Showing posts with label ಸಂವಾದ. Show all posts
Showing posts with label ಸಂವಾದ. Show all posts

Sunday, June 14, 2020

ಓಡುವುದೇ ಗುರಿ...

ನಾವು ಗ್ರೇಡ್ ಸ್ಕೂಲಿನಲ್ಲಿದ್ದಾಗ ನಮಗೆ "ಪರೀಕ್ಷೆ" ಎನ್ನುವ ಈ ರೀತಿಯ ಒಂದು ಪದ್ಯ ಇತ್ತು...
ಸತ್ವವನು ಪರಿಕಿಸುವ ಸಮಯ ಬಂದಿಹುದು
ಬಲ ಕುಶಲ ಸಾಹಸಗಳಿವೆ ನೋಡು|
ಆರು ಯೋಜನ ನೀರನೀಜಿ ಬರಬಲ್ಯಾ?
ನೂರು ಮೈಲಿಯ ಓಟ ಓಡಬಲ್ಯಾ?
ಮದಿಸಿದ ಸಲಗವ ಕಟ್ಟಿ ಹಿಡಿಯಬಲ್ಯಾ?

ಇತ್ಯಾದಿ ಪ್ರಶ್ನೆಗಳಿಂದ ಕೊನೆಯಾಗುವ ಈ ಪರೀಕ್ಷೆಯ ಪರಿ ಬಹಳ ಇಷ್ಟವಾಗಿತ್ತು... ಇದರಲ್ಲಿ ವರ್ಣಿಸಿರುವ ಈ ಉಪಾದಿಗಳಲ್ಲಿ ಯಾವುದಾದರೊಂದನ್ನು ಯಾರಾದರೂ ಮಾಡುತ್ತಾರೆಯೇ ಎಂದು ಆಲೋಚಿಸಿ ಸೋಜಿಗಗೊಳ್ಳುವ ಕ್ಷಣಗಳನ್ನು ಅಂದಿನ ಕನ್ನಡ ತರಗತಿಗಳು ತಂದುಕೊಟ್ಟಿದ್ದವು.  ಈ ಎಲ್ಲ ಬಲ ಕುಶಲ ಸಾಹಸಗಳನ್ನು ಯೋಚಿಸಿಕೊಂಡರೆ ಇತ್ತೀಚಿನ ದಿನಗಳಲ್ಲಿ "ಓಡು"ವುದಕ್ಕೆ ಹೆಚ್ಚಿನ ಜನರು ಒಲವು ತೋರಿಸುತ್ತಾರಾದ್ದರಿಂದ, ಓಡುವುದನ್ನು ಕುರಿತು ಧೀರ್ಘವಾಗಿ ಆಲೋಚಿಸಿಕೊಂಡಾಗ ಈ ಲೇಖನ ಹುಟ್ಟಿತು.
***

ಕ್ರಿಸ್ತಪೂರ್ವ 490 ರಲ್ಲಿ ಗ್ರೀಸ್‌ನ ಫೈಡಿಪಿಡಿಸ್ ಎಂಬಾತ ಮ್ಯಾರಥಾನ ಪಟ್ಟಣದಿಂದ ರಾಜಧಾನಿ ಏಥೆನ್ಸ್‌ವರೆಗಿನ ದೂರ (26.2 ಮೈಲಿ ಅಥವಾ 42 ಕಿ.ಮಿ.) ದೂರವನ್ನು ಓಡಿ ಕ್ರಮಿಸಿದ.  ಗ್ರೀಕ್ ಸೈನಿಕರು ಪರ್ಶಿಯನ್‌ರ ವಿರುದ್ಧ ಗೆದ್ದ ಸಂದೇಶವನ್ನು ಸಾರುವುದು ಅವನ ಕೆಲಸವಾಗಿತ್ತು.  ಆ ದೂರವನ್ನು ಕ್ರಮಿಸಿ, ಅವನು ಓಡಿ ನಿತ್ರಾಣನಾದ್ದರಿಂದ ಸತ್ತು ಹೋದನೆಂದು ಪ್ರತೀತಿ ಇದೆ.  ಇದು ನಮ್ಮ ಆಧುನಿಕ "ಮ್ಯಾರಥಾನ್" ಎಂಬ ಕ್ರೀಡೆಗೆ ಹಿನ್ನೆಲೆ.  ಫೈಡಿಪಿಡಿಸ್ ಸತ್ತು ಹೋದನೆಂದು ಯಾರೂ ಹೇಳೋದಿಲ್ಲ, ಆದರೆ ಅವನ ನೆನಪಿಗಾಗಿ 26.2 ಮೈಲು ದೂರವನ್ನು ಕ್ರಮಿಸುವ ಓಟ ಇಂದಿಗೂ ಬಹಳ ಜನಪ್ರಿಯವಾಗಿದೆ.  ಅಷ್ಟೇ ಅಲ್ಲ, ದಿನೇ ದಿನೇ ಹೆಚ್ಚು ಹೆಚ್ಚು ಜನರನ್ನು ಓಡುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಇಪ್ಪತ್ತಾರು ಮೈಲಿಯ ಮ್ಯಾರಥಾನ್ ಓಟ ಬಹಳ ಹೊತ್ತು ತೆಗೆದುಕೊಳ್ಳುತ್ತದೆ ಹಾಗೂ ಸರಿಯಾಗಿ ಟ್ರೈನಿಂಗ್ ಮಾಡದೇ ಓಡಲು ಸಾಧ್ಯವಿಲ್ಲ ಎಂಬಿತರ ಕಾರಣಗಳಿಗಾಗಿ ದೊಡ್ಡ ಮ್ಯಾರಥಾನ್ ಓಟದ ಕಸಿನ್‌ಗಳಾಗಿ ಅರ್ಧ ಮ್ಯಾರ್‌ಥಾನ್ (13.1 ಮೈಲು), 10ಕೆ (6.2 ಮೈಲು), 5ಕೆ (3.1 ಮೈಲು), ಇತ್ಯಾದಿಗಳೂ ಇವೆ.  ಮ್ಯಾರಥಾನ್ ಎನ್ನುವ ಕ್ರೀಡೆಯನ್ನು ಇನ್ನೂ ಹೆಚ್ಚಿನ ಮಟ್ಟಕ್ಕೆ ಕೊಂಡ್ಯೊಯ್ಯುವ ನೆಲೆಯಲ್ಲಿ ಆಧುನಿಕ ಕ್ರೀಡಾಳುಗಳು, 50 ರಿಂದ 200 ಮೈಲಿಯ ದೂರದ ಅಲ್ಟ್ರಾ ಮ್ಯಾರಥಾನ್ ಎನ್ನುವ ಬಗೆಯನ್ನು ಕಂಡುಕೊಂಡಿದ್ದಾರೆ.  ಈ ಅಲ್ಟ್ರಾ ಮ್ಯಾರಥಾನ್‌ಗಳು ಕೆಲವೊಮ್ಮೆ ಕೆಲವು ದಿನಗಳ ವರೆಗೆ ನಡೆಯುವುದೂ ಉಂಟು (ರಾತ್ರಿ ಮತ್ತು ಹಗಲೂ ಸೇರಿ).

ಈ ಓಡುವುದರ ಹಿಂದಿನ ವಿಶೇಷತೆಯನ್ನು ತಿಳಿದುಕೊಳ್ಳೋಣ.  ಈ ಆಧುನಿಕ ಪ್ರಪಂಚದಲ್ಲಿ ಯಾರಾದರೂ ಏಕೆ 26 ಮೈಲಿಗಳ ದೂರವನ್ನು ಓಡುತ್ತಾರೆ, ಅದರಿಂದ ಸಿಗುವ ಮಜವೇನು? ಅದರ ಹಿಂದಿನ ರಹಸ್ಯವೇನು?

ಪ್ರಾಣಿ ಸಂಕುಲದಲ್ಲಿ ಎರಡು ಕಾಲಿನ ಮೇಲೆ ಓಡಾಡುವ ಅನೇಕ ಪಕ್ಷಿ-ಪ್ರಾಣಿ ಪ್ರಬೇಧಗಳಿದ್ದರೂ ಮನುಷ್ಯನಷ್ಟು ನೇರವಾಗಿ ನಿಲ್ಲುವಂತಹ ದೈಹಿಕ ಕ್ಷಮತೆ ಇನ್ನೊಂದು ಪ್ರಾಣಿಗೆ ವಿಕಾಸಕ್ಕೆ ಸಂಬಂಧಿಸಿದ ಬೆಳವಣಿಗೆಯಲ್ಲಿ ಬಂದಿರಲಾರದು.  ಹುಟ್ಟುವಾಗ ಅತ್ಯಂತ ಅಸಹಾಯಕವಾಗಿ ಹುಟ್ಟುವ ನಾವು ಅದೆಷ್ಟು ಬೇಗ ನಮ್ಮ ದೈಹಿಕ ಸಮತೋಲನವನ್ನು ಕಂಡುಕೊಂಡು ನಿಲ್ಲುತ್ತೇವೆ.  ಒಮ್ಮೆ ನಿಂತೆವೆಂದರೆ ಓಡುವುದೇ ಗುರಿ... ಈ ಕಾರಣಕ್ಕಾಗಿಯೇ ಕವಿ ನಿಸಾರ್ ಅಹ್ಮದ್ ಅವರು ತರುಣ ಮಿತ್ರನಿಗೆ ಎಂಬ ಕವನದಲ್ಲಿ "ಓಡುವುದೇ ಗುರಿಯೇ? ಓಡುವುದಿರಲಿ, ನಡುನಡುವೆ ನಿಂತು ನೋಡುವ ತಾಳ್ಮೆಯೂ ನಿನಗೆ ಬರಲಿ" ಎಂದು ಹೇಳಿರಬೇಕು.  ಹಿಂದಿನ ಕಾಲದಲ್ಲಿ ಓಡುವುದು ನಿಜವಾಗಲೂ ಗುರಿಯಾಗಿದ್ದಿತು... ಗವಿಗಳಲ್ಲಿ ವಾಸಿಸುತ್ತಿದ್ದ ನಮ್ಮ ಪೂರ್ವಜರು ಪ್ರಾಣಿಗಳಿಗಿಂತ ಹೆಚ್ಚು ವೇಗವಾಗಿ ಓಡಬಲ್ಲವರಾಗಿದ್ದರು, ಅವರು ಅಂದಿನ ದಿನಗಳಲ್ಲಿ ಬೇಟೆಯಾಡಿ ಬದುಕಿದ್ದರಿಂದಲೇ ನಾವು ಇಂದಿಗೂ ಜೀವಂತವಾಗಿರುವುದು, ಅಷ್ಟೇ ಅಲ್ಲ, ನಮ್ಮ ವಂಶಾವಳಿಗಳಲ್ಲಿ ಓಡುವುದು ಸಹಜವಾಗಿರುವುದು... ಆದ್ದರಿಂದ ನಡೆಯಬಲ್ಲವರೆಲ್ಲ ಓಡಬಲ್ಲರು ಎಂದರೆ ತಪ್ಪೇನಿಲ್ಲ!  ಓಡುವುದಕ್ಕೋಸರವೆಂದೇ ಮಿಲಿಯನ್ನುಗಟ್ಟಲೆ ವರ್ಷಗಳ ? ಕಾಲಮಾನದಲ್ಲಿ ನಮ್ಮ ಶರೀರ ತಕ್ಕನಾಗಿ ಅನುವಾಗಿದೆ.  ನಮ್ಮ ದೈಹಿಕ ಸಮತೋಲನವನ್ನು ಕೇವಲ ಪುಟ್ಟ ಪಾದಗಳಲ್ಲಿ ಬ್ಯಾಲೆನ್ಸ್ ಮಾಡಿಕೊಂಡು ನಾವು ನಿಲ್ಲುವ, ನಡೆಯುವ ಮತ್ತು ಓಡುವ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ವಿಕಾಸ ವಾದದಲ್ಲಿ ನಾವು ಹೇಗೆ ಬೆಳೆದು ಬಂದಿದ್ದೇವೆ ಎಂದು ಆಶ್ಚರ್ಯವಾಗುತ್ತದೆ.

ಇಂದಿನ ಟೆಕ್ನಾಲಜಿ ಕೆಲಸಗಾರರು ಹೆಚ್ಚಿನ ಮಟ್ಟಿಗೆ ಆಫೀಸುಗಳಲ್ಲಿ ದಿನಕ್ಕೆ ಎಂಟು ಘಂಟೆ ಕೂತು ಮೀಟಿಂಗುಗಳಲ್ಲಿ ಕಳೆಯುವ ಅಭ್ಯಾಸಕ್ಕೆ ಒಗ್ಗಿಕೊಂಡು ಹೋಗಿದ್ದಾರೆ ಎನ್ನಬಹುದು.  ಸಕ್ಕರೆ ಕಾಯಿಲೆ ಮತ್ತು ಹೃದಯ ಸಂಬಂಧಿ ರೋಗಗಳಿಗೆ ನಾವು ದಕ್ಷಿಣ ಏಷ್ಯಾದ ಜನರು ಬಲಿಯಾಗುವುದನ್ನು ನಾವು ಅಂಕಿ-ಅಂಶಗಳಲ್ಲಿ ನೋಡಬಹುದು.  ಈ ನಿಟ್ಟಿನಲ್ಲಿ ಒಳಾಂಗಣ ಜಿಮ್‌ನಲ್ಲಿ ಟ್ರೆಡ್‌ಮಿಲ್ ಉಪಯೋಗಿಸಿಕೊಂಡಾಗಲೀ, ಅಥವಾ ಹೊರಾಂಗಣದಲ್ಲಿ ಒಂದು ಸುತ್ತು ಓಡಿದರಾಗಲೀ ದೇಹದ ನರನಾಡಿಗಳಲ್ಲಿ ಸಂವೇದನೆ ಉಂಟಾಗಿ ಓಡುವವರಿಗೆ ಒಂದು ರೀತಿಯ ಸ್ಪೂರ್ತಿ ಸಿಕ್ಕಂತಾಗುವುದು ಅವರ ಅನುಭವದ ಮಾತು.  ಕೆಲವರಿಗೆ ಓಡುವುದು ಒಂದು ರೀತಿಯ ಮೆಡಿಟೇಷನ್‌ಗೆ ಸಮನಾದರೆ, ಇನ್ನು ಕೆಲವರಿಗೆ ಓಡುವುದು ಒಂದು ರೀತಿಯ "ಕೆಲಸ", ಎಷ್ಟು ಸಾಧ್ಯವೋ ಅಷ್ಟು ಬೇಗ ಮುಗಿಸುವ ಆತುರ.  ಇನ್ನು ಕೆಲವರಿಗೆ ಹೊರಗಡೆ ನಿಸರ್ಗದ ಜೊತೆಗೆ ಬೆರೆಯುವ ಒಂದು ಅವಕಾಶ.  ಕೆಲವರು ಸೂರ್ಯೋದಯಕ್ಕೂ ಮೊದಲಿನ ಸದ್ದಿಲ್ಲದ, ತಣ್ಣಗಿನ ವಾತಾವರಣವನ್ನು ಆಯ್ದುಕೊಂಡರೆ, ಇನ್ನು ಕೆಲವರು ಸಂಜೆಯ ಹೊತ್ತನ್ನು ಆರಿಸಿಕೊಳ್ಳುವುದುಂಟು.

ಓಡುವುದರಿಂದ ಉಪಯೋಗಗಳು ಎಷ್ಟೋ, ಸರಿಯಾದ ರೀತಿಯಲ್ಲಿ ಓಡದಿದ್ದರೆ ಅದರಿಂದ ಅಷ್ಟೇ ಅನಾನುಕೂಲಗಳೂ ಇವೆ.  68 ಕೆಜಿ (150 ಪೌಂಡ್) ತೂಕ ಇರುವ ಒಬ್ಬ ವ್ಯಕ್ತಿ ಹತ್ತು ನಿಮಿಷಕ್ಕೆ ಒಂದು ಮೈಲು ಓಡುತ್ತಾ ಆರು ಮೈಲು (ಒಂದು ಘಂಟೆಯಲ್ಲಿ) ದೂರವನ್ನು ಓಡಿದರೆ ಸುಮಾರು 750 ಕ್ಯಾಲೊರಿ ಖರ್ಚು ಮಾಡಿದಂತಾಗುತ್ತದೆ.  ಇದೇ ಸಮಯದಲ್ಲಿ, ಆ ವ್ಯಕ್ತಿಯ ಹೃದಯದ ಬಡಿತ ಕೂಡ ಎರಡರಷ್ಟು ವೇಗವಾಗಿ ಹೊಡೆದುಕೊಳ್ಳತೊಡಗುತ್ತದೆ.  ಹೀಗೆ, ದೇಹವನ್ನು ಅತಿಯಾಗಿ "ಶಿಕ್ಷಿಸುವ" ಕಾಯಕವಾದ ಓಡುವಿಕೆ, ಎಲ್ಲರಿಗೂ ಹೇಳಿ ಮಾಡಿಸಿದ್ದಲ್ಲ.  ಅಕಸ್ಮಾತ್, ತನಗೆ ಗೊತ್ತಿಲ್ಲದೇ ಹೃದಯ ಸಂಬಂಧಿ ಖಾಯಿಲೆಗೆ ತೊಡಗಿದ ವ್ಯಕ್ತಿ, ಸ್ಥಳದಲ್ಲೇ ಸತ್ತು ಹೋಗುವ ಅಪಾಯವಿದೆ.  ಆದ್ದರಿಂದ, ಓಡುವ ಇಷ್ಟ ಇರುವ ಯಾರಾದರೂ ತಮ್ಮ ಓಡುವ ವೇಗ ಹಾಗೂ ದೂರವನ್ನು ನಿಧಾನವಾಗಿ ಹೆಚ್ಚಿಸಿಕೊಂಡು ತಮ್ಮ ಫಿಟ್‌ನೆಸ್ ಅನ್ನು ಪರೀಕ್ಷಿಸಿಕೊಳ್ಳುವುದು ಸಾಮಾನ್ಯ.

