಗೆ ಪ್ರಿಯವಾಗುತ್ತದೆ.  ಸರ್ಕಾರದ ವಿರುದ್ಧ, ಪ್ರಜಾಸತ್ತತೆಯ ವಿರುದ್ಧ ಧ್ವನಿ ಎತ್ತುವುದು ಎಂದರೆ ಪಕ್ಕದ ಪಾಕಿಸ್ತಾನವನ್ನು ಹೊಗಳುವುದು ಎಂದಾಗಿ ಹೋಗಿಬಿಟ್ಟಿದೆ. ನಮಗೆ  ಸ್ವಾತಂತ್ರ್ಯ ಸಿಕ್ಕ ಮೊದಲ ಐವತ್ತು ವರ್ಷಗಳಲ್ಲಿ ಈ ಸ್ಥಿತಿ ಇರಲಿಲ್ಲ... ನಾವೆಲ್ಲ ಕಂಡ ಎಂಭತ್ತರ, ತೊಂಭತ್ತರ ದಶಕದ ಭಾರತದಲ್ಲಿ, ನಮ್ಮ ಶಾಲಾದಿನಗಳಲ್ಲಿ ಒಂದು ದಿನವೂ ಯಾರೂ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಿಲ್ಲ... ನಾವೆಲ್ಲ  ಅನೇಕ ಜನವಿರೋಧಿ ನೀತಿಗಳ ವಿರುದ್ಧವೋ, ಕಾನೂನಿನ ಪರವಾಗಿಯೋ, ಅಥವಾ ರಾಜ್ಯ-ದೇಶ-ಭಾಷೆಗಳ ಪರವಾಗಿಯೋ ಸತ್ಯಾಗ್ರಹ, ಸಂಗ್ರಾಮಗಳನ್ನು ಮಾಡಿದ್ದೇವೆ.  ಆದರೆ, ಇಂದಿನ ಯುವಜನತೆಯ ದೇಶದ್ರೋಹದ ಹಾದಿಯನ್ನು ಎಂದೂ ಹಿಡಿದಿದ್ದಿಲ್ಲ.  ನಾವು ಶಾಲೆಗೆ ಹೋಗುತ್ತಿದ್ದಾಗ ಪ್ರತಿದಿನವೂ ರಾಷ್ಟ್ರಗೀತೆಯನ್ನು ಹೇಳುತ್ತಿದ್ದೆವು, ಧ್ವಜವಂದನೆಯನ್ನು ಮಾಡುತ್ತಿದ್ದೆವು.  ನಮ್ಮೆಲ್ಲರಿಗಿಂತ ದೇಶ ಯಾವತ್ತೂ ದೊಡ್ಡದಾಗಿತ್ತು.  ಆದರೆ ಇಂದಿನ ಯುವಜನತೆಯ ಮನಃಸ್ಥಿತಿಯನ್ನು ನೋಡಿದಾಗ ಅದೇ ಭಾವನೆ ಖಂಡಿತ ಒಡಮೂಡುವುದಿಲ್ಲ.
ನನ್ನ ದೇಶ ಉನ್ನತವಾದುದು.  ಜನರಿಗೆ ನಿಜವಾಗಿಯೂ ಪ್ರಜಾಸತ್ತಾತ್ಮಕ ನೆಲೆಯಲ್ಲಿ ಬದುಕನ್ನು ಕಲ್ಪಿಸಿಕೊಟ್ಟಿದೆ.  ಹಾಡು ಹಗಲೇ ದರೋಡೆ, ಅತ್ಯಾಚಾರ, ಕೊಲೆ-ಸುಲಿಗೆ ಮಾಡಿದವರೂ ಸಂವಿಧಾನದ ವಿಧಿಯ ಪ್ರಕಾರ ಶಿಕ್ಷೆಗೆ ಗುರಿಪಡುತ್ತಾರೆ.  ಪ್ರತಿಯೊಬ್ಬರಿಗೂ ಅವರದೇ ಆದ ಹಕ್ಕುಗಳಿವೆ.  ಆದರೆ ಜನರು ತಮ್ಮ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ, ಅವೇ ಹಕ್ಕುಗಳ ಮಗ್ಗುಲಲ್ಲಿರುವ ಕರ್ತವ್ಯಗಳನ್ನು ಮರೆಯುತ್ತಾರೆ.  ತಮ್ಮ ಮೈಕ್ರೋ ಫ್ಯಾಮಿಲಿಗಳ ಸಂತೋಷಕ್ಕಾಗಿ ದೊಡ್ಡ ದೇಶದ ಘನತೆ ಗೌರವವನ್ನು ಮರೆಯುತ್ತಾರೆ.  ರಾಷ್ಟ್ರ ಯಾವತ್ತೂ ಸೆಕೆಂಡರಿಯಾಗುತ್ತದೆ, ತಮ್ಮ ಸ್ವಾರ್ಥ ದೊಡ್ಡದಾಗುತ್ತಾ ಹೋಗುತ್ತದೆ.

ಎಪ್ಪತ್ತು ವರ್ಷಗಳ ನಂತರ ನಮ್ಮ ಮೂಲಭೂತ ಸಮಸ್ಯೆಗಳು ಇನ್ನೂ ಹಾಗೇ ಇರುವಾಗ, ಈ ಎದೆಕರಗದ ದೇಶಭಕ್ತಿಯ ಜನ ಯಾವ ರೀತಿಯಲ್ಲಿ ದೇಶವನ್ನು ಮುಂದೆ ತಂದಾರು? ಇನ್ನು ನೂರಿನ್ನೂರು ವರ್ಷಗಳಲ್ಲಿ ನಮ್ಮ ದೇಶ ನಮ್ಮ ದೇಶವಾಗೇ ಇರುವುದೋ ಅಥವಾ ಮೊದಲಿನ ಹಾಗೆ ಹಂಚಿಕೊಂಡು ತುಂಡು ತುಂಡಾಗುವುದೋ ಎಂದು ಸಂಕಟವಾಗುತ್ತದೆ.


 




















ಭಾರತ ದೇಶವನ್ನು ಹಳಿಯುವವರು ತಮ್ಮ ದೇಶದ ಬಗ್ಗೆ ಒಂದಿಷ್ಟು ಕನಿಷ್ಠ ಮಾಹಿತಿಯನ್ನಾದರೂ ತಿಳಿದುಕೊಂಡು ತಮ್ಮ ವಾದವನ್ನು ಮಂಡಿಸಿದ್ದರೆ ಚೆನ್ನಾಗಿತ್ತು.  ಒಂದು ದೇಶದ ನಿಜವಾದ ಸ್ವಾತಂತ್ರ್ಯದ ಅರಿವಾಗುವುದು ಆ ಸ್ವಾತ್ಯಂತ್ರ್ಯ ಇಲ್ಲವಾದಾಗಲೇ!
(ಮಾಹಿತಿ ಕೃಪೆ: ವಿಕಿಪೀಡಿಯ)

Tuesday, April 07, 2020

ಕೊರೋನಾ ವೈರಸ್ - ಚೈನಾದ ಅತಂತ್ರವೋ, ಕುತಂತ್ರವೋ?

ಈ ವೈರಸ್ ಹಾವಳಿ ಜನವರಿಯಲ್ಲಿ ಎಲ್ಲ ಕಡೆಗೆ ಹಬ್ಬುತ್ತಿದ್ದಂತೆ ಅನೇಕ ಸಿದ್ಧಾಂತಗಳು (theories) ಹುಟ್ಟಿದವು, ಕೆಲವು ಮರು ಹುಟ್ಟು ಪಡೆದವು.  ವುಹಾನ್ ನಗರ (ಹುಬೈ ಪ್ರಾಂತ್ಯ) ಸಂಪೂರ್ಣವಾಗಿ ಮುಚ್ಚಿದ ನಂತರ, ಚೈನಾಕ್ಕೆ ಹೋಗುವ ಚೈನಾದಿಂದ ಬರುವ ಎಲ್ಲ ಪ್ರಯಾಣಿಕರು ಕಡಿಮೆಯಾದ ಮೇಲೆ, ಇಡೀ ವಿಶ್ವವೇ ಚೈನಾದ ಬೆಳವಣಿಗೆಗಳನ್ನು ಬಿಟ್ಟ ಕಣ್ಣು ಮಿಟುಕಿಸದೆ ನೋಡತೊಡಗಿತು.  ಒಂದಿಷ್ಟು ಜನ (ರಾಷ್ಟ್ರಗಳು) ತಮ್ಮ ದೇಶಕ್ಕೆ ಈ ವೈರಸ್ಸಿನಿಂದ ತೊಂದರೆಯಾದೀತೆಂದು ಮುಂಜಾಗರೂಕತೆ ಕ್ರಮವನ್ನು ಕೈಗೊಂಡರು.  ಮತ್ತಿನ್ನೊಂದಿಷ್ಟು ಜನ ಆ ನಿಟ್ಟಿನಲ್ಲಿ ತಮ್ಮ ನಿರ್ಧಾರಗಳನ್ನು ಪ್ರಕಟಿಸುವಾಗ ವಿಳಂಬದಿಂದಾಗಿ ಅದಕ್ಕೆ ತಕ್ಕ ಬೆಲೆಯನ್ನು ತೆರಬೇಕಾಗಿ ಬಂತು.  ಈಗ ಕಳೆದ ಆರೇಳು ವಾರಗಳಿಂದ (ಮಾರ್ಚ್ ೧ ರಿಂದ ಏಪ್ರಿಲ್ ೭ ರವರೆಗೆ) ಕರೋನಾ ವೈರಸ್ (covid-19) ನಮ್ಮ ಜನ ಜೀವನದಲ್ಲಿ ನೆಲೆ ನಿಂತಿದೆ.  ಇನ್ನೂ ಎರಡು ತಲೆ ಮಾರುಗಳಿಗಾಗುವಷ್ಟು ನಮಗೆಲ್ಲ ಪಾಠವನ್ನು ಕಲಿಸಿದೆ.

ಈ ಶತಮಾನದ ದೊಡ್ಡ ದುರಂತ, ಮಹಾವ್ಯಾಧಿ, ಸೋಂಕು, ಸಾಂಕ್ರಾಮಿಕ ರೋಗ, ಶಾಪ - ಇನ್ನೂ ಮೊದಲಾದ ಹೆಸರಿನಿಂದ ಕರೆಸಿಕೊಂಡು ತನ್ನ ಪರಿಣಾಮವನ್ನು ದೊಡ್ಡ ದೊಡ್ಡ ಅಕ್ಷರಗಳಲ್ಲಿ ಬರೆದುಕೊಂಡು, ಇನ್ನು ಇನ್ನೂರೈವತ್ತು ವರ್ಷವಾದರೂ, 2020ರ ಈ ಅನುಭವವನ್ನು ಜನರು ತಮ್ಮ ಹಾಡು-ಹಸೆಗಳಲ್ಲಿ ಮೆಲುಕುಹಾಕುವಂತೆ ಮಾಡುವ, ಚೈನಾದಿಂದ ಆರಂಭಿಸಿದ ಈ ಪ್ರಭಾವಿ ವೈರಸ್ಸಿನ ಅಭಿಯಾನವನ್ನು ಮಾನವ ನಿರ್ಮಿತ (ಕುತಂತ್ರ) ಎನ್ನೋಣವೋ ಅಥವಾ ಮಾನವನಿಗೆ ಮೀರಿದ (ಅತಂತ್ರ)ವೆಂದು ಕರೆಯೋಣವೋ?  ಈಗ ನಮಗೆ ಲಭ್ಯವಿರುವ ವಿಚಾರಗಳ ವಿನಿಮಯವೇ ಈ ಬರಹ.  ಕುತಂತ್ರವೋ-ಅತಂತ್ರವೋ ಎನ್ನುವ ತೀರ್ಮಾನ ನಿಮ್ಮದು!

***
ಅತಂತ್ರ: ಚೈನಾದವರು ಬಹುಪ್ರಾಣಿ ಭಕ್ಷಕರು - ಒಂದು ರೀತಿಯಲ್ಲಿ ಮಾಂಸ ಪ್ರಿಯರು, ಅದರಲ್ಲೂ ಅನೇಕ ಕಾಡು ಪ್ರಾಣಿಗಳನ್ನು ಫಾರ್ಮ್‌ಗಳಲ್ಲಿ ವ್ಯವಸ್ಥಿತವಾಗಿ ಅವುಗಳನ್ನು ಬೆಳೆಸಿ ತಮ್ಮ exotic cuisine ನಲ್ಲಿ ಬಳಸುವವರು.  ಚಿಕ್ಕ ಇರುವೆಗಳಿಂದ ಹಿಡಿದು, ಹಾರುವ ಬಾವುಲಿಯವರೆಗೆ, ಮೀನುಗಳಿಂದ ಹಿಡಿದು ಸರೀಸೃಪಗಳವರೆಗೆ (ಇವರು ಮನುಷ್ಯರನ್ನು ಮಾತ್ರ ತಿಂದ ನಿದರ್ಶನಗಳು ಸಿಗವು), ಅಂದರೆ ಉಳಿದೆಲ್ಲ ಜೀವಿಗಳು ಮಿಲಿಯನ್ನುಗಟ್ಟಲೆ ಚೈನಾ ದೇಶದ ಜನರ ಉದರವನ್ನು ಪೋಷಿಸಿರುವುದಕ್ಕೆ ಬಹಳ ನಿದರ್ಶನಗಳು ಸಿಕ್ಕಾವು.

