Tuesday, November 04, 2008

ಇತ್ತೀಚಿನ ಮೂರು ಬೆಳವಣಿಗೆಗಳು ಹಾಗೂ ಪ್ರತಿಕ್ರಿಯೆ

ದಿನಗಳಲ್ಲಿ ರೆಪ್ಪೆ ಮಿಟುಕಿಸುವುದರೊಳಗೆ ಏನೇನೆಲ್ಲ ಆಗಿ ಹೋಗೋ ಸಾಧ್ಯತೆಗಳಿರುವಾಗ ಪ್ರತಿಕ್ರಿಯೆಯನ್ನು ಒಡನೆಯೇ ದಾಖಲಿಸಬೇಕಾದ ಅಗತ್ಯ ಒಮ್ಮೊಮ್ಮೆ ಕಂಡು ಬರೋದು ನಿಜ. ಅಂದರೆ ಎಲ್ಲವೂ ಆಗಿ ಹೋದ ಮೇಲೆ ಅಲ್ಲಲ್ಲಿ ಸಿಗೋ ಪ್ರತಿಕ್ರಿಯೆ ವರದಿಗಳನ್ನು ಓದಿಕೊಂಡು ನಮ್ಮ ಅನಿಸಿಕೆ ಅಭಿಪ್ರಾಯವನ್ನು ದಾಖಲಿಸೋದು ಒಂದು ರೀತಿ, ಇಲ್ಲವೇ ಎಲ್ಲವೂ ಆಗಿ ಹೋಗುತ್ತಿರುವಾಗಲೇ ನಮ್ಮ ನಿಲುವು ಅಭಿಪ್ರಾಯವನ್ನು ದಾಖಲಿಸೋದು ಮತ್ತೊಂದು ರೀತಿ.

೧. ಉತ್ತರ ಅಮೇರಿಕದ ಮುಂದಿನ ಅಧ್ಯಕ್ಷರು ಯಾರು?
ನನ್ನ ಪ್ರಕಾರ ಸೆನೆಟರ್ ಮೆಕ್ಕೈನ್ ಪಾಪ್ಯುಲಾರಿಟಿ ಮತವನ್ನು ಗೆಲ್ಲದಿದ್ದರೂ ಟ್ರೆಡಿಷನಲ್ ರಿಪಬ್ಲಿಕನ್ ಪಕ್ಷದ ಸ್ಟ್ರಾಂಗ್‌ಹೋಲ್ಡ್ ದೆಸೆಯಿಂದ ಹಾಗೂ ಇಂಡಿಯಾನ, ಫ್ಲೋರಿಡಾ, ಒಹಾಯೋ, ಪೆನ್ಸಿಲ್‌ವೇನಿಯಾ ಮೊದಲಾದ ಸ್ವಿಂಗ್ ಸ್ಟೇಟ್‌ಗಳಲ್ಲಿ ಬೇಕಾದ ಮತವನ್ನು ಗಳಿಸಿದ್ದೇ ಆದರೆ ಮುಂದಿನ ಪ್ರೆಸಿಡೆಂಟ್ ಆಗುವುದು ಖಂಡಿತ.