ಮೊದಮೊದಲು ಅರ್ಧ, ಒಂದು, ಎರಡು... ಮೂರು ಹೀಗೆ ನಿಧಾನವಾಗಿ ಮೈಲುಗಳನ್ನು ಓಡುತ್ತಾ ಬಂದಾಗ ದೇಹಕ್ಕೆ ಅಭ್ಯಾಸವಾಗತೊಡಗಿ ನಿಧಾನವಾಗಿ ದಿನೇದಿನೇ ಮೈಲುಗಳು ಹೆಚ್ಚುತ್ತಾ ಹೋಗುತ್ತವೆ.  ಹೀಗೆ ಒಂದೆರಡು ವರ್ಷ ವಾರಕ್ಕೆ ಕನಿಷ್ಥ ಪಕ್ಷ ಮೂರು ಬಾರಿಯಾದರೂ ಓಡುತ್ತಾ ಹೋದರೆ ಆಗ ಮ್ಯಾರಥಾನ್ ಓಡುವಷ್ಟು ಆತ್ಮವಿಶ್ವಾಸ ಮೂಡುತ್ತದೆ.  ಓಡುವುದಕ್ಕೆ ಅನುವಾಗುವಲ್ಲಿ ದೇಹದ ಕೆಲಸ ಎಷ್ಟು ಮುಖ್ಯವೋ ಮನಸ್ಸಿನ ಕೆಲಸವೂ ಅಷ್ಟೇ ಮುಖ್ಯ.  ಅವರೆಡರ ತಾಳಮೇಳವಿಲ್ಲದಿದ್ದಲ್ಲಿ ಒಂದು ಮೈಲು ಓಡುವುದೂ ಅಸಾಧ್ಯವಾದೀತು.
***

ನಾನೇಕೆ ಓಡುತ್ತೇನೆ?
ಈ ಪ್ರಶ್ನೆಯನ್ನು ಕೇಳಿಕೊಂಡಾಗಲೆಲ್ಲ ಅನೇಕ ಉತ್ತರಗಳು ಹೊಳೆಯುತ್ತವೆಯಾದರೂ, ಅವುಗಳಲ್ಲೆಲ್ಲಾ ಮುಖ್ಯವಾದುದು "ಅದು ಒಂದು ರೀತಿಯ ಮೆಡಿಟೇಶನ್ ಇದ್ದ ಹಾಗೆ".  You compete against yourself and you meditate as you run!


***
ಕಳೆದ ವರ್ಷ (2019) ಉತ್ತರ ಅಮೇರಿಕದಲ್ಲಿ ಮ್ಯಾರಥಾನ್ ಓಟವನ್ನು ಪೂರೈಸಿದವರ ಸಂಖ್ಯೆ:

    MonthRacesFinishers
    January4028,589
    February4614,220
    March7146,252
    April7355,060
    May8642,352
    June6123,344
    July259,012
    August426,744
    September9419,964
    October107122,194
    November6190,903
    December2941,050

    2019 gÀ°è 53,518 d£ÀgÀÄ £ÀÆå AiÀiÁPïð ¹n ªÀiÁågÀxÁ£ï C£ÀÄß ¥ÀÇgÉʹzÀgÀÄ.
    GvÀÛgÀ CªÉÄÃjPÀzÀ mÁ¥ï 10 ªÀiÁågÀxÁ£ï NlªÀ£ÀÄß DAiÉÆÃf¹zÀ £ÀUÀgÀUÀ¼ÀÄ ºÁUÀÆ ¥ÀÇgÉʹzÀªÀgÀÄ.

    RaceFinishers
    New York City Marathon53,518
    Chicago Marathon45,858
    Boston Marathon26,632
    Los Angeles Marathon20,081
    Honolulu Marathon18,804
    Marine Corps Marathon18,357
    Walt Disney World Marathon11,968
    Philadelphia Marathon10,068
    California International Marathon7,504
    Twin Cities Marathon6,747

    NqÀ®Ä DtªÁVgÀĪÀ d£À¸ÁUÀgÀ!

    Tuesday, April 07, 2020

    ಕೊರೋನಾ ವೈರಸ್ - ಚೈನಾದ ಅತಂತ್ರವೋ, ಕುತಂತ್ರವೋ?

    ಈ ವೈರಸ್ ಹಾವಳಿ ಜನವರಿಯಲ್ಲಿ ಎಲ್ಲ ಕಡೆಗೆ ಹಬ್ಬುತ್ತಿದ್ದಂತೆ ಅನೇಕ ಸಿದ್ಧಾಂತಗಳು (theories) ಹುಟ್ಟಿದವು, ಕೆಲವು ಮರು ಹುಟ್ಟು ಪಡೆದವು.  ವುಹಾನ್ ನಗರ (ಹುಬೈ ಪ್ರಾಂತ್ಯ) ಸಂಪೂರ್ಣವಾಗಿ ಮುಚ್ಚಿದ ನಂತರ, ಚೈನಾಕ್ಕೆ ಹೋಗುವ ಚೈನಾದಿಂದ ಬರುವ ಎಲ್ಲ ಪ್ರಯಾಣಿಕರು ಕಡಿಮೆಯಾದ ಮೇಲೆ, ಇಡೀ ವಿಶ್ವವೇ ಚೈನಾದ ಬೆಳವಣಿಗೆಗಳನ್ನು ಬಿಟ್ಟ ಕಣ್ಣು ಮಿಟುಕಿಸದೆ ನೋಡತೊಡಗಿತು.  ಒಂದಿಷ್ಟು ಜನ (ರಾಷ್ಟ್ರಗಳು) ತಮ್ಮ ದೇಶಕ್ಕೆ ಈ ವೈರಸ್ಸಿನಿಂದ ತೊಂದರೆಯಾದೀತೆಂದು ಮುಂಜಾಗರೂಕತೆ ಕ್ರಮವನ್ನು ಕೈಗೊಂಡರು.  ಮತ್ತಿನ್ನೊಂದಿಷ್ಟು ಜನ ಆ ನಿಟ್ಟಿನಲ್ಲಿ ತಮ್ಮ ನಿರ್ಧಾರಗಳನ್ನು ಪ್ರಕಟಿಸುವಾಗ ವಿಳಂಬದಿಂದಾಗಿ ಅದಕ್ಕೆ ತಕ್ಕ ಬೆಲೆಯನ್ನು ತೆರಬೇಕಾಗಿ ಬಂತು.  ಈಗ ಕಳೆದ ಆರೇಳು ವಾರಗಳಿಂದ (ಮಾರ್ಚ್ ೧ ರಿಂದ ಏಪ್ರಿಲ್ ೭ ರವರೆಗೆ) ಕರೋನಾ ವೈರಸ್ (covid-19) ನಮ್ಮ ಜನ ಜೀವನದಲ್ಲಿ ನೆಲೆ ನಿಂತಿದೆ.  ಇನ್ನೂ ಎರಡು ತಲೆ ಮಾರುಗಳಿಗಾಗುವಷ್ಟು ನಮಗೆಲ್ಲ ಪಾಠವನ್ನು ಕಲಿಸಿದೆ.

    ಈ ಶತಮಾನದ ದೊಡ್ಡ ದುರಂತ, ಮಹಾವ್ಯಾಧಿ, ಸೋಂಕು, ಸಾಂಕ್ರಾಮಿಕ ರೋಗ, ಶಾಪ - ಇನ್ನೂ ಮೊದಲಾದ ಹೆಸರಿನಿಂದ ಕರೆಸಿಕೊಂಡು ತನ್ನ ಪರಿಣಾಮವನ್ನು ದೊಡ್ಡ ದೊಡ್ಡ ಅಕ್ಷರಗಳಲ್ಲಿ ಬರೆದುಕೊಂಡು, ಇನ್ನು ಇನ್ನೂರೈವತ್ತು ವರ್ಷವಾದರೂ, 2020ರ ಈ ಅನುಭವವನ್ನು ಜನರು ತಮ್ಮ ಹಾಡು-ಹಸೆಗಳಲ್ಲಿ ಮೆಲುಕುಹಾಕುವಂತೆ ಮಾಡುವ, ಚೈನಾದಿಂದ ಆರಂಭಿಸಿದ ಈ ಪ್ರಭಾವಿ ವೈರಸ್ಸಿನ ಅಭಿಯಾನವನ್ನು ಮಾನವ ನಿರ್ಮಿತ (ಕುತಂತ್ರ) ಎನ್ನೋಣವೋ ಅಥವಾ ಮಾನವನಿಗೆ ಮೀರಿದ (ಅತಂತ್ರ)ವೆಂದು ಕರೆಯೋಣವೋ?  ಈಗ ನಮಗೆ ಲಭ್ಯವಿರುವ ವಿಚಾರಗಳ ವಿನಿಮಯವೇ ಈ ಬರಹ.  ಕುತಂತ್ರವೋ-ಅತಂತ್ರವೋ ಎನ್ನುವ ತೀರ್ಮಾನ ನಿಮ್ಮದು!

    ***
    ಅತಂತ್ರ: ಚೈನಾದವರು ಬಹುಪ್ರಾಣಿ ಭಕ್ಷಕರು - ಒಂದು ರೀತಿಯಲ್ಲಿ ಮಾಂಸ ಪ್ರಿಯರು, ಅದರಲ್ಲೂ ಅನೇಕ ಕಾಡು ಪ್ರಾಣಿಗಳನ್ನು ಫಾರ್ಮ್‌ಗಳಲ್ಲಿ ವ್ಯವಸ್ಥಿತವಾಗಿ ಅವುಗಳನ್ನು ಬೆಳೆಸಿ ತಮ್ಮ exotic cuisine ನಲ್ಲಿ ಬಳಸುವವರು.  ಚಿಕ್ಕ ಇರುವೆಗಳಿಂದ ಹಿಡಿದು, ಹಾರುವ ಬಾವುಲಿಯವರೆಗೆ, ಮೀನುಗಳಿಂದ ಹಿಡಿದು ಸರೀಸೃಪಗಳವರೆಗೆ (ಇವರು ಮನುಷ್ಯರನ್ನು ಮಾತ್ರ ತಿಂದ ನಿದರ್ಶನಗಳು ಸಿಗವು), ಅಂದರೆ ಉಳಿದೆಲ್ಲ ಜೀವಿಗಳು ಮಿಲಿಯನ್ನುಗಟ್ಟಲೆ ಚೈನಾ ದೇಶದ ಜನರ ಉದರವನ್ನು ಪೋಷಿಸಿರುವುದಕ್ಕೆ ಬಹಳ ನಿದರ್ಶನಗಳು ಸಿಕ್ಕಾವು.

    ನಾವು ಅಮೇರಿಕದಲ್ಲಿ ಇಂಡಿಯನ್ ಸ್ಟೋರು, ರೆಸ್ಟೋರಂಟುಗಳಿಗೆ ಹೋದಾಗ ಒಂದು ರೀತಿಯ (ಕಮಟು) ವಾಸನೆ ನಮಗೆ ಎದುರಾಗುತ್ತದೆ.  ನಾವು ಭಾರತೀಯರಿಗೆ ಅದು ನಮಗೆ ಗೊತ್ತಾಗದಷ್ಟು ಹೊಂದಾಣಿಕೆಯಾಗಿರುತ್ತದೆ. (ನಮ್ಮ ಪಕೋಡಾ ಅಥವಾ ದೋಸೆ ವಾಸನೆ ನಮಗೆ ಪ್ರಿಯವಾಗಿರಬಹುದು, ಆದರೆ, ಅದು ಎಲ್ಲರಿಗೂ ಇಷ್ಟವಾಗಬೇಕು ಎಂದೇನೂ ಇಲ್ಲ). ಅದೇ ರೀತಿ ನಾವು ಕೊರಿಯನ್, ವಿಯಟ್‍ನಾಮೀಸ್, ಚೈನೀಸ್ ಅಂಗಡಿಗಳಿಗೆ ಹೋದಾಗ, ಇನ್ನೊಮ್ಮೆ ಇಲ್ಲಿ ಬರಬಾರದು ಎನ್ನುವಷ್ಟರ ಮಟ್ಟಿಗೆ ಅಲ್ಲಿ ಗಬ್ಬುನಾತ ಹೊಡೆಯುತ್ತಿರುತ್ತದೆ.  ಇವರುಗಳು ಜೀವವೈವಿಧ್ಯವನ್ನು ನೋಡುವ ರೀತಿ ನಮಗಿಂತಲೂ ಭಿನ್ನ.  ಕೊಳೆಯಾದ ಗಾಜಿನ ಅಕ್ವೇರಿಯಂ‌ನಲ್ಲಿ ತುಂಬಿಕೊಂಡು ದಯನೀಯ ಸ್ಥಿತಿಯಲ್ಲಿರುವ ಮೀನುಗಳು, ಏಡಿಗಳು, ಮೊದಲಾದ ಪ್ರಾಣಿಗಳನ್ನು ಅಲ್ಲಿ ನೋಡಿ ಖೇದವೆನಿಸುತ್ತದೆ.  ಅದು ಅವರಿಗೆ ಸಹನೀಯವಾದದ್ದು, ಅವರ ಧರ್ಮದಲ್ಲಿ (ಜೀವನಕ್ರಮ) ಅದು ಯಾರಿಗೂ ದೊಡ್ಡದೆನಿಸುವುದಿಲ್ಲ. ಇಂತಹ ಸಂದರ್ಭದಲ್ಲಿ, ಚೈನಾದ ವುಹಾನ್‌ನ ಒಂದು ಮಾರುಕಟ್ಟೆಯಲ್ಲಿ ಒಂದರ ಮೇಲೂಂದು ಹೇರಿಸಿಟ್ಟ ಕೇಜುಗಳಲ್ಲಿ ಒಂದು ಪ್ರಾಣಿಯ ಎಂಜಲು-ಗಲೀಜು ಮತ್ತೊಂದು ಪ್ರಾಣಿಯ ಜೊತೆ ಸಂಘರ್ಷ ಉಂಟಾದಾಗ ಹುಟ್ಟಿದ್ದು ಈ ವಿಭಿನ್ನ ವೈರಸ್ ಎಂದು ಕೆಲವು ಕಡೆ ಹೇಳಲಾಗಿದೆ.  ಅದೇ ರೀತಿ ಬಾವುಲಿಗಳನ್ನು (bats) ಕತ್ತರಿಸುವಾಗ ಅದರ ರಕ್ತದಲ್ಲಿ ಇದ್ದ ವೈರಸ್ಸು ಒಬ್ಬರಿಂದ ಮತ್ತೊಬ್ಬರಿಗೆ ತಗುಲು ಬೆಳೆಯಿತು ಎಂದೂ ಹೇಳಲಾಗುತ್ತದೆ.

    ಒಮ್ಮೆ ಹೀಗೆ ಜನರಿಂದ ಜನರಿಗೆ ಬೆಳೆದ ವೈರಸ್ಸು ಡಿಸೆಂಬರ್‌ನಲ್ಲಿ ಸುದ್ದಿ ಮಾಡಿದರೂ ಚೈನಾ ಅದನ್ನು ತಕ್ಷಣ ದೊಡ್ಡದು ಮಾಡಲಿಲ್ಲ, ಅದು ಬೆಳೆದು ಪ್ರಕೋಪಕ್ಕೆ ತಿರುಗಿದ ನಂತರ ಎಲ್ಲ ಕಡೆಗೆ ಸುದ್ದಿಯಾಯಿತು.  ವುಹಾನ್ ಅನ್ನು ಸಂಪೂರ್ಣವಾಗಿ ಬಂದ್ ಮಾಡಲಾಯಿತು.  ಜನರನ್ನು ಮನೆಗಳಲ್ಲಿ ಅಮಾನವೀಯ ರೀತಿಯಲ್ಲಿ ಕೂಡಿ ಹಾಕಲಾಯಿತು.  ಇದು ಅವರ ಅತಂತ್ರ ಸ್ಥಿತಿಗೆ ಹಿಡಿದ ಕನ್ನಡಿ.  ಕೊನೆಗೆ ಕಡಿಮೆ ಸಾವುಗಳನ್ನು ದಾಖಲಿಸಿ (ಸೋಂಕು ತಗುಲಿದವರ ಮತ್ತು ಸತ್ತವರ percentage ಪ್ರಕಾರ ನೋಡಿದರೆ), ಈಗ ಏನೂ ಆಗೇ ಇಲ್ಲವೆನ್ನುವಂತೆ ಮೊದಲೇ expression ಇರದ ಮುಖಗಳು ಈಗಂತೂ ಮುಖ ಗಂಟು ಹಾಕಿಕೊಂಡ ಹಾಗೆ ಎಲ್ಲ ಕಡೆ ಕಂಡು ಬರುತ್ತದೆ.

    ಕಳೆದ ಹತ್ತು ವರ್ಷಗಳಲ್ಲಿ ಸಾರ್ಸ್, H1-N1, ಹಕ್ಕಿ ಜ್ವರ ಮೊದಲಾದವುಗಳಿಂದ ಪೂರ್ವೋತ್ತರ ದೇಶಗಳು ಬಳಲಿದ್ದವು, ಅದರಿಂದಾಗಿ ಈ ಕೋವಿಡ್-19 ಅನ್ನು ಎದುರಿಸಲು ಅವೆಲ್ಲ ದೇಶಗಳು ಪರೋಕ್ಷವಾಗಿ ತಯಾರಾಗಿದ್ದವು.  ಆದರೆ, ಕೆಲವು ಯೂರೋಪಿಯನ್ ದೇಶಗಳು ಮತ್ತು ಅಮೇರಿಕದಲ್ಲಿ ಈ ರೀತಿ ಹಿಂದೆಂದೂ ಆಗಿರದ ಕಾರಣದಿಂದ, ಮೊಟ್ಟ ಮೊದಲನೇ ಬಾರಿಗೆ ಇಲ್ಲಿಯ ಜನ (ಈ ಪ್ರಮಾಣದಲ್ಲಿ) ಸಂಕಷ್ಟವನ್ನು ಅನುಭವಿಸಬೇಕಾಗಿ ಬಂತು ಎನ್ನುವುದು ಅನೇಕರ ಅಂಬೋಣ.

    ***
    ಕುತಂತ್ರ: ಚೈನಾದವರು ಮಹಾ ಬುದ್ದಿವಂತರು.  ವುಹಾನ್ ಹತ್ತಿರದ ತಮ್ಮ ಮಿಲಿಟರಿ ಲ್ಯಾಬೋರೇಟರಿ ಒಂದರಲ್ಲಿ ಈ ಹೊಸ ವೈರಸ್ಸನ್ನು ಸೃಷ್ಟಿಸಿ ಜಗತ್ತಿಗೇ ಬಿಡುಗಡೆ ಮಾಡಿ ಜಗತ್ತನ್ನು ಆಳುವ ಯೋಚನೆ ಹೊಂದಿದ್ದರು.  ಅಥವಾ ಲ್ಯಾಬ್‍ನಲ್ಲಿದ್ದ ವೈರಸ್ಸು ಯಾರದ್ದೋ ತಪ್ಪಿನಿಂದ ಹೊರಗೆ ಬಂದಿತೆಂದು ಅನೇಕ ಕಡೆ ಓದಲು ಸಿಗುತ್ತದೆ.  ಹಾಗಾಗಿ, ಹುಬೈ ಪ್ರಾಂತ್ಯದಲ್ಲಿ ಮೊದಲು ಇದರ ಪರಿಚಯವಾಯಿತು.  ಆದರೆ, ಇದರ ಪರಿಣಾಮ ಉಳಿದ ರಾಜ್ಯಗಳ ಮೇಲೆ ಅಷ್ಟೊಂದು ಆಗಲಿಲ್ಲ.