ನಾವು ಅಮೇರಿಕದಲ್ಲಿ ಇಂಡಿಯನ್ ಸ್ಟೋರು, ರೆಸ್ಟೋರಂಟುಗಳಿಗೆ ಹೋದಾಗ ಒಂದು ರೀತಿಯ (ಕಮಟು) ವಾಸನೆ ನಮಗೆ ಎದುರಾಗುತ್ತದೆ.  ನಾವು ಭಾರತೀಯರಿಗೆ ಅದು ನಮಗೆ ಗೊತ್ತಾಗದಷ್ಟು ಹೊಂದಾಣಿಕೆಯಾಗಿರುತ್ತದೆ. (ನಮ್ಮ ಪಕೋಡಾ ಅಥವಾ ದೋಸೆ ವಾಸನೆ ನಮಗೆ ಪ್ರಿಯವಾಗಿರಬಹುದು, ಆದರೆ, ಅದು ಎಲ್ಲರಿಗೂ ಇಷ್ಟವಾಗಬೇಕು ಎಂದೇನೂ ಇಲ್ಲ). ಅದೇ ರೀತಿ ನಾವು ಕೊರಿಯನ್, ವಿಯಟ್‍ನಾಮೀಸ್, ಚೈನೀಸ್ ಅಂಗಡಿಗಳಿಗೆ ಹೋದಾಗ, ಇನ್ನೊಮ್ಮೆ ಇಲ್ಲಿ ಬರಬಾರದು ಎನ್ನುವಷ್ಟರ ಮಟ್ಟಿಗೆ ಅಲ್ಲಿ ಗಬ್ಬುನಾತ ಹೊಡೆಯುತ್ತಿರುತ್ತದೆ.  ಇವರುಗಳು ಜೀವವೈವಿಧ್ಯವನ್ನು ನೋಡುವ ರೀತಿ ನಮಗಿಂತಲೂ ಭಿನ್ನ.  ಕೊಳೆಯಾದ ಗಾಜಿನ ಅಕ್ವೇರಿಯಂ‌ನಲ್ಲಿ ತುಂಬಿಕೊಂಡು ದಯನೀಯ ಸ್ಥಿತಿಯಲ್ಲಿರುವ ಮೀನುಗಳು, ಏಡಿಗಳು, ಮೊದಲಾದ ಪ್ರಾಣಿಗಳನ್ನು ಅಲ್ಲಿ ನೋಡಿ ಖೇದವೆನಿಸುತ್ತದೆ.  ಅದು ಅವರಿಗೆ ಸಹನೀಯವಾದದ್ದು, ಅವರ ಧರ್ಮದಲ್ಲಿ (ಜೀವನಕ್ರಮ) ಅದು ಯಾರಿಗೂ ದೊಡ್ಡದೆನಿಸುವುದಿಲ್ಲ. ಇಂತಹ ಸಂದರ್ಭದಲ್ಲಿ, ಚೈನಾದ ವುಹಾನ್‌ನ ಒಂದು ಮಾರುಕಟ್ಟೆಯಲ್ಲಿ ಒಂದರ ಮೇಲೂಂದು ಹೇರಿಸಿಟ್ಟ ಕೇಜುಗಳಲ್ಲಿ ಒಂದು ಪ್ರಾಣಿಯ ಎಂಜಲು-ಗಲೀಜು ಮತ್ತೊಂದು ಪ್ರಾಣಿಯ ಜೊತೆ ಸಂಘರ್ಷ ಉಂಟಾದಾಗ ಹುಟ್ಟಿದ್ದು ಈ ವಿಭಿನ್ನ ವೈರಸ್ ಎಂದು ಕೆಲವು ಕಡೆ ಹೇಳಲಾಗಿದೆ.  ಅದೇ ರೀತಿ ಬಾವುಲಿಗಳನ್ನು (bats) ಕತ್ತರಿಸುವಾಗ ಅದರ ರಕ್ತದಲ್ಲಿ ಇದ್ದ ವೈರಸ್ಸು ಒಬ್ಬರಿಂದ ಮತ್ತೊಬ್ಬರಿಗೆ ತಗುಲು ಬೆಳೆಯಿತು ಎಂದೂ ಹೇಳಲಾಗುತ್ತದೆ.

ಒಮ್ಮೆ ಹೀಗೆ ಜನರಿಂದ ಜನರಿಗೆ ಬೆಳೆದ ವೈರಸ್ಸು ಡಿಸೆಂಬರ್‌ನಲ್ಲಿ ಸುದ್ದಿ ಮಾಡಿದರೂ ಚೈನಾ ಅದನ್ನು ತಕ್ಷಣ ದೊಡ್ಡದು ಮಾಡಲಿಲ್ಲ, ಅದು ಬೆಳೆದು ಪ್ರಕೋಪಕ್ಕೆ ತಿರುಗಿದ ನಂತರ ಎಲ್ಲ ಕಡೆಗೆ ಸುದ್ದಿಯಾಯಿತು.  ವುಹಾನ್ ಅನ್ನು ಸಂಪೂರ್ಣವಾಗಿ ಬಂದ್ ಮಾಡಲಾಯಿತು.  ಜನರನ್ನು ಮನೆಗಳಲ್ಲಿ ಅಮಾನವೀಯ ರೀತಿಯಲ್ಲಿ ಕೂಡಿ ಹಾಕಲಾಯಿತು.  ಇದು ಅವರ ಅತಂತ್ರ ಸ್ಥಿತಿಗೆ ಹಿಡಿದ ಕನ್ನಡಿ.  ಕೊನೆಗೆ ಕಡಿಮೆ ಸಾವುಗಳನ್ನು ದಾಖಲಿಸಿ (ಸೋಂಕು ತಗುಲಿದವರ ಮತ್ತು ಸತ್ತವರ percentage ಪ್ರಕಾರ ನೋಡಿದರೆ), ಈಗ ಏನೂ ಆಗೇ ಇಲ್ಲವೆನ್ನುವಂತೆ ಮೊದಲೇ expression ಇರದ ಮುಖಗಳು ಈಗಂತೂ ಮುಖ ಗಂಟು ಹಾಕಿಕೊಂಡ ಹಾಗೆ ಎಲ್ಲ ಕಡೆ ಕಂಡು ಬರುತ್ತದೆ.

ಕಳೆದ ಹತ್ತು ವರ್ಷಗಳಲ್ಲಿ ಸಾರ್ಸ್, H1-N1, ಹಕ್ಕಿ ಜ್ವರ ಮೊದಲಾದವುಗಳಿಂದ ಪೂರ್ವೋತ್ತರ ದೇಶಗಳು ಬಳಲಿದ್ದವು, ಅದರಿಂದಾಗಿ ಈ ಕೋವಿಡ್-19 ಅನ್ನು ಎದುರಿಸಲು ಅವೆಲ್ಲ ದೇಶಗಳು ಪರೋಕ್ಷವಾಗಿ ತಯಾರಾಗಿದ್ದವು.  ಆದರೆ, ಕೆಲವು ಯೂರೋಪಿಯನ್ ದೇಶಗಳು ಮತ್ತು ಅಮೇರಿಕದಲ್ಲಿ ಈ ರೀತಿ ಹಿಂದೆಂದೂ ಆಗಿರದ ಕಾರಣದಿಂದ, ಮೊಟ್ಟ ಮೊದಲನೇ ಬಾರಿಗೆ ಇಲ್ಲಿಯ ಜನ (ಈ ಪ್ರಮಾಣದಲ್ಲಿ) ಸಂಕಷ್ಟವನ್ನು ಅನುಭವಿಸಬೇಕಾಗಿ ಬಂತು ಎನ್ನುವುದು ಅನೇಕರ ಅಂಬೋಣ.

***
ಕುತಂತ್ರ: ಚೈನಾದವರು ಮಹಾ ಬುದ್ದಿವಂತರು.  ವುಹಾನ್ ಹತ್ತಿರದ ತಮ್ಮ ಮಿಲಿಟರಿ ಲ್ಯಾಬೋರೇಟರಿ ಒಂದರಲ್ಲಿ ಈ ಹೊಸ ವೈರಸ್ಸನ್ನು ಸೃಷ್ಟಿಸಿ ಜಗತ್ತಿಗೇ ಬಿಡುಗಡೆ ಮಾಡಿ ಜಗತ್ತನ್ನು ಆಳುವ ಯೋಚನೆ ಹೊಂದಿದ್ದರು.  ಅಥವಾ ಲ್ಯಾಬ್‍ನಲ್ಲಿದ್ದ ವೈರಸ್ಸು ಯಾರದ್ದೋ ತಪ್ಪಿನಿಂದ ಹೊರಗೆ ಬಂದಿತೆಂದು ಅನೇಕ ಕಡೆ ಓದಲು ಸಿಗುತ್ತದೆ.  ಹಾಗಾಗಿ, ಹುಬೈ ಪ್ರಾಂತ್ಯದಲ್ಲಿ ಮೊದಲು ಇದರ ಪರಿಚಯವಾಯಿತು.  ಆದರೆ, ಇದರ ಪರಿಣಾಮ ಉಳಿದ ರಾಜ್ಯಗಳ ಮೇಲೆ ಅಷ್ಟೊಂದು ಆಗಲಿಲ್ಲ.

ನೀವೇ ಯೋಚಿಸಿ: ವುಹಾನ್ ನಿಂದ ಇಂಟರ್‌ನ್ಯಾಷನಲ್ ಪ್ರಯಾಣಿಕರ ಮುಖೇನ ಅನೇಕ ದೇಶಗಳಿಗೆ ಈ ಕೊರೋನಾ ವೈರಸ್ ಹರಡಿರುವಾಗ, ಆಂತರಿಕ ಚೈನಾದೊಳಗೇ ಇದು ಬೇರೆ ಕಡೆ ಏಕೆ ಹಬ್ಬಲಿಲ್ಲ?  ಚೈನಾದ ಅಂಕಿ-ಅಂಶಗಳನ್ನು ನಂಬಬೇಕೋ ಬಿಡಬೇಕೋ ಗೊತ್ತಿಲ್ಲ, ಆದರೂ ಅವರು ಹೇಳುವ ಹಾಗೆ ಬರೀ ಹುಬೈ ಪ್ರಾಂತ್ಯದಲ್ಲಿ ಮಾತ್ರ ಸಾವುಗಳಾಗಿವೆಯೇ? ಒಂದೂವರೆ ಬಿಲಿಯನ್‌ನಷ್ಟು ಜನರಿರುವ ಚೈನಾದಲ್ಲಿ (ಈ ಲೇಖನ ಬರೆಯುವ ಹೊತ್ತಿಗೆ) ಕೇವಲ 81,802 ಜನರಿಗೆ ಸೋಂಕು ತಗಲಿದ್ದು, ಅವರಲ್ಲಿ ಕೇವಲ 3,333 ಜನರು ಮಾತ್ರ ಸಾವಿಗೆ ಈಡಾಗಿದ್ದಾರೆ ಎಂದರೆ ಹೇಗೆ ನಂಬುವುದು.  ಸೋಂಕು ತಗುಲಿದವರ ಸಂಖ್ಯೆಯಲ್ಲಿ (330 ಮಿಲಿಯನ್ ಜನರಿರುವ) ಅಮೇರಿಕ 396,981 ಒಟ್ಟು ಕೇಸುಗಳನ್ನು ದಾಖಲಿಸಿ ಅವರಲ್ಲಿ 12,758 ಜನರು ಮರಣ ಹೊಂದಿರುವುದನ್ನು ಪ್ರಕಟಿಸಿರುವುದನ್ನು ನೀವೇ ನೋಡಬಹುದು.  ಅಲ್ಲದೇ ಒಂದೂವರೆ ಬಿಲಿಯನ್ ಜನರಿರುವ ಚೈನಾ ಇವತ್ತಿಗೆ ಒಟ್ಟು ಕೇಸುಗಳಲ್ಲಿ ಉಳಿದ ರಾಷ್ಟ್ರಗಳಿಗೆ ಹೋಲಿಸಿದಾಗ ಐದನೇ ಸ್ಥಾನಕ್ಕೆ ಇಳಿದಿರುವುದನ್ನೂ ನೋಡಬಹುದು.


Image 1: COVID-19 World view (April 07, 2020 at 9:23 PM ET)



Image 2: COVID-19 China view (April 07, 2020 at 9:23 PM ET)

ಇನ್ನು ಎರಡನೆಯ ಚಿತ್ರದಲ್ಲಿ, ಹುಬೈ ಪ್ರಾಂತ್ಯದ ಒಟ್ಟು ಕೇಸುಗಳು 67,803.  ಉಳಿದ 30 ರಾಜ್ಯಗಳಲ್ಲಿ ಉಳಿದ ಹದಿಮೂರು ಸಾವಿರ ಕೇಸುಗಳು ಚದುರಿರುವುದನ್ನು ಕೂಡ ಕಾಣಬಹುದು.
ಈ ಅಂಕಿ-ಅಂಶಗಳ ಪ್ರಕಾರ, ಚೈನಾದವರು ಬರೀ ಇಂಟರ್‌ನ್ಯಾಷನಲ್ ಪ್ರಯಾಣಿಕರೆಂದೋ ಅಥವಾ ಅವರ ಪ್ಯಾಕೇಜು/ಪಾರ್ಸೆಲ್ಲುಗಳ ಮೂಲಕ ಪ್ರಪಂಚದಾದ್ಯಂತ ಕೋವಿಡ್ ಹರಡಿತೆಂದು ಊಹಿಸಬಹುದು.  ಇಲ್ಲವೆಂದರೆ, ಅವರ ನಂಬರುಗಳು ಖಂಡಿತ ನಂಬಲರ್ಹವಲ್ಲದವು.  ಉದಾಹರಣೆಗೆ, ಹುಬೈ ಪ್ರಾಂತ್ಯದಿಂದ ಚೈನಾದ ಉಳಿದ ದೊಡ್ಡ ನಗರಗಳಿಗೆ ಜನರು ಹೋಗೇ ಇಲ್ಲವೇ? ನಮ್ಮ ನ್ಯೂ ಯಾರ್ಕ್‌ ನಗರದಲ್ಲಿ ಇಷ್ಟೊಂದು ಜನರು ಬಳಲುತ್ತಿರುವಾಗ ಚೈನಾದ ನಗರಗಳು ನಿರಾತಂಕವಾಗಿರಲು ಕಾರಣವೇನು?