ಸದ್ಯದ ಸಮೀಕ್ಷೆಗಳ ಪ್ರಕಾರ ಸೆನೆಟರ್ ಒಬಾಮಾ ಪಾಪ್ಯುಲರ್ ಮತವನ್ನು ಗೆಲ್ಲುವಂತೆ ಕಂಡರೂ ಮತ್ತೆ ಈ ಸ್ವಿಂಗ್ ಸ್ಟೇಟ್‌ಗಳಲ್ಲಿಯ ಮತವೇ ಮುಖ್ಯವಾಗುತ್ತದೆ. ಈ ವರ್ಷದ ಚುನಾವಣೆಯಲ್ಲಿ ಬಹಳ ಹೆಚ್ಚಿನ ಜನರು ಮತಕಟ್ಟೆಗಳಿಗೆ ಬರುತ್ತಿರುವುದನ್ನು ನೀವೂ ಗಮನಿಸಿರಬಹುದು. ಮೊಟ್ಟ ಮೊದಲನೇ ಬಾರಿಗೆ ಅಮೇರಿಕಕ್ಕೆ ಆಫ್ರಿಕನ್ ಅಮೇರಿಕನ್ ಪ್ರೆಸಿಡೆಂಟ್ ಇರಲಿ ಎಂದು ಎಷ್ಟೋ ಜನರು ಪೋಲ್‌ಗಳಲ್ಲಿ ಹೇಳಿದ್ದರೂ ಸಹ ಕೆಲವರ ಮನಸ್ಸಿನಲ್ಲಿ ತಮ್ಮನ್ನು ರೇಷಿಯಲ್ ಎಂದು ತಿಳಿದುಕೊಳ್ಳದಿರಲಿ ಎಂದು ಸುಳ್ಳು ಸಮೀಕ್ಷೆಗಳಿಗೆ ಉತ್ತರ ಕೊಟ್ಟಿರಬಹುದು ಎಂಬ ಸಂದೇಹವೂ ಮನಸ್ಸಿನಲ್ಲಿದೆ.

ಚುನಾವಣೆಯ ಉತ್ತರವೇನಾದರೂ ಇರಲಿ - ಆಫ್ರಿಕನ್ ಅಮೇರಿಕದ ಮೂಲದ ಪ್ರೆಸಿಡೆಂಟ್ ಚುನಾಯಿತರಾದಲ್ಲಿ ಅಮೇರಿಕದ ಜನರ ಮನೋವೈಶಾಲ್ಯತೆಯನ್ನು ಜಗತ್ತಿಗೆ ಸಾರುವುದರ ಜೊತೆಗೆ ಉತ್ತರ ಅಮೇರಿಕದ ಕಾಂಗ್ರೆಸ್, ಸೆನೆಟ್ ಹಾಗೂ ಪ್ರೆಸಿಡೆನ್ಸಿ ಎಲ್ಲವೂ ಡೆಮೋಕ್ರಾಟ್‌ಮಯವಾಗುವುದು ನಿಜ. ಅಲ್ಲದೇ ಯಾವ ಪ್ರೆಸಿಡೆಂಟ್ ಹಾಗೂ ಸರ್ಕಾರ ಮುಂದೆ ಬಂದರೆ ನಮ್ಮ ದೇಶಕ್ಕೆ ಅದರಿಂದ ಏನು ಅನುಕೂಲ/ಅನಾನುಕೂಲ ಎನ್ನುವುದು ಇನ್ನೂ ದೊಡ್ಡ ಪ್ರಶ್ನೆ.

೨. ಕನ್ನಡ ಹಾಗೂ ಶಾಸ್ತ್ರೀಯ ಸ್ಥಾನಮಾನ
ಓಹ್, ಉತ್ತರ ಅಮೇರಿಕದಿಂದ ನೇರವಾಗಿ ಕರ್ನಾಟಕ್ಕೆ ಬರೋಣ. ತಮಿಳರ ಭಾಷಾ ವ್ಯಾಮೋಹ ಹಾಗೂ ಅವರು ಅಳವಡಿಸಿಕೊಂಡ ತಂತ್ರಗಳು ಕನ್ನಡದ ಔದಾರ್ಯಗಳಿಗೆ ಅನ್ವಯವಾಗುವಲ್ಲಿ ಇಷ್ಟು ಕಾಲ ಬೇಕಾಯಿತು. ಈ ಬೆಳವಣಿಗೆ ನಿಜವಾಗಿಯೂ ಸ್ವಾಗತಾರ್ಹ. ನಮಗೂ ನಮ್ಮತನವಿದೆ, ನಮ್ಮ ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಎಲ್ಲಕ್ಕಿಂತ ಮುಖ್ಯವಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಸಿಗುವ ಮನ್ನಣೆ, ಕನ್ನಡ ಸಂಬಂಧಿ ಯೋಜನಗೆಗಳು ಅಭಿವೃದ್ಧಿಗಳು ಇವೆಲ್ಲವೂ ನಮಗೆ ಬೇಕಾಗಿತ್ತು. ಕೊನೆಗೆ ಏನಿಲ್ಲವೆಂದರೂ ೨೦೦೮ ರಲ್ಲಾದರೂ ಕೇಂದ್ರದ ಅಸ್ತು ಸಿಕ್ಕಿತಲ್ಲ ಅದು ಮುಖ್ಯ.