    ನೀವೇ ಯೋಚಿಸಿ: ವುಹಾನ್ ನಿಂದ ಇಂಟರ್‌ನ್ಯಾಷನಲ್ ಪ್ರಯಾಣಿಕರ ಮುಖೇನ ಅನೇಕ ದೇಶಗಳಿಗೆ ಈ ಕೊರೋನಾ ವೈರಸ್ ಹರಡಿರುವಾಗ, ಆಂತರಿಕ ಚೈನಾದೊಳಗೇ ಇದು ಬೇರೆ ಕಡೆ ಏಕೆ ಹಬ್ಬಲಿಲ್ಲ?  ಚೈನಾದ ಅಂಕಿ-ಅಂಶಗಳನ್ನು ನಂಬಬೇಕೋ ಬಿಡಬೇಕೋ ಗೊತ್ತಿಲ್ಲ, ಆದರೂ ಅವರು ಹೇಳುವ ಹಾಗೆ ಬರೀ ಹುಬೈ ಪ್ರಾಂತ್ಯದಲ್ಲಿ ಮಾತ್ರ ಸಾವುಗಳಾಗಿವೆಯೇ? ಒಂದೂವರೆ ಬಿಲಿಯನ್‌ನಷ್ಟು ಜನರಿರುವ ಚೈನಾದಲ್ಲಿ (ಈ ಲೇಖನ ಬರೆಯುವ ಹೊತ್ತಿಗೆ) ಕೇವಲ 81,802 ಜನರಿಗೆ ಸೋಂಕು ತಗಲಿದ್ದು, ಅವರಲ್ಲಿ ಕೇವಲ 3,333 ಜನರು ಮಾತ್ರ ಸಾವಿಗೆ ಈಡಾಗಿದ್ದಾರೆ ಎಂದರೆ ಹೇಗೆ ನಂಬುವುದು.  ಸೋಂಕು ತಗುಲಿದವರ ಸಂಖ್ಯೆಯಲ್ಲಿ (330 ಮಿಲಿಯನ್ ಜನರಿರುವ) ಅಮೇರಿಕ 396,981 ಒಟ್ಟು ಕೇಸುಗಳನ್ನು ದಾಖಲಿಸಿ ಅವರಲ್ಲಿ 12,758 ಜನರು ಮರಣ ಹೊಂದಿರುವುದನ್ನು ಪ್ರಕಟಿಸಿರುವುದನ್ನು ನೀವೇ ನೋಡಬಹುದು.  ಅಲ್ಲದೇ ಒಂದೂವರೆ ಬಿಲಿಯನ್ ಜನರಿರುವ ಚೈನಾ ಇವತ್ತಿಗೆ ಒಟ್ಟು ಕೇಸುಗಳಲ್ಲಿ ಉಳಿದ ರಾಷ್ಟ್ರಗಳಿಗೆ ಹೋಲಿಸಿದಾಗ ಐದನೇ ಸ್ಥಾನಕ್ಕೆ ಇಳಿದಿರುವುದನ್ನೂ ನೋಡಬಹುದು.


    Image 1: COVID-19 World view (April 07, 2020 at 9:23 PM ET)



    Image 2: COVID-19 China view (April 07, 2020 at 9:23 PM ET)

    ಇನ್ನು ಎರಡನೆಯ ಚಿತ್ರದಲ್ಲಿ, ಹುಬೈ ಪ್ರಾಂತ್ಯದ ಒಟ್ಟು ಕೇಸುಗಳು 67,803.  ಉಳಿದ 30 ರಾಜ್ಯಗಳಲ್ಲಿ ಉಳಿದ ಹದಿಮೂರು ಸಾವಿರ ಕೇಸುಗಳು ಚದುರಿರುವುದನ್ನು ಕೂಡ ಕಾಣಬಹುದು.
    ಈ ಅಂಕಿ-ಅಂಶಗಳ ಪ್ರಕಾರ, ಚೈನಾದವರು ಬರೀ ಇಂಟರ್‌ನ್ಯಾಷನಲ್ ಪ್ರಯಾಣಿಕರೆಂದೋ ಅಥವಾ ಅವರ ಪ್ಯಾಕೇಜು/ಪಾರ್ಸೆಲ್ಲುಗಳ ಮೂಲಕ ಪ್ರಪಂಚದಾದ್ಯಂತ ಕೋವಿಡ್ ಹರಡಿತೆಂದು ಊಹಿಸಬಹುದು.  ಇಲ್ಲವೆಂದರೆ, ಅವರ ನಂಬರುಗಳು ಖಂಡಿತ ನಂಬಲರ್ಹವಲ್ಲದವು.  ಉದಾಹರಣೆಗೆ, ಹುಬೈ ಪ್ರಾಂತ್ಯದಿಂದ ಚೈನಾದ ಉಳಿದ ದೊಡ್ಡ ನಗರಗಳಿಗೆ ಜನರು ಹೋಗೇ ಇಲ್ಲವೇ? ನಮ್ಮ ನ್ಯೂ ಯಾರ್ಕ್‌ ನಗರದಲ್ಲಿ ಇಷ್ಟೊಂದು ಜನರು ಬಳಲುತ್ತಿರುವಾಗ ಚೈನಾದ ನಗರಗಳು ನಿರಾತಂಕವಾಗಿರಲು ಕಾರಣವೇನು?

    ***
    ಇದು ಚೈನಾದವರ ಅತಂತ್ರವೋ, ಕುತಂತ್ರವೋ... ಅದನ್ನು ನಿಮ್ಮ ತೀರ್ಮಾನ, ಅಭಿಪ್ರಾಯಗಳಿಗೇ ಬಿಡೋಣ.  ಆದರೆ, ಇಷ್ಟಂತೂ ಖಂಡಿತ: ಇದರಿಂದಾಗಿ/ಇವರಿಂದಾಗಿ ವಿಶ್ವದಾದ್ಯಂತ ಅನೇಕ ವ್ಯಾಪಾರ ವಹಿವಾಟುಗಳು ನೆಲಕಚ್ಚಿದವು.  ಅನೇಕರ ರಿಟೈರ್‌ಮೆಂಟ್ ಹಣ ಕೆಲವೇ ವಾರಗಳಲ್ಲಿ ಮಾಯವಾಯಿತು.  ಎಷ್ಟೋ ಜನರು ಹಸಿವಿನಿಂದ ಬಳಲುವಂತಾಯ್ತು.  ನಾವು ಇನ್ನಾರು ವಾರಗಳಲ್ಲಿ ಹೊರಗೆ ಹೊರಟರೂ ನಮ್ಮ ಅರ್ಥ ವ್ಯವಸ್ಥೆ ಇದರಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ ಕೆಲವೇ ವರ್ಷಗಳೇ ಬೇಕಾಗುತ್ತದೆ.

    ಇದು ಮಾನವನ ದೌರ್ಜ್ಯನ್ಯಕ್ಕೆ ನಿಸರ್ಗ ಕೊಟ್ಟ ಪೆಟ್ಟು ಎಂದು ಒಂದಿಷ್ಟು ಜನ ನಂಬಿಕೊಂಡಿದ್ದಾರೆ, ಇನ್ನು ಕೆಲವರು ಇದು ಮಾನವ ನಿರ್ಮಿತ ಹೊಗೆ ಬರದ ನ್ಯೂಕ್ಲಿಯರ್ ಬಾಂಬು ಎಂದು ಚೈನಾದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ!

    Sunday, April 03, 2016

    ...ಸಂಡಾಸ್ ರೂಮ್ ನೋಡೀರೇನು?

    ನಾವು ದೋಡ್ಡೋರ್ ಆದ ಮ್ಯಾಲೆ ನಮ್ಮನಿ ಚಿಕ್ಕ್ ಮಕ್ಕಳಿಗೆ "ಹಂಗ್ ಮ್ಯಾಡಬ್ಯಾಡs", "ಹಿಂಗ್ ಮಾಡ್‌ಬ್ಯಾಡಾs" ಅಂತ ಭಾರೀ ಉಪದೇಶ ಏನೋ ಮಾಡ್ತೀವಿ.  ಆದ್ರ, ನಾವು ಚಿಕ್ಕೋರಾಗಿದ್ದಾಗ ಮಾಡಿದ ಚ್ಯಾಷ್ಟೇ-ಕುಚೇಷ್ಟೇಗಳಿಗೆ ಲೆಕ್ಕ ಇಟ್ಟೋರಾರು ಅಂತ ಒಂದ್ ಸರ್ತೀನಾರ್ದೂ ಯೋಚ್ನೇ ಮಾಡೇವೇನು?

    "ಹಂಗ್ ಮಾಡಬ್ಯಾಡೋ ತಮ್ಮಾ..." ಅಂತ ನಮ್ಮನಿ ಮಕ್ಕಳಿಗೆ ಈಗ ಹೇಳೋದೇನೋ ಭಾಳ ಐತ್ರಿ, ಆದ್ರ ನಾವ್ ಆಗಿನ್ ಕಾಲದಾಗ ಮಾಡಿದ್ದು ಒಂದೊಂದ್ ಅಲ್ಲ, ಅವನ್ನೆಲ್ಲ ನೆನೆಸಿಕೊಂಡ್ರೆ ಈಗ್ಲೂ ನಗೂ ಬರ್ತತ್ ನೋಡ್ರಿ.
    ನಮ್ ಪಾಳ್ಯಾದೊಳಗ ಗಿರಿ ನಮ್ ಲೀಡರ್ರು. ಅವನ ಹಿಂಬಾಲಕರಾಗಿ ನಾವು ನಾಲ್ಕು ಮಂದಿ: ಸುನೀಲ, ರಮೇಶ, ಸುರೇಶ ಮತ್ತ ಹಸುವಿನ ಪ್ರತಿರೂಪ ಅನ್ನೋ ಹಂಗs ನಾನೂ, ಒಂಥರ ಆಟಕ್ಕುಂಟು ಲೆಕ್ಕಕ್ಕಿಲ್ಲ ಅಂತಾರಲ್ಲ ಹಂಗs.  ಗಿರಿ ಆಗಿನ ಕಾಲದ ಬ್ರೇಕ್ ಥ್ರೂ ಮನುಷ್ಯಾ ರೀ.  ಬ್ರೇಕ್ ಥ್ರೂ ಅಂದ್ರ ಬ್ರೇಕೂ ಹೌದು ಥ್ರೂ ನೂ ಹೌದು!  ಅವನ್ದೆಲ್ಲಾ ಕಪಿಚೇಷ್ಟೆಗಿಂತ ಅದರ ಅಪ್ಪನ್ನದ್ದು ಅಂತಾರಲ್ಲ ಹಂಗs.  ಅವನ ಚೇಷ್ಟಿ ಒಳಗ ಕೆಲವೊಂದಿಷ್ಟು ಫಸ್ಟ್ ಕ್ಲಾಸು, ಇನ್ನು ಕೆಲವೊಂದು ಥರ್ಡ್ ಕ್ಲಾಸು.  ಮಂಗ್ಯಾನಂಗ್ ಆಡಬ್ಯಾಡ ಅಂಥಾ ನೀವ್ ಏನ್ ಕರೀತಿರಿ ಅವೆಲ್ಲ ಫಸ್ಟ್ ಕ್ಲಾಸು, ಅವನ ಚೇಷ್ಟೀ ಇಂದ ಯಾವನಾರಾs ಅಳಂಗ್ ಆದ್ರೆ, ಅದು ಥರ್ಡ್ ಕ್ಲಾಸು.  ಇನ್ನು ನಾವಂತೂ ಎಂದೂ ಸೆಕೆಂಡ್ ಕ್ಲಾಸ್ ಚೇಷ್ಟೇ ಅಂದ್ರ ಏನು ಅಂತ ಯಾವತ್ತೂ ಯಾರ್‌ನೂ ಕೇಳಿದ್ದಿಲ್ಲ!

    ಗಿರಿ ಮತ್ತು ಅವನ ಗ್ಯಾಂಗಿನ ಕುತಂತ್ರಗಳಿಗೆ ಬಲಿ ಬೀಳದ ನಮ್ಮೂರಿನಾಗ ಜನರೇ ಇಲ್ಲ ಅನ್ನಬಕು. ನೀವು ನಮ್ ಬಂಡ್ ಭಾಳ್ವಿಗಿ ಸಾಕ್ಷಿ ಆಗಿಲ್ಲ ಅಂದ್ರs ಒಂಥರಾ ನಮ್ಮೂರಿನ ಸಿಟಿಜನ್‌ಶಿಪ್ ಪರೀಕ್ಷಾದಾಗ ಫೇಲ್ ಆದಂಗ್ ನೋಡ್ರಿ!  ಒಂದ್ ಊರು ಅಂದ್ರ ಎಲ್ಲಾ ಥರದ ಮಂದಿ ಇರ್ತಾರ, ಆದ್ರ ನಮ್ ಗಿರಿ ಅಂಥಾ ಮನ್ಶ್ಯಾರು ಬಾಳ್ ಮಂದಿ ಇದ್ದಂಗಿಲ್ಲ ಅನ್ನೋದು ನಮ್ ಅಂಬೋಣ.

    ನಿಮಗೂ ನಮ್ಮ ತಂಡಕ್ಕೂ ಯಾವತ್ತಾದ್ರೂ ಮುನಿಸಾತು ಅಂದ್ರ, ನಿಮ್ಮ ಮನ್ಯಾಗ ಸೈಕಲ್ಲೋ ಲೂನಾನೋ ಟಿವಿಎಸ್ಸೋ ಇದ್ರs, ಅದ್ರ ಚಕ್ರದಾಗಿನ ಹವಾ ಟುಸ್ಸ್ ಅಂದಂಗs ಅಂಥ ತಿಳಕೊಳ್ರಿ.  ಅದ್ಯಾವ ಮಾಯದಾಗ ಗಿರಿ ಬರ್ತಿದ್ನೋ... ನಿಮ್ಮನಿ ಮುಂದ ನಿಲ್ಸಿರೋ ಟೂ ವ್ಹೀಲರಿನ ಹವಾ ಇದ್ದಕ್ಕಿದ್ದಂಗ ನಾಪತ್ತೆ ನೋಡ್ರಿ!  ಈ ಟೂ ವ್ಹೀಲರ್ ಹವಾ ಕಳೆದುಕೊಂಡ ಮ್ಯಾಲೆ ಅದನ್ನ ತಳ್ಳೋದು ಎಷ್ಟು ಕಷ್ಟ ಅಂಥ ನಿಮಗ ಗೊತ್ತಿರಲಿಕ್ಕಿಲ್ಲ, ಯಾವತ್ತರ ಟ್ರೈ ಮಾಡಿ ನೋಡ್ರಿ.  ಹವಾ ಕಳಕೊಂಡ ಅದರ ಟ್ಯೂಬಿನೊಳಗೆ ವಾಷರ್ ಒಡೆದು ಹೋಗಿರೋ ಸೈಕಲ್ ಪಂಪ್ ಬಳಸಿ, ಪೆಚ್ಚ್ ಮೋರೇ ಹಾಕ್ಕೊಂಡು, ಹವಾ ತುಂಬೋದು ಅಂದ್ರs ಅದರ ಪಜೀತಿ ಯಾವ ವೈರಿಗೂ ಬ್ಯಾಡ.  ಹವಾ ಹೊಡ್ದೂ ಹೊಡ್ದೂ ಕೈ ಮೈ ನೋವ್ ಬಂದಂಗs.
    ಯಾರ್ದಾರೂ ಮನಿ ಹಿತ್ಲಾಗ ಬಾಳೆ ಗೊನಿ ಇನ್ನೇನು ಕಟಾವಿಗೆ ಬಂತೂ ಅಂದ್ರ, ಅದು ಅದರ ಹಿಂದಿನ್ ದಿನಾ ಅದು ಮಂಗ್ ಮಾಯಾ ನೋಡ್ರಿ! ನಮ್ ಗಿರಿ ಹತ್ರ ಯಾರ್ ಹಿತ್ಲಾಗ್ ಯಾವ್ ಫಲ ಎಷ್ಟು ದಿನದಾಗ ಕಟಾವಿಗೆ ಬರ್ತತಿ ಅನ್ನೋದರ ಮಾಹಿತಿ ಭಾಳ್ ಛೊಲೋ ಇತ್ ನೋಡ್ರಿ. ಅವನ ತಲೀ ಒಡೋದೇ ಹಂಗs.  ಮಾವಿನ್ ತೋಪ್‌ನ್ಯಾಗೆ ಕಾಯೋರು ನಮ್ಮನ್ನ ನೋಡ್ರಿದ್ರೆ ದೇವ್ರು ಬಂದೋರಂಗ ಆಡೋರು!  ಎಲ್ಲಾರೂ ಗುರಿ ಇಟ್ಟ್ ಕಲ್ ಹೋಡ್ದು ಒಂದು ಫಲ ಉದುರಿಸಿದ್ರೆ, ನಮ್ಮ್ ತಂಡ ಇಡೀ ಮರಾನೇ ಖಾಲೀ ಮಾಡೋದು... ಮರಾ ಒಂದೇ ಅಲ್ಲ್ ಇರ್ತಿತ್ತು, ಯಾಕಂದ್ರ ಮತ್ತ್ ಮುಂದಿನ ವರ್ಷಕ್ಕ್ ಬೇಕ್ ಅಲ?
    ಅಷ್ಟೂ ಮಾಡಿ ನಮಗೆಲ್ಲಾ ಅವಾಗ ಛಾಟೀ ಬಿಲ್ಲಿನ ಹುಚ್ಚು ರೀ.  ಅದರೊಳಗ ಪರಿಣಿತ ಅಂದ್ರ ನಮ್ ಗಿರಿ.  ಅವನ ಗುರಿ ಭಾಳಾ ನಿಖರ.  ನಮ್ ಶಾಲೀ ಕಟ್ಟೀ ಮುಂದ ಧ್ವಜಾ ಹಾರ್ಸೋ ಕಂಬಕ್ಕ ಸುಮಾರು ಐವತ್ತ್ ಏನು, ನೂರ್ ಅಡೀ ದೂರ್ದಿಂದ ಗುರಿ ಇಡೋನ್ ರೀ. ಅದು ಒಂದಿನಾನು ತಪ್ಪಿದ್ದು ನಾ ನೋಡಿಲ್ಲ.  ಅಷ್ಟೂ ಮಾಡಿ ನಿಮಗ ಏನಾರಾ ಗಿರಿ ಕಂಡ್ರ ಆಗಂಗಿಲ್ಲ ಅಂದ್ರ, ನಿಮಗೂ ಛಾಟೀ ಬಿಲ್ಲಿನ ಕಲ್ಲಿನ ಏಟು ಕುಂಡೀ ಮ್ಯಾಲ ಬಿತ್ತೂ ಅಂತಾನs ಲೆಕ್ಕ.

    ಎಲ್ರೂ ಊಟಕ್ಕೆ ಕುತ್ವಿ ಅಂದ್ರ ಇವ ನಿಂತೇ ಇರ್ತೀನಿ ಅನ್ನೋವ.  ಅವನೇನಾರ ಲಿಂಬಿ ಹಣ್ಣು, ಟೊಮೇಟೋ, ಮುಸಂಬಿ ಹಣ್ಣು ತಿಂತಾನೇ ಅಂದ್ರ ಅವನ ಅಕ್ಕಾ-ಪಕ್ಕಾ ಯಾರೂ ಇರಂಗಿಲ್ಲ ನೋಡ್ರಿ.  ಅವರ ಪಾಡು ದೇವ್ರಿಗೆ ಪ್ರೀತಿ.  ಅವರ ಕಣ್ಣಿನಾಗೆ ಗ್ಯಾರಂಟಿ ಲಿಂಬೀ ಹಣ್ಣಿನ್ ರಸಾ ಬೀಳೋದೆ.  ಈ ಹಣ್ಣಿನ್ ರಸಾ ಎಲ್ಲಾ ಕಡೆ ಒಸರೋ ಹಂಗ, ಹಣ್ಣನ್ನ ಹಿಚುಕಿ-ಹಿಚುಕಿ ಎಲ್ಲಾ ರಸಾ ಮಾಡ್‌ಕ್ಯಂಡ್ ಒಂದ್ ಕಡೆ ತೂತ್ ಮಾಡಿ ಅದನ್ನ ತನ್ನ ಗುರಿಗೆ ಹಿಡಿದು ಮುಖ ಮಾಡಿ ತಿನ್ನೋದರಲ್ಲಿ ನಮ್ ಗಿರಿ ನಿಸ್ಸೀಮ ರೀ.