***
ಇದು ಚೈನಾದವರ ಅತಂತ್ರವೋ, ಕುತಂತ್ರವೋ... ಅದನ್ನು ನಿಮ್ಮ ತೀರ್ಮಾನ, ಅಭಿಪ್ರಾಯಗಳಿಗೇ ಬಿಡೋಣ.  ಆದರೆ, ಇಷ್ಟಂತೂ ಖಂಡಿತ: ಇದರಿಂದಾಗಿ/ಇವರಿಂದಾಗಿ ವಿಶ್ವದಾದ್ಯಂತ ಅನೇಕ ವ್ಯಾಪಾರ ವಹಿವಾಟುಗಳು ನೆಲಕಚ್ಚಿದವು.  ಅನೇಕರ ರಿಟೈರ್‌ಮೆಂಟ್ ಹಣ ಕೆಲವೇ ವಾರಗಳಲ್ಲಿ ಮಾಯವಾಯಿತು.  ಎಷ್ಟೋ ಜನರು ಹಸಿವಿನಿಂದ ಬಳಲುವಂತಾಯ್ತು.  ನಾವು ಇನ್ನಾರು ವಾರಗಳಲ್ಲಿ ಹೊರಗೆ ಹೊರಟರೂ ನಮ್ಮ ಅರ್ಥ ವ್ಯವಸ್ಥೆ ಇದರಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ ಕೆಲವೇ ವರ್ಷಗಳೇ ಬೇಕಾಗುತ್ತದೆ.

ಇದು ಮಾನವನ ದೌರ್ಜ್ಯನ್ಯಕ್ಕೆ ನಿಸರ್ಗ ಕೊಟ್ಟ ಪೆಟ್ಟು ಎಂದು ಒಂದಿಷ್ಟು ಜನ ನಂಬಿಕೊಂಡಿದ್ದಾರೆ, ಇನ್ನು ಕೆಲವರು ಇದು ಮಾನವ ನಿರ್ಮಿತ ಹೊಗೆ ಬರದ ನ್ಯೂಕ್ಲಿಯರ್ ಬಾಂಬು ಎಂದು ಚೈನಾದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ!

Friday, April 03, 2020

... ಸ್ಕ್ರೀನುಗಳೇ ಗೆದ್ದವು!

ಕೊರೋನಾ ವೈರಸ್ ದೆಸೆಯಿಂದ ಕೊನೆಗೆ ಗೆದ್ದವು - ಈ ಸ್ಕ್ರೀನುಗಳು!  ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಕಣ್ಣು ಮುಚ್ಚುವವರೆಗೆ ಈ ಸ್ಕ್ರೀನುಗಳದ್ದೇ ದರ್ಬಾರು, ಅವುಗಳ ಸುತ್ತಮುತ್ತಲೂ ನಮ್ಮದೆಲ್ಲ ಒಂದು ರೀತಿ ಡೊಂಬರಾಟ ಇದ್ದ ಹಾಗೆ!

ವಿಪರ್ಯಾಸವೆಂದರೆ, ನಾನು ಇತ್ತೀಚೆಗಷ್ಟೇ Tiffany Shlain ಬರೆದ 24/6 The Power of Unplugging One Day A Week ಪುಸ್ತಕ ಓದಿದ ನಂತರ ಹೀಗಾಗಿದ್ದು.  ಎಷ್ಟೆಲ್ಲ ತಂತ್ರಜ್ಞಾನ ಮುಂದುವರೆದಿದ್ದರೂ ಸಹ, ಅರ್ಥೋಡಾಕ್ಸ್ ಯಹೂದಿಗಳು ಇಂದಿಗೂ ಕೂಡ ಸೆಬಾತ್ (Shabbat) ಆಚರಿಸಿಕೊಂಡು ಬಂದಿದ್ದಾರ‍ೆ.  ಅವರುಗಳು ವೃತ್ತಿಯಿಂದ ವೈದ್ಯರಿರಲಿ, ಇಂಜಿನಿಯರುಗಳಿರಲಿ, ಅಥವಾ ಯಾರೇ ಇರಲಿ ವಾರಕ್ಕೊಂದು ದಿನ, ಯಂತ್ರಗಳ ಸಹವಾಸವಿಲ್ಲದೆ ಬದುಕುತ್ತಾರೆ.  ಈ ಪುಸ್ತಕದಲ್ಲಿ ಲೇಖಕಿ ತನ್ನ ಕುಟುಂಬ ಮೌಲ್ಯಗಳನ್ನು ಎತ್ತಿ ಹಿಡಿದು ಅವುಗಳನ್ನು ತಂತ್ರಜ್ಞಾನಕ್ಕೂ ವಿಸ್ತರಿಸಿ Techonology Shabbat ಅನ್ನು ಪರಿಚಯಿಸುತ್ತಾರೆ.  ನಾನು ಈ ಪುಸ್ತಕವನ್ನು ಓದಿ, ಕಷ್ಟಸಾಧ್ಯ ಎಂದು ಪಕ್ಕದಲ್ಲಿಟ್ಟೆ, ಆದರೂ ಸಹ ವಾರಕ್ಕೊಂದು ದಿನ ಟೆಕ್ನಾಲಜಿ ಅಥವಾ ಯಾವುದೇ ಸ್ಕ್ರೀನುಗಳ ಪರಾಧೀನತೆ ಇಲ್ಲದೇ ಬದುಕುವಂತಿದ್ದರೆ ಎಂದು ಅನ್ನಿಸದೇ ಇರಲಿಲ್ಲ.

***
ಎಲ್ಲ ಕಡೆ ಕೊರೋನಾ ವೈರಸ್ಸು ಹಾವಳಿಯಿಂದ ನಮ್ಮ ಆಫೀಸಿನ ಕೆಲಸವಷ್ಟೇ ಅಲ್ಲ, ದೈನಂದಿನ ಸಂಭಾಷಣೆ, ವಿಚಾರ-ವಿನಿಮಯ, ಮನರಂಜನೆ, ಮಾಹಿತಿ, ಸುದ್ದಿ-ಸಮಾಚಾರ ಮೊದಲಾದ ಎಲ್ಲವೂ ನಮಗೆ ಈ ಸ್ಕ್ರೀನುಗಳಿಂದಾನೇ ದೊರೆಯೋದು.  ನಾವು ಹೊಸದಾಗಿ iPhoneನಲ್ಲಿ ಬಂದಿರೋ Screen Time ಉಪಯೋಗಿಸಿ ದಿನದಲ್ಲಿ/ವಾರದಲ್ಲಿ ಬಳಸಿದ ಎಲ್ಲ ಅಪ್ಲಿಕೇಶನ್ನುಗಳನ್ನೂ ನೋಡುತ್ತಿದ್ದೆವು.  ಆದರೆ, ಈಗೆಲ್ಲ ನಮ್ಮ ಸ್ಕ್ರೀನುಗಳ ಉಪಯೋಗ ದಿನೇದಿನೇ ಹೆಚ್ಚಾಗುತ್ತಿದೆ.  ಅದರಲ್ಲೂ ಹೊರಗಡೆ ಹೋಗದೆ ಮನೆಯಲ್ಲಿ ಕುಳಿತಿರುವ ನಮಗೆಲ್ಲ ಈ ಚಿಕ್ಕ-ದೊಡ್ಡ ಸ್ಕ್ರೀನುಗಳೇ ದೊಡ್ಡ ಸವಲತ್ತುಗಳಾಗಿವೆ.  ಅಕಸ್ಮಾತ್ ನಮ್ಮಿಂದ ಊಟವನ್ನಾದರೂ ದೂರವಿಡಬಹುದು, ಆದರೆ ಸ್ಕ್ರೀನುಗಳನ್ನಲ್ಲ ಎಂದು ರಚ್ಚೆ ಹಿಡಿದು ಒದ್ದಾಡುವ ಮಗುವಿನಂತಾಗಿದೆ ಮನಸ್ಥಿತಿ.

ಇತ್ತೀಚೆಗೆ ಎಲ್ಲೋ ಓದಿದ ನೆನಪು, "ಹೊರಗೆಲ್ಲೂ ಸುತ್ತಾಡಲಾಗದಿದ್ದರೇನಂತೆ... ಮನದಾಳದ ಒಳಗೆ ಹೋಗಿ ನೋಡಿ!"  ಇದಂತೂ ಹೇಳಲು ಬಹಳ ಸುಲಭವಾದುದು.  ಆದರೆ ಮನದಾಳದೊಳಗಡೆ ಇಳಿಯಲು ತೊಡಗಿದರೆ, ನೂರೊಂದು ತೊಡಕುಗಳು.  ಜಗದೆಲ್ಲ ಸಮಸ್ಯೆಗಳು ಬಂದು ನಮ್ಮ ಕೊರಳನ್ನು ಸುತ್ತಿಕೊಳ್ಳುವ ಅನುಭವ.  ಇರದ ಜಂಜಡಗಳೆಲ್ಲ ಬಂದು ಒಮ್ಮೆಲೇ ರಭಸದಿಂದ ಅಪ್ಪಳಿಸುವ ಅಳೆಯಂತೆ ಒಂದರ ಹಿಂದೆ ಮತ್ತೊಂದು ಬಂದು ಮನದ ದಂಡೆಯನ್ನು ತಬ್ಬಿಕೊಳ್ಳುತ್ತಲೇ ಇರುತ್ತವೆ. ಸ್ವಚ್ಚಂದವಾಗಿ  ಹೊರಗಡೆ ಸುತ್ತಾಡುವ ಮನಸ್ಸಿಗೆ ಒಳಗಿನ ಪಯಣಕ್ಕೆ ಇಷ್ಟೊಂದು ಗಾಭರಿ ಏಕೋ?  ಮನಸ್ಸನ್ನು ತಡುವಿಕೊಂಡು ಒಂದೊಂದೇ ಮೆಟ್ಟಿಲನ್ನು ಇಳಿದು ನೆಲಮಾಳಿಗೆಯ ನೆಲವೇನೋ ತಡಕಾಡೀತೆಂದು ಕಾಲನ್ನು ಆಡಿಸಿ ನೋಡಿದರೆ ಆ ಕತ್ತಲೆಯ ಕೋಣೆಯಲ್ಲಿನ ತೆಳ್ಳಗಿನ ಹವೆ ತನ್ನೊಳಗಿನ ಆರ್ಧ್ರತೆಯೊಂದಿಗೆ ಒಂದು ಕುಮುಟು ವಾಸನೆಯನ್ನೂ ಅಲವತ್ತುಕೊಂಡಿರುವುದರಿಂದಲೋ ಏನೋ ಒಂದು ರೀತಿಯ ತಣ್ಣಗಿನ ಅನುಭವದ ಜೊತೆಗೆ ನಮ್ಮ ಹಳೆಯ ನೆನಪುಗಳ ಪದರಗಳನ್ನು ಪಕ್ಕಳ ಪಕ್ಕಳವಾಗಿ ಕಿತ್ತು ತರುವುದು.

***

ಸದಾ ಸುಖವನ್ನು ಬಯಸುವ ನಾವು, ಸಾವಿಗೆ ಹೆದರುವ ಸಂತತಿಯಾಗಿ ಇತಿಹಾಸದಲ್ಲಿ ದಾಖಲಾಗಲಿದ್ದೇವೆ.  ಕಣ್ಣಿಗೆ ಕಾಣದ, ಜೀವವಿದ್ದೂ ಇರದ, ಉಸಿರಿನ ಮೂಲಕ್ಕೇ ತಂತ್ರದಿಂದ ಲಗ್ಗೆ ಹಾಕುವ ಸೂಕ್ಷ್ಮ ಜೀವಿಗಳ ವಿರುದ್ಧ ಹೆಣೆಯುವ ಪಾಟೀ ಸವಾಲುಗಳು ನಮ್ಮಲ್ಲಿಲ್ಲ.  ನಾವು ಈ ಯುದ್ಧಕ್ಕೆ ಸನ್ನದ್ದರಾದವರಂತೂ ಅಲ್ಲವೇ ಅಲ್ಲ.  ಒಂದು ದೇಶದ ಮಿಲಿಟರಿ ಪಡೆಗೆ ಶತ್ರುಗಳ ವಿರುದ್ಧ ಸೆಣೆಸಾಡುವ ತರಬೇತಿಯನ್ನು ನೀಡಲಾಗಿರುತ್ತದೆ.  ನಿಜವಾದ ಯುದ್ಧವಿರಲಿ, ಇಲ್ಲದಿರಲಿ ಒಂದು ಸಿಮ್ಯುಲೇಟೆಡ್ ಎನೈರ್‌ಮೆಂಟಿನಲ್ಲಾದರೂ ಅವರಿಗೆ ಯುದ್ಧದ ಆಗು-ಹೋಗುಗಳನ್ನು ಅರಿವಿಗೆ ಮೂಡಿಸಿ ಅವರನ್ನು ತಕ್ಕ ಮಟ್ಟಿಗೆ ತಯಾರು ಮಾಡಿರಲಾಗುತ್ತದೆ.  ಅವರು ತಮ್ಮ ಮೈ-ಮನಗಳನ್ನು ಹದ್ದುಬಸ್ತಿನಲ್ಲಿಟ್ಟುಕೊಂಡು ಆಗಾಗ್ಗೆ ಕವಾಯತ್ ಅನ್ನಾದರೂ ಮಾಡಿಕೊಂಡು ತಯಾರಿರುತ್ತಾರೆ.  ಆದರೆ, ವಿಶ್ವದಾದ್ಯಂತ ಅನೇಕ ಆಸ್ಪತ್ರೆಗಳಲ್ಲಿ, ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವ ವೈದ್ಯರು, ಶುಶ್ರೂಷಕರು, ನರ್ಸುಗಳು, ಮೊದಲಾದವರಿಗೆ ಈ ರೀತಿಯ ಯುದ್ಧಕಾಲದ ಯಾವುದೇ ತಯಾರಿಯೂ ಇರೋದಿಲ್ಲ.  ಮೆಡಿಕಲ್ ಸ್ಕೂಲ್‌ನಲ್ಲಿ ಓದು ಮುಗಿಸಿ ರೆಸಿಡೆನ್ಸಿ ಮಾಡಿದವರೆಲ್ಲರೂ ಈ ಕಣ್ಣಿಗೆ ಕಾಣದ ಶತ್ರುಗಳನ್ನು ಹೊಡೆದೋಡಿಸೋ ಯೋಧರಲ್ಲ.  ಪ್ರತಿ ದಿನವೂ ಎದ್ದು ಕೊರೋನಾ ವೈರಸ್ ಸೋಂಕಿದ ರಣರಂಗಕ್ಕೆ ಸೇವಾ ಮನೋಭಾವನೆಯಿಂದ ಹೋಗಿ, ಕೈಲಾದ ಸೇವೆಯನ್ನು ಮಾಡಿ, ಯಾವುದೇ ಸೋಂಕನ್ನು ತಮಗೆ ತಗುಲಿಸಿಕೊಳ್ಳದೇ, ಇನ್ನೊಬ್ಬರಿಗೆ ಹರಡದೇ, ಕೆಲಸ ಮುಗಿದ ಮೇಲೆ ಮತ್ತೆ ಮನೆಗೆ ಬಂದು ತಮ್ಮ ಕುಟುಂಬದವರನ್ನು ಸಂತೈಸುವ ಕೆಲಸ ಮಾಡುತ್ತಿರುವ ಈ ಎಲ್ಲ ಯೋಧರಿಗೂ ಈ ಯುದ್ಧದಲ್ಲಿ ಬದುಕುಳಿದ ನಾವೆಲ್ಲರೂ ಚಿರಋಣಿಗಳಾಗುತ್ತೇವೆ.  ಈ ಮೆಡಿಕಲ್ ಫೀಲ್ಡ್‌ನಲ್ಲಿ ಸೇವಾ ಮನೋಭಾವನೆಯಿಂದ ಕೆಲಸ ಮಾಡುವ ಇಂಥ ಯೋಧರದ್ದು ನಿಜವಾದ ಕೆಚ್ಚೆದೆ, ಇವರೇ ಇಂದಿನ ಹೀರೋಗಳು.  ನಮ್ಮ ಮಾನವ ಜನಾಂಗ ಮುಂದಿನ ಹೆಜ್ಜೆ ಇಡುವಲ್ಲಿ ತಮ್ಮನ್ನೇ ತಾವು ಸಮರ್ಪಿಸಿಕೊಳ್ಳುತ್ತಿರುವ ಯೋಧರು.