೩. ಭಾರತ ಹಾಗೂ ನ್ಯೂಕ್ಲಿಯರ್ ಎನರ್ಜಿ ಸಂಬಂಧಿ ಬೆಳವಣಿಗೆಗಳು
ಇತ್ತೀಚೆಗಷ್ಟೇ ಅಮೇರಿಕದ ಅಪ್ರೂವಲ್ ಮೊಹರನ್ನು ಒತ್ತಿಕೊಂಡ ಕಾಗದ ಪತ್ರಗಳು ಹಾಗೂ ಮನಮೋಹನ್ ಸಿಂಗ್ ಆಡಳಿತಕ್ಕೆ ಸಿಕ್ಕ ಜಯ ವಿಶ್ವದಾದ್ಯಂತ ಭಾರತವನ್ನು ನ್ಯೂಕ್ಲಿಯರ್ ಅಪ್ರೂವ್ಡ್ ದೇಶವನ್ನಾಗಿ ನೋಡಲು ಸಹಾಯ ಮಾಡಿದವು. ಈ ಹಿಂದೆ ಅಂತರಂಗದಲ್ಲಿ ಬರೆದ ಹಾಗೆ ಹೆಚ್ಚಿನ ಎನರ್ಜಿ ಬೇಡಿಕೆಗೆ ನ್ಯೂಕ್ಲಿಯರ್ ಮೂಲ ಬೇಕೇ ಬೇಕು ಎನ್ನುವ ಪರಿಸ್ಥಿತಿ ಇರುವಾಗ ಕನ್ವೆನ್ಷನಲ್ ಹಾಗೂ ಉಳಿದ ಸೋರ್ಸ್‌ಗಳ ಜೊತೆ ನ್ಯೂಕ್ಲಿಯರ್ ತಂತ್ರಜ್ಞಾನವನ್ನು ನಾವು ಬಳಸುವಂತಾಗುವುದು ಬಹಳ ಮಹತ್ವದ ವಿಷಯ ಹಾಗೂ ಬೆಳವಣಿಗೆ. ನಾವೆಲ್ಲ ಮುಂದೆ ಏನಾಗುವುದೋ ಎಂದು ಕಾದು ನೋಡಬೇಕಷ್ಟೆ.

2 comments:

sunaath said...

ಅಣುಶಕ್ತಿಗೆ ಸಂಬಂಧಿಸಿದಂತೆ ಭಾರತ ತಾನಾಗಿಯೇ ತನ್ನ ಕೈಗಳಿಗೆ ಬೇಡಿ ಹಾಕಿಸಿಕೊಂಡಿತು.

Satish said...

ಸುನಾಥ್,
ಏಕೆ ಹಾಗಂತೀರ, ಈಗಾಗಲೇ ಮುಂದುವರೆದ ದೇಶಗಳ ಹಂಗಿಗೆ ಸಿಗದೇ ಹೋದರೆ ದಿನೆದಿನೇ ವೃದ್ಧಿಸುವ ಇಂಧನ/ಶಕ್ತಿಯ ಬೇಡಿಕೆಯನ್ನು ಭಾರತದಂತಹ ದೇಶಗಳು ಈಡೇರಿಸುವುದಾದರೂ ಹೇಗೆ?