    ಯಾರ್ದಾರ ಮದ್ವೀ ನಡದ್ರ ನಮಗ್ಯಾರೂ ಬರ್ರೀ ಅಂತ ಕರೀದಿದ್ರೂ ನಾವಾs ಹೋಗ್ತಿದ್ವಿ.  ನಮ್ಮೂರಿನಾಗೆ ಮದ್ವಿ ಮುಂಜೀ ಅಂದ್ರ ಒಂಥರ ನಮ್ಮೂರಿನ ಹಬ್ಬಗಳು ಇದ್ದಂಗ, ಅದಕ್ಯಾರು ಬರಬ್ಯಾಡಾ ಹೋಗಬ್ಯಾಡ ಅನ್ನೋರು?  ಅಲ್ಲಿ ವಾಲಗಾ ಊದೋರ ಮುಂದ ನಾವು ಎಳೇ ಹುಣಸೀ ಕಾಯಿ ತಿಂತಿದ್ವಿ, ಅವರು ನಮ್ಮುನ್ನ ಓಡಿಸಿಕ್ಯಂಡ್ ಬರೋರು.  ಹಿಂಗs, ನಮ್ ಮಜಾ ನಡೀತಿತ್ತ್ ನೋಡ್ರಿ.

    ಮದ್ವಿ ಅಂದ ಮ್ಯಾಲ ನೆನಪಾತು. ನಮ್ಮೂರಿನ ನಡುಮನಿ ಈರಪ್ಪನ ಮಗಳ ಮದವ್ಯಾಗ ನಮ್ ಗಿರಿ ಮಾಡಿದ ಪರಾಕ್ರಮ ನೆನಸಿಕೊಂಡ್ ಇವತ್ತಿಗೂ ನಗು ಬರ್ತತಿ ನೋಡ್ರಿ.  ನಡುಮನಿ ಈರಪ್ಪ ಅಂಥ ಸಾವ್ಕಾರ ಏನಲ್ಲ, ಆದ್ರೂ ಇದ್ದೊಬ್ಬ ಮಗಳ ಲಗ್ನಾನ ಅಚ್ಚುಕಟ್ಟಾಗಿ ಮಾಡಬಕು ಅಂತ ಮನಿ ಮುಂದ ಬ್ಯಾಡ,
    ಊರಿನ ಛತ್ರದಾಗ ಇಟ್ಟುಗೊಣೂನು ಅಂತ, ಅಲ್ಲೇ ಎಲ್ಲಾ ಫಿಕ್ಸ್ ಮಾಡಿದ್ದ ರೀ.  ಹಿರೇಕೇರೂರು ಸಂಬಂಧ, ಅಂಥಾ ದೂರೇನೂ ಇಲ್ಲ, ಆದ್ರ ಮುಂಜಾನೆ ಬೇಗ ಲಗ್ನ ಮಹೂರ್ತ ಐತಿ ಅಂತ ಎಲ್ರೂ ಹಿಂದಿನ್ ದಿನಾನೇ ಬಂದು ಚೌಳ್ಟ್ರಿ ಸೇರಿಕೊಂಡಿದ್ರು ರೀ.  ನಾವು ನಮ್ಮ ತಂಡದ ಸಮೇತ ಈ ಅತಿಥಿಗಳನ್ನ ಮುಗುಳ್ನಕ್ಕು ಬರಮಾಡಿಕೊಂಡಿದ್ವಿ.  ಯಾರು, ಹೆಂಗಾs ಅಂಥ ಗೊತ್ತಾಗಬೇಕಲ? ಅದಕ್ಕಾ.  ರಾತ್ರೀ ಎಲ್ಲಾರು ಸೇರಿ ಸಮಾ ಹರಟಿ ಹೊಡದ್ವಿ...ಅದು ಯಾವಾಗ ಮಲಗಿದ್ವೋ ಅದು ಯಾವನಿಗ್ ಗೊತ್ತು!

    ಮರುದಿನ, ಮುಂಜಾನೆ ಒಂಭತ್ತ್ ಘಂಟಿ ಅಭಿಜಿನ್ ಮಹೂರ್ತ ಅಂಥಾ ಕಾಣ್ತತಿ.  ಮದ್ವೀ ಮನಿ ಅಂದ್ರ ಗಡಿಬಿಡಿ, ಗಿಜಿಬಿಜಿ ಇದ್ದದ್ದ.  ಎಲ್ರೂ ಹೊಸ ಬಟ್ಟಿ ಹಾಕ್ಕೊಂಡಾರ.  ಎಲ್ಲಾ ಕಡಿ ಹೂ ಹಣ್ಣು ಕಾಣ್ಸಕ್ ಹತ್ಯಾವ. ಆದ್ರ ಒಂದಾs ಒಂದ್ ಪ್ರಾಬ್ಲಮ್ಮ್ ರೀ.
    ಸುಮಾರು ಎಂಟೂವರಿಯಿಂದ ಎಲ್ಲ್ ಹುಡುಕಿದ್ರೂ ಮದುವೀ ಗಂಡಾ ಕಾಣಸಂಗಿಲ್ಲ!  ಕೆಲವೊಂದಿಷ್ಟು ಮಂದಿ ಹುಡುಗಾ ಓಡಿ-ಗೀಡಿ ಹೋಗ್ಯಾನೇನೋ ಅಂತ ಸಂಶಯಾ ವ್ಯಕ್ತಪಡಿಸಿದ್ರು.  ಕೆಲವೊಂದಿಷ್ಟು ಮಂದಿ ಹುಡುಗನ್ ಅಪ್ಪ-ಅಮ್ಮನಿಗಿ ಜೋರ್ ಮಾಡಕ್ ಹಿಡುದ್ರು.  ಒಂದಿಷ್ಟು ಹೆಣ್ ಮಕ್ಳು ಒಂದ್ ಕಡಿ ಅಳಾಕ್ ಹತ್ಯಾವ!  ಒಂಥರಾ ಕಿಲಕಿಲಾ ಅಂಥ ನಕ್ಕೊಂಡಿದ್ ಛತ್ರ ಹೊಟ್ಟಿ ಬ್ಯಾನಿ ಬಂದ್ ರೋಧ್ನ ಮಾಡೋ ಮಗೂ ಹಂಗ ಅಳಾಕ್ ಹತ್ತೈತಿ! ಯಾರೂ ಪೋಲೀಸ್-ಗಿಲೀಸ್ ಅಂದಂಗಿದ್ದಿಲ್ಲ.  ನಡುಮನಿ ಈರಪ್ಪನ ಮರ್ಯಾದೆ ಪ್ರಶ್ನೆ ನೋಡ್ರಿ.  ಅವ ಏನ್ ಮಾಡ್ತಾನ? ಅತ್ಲಾಗಿಂದ್ ಇತ್ಲಾಗ, ಇತ್ಲಾಗಿಂದ್ ಅತ್ಲಾಗ್ ಒಂಥರಾ ಬೋನ್‌ನಾಗಿರೋ ಹುಲೀ ಮರೀ ಮಾಡ್ದಂಗ ಒಡಾಡ್‌ಕೊಂಡ್ ಬುಸುಗುಡಾಕ್ ಹತ್ತಿದ್ದ.  ವಾಲಗದೋರ್ ಅವರ ಕೆಲ್ಸಾ ನಡ್ಸ್ಯಾರ.  ಮೈಕ್ ಸೆಟ್ ರುದ್ರ, ಅದ್ಯಾವ್ದೋ ಬಭ್ರುವಾಹನ ಸಿನಿಮಾ ಹಾಡ್ ಜೋರಾಗ್ ಹಾಕ್ಯಾನ.  ಭೋಜನಶಾಲೆ ಅಡಿಗಿ ಮನೀ ಒಳಗಿಂದ ಶಾವ್ಗೀ ಪಾಯ್ಸದ ವಾಸ್ನಿ ಗಮ್ಮ್ ಅನ್ನಾಕ್ ಹತ್ತಿತ್ತು.  ಒಂದಿಷ್ಟು ಮಂದೀ ನಮಗೇನೂ ಗೊತ್ತೇ ಇಲ್ಲ ಅನ್ನೋ ಹಂಗ ಮದ್ವೀ ಮಂಟಪದ ಮುಂದ ಜಮಖಾನದ ಮ್ಯಾಲೆ ಕುಂತೂ ಹರಟೀ ಹೊಡ್ಯೋದ್ರಾಗ ತಲ್ಲೀನ ಆಗಿದ್ರು.  ಕೆಲವು ಕಡೆ ಒಂಥರ ಕುಮುಟು ಬೆವ್ರು ವಾಸ್ನಿ ಬೇರೆ!

    ಇನ್ನೇನು ಲಗ್ನದ ಮಹೂರ್ತ ಬಂತು, ಹತ್ರಾ ಬಂದೇ ಬಿಡ್ತು, ಆದ್ರೂ ಎಲ್ಲಿ ನೋಡ್ರಿದ್ರೂ ಮದ್ವಿ ಗಂಡಿನ ಸುಳಿವೇ ಇಲ್ಲ!  ಹುಡುಗನ ಅಪ್ಪಾ ಅಮ್ಮಾ ಕಂಗಾಲು.  ಜೋಬ್ನಾಗೆ ಹತ್ತ್ ಪೈಸಾ ಇರದಿದ್ರು ನಮ್ಮ್ ಮಂದಿ ಮರ್ಯಾದೆಗೆ ಹೆದ್ರೋ ಜನಾ ನೋಡ್ರಿ.  ಅಷ್ಟೊತ್ತಿಗ್ ಆಗ್ಲೆ ಅವರ ಮುಖಾ ಕಪ್ಪ್ ಹಿಡದ ಕರಟಾ ಆಗಿತ್ತು.  ಹುಡುಗನ್ ಕಡಿ ಬಾಳ ಮಂದಿ ಇದ್ದಂಗಿರ್ಲಿಲ್ಲಾ ಆದ್ರೂ ಪಾಪ ಅವರಿಗೆ ಊರ್ ಹೊಸತು, ಏನ್ ಮಾಡ್ತಾರ, ಏನ್ ಬಿಡ್ತಾರ?

    ನಮ್ ತಂಡ ಅಲ್ಲೇ ಇತ್ತು, ನಾವೂ ಹಂಗಾ ಚ್ಯಾಷ್ಟೀ ಮಾಡ್‌ಕೊಂಡು ಹಾಡ್ ಕೇಳ್ತಾ ನಿಂತಿದ್ವಿ.  ಅಷ್ಟ್ರಾಗ ಯಾರೋ ಒಬ್ರು "ಹೇ, ಗಿರಿ, ಸಾಯಾ ಮಾಡ್ರಪ್ಪಾ, ವರಾ ಎಲ್ಲೂ ಕಾಣಸ್ತಾನೇ ಇಲ್ಲ, ಮದ್ವೀ ನಿಂತ್ ಹೋಗೋ ಪರಿಸ್ಥಿತಿ ಬಂದೈತಿ!" ಅಂದ್ರು.  ನಮ್ ಗಿರಿ ಇದ್ದೋನು, "ಅಲ್ರೀ, ಎಲ್ಲಾ ಕಡೆ ನೋಡೀರೇನು? ಅತ್ಲಾಗ್ ಸಂಡಾಸ್ ರೂಮ್ ನೋಡೀರೇನು?" ಅಂದ.
    "ಬಚ್ಚಲ್ ಮನಿ ನೋಡ್ರಿ, ಬಚ್ಚಲ್ ಮನಿ ನೋಡ್ರಿ" ಅಂತ ಯಾರ್ ಯಾರೋ ಕೂಗಿದ್ರು, ಕೊನೀಗ್ ನೋಡಿದ್ರ ಹೊಟ್ ಬ್ಯಾನೀನೋ, ಏನ್ ಕರ್ಮಾನೋ ಅಂದಂಗ ಮದ್ವಿ ಗಂಡ್ ಸಂಡಾಸ್ ರೂಮ್‌ನಾಗೆ ಬಾಗ್ಲ್ ಹಾಕ್ಕೊಂಡು ಕುಂತಾನಾ!  ಯಾರೂ ನೋಡೇ ಇಲ್ಲ!  ಕೊನೀಗೂ ಸಿಕ್ಕಿದಾ ಅಂತ ಎರ್ಲೂ ಸಮಾಧಾನ್ ಮಾಡ್‌ಕೊಂಡು ಅವನ್ನ ಎಷ್ಟು ಲಗೂನಾ ಅತೋ ಅಷ್ಟು ಲಗೂ ಕರ್ಕೊಂಡ್ ಬಂದ್, ಕೊನೀಗೆ ಮಹೂರ್ತ ಮೀರೋದ್ರೊಳಗ ತಾಳೀನೂ ಕಟ್ಸ್ ಬಿಟ್ರು ನೋಡ್ರಿ.  ಎಲ್ರೂ ಸಮಾಧಾನ ಪಟ್ರು, ನಡುಮನಿ ಕುಟುಂಬ ಒಂದ್ ದೀಡ್ ಕಡ್ದು ಹಾಕಿದ ಕೆಲ್ಸ ಮಾಡ್ದಂಗ್ ನಿಟ್ಟುಸಿರು ಬಿಡ್ತು.  ಈರಪ್ಪ ಅದ್ಯಾವ್ ದೇವ್ರಿಗೆ ಅದೇನೇನ್ ಹರಿಕಿ ಹೊತ್ತಾ ಅಂತಾ ಕೇಳಬಕು, ಆ ಸ್ಥಿತಿ!

    ಅಷ್ಟೂ ಮಾಡಿ, ಮದ್ವಿ ಗಂಡು ಯಾಕ್ ಅಲ್ಲಿ ಹೊಕ್ಕೊಂಡು ಕುಂತಿದ್ದ ಅಂತ ಯಾರೋ ಕೇಳ್ಲಿಲ್ಲ, ಯಾರೂ ಹೇಳ್ಲಿಲ್ಲ! ನಮಗೊಂದಿಷ್ಟು ಮಂದಿಗೆ ಮಾತ್ರ ಗಿರಿ ಹೇಳಿದ ಮ್ಯಾಲೆ ಗೊತ್ತಾತು: ಮದ್ವಿ ಗಂಡು ಎಂಟ್ ಘಂಟಿ ಅಷ್ಟೊತ್ತಿಗೆ ಸಂಡಾಸ್ ರೂಮಿನ್ ಕಡೀಗೆ ಹೋಗೋದನ್ನ ನೋಡಿ, ಗಿರಿ ಅವನ ಫಾಲೋ ಮಾಡಿದ್ನಂತ.  ಆ ಹುಡುಗ, ತನ್ನ ಬಿಳೀ ಪಂಚಿ ಬಿಚ್ಚಿ, ಸಂಡಾಸ್ ರೂಮ್ ಬಾಗ್ಲ್ ಮ್ಯಾಲ ಇಟ್ಟು, ತನ್ನ ಕೆಲ್ಸ ಮುಂದುವರೆಸ್ಯಾನಂತ.  ಅಷ್ಟೊತ್ತಿಗೆ, ಗಿರಿ ಹೋಗಿ ಅವನ ವಸ್ತ್ರ ಅಪಹರಣ ಮಾಡಿ ಮತ್ತೊಂದು ರೂಮಿನಾಗೆ ಇಟ್ಟನಂತ.  ಯಾವ್ದೋ ಊರಿಂದ ಯಾವ್ದೋ ಊರಿಗೆ ಬಂದು, ಸಂಕೋಚದ ಅಪರಾವತರ ಅನ್ನೋ ಹಂಗ್ ಇದ್ದ ಹುಡುಗಾ ಕೂಗೋಕೂ ಆಗ್ದೇ ಹೊರಾಗ್ ಬರೋಕೂ ಅಗ್ದೇ ಅಲ್ಲೇ ಕುಂತಿದ್ನಂತೆ ನೋಡ್ರಿ!

    ಇವೆಲ್ಲ ಆಗಿದ್ದು ನಮ್ ಗಿರಿ ಮತ್ತು ಅವರ ತಂಡದ ಕೃಪೆ ಅಂತ ಯಾರಿಗಾದ್ರೂ ಗೊತ್ತಾಗಿದ್ರ ನಮ್ ಪರಿಸ್ತಿತಿ ದಯನೀಯ ಆಗ್ ಹೋಗ್ತಿತ್ತು, ಆ ಸಂಕೋಚದ ಪ್ರವೃತ್ತಿ ಹುಡುಗನ ದೆಸೆಯಿಂದ ನಾವೆಲ್ಲ ಇವತ್ತು ಕೈಕಾಲು ನೆಟ್ಟಗೆ ಇಟಗೊಂಡಿರೋ ಹಂಗಾತು ಅಂತ ನೆನೆದು ಇವತ್ತೂ ನಾವ್ ನಗತೀವ್ ನೋಡ್ರಿ.  ನೀವೇನಾರಾ ನಮ್ಮೂರಿಗೆ ಹೋಗ್ತೀವಂದ್ರ ನಮ್ಮ್ ಗಿರಿ ಕಂಡು ಕುದ್ದ್ ಮಾತಾಕ್ಯಂಬರ್ರಿ, ಅವ ಹಿಂದ್ ಇದ್ದಂಗ್ ಈಗಿಲ್ಲ, ಆದ್ರೂ ಸ್ವಲ್ಪ ಹುಶಾರ್ ಇರ್ರಿ!


    ***
    ಈ ಲೇಖನ ಮಾರ್ಚ್ ತಿಂಗಳ ದರ್ಪಣದಲ್ಲಿ ಪ್ರಕಟವಾಗಿದೆ.

    Sunday, July 06, 2008

    ಕರಿಹೈದನ ಬರ್ಡನ್ನು

    ’ಏ, ಸೇರ್ಸಿಕೊಳ್ಳೋಲ್ಲ ಹೋಗೋ’
    ಎಂದು ಕಂದು ತಂಡದವರು ಬೈದು ತಳ್ಳಿದಾಗಲೇ ಕರಿಹೈದನಿಗೆ ತಾನು ತನ್ನ ಹಳೆಯ ತಂಡವನ್ನು ಬಿಟ್ಟು ಬಂದು ಪೇಚಿಗೆ ಸಿಕ್ಕಿಕೊಂಡಿದ್ದು ತನ್ನ ಮೇಲೆಯೇ ಅಸಹ್ಯವನ್ನು ಮೂಡಿಸತೊಡಗಿತು.