Thursday, April 02, 2020

ಕೊರೋನಾ ವೈರಸ್ ನಮ್ಮ ಶಕ್ತಿಯನ್ನು ಕ್ಷೀಣಿಸಿದೆಯೇ?

ನಾವು, ಜನಸಾಮಾನ್ಯರು ಅಥವಾ ನಮ್ಮ ಮಾನವ ಜನಾಂಗವನ್ನು ಒಟ್ಟಿಗೆ ಪ್ರತಿನಿಧಿಸುವ ನಾವೆಲ್ಲರೂ ಈ ಕಳೆದ ನೂರು ವರ್ಷಗಳಲ್ಲಿ ದುರ್ಬಲರಾಗಿದ್ದೇವೆಯೇ?

ಅಂಕಿ-ಅಂಶಗಳ ಪ್ರಕಾರ ನಾವೆಲ್ಲರು ಧೀರ್ಘಾಯುಗಳು, ನಮ್ಮ ಬದುಕಿನ ಗುಣಮಟ್ಟ ಹೆಚ್ಚಿದೆ, ನಮ್ಮ ಮೌಲ್ಯ (net worth) ವೃದ್ಧಿಯಾಗಿದೆ.  ನಮ್ಮ ಸಂಖ್ಯೆ ಹೆಚ್ಚಿದೆ - 1900 ರಲ್ಲಿ 1.6 ಬಿಲಿಯನ್ ಇದ್ದದ್ದು 2020ಕ್ಕೆ 7.8 ಬಿಲಿಯನ್ ಆಗಿದೆ.  ಅದರಂತೆ ನಮ್ಮ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ: ಹೃದಯ ಸಂಬಂಧಿ ಖಾಯಿಲೆಗಳು, ಕ್ಯಾನ್ಸರ್, ರಸ್ತೆ ಅಫಘಾತ, ಡಯಬೀಟಿಸ್ ಮೊದಲಾದಂತೆ ಮಿಲಿಯನ್ನುಗಟ್ಟಲೆ ಜನ ಸಾಯುತ್ತಲೇ ಇದ್ದಾರೆ.  ಫ್ಲೂ (ಇನ್‌ಫ್ಲೂಯೆಂಜ಼ಾ) ಒಂದರಿಂದಲೇ ವರ್ಷಕ್ಕೆ ಸಾವಿರಾರು ಜನ ಸಾಯುತ್ತಿದ್ದಾರ‍ೆ.  ನಿಮಗೆಲ್ಲ ನೆನಪಿರುವಂತೆ, 2004ರ ಡಿಸೆಂಬರ್ 26ರಂದು ಬಂದ ಸುನಾಮಿಯಿಂದ ಸುಮಾರು ಎರಡೂವರೆ ಲಕ್ಷ ಜನ ಸತ್ತು ಹೋಗಿದ್ದು, ಸಾವಿರಾರು ಜನ ತಮ್ಮ ಮನೆ-ಮಠವನ್ನು ಕಳೆದುಕೊಂಡು ನಿರ್ಗತಿಕರಾಗಿದ್ದು ಇನ್ನೂ ನಮ್ಮ ನೆನಪಿನಿಂದ ಮಾಸಿಲ್ಲ.


ಆದರೆ, ಈ ಕೋವಿಡ್-೧೯ ಎನ್ನುವ ಮಹಾಮಾರಿ ನಮ್ಮೆಲ್ಲರನ್ನು ಎಲ್ಲಿ ಆಪೋಷನ ತೆಗೆದುಕೊಳ್ಳುವುದೋ ಎನ್ನುವುದು ಎಲ್ಲರ ಭೀತಿ.  ಎಲ್ಲರನ್ನೂ ಒಮ್ಮೆಲೇ ಬಲಿ ತೆಗೆದುಕೊಂಡ ಸುನಾಮಿಯಂತಲ್ಲ ಇದರ ಕಥೆ, ಒಂದು ಸಾಮಾಜಿಕ ವ್ಯವಸ್ಥೆಯನ್ನೇ ಹಂತ-ಹಂತವಾಗಿ ಮಲಗಿಸಿ, ಯಾವ ಶಸ್ತ್ರಾಸ್ತವನ್ನೂ ಬಳಸದೇ ಎಲ್ಲರನ್ನೂ ಮುಗಿಸಿಬಿಡುವ ಶಕ್ತಿ ಈ ವೈರಸ್ಸಿಗಿದೆ.
ಆದರೆ, ಮತ್ತೆ ಅದೇ ಪ್ರಶ್ನೆಯನ್ನು ನಾವು ಕೇಳಿಕೊಳ್ಳಬೇಕಾಗುತ್ತದೆ: ಈ ನೂರು ವರ್ಷಗಳಲ್ಲಿ ನಾವು ದುರ್ಬಲರಾಗಿದ್ದೇವೆಯೇ?

ನಮ್ಮ ಗ್ಲೋಬಲೈಜೇಷನ್ ಅನ್ನೋದೇ ನಮಗೆ ಶಾಪವಾಯಿತು.  ನೂರು ವರ್ಷಗಳ ಹಿಂದೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಇಷ್ಟೊಂದು ಕ್ಷಿಪ್ರವಾಗಿ ಹೋಗಿ-ಬರುವ ವ್ಯವಸ್ಥೆ ಇದ್ದಿರಲಿಲ್ಲ.  ಅಲ್ಲದೇ ನಮ್ಮೆಲ್ಲರ ಓಡಾಟಗಳು ಸ್ಥಳೀಯ ಜಿಲ್ಲೆ-ಪ್ರ್ಯಾಂತ್ಯಗಳಿಗೆ ಸೀಮಿತವಾಗಿರುತ್ತಿದ್ದುದು ವಿಶೇಷ.  ಒಂದು ದೇಶದಲ್ಲಿ ಹುಟ್ಟಿದ ಮಹಾಮಾರಿ ಮತ್ತೊಂದು ದೇಶವನ್ನು ಈಗ ಆಕ್ರಮಿಸುತ್ತಿರುವಂತೆ ಅತಿಯಾದ ವೇಗದಲ್ಲಂತೂ ಆಕ್ರಮಿಸುತ್ತಿರಲಿಲ್ಲ.  ಜೊತೆಗೆ, ಆಗಿನ ಕಾಲದಲ್ಲಿ ವಾಹನ ವ್ಯವಸ್ಥೆಗಳೇ ಇರಲಿಲ್ಲ - ಇದ್ದರೂ ಕೆಲವೇ ಜನರಿಗೆ ಸೀಮಿತವಾಗಿರುತ್ತಿತ್ತು.  ಆದರೆ, ಈಗ ಹಾಗಿಲ್ಲ.  ಪ್ರಪಂಚ ಒಂದು ಹಳ್ಳಿಯಾಗಿದೆ (global village), ಅದರಂತೆ ಒಂದು ಹಳ್ಳಿಯಲ್ಲಾಗುವ ಎಲ್ಲ ಘಟನೆಗಳಿಗೂ ಆ ಹಳ್ಳಿಯ ಎಲ್ಲರೂ ಸ್ಪಂದಿಸುತ್ತಾರೆ, ಅದನ್ನು ಪ್ರತಿಬಿಂಬಿಸುತ್ತಾರೆ.  ಈಗಿನ ಟ್ರೆಂಡುಗಳೂ ಕೂಡ ಹುಟ್ಟುವುದೂ-ಸಾಯುವುದೂ ಅಷ್ಟೇ ವೇಗವಾಗಿ.

ಆದರೆ, ನಮ್ಮ ಹೆಚ್ಚಿನ ವಿದ್ಯಾಭ್ಯಾಸ (or simply awareness), ನಮ್ಮಲ್ಲಿ ಹುಲುಸಾಗಿ ಬೆಳೆದು ಯಥೇಚ್ಛವಾಗಿ ಸಿಗುವ ತಂತ್ರಜ್ಞಾನ, ಇವು ನಮ್ಮಲ್ಲಿನ ಆರ್ಗನೈಜೇಷನ್ ಶಕ್ತಿಯನ್ನು ಕಡಿಮೆ ಮಾಡಿವೆಯೇ?

ಉದಾಹರಣೆಗೆ: ಭಾರತದ ಸ್ವಾತಂತ್ರ್ಯ ಸಂಗ್ರಾಮ (೧೮೫೭-೧೯೪೭) ವನ್ನು ವಿಶ್ಲೇಷಿಸಿದಾಗ, ಆಗಿನ ಕಾಲದಲ್ಲಿ ಅದು ಹೇಗೆ ಆರಂಭವಾಗಿ, ದೇಶದುದ್ದಕ್ಕೂ ಬೆಳೆಯಿತು? ಎಂದು ಸೋಜಿಗಗೊಳ್ಳಬೇಕಾಗುತ್ತದೆ.  ಈಗಿನ ಕಾಲದಲ್ಲಾದರೆ ಕ್ಷಣಾರ್ಧದಲ್ಲಿ ದೇಶವೇನು? ವಿಶ್ವದ ಯಾವ ಭಾಗವನ್ನು ಬೇಕಾದರೂ ನಮ್ಮ ಸುದ್ದಿಗಳಿಗಾಗಿ ತಡಕಾಡಬಹುದು.  ಆಗ ತಂತ್ರಜ್ಞಾನ ಈಗಿನಷ್ಟು ಮುಂದುವರೆದಿರಲಿಲ್ಲ, ಜನರು ಈಗಿನಂತೆ ಹೆಚ್ಚು-ಹೆಚ್ಚು ಪದವೀಧರರಾಗಿರಲಿಲ್ಲ, ಆದರೆ ಸಮರ್ಥ ನಾಯಕತ್ವವನ್ನು ನಂಬಿ ಅವರೆಲ್ಲರೂ ಮುಂದೆ ಬಂದಿದ್ದರು, ತಮ್ಮ ತಮ್ಮ ಮನೆ-ಮಠವನ್ನು ತೊರೆದು ರಾಷ್ಟ್ರದ ಬಲವಾಗಿ ನಿಂತಿದ್ದರು.  ಮಾಡು-ಇಲ್ಲವೇ-ಮಡಿ ಎನ್ನುವ ಚಳವಳಿಯಲ್ಲಿ ಆನೇಕರು ತಮ್ಮ ಕೊರಳನ್ನು ಸಮರ್ಪಿಸಿದ್ದರು.

ಅವರದ್ದೂ ಸಹ ಜೀವವಲ್ಲವೇ? ಅವರೆಲ್ಲರಿಗೂ ಜೀವವಿರಲಿಲ್ಲವೇ? ಅವರಿಗೂ ಕೂಡ ತಮ್ಮ-ತಮ್ಮ ಸಂಸಾರಗಳ ಹೊಣೆ ಇದ್ದಿರಲಿಲ್ಲವೇ? ಆದರೆ, ತಮ್ಮ ವೈಯಕ್ತಿಕ ಆಗುಹೋಗುಗಳ ಮುಂದೆ ರಾಷ್ಟ್ರ ದೊಡ್ಡದಾಗಿತ್ತು.  ಹೋರಾಟ ಉಸಿರಾಗಿತ್ತು.  ರಾಷ್ಟ್ರ ನಾಯಕರುಗಳಿಗೆ ಬೆಂಬಲ ಕೊಡಬೇಕಾಗಿತ್ತು.  ಹೀಗೆ, ಅವರುಗಳೆಲ್ಲ ದೊಡ್ಡದನ್ನು ಗುರಿಯಾಗಿಟ್ಟುಕೊಂಡು, ಉಳಿದೆಲ್ಲವನ್ನು ಗೌಣವಾಗಿ ಕಂಡಿದ್ದರು.

ಮುಂದೆ ಕಾಲ ಕ್ರಮೇಣ, ಕುಟುಂಬಗಳು ಅವಿಭಕ್ತ ಪರಿಧಿಯನ್ನು ದಾಟಿ, ನ್ಯೂಕ್ಲಿಯರ್ ಕುಟುಂಬಗಳಾದವು.  ಜನರ ವಲಸೆ ಸಹಜವಾಯಿತು.  ನಗರೀಕರಣ ಹೆಚ್ಚಿತು.  ವಿದ್ಯಾಭ್ಯಾಸದ ಮಟ್ಟ ಬೆಳೆಯಿತು.  ಆದರೆ - ರಾಷ್ಟ್ರ, ಸ್ವಾತಂತ್ರ್ಯ, ಬಿಡುಗಡೆ, ಸ್ವಇಚ್ಛೆ, ಪ್ರಜಾಪ್ರಭುತ್ವ ಇವುಗಳು ಜನರಿಗೆ ಆಯ್ಕೆಯ ಹಕ್ಕನ್ನು ನೀಡಿದವು.  ಜನರು ತಮಗೆ ಏನು ಬೇಕೋ ಅದನ್ನು ಆಯ್ದುಕೊಳ್ಳುವಂತಾದರು.
ಈ ಆಯ್ಕೆಯ ಪ್ರತಿಫಲವಾಗಿ ಕೆಲವೊಮ್ಮೆ ಅದರಲ್ಲಿ ನನಗೆ ಸ್ವಾರ್ಥ ಕಂಡುಬರುತ್ತದೆ.  ಒಂದುವೇಳೆ, ಈಗೇನಾದರೂ ಸ್ವತಂತ್ರ್ಯ ಭಾರತದ ಚಳುವಳಿಯಂಥವು ಆರಂಭವಾದರೆ, ಅದಕ್ಕೆ ಬೆಂಬಲ ಕೊಡುವವರಾರು? ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.  ಈ ಬೆಂಬಲ ಎನ್ನುವುದು ತನು-ಮನ-ಧನದ ರೂಪದಲ್ಲಿರಬಹುದು, ಎಲೆಕ್ಟ್ರಾನಿಕ್ ಮಾಧ್ಯಮವನ್ನು ಅವಲಂಭಿಸಿರಬಹುದು (petition), ಅಥವಾ ಘೇರಾವ್/ಬಂದ್ (ಸತ್ಯಾಗ್ರಹ) ಮತ್ತಿತರ ಭೌತಿಕ ರೂಪದಲ್ಲಿರಬಹುದು.

ನಮ್ಮಲ್ಲಿ ಚಳವಳಿಗಳಾದಾಗ ವ್ಯವಸ್ಥೆಯ ವಿರುದ್ಧ ಜನ ತಮ್ಮ ’ಆತ್ಮಾರ್ಪಣೆ" ಮಾಡಿಕೊಳ್ಳುವುದನ್ನು ನೋಡಿದ್ದೇವೆ.  ಇದಕ್ಕೂ ಒಂದು ಹೆಜ್ಜೆ ಮುಂದುವರಿದು ಯೋಚಿಸಿದಾಗ ಒಂದು ವ್ಯವಸ್ಥೆಯ ವಿರುದ್ಧ ಅಥವಾ ಮತ್ತೊಂದು ವ್ಯವಸ್ಥೆಯ ಪರವಾಗಿ ಜನರು "ಆತ್ಮಾಹುತಿ"ಯನ್ನು ಮಾಡಿಕೂಳ್ಳುವುದನ್ನು ನೋಡಿದ್ದೇವೆ.  ಆದರೆ, ಒಂದು ಖಾಯಿಲೆಯನ್ನು ಹರಡುವ ವೈರಸ್ಸಿನ ವಿರುದ್ಧವಾಗಿ ಜನರನ್ನು ಮೂರು ವಾರಗಳ ಕಾಲ ಕೂಡಿ ಹಾಕಿರುವಂತೆ ಕೇಳಿಕೊಂಡಾಗ ಜನರಿಗೆ ಮನೆಯಲ್ಲಿರಲು ಕಷ್ಟವಾಗುತ್ತದೆ!  ಅದರಿಂದ, ಅವರ ಸ್ವಾತಂತ್ರ್ಯಕ್ಕೆ ಧಕ್ಕೆ ಬರುತ್ತದೆಯಲ್ಲ!

***
ಜನರು ಸುಖದ ಸುಪ್ಪತ್ತಿಗೆಯಲ್ಲಿ (comfort zone) ಕುಳಿತು ತೇಲಾಡುತ್ತಿರುವಾಗ ಯಾವುದೇ ಸಂಶೋಧನೆಗಳು ಹೊರಗೆ ಬಾರವು.  ಆಭರಣವಾಗುವ ಮೊದಲು ಚಿನ್ನಕ್ಕೆ ಮೂಸೆಯಲ್ಲಿ ಪುಟವಿಟ್ಟ ಹಾಗೆ, ಶಿಲ್ಪ ಕಲಾಕೃತಿ ಆಗುವ ಮೊದಲು ಕಠಿಣವಾದ ಶಿಲೆಯನ್ನು ಬಾಚಿ-ಚಾಣಗಳ ಮೂಲಕ ಕುಟ್ಟಿದ ಹಾಗೆ, ಕಬ್ಬನ್ನು ಹಿಂಡಿ ಸವಿಯಾದ ಬೆಲ್ಲವನ್ನು ತೆಗೆದ ಹಾಗೆ - ಒಂದು ಸಮಾಜವೂ ತನ್ನ ಕಷ್ಟಗಳ ಕುಲುಮೆಯಲ್ಲಿ ಬೇಯಬೇಕಾಗುತ್ತದೆ, ಹಾಗಾಗುವುದರಿಂದಲೇ ಮುಂದಿನ ತಲೆಮಾರಿಗೆ ನಾವು ಹೊಸದೇನನ್ನೋ ತೆಗೆದುಕೊಂಡು ಹೋಗಲು ಸಾಧ್ಯ.  ಇಲ್ಲಿ ಸಾಧನೆ ಮುಖ್ಯವಾಗುತ್ತದೆ, ಇಲ್ಲಿ ದಿಢೀರ್ ಜನಪ್ರಿಯತೆ ಸಿಗುವುದಿರಲಿ ವರ್ಷಗಟ್ಟಲೇ ಮಾಡಿದ ಶ್ರಮಕ್ಕೆ ಕಿರುಗಾಸು ಬೆಲೆಯೂ ಸಿಗದಂತಾಗಬಹುದು, ಆದರೆ ಈ ರೀತಿಯು ಅನೇಕ ಪ್ರಯತ್ನಗಳು ನಮ್ಮನ್ನು ಸಂಪೂರ್ಣರನ್ನಾಗಿ ಮಾಡುವುದರ ಜೊತೆಗೆ ಸಬಲರನ್ನಾಗಿಯೂ ಮಾಡಬಲ್ಲವು - ಎಂಬುದು ಈ ಹೊತ್ತಿನ ನನ್ನ ನಂಬಿಕೆ!

Sunday, April 21, 2013

ಇತ್ತೀಚಿನ ವಿದ್ಯಮಾನ: ಸಾವಿನ ಸುತ್ತ

ಈ ಕಳೆದ ಭಾನುವಾರ (ಏಪ್ರಿಲ್ ೧೪) ದಿಂದ ಇಂದಿನ ಭಾನುವಾರದ ವರೆಗೆ ಹಲವಾರು ಸಾವಿನ ಸುದ್ದಿಗಳು...ಒಂದರ ಹಿಂದೆ ಒಂದರಂತೆ ಬಂದು ಅಪ್ಪಳಿಸುತ್ತಲೇ ಇವೆ. ಪಿ.ಬಿ. ಶ್ರೀನಿವಾಸ್ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ, ಅವರು ಇತ್ತೀಚೆಗೆ ಹಿನ್ನೆಲೆ ಸಂಗೀತದಲ್ಲಿ ಚಟುವಟಿಕೆಯಲ್ಲಿರಲಿಲ್ಲವಾದರೇನಂತೆ ನಮ್ಮ ಮನೆ-ಮನಗಳಲ್ಲಿ ಅವರ ಧ್ವನಿ ಎಂದಿಗೂ ಅಮರವಾಗಿರುತ್ತದೆ. ಇಂದಿಗೂ ಕೂಡ ಅವರ ಅನೇಕ ಹಾಡುಗಳು ನನಗೆ ಅಪ್ಯಾಯಮಾನವಾದವು, ಅವುಗಳ ಪಟ್ಟಿಯನ್ನು ಬರೆಯುತ್ತಾ ಹೋದರೆ ಕೊನೆ ಮೊದಲಿಲ್ಲದಂತಾಗುತ್ತದೆ. ಕನ್ನಡ ಚಿತ್ರರಂಗದಲ್ಲಿ ರಾಜ್‌ಕುಮಾರ್, ಚಿ. ಉದಯಶಂಕರ್ ಮತ್ತು ಪಿ.ಬಿ. ಶ್ರೀನಿವಾಸ್ ಒಬ್ಬರಿಗೊಬ್ಬರು ಹೇಳಿ ಮಾಡಿಸಿದಂತಹ ತ್ರಿಮೂರ್ತಿಗಳು, ಇಂಥ ಪ್ರತಿಭಾನ್ವಿತರು ಇಲ್ಲದ ನಾವು ಬಡವರೇ.

 

"Remembering that I’ll be dead soon is the most important tool I’ve ever encountered to help me make the big choices in life. No one wants to die, even people who want to go to heaven don’t want to die to get there. And yet, death is the destination we all share. "

ಹೀಗೆ ಬರೆದವರು ಹೇಳಿದವರು ಬೇರೆ ಯಾರೂ ಅಲ್ಲ, ಸ್ಟೀವ್ ಜಾಬ್ಸ್, (೨೦೦೫ರ ಸ್ಟ್ಯಾಂಡ್‌ಫರ್ಡ್ ವಿಶ್ವವಿದ್ಯಾನಿಲಯದ ಕಮೆನ್ಸ್‌ಮೆಂಟ್ ಭಾಷಣದಲ್ಲಿ).

ಕಳೆದ ವರ್ಷ ತಾಯಿಯನ್ನು ಕಳೆದುಕೊಂಡ ನಂತರ ನನ್ನನ್ನು ಅರಸಿ ಬರುವ ಪ್ರತಿಯೊಂದು ಸಾವಿನ ಸುದ್ದಿಗೂ ನಾನು ಸ್ಪಂದಿಸುವ ಬಗೆ ಭಿನ್ನವಾಗಿದೆ. ಆಫೀಸಿನಲ್ಲಿ ಮೊದಲೆಲ್ಲ ’ಕಂಡೋಲೆನ್ಸ್’ ಇ-ಮೇಲ್ ಬರೆದು ಮರೆಯುತ್ತಿದ್ದವನಿಗೆ ಈಗ ಸಹೋದ್ಯೋಗಿಗಳ ಬಳಿ ಹೋಗಿ ಅಥವಾ ಕರೆ ಮಾಡಿ ಸಾಂತ್ವನ ಹೇಳುವಷ್ಟು ಬುದ್ಧಿಯನ್ನು ಸಾವಿನ ಸುದ್ದಿಗಳು ಕಲಿಸಿವೆ.

ಪಿ.ಬಿ. ಶ್ರೀನಿವಾಸ್ ನಿಧನದ ಶೋಕದಲ್ಲೇ ಸೋಮವಾರ ಆಫೀಸಿಗೆ ಹೋದರೆ ಅಲ್ಲಿ ನನ್ನ ಸಹೋದ್ಯೋಗಿ ೪೬ ವರ್ಷದ ಬಾಬ್ ಫೆಲಿಕೋನಿಯೋ ಇದ್ದಕ್ಕಿದ್ದ ಹಾಗೇ ಕುಸಿದು ಸತ್ತು ಹೋದ ತಿಳಿದು ಆಘಾತವಾಯಿತು. ಬುಧವಾರ, ನನ್ನ ಸ್ನೇಹಿತ ಮೋಹನ್ ತಾಯಿ ತೀರಿಕೊಂಡ ವಿಷಯ ತಿಳಿಯಿತು. ಶನಿವಾರ ನಮ್ಮೂರಿನ ೫೨ ವರ್ಷದ ಪುರೋಹಿತ ರವಿ ಭಟ್ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿ ಕೇಳಿ ದಂಗುಬಡಿದು ಹೋಯಿತು.

ನಮಗೆಲ್ಲ ವಯಸ್ಸಾಗುತ್ತಾ ಬಂದ ಹಾಗೆ ನಾವು ಕೇಳುವ ಹುಟ್ಟು-ಸಾವಿನ ಸುದ್ದಿಗಳಲ್ಲಿ ಸಾವಿನ ಪ್ರಮಾಣವೇ ಹೆಚ್ಚೋ ಅಥವಾ ನಮ್ಮ ಪ್ರಬುದ್ಧತೆಗೆ ಅನುಗುಣವಾಗಿ ನಾವು ಪ್ರತಿಕ್ರಿಯಿಸುವ ರೀತಿ ಬೇರೆಯೋ ಎನ್ನುವುದನ್ನು ಬಲ್ಲವರು ಹೇಳಲಿ!

Thursday, August 09, 2012

ಅಣ್ಣಾ, ಹೊಸ ಪಕ್ಷ ಬೇಡಣ್ಣ

ಇಷ್ಟು ದೊಡ್ಡ ದೇಶದಲ್ಲಿ, ಎಷ್ಟೊಂದು ಜನ ಮುತ್ಸದ್ದಿಗಳು, ವಾದಿ-ಪ್ರತಿವಾದಿಗಳು, ವಿಚಾರವಂತರು, ಚಿಂತನಶೀಲರು, ಮುಖಂಡರು, ಪ್ರತಿಭಾವಂತರು ತುಂಬಿ ತುಳುಕಾಡುತ್ತಿರುವಾಗ ಯಾರೊಬ್ಬರೂ ಕೆ.ಬಿ. ಹಜಾರೆ (aka ಅಣ್ಣಾ ಹಜಾರೆ) ಅವರನ್ನು ಬದಿಗೆ ಕರೆದು, 'ನಿಮ್ಮ ನಿಲುವುಗಳೇನೋ ಸತ್ವವುಳ್ಳವು, ಆದರೆ ಅವುಗಳನ್ನು ಪ್ರತಿಪಾದಿಸುವಲ್ಲಿ ನೀವು ಹಿಡಿದಿರುವ ಇಂಪ್ಲಿಮೆಂಟೇಷನ್ನ್ ಮೆಥಡ್ ಅಷ್ಟೊಂದು ಯೋಗ್ಯವಲ್ಲದ್ದು’ ಎಂದು ಯಾರೂ ಏಕೆ ಹೇಳುತ್ತಿಲ್ಲ?