    ’ಇಲ್ರೋ ನಾನು ಅದೇನೇನೋ ಹೊಸ ಹೊಸ ವರಸೆಗಳನ್ನ ಕಲಿತಿದೀನಿ, ನನ್ನನ್ನೂ ಆಟಕ್ಕ್ ಸೇರಿಸ್‌ಕೊಂಡು ನೋಡ್ರಿ, ಒಂದು ಚಾನ್ಸ್ ಕೊಡ್ರಿ...’ ಎಂದಿದ್ದನ್ನ ಕಂದು ತಂಡದವರು ಯಾರೂ ಅಷ್ಟೊಂದು ಹಚ್ಚಿಕೊಂಡಂತೆ ಅನ್ನಿಸಲೇ ಇಲ್ಲ, ಜೊತೆಗೆ ಕಂದು ತಂಡದಲ್ಲಿ ಇತ್ತೀಚೆಗೆ ಸೇರಿಸಿಕೊಂಡ ಹೊಸ ಹುರುಪಿನ ಆಟಗಾರರೆಲ್ಲ ಒಳ್ಳೇ ತರಬೇತಿ ಪಡೆದು ಕರಿಹೈದ ಆ ತಂಡವನ್ನು ಬಿಡುವಾಗ ಏನೇನು ಇರಲಿಲ್ಲ ಏನೇನು ಇದ್ದಿದ್ದರೆ ಚೆನ್ನಿತ್ತು ಎಂದು ಹಲಬುತ್ತಿದ್ದನೋ ಅದೆಲ್ಲವೂ ಅಲ್ಲಿ ಮೇಳೈಸಿದಂತಿತ್ತು.

    ಯಾವ ಯಾವ ಬಗೆಗಳಿವೆ - ದೈನ್ಯದಿಂದ ಬೇಡಿಕೊಂಡಿದ್ದಾಯಿತು, ಹೊಸ ಉಪಾಯಗಳನ್ನು ಹೇಳಿಕೊಡುತ್ತೇನೆ ಎಂದು ಮೂಗಿನ ಮೇಲೆ ತುಪ್ಪ ಸವರಿದ್ದಾಯಿತು, ಇನ್ನು ಹೆದರಿಸುವುದೊಂದೇ ಬಾಕಿ ಎಂದು ಅನ್ನಿಸಿದ್ದೇ ತಡ, ಕರಿಹೈದ,
    ’ನೋಡ್ರೋ, ನನ್ನನ್ನೇನಾದ್ರೂ ಆಟಕ್ಕೆ ಸೇರಿಸಿಕೊಳ್ಳದೇ ಹೋದ್ರೆ you don't know what you are missing!' ಎಂದು ಬ್ರಹ್ಮಾಸ್ತ್ರವನ್ನು ಎಸೆದಷ್ಟೇ ಸುಖವಾಗಿ ಕಣ್ಣುಗಳನ್ನು ಇನ್ನೂ ದೊಡ್ಡದಾಗಿ ತೆರೆದು ನಿರೀಕ್ಷೆಯಲ್ಲಿ ಒಂದು ಕ್ಷಣದ ಮೌನವನ್ನು ಸಹಿಸಿಕೊಂಡ.

    ಕಂದು ತಂಡದ ಆಟಗಾರರು ಇವನು ಹೇಳಿದ ಮಾತಿಗೆ ಒಂದು ಕ್ಷಣ ಸ್ತಂಭೀಭೂತರಾದರು, ಅವರ ಆಟದ ವರಸೆಗಳು ’ಲಂಡನ್-ಲಂಡನ್’ ಆಟದಲ್ಲಿ ಆಟಗಾರರು ಕಿಂಚಿತ್ತೂ ಅಲುಗಾಡದೇ ನಿಲ್ಲುತ್ತಿದ್ದರಲ್ಲ ಹಾಗಾದರು, ಆದರೆ ಕರಿಹೈದನ ಮೋಡಿಗೆ ಯಾರೂ ಬಿದ್ದಂತೆ ಕಾಣಲಿಲ್ಲ, ಇವನು ಹೇಳಿದ ಮಾತನ್ನು ಕೊಡಗಿಕೊಂಡು ಕಂದು ತಂಡ ಮತ್ತೆ ತಮ್ಮ ತಮ್ಮ ವರಸೆಗಳನ್ನು ಬದಲಾಯಿಸಿ ತಮ್ಮ ತಮ್ಮ ಆಟಗಳಲ್ಲಿ ಲೀನವಾದರು, ಕರಿ ಹೈದನ ಮೌನ ಅವನ ಹೊಟ್ಟೆಯೊಳಗೆ ಕಲಸುತ್ತ ಅದು ಇದ್ದಲ್ಲೇ ಹಸಿವಾದ ಹೊಟ್ಟೆಯಂತೆ ಕುರ್ ಕುರ್ ಸದ್ದು ಮಾಡಿ ಸುಮ್ಮನಾಯಿತು.

    ಬಿಳಿತಂಡವನ್ನು ಬಂದು ಸೇರಿ ಅದರಲ್ಲಿದ್ದನ್ನು ಇವನಿಗೆ ತೋಚಿದಷ್ಟು ಅನುಭವಿಸಿ ಈಗ ನಡುನಡುವೆಯೇ ಕೈ ಬಿಟ್ಟು ಹಳೆಯ ಕಂದು ತಂಡವನ್ನು ಸೇರುತ್ತೇನೆ ಎನ್ನುವ ಕರಿಹೈದನ ವರಸೆಯನ್ನು ಅವನ ಸ್ನೇಹಿತರು ಹಗಲೂರಾತ್ರಿ ಆಡಿಕೊಂಡು ನಗುತ್ತಾರೆ. ಆಗಾಗ್ಗೆ, ’ಮುಠ್ಠಾಳ’ ಎಂದು ಗುನಗಾನ ಮಾಡುತ್ತಾರೆ. ’ಇಲ್ಲಿರಲಾರದವನು ಅಲ್ಲಿ ಹೋಗಿ ಮಾಡಿ ಕಡಿಯುವುದೇನು’ ಎಂದು ಛೇಡಿಸುತ್ತಾರೆ. ’ಹಸಿವೋ ಸಮೃದ್ಧಿಯೋ ನಮ್ಮದು ನಮಗೆ ಚೆಂದ’ ಎಂದು ಕರಿಹೈದ ಯಾವುದೋ ಕಾಡಕವಿಯ ಪಂಕ್ತಿಗಳನ್ನು ಅರಹುತ್ತಾ ಇಂದಲ್ಲ ನಾಳೆ ಕಂದು ತಂಡವನ್ನು ಸೇರಿಯೇ ಸೇರೇನು ಎಂದು ಕನಸು ಕಾಣುವುದನ್ನು ಮಾತ್ರ ಬಿಡಲೊಲ್ಲ.

    ಕರಿಹೈದ ಮೊದಲು ಕಂದುತಂಡವನ್ನು ಬಿಟ್ಟು ಬಿಳಿತಂಡವನ್ನು ಸೇರಿಕೊಂಡಾಗ ಆತನಿಗೆ ಹೀಗೊಂದು ದಿನ ಬವಣೆಯನ್ನು ಅನುಭವಿಸಬಹುದು ಎಂದೆನಿಸಿರಲಿಲ್ಲ. ಹೀಗೆ ತಂಡಗಳನ್ನು ಬದಲಾಯಿಸಿದವರು ಯಾರೂ ಮತ್ತೆ ಪುನಃ ಪಕ್ಷಾಂತರ ಮಾಡುವುದು ಕಡಿಮೆಯಾದರೂ ಹಾಗೆ ಅಂದಿನ ಲೆಕ್ಕದಲ್ಲಿ ಸಿಕ್ಕ ಹಾಗೆ ಒಳಿತು-ಕೆಡಕುಗಳನ್ನು ಯಾರೂ ವಿವರಿಸಿ ಹೇಳಿದ್ದಂತೂ ಇಲ್ಲ. ಕರಿಹೈದ ಬೇಕಾದಷ್ಟು ತೊಳಲಾಡುತ್ತಾನೆ - ಒಮ್ಮೆ ದ್ರಾಕ್ಷಿ ಸಿಗದ ನರಿಯ ಹಾಗೆ ಆ ಹುಳಿ ದ್ರಾಕ್ಷಿ ಸಿಕ್ಕರೆಷ್ಟು ಬಿಟ್ಟರೆಷ್ಟು ಎಂದು ಹೂಂಕರಿಸುತ್ತಾನೆ, ಮತ್ತೊಮ್ಮೆ ಕಂದು ತಂಡದಲ್ಲಿ ಆಡಿಬೆಳೆದು ಓಡಿಯಾಡಿದ ಹಾಗೆ ನೆನಪಿಸಿಕೊಂಡು ನಾಸ್ಟಾಲ್ಜಿಯಾವನ್ನು ಹೊಗಳುವುದೇ ಬದುಕು ಎಂದುಕೊಳ್ಳುತ್ತಾನೆ.

    ಹೆಚ್ಚಾಗಿ ವಿಷಾದ ಆವರಿಸುತ್ತದೆ, ಅದರ ಬೆಳಕಿನ ನೆರಳಿನ ಬೆನ್ನಿಗೆ ಹೊಸ ತತ್ವಗಳು ಮೂಡಿಬರುವಂತೆ ಕಾಣಿಸುತ್ತದೆ - ’ಯಾವ ತಂಡದಲ್ಲಿದ್ದು ಆಡಿದರೇನು, ವಿಶ್ವವೇ ಒಂದು ತಂಡ. ಆ ತಂಡ-ಈ ತಂಡ ಇವೆಲ್ಲ ಬರೀ ಕಾಗದ ಪತ್ರಗಳ ಮೇಲಿನ ಒಡಂಬಡಿಕೆ ಮಾತ್ರ, ಅವರವರ ಹೃದಯದಲ್ಲೇನಿದೆ ಅದು ಮುಖ್ಯ. ಬಿಳಿ ತಂಡದಲ್ಲಿದ್ದುಕೊಂಡೇ ಕಂದು ತಂಡಕ್ಕೆ ಸಪ್ಪೋರ್ಟ್ ಮಾಡಲಾಗದೇನು, ಹೊರಗಿನಿಂದ ಅವರವರ ಬೆಂಬಲವನ್ನು ಯಾರೂ ಸೂಚಿಸಬಹುದಲ್ಲ. ಈ ಆಟಗಳೇ ಹೀಗೆ - ಇದರ ಹಿಂದಿನ ಸಂಸ್ಕೃತಿ, ರಾಜಕೀಯ, ಧರ್ಮ ಇವೆಲ್ಲ ಒಂದೇ ಎಲ್ಲಿದ್ದರೂ ಹೇಗಿದ್ದರೂ!’

    ಹೀಗೆ ಹಲವಾರು ತತ್ವಗಳು ಮೈತಳೆತಳೆದು ಅವುಗಳು ತಮ್ಮಷ್ಟಕ್ಕೆ ತಾವು ಒಂದಕ್ಕೊಂದು ತೀಡಿಕೊಂಡು ಕಾಡಿಕೊಂಡು ಗಡುಸಾದ ಕಪ್ಪಗಿನ ಕಲ್ಲಿದ್ದಿಲು ಕೆಂಪಾಗಿ ಬೆಂಕಿಯಾಗಿ ನಿಗಿನಿಗಿ ಕೆಂಡವಾಗಿ ಕೊನೆಗೆ ಹಗುರವಾದ ಬಿಳಿಯ ಬೂದಿಯಾಗುವಲ್ಲಿಯವರೆಗಿನ ರೂಪಾಂತರವನ್ನು ಪಡೆದುಕೊಳ್ಳುತ್ತವೆ. ಅಲ್ಲಲ್ಲಿ ಕಿಡಿಗಳೋ ಅಥವಾ ಬೆಂಕಿ ಇರುವ ತಾವೋ ತಾವಿದ್ದ ಕಡೆ ಮೊದಲು ಸುಡುವಂತೆ ಹೊಸ ತತ್ವಗಳ ಚುರುಕು ಅದೆಷ್ಟರ ಮಟ್ಟಿಗೆ ಏರುತ್ತದೆ ಎಂದರೆ ಪಕ್ಕದಲ್ಲಿನ ಏರ್‌ಕಂಡೀಷನರ್ ಬೀಸುವ ತಂಗಾಳಿಯೂ ತನ್ನ ತಂಪನ್ನು ಈ ಬಿಸಿಯಲ್ಲಿ ಕಳೆದುಕೊಳ್ಳುತ್ತದೆ.

    ಕ್ಯಾನ್ಸರ್ ರೋಗಿ ತನ್ನ ಕ್ಯಾನ್ಸರ್ ಅನ್ನು ಒಪ್ಪಿಕೊಂಡು ಸಮಾಧಾನಿಯಾಗುವ ಮೊದಲು ಬೇಕಾದಷ್ಟು ಕಿರಿಚಾಡಿ ಕೂಗಾಡಿ ಅವರಿವರಿಗೆಲ್ಲ ಬೈದು ದೇವರನ್ನೂ ಸೇರಿಸಿಕೊಂಡು ಮತ್ತೆ ಸಂತನ ಮನಸ್ಥಿತಿಯನ್ನು ತಂದುಕೊಳ್ಳುವಂತೆ ಕರಿಹೈದ ಕಂದು ತಂಡದವರನ್ನು ಕುರಿತು ಸಹಸ್ರನಾಮ ಶುರುಮಾಡಿ ಸುಮ್ಮನಾಗುತ್ತಾನೆ:
    ’ಯಾರಿಗ್ ಬೇಕ್ ಹೋಗಿ ನಿಮ್ಮ ತಂಡದಲ್ಲಿ ಆಡೋ ಭಾಗ್ಯ. ನೀವೋ ನಿಮ್ಮ ಪ್ರಾಸೆಸ್ಸೋ ನಿಮ್ಮ ರೂಲ್ಸ್-ರೆಗ್ಯುಲೇಷನ್ನುಗಳೋ ಎಲ್ಲವೂ ಸಾಯ್ಲಿ! ನನ್ನಂತಹವರ ಯೋಗ್ಯತೆಯನ್ನು ಇವತ್ತಿಗೂ ಕಂಡು ಮಣೆಹಾಕದ ನಿಮ್ಮ ಸಂಸ್ಕೃತಿಗಿಷ್ಟು ಧಿಕ್ಕಾರವಿರಲಿ. ನನ್ನಂತೋರುನ್ನ ಸೇರಿಸಿಕೊಳ್ದೇ ಅದು ಹೆಂಗ್ ಆಡ್ತೀರೋ ಆಡ್ರಿ ನೋಡೇ ಬಿಡ್ತೀನಿ. ನಿಮ್ಮಲ್ಲಿನ ಕೆಟ್ಟ ಪರಂಪರೆಯೇ ಸಾಕು ನಿಮ್ಮವರ ಕಾಲುಗಳನ್ನು ಎಳೆದೆಳೆದು ನೀವಿದ್ದಲ್ಲೇ ನಿಮ್ಮನ್ನು ಕೂರಿಸಲು, ನೀವು ಮುಂದೆ ಬರುವ ಸಾಧ್ಯತೆಯೇ ಇಲ್ಲ - ಎಂದಿಗೂ ಯಾವತ್ತೂ. ಎಲ್ರೂ ಹಾಳಾಗ್ ಹೋಗಿ...’

    ಕರಿಹೈದನ ಆಕ್ರಂದನ ಮುಗಿಲು ಮುಟ್ಟುತ್ತೆ. ನಂತರ ಧೀರ್ಘ ಸಮಾಧಾನ ಮೂಡುತ್ತೆ. ಕರಿಹೈದ ಸಂತನಂತೂ ಆಗೋದಿಲ್ಲ, ತನ್ನ ಬಿಳಿತಂಡದವರ ಜೊತೆ ಸರಿಯಾಗಿ ಮನಸಿಟ್ಟು ಆಡಲೊಲ್ಲ, ಹಳೆಯ ಕಂದುತಂಡದವರ ನೆನಪನ್ನು ಬದಿಗಿಟ್ಟು ಮುಂದಿನ ದಾರಿಯನ್ನು ಮಾತ್ರ ನೋಡೋದಿಲ್ಲ. ಹಲವಾರು ಲೇನುಗಳು ಇರುವ ನುಣುಪಾದ ರಸ್ತೆಯ ಮೇಲೆ ನಾಗಾಲೋಟದಿಂದೋಡುವ ದೊಡ್ಡ ಕಾರಿರುವ ಕರಿಹೈದ ಮುಂದಿನ ಅಗಲವಾದ ವಿಂಡ್‌ಶೀಲ್ಡನ್ನು ನೋಡಿ ತಾನು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗುವ ನಡುನಡುವೆ ಚಿಕ್ಕದಾದ ಹಾಗೂ ಚೊಕ್ಕದಾದ ರಿಯರ್ ವ್ಯೂ ಮಿರರ್ ಅನ್ನು ಅಗತ್ಯಕ್ಕಿಂತ ಹೆಚ್ಚಾಗಿ ನೋಡಿಕೊಂಡಿರುವುದನ್ನು ಕಂಡ ಕರಿಹೈದನ ಸ್ನೇಹಿತರು ಕರಿಹೈದನ ಮನಸ್ಸಿನಲ್ಲಿರುವುದನ್ನು ಗೊತ್ತು ಮಾಡಿಕೊಂಡವರಂತೆ ಅವರೊಳಗೇ ಹಲ್ಲುಕಿರಿದುಕೊಂಡಿರುವುದನ್ನು ನೆನೆಸಿಕೊಂಡು ಕರಿಹೈದನ ಮನಸ್ಸು ಮತ್ತಷ್ಟು ಪಿಚ್ಚಾಗುತ್ತದೆ.

    Wednesday, December 26, 2007

    ...ಯಾವಾಗ್ ನೋಡಿದ್ರೂ ತಮ್ ತಮ್ ಗುಂಗ್ನಲ್ಲೇ ಇರ್ತಾರೇ

    ನಾನು ಒಣದ್ರಾಕ್ಷಿ ಡಬ್ಬದ ಮುಚ್ಚಳ ತೆಗೆಯೋದಕ್ಕೂ ಅದರ ಒಳಗಿನಿಂದ ಮುಂದುವರೆಯುತ್ತಿದ್ದ ಸಂಭಾಷಣೆಯ ಈ ತುಣುಕು ಕೇಳೋದಕ್ಕೂ ಸರಿಯಾದ ಸಮಯ ಬಂದಿತ್ತು, ’...ಬನ್ನಿ ಬನ್ನಿ, ಯಾವಾಗ್ ನೋಡುದ್ರೂ ಅನಿವಾಸಿಗಳ ಥರ ಬರೀ ನಿಮ್ಮದೇ ರಾಗದ ಗುಂಗಿನಲ್ಲಿ ಇರ್ತೀರಿ, ವಾಸ್ತವಕ್ಕೆ ಬನ್ನಿ ಕಾರ್ಯಕ್ರಮ ಆರಂಭ ಮಾಡೋಣ’.