***


(picture source: thecommonspeaks.com)

ನಮ್ಮ ಅಂತರಂಗವನ್ನು ನಾವು ಅವಲೋಕಿಸಿಕೊಂಡರೆ ನಾವೆಲ್ಲರೂ ಒಂದೇ ಒಕ್ಕೊರಲಿನಲ್ಲಿ 'ಭ್ರಷ್ಟಾಚಾರದ ಮೂಲ ರಾಜಕಾರಣಿಗಳು!’ ಎಂದು ಸುಲಭವಾಗಿ ಹೇಳಿಬಿಡಬಲ್ಲೆವು. ರಿಯಲಿ? ನನ್ನ ಜೊತೆ ನೀವೂ ಯೋಚಿಸಿ, ಈ ಲೇಖನವನ್ನು ಓದಿದ ಬಳಿಕವೂ ನೀವು ನಿಮ್ಮ ಅಭಿಪ್ರಾಯವೇ ನಿಜವೆಂದುಕೊಂಡರೆ ಅದರ ಬಗ್ಗೆ ವಿವರವಾಗಿ ಇಲ್ಲ ಸಂಕ್ಷಿಪ್ತವಾಗಿ ನನಗೊಂದು ಸಾಲು ಬರೆಯಿರಿ.

ಉದಾಹರಣೆ 1: ನಾನು ತಾಲೂಕು ಆಫೀಸಿಗೆ ಹೋಗುತ್ತೇನೆ. ಅಲ್ಲಿ ನನಗೊಂದು ಸಣ್ಣ ಕೆಲಸವಾಗಬೇಕಾಗಿದೆ, ಆದರೆ ಆ ಕೆಲಸವನ್ನು ಮಾಡಿಕೊಡಲು ಸುಮಾರು 4 ಘಂಟೆಗಳ ಕಾಲ ತೆಗೆದುಕೊಳ್ಳುತ್ತದೆ ಎಂದು ಅಲ್ಲಿನ ಹೆಡ್‌ಕ್ಲರ್ಕ್ ಹೇಳುತ್ತಾರೆ.
ನಾನು ಪರವಾಗಿಲ್ಲ, ನಾಲ್ಕು ಘಂಟೆಗಳನ್ನು ಬಿಟ್ಟು ಬರುತ್ತೇನೆ ಎಂದು ಹೇಳುತ್ತೇನೆ, ಮತ್ತು ಸರಿಯಾಗಿ ನಾಲ್ಕು ಘಂಟೆಗಳ ನಂತರ ಹೋದರೆ, ಅದೇ ಹೆಡ್‌ಕ್ಲರ್ಕ್ ದೊಡ್ಡ ತಗಾದೆ ತೆಗೆಯುತ್ತಾರೆ.
’ನನಗೆ ಸುಮಾರು 24 ಫೈಲುಗಳನ್ನು ನೋಡಿ ಮುಗಿಸಬೇಕು, ಇನ್ನು ಒಂದು ವಾರ ಬಿಟ್ಟು ಬನ್ನಿ!’

ಆಗ ನನ್ನ ಆಪ್ಷನ್ನುಗಳೇನು?
- option 1 - ಸರಿಯಾಗಿ ಇನ್ನೊಂದು ವಾರ ಬಿಟ್ಟು ಬಂದು ಕೆಲಸವಾಗಿದೆಯೋ ಇಲ್ಲವೋ ಎಂದು ನೋಡುವುದು.
- option 2 - ಅಲ್ಲಿನ ಮತ್ತೊಬ್ಬ ಕ್ಲರ್ಕ್ ಸಲಹೆ ಮಾಡಿದ ಪ್ರಕಾರ 800 ರುಪಾಯಿಗಳನ್ನು ಕೊಟ್ಟರೆ ಅದೇ ದಿನ ಅವರು ಕೆಲಸ ಮಾಡಿಕೊಡುತ್ತಾರೆ, ಬೇಕಾದರೆ ಆ ಮತ್ತೊಬ್ಬ ಕ್ಲರ್ಕ್ ನನ್ನ ಪರವಾಗಿ ಶಿಫಾರಸ್ಸ್ ಮಾಡುತ್ತಾರಂತೆ.

ನಿಮಗೆ ಈ ಕೆಲಸ ಬಹಳ ಮುಖ್ಯವಾದುದು, ನಾಲ್ಕು ಘಂಟೆಗಳನ್ನು ಕಾಯಬಹುದು, ಆದರೆ ನಾಲ್ಕು ದಿನ ಕಾಯುವಂತಿಲ್ಲ, ನನ್ನ ಜಾಗೆಯಲ್ಲಿದ್ದರೆ ನೀವೇನು ಮಾಡುತ್ತೀರಿ?

ಉದಾಹರಣೆ 2: ನೀವು ಟ್ರಾಫಿಕ್ ಜಾಮ್‌ನಲ್ಲಿ ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಪೋಸ್ಟೆಡ್ ಸ್ಪೀಡ್ ಲಿಮಿಟ್ಟಿಗಿಂತ ಘಂಟೆಗೆ 25 ಮೈಲಿ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಿ, ದೊಡ್ಡ ತಪ್ಪನ್ನು ಎಸಗಿದ್ದೀರಿ.
ಟ್ರಾಫಿಕ್ ಪೋಲಿಸ್ ರೇಡಾರ್ ಡಿಟೆಕ್ಟರ್ ಮೂಲಕ ನಿಮ್ಮ ತಪ್ಪನ್ನು ಸಾಬೀತುಗೊಳಿಸುವ ರಿಪೋರ್ಟನ್ನು ಕೈಯಲ್ಲಿ ಹಿಡಿದುಕೊಂಡು ನಿಮ್ಮ (ಡ್ರೈವರ್) ಪಕ್ಕದ ಕಿಟಕಿಯಲ್ಲಿ ನಿಂತಿದ್ದಾನೆ.
ಸ್ಥಳದಲ್ಲೇ ದಂಡ ಕಟ್ಟಿದರೆ 8 ಸಾವಿರ ರೂಪಾಯಿ ಆಗುತ್ತದೆ (ಕೊಡದಿದ್ದರೆ ಗಾಡಿ ಬಿಡೋದಿಲ್ಲ ಮುಂದೆ).
ಅದೇ ಸಮಯುಕ್ಕೆ ಮತ್ತೊಬ್ಬ ಪೋಲಿಸ್ ಕಾರಿನ ಇನ್ನೊಂದು ಕಿಟಕಿಯಲ್ಲಿ ಬಂದು, 8 ಸಾವಿರ ಇಲ್ಲದಿದ್ರೆ 4 ಸಾವಿರ ಕೊಡಿ ಪರವಾಗಿಲ್ಲ, ಆದ್ರೆ ನಿಮಗೆ ಕಂಪ್ಯೂಟರ್ ರಶೀದಿ ಸಿಗೋದಿಲ್ಲ ಅಂತಾನೆ.

ನೀವು ಅರ್ಜೆಂಟಾಗಿ ಎಲ್ಲಿಗೋ ಹೋಗಬೇಕು. ಹೆಚ್ಚು ಹೊತ್ತು ತರ್ಕವಾಗಲಿ, ತಕರಾರನ್ನಾಗಲೀ ಮಾಡಲು ವ್ಯವಧಾನವಿಲ್ಲ.
ನೀವು ಪೋಲೀಸ್‌ಗೆ ೮ ಸಾವಿರ ಕೊಡ್ತೀರಾ? ೪ ಸಾವಿರ ಕೊಡ್ತೀರಾ?

***

ನನ್ನ ಹಾಗೆ ನೀವೂ ಸಹ ನಿಮ್ಮ ಬದುಕಿನಲ್ಲಿ ಈಗಾಗಲೇ ಬಹಳ ರಾಜಕೀಯ ಪಕ್ಷಗಳು ಹುಟ್ಟಿ-ಸತ್ತಿದ್ದನ್ನು ನೋಡಿರಬಹುದು. ಕ್ರಾಂತಿರಂಗ, ತೃಣಮೂಲ, ಹೊಟ್ಟೆ, ಸಮಾಜವಾದಿ, ದಳ, ಹಲವಾರು ಬಗೆಯ "ಕಾಂಗ್ರೆಸ್ಸು"ಗಳು, ಲಲ್ಲೂ ಪಕ್ಷ, ಅವನ ಹೆಂಡತಿ ಪಕ್ಷ, ಜಾತಿ-ಜಾತಿಗಳ ಪಕ್ಷ, ಜಾತಿ ಇಲ್ಲದವರ ಪಕ್ಷ - ಹೀಗೆ ಹಲವು...ಈ ಪಟ್ಟಿ ಬಹಳ ಮುಂದುವರೆಯುತ್ತದೆ. ಎಲ್ಲದರ ಪ್ರಣಾಳಿಕೆಗಳು ಒಂದೇ - ದೇಶೋದ್ದಾರ.  66 ವರ್ಷದ ಸ್ವತಂತ್ರ್ಯೋತ್ತರ ಬಾಳ್ವೆಯಲ್ಲಿ ದೇಶದ ಉದ್ದಗಲಕ್ಕೂ ಅಂದಿನ ಮೂಲ ಸಮಸ್ಯೆಗಳು, ಇಂದಿಗೂ ಇವೆ; ಅವುಗಳಲ್ಲಿ ಭ್ರಷ್ಟಾಚಾರವೂ ಒಂದು. ಭ್ರಷ್ಟಾಚಾರ ಮೇಲೆ ಹುಟ್ಟಿ ಕೆಳಗೆ ಹರಿದು ಬರುವಂತದಲ್ಲ, ಕೆಳಗೆ ಹುಟ್ಟಿ ಸರ್ವತೋಮುಖವಾಗಿ ಬೆಳೆಯುವಂತದು. ತಾಲೂಕು ಆಫೀಸಿನಲ್ಲಿ 'ಅಡ್ಜಸ್ಟ್’ ಮಾಡಿಕೊಳ್ಳುವ ನಮ್ಮ ಮೆಂಟಾಲಿಟಿ, ನಾವು ಕಾನೂನನ್ನು ಮುರಿದಾಗ ನಮ್ಮ ಸಹಾಯಕ್ಕೆ ಬರುವ ಅಡ್ಡದಾರಿತನ ಇವುಗಳು ಲಂಚಕೋರತನದ ಮೂಲ ಕಾರಣ (ರೂಟ್‌ಕಾಸ್) ಗಳಲ್ಲೊಂದು. ಲಂಚ ಕೊಡುವವರು ನಾವು, ತೆಗೆದುಕೊಳ್ಳುವವರು ನಾವು - ಇದನ್ನು ಅರಿವಿನಿಂದ, ಬೆಳೆದ ವ್ಯವಸ್ಥೆಯಿಂದ, ಆಧುನಿಕ ಪರಿಕರಗಳಿಂದ ಹೊಡೆಯಬೇಕೇ ವಿನಾ ಮತ್ತೊಂದು ಪಕ್ಷ ಕಟ್ಟುವುದರಿಂದಲ್ಲ.

ಹಜಾರೆ ನಂಬಿಕೊಂಡ ಗಾಂಧಿ ಮಹಾತ್ಮ ಯಾವುದೇ ರಾಜಕೀಯ ಪದವಿಯನ್ನು ಅಲಂಕರಿಸದಿದ್ದರೂ, ಸಮಾಜದಲ್ಲಿ ಬದಲಾವಣೆಗಳನ್ನು ತರಲಿಲ್ಲವೇನು? ಹೊಸ ಪಕ್ಷ ಕಟ್ಟುವುದರಿಂದ ಏನಾದೀತು? ಮತ್ತೆ ಈ ಪಕ್ಷದ ವಕ್ತಾರರು ಇಂದಿನ ಕ್ಷೋಭೆಗಳ ನಡುವೆ ಮುಕ್ತವಾಗಿ ಸ್ಪರ್ಧಿಸಿ, ಗೆದ್ದು ಮೇಲೆ ಬರುವುದು, ಹಾಗೆ ಬಂದ ನಂತರ ಸುಧಾರಣೆಗಳನ್ನು ಮಾಡುವುದು ಅಷ್ಟು ಸುಲಭದ ಕೆಲಸವೇನು?

ನಾವು, ಲಂಚಾವತರಣದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಭಾಗವಹಿಸುವವರೆಲ್ಲರೂ, ಒಂದು ರೀತಿಯಲ್ಲಿ ಹುಲಿ ಸವಾರಿಯಲ್ಲಿ ತೊಡಗಿದ್ದೇವೆ. ಹುಲಿ ಸವಾರಿಯನ್ನು ನಿಲ್ಲಿಸಿ ಹುಲಿಯಿಂದ ಕೆಳಗಿಳಿದರೆ ಹುಲಿಯೇ ನಮ್ಮನ್ನು ಕಬಳಿಸಿ ಬಿಡುವ ಸಾಧ್ಯತೆ ಇದೆ. ಸಾವಿರಾರು ವರ್ಷಗಳ ಸಮಸ್ಯೆಗೆ ಮತ್ತೊಂದು ಪಕ್ಷ ಕಟ್ಟುವುದು ಉತ್ತರವಲ್ಲ, 'ಅಣ್ಣಾ’ ಎಂದು ಕರೆಯುವವರೆಲ್ಲ, ನಾವು ಇಂದಿನಿಂದ ಭ್ರಷ್ಟರಾಗೋದಿಲ್ಲ ಎಂದು ಪ್ರಮಾಣ ಮಾಡಿ, ಅದಕ್ಕೆ ತಕ್ಕಂತೆ ನಡೆದುಕೊಂಡರೆ ಬಹಳಷ್ಟು ಸುಧಾರಣೆಗಳಾಗುತ್ತವೆ. ಈಗಾಗಲೇ ಇಳಿ ವಯಸ್ಸಿನ ಹಜಾರೆ ಅವರು ತಮ್ಮ ಮೂಲ ಮಂತ್ರ ಬೀಜವನ್ನು ಬಿತ್ತಿ, ಅದರಿಂದ ಹುಲುಸಾಗಿ ಕೃಷಿ ಬೆಳೆಯುವಂತೆ ಮಾಡಿದರೆ ಅದು ಜನಜನಿತವಾಗುತ್ತದೆ, ಹಾಗೂ ಕಾಲನ ಜೊತೆಗೆ ಬೆಳೆಯುತ್ತದೆ. ಅದನ್ನು ಬಿಟ್ಟು ಪಕ್ಷ ಕಟ್ಟಿದರೆ ಅದು ಕಾಲನಿಗೆ ಆಹಾರವಾಗುತ್ತದೆ.