    ಎಲಾ ಇವನಾ, ಅನಿವಾಸಿಗಳ ಬಗ್ಗೆ ಇಷ್ಟು ಅಥಾರಿಟಿಯಿಂದ ಮಾತಾಡೋರ್ ಯಾರಪ್ಪಾ ಎಂದು ಬೆಳಕಿಗೆ ಡಬ್ಬವನು ಬಗ್ಗಿಸಿ ನೋಡಿದ್ರೆ ಸೆಪ್ಟೆಂಬರ್ ತಿಂಗಳಿನಲ್ಲಿ ಪೆಚ್ಚು ಮೋರೆಯ ದರ್ಶನ ಕೊಟ್ಟು ಕೊನೆಗೆ ದಿಢೀರನೆ ಗುಂಪಿನಲ್ಲಿ ಕರಗಿ ಹೋಗಿದ್ದ ಒಣದ್ರಾಕ್ಷಿದ್ವಯರು ಕಂಡು ಬಂದರು. ಸುಮಾರು ಇಪ್ಪತ್ತು ಉಳಿದ ದ್ರಾಕ್ಷಿಗಳನ್ನು ಒಂದೆಡೆ ಆಯೋಜಿಸಿ ಅದೇನೋ ’ಕಾರ್ಯಕ್ರಮ’ವನ್ನು ಆರಂಭಿಸುವ ಗುಂಗಿನಲ್ಲಿದ್ದವರು ಆ ಮಟ್ಟಿಗೆ ವ್ಯಸ್ತರಾಗಿ ಕಂಡುಬಂದುದು ನನಗೆ ಸ್ವಲ್ಪ ಖುಷಿ ತಂದಿತು. ಏನಿಲ್ಲವೆಂದರೂ ಈ ಹಿಂದಿನ ಅಳುಮೋರೆಗೆ ಉತ್ತರ ಕೊಡಬೇಕಾಗಿಲ್ಲವಲ್ಲ ಎಂದು ನನ್ನೊಳು ನಾನೇ ಹೇಳಿಕೊಂಡಿರುವಾಗ ನಾನು ಡಬ್ಬದ ಮುಚ್ಚಳ ತೆಗೆದ ಫಲವಾಗಿ ದಿಢೀರನೆ ಹೆಚ್ಚಿದ ಬೆಳಕನ್ನು ಕಂಡು ತಮ್ಮ ಕಾರ್ಯಕ್ರಮಕ್ಕೆ ಅದ್ಯಾರಪ್ಪಾ ಭಂಗ ತಂದವರು ಎಂದು ಹುಬ್ಬೇರಿಸುತ್ತಲೇ ನನ್ನತ್ತ ನೋಡಿದ ದ್ರಾಕ್ಷೀದ್ವಯರು, ’ಓಹ್, ಏನ್ಸಾರ್ ಬಾಳಾ ಅಪರೂಪ ಆಗಿದ್ದೀರಾ ಇತ್ತೀಚಿಗೆ!?’ ಎಂದು ಒಕ್ಕೊರಲಿನಿಂದಲೇ ತಮ್ಮ ಆಶ್ಚರ್ಯವನ್ನು ಸೂಚಿಸುತ್ತಲೇ ಪ್ರಶ್ನೆಯೊಂದನ್ನು ಎಸೆದವು.

    ನಾನಿದ್ದೋನು, ’ಹೌದಲ್ವಾ, ಹೇಗಿದ್ದೀರಾ ಮತ್ತೆ? ಏನ್ಸಮಾಚಾರಾ, ಏನೋ ಗಡಿಬಿಡಿ ನಡೀತಾ ಇರೋ ಹಾಗಿದೆ?’ ಎಂದೆ.

    ಆ ದ್ರಾಕ್ಷಿಗಳಲ್ಲಿ ಬಲಗಡೆ ಇದ್ದುದು ಉತ್ತರ ಕೊಡುವ ಹವಣಿಕೆ ಮಾಡುತ್ತಾ, ’ಹೀಗಿದೀವ್ ನೋಡಿ, ಸದ್ಯ ಕಳೆದ ಸರ್ತಿ ಡಬ್ಬ ಖಾಲಿ ಆದ ಹಾಗೆ ಈ ಸರ್ತಿ ಆಗ್ಲಿಲ್ಲವಲ್ಲಾ, ಒಂದಿಷ್ಟು ಜನ ಉಳಿದಿರೋದೇ ಹೆಚ್ಚು’ ಎಂದು ಸಿನಿಕತನದ ಹಾರಿಕೆ ಉತ್ತರಕೊಡುವ ಹೊತ್ತಿಗೆ ಅದರ ಜೊತೆಗಾರ, ’ಊರ್ ತುಂಬಾ ಎಷ್ಟ್ ಜನಾ ಬೇಕಾದ್ರೂ ಇರ್ಲಿ ನೋಡ್ರಿ ಕೊನೆಗೆ ನಮ್ ಕಾರ್ಯಕ್ರಮ ಅಂತಂದ್ರೆ ಇಷ್ಟೇ ಜನಾ ಬರೋದು!’ ಎಂದು ಅಸಮಧಾನವನ್ನು ವ್ಯಕ್ತಪಡಿಸಿತು.

    ನಾನು, ’ಅದೇನೋ ಅನಿವಾಸಿಗಳ ಬಗ್ಗೆ ಹೇಳ್ತಾ ಇದ್ರಲ್ಲ, ಅವರುಗಳ ಬಗ್ಗೆ ನಿಮಗೇನ್ ಗೊತ್ತಿರೋದು?’ ಎಂದೆ ಕೆದಕಿ ನೋಡಿದ್ದಕ್ಕೆ,

    ಇಬ್ಬರೂ ಒಬ್ಬರ ಮುಖವನ್ನು ಒಬ್ಬರು ನೋಡಿಕೊಂಡು ಏನ್ ಹೇಳೋದೂ ಬಿಡೋದು ಗೊತ್ತಾಗದೇ ಒಂದು ಕ್ಷಣ ಅಮೇರಿಕಕ್ಕೆ ಬಂದ ಪ್ರವಾಸಿಯ ಹಾಗೆ ಗರ ಬಡೆದು ನಿಂತುಕೊಂಡವು, ಸ್ವಲ್ಪ ಸುಧಾರಿಸಿಕೊಂಡು ಬಲಗಡೆ ಇದ್ದ ದ್ರಾಕ್ಷಿ ಹೇಳಿತು, ’ನಮಗೇನ್ ಗೊತ್ತೂ ಸಾರ್, ನಾವ್ ನಮಗೆ ಕಂಡದ್ದು ಹೇಳಿದ್ವಿ ಅಷ್ಟೇ, ಅನಿವಾಸಿಗಳು ಯಾವಾಗ್ ನೋಡುದ್ರೂ ತಮ್ ತಮ್ ಗುಂಗ್ನಲ್ಲೇ ಇರ್ತಾರೇ, ಒಂದ್ ರೀತಿ ಗಮ್ಮನ್ ಗುಸಕಗಳ ಥರಾ ಯಾವಾಗ್ ನೋಡುದ್ರೂ ಅವರದ್ದೇ ಅವರಿಗೆ ಅತಿಯಾಗಿ ಹೋಗಿರುತ್ತೇ, ತಮ್ಮದೇ ದೊಡ್ಡದು ಅನ್ನೋ ಥರಾ ಆಡೋ ಅಂತಾ ಸ್ವಾರ್ಥಿಗಳನ್ನು ನಾನು ಯಾವತ್ತೂ ನೋಡೇ ಇಲ್ಲ, ಅದಕ್ಕೇ ಹಂಗದ್ದದ್ದು!’ ಎಂದು ದೊಡ್ಡ ವಾಗ್ದಾಳಿಯೊಂದನ್ನು ಮಾಡಿ ಸುಮ್ಮನಾಯಿತು.

    ಆ ದ್ರಾಕ್ಷಿ ಹೀಗೆಂದ ಕೂಡಲೇ ನಾನೇನ್ ಹೇಳೋದು ಅಂತ ತಲೆ ತುರಿಸಿಕೊಂಡ್ರೆ ಏನೂ ಹೋಳೀಲಿಲ್ಲ, ಮ್ಯಾನೇಜ್‌ಮೆಂಟ್ ಎಂಪ್ಲಾಯಿ ಹೇಳೋ ಹಾಗೆ, ’ಅದು ನಿಮ್ಮ ನಿಮ್ಮ ಅನಿಸಿಕೆ ಅಭಿಪ್ರಾಯ ಅದಕ್ಕೆ ನೀವೇ ಬಾಧ್ಯಸ್ಥರು...ಅದು ಸುಳ್ಳೋ ನಿಜಾನೋ ಅಂತ ಮಾತಾಡ್ತಾ ಹೋದ್ರೇ ದೊಡ್ಡ ವಾದಾನೇ ನಡೆದು ಹೋಗುತ್ತೆ, ಅದರ ಬದಲಿಗೆ ಅದನ್ನ ಅಲ್ಲಿಗೆ ಬಿಡೋದೇ ವಾಸಿ’ ಎಂದು ಹೇಳಿ ಕೈ ತೊಳೆದುಕೊಳ್ಳಲು ನೋಡಿದೆ.

    ಆಗ ಎಡಗಡೆ ಇದ್ದ ದ್ರಾಕ್ಷಿ, ’ಅಲ್ರಿ, ಹೀಗೆ ಒಂದು ಸಮೂಹದ ಮೇಲೆ ನಾವ್ ಏನಾದ್ರೂ ಹೇಳ್ಲಿ ಅದನ್ನ ಅವರವರ ಅಭಿಪ್ರಾಯ ಅಂತ ಹೇಳಿಬಿಟ್ಟು ಸುಮ್ನೇ ಕೈ ತೊಳಕೊಳಕ್ಕೆ ನೋಡ್ತೀರಲ್ಲಾ, ನಿಮಗೆ ಕೆಚ್ಚು ಅಭಿಮಾನಾ ಅನ್ನೋದ್ ಸ್ವಲ್ಪಾನೂ ಇಲ್ವೇ ಮತ್ತೆ? ಏನು ಅದನ್ನೆಲ್ಲಾ ಬಂಡವಾಳಶಾಹಿ ವ್ಯವಸ್ಥೆಯ ಏಣಿಯ ಮೆಟ್ಟಿಲುಗಳಿಗೆ ಆಪೋಷನ ಕೊಟ್ಟೋರಂಗೆ ಆಡ್ತೀರಲ್ಲಾ, ನಿಮ್ಮಂತೋರುನ್ನಾ ನಮ್ಮೂರ್ನಲ್ಲಿ ಏನಂತಾ ಕರೀತಾರೆ ಗೊತ್ತಾ?...’ ಎಂದು ಸುಮ್ಮನಾಯಿತು.

    ನಾನು, ’ಏನಂತ ಕರೀತಾರೆ?’ ಎಂದರೆ,

    ’ಬ್ಯಾಡಾ ಬಿಡಿ, ನಾನ್ಯಾಕೆ ಹೇಳಿ ನನ್ನ ಬಾಯನ್ನ ಹೊಲ್ಸು ಮಾಡ್ಕೊಳ್ಳೀ?’ ಎನ್ನುವ ಉತ್ತರ ದೊರೆಯಿತು, ಮತ್ತೆ ಮುಂದುವರೆಸುತ್ತಾ, ’ನಾವ್ ಹೆಂಗಾರೂ ಇರ್ಲಿ ನಮ್ಮನ್ನ ಯಾವಾನಾದ್ರೂ ಸ್ವಾರ್ಥಿ ನನಮಕ್ಳು ಅಂತ ಹೇಳಿದ್ದಿದ್ರೆ ಅವರನ್ನ ಒಂದ್ ಕೈ ನೋಡಿಕಂತಿದ್ವಿ, ಏನೋ?’ ಎಂದು ಪಕ್ಕದವನ ಪಕ್ಕೆಗೆ ತಿವಿಯಿತು.

    ನಾನು, ’ಥೂ, ಇದೇನಪ್ಪಾ ಗ್ರಹಚಾರ’ ಎಂದು ಮನಸ್ಸಿನಲ್ಲೇ ಶಪಿಸಿಕೊಂಡೆ, ಶಾವಿಗೆ ಪಾಯಸ ಮಾಡೋದಕ್ಕೆ ಒಣದ್ರಾಕ್ಷಿ ಹಾಕೋಣ ಅಂತ ಮುಚ್ಚಳ ತೆಗೆದೋನಿಗೆ ಈ ಇಬ್ಬರ ಜೊತೆ ವಾದಾ ಮಾಡಿ ಮೈ ಮನಸ್ಸು ಕೆದರಿಕೊಳ್ಳೋ ಕಷ್ಟಾ ಯಾವನಿಗೆ ಬೇಕಿತ್ತು?

    ನಾನು ಸುಮ್ಮನಿದ್ದುದನ್ನು ನೋಡಿ ಎಡಗಡೆ ಇದ್ದ ದ್ರಾಕ್ಷಿ ಬಲಗಡೆಯವನ ಕುರಿತು, ’ಏ ಬಿಡೋ, ಈ ಅನಿವಾಸಿಗಳನ್ನ ಯಾರು ಉದ್ದಾರ ಮಾಡಿದಾರೆ. ನಮ್ಮ ಕೆಲಸ ನೋಡೋಣ ನಡಿ, ಜನಗಳು ಕಾಯ್ತಾ ಇದಾರೆ ಕಾರ್ಯಕ್ರಮಾನಾದ್ರೂ ಶುರು ಮಾಡೋಣ’ ಎಂದು ಹೇಳುತ್ತ ಇನ್ನೇನು ಅಲ್ಲಿ ಮೂಲೆಯಲ್ಲಿ ಸೇರಿದ್ದ ಉಳಿದ ದ್ರಾಕ್ಷಿಗಳ ಕಡೆಗೆ ತಿರುಗಬೇಕು ಎನ್ನುವಾಗ ನಾನೆಂದೆ,

    ’ಅಲ್ರೋ, ಅನಿವಾಸಿಗಳನ್ನ ಕಂಡ್ರೆ ನಿಮಗ್ಯಾಕೆ ಅಷ್ಟೊಂದು ಹೊಟ್ಟೇಕಿಚ್ಚು? ಎಲ್ಲೋ ಒಂದು ದೃಷ್ಟಿಕೋನದಿಂದ ಅವರುಗಳನ್ನು ನೋಡಿರಬಹುದಾದ ನೀವು ಪ್ರಪಂಚವನ್ನೇ ತಿಳಿದುಕೊಂಡಿರೋ ತಿಕ್ಕಲುಗಳ ಥರಾ ಆಡೋದ್ ಯಾಕೆ? ಊರು-ಮನೇ-ದೇಶ ಬಿಟ್ಟು ಬಂದು ತಮ್ಮ್ ತಮ್ಮ ಕಷ್ಟದಲ್ಲಿ ಸಿಕ್ಕಿ ಒದ್ದಾಡ್ತಿರೋರನ್ನ ಪೂರ್ತಿ ಅರ್ಥ ಮಾಡಿಕೊಳ್ಳದೇ ಬರೀ ಅವರನ್ನ ದೊಡ್ಡ ಸ್ವಾರ್ಥಿಗಳು ಅಂತೀರಲ್ಲಾ ಇದು ಯಾವ ನ್ಯಾಯ?’ ಎಂದು ಮೂರ್ನಾಲ್ಕು ಪ್ರಶ್ನೆಗಳನ್ನ ಒಂದೇ ಉಸಿರಲ್ಲಿ ಕೇಳಿ ದಂಗುಬಡಿಸಿದೆ.

    ಎಡಗಡೆ ದ್ರಾಕ್ಷಿಗೆ ನನ್ನ ಮಾತೇ ಕೇಳಿ ಸಿಟ್ಟೇ ಬಂದಿತು ಅಂತ ಕಾಣ್ಸುತ್ತೆ, ’ ಅವರವರ ತೆವಲಿಗೆ ಬಂದವರು ಅವರವರ ಕಷ್ಟಗಳನ್ನ ಅನುಭವಿಸಲೇ ಬೇಕಾದ್ ನ್ಯಾಯಾ ತಾನೆ? ಯಾವಾಗ್ ನೋಡಿದ್ರೂ ಸೆಲ್ಫ್ ಸೆಂಟರ್ಡ್ ಜನ ಅಂತ ಹೇಳ್ದೇ ಇನ್ನೇನ್ ಹೇಳೋಕ್ ಆಗುತ್ತೇ? ಒಂದ್ ದಿನಾನಾದ್ರೂ ಹೊರಗಿನ ಪ್ರಪಂಚದ ಬಗ್ಗೆ ಯೋಚ್ನೇ ಮಾಡಿ ಗೊತ್ತೇನ್ರೀ ಅವರಿಗೆ? ತಾವ್ ಆಡಿದ್ದೇ ಆಟ ತಾವ್ ಮಾಡಿದ್ದೇ ಮಾಟಾ ಅನ್ನೋ ಗುಂಗ್ನಲ್ಲಿ ತಮ್ಮಲ್ಲಿರೋ ಡಾಲರ್ರೂ-ಪೌಂಡೂ-ಯೂರೋಗಳನ್ನ ಝಳಪಿಸ್ತಾನೇ ನಮ್ಮಲ್ಲಿರೋ ರುಪಾಯಿ ಎಣಿಸೋ ಜನಗಳನ್ನ ಕೊಂದು ಬಿಟ್ಟಿರೋದು. ಕಷ್ಟಾ ಇರ್ಲಿ, ಸುಖಾ ಇರ್ಲಿ ಕಂಡಿದ್ದನ್ನೆಲ್ಲ ರೊಕ್ಕದಿಂದ ಕೊಳ್ತೀವಿ ಅನ್ನೋ ಮಾತು ಎಲ್ಲೀವರೆಗೆ ನಡೆಯುತ್ತೇ ನೀವೇ ಹೇಳಿ’ ಎಂದು ನನಗೇ ತಿರುಮಂತ್ರ ಹಾಕಲು ನೋಡಿತು.

    ನಾನು, ’ಓಹ್, ಪ್ರತಿಯೊಂದೂ ದುಡ್ಡಿನ ಸುತ್ಲೂ ತಿರುಗುತ್ತೇ, ಅಲ್ವೇನು?’ ಅಂದು ಸುಮ್ಮನಾದೆ.

    ’ನೋಡಿ ನೋಡಿ, ನಮಗೇನೋ ಅರ್ಥ ಆಗದ ಹೀಗೆ ದೊಡ್ಡದೊಂದು ವಾಕ್ಯವನ್ನ ಮಧ್ಯೆ ಸೇರಿಸಿ ಏನೂ ಎಕ್ಸ್‌ಪ್ರೆಶ್ಶನ್ನೇ ಇಲ್ದಿರೋ ಮುಖವನ್ನ ಮಾಡೋ ಕಲೆ ಅನಿವಾಸಿಗಳಿಗಲ್ದೇ ಇನ್ಯಾರಿಗೆ ಬರುತ್ತೇ?’ ಎಂದು ಬಲಗಡೆ ದ್ರಾಕ್ಷಿ ಸೊಪ್ಪು ಹಾಕಿತು.

    ’ದುಡ್ದಿನ ವಿಷ್ಯಾ ಎತ್ತಿದೋನು ನಾನಂತೂ ಅಲ್ಲಾ!’ ಎಂದು ಒಂದು ಕ್ಷಣ ತಡೆದು, ’ನಿಮ್ಮಗಳಲ್ಲೇ ಅಡಗಿರೋ ಭಿನ್ನತೆ, ಭಿನ್ನಾಭಿಪ್ರಾಯದ ಮಸೂರದಲ್ಲಿ ಎಲ್ರುನ್ನೂ ನೋಡೋ ಹಾಗೆ ಅನಿವಾಸಿಗಳನ್ನೂ ನೋಡಿ, ಅದರಲ್ಲಿ ಕಾಣೋದೇನಿದ್ರೂ ನಿಮಗೆ ಹಳದಿಯೇ, ಕಾಮಾಲೆ ರೋಗ ನನಗಂತೂ ಬಂದಿಲ್ಲ’ ಎಂದು ಮತ್ತೆ ಸುಮ್ಮನಾದೆ.

    ಎಡಗಡೆ ಇದ್ದ ದ್ರಾಕ್ಷಿಗೆ ಈಗಂತೂ ಸಿಟ್ಟೇ ಬಂದಿತು ಅಂತಾ ಕಾಣ್ಸುತ್ತೆ, ’ಬಾರಿ ಶಾಣ್ಯಾ ಇದೀರ್ ನೋಡ್ರಿ, ಅದೆಷ್ಟು ಬೇಗ ನಮ್ಮ ಆರ್ಗ್ಯುಮೆಂಟೇ ತೆಗೆದು ನಮ್ಮ ಮೇಲೇ ಗೂಬೇ ಕೂರಿಸಿ ತಮ್ಮನ್ನ ತಾವೇ ಸರಿ ಅಂತ ಸಾಧಿಸಿಕೊಳ್ಳೋ ನಿಮ್ಮಂತೋರಿಗೆಲ್ಲಾ ಒಂದ್ ಗತಿ ಕಾಣ್ಸದೇ ಇದ್ರೆ ನೋಡಿ ಮತ್ತೆ?’ ಎಂದು ಕತ್ತಿ ಮಸೆಯಿತು.

    ’ಓಹ್, ಏನು...ಅನಿವಾಸಿಗಳ ನಡೆನುಡಿಯ ಬಗ್ಗೆ ಪುಸ್ತಕಾ ಬರೀತೀರೇನು?’ ಎಂದು ಜೋರಾಗಿ ನಗುವ ಧ್ವನಿಯನ್ನು ಮಾಡಿ ಕೈಯಲ್ಲಿನ ಚಮಚೆಯಿಂದ ಪಕ್ಕೆಗೆ ತಿವಿದೆ, ’ಬರೀರಿ, ಬರೀರಿ - ನಿಮ್ಮಗಳ ಸಾಹಿತ್ಯವೇ ದೊಡ್ದು, ನೀವ್ ಬರ್ದಿರೋದೇ ರಾಮಾಯಣ!’

    ಆ ಎರಡೂ ದ್ರಾಕ್ಷಿಗಳು ಒಕ್ಕೊರಲಿನಿಂದ, ’ದಯವಿಟ್ಟು ಈಗ ನಮ್ಮನ್ನ ಸುಮ್ನೇ ಬಿಟ್ ಬಿಡಿ ಸಾರ್, ಕಾರ್ಯಕ್ರಮ ಶುರುವಾಗೋ ಹೊತ್ತಾಯ್ತು’ ಎಂದು ಆರ್ತರಾಗಿ ಬೇಡಿಕೊಂಡವು.

    ನಾನಿದ್ದೋನು, ’ಇನ್ನೊಬ್ರ ಬದುಕಿನ ಬಗ್ಗೆ ಬೇಕಾಬಿಟ್ಟಿ ಮಾತನಾಡಿ ಅದೇನೋ ಕಾರ್ಯಕ್ರಮ ಅಂತ ಸಾಯ್ತಿರೋ ನಿಮಗೆ ಸಮಯದ ಪ್ರಜ್ಞೇ ಬೇರೆ ಕೇಡಿಗೆ’ ಎನ್ನುತ್ತಾ ಇವತ್ತು ಪಾಯಸಕ್ಕೆ ದ್ರಾಕ್ಷಿ ಹಾಕದಿದ್ರೇನೇ ಲೇಸು ಎಂದು ದ್ರಾಕ್ಷೀ ಡಬ್ಬದ ಮುಚ್ಚಳವನ್ನು ಹಾಕಿದರೂ, ದ್ರಾಕ್ಷಿ ಸ್ನೇಹಿತರು ಹೇಳಿದ ’ಅನಿವಾಸಿಗಳು ಯಾವಾಗ್ ನೋಡಿದ್ರೂ ತಮ್ ತಮ್ ಗುಂಗ್ನಲ್ಲೇ ಇರ್ತಾರೇ’ ಎನ್ನುವ ವಾಕ್ಯಗಳು ನನ್ನ ಮನದಲ್ಲಿ ಅನುರಣಿಸತೊಡಗಿದವು.

    Wednesday, October 10, 2007

    ಕೂದಲು ಕತ್ತರಿಸೋರೂ ಪ್ರಶ್ನೆ ಕೇಳ್ತಾರೆ ಅಂದ್ರೆ...

    'Was your marriage arranged or you picked your wife?' ಎಂದು ಮೊನ್ನೆ ನೇರ ಮುಖದ ಪ್ರಶ್ನೆಯನ್ನು ಕೇಳಿದ್ದು ಬೇರೆ ಯಾರೂ ಅಲ್ಲ, ನನ್ನ ಸಬ್‌ಸ್ಟಿಟ್ಯೂಟ್ ಹೇರ್ ಡ್ರೆಸ್ಸರ್ರ್ ಡೆಬಿ. ಭಾನುವಾರ ಬೆಳಿಗ್ಗೆ ಇನ್ನೂ ಕಾಫಿ ಬೀಳದ ನರಮಂಡಲದ ವ್ಯವಸ್ಥೆಯಲ್ಲಿ ಇಂಥ ಪ್ರಶ್ನೆಗೆ ನಾನಂತೂ ತಯಾರಿರಲಿಲ್ಲ. ಒಡನೆಯೇ ನನ್ನ ಮುಖ ಅಚಾನಕ್ ಆಗಿ ಕಷ್ಟದ ಟಾಪಿಕ್ ಅನ್ನು ಎತ್ತಿಕೊಂಡ ವರದಿಗಾರನನ್ನು ಎದುರಿಸುವ ಪ್ರೆಸಿಡೆಂಟ್ ಬುಷ್ ಥರ ಆಗಿ ಹೋಗಿತ್ತು. ನನ್ನ ಮಾಮೂಲಿ ಹೇರ್ ಕಟ್ ಮಾಡುವವಳು ಡಾಲಿ ಎನ್ನುವ ಗುಜರಾತಿ ಹೆಂಗಸು. ಆಕೆ ಯಾವ ಲಂಗು ಲಗಾಮಿಲ್ಲದೇ ಬಿಳಿ-ಕಪ್ಪು-ಕಂದು ಬಣ್ಣದ ಜನರ ಮಾತನಾಡುವುದು ನನಗಿಷ್ಟವಾದರೂ ವೃತ್ತಿಯಲ್ಲಿ ಒಬ್ಬ ಕೂದಲು ಕತ್ತರಿಸುವವಳಾಗಿ ಆಕೆಗೆ ಅವಳ ಮಿತಿ ಇರುವುದು ಮೊದಲ ದಿನದಿಂದಲೇ ಸ್ಪಷ್ಟವಾದ್ದರಿಂದ ನಾನು ಆಕೆಯ ಮಾತುಗಳನ್ನು ಬಹಳ ಮಟ್ಟಿಗೆ ಒಂದು ಕಿವಿಯಿಂದ ಕೇಳಿ ಮತ್ತೊಂದು ಕಿವಿಯಿಂದ ಬಿಟ್ಟರೂ ಎಷ್ಟೋ ಸಾರಿ ಆಕೆಯ ಸ್ಪಷ್ಟವಾದ ನೋಟ ಇಷ್ಟವಾಗಿರೋದು ನಿಜ. ಕೂದಲು ಕತ್ತರಿಸುವವ, ಬಟ್ಟೆ ಇಸ್ತ್ರಿ ಮಾಡಿಕೊಡುವವ, ತರಕಾರಿ ಮಾರುವವ ಹಾಗೂ ಅವರ ಗಿರಾಕಿಯ ನಡುವೆ ಭಾರತದಲ್ಲಿ ಒಂದು ಅನ್ಯೋನ್ಯ ಸಂಬಂಧವಿರುತ್ತದೆ, ಅವರು ಎಷ್ಟೋ ಜನ ಗಿರಾಕಿಗಳ ಜೊತೆ ನಡೆದುಕೊಂಡು ಅವರದ್ದೇ ಆದ ಒಂದು ಮಾತಿನ ವರಸೆಯನ್ನು ಕಂಡುಕೊಂಡಿರುವುದೂ ಅದರಲ್ಲಿ ಕೆಲವೊಮ್ಮೆ ಗಮನ ಸೆಳೆಯುವ ಅಂಶಗಳು ಹೊರ ಬರುವುದನ್ನು ನಾನು ಗಮನಿಸಿದ್ದೆ. ಆದರೆ ಇಲ್ಲಿ ನನ್ನ ಮತ್ತು ನನ್ನ ಕೂದಲು ಕತ್ತರಿಸುವವಳ ಸಂಬಂಧ ಭಾರತದ ಅಂತಹ ಸಂಬಂಧದ ಒಂದು ಸಣ್ಣ ಎಳೆ ಅಷ್ಟೇ, ಅದನ್ನು ಬಿಟ್ಟರೆ ವ್ಯಾಪಾರಿ-ಗ್ರಾಹಕ ಸಂಬಂಧದಲ್ಲಿ ಬೇರೆ ಯಾರು ’ಮನಬಿಚ್ಚಿ’ ಮಾತನಾಡಿದ್ದನ್ನು ನಾನು ಈ ವರೆಗೂ ನೋಡಿಲ್ಲ.

    ಕೂದಲು ಕತ್ತರಿಸುವ ವ್ಯಕ್ತಿ ಎಂದರೆ ಕೃತಕವಾದೀತು, ಹಜಾಮ ಎನ್ನೋಣ, ನಾಪಿಗ ಎನ್ನೋಣ - ಹಜಾಮ ಎನ್ನುವುದು ಹಾರ್ಶ್ ಆದರೆ, ನಾಪಿಗ ಎನ್ನುವುದು ತೀರಾ ನುಣುಪಾದೀತು, ಕ್ಷೌರ ಮಾಡುವವನು ಎಂದರೆ ಗ್ರಾಂಥಿಕವಾದೀತು! ಇವೆಲ್ಲ ಬಳಕೆಯಲ್ಲಿ ನೀವು ಬರೀ ಪುಲ್ಲಿಂಗದ ಬಳಕೆಯನ್ನು ಗಮನಿಸಿರಬಹುದು. ಹಜಾಮೆ, ನಾಪಿಗಿತ್ತಿ ಎನ್ನುವ ಪದಗಳು ಇದ್ದಂತೆ ನನಗೆ ತೋರದು. ಅಂದರೆ ಭಾರತದಲ್ಲಿ ಕ್ಷೌರ ಮಾಡುವುದು ಗಂಡಸರು ಮಾಡುವ ಕೆಲಸವೇ ಸರಿ, ಇತ್ತೀಚಿನ ಬ್ಯೂಟಿ ಪಾರ್ಲರ್‌ಗಳಲ್ಲಿ ಹೆಂಗಸರು ಅದೇನೇನೆಲ್ಲವನ್ನು ಮಾಡಿ ಬೆಚ್ಚಗಿನ ಏರ್ ಕಂಡೀಷನ್ಡ್ ಕೋಣೆಗಳಲ್ಲಿ ಬಹಳಷ್ಟು ಹಣವನ್ನು ಸುಲಿಯುವುದು ನಿಜವಾದರೂ ನನ್ನ ಮತ್ತು ನಮ್ಮೂರಿನ ಹಜಾಮನ ಸಂಬಂಧ ಬಹಳ ಅನ್ಯೋನ್ಯವಾದದ್ದೇ. ಊರಿನಲ್ಲಿ ನಡೆಯುವ ಪ್ರತಿಯೊಂದು ಬದಲಾವಣೆಗಳಿಗೂ ಆತ ಒಂದು ರೀತಿಯ ತೆರೆದ ಕಣ್ಣಿನ ವರದಿಗಾರನಿದ್ದ ಹಾಗೆ. ನೀವು ಯಾವುದೇ ಊರಿನ ಇತಿಹಾಸವನ್ನು ಹುಡುಕಿ ಹೋದರೂ ಆಯಾ ಊರಿನ ಹಜಾಮನ ಬಳಿ ಇರಬಹುದಾದ ಮಾಹಿತಿಗಳು ನಿಮಗೆ ಅಲ್ಲಿನ ಗ್ರಂಥಾಲಯಗಳಲ್ಲಿಯೂ ದೊರೆಯಲಾರವು. ಹೀಗೆ ಒಂದು ಊರಿನ ಸವಿತಾ ಸಮಾಜಕ್ಕೆ ಅವರದ್ದೇ ಆದ ಒಂದು ಕಾಯಕವಿದೆ, ಅದು ಊರಿನ ಇತಿಹಾಸ, ವರ್ತಮಾನವನ್ನು ಯಾವಾಗಲೂ ತಮ್ಮ ಡೇಟಾಬೇಸ್‌ಗಳಲ್ಲಿ ಅಪ್‌ಡೇಟ್ ಮಾಡಿಕೊಂಡು ಹೋಗುವುದು.

    ಅಮೇರಿಕಕ್ಕೆ ಬಂದವರ ಪಾಡಿನಲ್ಲಿ ಇಲ್ಲಿ ಮೊದಲ ದಿನದಿಂದಲೇ ಮಹಿಳಾ ಕ್ಷೌರಿಕರ ಜೊತೆ ಹೊಂದಿಕೊಳ್ಳುವ ಅನಿವಾರ್ಯತೆ. ನಿಮಗೆಲ್ಲ ಹೇಗೋ ಏನೋ ಗೊತ್ತಿಲ್ಲ, ನನಗಂತೂ ಒಬ್ಬ ಒಳ್ಳೆಯ ಕ್ಷೌರಿಕನನ್ನು ಕಂಡುಕೊಳ್ಳುವುದು ಒಂದು ಒಳ್ಳೆಯ ದಿನಸಿ ಅಂಗಡಿಯನ್ನು ಕಂಡುಕೊಳ್ಳುವಷ್ಟೇ ಮುಖ್ಯ. ಮೊದಮೊದಲ ನಾಚಿಕೆ, ಬಿಂಕ ನನಗಂತೂ ಇಲ್ಲ - ಒಂದು ರೀತಿ ಕರ್ನಾಟಕದ ಜನರು ಬಸ್ಸುಗಳಲ್ಲಿ ಮಹಿಳಾ ಕಂಡಕ್ಟರುಗಳನ್ನು ಸ್ವೀಕರಿಸಿದ ಹಾಗೆ, ಮಹಿಳಾ ಆಟೋ ಡ್ರೈವರುಗಳನ್ನು ಗೌರವಿಸುವ ಹಾಗೇ ನಾನೂ ಹೊಂದಿಕೊಂಡು ಬಿಟ್ಟಿದ್ದೇನೆ. ಕೂದಲು ಕತ್ತರಿಸುವ ವಾತಾವರಣ ಬಹಳ ಮುಖ್ಯವಾದದ್ದು. ನಿಮ್ಮ ಮುಖವನ್ನು ಎಲ್ಲ ಬೆಳಕುಗಳಲ್ಲಿ ತೋರಿಸುವ ಕನ್ನಡಿ ನಿಮ್ಮ ಮುಂದೇ ಇರುತ್ತದೆ, ಜೊತೆಗೆ ಬಹಳಷ್ಟು ಸಾರಿ ಕ್ಷೌರ ಮಾಡುವವರು ನಿಮ್ಮನ್ನುದ್ದೇಶಿಸಿ ಮಾತನಾಡುವಾಗ ನಿಮ್ಮ ಕನ್ನಡಿಯ ಬಿಂಬವನ್ನು ನೋಡುತ್ತಿರುತ್ತಾರೆ ಎಂಬುದೂ ಸ್ಪಷ್ಟ. ಆದ್ದರಿಂದ ಅವರು ಕೇಳುವ ಪ್ರಶ್ನೆಗೆ ನೀವು ಯಾವ ಉತ್ತರ ಕೊಡುತ್ತೀರಿ, ಆ ಉತ್ತರಕ್ಕೆ ತಕ್ಕಂತೆ ನಿಮ್ಮ ಮುಖಭಾವ ಹೇಗೆ ಬದಲಾಗುತ್ತದೆ, ನೀವು ಸುಳ್ಳು ಹೇಳುತ್ತಿದ್ದೀರೋ ಇಲ್ಲವೋ ಎನ್ನುವುದನ್ನು ನಿಮಗೂ ಸ್ಪಷ್ಟ ಪಡಿಸುವ ಒಂದು ಸ್ವಚ್ಛ ಕನ್ನಡಿ ಇರೋದರಿಂದ ನೀವು ಎಷ್ಟು ಸಾಧ್ಯವೋ ಅಷ್ಟು ಸತ್ಯವಂತರಾಗದೇ ಬೇರೆ ದಾರಿಯೇ ಇರೋದಿಲ್ಲ. ನಿಮಗೆ ಗೊತ್ತಿರೋ ಹಾಗೆ ನಿಮ್ಮ ಹಾಗೂ ಕನ್ನಡಿಯಲ್ಲಿನ ನಿಮ್ಮ ಬಿಂಬದ ನಡುವೆ ಒಂದು ಅವಕಾಶವಿರುತ್ತದೆ (space), ಆ ವರ್ಚುವಲ್ ಇಮೇಜ್ ನಿಮ್ಮ ಹಾಗೂ ಕನ್ನಡಿಯ ನಡುವಿನ ಅಂತರದ ಎರಡು ಪಟ್ಟು ದೂರದಲ್ಲಿರುತ್ತದೆ. ಈ ರಿಯಲ್ ಹಾಗೂ ವರ್ಚುವಲ್ ಅವಕಾಶ ಒಂದು ರೀತಿಯ ರಂಗಪ್ರದೇಶವನ್ನು ಅನುಗೊಳಿಸಿ ನೀವು ಹಾಗೂ ನಿಮ್ಮ ನಡತೆ, ಹಾವಭಾವ, ಆಚಾರ-ವಿಚಾರ ಇವುಗಳಿಗೆಲ್ಲಕ್ಕೂ ಬೆಳಕು ತೋರಿ ನಿಮ್ಮನ್ನು ನೀವು ಬೇಡವೆಂದರೂ ಇಬ್ಬಂದಿಗೆ ಸಿಲುಕಿಸಬಲ್ಲದು.