***

ಭ್ರಷ್ಟಾಚಾರ ಕೇವಲ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಮಾತ್ರ ಸೀಮಿತವೇ?
ಬದಲಾಗಬೇಕಾದವರು ಯಾರು ಎಂದು ತಿಳಿಯಬೇಕಾದರೆ, ಹೋಗಿ ಕನ್ನಡಿ ಮುಂದೆ ನಿಲ್ಲಿ!

Friday, August 14, 2009

ಕಷ್ಟಗಳು, ಉಳಿತಾಯ ಹಾಗೂ ಮೋಕ್ಷ

’ಬಹಳ ಕಷ್ಟಾ ಸ್ವಾಮಿ, ಇತ್ತೀಚೆಗೆ’. ಅನ್ನೋ ಮಾತು ಆಗಾಗ್ಗೆ ಕೇಳಿ ಬರ್ತಾನೇ ಇರುತ್ತೆ. ಕೆಲಸ ಕಳೆದುಕೊಂಡವರ ಬಗ್ಗೆ, ಮನೆಗಳ ಬೆಲೆ ಕುಸಿದು ಮಾರಲೂ ಆಗದೇ ಅವುಗಳ ಸಾಲವನ್ನು ಕಟ್ಟಲೂ ಆಗದೇ ಕೊರಗುವವರ ಬಗ್ಗೆ, ಒಂದೇ ಮನೆಯಲ್ಲಿ ಇತ್ತೀಚೆಗಷ್ಟೇ ಕಾಲೇಜು ಮುಗಿಸಿದ ಕೆಲಸ ಹುಡುಕುತ್ತಿರುವ ಮಕ್ಕಳ ಜೊತೆಗೆ ಪೋಷಕರೂ ಕೆಲಸ ಹುಡುಕುತ್ತಿರುವುದರ ಬಗ್ಗೆ, ಇನ್ನೇನು ನಿವೃತ್ತರಾಗಬೇಕು ಎನ್ನುಕೊಳ್ಳುವವರು ಮತ್ತಿನ್ನೊಂದಿಷ್ಟು ವರ್ಷಗಳ ಕಾಲ ಕೆಲಸ ಮಾಡಲೇ ಬೇಕು ಎನ್ನುವುದರ ಬಗ್ಗೆ ಹೀಗೆ ಹಲವಾರು ವರದಿಗಳು ಅಲ್ಲಲ್ಲಿ ಕಾಣಸಿಗುತ್ತವೆ.

ಬಡತನದಲ್ಲಿ ಹುಟ್ಟಿ ಬೆಳೆದವರಿಗೆ ಮುಂದೆ ಅವರು ಯಾವುದೇ ಸ್ಟೇಟಸ್‌ನಲ್ಲಿದ್ದರೂ ಅವರ ಸರ್ವೈವಲ್ ತಂತ್ರಗಳು ಯಾವಾಗಲೂ ಜೀವಂತವಾಗಿಯೇ ಇರುತ್ತವೆ ಎಂದು ಹೇಳಬೇಕು. ಒಮ್ಮೆ ಬಡತನದಲ್ಲಿ ಸಿಕ್ಕಿಕೊಂಡರೆ ಅದರ ಪರಿಣಾಮಗಳು ಒಂಥರಾ ರಕ್ತದಲ್ಲಿರುವ ಯಾವುದೇ ಖಾಯಿಲೆಯ ವೈರಾಣುಗಳ ಹಾಗೆ ಯಾವತ್ತೂ ಜೀವಂತವಾಗೇ ಉಳಿದು ಕಷ್ಟದ ಪರಿಸ್ಥಿತಿಯಲ್ಲಿ ಹಳೆಯ ಇನ್‌ಸ್ಟಿಂಕ್ಸ್ ಎಲ್ಲ ಕೆಲಸ ಮಾಡಲು ಆರಂಭಿಸುತ್ತವೆ. ಅದೇ ಹುಟ್ಟಿದಂದಿನಿಂದ ಬಡತನವನ್ನು ಕಾಣದೇ ಇದ್ದವರ ಮೊದಲ ಬಡತನದ ಬವಣೆ ಬಲುಕಷ್ಟ.

ನಮ್ಮ ಪಕ್ಕದ ಮನೆಯವರು ಈ ಹತ್ತು ವರ್ಷಗಳಿಂದಲೂ ಪ್ರತಿನಿತ್ಯ ತಮ್ಮ ಮನೆಯ ಸುತ್ತಲೂ ಕನಿಷ್ಠ ಇಪ್ಪತ್ತು ವಿದ್ಯುತ್ ದೀಪಗಳನ್ನು ಉರಿಸುತ್ತಿದ್ದರು - ಗರಾಜ್ ಲೈಟ್‌ಗಳು, ಎದುರು ಲಾನ್‌ನಲ್ಲಿರುವ ಮರಗಳಿಗೆ ಫೋಕಸ್ ಲೈಟ್‌ಗಳು, ಮನೆಯ ಮುಂದಿನ ಬಾಗಿಲಿಗೆ, ಡ್ರೈವ್‍ ವೇ ಅಕ್ಕಪಕ್ಕದಲ್ಲಿ ಇತ್ಯಾದಿ. ಈ ಲೈಟುಗಳೆಲ್ಲ ಅಟೋಮ್ಯಾಟಿಕ್ ಆಗಿ ರಾತ್ರಿ ಪೂರ್ತಿ ಉರಿದು ಬೆಳಿಗ್ಗೆ ಆರಿಹೋಗುತ್ತಿದ್ದವು, ಅದೇ ನಮ್ಮ ಮನೆಯಲ್ಲಿ ದಿನಕ್ಕೆ ಕೆಲವು ಘಂಟೆಗಳು ಮಾತ್ರ ಮುಂದಿನ ಬಾಗಿಲಿನ ಎರಡು ಎನರ್ಜಿ ಎಫಿಷಿಯಂಟ್ ಬಲ್ಬ್‌ಗಳು ಉರಿಯುತ್ತಿದ್ದವು. ಹೋದ ವರ್ಷದ ಕೊನೆಯಲ್ಲಿ ಇದ್ದಕ್ಕಿದ್ದ ಹಾಗೆ ನಮ್ಮ ಇಲೆಕ್ಟ್ರಿಕ್ ಬಿಲ್ ಡಬಲ್ ಆಯಿತು, ನಾನೂ ಗಾಬರಿಗೊಂಡು ಒಂದಿಬ್ಬರನ್ನು ಕೇಳಿ ತಿಳಿದಾಗ ಅವರದ್ದೂ ಅದೇ ಪರಿಸ್ಥಿತಿ. ಹಾಗಾದ ಮರುದಿನವೇ ಪಕ್ಕದ ಮನೆಯ ಲೈಟುಗಳು ಎಲ್ಲವೂ ನಿಂತು ಹೋದವು, ಅವರು ಮನೆಯಲ್ಲಿದ್ದ ದಿನಗಳು ಮಾತ್ರ ಮುಂದಿನ ಬಾಗಿಲಿಗೆ ಒಂದು ಎನರ್ಜಿ ಎಫಿಷಿಯಂಟ್ ಲೈಟ್ ಬಲ್ಬ್ ಉರಿಯತೊಡಗಿತು. ಕೇವಲ ಎಲೆಕ್ಟ್ರಿಕ್ ಬಿಲ್ ವಿಚಾರವೊಂದೇ ಅಲ್ಲ, ಅವರ ಖರ್ಚು-ವೆಚ್ಚ ಜೀವನ ಶೈಲಿಯಲ್ಲೂ ಬದಲಾವಣೆಗಳು ಗೋಚರಿಸತೊಡಗಿದವು: ನ್ಯೂಸ್ ಪೇಪರ್ ಸಬ್‌ಸ್ಕ್ರಿಫ್ಷನ್ ನಿಂತು ಹೋಗುವುದು, ವರ್ಷದ ವೆಕೇಷನ್ನ್ ಕ್ಯಾನ್ಸಲ್ ಆಗುವುದು, ಮುಂತಾಗಿ.

ಒಂದು ವಸ್ತು ನಮ್ಮದೋ ಅಲ್ಲವೋ ಎಲ್ಲ ಕಡೆ ಕನ್ಸರ್‌ವೇಟಿವ್ ಆಗಿರುವುದು ಒಂದು ಬಗೆ - ಉದಾಹರಣೆಗೆ ನಮ್ಮ ಆಫೀಸಿನಲ್ಲಿ ನಾವು ಪ್ರಿಂಟ್ ಮಾಡುವ ಪ್ರತಿಯೊಂದು ಡಾಕ್ಯುಮೆಂಟ್ ಜೊತೆಗೆ ನಮ್ಮ ಹೆಸರಿನ ಕವರ್ ಪೇಜ್ ಅನ್ನು ನಾನು ಸಾಧ್ಯವಾದಷ್ಟು ಬಳಸುತ್ತೇನೆ, ಅದರ ಖಾಲಿ ಇರುವ ಮತ್ತೊಂದು ಪುಟದಲ್ಲಿ ಏನಾದರೂ ನೋಟ್ಸ್ ಮಾಡುವುದಕ್ಕೋ ಅಥವಾ ಚಿಕ್ಕದಾಗಿ ಕತ್ತರಿಸಿಕೊಂಡು ’ಪೋಸ್ಟ್ ಇಟ್’ ನೋಟ್ಸ್ ಥರವೋ, ಅಥವಾ ಇನ್ನೊಂದು ರೀತಿ. ಇನ್ನುಳಿದವರು ಆ ಕವರ್ ಪುಟವನ್ನು ಟ್ಯ್ರಾಷ್ ಮಾಡಬಹುದು, ಅಥವಾ ರಿಸೈಕಲ್ ಮಾಡಬಹುದು, ಹೀಗೆ ಅವರವರ ಬುದ್ಧಿಗೆ ತಕ್ಕಂತೆ ಆ ಕವರ್ ಪೇಜ್ ಬಳಕೆಗೊಳ್ಳುತ್ತೆ. ಇಲ್ಲಿ ಒಂದೇ ಸರಿಯುತ್ತರವೆಂಬುದೇನೂ ಇಲ್ಲ, ಆ ಪುಟವನ್ನು ಹೇಗೆ ಬಳಸಬೇಕು ಎನ್ನುವುದಕ್ಕೆ ಹಲವಾರು ಸರಿ ಉತ್ತರಗಳಿವೆ. ನನ್ನ ನಿಲುವಿನಲ್ಲಿ ಅಥವಾ ನಾನು ಹೇಗೆ ಆ ಕವರ್ ಪುಟವನ್ನು ಬಳಸುತ್ತೇನೆ ಎಂಬುದರಲ್ಲಿ ಯಾವುದೇ ಬದಲಾವಣೆಗಳೂ ಆಗಲಾರವು, ಅದು ಎಕಾನಮಿಯನ್ನೂ ಆದರಿಸಿಲ್ಲ, ಅದಕ್ಕೆ ನೇರವಾಗಿ ನಾನು ಹಣಕೊಡುವುದೂ ಇಲ್ಲ. ಇದು ಹೇಗೆ ನನ್ನ ನಿಲುವೋ ಉಳಿದವರದೂ ಹಾಗೆ, ಅಷ್ಟೇ.

ಇನ್ನು ಕಷ್ಟದ ಮಾತಿಗೆ ಬರೋಣ, ಅವರವರ ಕಷ್ಟ ಅವರಿಗೆ ಆನೆಯ ಭಾರ ಆನೆಗೆ ಇರುವೆಯ ಭಾರ ಇರುವೆಗೆ. ಆದರೆ ಕಷ್ಟಗಳು, ಸಾಂಸಾರಿಕ ಜಂಜಾಟಗಳು, ನಮಗೊದಗುವ ಅನೇಕ ತೊಂದರೆಗಳನ್ನು ಹಲವಾರು ರೀತಿಯಲ್ಲಿ ನೋಡಬಹುದು. ಅವುಗಳ ತುಲನಾತ್ಮಕ ಅರಿವು ನಮ್ಮನ್ನು ಎಷ್ಟೋ ಸಾರಿ ’ಸದ್ಯ, ನಮಗೆ ಹಾಗಾಗದಿದ್ದರೆ ಸಾಕು!’ ಎನ್ನುವ ಮನೋಭಾವನೆಯಿಂದ ಆ ಮಟ್ಟಿಗೆ ಸಮಾಧಾನ ಹುಟ್ಟಬಹುದು. ದೈಹಿಕ ಕೆಲಸಗಳಿಂದ ಸ್ನಾಯುಗಳು ಬಲಗೊಳ್ಳುವ ಹಾಗೆ ಈ ಸಂಕಷ್ಟಗಳ ಪರಂಪರೆ ಮನಸ್ಸನ್ನು ಗಟ್ಟಿಗೊಳಿಸಬಹುದು. ಎಲ್ಲದಕ್ಕಿಂತ ಮುಖ್ಯವಾಗಿ ಈ ಜಂಜಾಟಗಳಲ್ಲಿ ಬಳಲಿ, ತೊಳಲಿ, ಬಗ್ಗಿ, ಬಾಗಿ, ನೊಂದು, ನಲಿದು ಮುಂದೆ ಇವೆಲ್ಲದರ ದೆಸೆಯಿಂದ ಲಕ್ಷಾಂತರ ಜನ್ಮಗಳಲ್ಲಿ ಮೋಕ್ಷ ಸಿಗಬಹುದು.