    ಸಬ್‌ಸ್ಟಿಟ್ಯೂಟ್ ಹೇರ್ ಡ್ರೆಸ್ಸರ್ ಡೆಬಿ ಕೇಳಿದ ಪ್ರಶ್ನೆಗೆ ಇಲ್ಲಿನ ರಾಜಕಾರಣಿಗಳು ಹೇಳುವಂತೆ ಸುತ್ತಿ ಬಳಸಿ ಉದ್ದವಾದ ಉತ್ತರವನ್ನು ಕೊಡಬಹುದಿತ್ತು, ಆದರೆ ಹೇರ್ ಸೆಲೂನ್‌ನಲ್ಲಿ ಅಂತಹ beating around the bush ಮುಮೆಂಟ್‌ಗಳಿಗೆ ಅವಕಾಶವೇ ಬರೋದಿಲ್ಲ. ನನ್ನ ಮಾಮೂಲಿ ಹೇರ್ ಡ್ರೆಸ್ಸರ್ ಡಾಲಿ ಇರದಿದ್ದುದು ಒಂದು ಬದಲಾವಣೆ, ಅಂತಹ ಬದಲಾವಣೆಯನ್ನು ನಾನೂ ಫೈಟ್ ಮಾಡಬೇಕಾಗುತ್ತದೆ ಹಲವಾರು ವಿಚಾರಗಳಲ್ಲಿ - ಕೂದಲು ಕತ್ತರಿಸುವ ಆಕೆಯ ಕೈಚಳಕ ಹೇಗೋ ಏನೋ ಎನ್ನುವ ಮೂಲಭೂತ ಪ್ರಶ್ನೆಯಿಂದ ಹಿಡಿದು ಆಕೆಯ ಪೊಲಿಟಿಕಲ್, ಧಾರ್ಮಿಕ, ಸಾಂಸ್ಕೃತಿಕ ನೆಲೆಗಟ್ಟಿನ ಹಿನ್ನೆಲೆಯನ್ನು ಅರಿತು ಅಥವಾ ಅದಕ್ಕೆ ಸೆನ್ಸಿಟಿವ್ ಆಗಿದ್ದುಕೊಂಡು ನಾನು ಆಕೆಯೊಡನೆ ಮಾತನಾಡಬೇಕಾಗುತ್ತದೆ. ಇರೋ ಕೆಲವೇ ನಿಮಿಷಗಳಲ್ಲಿ ಆಕೆ ತನ್ನ ಬಗ್ಗೆ ಬಹಳಷ್ಟು ಹೇಳಿ ಬಿಟ್ಟಿದ್ದಳಾದ್ದರಿಂದ ಆಕೆಯೊಡನೆ ವ್ಯವಹರಿಸಲು ನನಗೆ ಯಾವ ಕಷ್ಟವೂ ಆಗಲಿಲ್ಲ. ಇಲ್ಲೇ ನಾವಿರುವ ಊರಿನ ಹತ್ತಿರದಲ್ಲಿಯೇ ಒಂದು ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸುಗಳಲ್ಲಿ ನೆಲೆಸಿ ಬಹಳಷ್ಟು ಭಾರತೀಯರೊಡನೆ ಈಗಾಗಲೇ ಸಾಕಷ್ಟು ಒಡನಾಡಿರುವ ಒಮ್ಮೆ ಮದುವೆಯಾಗಿ ಈಗ ಡೈವೋರ್ಸ್ ಪಡೆದಿರುವ ನಲವತ್ತರ ನಡುವಿನ ಪ್ರಾಯದಲ್ಲಿರುವ ಆಕೆಯ ಪ್ರಶ್ನೆಗಳು ಹಾಗೂ ಉತ್ತರ ನೇರವಾದದ್ದೇ. ಅಂತಹ ತಾತ್ಕಾಲಿಕ ಸಂಬಂಧ ಅದೇ ರೀತಿಯ ಸಂವಾದವನ್ನು ಬಳಸುತ್ತದೆ ಹಾಗೂ ಬೆಳಸುತ್ತದೆ. ಆಕೆ ಕೇಳುವ ಪ್ರಶ್ನೆಗಳಿಗೆ Its none of your business ಎನ್ನುವ ಪ್ರಮೇಯವೇ ಬರೋದಿಲ್ಲ! ಆದ್ದರಿಂದಲೇ ಆಕೆಗೆ ನನ್ನ ಉತ್ತರ - ’No and yes. Was I free to pick anyone as my wife? No. Did I pick or chose my wife? Yes.'

    ನಿಮಗೇನಾದರೂ ಇದೇ ರೀತಿಯ ಸಂದಿಗ್ಧ ಒದಗಿ ಬಂದಿದೆಯೇ? ಹಾಗೇನಾದರೂ ಆದಲ್ಲಿ ನಾನು ಆಗಾಗ್ಗೆ ಬಳಸುವ ಭಾರತೀಯರನ್ನು ವಿಸ್ತಾರವಾಗಿ ಕವರ್ ಮಾಡುವ ಈ ಕೆಳಗಿನ ಹೇಳಿಕೆಯೊಂದನ್ನು ಬಳಸಿ ನೋಡಿ ನಿಮ್ಮ ಕಷ್ಟ ಸ್ವಲ್ಪ ಕಡಿಮೆಯಾಗಬಹುದು - It varies (in India)...there are one billion people over there and as many cultures!

    Sunday, July 08, 2007

    ’ಅವರೊಡನೆ’ ಒಂದು ಸಂವಾದ...

    ನಮ್ಮೂರಿನ್ ಪೋಸ್ಟ್ ಮಾಸ್ಟರ್ ಆಚಾರ್ರು ತಮಿಗ್ ಬರೋ ಅಷ್ಟೊಂದ್ ಕಡಿಮೆ ಸಂಬಳದಲ್ಲಿ ಅದ್‌ಹೆಂಗ್ ಜೀವ್ನಾ ನಡೆಸ್ತಿದ್ರೋ, ಮಕ್ಳೂ-ಮರಿ ಇರೋವಂತ ದೊಡ್ಡ ಸಂಸಾರಾನೇ ಅವ್ರುದ್ದು, ಅಂತ ಎಷ್ಟೋ ಸರ್ತಿ ಯೋಚ್ನೆ ಬರುತ್ತೆ. ನಾನ್ ಕೆಲ್ಸಾ ಮಾಡೋಕ್ ಶುರು ಮಾಡ್ದಾಗ್ಲಿಂದ್ಲೂ ಒಂದಲ್ಲಾ ಒಂದ್ ರೀತಿಯಿಂದ ಸಂಬ್ಳಾ ಜಾಸ್ತಿ ಆಗ್ತಾ ಹೋಗ್ತಾ ಇರೋದು ಸಹಜವಾದಷ್ಟೇ ಕೈಗ್ ಬರೋ ಕಾಸು ಕಮ್ಮೀ ಅಂತ್ಲೇ ಅನ್ನಿಸ್ತಿರೋದೂ ಅಷ್ಟೇ ಸಹಜವಾಗಿ ಬಿಟ್ಟಿದೆ! ಈ ಆಸೆಗೊಳಿಗೊಂದ್ ಮಿತಿ ಅಂತಾ ಬ್ಯಾಡ್ವಾ ಅಂತ ಬಹಳಷ್ಟ್ ಸರ್ತಿ ಅನ್ಸಿರೋದೂ ನಿಜವೇ.

    ಆ ಪೋಸ್ಟ್ ಮಾಸ್ಟರ್ರುಗಳಿಗೆ ಏನ್ ಕಡಿಮೆ ಇಲ್ಲಾ ಪ್ರತೀ ಸರ್ತಿ ಮನಿ ಆರ್ಡ್ರು ಹಂಚೋಕ್ ಹೋದಾಗ್ಲೆಲ್ಲಾ ಎರಡ್ ರೂಪಾಯ್, ಐದ್ ರೂಪಾಯ್ ಅಂತ ಜನ ಕೊಡ್ತ್ಲೇ ಇದಾರೆ, ಅವರ ಮೇಲ್ ಸಂಪಾದ್ನೇ, ಅದೇ ಗಿಂಬಳಾ ಅಂತರಲ್ಲಾ ಅದಕ್ಕ್ಯಾವಾಗ್ಲೂ ಕಮ್ಮೀ ಅಂತಿಲ್ಲ. ಬರೋ ಸಂಬ್ಳದಿಂದ ಜೀವ್ನಾ ಸಾಗ್ಸೋದ್ ಅಂದ್ರೆ ಹುಡುಗಾಟ್ವೇ, ಈಗಿನ್ ಕಾಲ್ದಲ್ಲಿ ಹಂಗ್ ಯಾವಾನಾದ್ರೂ ಮಾಡ್ತಾನೆ ಅಂತಂದ್ರೆ ಅಷ್ಟೇಯಾ, ತಿಂಗ್ಳು ಕೊನಿಗೆ ಹೊಟ್ಟೇಗ್ ತಣ್ಣೀರ್ ಬಟ್ಟೆಯೇ ಗತಿ.

    ಏನ್ ಮೇಲ್ಸಂಪಾದ್ನೇ ಬಂದ್ರೂ ಅಷ್ಟೇ - ಒಬ್ ಅಂಚೆ ಇಲಾಖೆ ಕೆಲ್ಸಗಾರನಿಗೆ ಬಹಳಷ್ಟು ಕನಸುಗಳೇನಾದ್ರೂ ಇರೋಕಾಗುತ್ಯೇ? ಅವೇ - ನಮ್ ಮಕ್ಳುನ್ ಇಂಜಿನಿಯರಿಂಗೂ, ಮೆಡಿಕಲ್ಲೂ ಓದಿಸ್ಬೇಕು; ದೊಡ್ಡ ಬಂಗ್ಲೇ ಕಟ್ ಬೇಕು; ಹಾಯಾಗಿ ಇರ್‌ಬೇಕು, ಇತ್ಯಾದಿ. ಗೃಹಸ್ಥಾಶ್ರಮ ಅಂದ್ರೇನು ಅಂತ ಗೊತ್ತಾಗೋದೇ ಮನೇ ತುಂಬ ಮಕ್ಳಿರೋಂಥ ಮನೆಯ ಹಿರಿಯನಾಗಿ, ಸರ್ಕಾರಿ ಶಾಲೆ ಮೇಷ್ಟ್ರೋ ಅಥವಾ ಅಂಚೆ ಇಲಾಖೆ ನೌಕರನೋ ಆಗಿಕೊಂಡು ಮನೆ ಯಜಮಾನನಾಗಿ ಇಪ್ಪತ್ತು-ಮೂವತ್ತು ವರ್ಷ ಜೀತಾ ತೇದಿ-ತೇದಿ ಹಾಕ್ದಾಗ್ಲೇ. ಮಕ್ಳೂ-ಮರಿ ಓದಿಸೋದ್ ಹಾಗಿರ್ಲಿ, ಕಾಸಿಗ್ ಕಾಸು ಕೂಡಿ ಎರಡು ಹೆಣ್ ಮಕ್ಳು ಮದುವೆ ಮಾಡಿ ಸೈ ಅನ್ನಿಸ್ಕ್ಯಳ್ಳಿ ನೋಡಾಣಾ...ಇಂಥಾ ಒಂದ್ ಗೃಹಸ್ಥಾಶ್ರಮದಲ್ಲಿ ಬದುಕಿ ಜಯಿಸಿದಾ ಅಂತಂದ್ರೆ ಎಕ್ಸಿಕ್ಯೂಟಿವ್ ಆಗಿ ಕೈ ತುಂಬಾ ಸಂಪಾದ್ನೇ ಮಾಡೋ ಹತ್ ಹತ್ತು ಕೆಲ್ಸದ ಪುಣ್ಯ ಸಿಕ್ಕ ಹಾಗೆ...ಅದು ನೋಡ್ರ್ಯಪ್ಪಾ ನಿಜವಾದ ಸಂಸಾರ ಅಂದ್ರೆ. ಪಟ್‌ಪಟ್ಟಿ, ಸ್ಕೂಟ್ರು, ಕಾರ್‌ನ್ಯಾಗೆ ಹೋಗಿ ಚೈನಿ ಮಾಡ್‌ತಿರೋ ನಮ್ಮಂತೋರಿಗೆ ಗೊತ್ತಾಗಂಗಿಲ್ಲ. ಒಂದೋ ಎರಡೋ ಹಡಕಂಡೇ ನಮ್ ಆಕ್ರಂದನ ಮುಗಿಲು ಮುಟ್ಟೋ ಹೊತ್ತಿನೊಳಗ ಹಿಂದೆ ಹೆಂಗಪ್ಪಾ ಜನ ಸಂಸಾರ ಸಾಗಿಸ್ತಿದ್ರೂ ಅನ್ಸಂಗಿಲ್ಲಾ?

    ಹಾಕ್ಯಂಡ್ ಚಪ್ಲೀ ಸೈತಾ ಸವಿಯಂಗಿಲ್ಲಾ ಇದೊಂದ್ ನಮನಿ ಕೆಲ್ಸಾ ನೋಡ್ರಿ...ಅಂಗಿ ಕಾಲರ್ ಕೊಳೀ ಆಗದಿರೋಂಥ ಹವಾಮಾನದೊಳಗೆ ಬೇಯೋ ನಮಗೆ ಅತ್ಲಾಗ್ ಹೋಗಿ ಇತ್ಲಾಗ್ ಬಂದ್ರೆ ಉಸ್ಸ್ ಅನ್ನುವಂಗ್ ಆಗ್ ಹೋಗ್ತತಿ. ಮೈ ಮುರ್ದು-ಬಗ್ಸಿ ಕೆಲ್ಸಾ ಮಾಡೋ ಹೊತ್ಯ್ನ್ಯಾಗೆ ಕೂತ್ ಕಾಲಾ ಹಾಕ್ತವಿ, ಇನ್ನು ಕೂತ್ ತಿನ್ನೋ ಹೊತ್ತಿಗೆ ತೆವಳಿ ಸಾಯ್ತೇವಿ ಅನ್ಸಂಗಿಲ್ಲಾ? ಮನ್ಷಾ ಅಂದೋನ್ ಓಡಾಡ್ ಬಕು, ಮೈ ಬಗ್ಸಿ ದುಡಿಬಕು, ಹಂಗಾದ್ರೆ ಒಂದಿಷ್ಟು ಪರಿಶ್ರಮಾನಾದ್ರೂ ಆಗ್ತತಿ, ಮೈ ಮನಸು ಗಟ್ಟೀನಾರೆ ಆಗ್ತಾವೆ, ಅದು ಬಿಟ್ಟು ಬರೀ ತಲಿ ಖರ್ಚ್ ಮಾಡಿಕೊಂಡು ಪ್ರಪಂಚದ್ ಜನಾ ಎಲ್ಲಾ ಹಿಂಗ್ ಕುಂತಾ ಕಾಲಾ ತೆಗದೂ-ತೆಗದೂ ಅದ್ ಏನ್ ಉದ್ದಾರ್ ಆಗೈತಿ ಅಂತ ನೀವಾ ಹೇಳ್ರಲ್ಲಾ.

    ಅದಿರ್ಲಿ ಬಿಡ್ರಿ...ಏನ್ ಮಳೀರಿ ಈ ಸರ್ತಿ ಅವನೌವ್ನು, ಎಲ್ಲಾ ಕೆರೆ ಕಟ್ಟೇ ತುಂಬಿಕ್ಯಂಡ್ ಕೋಡೀ ಬಿದ್ದ್ ಹೋಗೋಷ್ಟೋ...ಇನ್ನೂ ನಿಂತಿಲ್ಲ ನೋಡ್ರಿ ಇದರ ಅರ್ಭಟಾ...ಗೊಂಧೀ ಹೊಳೀ ತುಂಬಿ ರಸ್ತೀ ಮ್ಯಾಗ್ ನೀರ್ ಬಂದು ಎಲ್ಲಾ ಬಸ್ನೂ ನಿಲ್ಲಿಸ್ಯಾರ್ರೀ, ಹಾನಗಲ್ಲೂ, ಹುಬ್ಬಳ್ಳಿ ಹೋಗ್‌ಬಕು ಅಂದ್ರ ತಿರುಕ್ಯಂಡ್ ಹೋಗ್‌ಬಕು. ವರದಾ ನದಿ ಇಷ್ಟು ಯಾವತ್ತೂ ತುಂಬಿ ಹರಿದಿದ್ದಾ ನನ್ ಜೀವ್‌ಮಾನ್‌ದಾಗ್ ನೋಡಿದ್ದಿಲ್ರಿ. ದೇಶಾ ಪೂರ್ತಿ ತೊಳದ್ ಹೋಗೋಷ್ಟು ಮಳೀ ಬಂದ್ರೂ ನಮ್ ದೇಶದಾಗ್ ತುಂಬಿರೋ ಕೋಳೀ ಎಲ್ಲೂ ಹೋಗೋಂಗ್ ಕಾಣ್ಸಲ್ಲ. ದೊಡ್ಡ ಮನ್ಷಾರು ತಮ್ ಪಾಡಿಗ್ ತಾವ್ ಇರ್ತಾರ, ಇತ್ಲಾಗ್ ಬಡವ್ರು ಸತ್‌ಗಂತ ಕುಂತಾರೆ, ಹೇಳೋರಿಲ್ಲ ಕೇಳೋರಿಲ್ಲ ಅನ್ನಂಗಾಗಿ ಹೋಗ್ಯದೆ. ಸಾಲಾ ಸೂಲಾ ಮಾಡೀ ಕಾಳೂ-ಕಡಿ ತಂದು ಬಿತ್ತಿ ಇನ್ನೇನು ಪೈರು ಚಿಗರ್ಕ್ಯಬಕು ಅನ್ನೋಷ್ಟರಲ್ಲಿ ಇದೊಂದ್ ಹಾಳ್ ಮಳಿ ಹೊಡಕಂತ ಕುಂತತ್ ನೋಡ್ರಿ...ಸಾಲಾ ಕೊಟ್ಟೋರ್‌ಗೇನ್ ಅನ್ನಣ, ಬಡ್ಡಿ ಹೆಂಗ್ ತೀರ್ಸಣ, ಹೆಂಡ್ರೂ-ಮಕ್ಳೂ ಮೈ ಮ್ಯಾಗ್ ಅರಿವೇ-ವಸ್ತ್ರಾನ್ ಎಲ್ಲಿಂದಾ ತರಣಾ. ಅತ್ಲಾಗ್ ಜೀವಾ ಕಳಕಂತವಿ ಅಂದ್ರೂ ಒಂದ್ ನಿಮ್ಷಾ ಮಳಿ ಬಿಡವಲ್ದು, ಮನ್ಯಾಗಾ ಬಿದ್ದು ಸಾಯ್‌ಬಕು...ಅದೂ ಅಲ್ಲೀ-ಇಲ್ಲೀ ಸೋರೀ-ಸೋರಿ ಎತ್ಲಾಗ್ ನೋಡಿದ್ರೂ ಹಸೀಹಸೀ ಮುಗ್ಗುಲು ವಾಸ್ನೆ ಹಿಡದ್‌ಬಿಟ್ಟತಿ.

    ***

    ’ಯಾರಿಗೆ ಟೀ ತರ್‌ಬೇಕು? ಇಲ್ಲಿ ಯಾರೂ ಇಲ್ಲವಲ್ಲಾ...’.

    ’ಏ ಇವಳೇ... ಇವರಿಗೊಂದು ಕಪ್ ಚಾ ತಂದ್ ಕೊಡು...’ ಅಂತ ಇನ್ನೇನೋ ಬಡಬಡಿಸುತ್ತಾ ಇದ್ರಿ... ಯಾವ್ದಾದ್ರೂ ಕನಸೇನಾದ್ರೂ ಬಿದ್ದಿತ್ತಾ?