ನಮಗೆಲ್ಲ ಕಷ್ಟದ ಬಗ್ಗೆ ಏನು ಗೊತ್ತಿದೆ? ಮನೆಯಲ್ಲಿ ಮೂರೋ ನಾಲ್ಕು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡಬೇಕು ಎನ್ನುವ ಪೋಷಕರ ನಡುವೆ, ಹುಟ್ಟಿದಂದಿನಿಂದ ವಿಕಲಾಂಗರಾಗಿ ಬೆಳೆಯುವ ಮಕ್ಕಳನ್ನು ಪೋಷಿಸುವ ತಂದೆ-ತಾಯಿಗಳ ನಡುವೆ, ಇಂದಿದ್ದರೆ ನಾಳೆ ಬೆಳಿಗ್ಗೆ ತಿನ್ನುವುದಕ್ಕಿಲ್ಲ ಎನ್ನುವವರ ನಡುವೆ, ಯಾವಾಗಲೂ ಒಂದಲ್ಲ ಒಂದು ಖಾಯಿಲೆಯಿಂದ ನರಳುತ್ತಿರುವ ಕುಟುಂಬದ ಸದಸ್ಯರ ಜೊತೆ ತಮ್ಮ ದಿನಚರಿಯನ್ನು ಕಂಡುಕೊಳ್ಳುವವರ ನಡುವೆ, ಇದ್ದ ಮಕ್ಕಳಲ್ಲಿ ಕೆಲವರನ್ನು ದುರಂತಗಳಲ್ಲಿ ಕಳೆದುಕೊಂಡು ಜೀವನ ಪರ್ಯಂತ ನರಳುವವರ ನಡುವೆ, ಆಫೀಸಿನ ಕೆಲಸ ಮನೆಯಲ್ಲಿನ ಕೆಲಸಗಳ ಜೊತೆಗೆ ತಮ್ಮ ಕುಟುಂಬದ ಹಿರಿಯರನ್ನು ಪೋಷಿಸಿಕೊಂಡು ಹೋಗುವವರ ನಡುವೆ, ತಮ್ಮ ಪ್ರೈಮರಿ ರೆಸಿಡೆನ್ಸ್ ಅಥವಾ ತಮ್ಮ ಜೀವನದ ಇಡುಗಂಟನ್ನು ಕಳೆದುಕೊಂಡವರ ನಡುವೆ...ಹೀಗೆ ಈ ಪಟ್ಟಿ ಮುಂದುವರೆಯುತ್ತದೆ. ಪ್ರತಿಯೊಬ್ಬರ ಕಷ್ಟದ ಅರಿವು ಹಾಗೂ ಅವರ ಅನುಭವ ಸಾಪೇಕ್ಷವಾದುದು. ನಮ್ಮ ಕಷ್ಟ ದೊಡ್ಡದು ಎಂದೆನಿಸಿದ ಮರು ಕ್ಷಣವೇ ಮತ್ತೊಬ್ಬರ ಇನ್ನೂ ಹೆಚ್ಚಿನ ಕಷ್ಟದ ಸ್ಥಿತಿಯನ್ನು ಕೇಳಿದಾಗ ಸಮಾಧಾನವಾಗುತ್ತದೆ. ಹೀಗೆ ಆದಾಗಲೆಲ್ಲ ’ಸದ್ಯ ನಮಗೆ ಆ ಪರಿಸ್ಥಿತಿ ಬರಲಿಲ್ಲವಲ್ಲ’ ಎನ್ನುವ ದನಿಯೂ ಹುಟ್ಟುತ್ತದೆ, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಂತಹ ಕ್ಷಣದಲ್ಲಿ ’ದೇವರ ದಯೆ’ ಅಥವಾ ’ದೇವರು ದೊಡ್ಡವನು’ ಭಾವನೆಯೂ ಉದ್ಭವಿಸುತ್ತದೆ.

Tuesday, November 04, 2008

ಇತ್ತೀಚಿನ ಮೂರು ಬೆಳವಣಿಗೆಗಳು ಹಾಗೂ ಪ್ರತಿಕ್ರಿಯೆ

ದಿನಗಳಲ್ಲಿ ರೆಪ್ಪೆ ಮಿಟುಕಿಸುವುದರೊಳಗೆ ಏನೇನೆಲ್ಲ ಆಗಿ ಹೋಗೋ ಸಾಧ್ಯತೆಗಳಿರುವಾಗ ಪ್ರತಿಕ್ರಿಯೆಯನ್ನು ಒಡನೆಯೇ ದಾಖಲಿಸಬೇಕಾದ ಅಗತ್ಯ ಒಮ್ಮೊಮ್ಮೆ ಕಂಡು ಬರೋದು ನಿಜ. ಅಂದರೆ ಎಲ್ಲವೂ ಆಗಿ ಹೋದ ಮೇಲೆ ಅಲ್ಲಲ್ಲಿ ಸಿಗೋ ಪ್ರತಿಕ್ರಿಯೆ ವರದಿಗಳನ್ನು ಓದಿಕೊಂಡು ನಮ್ಮ ಅನಿಸಿಕೆ ಅಭಿಪ್ರಾಯವನ್ನು ದಾಖಲಿಸೋದು ಒಂದು ರೀತಿ, ಇಲ್ಲವೇ ಎಲ್ಲವೂ ಆಗಿ ಹೋಗುತ್ತಿರುವಾಗಲೇ ನಮ್ಮ ನಿಲುವು ಅಭಿಪ್ರಾಯವನ್ನು ದಾಖಲಿಸೋದು ಮತ್ತೊಂದು ರೀತಿ.

೧. ಉತ್ತರ ಅಮೇರಿಕದ ಮುಂದಿನ ಅಧ್ಯಕ್ಷರು ಯಾರು?
ನನ್ನ ಪ್ರಕಾರ ಸೆನೆಟರ್ ಮೆಕ್ಕೈನ್ ಪಾಪ್ಯುಲಾರಿಟಿ ಮತವನ್ನು ಗೆಲ್ಲದಿದ್ದರೂ ಟ್ರೆಡಿಷನಲ್ ರಿಪಬ್ಲಿಕನ್ ಪಕ್ಷದ ಸ್ಟ್ರಾಂಗ್‌ಹೋಲ್ಡ್ ದೆಸೆಯಿಂದ ಹಾಗೂ ಇಂಡಿಯಾನ, ಫ್ಲೋರಿಡಾ, ಒಹಾಯೋ, ಪೆನ್ಸಿಲ್‌ವೇನಿಯಾ ಮೊದಲಾದ ಸ್ವಿಂಗ್ ಸ್ಟೇಟ್‌ಗಳಲ್ಲಿ ಬೇಕಾದ ಮತವನ್ನು ಗಳಿಸಿದ್ದೇ ಆದರೆ ಮುಂದಿನ ಪ್ರೆಸಿಡೆಂಟ್ ಆಗುವುದು ಖಂಡಿತ.

ಸದ್ಯದ ಸಮೀಕ್ಷೆಗಳ ಪ್ರಕಾರ ಸೆನೆಟರ್ ಒಬಾಮಾ ಪಾಪ್ಯುಲರ್ ಮತವನ್ನು ಗೆಲ್ಲುವಂತೆ ಕಂಡರೂ ಮತ್ತೆ ಈ ಸ್ವಿಂಗ್ ಸ್ಟೇಟ್‌ಗಳಲ್ಲಿಯ ಮತವೇ ಮುಖ್ಯವಾಗುತ್ತದೆ. ಈ ವರ್ಷದ ಚುನಾವಣೆಯಲ್ಲಿ ಬಹಳ ಹೆಚ್ಚಿನ ಜನರು ಮತಕಟ್ಟೆಗಳಿಗೆ ಬರುತ್ತಿರುವುದನ್ನು ನೀವೂ ಗಮನಿಸಿರಬಹುದು. ಮೊಟ್ಟ ಮೊದಲನೇ ಬಾರಿಗೆ ಅಮೇರಿಕಕ್ಕೆ ಆಫ್ರಿಕನ್ ಅಮೇರಿಕನ್ ಪ್ರೆಸಿಡೆಂಟ್ ಇರಲಿ ಎಂದು ಎಷ್ಟೋ ಜನರು ಪೋಲ್‌ಗಳಲ್ಲಿ ಹೇಳಿದ್ದರೂ ಸಹ ಕೆಲವರ ಮನಸ್ಸಿನಲ್ಲಿ ತಮ್ಮನ್ನು ರೇಷಿಯಲ್ ಎಂದು ತಿಳಿದುಕೊಳ್ಳದಿರಲಿ ಎಂದು ಸುಳ್ಳು ಸಮೀಕ್ಷೆಗಳಿಗೆ ಉತ್ತರ ಕೊಟ್ಟಿರಬಹುದು ಎಂಬ ಸಂದೇಹವೂ ಮನಸ್ಸಿನಲ್ಲಿದೆ.

ಚುನಾವಣೆಯ ಉತ್ತರವೇನಾದರೂ ಇರಲಿ - ಆಫ್ರಿಕನ್ ಅಮೇರಿಕದ ಮೂಲದ ಪ್ರೆಸಿಡೆಂಟ್ ಚುನಾಯಿತರಾದಲ್ಲಿ ಅಮೇರಿಕದ ಜನರ ಮನೋವೈಶಾಲ್ಯತೆಯನ್ನು ಜಗತ್ತಿಗೆ ಸಾರುವುದರ ಜೊತೆಗೆ ಉತ್ತರ ಅಮೇರಿಕದ ಕಾಂಗ್ರೆಸ್, ಸೆನೆಟ್ ಹಾಗೂ ಪ್ರೆಸಿಡೆನ್ಸಿ ಎಲ್ಲವೂ ಡೆಮೋಕ್ರಾಟ್‌ಮಯವಾಗುವುದು ನಿಜ. ಅಲ್ಲದೇ ಯಾವ ಪ್ರೆಸಿಡೆಂಟ್ ಹಾಗೂ ಸರ್ಕಾರ ಮುಂದೆ ಬಂದರೆ ನಮ್ಮ ದೇಶಕ್ಕೆ ಅದರಿಂದ ಏನು ಅನುಕೂಲ/ಅನಾನುಕೂಲ ಎನ್ನುವುದು ಇನ್ನೂ ದೊಡ್ಡ ಪ್ರಶ್ನೆ.

೨. ಕನ್ನಡ ಹಾಗೂ ಶಾಸ್ತ್ರೀಯ ಸ್ಥಾನಮಾನ
ಓಹ್, ಉತ್ತರ ಅಮೇರಿಕದಿಂದ ನೇರವಾಗಿ ಕರ್ನಾಟಕ್ಕೆ ಬರೋಣ. ತಮಿಳರ ಭಾಷಾ ವ್ಯಾಮೋಹ ಹಾಗೂ ಅವರು ಅಳವಡಿಸಿಕೊಂಡ ತಂತ್ರಗಳು ಕನ್ನಡದ ಔದಾರ್ಯಗಳಿಗೆ ಅನ್ವಯವಾಗುವಲ್ಲಿ ಇಷ್ಟು ಕಾಲ ಬೇಕಾಯಿತು. ಈ ಬೆಳವಣಿಗೆ ನಿಜವಾಗಿಯೂ ಸ್ವಾಗತಾರ್ಹ. ನಮಗೂ ನಮ್ಮತನವಿದೆ, ನಮ್ಮ ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಎಲ್ಲಕ್ಕಿಂತ ಮುಖ್ಯವಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಸಿಗುವ ಮನ್ನಣೆ, ಕನ್ನಡ ಸಂಬಂಧಿ ಯೋಜನಗೆಗಳು ಅಭಿವೃದ್ಧಿಗಳು ಇವೆಲ್ಲವೂ ನಮಗೆ ಬೇಕಾಗಿತ್ತು. ಕೊನೆಗೆ ಏನಿಲ್ಲವೆಂದರೂ ೨೦೦೮ ರಲ್ಲಾದರೂ ಕೇಂದ್ರದ ಅಸ್ತು ಸಿಕ್ಕಿತಲ್ಲ ಅದು ಮುಖ್ಯ.

೩. ಭಾರತ ಹಾಗೂ ನ್ಯೂಕ್ಲಿಯರ್ ಎನರ್ಜಿ ಸಂಬಂಧಿ ಬೆಳವಣಿಗೆಗಳು
ಇತ್ತೀಚೆಗಷ್ಟೇ ಅಮೇರಿಕದ ಅಪ್ರೂವಲ್ ಮೊಹರನ್ನು ಒತ್ತಿಕೊಂಡ ಕಾಗದ ಪತ್ರಗಳು ಹಾಗೂ ಮನಮೋಹನ್ ಸಿಂಗ್ ಆಡಳಿತಕ್ಕೆ ಸಿಕ್ಕ ಜಯ ವಿಶ್ವದಾದ್ಯಂತ ಭಾರತವನ್ನು ನ್ಯೂಕ್ಲಿಯರ್ ಅಪ್ರೂವ್ಡ್ ದೇಶವನ್ನಾಗಿ ನೋಡಲು ಸಹಾಯ ಮಾಡಿದವು. ಈ ಹಿಂದೆ ಅಂತರಂಗದಲ್ಲಿ ಬರೆದ ಹಾಗೆ ಹೆಚ್ಚಿನ ಎನರ್ಜಿ ಬೇಡಿಕೆಗೆ ನ್ಯೂಕ್ಲಿಯರ್ ಮೂಲ ಬೇಕೇ ಬೇಕು ಎನ್ನುವ ಪರಿಸ್ಥಿತಿ ಇರುವಾಗ ಕನ್ವೆನ್ಷನಲ್ ಹಾಗೂ ಉಳಿದ ಸೋರ್ಸ್‌ಗಳ ಜೊತೆ ನ್ಯೂಕ್ಲಿಯರ್ ತಂತ್ರಜ್ಞಾನವನ್ನು ನಾವು ಬಳಸುವಂತಾಗುವುದು ಬಹಳ ಮಹತ್ವದ ವಿಷಯ ಹಾಗೂ ಬೆಳವಣಿಗೆ. ನಾವೆಲ್ಲ ಮುಂದೆ ಏನಾಗುವುದೋ ಎಂದು ಕಾದು ನೋಡಬೇಕಷ್ಟೆ.